Headlines

ಬೋರ್​ವೆಲ್ ಕೊರೆಯಲು ಹೋಗಿ ಮೆಟ್ರೋ ಸುರಂಗದಲ್ಲಿ 6 ಇಂಚು ರಂಧ್ರ ಸೃಷ್ಟಿ

ಪುಣೆ, ಮಾರ್ಚ್​ 25: ಮೆಟ್ರೋ(Metro) ಮಾರ್ಗದ ಮೇಲೆ ಬೋರ್​ವೆಲ್ ಕೊರೆಯಲು ಹೋಗಿ ಕೆಳಗೆ ಸುರಂಗ ಮಾರ್ಗದಲ್ಲಿ 6 ಇಂಚುಗಳಷ್ಟು ರಂಧ್ರ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ಖಡಕ್ ಪೊಲೀಸರು ಬೋರ್‌ವೆಲ್ ಗುತ್ತಿಗೆದಾರ ಮತ್ತು ಮನೆಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಿವಾಜಿ ರಸ್ತೆಯ ಬಳಿ ಘಟನೆ ನಡೆದಿದೆ. ಶಿವಾಜಿನಗರ ಮತ್ತು ಸ್ವರ್ಗೇಟ್ ನಡುವಿನ ಭೂಗತ ಕಾರಿಡಾರ್‌ನ ಭಾಗವಾಗಿರುವ ಮಂಡೈ ಮೆಟ್ರೋ ನಿಲ್ದಾಣದ ಬಳಿಯ ಸುರಂಗ ರಚನೆಗೆ ಕೊರೆಯುವಿಕೆಯು ಹಾನಿಯನ್ನುಂಟುಮಾಡಿದೆ ಎಂದು ವರದಿಯಾಗಿದೆ. ಕೊರೆಯುವಿಕೆಯು 80 ರಿಂದ 100 ಅಡಿ…

Read More

ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಕ್ಯಾಂಟರ್​ ಚಾಲಕ – Kannada News | Hosakote Highway Tragedy: Canter Driver Describes Deadly Hosakote Accident

ದೇವನಹಳ್ಳಿ, ಫೆಬ್ರವರಿ 13: ಹೊಸಕೋಟೆ-ದಾಬಸ್​​ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ 7 ಜನ ದುರ್ಮರಣ ಹೊಂದಿದ್ದು, ಅಪಘಾತದಲ್ಲಿ ಬದುಕುಳಿದ ಕ್ಯಾಂಟರ್ ಚಾಲಕ ಘಟನೆಯ ಕುರಿತು ವಿವರಿಸಿದ್ದಾರೆ. ಮಾಲೂರು ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ವಾಹನ ಕ್ಯಾಂಟರ್​​ಗೆ ಗುದ್ದಿದೆ. ಇದರಿಂದ ಕ್ಯಾಂಟರ್ ಪಲ್ಟಿಯಾಗಿದ್ದು, ಸ್ಥಳೀಯರು ಸಹಾಯಕ್ಕೆ ಬಂದು ತನ್ನನ್ನು ಮೇಲೆತ್ತಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಸ್ನೇಹಿತರಿಗೆ ಕರೆ ಮಾಡಿ, ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ – Kannada News | Rahul Gandhi lowered the dignity of the post of Leader of Opposition Chirag Paswan alleges

ನವದೆಹಲಿ, ಏಪ್ರಿಲ್ 17: ಕೇಂದ್ರ ಸಚಿವ ಮತ್ತು ಎಲ್​ಜೆಪಿ ಸಂಸದ ಚಿರಾಗ್ ಪಾಸ್ವಾನ್ (Chirag Paswan) ಇಂದು ಸಂಸತ್​​ನಲ್ಲಿ ಅಧಿವೇಶನದಲ್ಲಿ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಮಾಡಿದ ಭಾಷಣದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. “ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನ ಸ್ಥಾನದ ಘನತೆಯನ್ನು ಕಡಿಮೆ ಮಾಡಿದ್ದಾರೆ. ಉದಾಹರಣೆಗಳನ್ನು ನೀಡುವ ಭರದಲ್ಲಿ ಪ್ರಧಾನಿ ಮೋದಿಯವರ ಹೆಸರನ್ನು ತಮ್ಮ ಜೊತೆ ಎಳೆದುಕೊಂಡು ಮಿತಿ ಮೀರಿ ವರ್ತಿಸಿದ್ದಾರೆ. ಈ ಮೂಲಕ ಅವರ ಪಕ್ಷದಿಂದ ಮೊದಲ ಬಾರಿಗೆ…

Read More

ಬಿಡುಗಡೆಗೆ ಸಿದ್ಧವಾಯ್ತು ‘ಮೃತ್ಯುದೇವತೆ’ ಸಿನಿಮಾ: ಏನು ಈ ಚಿತ್ರದ ಥೀಮ್?

ಶೀಘ್ರದಲ್ಲೇ ಬಿಡುಗಡೆ ಆಗಲಿರುವ ‘ಮೃತ್ಯದೇವತೆ’ (Mruthyu Devathe) ಸಿನಿಮಾದಲ್ಲಿ ಸಾರಿಕಾ, ವಿನಯಾ ಪ್ರಸಾದ್‍, ನವೀನ್‍ ಮಹದೇವ, ಹಿಮಶ್ರೀ, ಡಯಾನಾ, ಸೂರ್ಯ, ಪವನ್‍, ವರ್ಷಿತಾ, ಮಾಹಿನ್‍ ಕುಬೇರ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ಛಾಯಾಗ್ರಹಣ, ಶಿವಪ್ರಸಾದ್‍ ಸಂಗೀತ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಹಾಡುಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು. ‘ಮೃತ್ಯದೇವತೆ’ ಚಿತ್ರಕ್ಕೆ ನವೀನ್‍ ಮಹದೇವ ಅವರು ನಿರ್ದೇಶನ ಮಾಡಿದ್ದಾರೆ. ಅವರೇ ಕಥೆ-ಚಿತ್ರಕಥೆ ಬರೆದು ಮುಖ್ಯ ಪಾತ್ರದಲ್ಲೂ ನಟಿಸಿದ್ದಾರೆ. ರಘು ಅವರ ನೃತ್ಯ ನಿರ್ದೇಶನ, ಅಲ್ಟಿಮೇಟ್‍ ಶಿವು ಮತ್ತು…

Read More

ನೇಪಾಳ: ಬಲೆನ್ ಶಾ ಅಧಿಕಾರ ಸ್ವೀಕಾರ ಬೆನ್ನಲ್ಲೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ

ಕಾಠ್ಮಂಡು, ಮಾರ್ಚ್ 28: ನೇಪಾಳ (Nepal) ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ನೂತನ ಪ್ರಧಾನಿಯಾಗಿ ಬಾಲೆನ್ ಶಾ ಹಾಗೂ ಸಂಪುಟ ಸಚಿವರು ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ (KP Sharma Oli) ಅವರನ್ನು ಬಂಧಿಸಲಾಗಿದೆ. ಕಳೆದ ವರ್ಷ ನಡೆದ ಭ್ರಷ್ಟಾಚಾರ ವಿರೋಧಿ ‘ಜೆನ್ ಜಿ (Gen Z)’ ಪ್ರತಿಭಟನೆಯ ವೇಳೆ ಕನಿಷ್ಠ 77 ಜನರ ಸಾವಿಗೆ ಕಾರಣವಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಲಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಒಲಿ ಅವರೊಂದಿಗೆ ಮಾಜಿ ಗೃಹ…

Read More

ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಮತ್ತೆ ಮದುವೆಯಾದ ಪತ್ನಿ; 23 ದಿನಗಳ ಬಳಿಕ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ! – Kannada News | Wife remarries short after Husband’s Death; Body Exhumed for Post Mortem After 23 Days

ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಮತ್ತೆ ಮದುವೆಯಾದ ಪತ್ನಿ; 23 ದಿನಗಳ ಬಳಿಕ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ! ತುಮಕೂರು, ಫೆಬ್ರವರಿ 27: ತುಮಕೂರು ತಾಲ್ಲೂಕಿನ ಹೆಬ್ಬೂರು ಹೋಬಳಿಯ ದಾಸರಹಳ್ಳಿಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಪತ್ನಿ ಮತ್ತೊಂದು ಮದುವೆಯಾಗಿರುವ ಹಿನ್ನೆಲೆ ಮೃತನ ಸಾವಿನ ಕುರಿತು ಸಂಶಯ ವ್ಯಕ್ತವಾಗಿದ್ದು, ವ್ಯಕ್ತಿ ಸತ್ತ 23 ದಿನಗಳ ಬಳಿಕ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮೃತನ ಸಹೋದರಿಯಿಂದ ಪೊಲೀಸ್ ಠಾಣೆಗೆ ದೂರು!…

Read More

ಮಕ್ಕಳ ಜೊತೆ ಕ್ರಿಸ್​​​ಮಸ್ ಆಚರಿಸಿದ ರಾಧಿಕಾ ಪಂಡಿತ್; ಇಲ್ಲಿದೆ ಕ್ಯೂಟ್ ಫೋಟೋಸ್

ರಾಧಿಕಾ ಪಂಡಿತ್ ಅವರು ಈಗ ನಟನೆಯಿಂದ ದೂರ ಇದ್ದಾರೆ. ಅವರು ಈಗ ಮಕ್ಕಳನ್ನು ಪೋಷಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ. ಎಲ್ಲರಿಗೂ ಅವರು ಕ್ರಿಸ್​ಮಸ್ ಹಾಗೂ ಹೊಸ ವರ್ಷದ ವಿಶ್ ಕೋರಿದ್ದಾರೆ. ರಾಧಿಕಾ ಪಂಡಿತ್ ಅವರು ಮನೆಯಲ್ಲಿ ಕ್ರಿಸ್​​ಮಸ್ ಟ್ರೀ ಅಲಂಕರಿಸಿದ್ದಾರೆ. ಇದಕ್ಕೆ ಲೈಟಿಂಗ್ ಮಾಡಲಾಗಿದೆ. ಈ ಫೋಟೋಗಳು ಗಮನ ಸೆಳಯೋ ರೀತಿಯಲ್ಲಿ ಇದೆ. ರಾಧಿಕಾ ಜೊತೆ ಯಥರ್ವ್ ಹಾಗೂ ಆಯ್ರಾ ಕೂಡ ಇದ್ದಾರೆ. ಇವರು…

Read More

ರೋಗಿಗಳಿಗೆ ಔಷಧಿ ಕೊರತೆ ಆತಂಕ: ಆರೋಗ್ಯ ಸಚಿವರಿಗೆ ಫಾರ್ಮಾಸ್ಯುಟಿಕಲ್ಸ್ ಕಂಪನಿ ಪತ್ರ

ಬೆಂಗಳೂರು, ಏಪ್ರಿಲ್ 09: ಇರಾನ್, ಅಮೆರಿಕ ನಡುವಿನ ಯುದ್ಧಕ್ಕೆ 15 ದಿನಗಳ ವಿರಾಮ ಬಿದ್ದಿದೆ. ಇದರಿಂದ ಹೊರ್ಮುಝ್​​​​​​​​​​​​​ನಲ್ಲಿ ಸಿಲುಕಿಕೊಂಡಿರುವ ಭಾರತದ ಹಡಗುಗಳು ಇನ್ಮುಂದೆ ಬರಲಿದೆ. ಆದರೆ ಕರ್ನಾಟಕದಲ್ಲಿ ಎಲ್‌ಪಿಜಿ ಗ್ಯಾಸ್ ಸಮಸ್ಯೆ ಮಾತ್ರ ಮುಂದುವರಿದಿದೆ. ಆ ಮೂಲಕ ಔಷಧಿ ತಯಾರಿಕೆಯ (medicine manufacturing) ಮೇಲೂ ಯುದ್ಧದ ಕರಿನೆರಳು ಆವರಿಸಿದಂತಾಗಿದೆ. ವಿದೇಶದಿಂದ ಬರಬೇಕಿದ್ದ ಡ್ರಗ್ಸ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಈ ಕುರಿತಾಗಿ ಆರೋಗ್ಯ ಸಚಿವರಿಗೆ ಫಾರ್ಮಾಸ್ಯುಟಿಕಲ್ಸ್ ಕಂಪನಿ ಪತ್ರ ಬರೆದಿವೆ. ಔಷಧಿ ತಯಾರಿಕೆಗೂ ಹೊಡೆತ ಎಲ್‌ಪಿಜಿ ಗ್ಯಾಸ್​ ಸಮಸ್ಯೆ ಸರಿಯಾಗಿಲ್ಲ….

Read More

ಖರ್ಜೂರ ಅಥವಾ ಬಾದಾಮಿ; ಈ ಋತುಮಾನಕ್ಕೆ ಯಾವುದರ ಸೇವನೆ ಆರೋಗ್ಯಕರ? – Kannada News | Winter Dry Fruits: Almonds vs Dates Showdown

ಚಳಿಗಾಲದಲ್ಲಿ, ದೇಹದ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವುದು ಸಾಮಾನ್ಯ. ಪರಿಣಾಮವಾಗಿ, ಕಾಲೋಚಿತ ಕಾಯಿಲೆಗಳಿಗೆ ದೇಹ ಬೇಗ ಒಡ್ಡಿಕೊಳ್ಳುವ ಸಾಧ್ಯತೆ ಹೆಚ್ಚಾಗುತ್ತದೆ. ಹಾಗಾಗಿ, ಈ ಋತುಮಾನದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮತ್ತು ದೇಹವನ್ನು ಒಳಗಿನಿಂದ ಬೆಚ್ಚಗಿಡುವ ಆಹಾರ ಸೇವನೆ ಮಾಡುವುದು ಬಹಳ ಮುಖ್ಯವಾಗುತ್ತದೆ. ಅದಕ್ಕಾಗಿಯೇ ಆರೋಗ್ಯ ತಜ್ಞರು ನಿಯಮಿತವಾಗಿ ಖರ್ಜೂರ (Dates) ಮತ್ತು ಬಾದಾಮಿಯಂತಹ ಒಣ ಹಣ್ಣುಗಳ ತಿನ್ನಿ ಎಂದು ಸಲಹೆ ನೀಡುತ್ತಾರೆ. ಇವೆರಡೂ ಆರೋಗ್ಯಕರ, ಆದರೆ ಅವುಗಳ ಪ್ರಯೋಜನಗಳು ವಿಭಿನ್ನವಾಗಿರುತ್ತದೆ. ಹಾಗಾದರೆ ಇವೆರಡರಲ್ಲಿ ಯಾವುದು ಒಳ್ಳೆಯದು, ಇವುಗಳ ಸೇವನೆಯಿಂದ…

Read More

Vasthu Tips: ಈ ದಿನಗಳಲ್ಲಿ ತಪ್ಪಿಯೂ ಪಾದರಕ್ಷೆ ಖರೀದಿಸಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Vastu Shastra for Footwear: Attract Wealth and Positivity, Avoid Negative Energy at Home

ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯದಲ್ಲಿ, ಪಾದರಕ್ಷೆಗಳನ್ನು ಪಾದಗಳನ್ನು ರಕ್ಷಿಸುವ ಸಾಧನವೆಂದು ಪರಿಗಣಿಸುವುದಲ್ಲದೆ, ಅವು ಮನೆಯ ಶಕ್ತಿ, ಸಂಪತ್ತು, ಸಮೃದ್ಧಿ ಮತ್ತು ಕುಟುಂಬದ ಸಂತೋಷಕ್ಕೂ ಸಂಬಂಧಿಸಿವೆ. ಆದ್ದರಿಂದ ಪಾದರಕ್ಷೆಗಳಿಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ಪಾಲಿಸದಿರುವುದು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ, ನಂಬಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಆರ್ಥಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಉಂಟುಮಾಡುತ್ತದೆ ವಾಸ್ತು ತಜ್ಞರು ಸಲಹೆ ನೀಡುತ್ತಾರೆ. ಈ ದಿನಗಳಲ್ಲಿ ಪಾದರಕ್ಷೆ ಖರೀದಿಸಲೇಬೇಡಿ: ಅಮವಾಸ್ಯ, ಮಂಗಳವಾರ, ಶನಿವಾರ ಮತ್ತು ಗ್ರಹಣ ದಿನಗಳಲ್ಲಿ ಪಾದರಕ್ಷೆಗಳನ್ನು ಖರೀದಿಸುವುದನ್ನು ನಿಷೇಧಿಸಲಾಗಿದೆ. ಈ…

Read More