17ನೇ ವಯಸ್ಸಿಗೆ ನಕ್ಸಲ್ ಆಗ ಹೊರಟಿದ್ದ ಪವನ್ ಕಲ್ಯಾಣ್; ತಡೆದಿದ್ದು ಅಣ್ಣ ಚಿರಂಜೀವಿ – Kannada News
ಟಾಲಿವುಡ್ನ ನಟ, ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ತಮ್ಮ ಹದಿಹರೆಯದ ದಿನಗಳ ಕುರಿತು ಅತ್ಯಂತ ಶಾಕಿಂಗ್ ವಿಷಯವೊಂದನ್ನು ಬಿಚ್ಚಿಟ್ಟಿದ್ದಾರೆ. ತಾವು ಒಂದು ಕಾಲದಲ್ಲಿ ನಕ್ಸಲ್ ಆಗಲು ನಿರ್ಧರಿಸಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ ಅಣ್ಣ ಮೆಗಾಸ್ಟಾರ್ ಚಿರಂಜೀವಿ ತಮ್ಮನ್ನು ತಡೆದು ದಾರಿ ತೋರಿಸಿದ್ದಾಗಿ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ಪವನ್ ಕಲ್ಯಾಣ್ ಅವರಿಗೆ 17-21 ವರ್ಷ ವಯಸ್ಸಾಗಿದ್ದಾಗ ಸಮಾಜದಲ್ಲಾಗುತ್ತಿದ್ದ ಅನ್ಯಾಯಗಳ ವಿರುದ್ಧ ಭಾರಿ ಸಿಟ್ಟು ಇತ್ತಂತೆ.‘ಆ ವಯಸ್ಸಿನಲ್ಲಿ ನನಗೆ ಗನ್ ಹಿಡಿದು ನಕ್ಸಲೈಟ್ ಸೇರುವ ಹುಚ್ಚು ಆಲೋಚನೆ…