ಆನೇಕಲ್ನಲ್ಲಿ ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಶವ ತಮಿಳುನಾಡಿನಲ್ಲಿ ಪತ್ತೆ
ಬೆಂಗಳೂರು, (ಮಾರ್ಚ್ 09): ಆನೇಕಲ್ನಲ್ಲಿ (Anekal) ಅಪಹರಣಕ್ಕೊಳಗಾಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಹೌದು..ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್ ಅವರು ನಿನ್ನೆ ಸಂಜೆ 7.30 ರ ಸುಮಾರಿನಲ್ಲಿ ಕರ್ಪೂರು ಗೇಟ್ ಬಳಿ ಕಾರಿನಲ್ಲಿ ಹೋಗುತ್ತಿದ್ದಾಗ ಅವರ ಕಾರಿಗೆ ದುರ್ಷ್ಕಮಿಗಳು ವಾಹನದಿಂದ ಅಪಘಾತವೆಂಬಂತೆ ಡಿಕ್ಕಿ ಹೊಡೆದಿದ್ದಾರೆ. ನಂತರ ಗೋಪಾಲ್ ಅವರ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದು, ಬಳಿಕ ತಮಿಳುನಾಡಿಗೆ (Tamil Nadu) ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಿನ್ನೆ…