Headlines

ಚಲಿಸುತ್ತಿದ್ದ KSRTC ಬಸ್‌ನ ಆಕ್ಸೆಲ್ ಕಟ್​​: ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರೀ ದುರಂತ – Kannada News | Ksrtc bus axle snaps in chamarajanagar major tragedy averted

ಚಾಮರಾಜನಗರ, ಫೆಬ್ರವರಿ 10: ಜಿಲ್ಲೆಯ ತ್ರಯಂಬಕಪುರ ಗೇಟ್ ಬಳಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಆಕ್ಸೆಲ್ ಏಕಾಏಕಿ ಕಟ್ ಆಗಿದ್ದು, ಸಂಭವನೀಯ ದೊಡ್ಡ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಚಾಮರಾಜನಗರದಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್​ನ ಆಕ್ಸೆಲ್ ಮುರಿದ ಕಾರಣ ಬಸ್ ಮಾರ್ಗ ಮಧ್ಯದಲ್ಲೇ ನಿಂತಿದೆ. ಇದರಿಂದಾಗಿ ಶಾಲೆ-ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ತೀವ್ರ ತೊಂದರೆ ಅನುಭವಿಸಿದ್ದಾರೆ. ಬಸ್‌ಗಳ ಸ್ಥಿತಿಗತಿಯನ್ನು ಪರಿಶೀಲಿಸದೆ ಹೇಗೆ ಡಿಪೋದಿಂದ ಹೊರಗೆ ಕಳುಹಿಸಲಾಗುತ್ತದೆ ಎಂದು ಪ್ರಯಾಣಿಕರು ಪ್ರಶ್ನಿಸಿದ್ದು, ಒಂದು ಸಣ್ಣ ಎಡವಟ್ಟಾಗಿದ್ದರೂ ಕೂಡ…

Read More

ಜೂ ಎನ್​​ಟಿಆರ್-ನೀಲ್ ಸಿನಿಮಾಕ್ಕೆ ಜೊತೆಯಾದ ಹಾಲಿವುಡ್ ತಂಡ

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ (Prashant Neel) ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾ ‘ಡ್ರ್ಯಾಗನ್’, ‘ವಾರಣಾಸಿ’, ‘ಪೆದ್ದಿ’ ಇನ್ನಿತರೆ ಕೆಲ ಸಿನಿಮಾಗಳ ರೀತಿ ದೊಡ್ಡ ಸದ್ದು ಮಾಡುತ್ತಿಲ್ಲ ಆದರೆ ಸದ್ದಿಲ್ಲದೇ ಬೃಹತ್ ಆದ, ಭಾರಿ ಬಜೆಟ್​​ನ ಹಾಗೂ ಅಂತರಾಷ್ಟ್ರೀಯ ಗುಣಮಟ್ಟದ ಸಿನಿಮಾವನ್ನು ತಯಾರು ಮಾಡುತ್ತಿದೆ ಚಿತ್ರತಂಡ. ಪ್ರಶಾಂತ್ ನೀಲ್ ತಮ್ಮ ಈ ವರೆಗಿನ ಸಿನಿಮಾಗಳನ್ನು ಸೆಟ್​​ಗಳಲ್ಲಿಯೇ ನಿರ್ಮಿಸಿರುವುದು ಹೆಚ್ಚು. ಆದರೆ ಇದೇ ಮೊದಲ ಬಾರಿಗೆ ನೀಲ್ ಅವರು ಹೊರದೇಶಕ್ಕೆ ಸಹ ಹೋಗಿದ್ದು, ಅಲ್ಲಿ…

Read More

INSV Kaundinya: ಈ ಹಡಗಿಗೆ ಎಂಜಿನ್ನೇ ಇಲ್ಲ, ಚಲಿಸಲು ಸಾಕು ಬೀಸೋ ಗಾಳಿ! ಐಎನ್​ಎಸ್​ವಿ ಕೌಂಡಿನ್ಯ ವೈಶಿಷ್ಟ್ಯ – Kannada News | No Engine, No GPS: INSV Kaundinya Revives Ancient Indian Navigation

ನವದೆಹಲಿ, ಡಿಸೆಂಬರ್ 30: ಎಂಜಿನ್ ಇಲ್ಲ, ಜಿಪಿಎಸ್ ಇಲ್ಲ, ನಟ್ ಹಾಗೂ ಬೋಲ್ಟ್​ ಇಲ್ಲವೇ ಇಲ್ಲ, ಇದು ಚಲಿಸಲು ಬೀಸುವ ಗಾಳಿಯೇ ಸಾಕು. ಗುಜರಾತ್​ನಿಂದ ಒಮನ್​ಗೆ ಅಂತಾರಾಷ್ಟ್ರೀಯ ಪ್ರಯಾಣ ಹೊರಟ ಐಎನ್​ಎಸ್​ವಿ ಕೌಂಡಿನ್ಯ(INSV Kaundinya) ವೈಶಿಷ್ಟ್ಯದ ಬಗ್ಗೆ ಇಲ್ಲಿದೆ ಮಾಹಿತಿ. ಅಜಂತಾ ಗುಹೆಗಳಲ್ಲಿ ಕಂಡುಬರುವ ವರ್ಣಚಿತ್ರಗಳನ್ನು ಆಧರಿಸಿದ 2,000 ವರ್ಷಗಳಷ್ಟು ಹಳೆಯ ತಂತ್ರಗಳನ್ನು ಬಳಸಿ ನಿರ್ಮಿಸಲಾದ ಐಎನ್‌ಎಸ್‌ವಿ ಕೌಂಡಿನ್ಯ ಪೋರಬಂದರಿನಿಂದ ಒಮನ್‌ಗೆ ಹೊರಟಿದೆ. ತೆಂಗಿನ ಹಗ್ಗಗಳಿಂದ ಹೊಲಿಯಲಾದ ಮರದ ಹಲಗೆಗಳಿಂದ ಮಾಡಲ್ಪಟ್ಟ ಈ ಹಡಗಿನಲ್ಲಿ ಯಾವುದೇ ಮೊಳೆಗಳನ್ನು…

Read More

ಸಂಜನಾ ಬುರ್ಲಿ ಮದುವೆಯ ಫೋಟೋಗಳು ಎಷ್ಟು ಸುಂದರವಾಗಿವೆ ನೋಡಿ

ಸಂನಾ ಬುರ್ಲಿ ಅವರು ಸಮರ್ಥ್ ಚೆನ್ನಗಿರಿ ಜೊತೆ ವಿವಾಹ ಆಗಿದ್ದಾರೆ. ಅವರ ವಿವಾಹದ ಮುದ್ದಾದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆದಿವೆ.  ಸಂಜನಾ ಬುರ್ಲಿ ಅವರು ಹಲವು ವರ್ಷಗಳಿಂದ ಕಿರುತೆರೆಯಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ನಟಿಸಿದ್ದರು. ಆ ಬಳಿಕ ‘ಕಲರ್ಸ್ ಕನ್ನಡ’ಕ್ಕೆ ಬಂದರು.  ಸಂಜನಾ ಬುರ್ಲಿ ಅವರು ‘ಶ್ರೀ ಗಂಧದ ಗುಡಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ವಿವಾಹ ಕಾರಣದಿಂದ ಅವರು ಧಾರಾವಾಹಿಯನ್ನು ಅರ್ಧಕ್ಕೆ ತೊರೆದಿದ್ದರು.  ಈಗ ಸಂಜನಾ ಬುರ್ಲಿ ಅವರು ಸಮರ್ಥ ಚೆನ್ನಗಿರಿ ಅವರನ್ನು…

Read More

CUSMA ನಿಯಮಗಳಿಗೆ ಬದ್ಧ; ಚೀನಾದೊಂದಿಗೆ ವ್ಯಾಪಾರ ಒಪ್ಪಂದ ಇಲ್ಲ: ಕೆನಡಾ ಹೇಳಿಕೆ – Kannada News | Canada clarifies that it is binded by CUSMA rules, says no trade deal with China

ನವದೆಹಲಿ, ಜನವರಿ 26: ಚೀನಾದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಯಾವುದೇ ಯೋಚನೆ ಇಲ್ಲ ಎಂದು ಕೆನಡಾ ಹೇಳಿದೆ. ಚೀನಾದೊಂದಿಗೆ ಕೆನಡಾ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಲ್ಲಿ, ಆ ದೇಶದ ಮೇಲೆ ಶೇ. 100 ಟ್ಯಾರಿಫ್ ಹಾಕುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೆನಡಾದಿಂದ ಈ ಸ್ಪಷ್ಟನೆ ಬಂದಿದೆ. ಕೆನಡಾ ಪ್ರಧಾನಿ ಮಾರ್ಕ್ ಕಾರ್ನೀ (Mark Carney) ಅವರು ಈ ಸ್ಪಷ್ಟನೆ ನೀಡಿದ್ದಾರೆ. ‘ಮುಂಚಿತವಾಗಿ ಸೂಚನೆ ಇಲ್ಲದೆ, ಮುಕ್ತ ಮಾರುಕಟ್ಟೆಯಲ್ಲದ ದೇಶಗಳೊಂದಿಗೆ ವ್ಯಾಪಾರ…

Read More

ಯುಗಾದಿಯ ನಂತರ ಈ ರಾಶಿಯ ಯೋಗ, ಭಾಗ್ಯ, ಭೋಗ ನಾಶ!: ಆದರೆ ಗುರು ಬಲಕ್ಕಾಗಿ ಈ ಒಂದು ಕೆಲಸ ಮಾಡಬೇಕು

ಹೊಸ ವರ್ಷದ ಆರಂಭದಲ್ಲಿ ಅಂದರೆ ಸೂರ್ಯೋದಯದ ಕಾಲದಲ್ಲಿ ಗ್ರಹಗತಿಗಳು ಹೇಗಿರುತ್ತವೋ ಹಾಗೆ ವರ್ಷಪೂರ್ತಿ ಅದರ ಪ್ರಭಾವ ಇರುತ್ತದೆ. ಇಂದು ಮುಖ್ಯವಾಗಿ ಮೀನ ರಾಶಿಯಲ್ಲಿ ಸೂರ್ಯ, ಚಂದ್ರ, ಶುಕ್ರ ಮತ್ತು ಶನಿ ಸೇರಿರುವ ಅಸಾಧಾರಣ ಗ್ರಹಗತಿಗಳನ್ನು ಆಧರಿಸಿದೆ. ಗುರುವಾರವಾದ ಕಾರಣ ಗುರುವು ಲಗ್ನದಿಂದ ಚತುರ್ಥ ಸ್ಥಾನದಲ್ಲಿ ಇದ್ದಾನೆ. ​ಈ ವರ್ಷವು ನಿಮ್ಮ ಜೀವನದಲ್ಲಿ ಪ್ರಮುಖ ಬದಲಾವಣೆಗಳನ್ನು ಮತ್ತು ಹೊಸ ಆರಂಭಗಳನ್ನು ತರುವ ಸೂಚನೆ ನೀಡುತ್ತಿದೆ. ಲಗ್ನ ಮತ್ತು ರಾಶಿ ಎರಡೂ ಮೀನವಾಗಿರುವುದರಿಂದ ನಿಮ್ಮ ವ್ಯಕ್ತಿತ್ವದಲ್ಲಿ ದೈವಿಕ ಚಿಂತನೆ ಮತ್ತು…

Read More

ವಚನಾನಂದ ಶ್ರೀ ವಿರುದ್ಧ ಮತ್ತೊಂದು ಸ್ಫೋಟಕ ಆರೋಪ: ರಾಜಕೀಯ ನಾಯಕರ ಕರೆ ರೆಕಾರ್ಡ್​​ ಮಾಡ್ತಿದ್ರಾ ಶ್ವಾಸಗುರು? – Kannada News | Panchamasali Trust Member H.S. Nagaraj Warns Leaders About Vachanananda Srees Phone Recording Habit

ದಾವಣಗೆರೆ, ಏಪ್ರಿಲ್​​ 16: ಪಂಚಮಸಾಲಿ ಸಮಾಜ ಟ್ರಸ್ಟ್‌ನ ಸದಸ್ಯ ಎಚ್.ಎಸ್. ನಾಗರಾಜ್ ಅವರು ವಚನಾನಂದ ಶ್ರೀಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಚನಾನಂದ ಶ್ರೀಗಳು ರಾಜ್ಯದ ಹಿರಿಯ ಮತ್ತು ಪ್ರಮುಖ ರಾಜಕೀಯ ನಾಯಕರೊಂದಿಗೆ ನಡೆಸಿದ ದೂರವಾಣಿ ಸಂಭಾಷಣೆಗಳನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದ್ದಾರೆ. ಈ ರೆಕಾರ್ಡಿಂಗ್‌ಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸುವ ಅಭ್ಯಾಸ ಹೊಂದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಇಂತಹ ನಡೆ ರಾಜ್ಯದಲ್ಲಿ ಚುಕ್ಕಾಣಿ ಹಿಡಿದಿರುವ ನಾಯಕರಿಗೆ ತೀವ್ರ ಅಪಾಯಕಾರಿ ಎಂದು…

Read More

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ – Kannada News | 56400 Jobs Fill under New SC internal reservation Announced By CM Siddaramaiah

ಬೆಂಗಳೂರು, (ಏಪ್ರಿಲ್ 24): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ (SC) ಒಳ ಮೀಸಲಾತಿಯನ್ನು ಜಾರಿಗೊಳಿಸಲು ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಈ ನಿರ್ಧಾರದ ಅನ್ವಯ, ದಲಿತ ಎಡಗೈ, ಬಲಗೈ ಮತ್ತು ಇತರ ಸ್ಪೃಶ್ಯ ಸಮುದಾಯಗಳಿಗೆ ನಿರ್ದಿಷ್ಟ ಶೇಕಡಾ ಮೀಸಲಾತಿ ಹಂಚಿಕೆ ಮಾಡಲಾಗಿದೆ. ದಲಿತ ಎಡ, ಬಲಕ್ಕೆ ತಲಾ 5.25ರಷ್ಟು ಮೀಸಲಾತಿ ನೀಡಲಾಗಿದ್ದರೆ, ಇನ್ನುಳಿದಂತೆ ಇತರೆ ಸಮುದಾಯಕ್ಕೆ ಶೇ.4.5ರಷ್ಟು ಹಂಚಿಕೆ ಮಾಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ಈ ಸುದ್ದಿಯ ಜೊತೆಗೆ ಮತ್ತೊಂದು ಬಂಪರ್ ಕೊಡುಗೆಯನ್ನು ಸಿಎಂ ನೀಡಿದ್ದಾರೆ. ಬಜೆಟ್‌ನಲ್ಲಿ…

Read More

ಅಧಿಕಾರ ಹಂಚಿಕೆ ಬಿಕ್ಕಟ್ಟು: ಕಾಂಗ್ರೆಸ್​ನಲ್ಲಿ ರೂಪುಗೊಳ್ಳುತ್ತಿದೆಯಾ ಮತ್ತೊಂದು ಪವರ್ ಸೆಂಟರ್! – Kannada News | Power Sharing Rift in Karnataka Congress: Is Another Power Centre Emerging Within the Party in the name of Satish Jarkiholi

ಕಾಂಗ್ರೆಸ್​ನಲ್ಲಿ ರೂಪುಗೊಳ್ಳುತ್ತಿದೆಯಾ ಮತ್ತೊಂದು ಪವರ್ ಸೆಂಟರ್!Image Credit source: tv9 ಬೆಂಗಳೂರು, ಫೆಬ್ರವರಿ 23: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಸಿಎಂ ಸಿದ್ದರಾಮಯ್ಯ ಬಣ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಜೋರಾಗಿರುವ ಸಂದರ್ಭದಲ್ಲೇ ಮತ್ತೊಂದು ಪವರ್ ಸೆಂಟರ್‌ ರೂಪುಗೊಳ್ಳುತ್ತಿದೆಯಾ ಎಂಬ ಅನುಮಾನ ಬಲವಾಗಿದೆ. ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮತ್ತೊಂದು ಪವರ್ ಸೆಂಟರ್ ರೂಪದಲ್ಲಿ ಮುನ್ನುಗ್ಗುತ್ತಿರುವ ಲಕ್ಷಣ ಕಾಣಿಸಿದೆ. ಹೈಕಮಾಂಡ್ ಮಟ್ಟದಲ್ಲೂ ಬಲ ಪ್ರದರ್ಶನ ಮಾಡಲು ಸತೀಶ್ ಜಾರಕಿಹೊಳಿ…

Read More

World Bank Internship 2026: ವಿಶ್ವ ಬ್ಯಾಂಕ್‌ನಲ್ಲಿ ವೃತ್ತಿಜೀವನ ಪ್ರಾರಂಭಿಸುವ ಕನಸು ನಿಮಗಿದ್ಯಾ? ಇಲ್ಲಿದೆ ಸುವರ್ಣವಕಾಶ – Kannada News | World Bank Internship 2026: WBG Pioneers Programme Applications Open! Apply by Feb 17

ವಿಶ್ವ ಬ್ಯಾಂಕ್‌ನೊಂದಿಗೆ ಕೆಲಸ ಮಾಡುವ ಆಸೆ ಹೊಂದಿರುವ ವಿದ್ಯಾರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶ. ವಿಶ್ವ ಬ್ಯಾಂಕ್ ಗ್ರೂಪ್ (WBG) ತನ್ನ “World Bank Group (WBG) Pioneers Internship Programme 2026” ಅನ್ನು ಅಧಿಕೃತವಾಗಿ ಘೋಷಿಸಿದೆ. ಈ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಫೆಬ್ರವರಿ 17 ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಕಾರ್ಯಕ್ರಮದ ವಿಶೇಷತೆ ಎಂದರೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ಗಂಟೆಯ ಆಧಾರದ ಮೇಲೆ ಸ್ಟೈಫಂಡ್ ನೀಡಲಾಗುತ್ತದೆ. ಜೊತೆಗೆ, ಜಾಗತಿಕ ಮಟ್ಟದ ಅಭಿವೃದ್ಧಿ ಯೋಜನೆಗಳಲ್ಲಿ…

Read More