ಕರ್ನಾಟಕ ಹವಾಮಾನ ವರದಿ: ರಾಯಚೂರು, ಕೊಪ್ಪಳ ಸೇರಿದಂತೆ ಕರಾವಳಿಯಲ್ಲಿ ಹೆಚ್ಚಾಯ್ತು ಬಿಸಿಲ ಧಗೆ! 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Karnataka Weather Forecast: Heat wave alert all over Karnataka, Yellow alert for 9 districts

ರಾಯಚೂರು, ಕೊಪ್ಪಳ ಸೇರಿದಂತೆ ಕರಾವಳಿಯಲ್ಲಿ ಹೆಚ್ಚಾಯ್ತು ಬಿಸಿಲ ಧಗೆ!

ಬೆಂಗಳೂರು, ಏಪ್ರಿಲ್ 15: ಬೆಂಗಳೂರು ಸೇರಿದಂತೆ ಇಂದು ಹಲವು ಜಿಲ್ಲೆಗಳಲ್ಲಿ ಶುಷ್ಕ  (Weather Forecast) ವಾತಾವರಣವಿರಲಿದ್ದು, ಕೆಲ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಇಂದು ತಾಪಮಾನ ಹೆಚ್ಚಳದ ಸಾಧ್ಯತೆಯಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದೆ. ಇನ್ನುಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯ ಜೊತೆಗೆ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಒಟ್ಟಾರೆ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಎಲ್ಲೆಲ್ಲಿ ಯೆಲ್ಲೋ ಅಲರ್ಟ್​?

ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣ ಅಲೆ ಹೆಚ್ಚಾಗಿರಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಸೂಚಿಸಿದೆ.

ಎಲ್ಲೆಲ್ಲಿ ಹೀಟ್​ ವೇವ್, ಒಣ ಹವೆ?

ಕರಾವಳಿಯಲ್ಲಿಂದು ಬಿಸಿ ವಾತಾವರಣದ ಜೊತೆ ಒಣ ಹವೆಯೂ ಇರಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಉಷ್ಣಾಘಾತದಿಂದ ರಕ್ಷಣೆ ಹೇಗೆ?

ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IPL 2026: SRH ತಂಡಕ್ಕೆ ಎಡಗೈ ವೇಗಿ ಎಂಟ್ರಿ..!

Source link

Karnataka SSLC Results: ಎಸ್‌ಎಸ್‌ಎಲ್‌ಸಿ ರಿಸಲ್ಟ್ ಇಂದು ಬರುತ್ತಾ? ವಿದ್ಯಾರ್ಥಿಗಳಿಗೆ KSEAB ಹೇಳಿದ್ದೇನು? – Kannada News | Karnataka SSLC Results 2026: Official Update and Expected Release Date

ಬೆಂಗಳೂರು, ಏ.15: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು ಎಂದು ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. ಈ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಮಂಡಳಿ ಮನವಿ ಮಾಡಿದೆ. ಯಾವುದೇ ಕಾರಣಕ್ಕೂ ಇಂದು ಫಲಿತಾಂಶ ಪ್ರಕಟ ಮಾಡಲ್ಲ ಎಂದು ಮಂಡಳಿ ಹೇಳಿದೆ. ಇನ್ನು ಫಲಿತಾಂಶ ತಯಾರಿಗಳು ನಡೆಯುತ್ತಿದೆ ಎಂದು ಹೇಳಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಹರಿಬಿಡುತ್ತಿರುವ ಸುಳ್ಳು ಸುದ್ದಿಗಳಿಗೆ ಮಂಡಳಿ ಅಧಿಕೃತವಾಗಿ ತೆರೆ ಎಳೆದಿದೆ. ಇಂದು ಯಾವುದೇ ಫಲಿತಾಂಶ ಪ್ರಕಟವಾಗುತ್ತಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಈಗಷ್ಟೇ ಆರಂಭವಾಗಿದ್ದು, ಪೂರ್ಣಗೊಳ್ಳಲು ಕಾಲಾವಕಾಶ ಬೇಕಿದೆ.

ಇದನ್ನೂ ಓದಿ: ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ; ಮೇ.29ರಿಂದ ಶಾಲೆ ಆರಂಭ, ಈ ಬಾರಿ ದಸರಾ ರಜೆ ಎಷ್ಟು ಗೊತ್ತಾ?

ಮಂಡಳಿಯ ಮಾಹಿತಿಯ ಪ್ರಕಾರ, ಮುಂದಿನ ವಾರ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಬಹುಶಃ ಏಪ್ರಿಲ್ 23ರ ನಂತರ ಅಧಿಕೃತವಾಗಿ ಫಲಿತಾಂಶ ಹೊರಬೀಳಬಹುದು ಎಂದು ಅಂದಾಜಿಸಲಾಗಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ಕೇವಲ ಅಧಿಕೃತ ವೆಬ್‌ಸೈಟ್‌ಗಳು ಅಥವಾ ಮಂಡಳಿಯ ಪ್ರಕಟಣೆಗಳನ್ನು ಮಾತ್ರ ನಂಬಬೇಕು. ಕಿಡಿಗೇಡಿಗಳ ಹಾದಿತಪ್ಪಿಸುವ ಸುದ್ದಿಗಳ ಬಗ್ಗೆ ಎಚ್ಚರವಿರಲಿ ಎಂದು ಮಂಡಳಿ ತಿಳಿಸಿದೆ.

ಫಲಿತಾಂಶ ವೀಕ್ಷಿಸುವುದು ಹೇಗೆ?

ವೆಬ್‌ಸೈಟ್‌ಗೆ ಭೇಟಿ ನೀಡಿ: ಸಿಬಿಎಸ್ಇ ಅಧಿಕೃತ ವೆಬ್‌ಸೈಟ್ results.cbse.nic.in ಅಥವಾ cbse.gov.in ಗೆ ಲಾಗ್ ಇನ್ ಆಗಿ.

ಲಿಂಕ್ ಕ್ಲಿಕ್ ಮಾಡಿ: ಮುಖಪುಟದಲ್ಲಿ ಕಾಣುವ ‘Secondary School Examination (Class X) Results 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.

ವಿವರಗಳನ್ನು ಭರ್ತಿ ಮಾಡಿ: ನಿಮ್ಮ ರೋಲ್ ನಂಬರ್ (Roll Number), ಸ್ಕೂಲ್ ನಂಬರ್ (School Number) ಮತ್ತು ಅಡ್ಮಿಟ್ ಕಾರ್ಡ್ ಐಡಿ (Admit Card ID) ಅನ್ನು ನಿಖರವಾಗಿ ನಮೂದಿಸಿ.

ಸಬ್ಮಿಟ್ ನೀಡಿ: ವಿವರಗಳನ್ನು ಸಲ್ಲಿಸಿದ ತಕ್ಷಣ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಮೂಡುತ್ತದೆ.

ಡೌನ್‌ಲೋಡ್: ಭವಿಷ್ಯದ ಬಳಕೆಗಾಗಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:08 am, Wed, 15 April 26

Source link

Horoscope Today: ಇಂದು ಈ ರಾಶಿಯವರಿಗೆ ಅನಾರೋಗ್ಯ ಕಾಡಬಹುದು!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 15, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷದ ತ್ರಯೋದಶಿ ತಿಥಿ, ಪೂರ್ವಭಾದ್ರ ನಕ್ಷತ್ರ, ಬ್ರಹ್ಮಯೋಗ ಮತ್ತು ಗರಜಕರಣಗಳಿಂದ ಕೂಡಿದ ಈ ದಿನದ ರಾಹುಕಾಲ ಮಧ್ಯಾಹ್ನ 12:29 ರಿಂದ 1:52ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ, ಶುಭಕಾಲ ಬೆಳಗ್ಗೆ 10:46 ರಿಂದ 12:19ರವರೆಗೆ ಇದೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

ದೆಹಲಿಯ ಗೋದಾಮಿನಲ್ಲಿ ಅಗ್ನಿ ದುರಂತ, ಪಕ್ಕದ ಗುಡಿಸಲುಗಳಿಗೆ ತಗುಲಿದ ಬೆಂಕಿ, ಒಂದು ಮಗು ಸೇರಿ ಮೂವರು ಸಜೀವದಹನ – Kannada News | Blaze Turns Deadly in Rohini: Three Killed as Fire Sweeps Through Shanties

ನವದೆಹಲಿ, ಏಪ್ರಿಲ್ 15: ದೆಹಲಿಯ ರೋಹಿಣಿ ಪ್ರದೇಶದಲ್ಲಿ ಗುರುವಾರ ತಡರಾತ್ರಿ ಭೀಕರ ಅಗ್ನಿ ದುರಂತ(Fire Accident) ಸಂಭವಿಸಿದೆ. ಮಂಗೇರಾಮ್ ಪಾರ್ಕ್‌ನಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ, ಅಲ್ಲಿಯೇ ನಿರ್ಮಿಸಲಾಗಿದ್ದ ಗುಡಿಸಲುಗಳನ್ನು ಆಹುತಿ ಪಡೆದಿದೆ. ಈ ಘೋರ ಘಟನೆಯಲ್ಲಿ ಮಗುವೂ ಸೇರಿದಂತೆ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ.

ಬುದ್ಧ ವಿಹಾರ್ ಬಳಿಯ ಸುಮಾರು 400 ಚದರ ಗಜಗಳಷ್ಟು ವಿಸ್ತೀರ್ಣದ ಜಾಗದಲ್ಲಿ ಈ ಅನಾಹುತ ಸಂಭವಿಸಿದೆ. ಇಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿಡಲಾಗಿತ್ತು ಮತ್ತು ಅದರ ಪಕ್ಕದಲ್ಲೇ ಕಾರ್ಮಿಕರು ತಾತ್ಕಾಲಿಕ ಗುಡಿಸಲುಗಳನ್ನು ನಿರ್ಮಿಸಿಕೊಂಡಿದ್ದರು. ಬೆಳಗಿನ ಜಾವ ಸುಮಾರು 1.25 ರ ಸುಮಾರಿಗೆ ಎಲ್ಲರೂ ಗಾಢ ನಿದ್ರೆಯಲ್ಲಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ವಸ್ತುಗಳಿದ್ದ ಕಾರಣ ಜ್ವಾಲೆಗಳು ಕ್ಷಣಾರ್ಧದಲ್ಲಿ ವ್ಯಾಪಿಸಿ ಇಡೀ ಪ್ರದೇಶವನ್ನು ಆವರಿಸಿಕೊಂಡಿವೆ.

ಕಾರ್ಯಾಚರಣೆಗೆ ಅಡ್ಡಿಯಾದ ಕಿರಿದಾದ ರಸ್ತೆಗಳು
ಬೆಂಕಿಯ ಸುದ್ದಿ ತಿಳಿಯುತ್ತಿದ್ದಂತೆಯೇ ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು. ಆದರೆ, ಈ ಪ್ರದೇಶದ ರಸ್ತೆಗಳು ಅತ್ಯಂತ ಕಿರಿದಾಗಿದ್ದರಿಂದ ದೊಡ್ಡ ವಾಹನಗಳು ಘಟನಾ ಸ್ಥಳವನ್ನು ತಲುಪಲು ಹರಸಾಹಸ ಪಡಬೇಕಾಯಿತು. ಅಗ್ನಿಶಾಮಕ ಅಧಿಕಾರಿ ಅಜಯ್ ಶರ್ಮಾ ನೇತೃತ್ವದಲ್ಲಿ ದೀರ್ಘಕಾಲದ ಕಾರ್ಯಾಚರಣೆಯ ನಂತರ ಬೆಂಕಿಯನ್ನು ಹತೋಟಿಗೆ ತರಲಾಯಿತು. ದುರದೃಷ್ಟವಶಾತ್, ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪುವಷ್ಟರಲ್ಲೇ ಮೂವರು ಪ್ರಾಣ ಕಳೆದುಕೊಂಡಿದ್ದರು.

ಮತ್ತಷ್ಟು ಓದಿ: ದೆಹಲಿಯಲ್ಲಿ ಕಟ್ಟಡಕ್ಕೆ ಬೆಂಕಿ; ಮೂರು ಮಕ್ಕಳು ಸೇರಿ ಆರು ಮಂದಿ ಬಲಿ

ಸಾವನ್ನಪ್ಪಿದವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಅವಶೇಷಗಳಡಿಯಿಂದ ಅವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. “ಈ ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸದ್ಯ ಬೆಂಕಿ ಸಂಪೂರ್ಣ ನಿಯಂತ್ರಣದಲ್ಲಿದೆ, ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ವಿಪತ್ತು ನಿರ್ವಹಣಾ ತಂಡಗಳು (CATS) ಸ್ಥಳದಲ್ಲಿ ಮೊಕ್ಕಾಂ ಹೂಡಿವೆ.

ರಾಜ್‌ಘಾಟ್ ಬಳಿಯೂ ಬೆಂಕಿ ಅವಘಡ
ದೆಹಲಿಯಲ್ಲಿ ಹೆಚ್ಚುತ್ತಿರುವ ತಾಪಮಾನದ ನಡುವೆ ಅಗ್ನಿ ಅವಘಡಗಳ ಸರಣಿ ಮುಂದುವರೆಯುತ್ತಿದೆ. ಇದೇ ಏಪ್ರಿಲ್ 12 ರಂದು ರಾಜ್‌ಘಾಟ್ ಬಸ್ ಡಿಪೋ ಬಳಿಯ ಪೊದೆಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಒಣಗಿದ ಗಿಡಗಂಟಿಗಳು ಮತ್ತು ಕಸಕ್ಕೆ ಹತ್ತಿದ ಬೆಂಕಿ ವೇಗವಾಗಿ ಹರಡಿ ಆತಂಕ ಮೂಡಿಸಿತ್ತು. ಅಗ್ನಿಶಾಮಕ ದಳದ ಎಡಿಒ ಭೂಪೇಂದ್ರ ಪ್ರಕಾಶ್ ನೇತೃತ್ವದಲ್ಲಿ ಹಲವಾರು ಘಟಕಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದವು. ಅದೃಷ್ಟವಶಾತ್ ಆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿರಲಿಲ್ಲ.

ಬೇಸಿಗೆಯ ಆರಂಭದ ದಿನಗಳಲ್ಲಿ ಪ್ಲಾಸ್ಟಿಕ್ ಮತ್ತು ಒಣ ತ್ಯಾಜ್ಯ ಸಂಗ್ರಹಣಾ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ. ರೋಹಿಣಿಯ ಈ ಘಟನೆ ರಾಜಧಾನಿಯ ಕೊಳೆಗೇರಿಗಳಲ್ಲಿನ ಸುರಕ್ಷತೆಯ ಬಗ್ಗೆ ಮತ್ತೆ ಪ್ರಶ್ನೆ ಎತ್ತುವಂತೆ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

RCB vs LSG ಪಂದ್ಯಕ್ಕೆ 4 ಆಟಗಾರರು ಅಲಭ್ಯ..!

Source link

ಇರಾನ್ ಜತೆ ಅಮೆರಿಕ ಮಾತುಕತೆ: ಮತ್ತೆ ಪಾಕಿಸ್ತಾನವೇ ಅಂಗಳ, 48 ಗಂಟೆಗಳಲ್ಲಿ ನಿರ್ಣಾಯಕ ಬೆಳವಣಿಗೆ – Kannada News | US Iran Peace Talks: Pakistan Hosts Crucial Next Round in 48 Hours, Trump Confident

ಇಸ್ಲಾಮಾಬಾದ್, ಏಪ್ರಿಲ್ 15: ಪಶ್ಚಿಮ ಏಷ್ಯಾದಲ್ಲಿ ಹೊತ್ತಿ ಉರಿಯುತ್ತಿರುವ ಯುದ್ಧದ ಜ್ವಾಲೆಯನ್ನು ಆರಿಸಲು ವಿಶ್ವದ ದೊಡ್ಡಣ್ಣ ಅಮೆರಿಕ ಈಗ ಮತ್ತೊಂದು ನಿರ್ಣಾಯಕ ಹೆಜ್ಜೆಯನ್ನಿಟ್ಟಿದೆ. ಇಸ್ಲಾಮಾಬಾದ್‌ನಲ್ಲಿ ನಡೆದ ಮೊದಲ ಸುತ್ತಿನ ಮಾತುಕತೆಗಳು ಅನಿರೀಕ್ಷಿತವಾಗಿ ವಿಫಲವಾದ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಈಗ ಸಂಚಲನ ಮೂಡಿಸುವ ಹೇಳಿಕೆ ನೀಡಿದ್ದಾರೆ.”ಮುಂದಿನ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗಳು ಪುನರಾರಂಭಗೊಳ್ಳಲಿವೆ” ಎಂದು ಟ್ರಂಪ್ ಘೋಷಿಸಿದ್ದು, ಇಡೀ ಜಗತ್ತಿನ ಗಮನ ಈಗ ಪಾಕಿಸ್ತಾನದತ್ತ ನೆಟ್ಟಿದೆ.

ಯುರೋಪ್ ಬೇಡ, ಪಾಕಿಸ್ತಾನವೇ ಸಾಕು
ನ್ಯೂಯಾರ್ಕ್ ಪೋಸ್ಟ್ ಜೊತೆಗಿನ ವಿಶೇಷ ದೂರವಾಣಿ ಸಂದರ್ಶನದಲ್ಲಿ ಮಾತನಾಡಿದ ಟ್ರಂಪ್, ಆರಂಭದಲ್ಲಿ ಎರಡನೇ ಸುತ್ತಿನ ಮಾತುಕತೆಗಳನ್ನು ಯುರೋಪ್‌ನಲ್ಲಿ ನಡೆಸುವ ಬಗ್ಗೆ ಚಿಂತಿಸಲಾಗಿತ್ತು ಎಂದು ಒಪ್ಪಿಕೊಂಡರು. ಆದರೆ, ಕೇವಲ ಅರ್ಧ ಗಂಟೆಯ ನಂತರ ತಮ್ಮ ನಿರ್ಧಾರ ಬದಲಿಸಿದ ಅವರು, ಸ್ಥಳ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿದರು. “ನಾವು ಪಾಕಿಸ್ತಾನಕ್ಕೆ ಮರಳುವ ಸಾಧ್ಯತೆಗಳೇ ದಟ್ಟವಾಗಿವೆ. ನಮಗೆ ಸಂಬಂಧವೇ ಇಲ್ಲದ ದೇಶಕ್ಕೆ ನಾವು ಏಕೆ ಹೋಗಬೇಕು?” ಎಂದು ಪ್ರಶ್ನಿಸುವ ಮೂಲಕ ಪಾಕಿಸ್ತಾನದ ಮೇಲಿನ ತಮ್ಮ ಒಲವನ್ನು ವ್ಯಕ್ತಪಡಿಸಿದರು.

ಫೀಲ್ಡ್ ಮಾರ್ಷಲ್ ಮುನೀರ್ ಕಾರ್ಯವೈಖರಿಗೆ ಟ್ರಂಪ್ ಫಿದಾ
ಟ್ರಂಪ್ ಅವರ ಈ ನಿರ್ಧಾರದ ಹಿಂದೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರ ಪಾತ್ರ ದೊಡ್ಡದಿದೆ. ಮುನೀರ್ ಅವರನ್ನು ‘ಫೀಲ್ಡ್ ಮಾರ್ಷಲ್’ ಎಂದು ಸಂಬೋಧಿಸಿದ ಟ್ರಂಪ್, “ಅವರು ಅದ್ಭುತವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಮೇಲಿನ ವಿಶ್ವಾಸದಿಂದಲೇ ನಾವು ಮತ್ತೆ ಇಸ್ಲಾಮಾಬಾದ್‌ಗೆ ಹೋಗಲು ನಿರ್ಧರಿಸಿದ್ದೇವೆ” ಎಂದಿದ್ದಾರೆ. ಪಾಕಿಸ್ತಾನದ ಮಧ್ಯಸ್ಥಿಕೆ ಮತ್ತು ಭದ್ರತಾ ವ್ಯವಸ್ಥೆಯು ಅಮೆರಿಕದ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ ಎಂಬುದಕ್ಕೆ ಇದು ಸಾಕ್ಷಿ.

ಮಾತುಕತೆಯ ಉದ್ದೇಶ?
ಕಳೆದ ಏಳು ವಾರಗಳಿಂದ ಇರಾನ್ ಮತ್ತು ಅಮೆರಿಕ-ಇಸ್ರೇಲ್ ಪಡೆಗಳ ನಡುವೆ ನಡೆಯುತ್ತಿರುವ ಸಂಘರ್ಷವು ಭೀಕರ ರೂಪ ಪಡೆದಿದೆ. ಇರಾನ್ ನಾಯಕತ್ವದ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಿಂದ ಉದ್ವಿಗ್ನತೆ ಮಿತಿಮೀರಿದೆ. ಈ ಯುದ್ಧವನ್ನು ಕೊನೆಗೊಳಿಸಿ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಪುನಃಸ್ಥಾಪಿಸುವುದು ಈ ಮಾತುಕತೆಯ ಮುಖ್ಯ ಅಜೆಂಡಾ.
ಏಪ್ರಿಲ್ 10 ರಿಂದ 12 ರವರೆಗೆ ಇಸ್ಲಾಮಾಬಾದ್‌ನ ಸೆರೆನಾ ಹೋಟೆಲ್‌ನಲ್ಲಿ ಮೊದಲ ಸುತ್ತಿನ ಮಾತುಕತೆ ನಡೆದಿತ್ತು. ಅದು ಯಶಸ್ವಿಯಾಗದಿದ್ದರೂ, ಎರಡನೇ ಪ್ರಯತ್ನದಲ್ಲಿ ಒಪ್ಪಂದಕ್ಕೆ ಬರಲು ಎರಡೂ ದೇಶಗಳು ಉತ್ಸುಕವಾಗಿವೆ.

ಮತ್ತಷ್ಟು ಓದಿ: ಇರಾನ್ ಮತ್ತೆ ಮಾತುಕತೆಗೆ ಬರಲಿ, ಬರ್ದೇ ಇರ್ಲಿ ಡೋಂಟ್ ಕೇರ್: ಡೊನಾಲ್ಡ್​ ಟ್ರಂಪ್

ಅನಿಶ್ಚಿತತೆಯ ನಡುವೆಯೂ ನಿರೀಕ್ಷೆ
ಎರಡನೇ ಸುತ್ತಿನ ಈ ಸಭೆಯಲ್ಲಿ ಯಾರ್ಯಾರು ಭಾಗವಹಿಸಲಿದ್ದಾರೆ ಎಂಬುದು ಇನ್ನೂ ನಿಗೂಢವಾಗಿದೆ. ಮೊದಲ ಸುತ್ತಿನಲ್ಲಿದ್ದ ನಾಯಕರೇ ಇರುತ್ತಾರೋ ಅಥವಾ ಹೊಸ ರಾಜತಾಂತ್ರಿಕರು ಸೇರ್ಪಡೆಯಾಗುತ್ತಾರೋ ಎಂಬುದು ಕುತೂಹಲ ಮೂಡಿಸಿದೆ. ಸ್ಥಳ ಮತ್ತು ಸಮಯದ ಬಗ್ಗೆ ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವೆ ಒಮ್ಮತ ಮೂಡಿದ ತಕ್ಷಣ ಅಧಿಕೃತ ಘೋಷಣೆ ಹೊರಬೀಳಲಿದೆ.

ಒಟ್ಟಾರೆಯಾಗಿ, ಮುಂದಿನ 48 ಗಂಟೆಗಳು ಅಂತಾರಾಷ್ಟ್ರೀಯ ರಾಜಕೀಯದಲ್ಲಿ ಅತ್ಯಂತ ನಿರ್ಣಾಯಕವಾಗಿದ್ದು, ಪಾಕಿಸ್ತಾನದ ನೆಲದಲ್ಲಿ ಜಾಗತಿಕ ಶಾಂತಿಯ ಹೊಸ ಹಾದಿ ತೆರೆಯುತ್ತದೆಯೇ ಎಂದು ಕಾದು ನೋಡಬೇಕಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಹೋಮ, ಹವನ, ಪೂಜೆ ಸಮಯದಲ್ಲಿಎದ್ದು ಓಡಾಡುವುದು ಅಶುಭವೇ? – Kannada News | The Sacred Discipline: Why Interrupting Homa and Pooja Rituals is Inauspicious

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಹೋಮ, ಹವನ, ಪೂಜೆ ಸಮಯದಲ್ಲಿಎದ್ದು ಓಡಾಡುವುದು ಅಶುಭವೇ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.ಯಾವುದೇ ಪೂಜೆ ಅಥವಾ ವ್ರತವನ್ನು ಸಂಕಲ್ಪ ದೊಂದಿಗೆ ಪ್ರಾರಂಭಿಸಲಾಗುತ್ತದೆ. ಒಮ್ಮೆ ಸಂಕಲ್ಪ ಮಾಡಿದ ನಂತರ, ಪೂಜಾ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು ಎಂಬುದು ಧಾರ್ಮಿಕ ನಿಯಮ. ಫೋನ್ ಕರೆಗಳು, ವಿಐಪಿ ಭೇಟಿಗಳು ಅಥವಾ ಇತರೆ ಯಾವುದೇ ಕಾರಣಗಳಿಗಾಗಿ ಪೂಜೆಯ ಮಧ್ಯದಲ್ಲಿ ಎದ್ದು ಓಡಾಡಿದರೆ, ಆ ಪೂಜೆಯು ಪರಿಪೂರ್ಣವಾಗುವುದಿಲ್ಲ ಮತ್ತು ಅದರ ಫಲ ಲಭಿಸುವುದಿಲ್ಲ. ಇದು ಶ್ರದ್ಧೆ, ಭಕ್ತಿ ಮತ್ತು ಶಿಸ್ತಿಗೆ ವಿರುದ್ಧವಾಗಿದೆ. ಹಾಗಾಗಿ, ಯಾವುದೇ ಧಾರ್ಮಿಕ ವಿಧಿಯನ್ನು ಆರಂಭಿಸಿದರೆ ಅದನ್ನು ಸಂಪೂರ್ಣವಾಗಿ ನೆರವೇರಿಸುವುದು ಅತ್ಯಗತ್ಯ ಎಂದು ಗುರೂಜಿ ಹೇಳಿದ್ದಾರೆ.

 

 

 

Source link

‘ಧುರಂಧರ್ 2’ ಕಲೆಕ್ಷನ್: ‘ಪುಷ್ಪ 2’, ‘ಬಾಹುಬಲಿ 2’ ದಾಖಲೆ ಮುರಿಯಲು ಇನ್ನೆಷ್ಟು ಕೋಟಿ ಬಾಕಿ – Kannada News | Dhurandhar 2 collection report: Movie about break Pushpa 2 and Bahubali 2 record

ಧುರಂಧರ್ 2’ (Dhurandhar 2) ಸಿನಿಮಾ ಬಿಡುಡಗೆ ಆಗಿ ಇಂದಿಗೆ 28 ದಿನಗಳಾಗಿವೆ. ಸಿನಿಮಾ ಭರ್ಜರಿ ಗಳಿಕೆಯನ್ನು ಮುಂದುವರೆಸಿದೆ. ಇತ್ತೀಚೆಗೆ ಗಳಿಕೆಯಲ್ಲಿ ಸಣ್ಣ ಇಳಿಕೆ ಕಂಡು ಬಂದಿದೆಯಾದರೂ ಸಿನಿಮಾದ ಒಟ್ಟಾರೆ ಗಳಿಕೆ ಸಂಖ್ಯೆ ದೊಡ್ಡದಾಗಿಯೇ ಇವೆ. ‘ಧುರಂಧರ್ 2’ ಸಿನಿಮಾದ ಸುಮಾರು 10 ಸಾವಿರಕ್ಕೂ ಹೆಚ್ಚು ಶೋಗಳು ಈಗಲೂ ದೇಶದಾದ್ಯಂತ ಪ್ರದರ್ಶನವಾಗುತ್ತಿದ್ದು, ದಿನವಹಿ ಕಲೆಕ್ಷನ್ 7 ರಿಂದ 10 ಕೋಟಿ ಇದೆ. ಸಿನಿಮಾ ಬಿಡುಗಡೆ ಆಗಿ ತಿಂಗಳಾಗುತ್ತಾ ಬಂದರೂ ಕೋಟಿಗಳಲ್ಲಿ ಗಳಿಕೆ ಮಾಡುತ್ತಿರುವುದು ಸಾಮಾನ್ಯವಲ್ಲ. ಇದೀಗ ಈ ಸಿನಿಮಾ ‘ಪುಷ್ಪ 2’ ಮತ್ತು ‘ಬಾಹುಬಲಿ 2’ ದಾಖಲೆಗಳನ್ನು ಮುರಿಯುವ ಹೊಸ್ತಿಲಲ್ಲಿದೆ.

‘ಧುರಂಧರ್ 2’ ಸಿನಿಮಾ 27 ದಿನಗಳ ಬಳಿಕ ಭಾರತದಾದ್ಯಂತ 1311 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 1727 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಆಗಿದೆ. ಈ ಮೂಲಕ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ದಾಖಲೆಯನ್ನು ‘ಧುರಂಧರ್ 2’ ಸಿನಿಮಾ ಮುರಿಯಲು ಕೆಲವೇ ಕೋಟಿಗಳು ಬಾಕಿ ಇದೆ. ‘ಪುಷ್ಪ 2’ ಸಿನಿಮಾ ಭಾರತದಲ್ಲಿ 1471 ಕೋಟಿ (ಗ್ರಾಸ್ ಕಲೆಕ್ಷನ್) ಮಾಡಿದೆ ಎನ್ನಲಾಗಿದೆ. ಇನ್ನು ‘ಬಾಹುಬಲಿ 2’ ಸಿನಿಮಾ ಭಾರತದಲ್ಲಿ 1416 ಕೋಟಿ ಗಳಿಕೆ ಮಾಡಿತ್ತು. ಈ ಎರಡೂ ಸಿನಿಮಾಗಳ ದಾಖಲೆಗಳನ್ನು ಶೀಘ್ರವೇ ಮುರಿಯಲಿದೆ ‘ಧುರಂಧರ್ 2’.

‘ಧುರಂಧರ್ 2’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 1727 ಕೋಟಿ ಗಳಿಕೆ ಮಾಡಿದ್ದು, ‘ಪುಷ್ಪ 2’ ಸಿನಿಮಾದ ವರ್ಲ್ಡ್ ಬಾಕ್ಸ್ ಆಫೀಸ್ ಕಲೆಕ್ಷನ್ 1742 ಕೋಟಿ ರೂಪಾಯಿಗಳಾಗಿವೆ. ಈ ದಾಖಲೆಯನ್ನು ಅತ್ಯಂತ ಶೀಘ್ರದಲ್ಲೇ ‘ಧುರಂಧರ್ 2’ ಸಿನಿಮಾ ಮುರಿಯಲಿದೆ. ಆದರೆ ‘ಬಾಹುಬಲಿ 2’ ಸಿನಿಮಾದ ವಿಶ್ವ ಬಾಕ್ಸ್ ಆಫೀಸ್ ಕಲೆಕ್ಷನ್ ಸುಮಾರು 1800 ಕೋಟಿ ಇದ್ದು, ಈ ದಾಖಲೆ ಮುರಿಯಲು ‘ಧುರಂಧರ್ 2’ಗೆ ಇನ್ನಷ್ಟು ಹೆಚ್ಚಿನ ಸಮಯ ಬೇಕಾಗಬಹುದು.

ಇದನ್ನೂ ಓದಿ:RCB ತಂಡದಲ್ಲಿ ಧುರಂಧರ ದಂಡೇ ಇದೆ: ಎದುರಾಳಿಗಳು ನಡುಗುತ್ತಿದ್ದಾರೆ!

‘ಐಪಿಎಲ್’, ನಾಲ್ಕು ರಾಜ್ಯಗಳ ಚುನಾವಣೆ, ಇತರೆ ಸಿನಿಮಾಗಳ ಬಿಡುಗಡೆ ಇನ್ನಿತರೆಗಳು ಇರುವ ಕಾರಣ ‘ಧುರಂಧರ್ 2’ ಸಿನಿಮಾದ ಗಳಿಕೆಯಲ್ಲಿ ತುಸು ಇಳಿಕೆ ಕಂಡು ಬಂದಿದೆ. ಮಂಗಳವಾರದಂದು ‘ಧುರಂಧರ್ 2’ ಸಿನಿಮಾ ಭಾರತದಲ್ಲಿ ಸುಮಾರು 7.5 ಕೋಟಿ ಗಳಿಕೆ ಮಾಡಿದೆ. ಕಳೆದ ಭಾನುವಾರ 14 ಕೋಟಿಗೂ ಹೆಚ್ಚು ಮೊತ್ತ ಗಳಿಸಿತ್ತು. ಇದೇ ವೇಗದಲ್ಲಿ ಮುಂದುವರೆದರೂ ಸಹ ಇನ್ನೊಂದು ವಾರದಲ್ಲಿ ವಿಶ್ವ ಬಾಕ್ಸ್ ಆಫೀಸ್ ಲೆಕ್ಕಾಚಾರದಲ್ಲಿ ‘ಪುಷ್ಪ 2’ ಮತ್ತು ‘ಬಾಹುಬಲಿ 2’ ಸಿನಿಮಾದ ದಾಖಲೆ ಮುರಿಯುವುದು ಖಾತ್ರಿ.

‘ಧುರಂಧರ್ 2’ ಸಿನಿಮಾ ಸ್ಪೈ ಆಕ್ಷನ್ ಥ್ರಿಲ್ಲರ್ ಸಿನಿಮಾ ಆಗಿದ್ದು, ಭಾರತದ ಸೈನಿಕನೋರ್ವ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರನ್ನು ಮಟ್ಟ ಹಾಕುವ ಕತೆಯನ್ನು ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ರಣ್ವೀರ್ ಸಿಂಗ್, ಅರ್ಜುನ್ ರಾಂಪಾಲ್, ಅಕ್ಷಯ್ ಖನ್ನಾ, ಸಂಜಯ್ ದತ್ ಮತ್ತು ಸಾರಾ ಅರ್ಜುನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಆದಿತ್ಯ ಧರ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಆಸ್ಟ್ರೇಲಿಯಾದಲ್ಲಿ ಐಪಿಎಲ್ ಪಂದ್ಯ..!

Source link

Exit mobile version