Headlines

IND vs SA: ಸೊನ್ನೆ ಸುಳಿಯಿಂದ ಹೊರಬಂದರೂ ಪ್ರಯೋಜನಕ್ಕೆ ಭಾರದ ಅಭಿಷೇಕ್ ಶರ್ಮಾ

2026 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದು ಸೂಪರ್ 8 ರಲ್ಲಿ ಸ್ಥಾನ ಪಡೆದುಕೊಂಡಿತು. ಭಾರತೀಯ ತಂಡವು ಪ್ರತಿ ಪಂದ್ಯದಲ್ಲೂ ಅದ್ಭುತ ಪ್ರದರ್ಶನ ನೀಡಿತ್ತಾದರೂ ಕೆಲವು ಕ್ಷೇತ್ರಗಳಲ್ಲಿ ತಂಡದ ದೌರ್ಬಲ್ಯ ಜಗಜ್ಜಾಹೀರಾಗಿತ್ತು. ಅದರಲ್ಲಿ ಅತ್ಯಂತ ಮಹತ್ವದ ಅಂಶವೆಂದರೆ ಅಭಿಷೇಕ್ ಶರ್ಮಾ ಅವರ ಫಾರ್ಮ್. ಟಿ20 ವಿಶ್ವಕಪ್‌ನಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಅಭಿಷೇಕ್ ತಮ್ಮ ಖಾತೆಯನ್ನು ತೆರೆದಿರಲಿಲ್ಲ. 2026 ರ ಟಿ20 ವಿಶ್ವಕಪ್‌ನ ಮೊದಲ ಮೂರು ಇನ್ನಿಂಗ್ಸ್‌ಗಳಲ್ಲಿ ಅಭಿಷೇಕ್ ಶರ್ಮಾ ಎಂಟು ಎಸೆತಗಳನ್ನು…

Read More

ಚಾರ್ಮ್ ಕಳೆದುಕೊಳ್ಳುತ್ತಿದೆ ಕಪಿಲ್ ಶೋ; ಸುನೀಲ್ ಗ್ರೋವರ್ ಇಲ್ಲವಾದರೆ ಝೀರೋ? – Kannada News | Kapil Sharma Show Losing Charm: Is Sunil Grover Key to Revival? Netflix Viewership Drops

ಕಪಿಲ್ ಶರ್ಮಾ (Kapil Sharma) ಅವರ ಹಾಸ್ಯದ ಶೋಗಳಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಮೊದಲು ಸೋನಿ ಟಿವಿಯಲ್ಲಿ ಅವರು ಸಾಕಷ್ಟು ಶೋಗಳನ್ನು ಮಾಡುತ್ತಿದ್ದರು. ಆ ಬಳಿಕ ಅವರು ನೆಟ್​​​ಫ್ಲಿಕ್ಸ್​​ಗೆ ಬಂದರು. ಈ ವೇಳೆ ಸುನೀಲ್ ಗ್ರೋವರ್ ಜೊತೆ ಒಂದಾದರು. ಹಾಳಾಗಿದ್ದ ಗೆಳೆತನ ಸರಿ ಆಯಿತು. ಈಗ ಕಪಿಲ್ ಶರ್ಮಾ ಶೋ ತನ್ನ ಚಾರ್ಮ್ ಕಳೆದುಕೊಳ್ಳುತ್ತಿದೆ. ಸುನೀಲ್ ಗ್ರೋವರ್ ಇಲ್ಲವಾದಲ್ಲಿ ಶೋ ಝೀರೋ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಕಪಿಲ್ ಶರ್ಮಾ ಹಾಗೂ ಸುನೀಲ್ ಗ್ರೋವರ್ 2017ರಲ್ಲಿ…

Read More

ಬಿಗ್ ಬಾಸ್ ವಿನ್ನರ್​​ಗಳ ಕರೆಸಿ ಹೊಸ ಸೀಸನ್ ಮಾಡಿದ್ರೂ ಗಿಲ್ಲಿನೇ ಗೆಲ್ಲೋದು; ಭವಿಷ್ಯ ನುಡಿದ ಕಿರುತೆರೆ ನಟ – Kannada News | Gilli Nata Will Win if All Bigg Boss Kannada Winners In Race Says Abhishek Ramdas

ಬಿಗ್ ಬಾಸ್ ಕನ್ನಡ ಸೀಸನ್ 12ರ (BBk 12) ಸ್ಪರ್ಧಿ ಗಿಲ್ಲಿ ನಟ ಕ್ರೇಜ್ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಇವರು ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಹೊರಗೆ ಇವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಗಿಲ್ಲಿಗೆ ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಅಭಿಮಾನಿಗಳಿದ್ದಾರೆ. ಈಗ ಕಿರುತೆರೆ ನಟನೋರ್ವ ಗಿಲ್ಲಿಯನ್ನು ಹೊಗಳಿದ್ದಾರೆ. ಎಲ್ಲಾ ಸೀಸನ್​​ಗಳ ವಿನ್ನರ್​ ಕರೆಸಿ ಶೋ ಮಾಡಿದರೂ ಗೆಲ್ಲೋದು ಗಿಲ್ಲಿ ಎಂದಿದ್ದಾರೆ. ಗಿಲ್ಲಿ ಎಲ್ಲರಿಗೂ ಇಷ್ಟ ಆಗೋಕೆ ಕಾರಣ ಅವರ ಮಾತು. ತಮ್ಮ ಮಾತುಗಳ ಮೂಲಕ, ಖಡಕ್…

Read More

ಹುರೂನ್ ವೆಲ್ತ್ ರಿಪೋರ್ಟ್: ಮುಂಬೈಯನ್ನು ಹಿಂದಿಕ್ಕಿದ ಬೆಂಗಳೂರು ನಂ. 1 – Kannada News | Hurun India Report 2025, Bengaluru edges past Mumbai as new wealth capital

ಐಡಿಎಫ್​ಸಿ ಫಸ್ಟ್ ಪ್ರೈವೇಟ್ ಅಂಡ್ ಹುರೂನ್ ಇಂಡಿಯಾ ವೆಲ್ತ್ ರಿಪೋರ್ಟ್ ನವದೆಹಲಿ, ಡಿಸೆಂಬರ್ 18: ಟ್ರಾಫಿಕ್ ಜಂಜಾಟದ ಸಮಸ್ಯೆ ಏನೇ ಇದ್ದರೂ ಬ್ಯುಸಿನೆಸ್ ಮತ್ತು ಹಣದಲ್ಲಿ ಬೆಂಗಳೂರಿಗೆ ಸಾಟಿಯೇ ಇಲ್ಲದಂತಾಗಿದೆ. ಭಾರತೀಯ ನಗರಗಳ ಪೈಕಿ ಅತಿಹೆಚ್ಚು ಸಂಪತ್ತು ಹೊಂದಿರುವುದು ಬೆಂಗಳೂರೇ. ಹುರೂನ್ ಇಂಡಿಯಾದಿಂದ ಬಿಡುಗಡೆಯಾದ ವೆಲ್ತ್ ರಿಪೋರ್ಟ್ 2025 ವರದಿ (IDFC First Private and Hurun Indias Top-100 self-made entrepreneurs of Millenia 2025) ಪ್ರಕಾರ, ಬೆಂಗಳೂರಿನಲ್ಲೇ ಅತಿಹೆಚ್ಚು ಆಂಟ್ರಪ್ರನ್ಯೂರ್​ಗಳು ಇರುವುದು. ಹಾಗೆಯೇ, ಅತಿಹೆಚ್ಚು…

Read More

Union Budget 2026: ಜನವರಿ 28ರಿಂದ ಸಂಸತ್ ಅಧಿವೇಶನ ಆರಂಭ; ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ – Kannada News | Parliament Budget Session to begin on January 28 Union Budget 2026 to be tabled on February 1

ನವದೆಹಲಿ, ಜನವರಿ 9: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 28ರಂದು ಆರಂಭವಾಗಲಿದ್ದು, ಫೆಬ್ರವರಿ 1ರಂದು ಕೇಂದ್ರ ಬಜೆಟ್ 2026 (Union Budget 2026) ಮಂಡನೆಯಾಗಲಿದೆ. ಈ ಕುರಿತು ಮಾಹಿತಿಯನ್ನು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಇಂದು ಬಿಡುಗಡೆ ಮಾಡಿದೆ. ಬಜೆಟ್ ಅಧಿವೇಶನವು ಜನವರಿ 28ರಂದು ಪ್ರಾರಂಭವಾಗಿ ಏಪ್ರಿಲ್ 2ರವರೆಗೆ ಮುಂದುವರಿಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಅಧಿವೇಶನಕ್ಕೆ ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ. ಅವರು ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಎರಡೂ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಜೆಟ್…

Read More

ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು – Kannada News | India AI Impact Summit 2026 PM Modi and world leaders enjoys cultural displays at Bharat Mandapam

ನವದೆಹಲಿ, ಫೆಬ್ರವರಿ 18: ಪ್ರಧಾನಿ ನರೇಂದ್ರ ಮೋದಿ (PM Modi) ಅವರು AI ಶೃಂಗಸಭೆ ನಡೆಯುವ ಸ್ಥಳವಾದ ದೆಹಲಿಯ ಭಾರತ್ ಮಂಟಪಕ್ಕೆ ಆಗಮಿಸಿದ ವಿಶ್ವ ನಾಯಕರನ್ನು ಸ್ವಾಗತಿಸಿದ್ದಾರೆ. ಈ ವೇಳೆ ಅವರು ಭಾರತ್ ಮಂಟಪದಲ್ಲಿ ಭಾರತೀಯ ಕಲೆ, ಸಂಸ್ಕೃತಿಯನ್ನು ಬಿತ್ತರಿಸುವ ಸಾಂಸ್ಕೃತಿಕ ಪ್ರದರ್ಶನಗಳನ್ನು ಆನಂದಿಸಿದ್ದಾರೆ. ಪ್ರಧಾನಿ ಮೋದಿಯವರೇ ಖುದ್ದಾಗಿ ಬೇರೆ ದೇಶಗಳ ನಾಯಕರನ್ನು ಕರೆದುಕೊಂಡು ಹೋಗಿ ಸಾಂಸ್ಕೃತಿಕ ಕಲೆಯನ್ನು ವಿವರಿಸಿದ್ದಾರೆ. ಭಾರತವು ಫೆಬ್ರವರಿ 20ರವರೆಗೆ AI ಇಂಪ್ಯಾಕ್ಟ್ ಶೃಂಗಸಭೆಯನ್ನು ಆಯೋಜಿಸುತ್ತಿದೆ. ನಾಳೆ ಪ್ರಧಾನಿ ಮೋದಿ ಉದ್ಘಾಟನಾ ಭಾಷಣ…

Read More

DC vs RCB: W,W,W,W,W,W..! ಕೇವಲ 8 ರನ್​ಗೆ 6 ವಿಕೆಟ್ ಕಳೆದುಕೊಂಡ ಡೆಲ್ಲಿ – Kannada News | IPL 2026: Delhi Capitals Collapse! RCB Pace Attack Destroys DC in Powerplay, 6 Wickets Down

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ರ 39ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡ ಕೇವಲ 8 ರನ್​ಗಳಿಗೆ ಪ್ರಮುಖ 6 ವಿಕೆಟ್​ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಆರ್​ಸಿಬಿ ವೇಗಿಗಳಾದ ಭುವನೇಶ್ವರ್ ಕುಮಾರ್ ಹಾಗೂ ಹೇಜಲ್‌ವುಡ್ ಅವರ ದಾಳಿಗೆ ತತ್ತರಿಸಿ ಹೋಗಿರುವ ಡೆಲ್ಲಿ ಬ್ಯಾಟರ್​ಗಳಿಗೆ ಖಾತೆ ತೆರೆಯಲು ಸಾಧ್ಯವಾಗುತ್ತಿಲ್ಲ. ಇದರ ಪರಿಣಾಮವಾಗಿ ಡೆಲ್ಲಿ ತಂಡ ಪವರ್‌ಪ್ಲೇನಲ್ಲಿ…

Read More

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆ – Kannada News | Sabarimala Women Entry: Supreme Courts 9 Judge Bench to Rehear Case from April 7

ದೆಹಲಿ, ಫೆಬ್ರವರಿ 16: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಮರುಪರಿಶೀಲನಾ ಅರ್ಜಿಗಳ ವಿಚಾರಣೆಗೆ ಒಪ್ಪಿಗೆ ನೀಡಿದೆ. ಏಪ್ರಿಲ್ 7ರಿಂದ ಈ ವಿಚಾರಣೆ ಆರಂಭವಾಗಲಿದ್ದು, ಒಂಭತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಇದನ್ನು ನಡೆಸಲಿದೆ. 2018ರಲ್ಲಿ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು ಮಹಿಳೆಯರಿಗೆ ಶಬರಿಮಲೆಗೆ ಪ್ರವೇಶಕ್ಕೆ ಅವಕಾಶ ನೀಡಿ ತೀರ್ಪು ನೀಡಿತ್ತು. ಆದರೆ, ಈ ತೀರ್ಪಿನ ನಂತರ ಭಕ್ತರು ಮತ್ತು ಧಾರ್ಮಿಕ ಹೋರಾಟಗಾರರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಹಿಂದಿನ ತೀರ್ಪನ್ನು ಸಾಂವಿಧಾನಿಕ ಪೀಠವೇ ನೀಡಿರುವುದರಿಂದ,…

Read More

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡದ ವಿರುದ್ಧ ಎಫ್‌ಐಆರ್ ದಾಖಲು – Kannada News | FIR against Mollywood Times movie makers after CBFC Censor Violations Unapproved Content Screening

ಸೆನ್ಸಾರ್ ಮಂಡಳಿ ಕತ್ತರಿ ಹಾಕಿದ್ದ ದೃಶ್ಯಗಳನ್ನು ಚಿತ್ರಮಂದಿರಗಳಲ್ಲಿ ಅಕ್ರಮವಾಗಿ ಪ್ರದರ್ಶಿಸಿದ ಆರೋಪದ ಮೇಲೆ ‘ಮಾಲಿವುಡ್ ಟೈಮ್ಸ್’ (Mollywood Times) ಮಲಯಾಳಂ ಸಿನಿಮಾದ ನಿರ್ಮಾಪಕರು, ನಿರ್ದೇಶಕರು ಮತ್ತು ವಿತರಕರ ವಿರುದ್ಧ ಕೇರಳ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಪ್ರಾದೇಶಿಕ ಕಚೇರಿ ನೀಡಿದ ಅಧಿಕೃತ ದೂರು ಆಧರಿಸಿ ತಿರುವಲ್ಲಂ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಸೆನ್ಸಾರ್ ಮಂಡಳಿಯಿಂದ ಅನುಮತಿ ಪಡೆದ ನಂತರ, ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಸಿನಿಮಾದ ಆವೃತ್ತಿಯಲ್ಲಿ ಮಾರ್ಪಾಡು ಮಾಡಿ, ಅನುಮೋದನೆ…

Read More

DRDO Internship 2026: ಯುವ ಎಂಜಿನಿಯರ್‌ಗಳಿಗೆ DRDO ನಿಂದ ಬಂಪರ್ ಕೊಡುಗೆ; 40 ಇಂಟರ್ನ್‌ಶಿಪ್ ಸೀಟುಗಳಿಗೆ ಅರ್ಜಿ ಆಹ್ವಾನ! – Kannada News | DRDO Internship 2026: Engineering Students! Apply for 40 Seats, Gain Defense Research Experience

ಯುವ ಎಂಜಿನಿಯರ್‌ಗಳಿಗೆ DRDO ನಿಂದ ಬಂಪರ್ ಕೊಡುಗೆ ದೇಶದ ಹೆಮ್ಮೆಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಾದ DRDO (Defence Research and Development Organisation) ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅದ್ಭುತ ಇಂಟರ್ನ್‌ಶಿಪ್ ಅವಕಾಶವನ್ನು ತಂದಿದೆ. ಈ ಇಂಟರ್ನ್‌ಶಿಪ್ ದೇಶದ ರಕ್ಷಣಾ ಸಂಶೋಧನೆಗೆ ಸಂಬಂಧಿಸಿದ ಅತ್ಯಾಧುನಿಕ ಯೋಜನೆಗಳಲ್ಲಿ ನೇರವಾಗಿ ಕೆಲಸ ಮಾಡುವ ಮತ್ತು ಪ್ರಾಯೋಗಿಕ ಅನುಭವವನ್ನು ಪಡೆಯುವ ಅಪರೂಪದ ವೇದಿಕೆಯಾಗಿದೆ. DRDO ಈ ಇಂಟರ್ನ್‌ಶಿಪ್‌ಗಾಗಿ ಒಟ್ಟು 40 ಸೀಟುಗಳನ್ನು ಬಿಡುಗಡೆ ಮಾಡಿದೆ. ಇದರ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಈಗಾಗಲೇ…

Read More