ಮಾಲತಿ ನದಿ ಪ್ರವಾಹದಲ್ಲಿ ಸಿಲುಕಿದ ಕಾರು: ಮಕ್ಕಳು ಸೇರಿ ಒಂದೇ ಕುಟುಂಬದ 6 ಜನರ ರಕ್ಷಣೆ! – Kannada News | Car Trapped in Malathi River Flood: Six Family Members, Including Children, Rescued

ಚಿಕ್ಕಮಗಳೂರು, ಆಗಸ್ಟ್​ 01: ಜಿಲ್ಲೆಯ ಹೆಬ್ಬೂರು ಸಮೀಪದ ಹೊಳೆಯಲ್ಲಿ ಭಾರೀ ಮಳೆಯಿಂದಾಗಿ ನೀರು ಉಕ್ಕಿ ಹರಿದು ಕಾರೊಂದು ಮುಳುಗಡೆಯಾಗಿದೆ. ಕಾರಿನಲ್ಲಿ ಸಿಲುಕಿದ್ದ ಹೊನ್ನಾವರ ಮೂಲದ ಕುಟುಂಬವನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ನಡೆದಿದೆ. ನಾಬ್ಳ-ಬೆಳ್ಳೂರು-ಶೃಂಗೇರಿ ಸಂಪರ್ಕಿಸುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ತುಂಬಿ ಹರಿಯುತ್ತಿದ್ದ ಸೇತುವೆಯನ್ನು ದಾಟಲು ಪ್ರಯತ್ನಿಸಿದಾಗ ಕಾರು ನೀರಿನಲ್ಲಿ ಸಿಲುಕಿಕೊಂಡಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯೇ ಈ ಪರಿಸ್ಥಿತಿಗೆ ಕಾರಣವಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಉತ್ತರ ಕನ್ನಡ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ನೀರಿನ ಮಟ್ಟ ಹೆಚ್ಚಾಗಿ ರಸ್ತೆಗಳು ಜಲಾವೃತಗೊಂಡಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

CWG 2026: ಬಾಕ್ಸಿಂಗ್​ನಲ್ಲಿ ಭಾರತಕ್ಕೆ 2ನೇ ಚಿನ್ನ; 57 ಕೆಜಿ ವಿಭಾಗದಲ್ಲಿ ಬಂಗಾರ ಗೆದ್ದ ಜಾಸ್ಮಿನ್ ಲಂಬೋರಿಯಾ

Source link

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿ, ಗಿಡ ನೆಟ್ಟ ಪ್ರಧಾನಿ ಮೋದಿ – Kannada News | PM Narendra Modi plants a sapling in the premises of the Mysuru Viveka Smaraka at Sri Ramakrishna Ashrama

ಮೈಸೂರು, ಆಗಸ್ಟ್ 1: ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಂಧ್ರಪ್ರದೇಶದಿಂದ ಕರ್ನಾಟಕದ ಮೈಸೂರಿಗೆ (PM Modi in Mysuru) ಆಗಮಿಸಿದ್ದಾರೆ. ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ – ವಿವೇಕ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ರಾಮಕೃಷ್ಣ ಆಶ್ರಮದ ಆವರಣದಲ್ಲಿ ಗಿಡವೊಂದನ್ನು ನೆಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ – ವಿವೇಕ ಸ್ಮಾರಕದ ಆವರಣದಲ್ಲಿ ಸಸಿಯನ್ನು ನೆಟ್ಟರು. ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ 1892ರಲ್ಲಿ ಸ್ವಾಮಿ ವಿವೇಕಾನಂದರು ಉಳಿದುಕೊಂಡಿದ್ದರು. ಈ ವಿಶೇಷ ಘಟನೆಯ ನೆನಪಿಗಾಗಿ ಇಲ್ಲಿ ವಿವೇಕ ಸ್ಮಾರಕ ನಿರ್ಮಾಣ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೈಸೂರಿನಲ್ಲಿ ‘ಮೋದಿ… ಮೋದಿ…’ ಜಯಘೋಷ: ಪ್ರಧಾನಿಗೆ ಭವ್ಯ ಹರ್ಷೋದ್ಗಾರದ ಸ್ವಾಗತ ನೀಡಿದ ಸಾಂಸ್ಕೃತಿಕ ನಗರಿಯ ಜನತೆ – Kannada News | Unprecedented Public Enthusiasm Greets PM Modis Mysuru Visit

ಮೈಸೂರು, ಆ.1: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೈಸೂರಿಗೆ ಭೇಟಿ ನೀಡಿದ್ದು, ಅವರಿಗೆ ಅಲ್ಲಿ ಅಭೂತಪೂರ್ವವಾದ ಮತ್ತು ಭವ್ಯವಾದ ಸಾರ್ವಜನಿಕ ಸ್ವಾಗತ ದೊರೆತಿದೆ. ಪ್ರಧಾನಿಗಳ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ರಸ್ತೆಗಳ ಇಕ್ಕೆಲಗಳಲ್ಲಿ ಸಾವಿರಾರು ಸಂಖ್ಯೆಯ ಜನರು ಜಮಾಯಿಸಿದ್ದು, ತಮ್ಮ ನೆಚ್ಚಿನ ನಾಯಕನನ್ನು ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿದ್ದರು. ಪ್ರಧಾನಿಗಳು ಸಂಚರಿಸಿದ ಮಾರ್ಗದುದ್ದಕ್ಕೂ ಜನರು ಮೋದಿ, ಮೋದಿ, ಭಾರತ್ ಮಾತಾ ಕಿ ಜೈ ಮತ್ತು ವಂದೇ ಮಾತರಂ ಎಂಬ ಘೋಷಣೆಗಳನ್ನು ಕೂಗುತ್ತಾ ಹರ್ಷೋದ್ಗಾರ ಮಾಡಿದರು. ಜನಸಾಗರದಿಂದ ಮೊಳಗಿದ ಈ ಜೈಕಾರಗಳು ವಾತಾವರಣವನ್ನು ಇನ್ನಷ್ಟು ರೋಮಾಂಚನಗೊಳಿಸಿದವು. ಕೆಲವರು ಡಿ.ಕೆ. ಶಿವಕುಮಾರ್ ಅವರ ಹೆಸರಿನ ಘೋಷಣೆಗಳನ್ನೂ ಕೂಗಿ ಗಮನ ಸೆಳೆದರು. ಪ್ರಧಾನಿಗಳ ಈ ಭೇಟಿಯು, ಅಯೋಧ್ಯೆಯ ರಾಮಮಂದಿರಕ್ಕಾಗಿ ರಾಮಲಲ್ಲಾ ವಿಗ್ರಹವನ್ನು ಕೆತ್ತಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಭೇಟಿ ಮಾಡುವುದು, ವಿವೇಕ ಸ್ಮಾರಕಕ್ಕೆ ಮತ್ತು ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡುವುದು ಸೇರಿದಂತೆ ಮಹತ್ವದ ಕಾರ್ಯಕ್ರಮಗಳನ್ನು ಒಳಗೊಂಡಿತ್ತು. ಪ್ರಧಾನಿ ಮೋದಿಯವರ ಈ ಭೇಟಿ ಮೈಸೂರಿನ ಜನತೆಯಲ್ಲಿ ಅತೀವ ಉತ್ಸಾಹವನ್ನು ಮೂಡಿಸಿತು ಮತ್ತು ಅವರಿಗೆ ದೊರೆತ ಅದ್ದೂರಿ ಸ್ವಾಗತವು ಜನರ ಪ್ರೀತಿ ಮತ್ತು ಬೆಂಬಲವನ್ನು ಎತ್ತಿ ತೋರಿಸುತ್ತದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ಸಿಎಂ ಡಿಕೆಶಿಯಿಂದ ಸ್ವಾಗತ – Kannada News | Narendra Modi Arrives in Mysuru: CM DK Shivakumar, Governor Lead Grand Welcome.

ಮೈಸೂರು, ಆ.1: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಮೈಸೂರಿಗೆ ಆಗಮಿಸಿದ್ದು, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರು ಮತ್ತು ಬೊವ್ವ ವಿಜಯೇಂದ್ರ ಅವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಮೈಸೂರಿನ ಓವಲ್ ಹೆಲಿಪ್ಯಾಡ್‌ಗೆ ಬಂದಿಳಿದ ಪ್ರಧಾನಿ ಮೋದಿ, ಅಲ್ಲಿಂದ ರಾಮಕೃಷ್ಣ ಆಶ್ರಮಕ್ಕೆ ತೆರಳಲಿದ್ದಾರೆ. ಪ್ರಧಾನಿಯವರ ಮೈಸೂರು ಭೇಟಿ ಮಹತ್ವದ್ದಾಗಿದ್ದು, ನಗರದ ವಿವೇಕ ಸ್ಮಾರಕ ಮತ್ತು ರಾಮಕೃಷ್ಣ ಆಶ್ರಮಕ್ಕೂ ಭೇಟಿ ನೀಡುವ ಕಾರ್ಯಕ್ರಮವಿದೆ. ಮೈಸೂರು ಇತ್ತೀಚೆಗೆ ಅಯೋಧ್ಯೆಯ ರಾಮಲಲ್ಲಾ ವಿಗ್ರಹದ ಶಿಲ್ಪಿ ಅರುಣ್ ಯೋಗಿರಾಜ್ ಅವರ ತವರೂರಾಗಿ ಗುರುತಿಸಲ್ಪಟ್ಟಿದೆ. ಪ್ರಧಾನಿ ಮೋದಿಯವರ ಈ ಭೇಟಿಯು ನಗರಕ್ಕೆ ಮತ್ತಷ್ಟು ಮಹತ್ವ ನೀಡಿದೆ. ಭದ್ರತಾ ದೃಷ್ಟಿಯಿಂದ ಬಿಗಿ ವ್ಯವಸ್ಥೆ ಮಾಡಲಾಗಿದ್ದು, ಪ್ರಧಾನಿಯವರ ಕಾರ್ಯಕ್ರಮಗಳಿಗೆ ಯಾವುದೇ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಈ ಭೇಟಿಯು ಕರ್ನಾಟಕದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ಚರ್ಚೆಗೆ ವೇದಿಕೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

‘ಡಯಾಲಿಸಿಸ್ ಮಾಡಿಸಿಕೊಂಡು ಸಿನಿಮಾ ಶೂಟಿಂಗ್​​ಗೆ ಬರುತ್ತಿದ್ದರು ಅಂಬರೀಶ್’ – Kannada News | Gurudutt said Ambareesh use to come movie shoot after his daily dialysis

ಮಂಜುನಾಥ ಸಿ.
|

Updated on:Aug 01, 2026 | 4:45 PM


Ambareesh movie: ಗುರುದತ್ ಗಾಣಿಗ, ಬಹಳ ಸಣ್ಣ ವಯಸ್ಸಿನಲ್ಲೇ ಸುದೀಪ್, ಅಂಬರೀಶ್ ಅಂಥಹಾ ದೊಡ್ಡ ಸೂಪರ್ ಸ್ಟಾರ್ ನಟರುಗಳಿಗೆ ಆಕ್ಷನ್-ಕಟ್ ಹೇಳಿದ್ದರು. ಇದೀಗ ಅವರೇ ‘ಕರಾವಳಿ’ ಸಿನಿಮಾ ನಿರ್ದೇಶಿಸಿದ್ದಾರೆ. ಸಿನಿಮಾದ ಬಗ್ಗೆ ಟಿವಿ9ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಗುರುದತ್, ‘ಅಂಬಿ ನಿಂಗ್ ವಯಸ್ಸಾಯ್ತೊ’ ಶೂಟಿಂಗ್​​ಗೆ ಡಯಾಲಿಸಿಸ್ ಮಾಡಿಸಿಕೊಂಡು ಅಂಬರೀಶ್ ಬರುತ್ತಿದ್ದರು ಎಂದು ಹೇಳಿದ್ದಾರೆ. ವಿಡಿಯೋ ನೋಡಿ…

Published on: Aug 01, 2026 04:44 PM

Source link

ಸಂಚಾರಿ ನಿಯಮ ಉಲ್ಲಂಘನೆ ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸ್​ ಇಲಾಖೆ ಅಲರ್ಟ್: ಅಧಿಕಾರಿ, ಸಿಬ್ಬಂದಿಗೆ ವಾರ್ನಿಂಗ್ – Kannada News | Karnataka Police Warns of Strict Action Against Officers Violating Traffic Rules in Uniform

ಪ್ರಾತಿನಿಧಿಕ ಚಿತ್ರImage Credit source: Getty images

ಬೆಂಗಳೂರು, ಆಗಸ್ಟ್​​ 01: ಜನಸಾಮಾನ್ಯರಿಗೆ ನಿಯಮಗಳ ಪಾಠ ಮಾಡುವ ಪೊಲೀಸರೇ ಸಂಚಾರಿ ನಿಯಮಗಳನ್ನು ಗಾಳಿಗೆ ತೂರುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ, ಸಂಚಾರಿ ನಿಯಮ (Traffic Rule) ಉಲ್ಲಂಘಿಸುವ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಕುರಿತು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಪೊಲೀಸ್ ಉಪ ಮಹಾನಿರೀಕ್ಷಕ ಪ್ರಭುಶಂಕರ್ ರಾಜ್ಯಾದ್ಯಂತ ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆಯಲ್ಲಿ ಏನಿದೆ?

ರಾಜ್ಯ ಪೊಲೀಸ್​​ ಇಲಾಖೆಯಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಡಿಐಜಿ ಖಡಕ್​ ಸೂಚನೆ ನೀಡಿದ್ದಾರೆ. ಸಂಚಾರ ನಿಯಂತ್ರಣ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಅಪರಾಧಗಳನ್ನು ತಡೆಗಟ್ಟುವಲ್ಲಿ ಪೊಲೀಸ್ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ಪೊಲೀಸ್​ ನಿಯಮ ಉಲ್ಲಂಘಣೆ: ಸಾರ್ವಜನಿಕರಿಂದ ಆಕ್ರೋಶ

ಅಲ್ಲದೆ, ಸಂಚಾರ ನಿಯಂತ್ರಣ ಮಾಡುವುದು ಮತ್ತು ನಿಯಮ ಉಲ್ಲಂಘಿಸುವ ವಾಹನ ಸವಾರರ ವಿರುದ್ಧ ಕ್ರಮ ಕೈಗೊಳ್ಳುವ ಜವಾಬ್ದಾರಿಯನ್ನೂ ಹೊಂದಿದ್ದಾರೆ. ಆದರೆ, ಸ್ವತಃ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯೇ ಸಮವಸ್ತ್ರದಲ್ಲಿದ್ದಾಗ ಹೆಲ್ಮೆಟ್ ಇಲ್ಲದೆ ವಾಹನ ಚಾಲನೆ ಮಾಡುವುದು, ಚಾಲನೆ ವೇಳೆ ಮೊಬೈಲ್ ಬಳಕೆ, ಟ್ರಿಪಲ್ ರೈಡಿಂಗ್, ನೋ ಪಾರ್ಕಿಂಗ್ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸುವುದು, ಏಕಮಾರ್ಗದ ರಸ್ತೆಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವುದು ಹಾಗೂ ಕಾರು ಚಲಾಯಿಸುವಾಗ ಸೀಟ್ ಬೆಲ್ಟ್ ಧರಿಸದಿರುವುದು ಸೇರಿದಂತೆ ಹಲವಾರು ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: 319 KAS ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಅರ್ಜಿ ಸಲ್ಲಿಕೆ ಯಾವಾಗಿನಿಂದ? ಇಲ್ಲಿದೆ ವಿವರ

ಇನ್ನು ಈ ಘಟನೆಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮಾಧ್ಯಮಗಳಲ್ಲಿಯೂ ವರದಿಯಾಗುತ್ತಿವೆ. ಆದ್ದರಿಂದ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಪೊಲೀಸ್​ ಇಲಾಖೆ ಸಂಚಾರ ವಿಭಾಗ ಸೇರಿದಂತೆ ಎಲ್ಲಾ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ವಾಹನ ಚಾಲನೆಯಲ್ಲಿ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಕ್ತ ಸೂಚನೆ ಹಾಗೂ ನಿರ್ದೇಶನ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಗ್ರಾಮ ಪಂಚಾಯತಿಗಳಿಗೆ ಪಿಡಿಒಗಳ ನೇಮಕಾತಿ; ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ – Kannada News | Eshwar khandre karnataka government to fill 72000 posts 1400 in rural development



AQI








Sign In


Source link

CWG 2026: ಮಹಿಳಾ ಬಾಕ್ಸಿಂಗ್ 54 ಕೆಜಿ ವಿಭಾಗದಲ್ಲಿ ಚಿನ್ನ ಗೆದ್ದ ಪ್ರೀತಿ ಪನ್ವಾರ್ – Kannada News | Preeti Panwar Wins Historic Boxing Gold at 2026 Commonwealth Games for India

ತಮ್ಮ 14 ನೇ ವಯಸ್ಸಿನಲ್ಲಿ ಬಾಕ್ಸಿಂಗ್ ಪ್ರಾರಂಭಿಸಿದ ಪ್ರೀತಿ ಪವಾರ್, 2021 ರ ಖೇಲೋ ಇಂಡಿಯಾ ಯೂತ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದರು. ನಂತರ 2024 ರ ಏಷ್ಯನ್ U-22 ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ, 2025 ರ ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಸ್‌ನಲ್ಲಿ ಚಿನ್ನ, 2026 ರ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಪದಕ ಗೆದ್ದಿದ್ದರು. ಇದೀಗ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದಿದ್ದಾರೆ(PC-PTI).

Source link

IND vs SL: ಅಭ್ಯಾಸ ಪಂದ್ಯದ ವೇಳಾಪಟ್ಟಿಯಲ್ಲಿ ಬದಲಾವಣೆ – Kannada News | India vs Sri Lanka Test Series: Practice Match Schedule Changed to 3 Days

ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 15 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಉಭಯ ತಂಡಗಳ ನಡುವೆ ಅಭ್ಯಾಸ ಪಂದ್ಯ ನಡೆಯಲಿದೆ. ಇದೀಗ ಈ ಅಭ್ಯಾಸ ಪಂದ್ಯದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಮೊದಲು ಟೀಂ ಇಂಡಿಯಾ ಹಾಗೂ ಶ್ರೀಲಂಕಾ ಸ್ಥಳೀಯ 11 ನಡುವೆ 4 ದಿನಗಳ ಅಭ್ಯಾಸ ಪಂದ್ಯವನ್ನು ನಡೆಸಲು ತೀರ್ಮಾನಿಸಲಾಗಿತ್ತು. ಆದರೀಗ ಈ ಅಭ್ಯಾಸ ಪಂದ್ಯದಲ್ಲಿ ಒಂದು ದಿನವನ್ನು ಖಡಿತಗೊಳಿಸಲಾಗಿದೆ. ಅಂದರೆ ಈ ಅಭ್ಯಾಸ ಪಂದ್ಯ 4 ದಿನಗಳ ಬದಲಿಗೆ ಮೂರು ದಿನ ನಡೆಯಲಿದೆ.

ಅದರಂತೆ ಇದೀಗ ಈ ಅಭ್ಯಾಸ ಪಂದ್ಯವು ಆಗಸ್ಟ್ 7 ರಿಂದ 9 ರವರೆಗೆ ಎರಡನೇ ಟೆಸ್ಟ್ ಪಂದ್ಯ ನಡೆಯಲಿರುವ SSC ಕ್ರೀಡಾಂಗಣದ ಬಳಿ ಇರುವ ಕೊಲಂಬೊದ NCC ಮೈದಾನದಲ್ಲಿ ನಡೆಯಲಿದೆ. ಈ ಪ್ರವಾಸಕ್ಕಾಗಿ ಈಗಾಗಲೇ ಭಾರತ ತಂಡವನ್ನು ಪ್ರಕಟಿಸಿದ್ದು, ಈ ಸರಣಿಗಾಗಿ ಟೀಂ ಇಂಡಿಯಾ ಆಗಸ್ಟ್ 4 ರಂದು ಕೊಲಂಬೊಗೆ ತೆರಳಲಿದೆ.

4 ದಿನಗಳ ಬದಲಿಗೆ 3 ದಿನ

ತಂಡದ ಆಯ್ಕೆಯ ಸಮಯದಲ್ಲಿ ಬಿಸಿಸಿಐ ನಾಲ್ಕು ದಿನಗಳ ಅಭ್ಯಾಸ ಪಂದ್ಯದ ಬಗ್ಗೆ ಮಾಹಿತಿ ನೀಡಿತ್ತು. ಆದರೀಗ ಈ ಅಭ್ಯಾಸ ಪಂದ್ಯದಲ್ಲಾಗಿರುವ ಬದಲಾವಣೆಯ ಬಗ್ಗೆ ಬಿಸಿಸಿಐಗೆ ಮಾಹಿತಿ ನೀಡಲಾಗಿದೆ ಎಂದು ವರದಿಯಾಗಿದೆ. ಆದಾಗ್ಯೂ ಒಂದು ದಿನವನ್ನು ಕಡಿಮೆ ಮಾಡಲು ನಿಖರವಾದ ಕಾರಣ ಬಹಿರಂಗವಾಗಿಲ್ಲವಾದರೂ, ಬಿಸಿಸಿಐ ಮತ್ತು ತಂಡದ ಆಡಳಿತ ಮಂಡಳಿಯ ಮೂಲಗಳು ಈ ಬದಲಾವಣೆಯನ್ನು ದೃಢಪಡಿಸಿವೆ. ಜೂನ್‌ನಿಂದ ಭಾರತ ಯಾವುದೇ ಟೆಸ್ಟ್ ಪಂದ್ಯವನ್ನು ಆಡಿಲ್ಲ, ಆದ್ದರಿಂದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ನ ಪ್ರಸ್ತುತ ಆವೃತ್ತಿಯ ಭಾಗವಾಗಿ ಆಡಲಾಗುತ್ತಿರುವ ಈ ಸರಣಿಗೆ ಮುಂಚಿತವಾಗಿ ತಯಾರಿಯ ವಿಷಯದಲ್ಲಿ ಶುಭ್​ಮನ್ ಗಿಲ್ ನೇತೃತ್ವದ ತಂಡಕ್ಕೆ ಈ ಪಂದ್ಯವು ನಿರ್ಣಾಯಕವೆಂದು ಪರಿಗಣಿಸಲಾಗಿದೆ. ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ಏನೆಂದರೆ ಈ ಅಭ್ಯಾಸ ಪಂದ್ಯವನ್ನು ನೇರ ಪ್ರಸಾರ ಮಾಡಲಾಗುತ್ತದೆ.

ಟೆಸ್ಟ್ ಸರಣಿಯ ವೇಳಾಪಟ್ಟಿ

  • 3 ದಿನಗಳ ಅಭ್ಯಾಸ ಪಂದ್ಯ: ಆಗಸ್ಟ್ 7 ರಿಂದ 9 (ಎನ್‌ಸಿಸಿ ಮೈದಾನ, ಕೊಲಂಬೊ)
  • ಮೊದಲ ಟೆಸ್ಟ್: ಆಗಸ್ಟ್ 15 ರಿಂದ ಆರಂಭ (ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣ)
  • ಎರಡನೇ ಟೆಸ್ಟ್: ಆಗಸ್ಟ್ 23 ರಿಂದ ಆರಂಭ (SSC ಕ್ರೀಡಾಂಗಣ, ಕೊಲಂಬೊ)

IND vs SL: ಲಂಕಾ ವಿರುದ್ಧ ಟೆಸ್ಟ್ ಸರಣಿ ಆಡ್ತಾರಾ ಬುಮ್ರಾ? ಫಿಟ್ನೆಸ್ ವರದಿಯಲ್ಲಿ ಏನಿದೆ?

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್*, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಸರನ್ಶ್ ಜೈನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:01 pm, Sat, 1 August 26

Source link

Exit mobile version