Headlines

Video: ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆ ಸೌಜನ್ಯದ ನಗು: ಸಂಸತ್ತಿನ ಅಂಗಳದಲ್ಲಿ ಮೋದಿ-ಖರ್ಗೆ ಹಸ್ತಲಾಘವ – Kannada News | Politics Pauses: Modi Kharge Camaraderie Steals Spotlight at Ambedkar Anniversary

ನವದೆಹಲಿ, ಏಪ್ರಿಲ್ 14: ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಸಣ್ಣ ಮಾತುಕತೆ ನಡೆಸಿದರು. ಭಾರತದ ರಾಜಕೀಯ ಅಖಾಡದಲ್ಲಿ ಪರಸ್ಪರ ವಾಗ್ದಾಳಿಗಳು ಸಾಮಾನ್ಯ. ಆದರೆ, ಕಳೆದ ಎರಡು ದಿನಗಳಲ್ಲಿ ಸಂಸತ್ತಿನ ಆವರಣದಲ್ಲಿ ಕಂಡುಬಂದ ದೃಶ್ಯಗಳು ಮಾತ್ರ ವಿಭಿನ್ನವಾಗಿದ್ದವು. ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕರ ನಡುವಿನ ಸೌಜನ್ಯದ ನಗು ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. ಎರಡು ದಿನಗಳ ಹಿಂದೆ ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ…

Read More

ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ – Kannada News | Siddaramaiahs Aide Nazir Ahmed Dismissed; Minister Zameer Ahmed Clarifies Bagalkote Duty

ಬೆಂಗಳೂರು, ಏ.14: ದಾವಣಗೆರೆ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರ ನಡುವೆ ಉಂಟಾಗಿದ್ದ ಅಸಮಾಧನಕ್ಕೆ ಇದೀಗ ಮತ್ತೊಂದು ತಲೆದಂಡವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ. ದಾವಣಗೆರೆ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪ ನಸೀರ್ ಅಹಮದ್ ಅವರ ಮೇಲಿದೆ. ಈ ಕಾರಣದಿಂದಾಗಿ ಅವರನ್ನು ಮುಖ್ಯಮಂತ್ರಿಗಳ ಆಪ್ತ ರಾಜಕೀಯ ಕಾರ್ಯದರ್ಶಿಯ ಹುದ್ದೆಯಿಂದ ತೆಗೆದುಹಾಕಲಾಗಿದೆ. ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಸಚಿವ ಜಮೀರ್ ಅಹಮದ್, ನಸೀರ್ ಅಹಮದ್ ಅವರು…

Read More

ಜಬ್ಬಾರ್, ನಸೀರ್ ಅಹ್ಮದ್​ ರಾಜೀನಾಮೆಗೆ ಹೈಕಮಾಂಡ್ ಸೂಚಿಸಿದ್ದೇಕೆ? ಕಾರಣ ತಿಳಿಸಿದ ಜಮೀರ್! – Kannada News | Minority Leaders Resign: Zameer Ahmed Reveals Reasons Behind Jabbar and Naseer Ahmed’s Exit from Key Posts

ಬೆಂಗಳೂರು, ಏಪ್ರಿಲ್ 14: ಉಪಚುನಾವಣೆ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ಅಲ್ಪಸಂಖ್ಯಾತರ ಅಸಮಾಧಾನ ಭುಗಿಲೆದ್ದಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಲೆದಂಡವಾಗಿದೆ. ಇದೀಗ ಈ ಬೆಳವಣಿಗೆಗಳಿಗೆ ಕಾರಣ ಏನೆಂಬುದನ್ನು ಸಚಿವ ಜಮೀರ್ ಅಹ್ಮದ್ ಬಹಿರಂಗಪಡಿಸಿದ್ದಾರೆ. ಜಬ್ಬಾರ್ ವಿಚಾರವಾಗಿ ಮಾತನಾಡಿದ ಜಮೀರ್ ಅಹ್ಮದ್, ಹೈಕಮಾಂಡ್‌ನಿಂದ ವೈಯಕ್ತಿಕ ಸಂಪರ್ಕದ ಕೊರತೆಯಿಂದ ಅವರು ಮನನೊಂದು ಮನೆಯಲ್ಲೇ ಉಳಿದಿದ್ದರು. ಅಲ್ಲದೆ, ಅನಾರೋಗ್ಯವೂ ಇದಕ್ಕೆ ಕಾರಣ ಎಂದು ತಿಳಿಸಿದ್ದಾರೆ. ಪಕ್ಷದ ಅಭ್ಯರ್ಥಿಯ…

Read More

Vishu Festival: ಕರಾವಳಿಯ ಸೌರ ಯುಗಾದಿಯ ಮಹತ್ವ ಮತ್ತು ಆಚರಣೆಯ ವೈಶಿಷ್ಟ್ಯಗಳು – Kannada News | Vishu Festival: Karnataka and Kerala’s New Year Celebrations, Traditions and Significance

ಭಾರತೀಯ ಸಂಸ್ಕೃತಿಯಲ್ಲಿ ಹೊಸ ವರ್ಷದ ಆರಂಭವನ್ನು ವಿವಿಧ ಹೆಸರುಗಳಿಂದ ಆಚರಿಸಲಾಗುತ್ತದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಹಾಗೂ ಕೇರಳದಲ್ಲಿ ಅತ್ಯಂತ ಸಡಗರದಿಂದ ಆಚರಿಸಲಾಗುವ ಹಬ್ಬವೇ ‘ವಿಷು’. ಸೂರ್ಯನು ಮೀನ ರಾಶಿಯಿಂದ ಮೇಷ ರಾಶಿಗೆ ಪ್ರವೇಶಿಸುವ ಸುಸಂದರ್ಭವನ್ನು ಈ ಹಬ್ಬವು ಸೂಚಿಸುತ್ತದೆ. ಸಂಸ್ಕೃತದಲ್ಲಿ ‘ವಿಷು’ ಎಂದರೆ ‘ಸಮಾನ’ ಎಂದರ್ಥ. ಈ ದಿನದಂದು ಹಗಲು ಮತ್ತು ರಾತ್ರಿಯ ಅವಧಿ ಸಮಾನವಾಗಿರುತ್ತದೆ ಎಂಬ ಭೌಗೋಳಿಕ ಹಿನ್ನೆಲೆ ಈ ಹೆಸರಿಗಿದೆ. ಇದನ್ನು ಕರಾವಳಿಯ ಜನರು ‘ಬಿಶು’ ಎಂದೂ ಕರೆಯುತ್ತಾರೆ. ಹಬ್ಬದ ಪ್ರಮುಖ ಆಕರ್ಷಣೆ ‘ವಿಷು…

Read More

Gold Rates: ಚಿನ್ನದ ಬೆಲೆ 135 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ – Kannada News | Gold prices 14th april 2026 gold rates rise as silver remains unmoved news in kannada

ಬೆಂಗಳೂರು, ಏಪ್ರಿಲ್ 14: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಳಿತಗಳನ್ನು ಕಾಣುತ್ತಲೇ ಇದೆ. ಒಂದು ದಿನ ಕಡಿಮೆಗೊಂಡರೆ, ಮತ್ತೊಂದು ದಿನ ಏರಿಕೆ ಆಗುತ್ತಿದೆ. ಇವತ್ತು ಮಂಗಳವಾರ ಚಿನ್ನದ ಬೆಲೆಯಲ್ಲಿ (Gold Rates) ಗ್ರಾಮ್​​ಗೆ 135 ರೂಗಳಷ್ಟು ಹೆಚ್ಚಳ ಆಗಿದೆ. ಇದರ ಬೆಲೆ ಮತ್ತೊಮ್ಮೆ 14,000 ರೂ ಗಡಿ ದಾಟಿ ಹೋಗಿದೆ. ಇದೇ ವೇಳೆ, ಬೆಳ್ಳಿ ಬೆಲೆ ಇವತ್ತು ಬದಲಾವಣೆ ಕಂಡಿಲ್ಲ. ನಿನ್ನೆಯ ದರವೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,100…

Read More

ಸುರಕ್ಷತೆಗೆ ಮೊದಲ ಆದ್ಯತೆ: ಮುಂಬೈ ಹಳಿಗಳ ಮೇಲೆ ಓಡಲಿದೆ ಮೊದಲ ‘ಕ್ಲೋಸ್ಡ್ ಡೋರ್’ ನಾನ್-ಎಸಿ ರೈಲು – Kannada News | Mumbai’s First Non AC Sealed Door Local Train, What Makes It Stand Out

ಮುಂಬೈ, ಏಪ್ರಿಲ್ 14: ಮುಂಬೈನ ರೈಲು(Train) ಹಳಿಗಳ ಮೇಲೆ ಪ್ರತಿದಿನ ಲಕ್ಷಾಂತರ ಕನಸುಗಳು ಪ್ರಯಾಣಿಸುತ್ತವೆ. ಆದರೆ, ಆ ಕನಸುಗಳ ಜೊತೆಗೇ ಸಾವು ಕೂಡ ತೆರೆದ ಬಾಗಿಲುಗಳ ರೂಪದಲ್ಲಿ ಹೊಂಚು ಹಾಕುತ್ತಿರುತ್ತದೆ. 2025ರ ಜೂನ್‌ನಲ್ಲಿ ನಡೆದ ‘ಮುಂಬ್ರಾ ರೈಲು ಅಪಘಾತ’ ಇಡೀ ದೇಶವನ್ನು ನಡುಗಿಸಿತ್ತು. ಕಿಕ್ಕಿರಿದು ತುಂಬಿದ್ದ ರೈಲಿನ ತೆರೆದ ಬಾಗಿಲಿನಿಂದ ಆಯತಪ್ಪಿ ಬಿದ್ದ ಪ್ರಯಾಣಿಕರು ಪ್ರಾಣ ಕಳೆದುಕೊಂಡಾಗ, “ಪ್ರಗತಿಗಿಂತ ಪ್ರಯಾಣಿಕರ ಪ್ರಾಣ ಮುಖ್ಯ” ಎಂಬ ಕೂಗು ಕೇಳಿಬಂತು. ಇದೀಗ ಆ ಕೂಗಿಗೆ ಉತ್ತರ ಸಿಕ್ಕಿದೆ, ಭಾರತೀಯ ರೈಲ್ವೆಯ…

Read More

ಪ್ರಧಾನಿ ಮೋದಿ ಉದ್ಘಾಟಿಸಲಿರುವ ಭೈರವೈಕ್ಯ ಮಂದಿರ ಹೇಗಿದೆ? ಇಲ್ಲಿದೆ ವಿಡಿಯೋ – Kannada News | Inside PM Modi’s Inauguration: Adichunchanagiri’s Stunning Rs 80 Crore Bhairavaikya Mandira Revealed

ಮಂಡ್ಯ, ಏಪ್ರಿಲ್ 14: ಆದಿಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭವ್ಯ ಶ್ರೀ ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15 ರಂದು ಉದ್ಘಾಟಿಸಲಿದ್ದಾರೆ. ಕಳೆದ 10 ವರ್ಷಗಳಿಂದ ನಿರ್ಮಾಣ ಹಂತದಲ್ಲಿದ್ದ ಈ ಮಂದಿರ, ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ತಲೆ ಎತ್ತಿದೆ. ಈ ಮಂದಿರವು ಬಾಲ ಗಂಗಾಧರನಾಥ ಸ್ವಾಮೀಜಿಯವರ ಐಕ್ಯ ಸ್ಥಳದಲ್ಲಿದೆ. ಮಂದಿರದ ನಿರ್ಮಾಣವು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಕನಸಾಗಿತ್ತು. ಮಂದಿರವು ಹೊಯ್ಸಳ, ಚಾಲುಕ್ಯ, ಚೋಳ ಮತ್ತು ಗಂಗರ ಕಾಲದ ಶಿಲ್ಪಕಲೆಗಳ ಸಮಾಗಮವನ್ನು ಹೊಂದಿದೆ. ದ್ರಾವಿಡ…

Read More

ಅರ್ಧ ಗಂಟೆಯಲ್ಲಿ ಮನೆಗೆ ಬಾ..: ಸಚಿವ ಜಮೀರ್​​ಗೆ ಸಿಎಂ ಸಿದ್ದರಾಮಯ್ಯ ಬುಲಾವ್ – Kannada News | Karnataka Politics: CM Calls Zameer Ahmed for Urgent Talks Following Minority Dissent

ಬೆಂಗಳೂರು. ಏ.14: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಂತರ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹಮದ್ ಖಾನ್‌ಗೆ ತುರ್ತು ಬುಲಾವ್ ನೀಡಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ ಇನ್ನೇನು ಕೆಲವೇ ನಿಮಿಷಗಳಲ್ಲಿ ಸಿದ್ದರಾಮಯ್ಯ ಜಮೀರ್ ಅಹಮದ್ ಅವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಲ್ಪಸಂಖ್ಯಾತ ನಾಯಕರ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು. ಚುನಾವಣಾ ಪ್ರಚಾರದಲ್ಲಿ ಜಮೀರ್ ಅಹಮದ್ ಭಾಗಿಯಾಗಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಪಕ್ಷ…

Read More

‘ತ್ರಿಷಾ ಮನೆಯಲ್ಲಿ ಬಾಂಬ್ ಇಟ್ಟಿದ್ದೇವೆ, ಇನ್ನೇನು ಸ್ಫೋಟ ಗೊಳ್ಳುತ್ತೆ’ – Kannada News | Trisha’s Chennai Home Bomb Threat: Police Probe Fake Call, Fans Relieved

ನಾಯಕಿ ತ್ರಿಷಾ (Trisha) ಮನೆಗೆ ಬಂದಿರುವ ಬಾಂಬ್ ಬೆದರಿಕೆ ಸಂಚಲನ ಸೃಷ್ಟಿಸಿದೆ. ಸಿನಿಮಾ ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಹಾಕಿದ್ದ ಅಪರಿಚಿತ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ತ್ರಿಷಾ ಮನೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎನ್ನಲಾಗಿದೆ. ಇದು ಕೆಲವು ಕಾಲ ಅಭಿಮಾನಿಗಳಲ್ಲಿ ಸಾಕಷ್ಟು ಆತಂಕ ಸೃಷ್ಟಿ ಮಾಡಿತ್ತು. ಚೆನ್ನೈನ ಅಲ್ವಾರ್‌ಪೇಟೆಯಲ್ಲಿರುವ ತ್ರಿಷಾ ಅವರ ನಿವಾಸದಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಬಂದಿತ್ತು. ಆ ವ್ಯಕ್ತಿ…

Read More

49 ಲಕ್ಷ ರೂ. ಟಿಕೆಟ್ ಇದ್ದರೂ ವಿಮಾನವೇರಲು ಬಿಡಲಿಲ್ಲ! ಕೋರ್ಟ್ ಮೆಟ್ಟಿಲೇರಿತು ಬೆಂಗಳೂರು ವಿಮಾನ ನಿಲ್ದಾಣದ ಅಪರೂಪದ ಪ್ರಕರಣ – Kannada News | FIR Against KLM Airlines CEO: Family Denied Boarding at Bengaluru Airport Despite Spending Rs 49 Lakh on Tickets

ಕೆಎಲ್‌ಎಂ ಏರ್‌ಲೈನ್ಸ್Image Credit source: KLM Royal Dutch Airlines Instagram ಬೆಂಗಳೂರು, ಏಪ್ರಿಲ್ 14: ಕುಟುಂಬದೊಂದಿಗೆ ಪೆರು ದೇಶಕ್ಕೆ ಪ್ರವಾಸಕ್ಕೆಂದು ತೆರಳಲು ಸಿದ್ಧವಾಗಿದ್ದ ತಮಿಳುನಾಡಿನ ಕುಟುಂಬವೊಂದಕ್ಕೆ ಕೆಎಲ್‌ಎಂ ರಾಯಲ್ ಡಚ್ ಏರ್‌ಲೈನ್ಸ್ (KLM Royal Dutch Airlines) ಸಿಬ್ಬಂದಿ ಬೋರ್ಡಿಂಗ್ ನಿರಾಕರಿಸಿರುವ ಘಟನೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್​ರೀಯ ವಿಮಾನ ನಿಲ್ದಾಣದಲ್ಲಿ (KIA) ನಡೆದಿದೆ. ಅದೀಗ ಕಾನೂನು ಸಮರಕ್ಕೆ ದಾರಿ ಮಾಡಿಕೊಟ್ಟಿದೆ. ಈ ಸಂಬಂಧ ವಿಮಾನಯಾನ ಸಂಸ್ಥೆಯ ಸಿಇಒ ಮತ್ತು ಸಿಒಒ ಸೇರಿದಂತೆ ಉನ್ನತ ಅಧಿಕಾರಿಗಳ ವಿರುದ್ಧ…

Read More