Headlines

ಪೋಷಕರಿಗೆ ಡಬಲ್ ಶಾಕ್: ವಯೋಮಿತಿ ಗೊಂದಲದ ಬೆನ್ನಲ್ಲೇ ಖಾಸಗಿ ಶಾಲೆಗಳ ಶುಲ್ಕ ಭರ್ಜರಿ ಏರಿಕೆ!

ಬೆಂಗಳೂರು, ಮಾರ್ಚ್​ 31: ರಾಜಧಾನಿ ಬೆಂಗಳೂರಿನಲ್ಲಿ (Bangalore) ಹೊಸ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನವೇ ಪೋಷಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಈಗಾಗಲೇ ಶಾಲಾ ಪ್ರವೇಶದ ವಯೋಮಿತಿ ನಿಯಮದ ಗೊಂದಲದಿಂದ ಸಂಕಷ್ಟದಲ್ಲಿರುವ ಪೋಷಕರಿಗೆ, ಇದೀಗ ಖಾಸಗಿ ಶಾಲೆಗಳು ಶುಲ್ಕ ಏರಿಕೆ ಮಾಡಿ ಮತ್ತಷ್ಟು ತಲೆನೋವು ತಂದಿವೆ. ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026–27ನೇ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆಯನ್ನು ಕೆಲವು ಖಾಸಗಿ ಶಾಲೆಗಳು ಆರಂಭಿಸಿವೆ. ಇದೇ ಸಂದರ್ಭದಲ್ಲಿ ಹಲವು ಶಾಲೆಗಳು 5ರಿಂದ 15 ಶೇಕಡಾ ವರೆಗೆ ಶುಲ್ಕ ಹೆಚ್ಚಿಸಲು ಮುಂದಾಗಿವೆ ಎಂಬ…

Read More

ತಾಳಿ ಕಿತ್ತೆಸೆದು ಹೋಗಿದ್ದವಳೇ ಮತ್ತೆ ಕಟ್ಟಿಸಿಕೊಂಡಳು! ಇದು ಪೇಂಟರ್ ಹುಡುಗ, ಶ್ರೀಮಂತ ಹುಡುಗಿಯ ಸಿನಿಮೀಯ ಲವ್ ಸ್ಟೋರಿ – Kannada News | Chikkaballapur Filmy Love Story: Rich Girl Returns to Painter Beau, Remarries on Road 6 Months After Throwing Away Wedding Thread

ಸಾಯಿ ಸಂದೀಪ್ ಹಾಗೂ ಕೀರ್ತನಾImage Credit source: tv9 ಚಿಕ್ಕಬಳ್ಳಾಪುರ, ಜೂನ್ 19: ಪ್ರೇಮಕ್ಕೆ ಜಾತಿ, ಧರ್ಮ, ಅಂತಸ್ತು ಹಾಗೂ ಬಡತನ-ಶ್ರೀಮಂತಿಕೆಯ ಭೇದವಿಲ್ಲ ಎಂಬ ಮಾತಿಗೆ ಸಾಕ್ಷಿಯಾಗುವಂತಹ ವಿಚಿತ್ರ ಹಾಗೂ ಸಿನಿಮೀಯ ಶೈಲಿಯ ಪ್ರೇಮಕಥೆಯೊಂದು ಚಿಕ್ಕಬಳ್ಳಾಪುರದಲ್ಲಿ (Chikkaballapur) ನಡೆದಿದೆ. ಆರು ತಿಂಗಳ ಹಿಂದೆ ಹೆತ್ತವರ ಒತ್ತಡಕ್ಕೆ ಸಿಲುಕಿ, ಪೊಲೀಸ್ ಠಾಣೆಯಲ್ಲೇ ಪ್ರಿಯಕರ ಕಟ್ಟಿದ್ದ ತಾಳಿಯನ್ನು ಕಿತ್ತೆಸೆದು ಹೋಗಿದ್ದ ಯುವತಿಯೊಬ್ಬಳು, ಇದೀಗ ತನ್ನ ಅಸಲಿ ಪ್ರೀತಿಯನ್ನು ಹುಡುಕಿಕೊಂಡು ಬಂದು ಅದೇ ಯುವಕನೊಂದಿಗೆ ದೇಗುಲದಲ್ಲಿ ಮರುಮದುವೆಯಾಗಿದ್ದಾಳೆ. ಮನೆಯವರ ತೀವ್ರ ವಿರೋಧ…

Read More

Video: ಲಿಫ್ಟ್​ ಬಾಗಿಲಲ್ಲಿ ಕೈ ಸಿಲುಕಿ ಒದ್ದಾಡಿದ ಮಗು

ಪುಣೆ, ಮಾರ್ಚ್​ 15: ಲಿಫ್ಟ್​ನಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುವಾಗ ತುಂಬಾ ಜಾಗೃತೆಯಾಗಿರಬೇಕು. ಲಿಫ್ಟ್​​ನಿಂದ ಹೊರ ಬರಬೇಕು ಎನ್ನುವಾಗ ಅಜ್ಜಿಯ ಕೈಲಿದ್ದ ಮಗುವಿನ ಕೈ ಲಿಫ್ಟ್​ ಬಾಗಿಲಲ್ಲಿ ಸಿಲುಕಿ ಒದ್ದಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ತಾಯಿ ಮತ್ತು ಅಜ್ಜಿ ಇಬ್ಬರು ಮಕ್ಕಳನ್ನು ಎತ್ತಿಕೊಂಡು ಲಿಫ್ಟ್ ಹತ್ತಿದ್ದಾರೆ, ಇನ್ನೇನು ಇಳಿಯಬೇಕು ಎನ್ನುವಷ್ಟರಲ್ಲಿ ಮಗುವಿನ ಕೈ ಲಿಫ್ಟ್ ಬಾಗಿಲೊಳಗೆ ಸಿಲುಕಿದೆ. ಲಿಫ್ಟ್​ನಲ್ಲಿದ್ದವರು ಹರಸಾಹಸ ಪಟ್ಟು ಅಂತೂ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲವರು ದಿನಗಳ ಹಿಂದೆ ಇಂಥದ್ದೇ ಘಟನೆ ನಡೆದಿತ್ತು. ವ್ಯಕ್ತಿಯೊಬ್ಬರು ಇನ್ನೇನು…

Read More

ಹಠ ಬಿಡದ ‘ದ್ರೌಪದಿ’ಗೆ ಪಶ್ಚಿಮ ಬಂಗಾಳದ ಉಪ ಮುಖ್ಯಮಂತ್ರಿ ಪಟ್ಟ, ಯಾರು ಈ ರೂಪಾ ಗಂಗೂಲಿ? – Kannada News | Roopa Ganguly to became West Bengal DCM, Who is she what is her background

ಕೌರವರ ಪತನಕ್ಕಾಗಿ ಪಣತೊಟ್ಟು ಮುಡಿ ಕಟ್ಟದೆ ಕಾದಿದ್ದಳು ಮಹಾಭಾರತದ ದ್ರೌಪದಿ. ಅದೇ ಹಠದಿಂದ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪತನಕ್ಕಾಗಿ ದಶಕದಿಂದ ಕಾದಿದ್ದ ‘ದ್ರೌಪದಿ’ಗೆ ಈಗ ಪಶ್ಚಿಮ ಬಂಗಾಳದ (west Bengal) ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿದೆ ಬಿಜೆಪಿ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರ ಹಿಡಿದಿದೆ. ಸತತ ಹೊರಾಟ, ಪ್ರಯತ್ನಗಳ ಬಳಿಕ ಕೊನೆಗೂ ಮಮತಾ ಬ್ಯಾನರ್ಜಿಯನ್ನು ಕುರ್ಚಿಯಿಂದ ಕೆಳಗಿಳಿಸಿರುವ ಬಿಜೆಪಿ ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಸುವೇಂದು ಅಧಿಕಾರಿ ಇದೀಗ ಪಶ್ಚಿಮ ಬಂಗಾಳದ ಮೊಟ್ಟ ಮೊದಲ…

Read More

Video:ಪಂಜಾಬ್​ನಲ್ಲಿ ಬಸ್ ಪಲ್ಟಿ, ಐವರು ಸಾವು, 15 ಮಂದಿಗೆ ಗಾಯ – Kannada News | Punjab accident: Deadly Bus Crash in Fatehgarh Sahib Leaves Five Dead, Many Injured

ಅಮೃತಸರ, ಏಪ್ರಿಲ್ 15: ಪಂಜಾಬ್​ನ ಫತೇಹ್​ಗಢ ಸಾಹಿಬ್​ನಲ್ಲಿ ಬಸ್ ಅಪಘಾತಕ್ಕೀಡಾಗಿದ್ದು, ಐವರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ಸಿ ಪಠಾಣಾ ಬಳಿ ಈ ಘಟನೆ ಸಂಭವಿಸಿದ್ದು, ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ರಸ್ತೆಯಿಂದ ಹೊರಳಿ ಮರಕ್ಕೆ ಡಿಕ್ಕಿ ಹೊಡೆದಿದೆ.ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಪ್ರಸ್ತುತ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತವು ತೀವ್ರವಾಗಿದ್ದು, ಸ್ಥಳದಲ್ಲಿ ಭೀತಿ ಮತ್ತು ಅವ್ಯವಸ್ಥೆ ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಮಾಹಿತಿ ಪಡೆದ ಕೂಡಲೇ ಪೊಲೀಸರು ಮತ್ತು ರಕ್ಷಣಾ…

Read More

29 ಕಡೆ ಕಣಕ್ಕಿಳಿದು ಅಪರೂಪದ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಮುಲ್ಲನ್​ಪುರ್​ನಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್ ( Yashasvi Jaiswal) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಸತತ 29 ಮೈದಾನದಲ್ಲಿ ಟೆಸ್ಟ್ ಪಂದ್ಯಗಳನ್ನಾಡುವ ಮೂಲಕ ಎಂಬುದು ವಿಶೇಷ. (PC: BCCI) ಅಂದರೆ 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಯಶಸ್ವಿ ಜೈಸ್ವಾಲ್, ಇದುವರೆಗೆ ಯಾವುದೇ ಮೈದಾನದಲ್ಲಿ ಎರಡನೇ ಬಾರಿ ಕಣಕ್ಕಿಳಿದಿಲ್ಲ. ಅಂದರೆ ಈವರೆಗೆ ಆಡಿದ…

Read More

ಪಿಎಂ ಕಿಸಾನ್ ಯೋಜನೆಗೆ 7 ವರ್ಷ; 22ನೇ ಕಂತಿನ ಹಣ ಸದ್ಯದಲ್ಲೇ – Kannada News | Pm kisan samman nidhi yojana completes 7 years beneficiaries waiting for 22nd installment

ನವದೆಹಲಿ, ಫೆಬ್ರುವರಿ 26: ರೈತರಿಗೆ ವರ್ಷಕ್ಕೆ 6,000 ರೂ ನೀಡುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Yojana) ಶುರುವಾಗಿ ಮೊನ್ನೆಗೆ (ಫೆ. 24) ಏಳು ವರ್ಷ ಪೂರ್ಣವಾಗಿದೆ. 2019ರ ಫೆಬ್ರುವರಿ 24ರಂದು ಈ ಯೋಜನೆ ಆರಂಭವಾಯಿತು. ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ ಹಣವನ್ನು ರೈತರಿಗೆ ನೀಡುವ ಸ್ಕೀಮ್ ಇದು. ಈ ಏಳು ವರ್ಷದಲ್ಲಿ ಇಲ್ಲಿಯವರೆಗೆ 21 ಕಂತುಗಳಲ್ಲಿ ಕೋಟ್ಯಂತರ ರೈತರಿಗೆ ಹಣ ಬಿಡುಗಡೆ ಮಾಡಲಾಗಿದೆ. 21ನೇ ಕಂತಿನ ಹಣವನ್ನು 2025ರ ನವೆಂಬರ್…

Read More

Rakkasapuradhol First Half Review: ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಫಸ್ಟ್ ಹಾಫ್ ಹೇಗಿದೆ? – Kannada News | Rakkasapuradhol Kannada movie first half review ft Raj B Shetty

ರಾಜ್ ಬಿ. ಶೆಟ್ಟಿ (Raj B Shetty) ಅವರ ಸಿನಿಮಾ ಎಂದರೆ ಖಂಡಿತವಾಗಿಯೂ ಏನಾದರೂ ವಿಶೇಷತೆ ಇರುತ್ತದೆ ಎಂಬ ಭರವಸೆ ಅಭಿಮಾನಿಗಳಿಗೆ ಇದೆ. ಅವರು ನಟಿಸಿದ ‘ರಕ್ಕಸಪುರದೋಳ್’ ಸಿನಿಮಾ ಇಂದು (ಫೆಬ್ರವರಿ 6) ಬಿಡುಗಡೆ ಆಗಿದೆ. ರವಿ ಸಾರಂಗ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರವಿ ವರ್ಮಾ ಅವರು ನಿರ್ಮಾಣ ಮಾಡಿದ್ದಾರೆ. ಟ್ರೇಲರ್ ಮೂಲಕ ‘ರಕ್ಕಸಪುರದೋಳ್’ (Rakkasapuradhol) ಸಿನಿಮಾ ಬಹಳ ನಿರೀಕ್ಷೆ ಮೂಡಿಸಿತ್ತು. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ರಾಜ್ ಬಿ. ಶೆಟ್ಟಿ ಅವರು ಕಾಣಿಸಿಕೊಂಡಿದ್ದಾರೆ. ಒಂದು…

Read More

ಮಹಾರಾಷ್ಟ್ರ ರಾಜಕೀಯದಲ್ಲಿ ಹೈಡ್ರಾಮಾ; ರಾಜೀನಾಮೆ ನೀಡಲು ಸಿದ್ಧ ಎಂದ ಉದ್ಧವ್ ಠಾಕ್ರೆ – Kannada News | Uddhav Thackeray says Ready To Resign As UBT Shiv Sena Chief Maharashtra Politics

ಮುಂಬೈ, ಜೂನ್ 19: ಶಿವಸೇನೆಯ ಸಂಸ್ಥಾಪನಾ ದಿನದಂದು ಶಿವಸೇನೆ (Shiv Sena) ಠಾಕ್ರೆ ಬಣದಿಂದ ರ್ಯಾಲಿ ನಡೆಯಿತು. ಇದರಲ್ಲಿ ಭಾಗವಹಿಸಿದ ಉದ್ಧವ್ ಠಾಕ್ರೆ ಶಿವಸೇನೆ ಶಿಂಧೆ ಬಣ, ಬಿಜೆಪಿ ಮತ್ತು ಬಂಡಾಯ ಸಂಸದರ ಮೇಲೆ ದಾಳಿ ನಡೆಸಿದರು. ಈ ವೇಳೆ ಅವರು ತಮ್ಮ ಶಿವಸೇನೆ ಉದ್ಧವ್ ಠಾಕ್ರೆ ಬಣದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧವಿರುವುದಾಗಿ ಘೋಷಿಸಿದರು. “ನಾನು ಹೇಗಿದ್ದೇನೆಂದು ನಿಮಗೆ ತಿಳಿದಿದೆ. ಒಬ್ಬ ವ್ಯಕ್ತಿ ನನ್ನತ್ತ ಬೆರಳು ಮಾಡಿ ತೋರಿಸಿದರೂ ನಾನು ಒಂದು ಕ್ಷಣವೂ ಕಚೇರಿಯಲ್ಲಿ…

Read More

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು – Kannada News | Bigg Boss Kannada new promo: Kavya cried because of Bigg Boss order

ಬಿಗ್​​ಬಾಸ್ (Bigg Boss) ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ ಆಗಿದೆ. ಎಲ್ಲ ಸ್ಪರ್ಧಿಗಳ ಪೋಷಕರು ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಗಿಲ್ಲಿಗೆ, ಕಾವ್ಯಾ ಮನೆಯವರ ಬಗ್ಗೆ ಭಯ ಇತ್ತು. ಇದೀಗ ಕಾವ್ಯಾ ಮನೆಯವರು ಸಹ ಬಂದಿದ್ದಾರೆ. ಆದರೆ ಮನೆಗೆ ಬಂದವರೇ ಬಿಗ್​​ಬಾಸ್ ನಿಯಮವನ್ನು ಮುರಿದಿದ್ದಾರೆ. ಹೊರಗಿನಿಂದ ಬಂದವರು ಹೊರಗಿನ ವಿಷಯಗಳನ್ನು ಮನೆಯವರ ಬಳಿ ಮಾತನಾಡುವಂತಿಲ್ಲ. ಆದರೆ ಕಾವ್ಯಾ ಅವರ ಸಹೋದರ ಹೊರಗಿನ ವಿಷಯಗಳನ್ನು ಕಾವ್ಯಾ ಬಳಿ ಹೇಳಿದ್ದಾರೆ. ಇದರಿಂದಾಗಿ ಬಿಗ್​​ಬಾಸ್, ಕಾವ್ಯಾ ಅವರ ಕುಟುಂಬದವರನ್ನು ಅವಧಿಗೆ ಮುನ್ನ…

Read More