Headlines

ಏಕದಿನ ತಂಡದಿಂದಲೂ ಬಾಬರ್ ಔಟ್; 6 ಹೊಸ ಮುಖಗಳಿಗೆ ಚೊಚ್ಚಲ ಅವಕಾಶ – Kannada News | PCB Axes Babar Azam from ODI Team, Announces New Squad for Bangladesh Series

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup  2026) ಪಾಕಿಸ್ತಾನ ತಂಡದ ಪ್ರದರ್ಶನ ಸಾಧಾರಣವಾಗಿತ್ತು. ಲೀಗ್ ಸುತ್ತನ್ನು ದಾಟಿ, ಸೂಪರ್ 8 ಸುತ್ತಿಗೆ ಬಂದಿದ್ದ ಪಾಕ್ ತಂಡಕ್ಕೆ ಈ ಸುತ್ತನ್ನು ಮೀರಿ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ಹೀಗಾಗಿ ತಂಡದ ಕಳಪೆ ಪ್ರದರ್ಶನದಿಂದ ಕೆರಳಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಇತ್ತೀಚೆಗಷ್ಟೇ ಆಟಗಾರರಿಗೆ ದಂಡ ವಿಧಿಸಿತ್ತು. ಏತನ್ಮಧ್ಯೆ, ಅಲೀಮ್ ದಾರ್ ಆಯ್ಕೆದಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ತಂಡದ ಸ್ಟಾರ್ ಆಟಗಾರ ಬಾಬರ್ ಆಝಂ (Babar Azam) ವಿರುದ್ಧ…

Read More

ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್‌ ಭದ್ರತಾ ಸಿದ್ಧತೆ: ಸಿಸಿಟಿವಿ​​ ಕಣ್ಗಾವಲು – Kannada News | Bengaluru: New Year Security Preparations Underway on MG Road and Brigade Road

ಬೆಂಗಳೂರು, ಡಿಸೆಂಬರ್​​ 30: ಹೊಸ ವರ್ಷಕ್ಕೆ ಕ್ಷಣಗಣನೆ ಶುರುವಾಗಿದೆ. 2025ಕ್ಕೆ ಗುಡ್​ ಬೈ ಹೇಳಿ 2026ವೆಲ್​ಕಂ ಮಾಡಲು ಜನ ತುದಿಗಾಲಲ್ಲಿ ಕಾದು ನಿಂತಿದ್ದಾರೆ. ಪಾರ್ಟಿಗಾಗಿ ಭರ್ಜರಿ ಪ್ಲ್ಯಾನಿಂಗ್​ನಲ್ಲಿ ತೊಡಗಿದ್ದಾರೆ. ನಗರದಲ್ಲಿ ವರ್ಷಾಚರಣೆ ನಡೆಯೋ ರಸ್ತೆಗಳಂತೂ ಜಗಮಗ ಅಂತಿವೆ. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆಗಾಗಿ ಭದ್ರತಾ ಸಿದ್ಧತೆಗಳು ಆರಂಭಗೊಂಡಿವೆ. ಬ್ಯಾರಿಕೇಡ್ ಅಳವಡಿಕೆ, ಸಿಸಿ ಕ್ಯಾಮೆರಾ, ವಾಚ್ ಟವರ್​ಗಳನ್ನು ಅಳವಡಿಕೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಣ್ಗಾವಲುವಹಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ – Kannada News | Ashes thrashing Ashes series decided the earliest in terms of balls

ಟೆಸ್ಟ್ ಕ್ರಿಕೆಟ್​ನ ಮದಗಜಗಳ ಕಾಳಗದಲ್ಲಿ ಮತ್ತೊಮ್ಮೆ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿಯುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿದೆ. ಈ ಬಾರಿ ಕೇವಲ 4719 ಎಸೆತಗಳಲ್ಲಿ ಆಂಗ್ಲರನ್ನು ಕಟ್ಟಿಹಾಕಲಾಗಿದೆ. ಅಂದರೆ 4719 ಎಸೆತಗಳಲ್ಲೇ ಈ ಬಾರಿಯ ಆ್ಯಶಸ್ ಸರಣಿಯ ಫಲಿತಾಂಶ ಹೊರಬಿದ್ದಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ 8 ವಿಕೆಟ್​ಗಳ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ತಂಡವು ಮೂರನೇ ಟೆಸ್ಟ್ ಪಂದ್ಯದಲ್ಲಿ 82 ರನ್​ಗಳ ಗೆಲುವು ದಾಖಲಿಸಿದೆ. ಈ ಮೂಲಕ 3-0 ಅಂತರದಿಂದ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದೆ. ಈ ಮೂರು ಪಂದ್ಯಗಳಲ್ಲಿ…

Read More

Horoscope Today: ಇಂದು ಈ ರಾಶಿಯವರು ದುಂದು ವೆಚ್ಚ ಮಾಡಬೇಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 27, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ದಶಮಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ಡಾ. ಗುರೂಜಿ ಅವರು ಮೇಷದಿಂದ ಮೀನದವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಪ್ರತಿ ರಾಶಿಯವರಿಗೆ ನಿರ್ದಿಷ್ಟ ಗ್ರಹಗಳ ಶುಭಫಲ, ಆದಾಯ, ವ್ಯವಹಾರ,…

Read More

ಜನವರಿಯಲ್ಲಿ 1.93 ಲಕ್ಷ ಕೋಟಿ ರೂ ಜಿಎಸ್​ಟಿ ಸಂಗ್ರಹ; ಈ ವರ್ಷ 18 ಲಕ್ಷ ಕೋಟಿ ರೂ ಟ್ಯಾಕ್ಸ್ ಕಲೆಕ್ಷನ್ – Kannada News | GST collections rises by 6.2pc to Rs 1,93,384 in 2026 January

ನವದೆಹಲಿ, ಫೆಬ್ರುವರಿ 1: ಭಾರತದ ಸರಕು ಮತ್ತು ಸೇವಾ ತೆರಿಗೆ ಸಂಗ್ರಹ (GST collections) ಜನವರಿಯಲ್ಲಿ 1,93,384 ಕೋಟಿ ರೂ ಆಗಿದೆ. ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಜಿಎಸ್​ಟಿ ಸಂಗ್ರಹದಲ್ಲಿ ಶೇ. 6.2ರಷ್ಟು ಹೆಚ್ಚಿದೆ. 2025ರ ಜನವರಿಯಲ್ಲಿ ಜಿಎಸ್​ಟಿ ಸಂಗ್ರಹ 1,82,094 ಕೋಟಿ ರೂ ಇತ್ತು. ಪ್ರಸಕ್ತ ಹಣಕಾಸು ವರ್ಷದಲ್ಲಿ ಇಲ್ಲಿಯವರೆಗೆ, ಅಂದರೆ 2025ರ ಏಪ್ರಿಲ್​ನಿಂದ 2026ರ ಜನವರಿವರೆಗೆ 10 ತಿಂಗಳಲ್ಲಿ ಸಂಗ್ರಹವಾದ ಒಟ್ಟು ಜಿಎಸ್​ಟಿ 18,43,423 ಕೋಟಿ ರೂ. ಹಿಂದಿನ ವರ್ಷದ ಇದೇ ಅವಧಿಗೆ…

Read More

Indias Space Mission: ಕಕ್ಷೆಯಲ್ಲಿರುವ ಉಪಗ್ರಹಗಳಿಗೆ ಇಂಧನ ತುಂಬಿಸುವ ಸಾಮರ್ಥ್ಯವಿರುವ ಎರಡನೇ ದೇಶವಾಗುವತ್ತ ಭಾರತ ಧಾಪುಗಾಲು – Kannada News | AyulSAT Fuel Stations in Space: OrbitAid’s Plan to Keep Satellites Alive Longer

ನವದೆಹಲಿ, ಜನವರಿ 12: ಭಾರತ ಬಾಹ್ಯಾಕಾಶ(Space)ದಲ್ಲಿ ಹೊಸ ಮೈಲಿಗಲ್ಲು ಸಾಧಿಸಲಿದೆ. ಸಾಮಾನ್ಯವಾಗಿ ಉಪಗ್ರಹಗಳು ಅವುಗಳಲ್ಲಿರುವ ಇಂಧನ ಖಾಲಿಯಾಗುವವರೆಗೆ ಕಾರ್ಯನಿರ್ವಹಿಸುತ್ತವೆ ಹಾಗಾಗಿ ಅದರ ಜೀವಿತಾವಧಿ ತುಂಬಾ ಕಡಿಮೆ. ಆದರೆ ಇಸ್ರೋದ PSLV-C62 ರಾಕೆಟ್ ಆರ್ಬಿಟ್ ಏಡ್ ನಿರ್ಮಿಸಿದ 25 ಕೆಜಿ ತೂಕದ ಆಯುಲ್ಸಾಟ್ ಉಪಗ್ರಹವನ್ನು ಸೋಮವಾರ ಕಕ್ಷೆಗೆ ಯಶಸ್ವಿಯಾಗಿ ಸೇರಿಸಿದರೆ ಭಾರತವು ಬಾಹ್ಯಾಕಾಶದಲ್ಲಿ ಉಪಗ್ರಹಗಳಿಗೆ ಇಂಧನ ತುಂಬಿಸುವ ಸಾಮರ್ಥ್ಯವನ್ನು ಹೊಂದಿರುವ ವಿಶ್ವದ ಎರಡನೇ ರಾಷ್ಟ್ರವಾಗಲಿದೆ. ಕಕ್ಷೆಯಲ್ಲಿರುವ ಇಂಧನ ಮರುಪೂರಣವು ಉಪಗ್ರಹಗಳು ಹೆಚ್ಚು ಕಾಲ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡುತ್ತದೆ….

Read More

Haveri: ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು! – Kannada News | Serial Home Thefts Reported in Nagendramatti, Haveri

ಹಾವೇರಿ, ಡಿಸೆಂಬರ್​​ 23: ನಾಗೇಂದ್ರಮಟ್ಟಿಯಲ್ಲಿ ಮನೆಗಳ‌ ಸರಣಿ ಕಳ್ಳತನ ನಡೆದಿದ್ದು, ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳರು ಕೈಚಳಕ ತೋರಿದ್ದಾರೆ. 7ಕ್ಕೂ ಅಧಿಕ ಮನೆಗಳಲ್ಲಿ ಕಳ್ಳತನ ನಡೆದಿದ್ದು, ನಗದು ಮತ್ತು ಚಿನ್ನಾಭರಣ ಸೇರಿದಂತೆ ವಿವಿಧ ವಸ್ತುಗಳನ್ನ ಕದ್ದು ಖದೀಮರು ಎಸ್ಕೇಪ್​​ ಆಗಿದ್ದಾರೆ. ಜೊತೆಗೆ ಚಳಿಯ ವಾತಾವರಣ ಹಿನ್ನೆಲೆ ಕಳವು ಮಾಡಿರುವ ಮನೆಯಲ್ಲೇ ಚಹಾ ಮಾಡಿಕೊಂಡು ಸೇವಿಸಿ ಹೋಗಿದ್ದಾರೆ. ಕಳ್ಳರ ಕೃತ್ಯಕ್ಕೆ ನಾಗೇಂದ್ರಮಟ್ಟಿ ಜನ ಕಂಗಾಲಾಗಿದ್ದು, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಹಾವೇರಿ ನಗರ ಪೊಲೀಸರು…

Read More

ನಂದಿನಿ ಉತ್ಪನ್ನಗಳಿಗೆ ಸುಧಾರಾಣಿ ರಾಯಭಾರಿ: ಕೆಎಂಎಫ್ ಆಕ್ಷೇಪ – Kannada News | Sudharani appointed as Nandini products brand ambassador by Bamul

ಕೆಲ ದಿನಗಳ ಹಿಂದಷ್ಟೆ ರಾಜ್ಯದ ಹೆಮ್ಮೆಯಾಗಿರುವ ಸರ್ಕಾರಿ ಮಾಲೀಕತ್ವದ ಮೈಸೂರು ಸ್ಯಾಂಡಲ್ ಉತ್ಪನ್ನಗಳಿಗೆ ಪ್ಯಾನ್ ಇಂಡಿಯಾ ನಟಿ ತಮನ್ನಾ ಭಾಟಿಯಾ (Tamannah Bhatia) ಅವರನ್ನು ರಾಯಭಾರಿ ಅನ್ನಾಗಿ ಮಾಡಲಾಗಿದೆ. ಕನ್ನಡದವರ ಬದಲು ಪರಭಾಷಾ ನಟಿಯನ್ನು ರಾಯಭಾರಿ ಮಾಡಿದ್ದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಬಮೂಲ್ (ಬೆಂಗಳೂರು ಹಾಲು ಒಕ್ಕೂಟ) ತಮ್ಮ ನಂದಿನಿ ಉತ್ಪನ್ನಗಳಿಗೆ ಸುಧಾರಾಣಿ ಅವರನ್ನು ರಾಯಭಾರಿ ಅನ್ನಾಗಿ ಮಾಡಿದೆ. ಆದರೆ ಇದಕ್ಕೆ ಕೆಎಂಎಫ್ (ಕರ್ನಾಟಕ ಹಾಲು ಮಹಾಮಂಡಳ) ವಿರೋಧ ವ್ಯಕ್ತಪಡಿಸಿದೆ. ಬಮೂಲ್​​ನ ಅಧ್ಯಕ್ಷರಾಗಿರುವ ಡಿಕೆ ಸುರೇಶ್…

Read More

ಬಲಗೈಯಲ್ಲಿ ಭಗವದ್ಗೀತೆ ಹಿಡಿದು ಪ್ರಮಾಣವಚನ ಸ್ವೀಕರಿಸಿದ ಕೀನ್ಯಾ ಶಾಸಕ – Kannada News | Kenya Assembly Leader Caleb Takes Bhagavad Gita Oath: Global Faith and ISKCON Connection

ಕೀನ್ಯಾ, ಫೆಬ್ರವರಿ 26: ಕೀನ್ಯಾದ ಯುವ ನಾಯಕರೊಬ್ಬರು ಬಲಗೈಯಲ್ಲಿ ಭಗವದ್ಗೀತೆ(Bhagavad Gita) ಹಿಡಿದು ಪ್ರಮಾಣವಚನ ಸ್ವೀಕರಿಸಿರುವ ಫೋಟೊ ಎಲ್ಲೆಡೆ ವೈರಲ್ ಆಗಿದೆ. ಈ ಯುವ ನಾಯಕನ ಹೆಸರು ಕ್ಯಾಲೆಬ್. ಮೊಂಬಾಸಾದ ಕೌಂಟಿಯಲ್ಲಿರುವ ವಿಧಾನಸಭೆಯಲ್ಲಿ ಈ ಐತಿಹಾಸಿಕ ಘಟನೆ ನಡೆದಿದೆ. ಮೊಂಬಾಸಾ ಕೌಂಟಿಯ ಚಂಗಮ್ವೆ ಕ್ಷೇತ್ರವನ್ನು ಪ್ರತಿನಿಧಿಸುವ ಯುವ ಶಾಸಕ ಕ್ಯಾಲೆಬ್ ಪ್ರಮಾಣವಚನ ಸ್ವೀಕರಿಸಲು ಭಗವದ್ಗೀತೆಯೊಂದಿಗೆ ಬಂದಿದ್ದರು. ಈ ಕುರಿತು ಇಸ್ಕಾನ್​ನ ಓಂಕಾರ ಮುಕುಂದ ದಾಸ್ ಮಾತನಾಡಿ, ಈ ನಡೆ ನಾಟಕೀಯವಲ್ಲ, ಪ್ರಚಾರಕ್ಕೂ ಅಲ್ಲ ಆ ಭಾವ ಅವರ…

Read More

ಯುದ್ಧದ ಎಫೆಕ್ಟ್: ಗ್ಯಾಸ್ ಅಭಾವದ ಬೆನ್ನಲ್ಲೇ ರೋಗಿಗಳಿಗೂ ಶಾಕ್, ಈ ವಾರದಿಂದಲೇ ಔಷಧ ಬೆಲೆ ಏರಿಕೆ

ಬೆಂಗಳೂರು, ಏಪ್ರಿಲ್ 1: ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮ ಜಾಗತಿಕ ಪೂರೈಕೆ ಸರಪಳಿಯ (Supply Chain) ಮೇಲೆ ತೀವ್ರ ಪರಿಣಾಮ ಬೀರಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರು ವಾರಗಳಿಂದ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ (Commercial LPG) ತೀವ್ರ ಕೊರತೆ ಎದುರಾಗಿದೆ. ಇದರ ನೇರ ಪರಿಣಾಮ ಹೋಟೆಲ್ ಉದ್ಯಮದ ಮೇಲೆ ಬಿದ್ದಿದ್ದು, ಹೋಟೆಲ್‌ಗಳು ಪರದಾಡುವಂತಾಗಿದೆ. ಈ ಸಂಕಷ್ಟದ ನಡುವೆಯೇ ಈಗ ಔಷಧಗಳ ಬೆಲೆಯೂ ಏರಿಕೆಯಾಗುವ ಲಕ್ಷಣಗಳು ಕಾಣಿಸುತ್ತಿದ್ದು, ಸಾಮಾನ್ಯ ಜನರಿಗೆ ಗಾಯದ ಮೇಲೆ…

Read More