Headlines

ನಾಚಿಕೆಯಾಗುವುದಿಲ್ಲವೇ?; 4 ವರ್ಷದ ಮಗು ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ, ಮಾರ್ಚ್ 25: ಹರಿಯಾಣದ ಗುರುಗ್ರಾಮದಲ್ಲಿ 4 ವರ್ಷದ ಹೆಣ್ಣುಮಗುವಿನ ಮೇಲೆ ಅತ್ಯಾಚಾರ ನಡೆದಿತ್ತು. ಈ ಪ್ರಕರಣದ ತನಿಖೆ ವೇಳೆ ಹರಿಯಾಣ ಪೊಲೀಸರು ಸೂಕ್ಷ್ಮತೆಯಿಲ್ಲದೆ ವರ್ತಿಸಿದ್ದಾರೆ, ಮಗುವಿನ ಬಳಿ ಯಾವುದೇ ಪುರಾವೆಗಳಿಲ್ಲವೆಂದು ನಿರೂಪಿಸಲು ಪ್ರಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ಹರಿಯಾಣ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. 4 ವರ್ಷದ ಮಗುವಿನ ಮೇಲಿನ ಅತ್ಯಾಚಾರದಲ್ಲಿ ಸಾಕ್ಷಿಗಳು ಸ್ಪಷ್ಟವಾಗಿದ್ದರೂ ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ಹೊರಹಾಕಿದೆ….

Read More

Horoscope Today 15th​​ March​: ಇಂದು ಈ ರಾಶಿಯವರಿಗೆ ಸಂಗಾತಿಯಿಂದ ಶುಭ ಸಮಾಚಾರ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 15​​​​​, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಏಕಾದಶಿ ತಿಥಿ, ಶ್ರವಣ ನಕ್ಷತ್ರ, ಪರಿಘ ಯೋಗ ಮತ್ತು ಬಾಲವ ಕರಣ ಇರುತ್ತದೆ. ರಾಹುಕಾಲ ಸಂಜೆ 4:59 ರಿಂದ 6:30 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭ ಕಾಲ ಬೆಳಿಗ್ಗೆ 10:58 ರಿಂದ…

Read More

ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ: ಮತ್ತೆರಡು ಸ್ಫೋಟಕ ವಿಡಿಯೋ ಬಿಡುಗಡೆ! ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ

ಹುಬ್ಬಳ್ಳಿ, ಏ.6: ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಟ್ವಿಸ್ಟ್​​​ ಪಡೆಯುತ್ತಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆರಡು ವಿಡಿಯೋಗಳನ್ನು ಯುವತಿ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್​​​​ ಮುಖಂಡನ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ. ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯು ಮತ್ತೊಮ್ಮೆ ವಿಡಿಯೋ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೋಗಳ ಸತ್ಯಾಸತ್ಯತೆಯನ್ನು ಅವರು ಬಿಚ್ಚಿಟ್ಟಿದ್ದಾರೆ. “ನಿನ್ನೆ ವೈರಲ್ ಆಗಿರುವ ವಿಡಿಯೋಗಳು…

Read More

ವಯೋವೃದ್ದರು, ಮಹಿಳೆಯರ ಪಾಲಿಗೆ ‘ಆಸರೆ’: ಒಂಟಿ ಬದುಕಿಗೆ ಬೆನ್ನೆಲುಬಾದ ಪೊಲೀಸ್ ಭರವಸೆ

ಹುಬ್ಬಳ್ಳಿ, ಏಪ್ರಿಲ್​ 12: ಹುಬ್ಬಳ್ಳಿಯಂತಹ (hubballi) ಮಹಾನಗರಗಳಲ್ಲಿ ಅಥವಾ ಜನನಿಬಿಡ ಪ್ರದೇಶಗಳಲ್ಲಿ ವಯೋವೃದ್ಧರು, ಮಹಿಳೆಯರು ಸೇರಿದಂತೆ ಒಬ್ಬಂಟಿಯಾಗಿ ವಾಸಿಸುವುದು ಒಂದು ಸವಾಲೇ ಸರಿ. ಯಾವಾಗ ಏನಾಗಿ ಬಿಡುತ್ತದೆಯೋ ಎಂಬ ಭಯ ಕಾಡುತ್ತದೆ. ಹೀಗಾಗಿ ಹುಬ್ಬಳ್ಳಿ ಪೊಲೀಸರು ವಿನೂತನ ಕಾರ್ಯಕ್ಕೆ ಮುಂದಾಗಿದ್ದಾರೆ. ಅದೇನೆಂದರೆ ‘ಆಸರೆ’ (Asare). ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರ ಮತ್ತು ವಯೋವೃದ್ಧರಿಗೆ ಅಸುರಕ್ಷತೆ, ಅಭದ್ರತೆ ಕಾಡದಂತೆ ಕಾಳಜಿ ವಹಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಈ ಯೋಜನೆ ಜಾರಿ ಮಾಡಿದೆ. ದೊಡ್ಡದೊಡ್ಡ ನಗರಗಳಲ್ಲಿ ಮಕ್ಕಳು ಇದ್ದು, ಹೆತ್ತವರು ಬೇರೆಡೆ…

Read More

ಮತ್ತೆ ಬರಲಿದೆ ‘ದಿ ಕೇರಳ ಸ್ಟೋರಿ’; ಹೊಸ ವರ್ಷಕ್ಕೆ ಸೀಕ್ವೆಲ್ ರೆಡಿ – Kannada News | The Kerala Story 2: Love Jihad Sequel Gears Up for Controversial 2026 Release

ಬಾಲಿವುಡ್‌ನಲ್ಲಿ ಹಲವು ಸಿನಿಮಾಗಳು ವಿವಾದ ಸೃಷ್ಟಿಸಿವೆ. ಹಲವು ಸ್ಥಳಗಳಲ್ಲಿ ಸಿನಿಮಾಗಳನ್ನು ನಿಷೇಧಿಸಲಾಗಿದೆ. ಅಂತಹ ಒಂದು ಸಿನಿಮಾ ‘ದಿ ಕೇರಳ ಸ್ಟೋರಿ’. ಈ ಸಿನಿಮಾದಿಂದ ಒಂದು ಭಯಾನಕ ವಾಸ್ತವ ಬೆಳಕಿಗೆ ಬಂದಿತ್ತು. 2023ರಲ್ಲಿ ಬಿಡುಗಡೆಯಾದ ಸಿನಿಮಾ ‘ಲವ್ ಜಿಹಾದ್’ ವಿಷಯವನ್ನು ಆಧರಿಸಿದೆ. ಇದು ಹಲವು ಕಡೆಗಳಲ್ಲಿ ಬ್ಯಾನ್ ಆಯಿತು. ಸಿನಿಮಾ ವಿವಾದದಲ್ಲಿ ಸಿಲುಕಿದ್ದರೂ, ಸಿನಿಮಾ ಸಾಕಷ್ಟು ಹಣ ಗಳಿಸಿತು. ಸುದೀಪ್ತೋ ಸೇನ್ ನಿರ್ದೇಶನದ ಈ ಸಿನಿಮಾದಲ್ಲಿ ಅದಾ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗ ಸೀಕ್ವೆಲ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ….

Read More

92 ಸಾವಿರ ಶೋ, 450 ಕೋಟಿ ಗಳಿಕೆ; ದಾಖಲೆಯ ಕಲೆಕ್ಷನ್ ಮಾಡಿದ ‘ಧುರಂಧರ್ 2’

ರಣವೀರ್ ಸಿಂಗ್ ನಟನೆಯ ‘ಧುರಂದರ್ 2’ ಸಿನಿಮಾ (Dhurandhar 2) ಸೂಪರ್ ಹಿಟ್ ಆಗಿದೆ. ಹಿಂದೆ ಯಾವ ಸಿನಿಮಾಗಳೂ ಮಾಡದಷ್ಟು ಅಬ್ಬರದಲ್ಲಿ ಸಿನಿಮಾ ರಿಲೀಸ್ ಆಗಿದೆ. ಹಲವು ದಾಖಲೆಗಳನ್ನು ಸಿನಿಮಾ ಉಡೀಸ್ ಮಾಡಿದೆ. ನಾಲ್ಕು ದಿನಕ್ಕೆ 450 ಕೋಟಿ ರೂಪಾಯಿ ಆಗಿದೆ. ಹೀಗೆ ಮುಂದುವರಿದರೆ ಚಿತ್ರದ ಒಟ್ಟಾರೆ ಕಲೆಕ್ಷನ್ ಎಷ್ಟು ಕೋಟಿ ರೂಪಾಯಿ ಆಗುತ್ತದೆ ಎನ್ನುವ ಕುತೂಹಲ ಮೂಡಿದೆ. ವಿಶ್ವ ಮಟ್ಟದಲ್ಲಿ ಚಿತ್ರದ ಗಳಿಕೆ 700 ಕೋಟಿ ರೂಪಾಯಿ ಸಮೀಪಿಸಿದೆ. ‘ಧುರಂಧರ್ 2’ ಚಿತ್ರ ಮಾರ್ಚ್ 19ರಂದು…

Read More

ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂ ಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್!

ರಾಮನಗರ, ಜನವರಿ 01: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ತಡರಾತ್ರಿ ಭಯಾನಕ ಘಟನೆಯೊಂದು ನಡೆದಿದೆ. ಗ್ರಾಮದ ಮಧ್ಯದಲ್ಲಿ ವಾಮಾಚಾರ ಮಾಡಲಾಗಿದೆ. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಜನರಿಗೆ ಆಘಾತ ಎದುರಾಗಿದೆ. ರಸ್ತೆಯಲ್ಲಿ ಅರಿಶಿನ, ಕುಂಕುಮ, ನಿಂಬೆಹಣ್ಣು, ದೀಪ ಇಟ್ಟು ಪೂಜೆ ಮಾಡಲಾಗಿದೆ. ತಮಾಷೆಗೆ ಮಾಡಿದ್ದಾರಾ ಅಥವಾ ಉದ್ದೇಶ ಪೂರ್ವಕವಾಗಿ ಮಾಡಿದ್ದಾರಾ ಎಂಬುವುದು ತಿಳಿದುಬಂದಿಲ್ಲ. ಸದ್ಯ ಇದರಿಂದಾಗಿ ಗ್ರಾಮಸ್ಥರು ಗಾಬರಿಯಾಗಿದ್ದಾರೆ. ಪೊಲೀಸ್​​ ತನಿಖೆಗೆ ಜನರು ಒತ್ತಾಯಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ…

Read More