ಕರ್ನಾಟಕ ಎಂಎಲ್ಸಿ ಚುನಾವಣೆ: ಪರಿಷತ್ ಕದನದಲ್ಲಿ ಜೆಡಿಎಸ್ಗೆ ಡಬಲ್ ಟೆನ್ಷನ್ – Kannada News
ಬೆಂಗಳೂರು, ಜೂನ್ 11: ಕರ್ನಾಟಕ ವಿಧಾನ ಪರಿಷತ್ ಚುನಾವಣಾ ಕಣವು ತೀವ್ರ ಕುತೂಹಲ ಮೂಡಿಸಿದೆ. ಜೆಡಿಎಸ್ ನಾಯಕರಿಗೆ ಒಂದು ಲೆಕ್ಕದಲ್ಲಿ ಡಬಲ್ ಟೆನ್ಷನ್ ಶುರುವಾಗಿದೆ. ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವುದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಪ್ರತಿಷ್ಠೆಯ ಸವಾಲಾಗಿ ಪರಿಣಮಿಸಿದೆ. ಎನ್ಡಿಎಯ ಮೂರನೇ ಅಭ್ಯರ್ಥಿ ಗೆಲುವಿಗೆ ಸದ್ಯ ನಾಲ್ಕರಿಂದ ಐದು ಮತಗಳ ಕೊರತೆ ಇದೆ. ಈ ಮತಗಳನ್ನು ಕಾಂಗ್ರೆಸ್ ಪಾಳಯದಿಂದ ಸೆಳೆಯಬೇಕಾದ ಅನಿವಾರ್ಯತೆ ಜೆಡಿಎಸ್ ಮೇಲಿದೆ. ಇದು ಒಂದು ಕಡೆಯಾದರೆ, ಇನ್ನೊಂದು ಕಡೆ ಪಕ್ಷದೊಳಗೆ ಅಡ್ಡ ಮತದಾನದ ಭೀತಿ…