ಬೆಂಗಳೂರು, ಕಲಬುರಗಿ ಮಾರ್ಗದ ರೈಲುಗಳು ಸೇರಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ಸಮಯದಲ್ಲಿ ಬದಲಾವಣೆ
ಬೆಂಗಳೂರು, ಮಾರ್ಚ್ 06: ನೈಋತ್ಯ ರೈಲ್ವೆ ಇಲಾಖೆ (South Western Railway) ಕೆಲವು ವಂದೇ ಭಾರತ್ (Vande Bharat) ಎಕ್ಸ್ಪ್ರೆಸ್ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ. ಪ್ರಯಾಣಿಕರ ಅನುಕೂಲ ದೃಷ್ಟಿಯಿಂದ ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಕಾಚಿಗುಡ–ಯಶವಂತಪುರ–ಕಾಚಿಗುಡ ಹಾಗೂ ಎಸ್ಎಂವಿಟಿ ಬೆಂಗಳೂರು–ಕಲಬುರಗಿ–ಎಸ್ಎಂವಿಟಿ ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಮಯವನ್ನು ಪರಿಷ್ಕರಿಸಲಾಗಿದೆ. ಈ ಹೊಸ ವೇಳಾಪಟ್ಟಿ ಮಾರ್ಚ್ 15ರಿಂದ ಜಾರಿಗೆ ಬರಲಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಯಾವೆಲ್ಲಾ ರೈಲುಗಳ ಸಮಯ ಬದಲಾವಣೆ…