ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಗಲಿಬಿಲಿಗೊಂಡ ಅಧಿಕಾರಿಗಳು, ಆಗಿದ್ದೇನು? – Kannada News | Raichur: Chaos during landing of CM Siddaramaiah helicopter; what exactly happened

ರಾಯಚೂರು, ಫೆಬ್ರವರಿ 08: ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​​ ನಿಗದಿಯಾಗಿದ್ದ ಹೆಲಿಪ್ಯಾಡ್ ಬಿಟ್ಟು ಬೇರೆ ಹೆಲಿಪ್ಯಾಡ್​ನಲ್ಲಿ ಲ್ಯಾಂಡಿಂಗ್​​ ಆಗುವ ಮೂಲಕ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಕುಟುಂಬದ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಜಿಲ್ಲೆಯ ಲಿಂಗಸುಗೂರು ಪಟ್ಟಣದ ರಾಯಚೂರು ರಸ್ತೆಯಲ್ಲಿ ಸಿಬ್ಬಂದಿ ಪ್ರತ್ಯೇಕ ಹೆಲಿಪ್ಯಾಡ್ ಸಿದ್ಧಪಡಿಸಿದ್ದರು. ಆದರೆ ಕಲಬುರಗಿ ರಸ್ತೆ ಹೆಲಿಪ್ಯಾಡ್​ನಲ್ಲಿ ಸಿಎಂ ಹೆಲಿಕಾಪ್ಟರ್ ಲ್ಯಾಂಡ್ ಆಗಿದೆ. ಸದ್ಯ ಭದ್ರತಾ ವೈಫಲ್ಯದ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಘಟನೆಗೆ ತಾಂತ್ರಿಕ ಕಾರಣನಾ, ಬೇರೆ ಕಾರಣನಾ ಅಂತಾ ವಿಚಾರಣೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

T20 World Cup: ಟೀಂ ಇಂಡಿಯಾದ ಮುಂದಿನ ಪಂದ್ಯ ಯಾವಾಗ? ಎದುರಾಳಿ ಯಾರು? – Kannada News | India vs Namibia T20 World Cup 2026: Match Preview, Date, Time, Venue, Live Stream Details

2026 ರ ಟಿ20 ವಿಶ್ವಕಪ್ (T20 World Cup 2026)​ ಪಂದ್ಯಾವಳಿಯನ್ನು ಗೆಲುವಿನೊಂದಿಗೆ ಆರಂಭಿಸಿರುವ ಟೀಂ ಇಂಡಿಯಾ ಪ್ರಸ್ತುತ ವಿಶ್ರಾಂತಿ ಮೂಡ್​ನಲ್ಲಿದೆ. ತನ್ನ ಮೊದಲ ಪಂದ್ಯದಲ್ಲಿ ಅಮೆರಿಕವನ್ನು ಮಣಿಸಿರುವ ಭಾರತ ತಂಡಕ್ಕೆ ಮುಂದಿನ 4 ದಿನಗಳವರೆಗೆ ಯಾವುದೇ ಪಂದ್ಯಗಳಿಲ್ಲ. ಇದು ಕೂಡ ಭಾರತ ತಂಡಕ್ಕೆ ಉಪಯುಕ್ತವಾಗಿದೆ. ಏಕಂದರೆ ತಂಡದ ಕೆಲವು ಆಟಗಾರರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರು ಚೇತರಿಸಿಕೊಳ್ಳಲು ಸಮಯಾವಕಾಶ ಸಿಕ್ಕಂತ್ತಾಗಿದೆ. ಹಾಗೆಯೇ ಮೊದಲ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಕೆಲಸವನ್ನು ತಂಡ ಮಾಡಬೇಕಿದೆ. ಇನ್ನು ಸೂರ್ಯಕುಮಾರ್ ಪಡೆ ತನ್ನ ಎರಡನೇ ಪಂದ್ಯದಲ್ಲಿ ನಮೀಬಿಯಾ ತಂಡವನ್ನು ಎದುರಿಸುತ್ತಿದ್ದು, ಈ ತಂಡವನ್ನು ಅಷ್ಟು ಸುಲಭವಾಗಿ ಪರಿಗಣಿಸುವ ತಪ್ಪನ್ನು ಮಾಡುವಂತಿಲ್ಲ.

ಉಭಯ ತಂಡಗಳಿಗೆ ಈ ಪಂದ್ಯಾವಳಿಯಲ್ಲಿ ಇದು ಎರಡನೇ ಪಂದ್ಯವಾಗಿರಲಿದೆ. ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಅಮೆರಿಕವನ್ನು ಸೋಲಿಸಿದ್ದರೆ, ಇತ್ತ ನಮೀಬಿಯಾ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೋತಿರುವ ನೆದರ್ಲ್ಯಾಂಡ್ಸ್ ತಂಡವನ್ನು ಫೆಬ್ರವರಿ 10 ರಂದು ಎದುರಿಸಲಿದೆ.

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ಫೆಬ್ರವರಿ 12 ರಂದು ನಡೆಯಲಿದೆ.

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ.

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಟಿ20 ವಿಶ್ವಕಪ್‌ನ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ಲಭ್ಯವಿರುತ್ತವೆ. ನೀವು ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮೂಲಕ ಮೊಬೈಲ್/ಲ್ಯಾಪ್‌ಟಾಪ್ ಮತ್ತು ಟಿವಿಯಲ್ಲಿ ಲೈವ್ ಪಂದ್ಯಗಳನ್ನು ವೀಕ್ಷಿಸಬಹುದು.

T20 World Cup: 20 ತಂಡಗಳು, 55 ಪಂದ್ಯಗಳು, 1 ಟ್ರೋಫಿ; ಟಿ20 ವಿಶ್ವಕಪ್ ವೇಳಾಪಟ್ಟಿ ಹೀಗಿದೆ

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ನಮೀಬಿಯಾ ತಂಡ: ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಜೇನ್ ಗ್ರೀನ್, ಬರ್ನಾರ್ಡ್ ಸ್ಕೋಲ್ಟ್ಜ್, ರೂಬೆನ್ ಟ್ರಂಪೆಲ್ಮನ್, ಜೆಜೆ ಸ್ಮಿಟ್, ಜಾನ್ ಫ್ರಿಲಿಂಕ್, ಲೌರೆನ್ ಸ್ಟೀನ್‌ಕ್ಯಾಂಪ್, ಮಲನ್ ಕ್ರುಗರ್, ನಿಕೋಲ್ ಲಾಫ್ಟಿ-ಈಟನ್, ಜ್ಯಾಕ್ ಬ್ರಾಸ್ಸೆಲ್, ಬೆನ್ ಶಿಕೊಂಗೊ, ಜೆಸಿ ಬಾಲ್ಟ್, ಡೈಲನ್ ಲೀಚರ್, WP ಮೈಬರ್ಗ್, ಮ್ಯಾಕ್ಸ್ ಹೀಂಗೊ.

ಮೀಸಲು ಆಟಗಾರ: ಅಲೆಕ್ಸಾಂಡರ್ ವೋಲ್ಶೆಂಕ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೆಟ್ರೋ ಟಿಕೆಟ್ ದರ ಸಮರ: ಎಲ್ಲವೂ ನಿಮ್ಮ ಕೈಯಲ್ಲಿದೆ, ಡ್ರಾಮಾ ಮಾಡಬೇಡಿ; ಸಿಎಂ ವಿರುದ್ಧ ಸೂರ್ಯ ಕಿಡಿ – Kannada News | Namma Metro Fare Hike: Tejasvi Surya Questions CM Siddaramaiah Old Stance

ಸಂಸದ ತೇಜಸ್ವಿ ಸೂರ್ಯ, ಸಿಎಂ ಸಿದ್ದರಾಮಯ್ಯ Image Credit source: google

ಬೆಂಗಳೂರು, ಫೆಬ್ರವರಿ 08: ರಾಜ್ಯ ಸರ್ಕಾರ ಹಾಗೂ ಕೇಂದ್ರದ ನಡುವೆ ಮೆಟ್ರೋ (Metro) ಟಿಕೆಟ್ ದರ ಏರಿಕೆ ಜಟಾಪಟಿ ಮುಂದುವರೆದಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರ ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಿಎಂ ಸಿದ್ದರಾಮಯ್ಯ (Siddaramaiah) ಹಳೇ ಟ್ವೀಟ್​ ಟ್ಯಾಗ್​ ಮಾಡಿದ್ದು, ಹಾಗಾದರೆ ಕಳೆದ ಬಾರಿ ದರ ಕಡಿಮೆ ಮಾಡಲು ಏಕೆ ಸೂಚಿಸಿದ್ದೀರಿ. ಎಲ್ಲವೂ ನಿಮ್ಮ ಕೈಯಲ್ಲಿದೆ, ಡ್ರಾಮಾ ಮಾಡಬೇಡಿ ಎಂದು ಕಿಡಿಕಾರಿದ್ದಾರೆ.

ಈಗ ಆ ಅಧಿಕಾರ ಇಲ್ವಾ?

ಕಳೆದ ಬಾರಿ ಮೆಟ್ರೋ ಪ್ರಯಾಣ ಟಿಕೆಟ್​​ ದರ ಏರಿಕೆ ಮಾಡಿದಾಗ ಟಿಕೆಟ್ ದರ ಕಡಿಮೆ ಮಾಡಿ ಎಂದು ಬಿಎಂಆರ್​​ಸಿಎಲ್​​ಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು. ಈ ಕುರಿತು ಸಿಎಂ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. ಇದೀಗ ಅದೇ ಟ್ವೀಟ್ ಟ್ಯಾಗ್ ಮಾಡಿರುವ ತೇಜಸ್ವಿ ಸೂರ್ಯ, ಈಗ ಆ ಅಧಿಕಾರ ಇಲ್ವಾ ಅಂತಾ ಪ್ರಶ್ನೆ ಮಾಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಟ್ವೀಟ್​

ಮೆಟ್ರೋ ಪ್ರಯಾಣ ದರ ಹೆಚ್ಚಳದಿಂದ ಜನರಿಗೆ ಹೊರೆಯಾಗುತ್ತಿದೆ. ಈಗ ಬೆಲೆ ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ ಅಂತೀರಿ. ಹಾಗಾದರೆ ಕಳೆದ ಬಾರಿ ದರ ಕಡಿಮೆ ಮಾಡಲು ಏಕೆ ಸೂಚಿಸಿದ್ದೀರಿ. ಎಲ್ಲವೂ ನಿಮ್ಮ ಕೈಯಲ್ಲಿದೆ, ಡ್ರಾಮಾ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಬಿಗ್​​ ಶಾಕ್​​: ವಿವಾದದ ನಡುವೆಯೂ ನಿರ್ಧಾರದಂತೆ ನಾಳೆಯಿಂದ ದರ ಏರಿಕೆ ಫಿಕ್ಸ್​

ಮೆಟ್ರೋ ಪ್ರಯಾಣ ಟಿಕೆಟ್ ದರ ಏರಿಕೆ ವಿಚಾರವಾಗಿ ಬೆಂಗಳೂರಿನ ಆರ್.ವಿ.ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ಜೊತೆ ಸಂಸದ ತೇಜಸ್ವಿ ಸೂರ್ಯ ಇಂದು ಸಂವಾದ ಮಾಡಿದ್ದಾರೆ. ಈ ವೇಳೆ ಅನೇಕ ಪ್ರಯಾಣಿಕರು ಮೆಟ್ರೋ ಪ್ರಯಾಣ ಟಿಕೆಟ್ ದರ ಏರಿಕೆ ಬಗ್ಗೆ ತಮ್ಮ ತಮ್ಮ ಅನಿಸಿಕೆ ಹೇಳಿದ್ದಾರೆ.

ಅವರಿಗೋಸ್ಕರ ದರ ಕಡಿಮೆ ಮಾಡಿ

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ತೇಜಸ್ವಿ ಸೂರ್ಯ, ರಾಜ್ಯ ಸರ್ಕಾರ ಪದೇ ಪದೇ ದರ ಏರಿಕೆ ಮಾಡಿರುವುದಕ್ಕೆ ಪ್ರಯಾಣಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಮೆಟ್ರೋದಲ್ಲಿ  ಓಡಾಡುವವರು ಶ್ರೀಮಂತರಲ್ಲ. ಗಾರ್ಮೆಂಟ್ ಕೆಲಸ ಮಾಡುವವರು, ವಿದ್ಯಾರ್ಥಿಗಳು. ಪ್ರತಿನಿತ್ಯ 10 ರಿಂದ 12 ಲಕ್ಷ ಜನ ಓಡಾಡುತ್ತಾರೆ. ಅವರಿಗೋಸ್ಕರ ದರ ಕಡಿಮೆ ಮಾಡಿ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ರಾಜ್ಯಾದ್ಯಂತ 100 ಕಡೆ ಕಾಂಗ್ರೆಸ್ ಭವನ: ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ ನೀಡಲು ಪತ್ರ – Kannada News | Government Decided To Give High Value Site At Low Price To Construct Congress Bhavana In Karnataka

ಬೆಂಗಳೂರು, (ಫೆಬ್ರವರಿ 08): ಕರ್ನಾಟಕದಾದ್ಯಂತ 100 ಕಡೆಗಳಲ್ಲಿ ಕಾಂಗ್ರೆಸ್ ಭವನ (Congress Bhavana) ನಿರ್ಮಾಣಕ್ಕೆ ಪಕ್ಷ ಮುಂದಾಗಿದೆ. ತಾಲೂಕು ಕೇಂದ್ರಗಳಲ್ಲೂ ಕಾಂಗ್ರೆಸ್ ಭವನ ಮಾಡಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಕೋಟಿ ಕೋಟಿ ಬೆಲೆ ಬಾಳುವ ಸಿಎ ಸೈಟ್​​ಗಳನ್ನು ಕಾಂಗ್ರೆಸ್ ಟ್ರಸ್ಟ್​​ಗೆ ಮಂಜೂರು ಮಾಡುವಂತೆ ರಾಜ್ಯ ಸರ್ಕಾರ ಪತ್ರ ಬರೆದಿದೆ. ಹೌದು. ಪ್ರತಿ ತಾಲೂಕಿನಲ್ಲಿ ಕಾಂಗ್ರೆಸ್ ಭವನಕ್ಕೆ ಮುಂದಾಗಿರೋ ಕೆಪಿಸಿಸಿಗೆ ಈ ಜಾಗವನ್ನ ಪೌರಾಡಳಿತ ಇಲಾಖೆ ಕೊಟ್ಟಿದೆ. ಇನ್ನೂ 13 ಜಿಲ್ಲೆಗಳಲ್ಲಿ ಪುರಸಭೆ, ನಗರ ಸಭೆಗಳ ಜಾಗವನ್ನ ಕಾಂಗ್ರೆಸ್ ಭವನ ಕಟ್ಟಲು ಕೊಟ್ಟಿರೋ ಪೌರಾಡಳಿತ ಇಲಾಖೆ ಕೊಟ್ಟಿದೆ. ಕಾನೂನು ಇಲಾಖೆ ವಿರೋಧದ ನಡುವೆಯೂ ಕಾಂಗ್ರೆಸ್ ಭವನಕ್ಕೆ ಜಾಗ ಕೊಟ್ಟಿರೋ ಬಗ್ಗೆಯೂ ಆರೋಪ ಇದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.

Source link

ಭಾರತೀಯ ಸಿನಿಮಾಗಳ ಕಲೆಕ್ಷನ್ ಹೆಚ್ಚಳಕ್ಕೆ ಆಮಿರ್ ಖಾನ್ ಐಡಿಯಾ, ವರ್ಕೌಟ್ ಆಗುತ್ತ? – Kannada News | Aamir Khan says India has very less number of theaters

ಭಾರತೀಯ ಚಿತ್ರರಂಗದಲ್ಲಿ (Indian Cinema) ಸಿನಿಮಾವನ್ನೇ ಉಸಿರಾಡುವ ಕೆಲವೇ ಕೆಲವು ಸಿನಿಮಾ ಕರ್ಮಿಗಳಲ್ಲಿ ಆಮೀರ್ ಖಾನ್ ಸಹ ಒಬ್ಬರು. ಒಳ್ಳೆಯ ಸಿನಿಮಾಗಳನ್ನು ಮಾಡುವುದರ ಜೊತೆಗೆ ಸಿನಿಮಾಗಳನ್ನು ಜನರಿಗೆ ತಲುಪಿಸುವ ಕುರಿತಾಗಿ, ಸಿನಿಮಾ ಮಂದಿ ಹೆಚ್ಚು ಲಾಭ ಮಾಡುವುದರ ಕುರಿತಾಗಿ ಒಂದಿಲ್ಲೊಂದು ಯೋಜನೆ ಹಾಕುತ್ತಲೇ ಇರುತ್ತಾರೆ. ಇತ್ತೀಚೆಗಷ್ಟೆ ಅವರು ತಾವೇ ನಟಿಸಿ, ನಿರ್ಮಾಣ ಮಾಡಿದ್ದ ‘ಸಿತಾರೆ ಜಮೀನ್ ಪರ್’ ಸಿನಿಮಾವನ್ನು ಒಟಿಟಿಯ ಬದಲಿಗೆ ಯೂಟ್ಯೂಬ್​​ನಲ್ಲಿ ಬಿಡುಗಡೆ ಮಾಡಿ ಹೊಸ ಪ್ರಯೋಗ ಮಾಡಿದರು. ಒಟಿಟಿಗಳ ಬಗ್ಗೆ ಮೊದಲಿನಿಂದಲೂ ವಿರೋಧ ಅಭಿಪ್ರಾಯವನ್ನೇ ಹೊಂದಿರುವ ಆಮಿರ್ ಖಾನ್, ಇದೀಗ ಭಾರತೀಯ ಸಿನಿಮಾಗಳು ಹೆಚ್ಚು ಲಾಭ ಗಳಿಸದಿರಲು ಕಾರಣ ಏನು ಎಂಬ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಕೆಲವರು ಈ ಅಭಿಪ್ರಾಯವನ್ನು ಪೂರ್ಣವಾಗಿ ಒಪ್ಪಿಲ್ಲ.

ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಆಮೀರ್, ‘ಭಾರತದಲ್ಲಿ ಸುಮಾರು 9,000 ರಿಂದ 10,000 ಚಿತ್ರಮಂದಿರಗಳು ಮಾತ್ರವೇ ಇವೆ. ಭಾರತದಂಥಹಾ ಭಾರಿ ಜನಸಂಖ್ಯೆಯ ದೇಶಕ್ಕೆ ಇದು ಬಹಳ ಕಡಿಮೆ. ಚೀನಾದಲ್ಲಿ ಸುಮಾರು ಒಂದು ಲಕ್ಷದಷ್ಟು ಚಿತ್ರಮಂದಿರಗಳು ಇವೆ. ಅಮೆರಿಕದಲ್ಲೂ ಸಹ ಚಿತ್ರಮಂದಿರಗಳ ಸಂಖ್ಯೆ ಬಹಳ ಹೆಚ್ಚಿದೆ. ನಮ್ಮ ದೇಶದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಚಿತ್ರಮಂದಿರಗಳಿಲ್ಲ. ಚೀನಾದಲ್ಲಿ ಒಂದು ಸಿನಿಮಾ ಬಿಡುಗಡೆಯಾದಾಗ ಅಲ್ಲಿನ ಮೂಲಸೌಕರ್ಯದ ಕಾರಣದಿಂದಾಗಿ ಸಾವಿರಾರು ಕೋಟಿ ರೂಪಾಯಿಗಳ ವ್ಯವಹಾರ ನಡೆಯುತ್ತದೆ’ ಎಂದು ಆಮೀರ್ ಖಾನ್ ಹೇಳಿದ್ದಾರೆ.

‘ಧುರಂಧರ್’ ಸಿನಿಮಾದ ಉದಾಹರಣೆ ನೀಡಿರುವ ಆಮಿರ್ ಖಾನ್, ‘ಧುರಂಧರ್’ ಸಿನಿಮಾ 5,000 ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿ 1,000 ಕೋಟಿಗೂ ಹೆಚ್ಚು ಹಣ ಗಳಿಸಿದೆ. ಒಂದು ವೇಳೆ ನಮ್ಮಲ್ಲಿ 15,000 ಸ್ಕ್ರೀನ್‌ಗಳು ಲಭ್ಯವಿದ್ದಿದ್ದರೆ, ಈ ಸಿನಿಮಾದ ಗಳಿಕೆ ಇನ್ನೂ ಎಷ್ಟು ಪಟ್ಟು ಹೆಚ್ಚಾಗುತ್ತಿತ್ತು ಎಂದು ಊಹಿಸಿ. ಹಳ್ಳಿ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಇಂದಿಗೂ ಒಂದೂ ಚಿತ್ರಮಂದಿರ ಇಲ್ಲದ ಪ್ರದೇಶಗಳಿವೆ’ ಎಂದಿದ್ದಾರೆ ಆಮಿರ್ ಖಾನ್.

ಇದನ್ನೂ ಓದಿ:‘ನಾವು ಮದುವೆ ಆಗಿದ್ದೇವೆ, ಆದರೆ..’; ದೊಡ್ಡ ಹೇಳಿಕೆ ನೀಡಿದ ಆಮಿರ್ ಖಾನ್

ಮುಂದುವರೆದು ಮಾತನಾಡಿರುವ ಆಮಿರ್ ಖಾನ್, ‘ಕೇವಲ 2 ಪರ್ಸೆಂಟ್ ರಷ್ಟು ಭಾರತೀಯರು ಮಾತ್ರ ದೊಡ್ಡ ಹಿಟ್ ಸಿನಿಮಾಗಳನ್ನು ಚಿತ್ರಮಂದಿರದಲ್ಲಿ ನೋಡುತ್ತಾರೆ ಎಂಬ ಅಂಶವನ್ನು ಅವರು ಒತ್ತಿ ಹೇಳಿದ ಅವರು, ಚಿತ್ರಮಂದಿರಗಳ ಸಂಖ್ಯೆ ಹೆಚ್ಚಾದರೆ ಮಾತ್ರ ಸಿನಿಮಾ ಉದ್ಯಮವು ತಳಮಟ್ಟದಲ್ಲಿ ಬೆಳೆಯಲು ಸಾಧ್ಯ ಮತ್ತು ಹೆಚ್ಚು ಜನರಿಗೆ ತಲುಪಲು ಸಾಧ್ಯ ಎಂದು ಅವರು ಸಲಹೆ ನೀಡಿದ್ದಾರೆ. ಚಿತ್ರಮಂದಿರಗಳ ನಿರ್ಮಾಣವನ್ನು ಮೂಲಸೌಕರ್ಯದಂತೆ ಪರಿಗಣಿಸಬೇಕು ಎಂದು ಆಮಿರ್ ಖಾನ್ ಹೇಳಿದ್ದಾರೆ.

ಆಮಿರ್ ಖಾನ್ ಅಭಿಪ್ರಾಯಕ್ಕೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಕೆಲವರು ಆಮಿರ್ ಖಾನ್ ಯೋಜನೆ ಅದ್ಭುತ ಎಂದರೆ ಇನ್ನು ಕೆಲವರು ಇದು ಅಸಾಧ್ಯ ಎಂದಿದ್ದಾರೆ. 15 ಸಾವಿರ ಚಿತ್ರಮಂದಿರಗಳಿಗೆ ಸಾಕಾಗುವಷ್ಟು ಒಳ್ಳೆಯ ಸಿನಿಮಾಗಳು ಭಾರತದಲ್ಲಿ ನಿರ್ಮಾಣ ಆಗುತ್ತಿಲ್ಲ ಎಂದು ಕೆಲವರು ಹೇಳಿದರು. 15000 ಚಿತ್ರಮಂದಿರ ನಿರ್ಮಾಣ ಮಾಡಲು ಭಾರಿ ಮೊತ್ತದ ಹಣ, ಸ್ಥಳ ಬೇಕಾಗುತ್ತದೆ. ಅಷ್ಟು ಹೂಡಿಕೆ ಮಾಡಿ ಲಾಭಕ್ಕಾಗಿ ವರ್ಷಾನುಗಟ್ಟಲೆ ಕಾಯಬೇಕಾಗುತ್ತದೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

BOB Recruitment 2026: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ; ತಿಂಗಳಿಗೆ ಲಕ್ಷಗಳಲ್ಲಿ ಸಂಬಳ – Kannada News | Bank of Baroda Recruitment 2026: 419 Manager Posts, Apply Online by Feb 26!

ಬ್ಯಾಂಕ್ ಆಫ್ ಬರೋಡಾ (Bank of Baroda) ತನ್ನ ವಿವಿಧ ಶಾಖೆಗಳು ಮತ್ತು ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ನಿಯಮಿತ ಹಾಗೂ ಒಪ್ಪಂದದ ಆಧಾರದ ಮೇಲೆ ಹಿರಿಯ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಮತ್ತು ಸಹಾಯಕ ಉಪಾಧ್ಯಕ್ಷ ಸೇರಿದಂತೆ ಒಟ್ಟು 419 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ನಿರ್ಮಿಸಲು ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಪದವಿ ಅಥವಾ MBA, PGDM, CA, CFA, CMA ಮುಂತಾದ ವೃತ್ತಿಪರ ಅರ್ಹತೆಗಳನ್ನು ಹೊಂದಿರಬೇಕು. ಜೊತೆಗೆ, ಅಧಿಸೂಚನೆಯಲ್ಲಿ ಸೂಚಿಸಿದಂತೆ ಸಂಬಂಧಿತ ಕ್ಷೇತ್ರದಲ್ಲಿ ಅನುಭವವೂ ಅಗತ್ಯವಾಗಿದೆ. ಹುದ್ದೆಗಳ ಪ್ರಕಾರ ವಯೋಮಿತಿ 22 ರಿಂದ 40 ವರ್ಷಗಳ ನಡುವೆ ನಿಗದಿಪಡಿಸಲಾಗಿದೆ. ಸರಕಾರದ ನಿಯಮಗಳಂತೆ ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಪಿಎಚ್‌ಡಿ ಪಡೆದವರಿಗೆ ಹತ್ತು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಇದನ್ನೂ ಓದಿ: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ತಿಂಗಳಿಗೆ 65,000ರೂ. ಸ್ಟೈಫಂಡ್

ಆಸಕ್ತರು ಫೆಬ್ರವರಿ 6 ರಿಂದ ಫೆಬ್ರವರಿ 26ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು . ಅರ್ಜಿ ಶುಲ್ಕವಾಗಿ ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳು ರೂ. 850 ಪಾವತಿಸಬೇಕಾಗಿದ್ದು, ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ, ಇಎಸ್‌ಎಂ, ಡಿಇಎಸ್‌ಎಂ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ. 175 ಮಾತ್ರ ನಿಗದಿಯಾಗಿದೆ. ಈ ನೇಮಕಾತಿಯಲ್ಲಿ ಯಾವುದೇ ಲಿಖಿತ ಪರೀಕ್ಷೆ ಇರದೆ, ಅಭ್ಯರ್ಥಿಗಳ ಆಯ್ಕೆ ಸಂದರ್ಶನದ ಆಧಾರದ ಮೇಲೆ ನಡೆಯಲಿದೆ.

ಒಟ್ಟಿನಲ್ಲಿ, ಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉತ್ತಮ ಹುದ್ದೆ ಮತ್ತು ಸ್ಥಿರ ವೃತ್ತಿಜೀವನದ ಕನಸು ಕಾಣುವ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾ ಈ ನೇಮಕಾತಿ ಒಂದು ಸುವರ್ಣಾವಕಾಶವಾಗಿದೆ. ಅರ್ಹರು ಅಂತಿಮ ದಿನಾಂಕಕ್ಕಿಂತ ಮುಂಚಿತವಾಗಿ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವುದು ಉತ್ತಮ.

ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸಲು ಈ ಲಿಂಕ್​ ಮೇಲೆ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:36 pm, Sun, 8 February 26

Source link

ENG vs NEP: ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್ ಕಿತ್ತ ಮಲ್ಲ – Kannada News | T20 World Cup 2026: Debutant Sher Malla Stuns England, Dismisses Phil Salt First Ball!

ಮುಂಬೈನ ವಾಂಖೆಡೆ ಮೈದಾನದಲ್ಲಿ 2026 ರ ಟಿ20 ವಿಶ್ವಕಪ್​ನ ಎರಡನೇ ದಿನದಂದು ಐದನೇ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನೇಪಾಳ ಮುಖಾಮುಖಿಯಾಗಿದ್ದವು. ಇದೇ ಮೊದಲ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿತು. ಅದರಂತೆ ಇಂಗ್ಲೆಂಡ್ ಪರ ಅನುಭವಿಗಳಾದ ಪಿಲ್ ಸಾಲ್ಟ್ ಹಾಗೂ ಜೋಸ್ ಬಟ್ಲರ್ ಇನ್ನಿಂಗ್ಸ್ ಆರಂಭಿಸಿದರು.

ಇಬ್ಬರು ಹೊಡಿಬಡಿ ದಾಂಡಿಗರಾಗಿರುವುದರಿಂದ ಇಂಗ್ಲೆಂಡ್ ಸ್ಫೋಟಕ ಆರಂಭದ ನಿರೀಕ್ಷೆಯಲ್ಲಿತ್ತು. ಆದರೆ ಇನ್ನಿಂಗ್ಸ್​ನ ಎರಡನೇ ಓವರ್​ನಲ್ಲೇ ಇಂಗ್ಲೆಂಡ್​ಗೆ ಆಘಾತ ಎದುರಾಯಿತು. ನೇಪಾಳ ಪರ ಚೊಚ್ಚಲ ಅಂತರರಾಷ್ಟ್ರೀಯ ಪಂದ್ಯವನ್ನಾಡುತ್ತಿದ್ದ ಶೇರ್ ಮಲ್ಲ ಮೊದಲ ಎಸೆತದಲ್ಲೇ ಪಿಲ್ ಸಾಲ್ಟ್ ಅವರ ವಿಕೆಟ್ ಎಗರಿಸಿದರು. ಮಲ್ಲನ ಮೊದಲ ಎಸೆತವನ್ನು ಸಿಕ್ಸರ್​ಗಟ್ಟುವ ಯತ್ನದಲ್ಲಿ ಸಾಲ್ಟ್ ಕ್ಯಾಚಿತ್ತು ನಿರ್ಗಮಿಸಿದರು. ಇತ್ತ ಚೊಚ್ಚಲ ಅಂತರರಾಷ್ಟ್ರೀಯ ಹಾಗೂ ಟಿ20 ವಿಶ್ವಕಪ್ ಪಂದ್ಯವನ್ನಾಡುತ್ತಿದ್ದ ಮಲ್ಲ, ತಾನು ಎಸೆದ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ಖುಷಿಯಲ್ಲಿ ಕುಣಿದು ಕುಪ್ಪಳಿಸಿದರು. ನೇಪಾಳ ತಂಡದ ಆಟಗಾರರು ಹಾಗೂ ಅಭಿಮಾನಿಗಳು ಕೂಡ ಸಂತಸ ಅಲೆಯಲ್ಲಿ ಮಿಂದೆದ್ದರು.

Source link

ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ತಾಳಿ ಕಟ್ಟುವ ಶುಭ ವೇಳೆ ನಡೆದಿದ್ದೇನು? – Kannada News | Tumakuru: First Wife Halts Husbands Secret Second Marriage Ceremony

ತುಮಕೂರು, ಫೆಬ್ರವರಿ 08: ನಗರದ ಯಡಿಯೂರಿನ ಎಸ್.ಎಲ್.ಎನ್ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ವಿವಾಹವೊಂದನ್ನು ಮೊದಲ ಪತ್ನಿ ತಡೆದು ನಿಲ್ಲಿಸಿರುವಂತಹ ಘಟನೆ ನಡೆದಿದೆ. ಆ ಮೂಲಕ  ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲನೇ ಪತ್ನಿ ಶಾಕ್ ನೀಡಿದ್ದಾರೆ. ಹರಿಪ್ರಸಾದ್ ಎಂಬುವರು ವಿಚ್ಛೇದನ ನೀಡದೇ ಎರಡನೇ ಮದುವೆಗೆ ಮುಂದಾಗಿದ್ದರು. ಅವರ ಮೊದಲ ಪತ್ನಿ ಲೇಪಾಕ್ಷಿ ಪೊಲೀಸರೊಂದಿಗೆ ಮದುವೆ ಮಂಟಪಕ್ಕೆ ಆಗಮಿಸಿ ಹೈಡ್ರಾಮಾ ಸೃಷ್ಟಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ನರೇಂದ್ರ ಮೋದಿ ಮಲೇಷ್ಯಾ ಭೇಟಿ; ಯುಪಿಐನಿಂದ ಹಿಡಿದು ಸೆಮಿಕಂಡಕ್ಟರ್​ವರೆಗೆ ಹಲವು ಜಂಟಿ ಉಪಕ್ರಮಗಳ ಅನಾವರಣ – Kannada News | Narendra Modi Malaysia visit leads 16 initiatives to be announced jointly by 2 countries

ಕೌಲಾಲಂಪುರ್, ಫೆಬ್ರುವರಿ 8: ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮಲೇಷ್ಯಾ ಭೇಟಿ ಫಲಪ್ರದವಾಗಿದೆ. ಇಂದು ಭಾನುವಾರ ವಿವಿಧ ಕ್ಷೇತ್ರಗಳಲ್ಲಿ ಎರಡೂ ದೇಶಗಳ ನಡುವೆ ಸಹಕಾರ ಇರುವ ಹಲವು ಉಪಕ್ರಮಗಳನ್ನು ಘೋಷಿಸಲಾಗಿದೆ. ಈ ವರ್ಷದ ಮೊದಲ ವಿದೇಶ ಭೇಟಿಯಾಗಿ ಮಲೇಷ್ಯಾಗೆ ಹೋಗಿದ್ದ ಮೋದಿ ಅವರು ಅಲ್ಲಿಯ ಪ್ರಧಾನಿ ದಾತು ಸೆರಿ ಅನ್ವರ್ ಇಬ್ರಾಹಿಂ (Dato Seri Anwar Ibrahim) ಅವರೊಂದಿಗೆ ಮಾತುಕತೆಗಳನ್ನು ನಡೆಸಿದರು.

ಭಾರತ ಮತ್ತು ಮಲೇಷ್ಯಾದಿಂದ ಘೋಷಣೆಯಾದ ಕೆಲ ಜಂಟಿ ಉಪಕ್ರಮಗಳು

  • ಮಲೇಷ್ಯಾದಲ್ಲಿ ಭಾರತೀಯ ರಾಯಭಾರ ಕಚೇರಿ ತೆರೆಯಲಾಗುವುದು
  • ಮಲೃಷ್ಯಾದ ಪೇಮೆಂಟ್ ಸಿಸ್ಟಂ ಮತ್ತು ಭಾರತದ ಯುಪಿಐ ಪೇಮೆಂಟ್ ಸಿಸ್ಟಂಗಳ ಹೊಂದಿಕೆ ಮಾಡಲಾಗುವುದು. ಇದರೊಂದಿಗೆ ಭಾರತೀಯರು ಮಲೇಷ್ಯಾಗೆ ಹೋದರೆ ಯುಪಿಐ ಮೂಲಕ ಪೇಮೆಂಟ್ ಮಾಡಲು ಸಾಧ್ಯವಾಗುತ್ತದೆ. ಸಿಂಗಾಪುರ ಇತ್ಯಾದಿ ಕೆಲ ದೇಶಗಳಲ್ಲಿ ಈ ರೀತಿ ಹೊಂದಾಣಿಕೆ ವ್ಯವಸ್ಥೆ ಮಾಡಲಾಗಿದೆ.
  • ವಿಪತ್ತು ನಿರ್ವಹಣೆಗೆ ಎರಡೂ ದೇಶಗಳ ಮಧ್ಯೆ ಎಂಒಯು ಒಪ್ಪಂದ.
  • ಭ್ರಷ್ಟಾಚಾರ ನಿಗ್ರಹಕ್ಕಾಗಿ ಎರಡೂ ದೇಶಗಳ ಮಧ್ಯೆ ಸಹಕಾರಕ್ಕೆ ಒಪ್ಪಂದ
  • ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಸಹಕಾರಕ್ಕೆ ಒಪ್ಪಂದ. ಸೆಮಿಕಂಡಕ್ಟರ್ ಸಪ್ಲೈ ಚೈನ್ ಬಲಪಡಿಸಲು ಇದರಿಂದ ಅನುಕೂಲ.
  • ವಿಶ್ವಸಂಸ್ಥೆ ಶಾಂತಿಪಾಲನೆ ಸಹಕಾರ ವಿಚಾರದಲ್ಲಿ ಭಾರತ ಮತ್ತು ಮಲೇಷ್ಯಾ ಸರ್ಕಾರಗಳ ನಡುವೆ ಪತ್ರ ವಿನಿಮಯ.
  • ಮಲೇಷ್ಯಾದಲ್ಲಿ ಇರುವ ಭಾರತೀಯ ಪ್ರಜೆಗಳಿಗೆ ಇನ್ಷೂರೆನ್ಸ್ ಸೌಲಭ್ಯ ಒದಗಿಸಲು ಇಎಸ್​ಐಸಿ ಮತ್ತು ಪೆರ್ಕೆಸೋ ನಡುವೆ ಸಹಕಾರ ಒಪ್ಪಂದ
  • ಭಾರತ ಮತ್ತು ಮಲೇಷ್ಯಾಗಳ ರಾಷ್ಟ್ರೀಯ ಭದ್ರತಾ ಮಂಡಳಿಗಳ ಮಧ್ಯೆ ಸಹಕಾರ
  • ಆರೋಗ್ಯ ಮತ್ತು ಔಷಧ ಕ್ಷೇತ್ರಗಳಲ್ಲಿ ಸಹಕಾರ
  • ಮಲಯ ಯೂನಿವರ್ಸಿಟಿಯಲ್ಲಿ ತಿರುವಳ್ಳುವರ್ ಸೆಂಟರ್ ಸ್ಥಾಪನೆಗೆ ಕ್ರಮ
  • ಮಲೇಷ್ಯಾದ ಸೈಬರ್​ಜಯಾ ಯೂನಿವರ್ಸಿಟಿ ಮತ್ತು ಆಯುರ್ವೇದ ತರಬೇತಿ, ಸಂಶೋಧನಾ ಸಂಸ್ಥೆಯಾದ ಐಟಿಆರ್​ಎ ನಡುವೆ ಎಂಒಯು ಒಪ್ಪಂದ.

ಇದನ್ನೂ ಓದಿ: ನೀವೇ ಭಾರತ- ಮಲೇಷ್ಯಾ ನಡುವಿನ ಜೀವಂತ ಸೇತುವೆ; ಭಾರತೀಯ ವಲಸಿಗರ ಜೊತೆ ಪ್ರಧಾನಿ ಮೋದಿ ಸಂವಾದ

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

vijayapura plane crashed : ವಿಜಯಪುರದಲ್ಲಿ ವಿಮಾನ ಪತನ – Kannada News | Two Injured private plane crashes in mangalore at vijayapura

ವಿಜಯಪುರ, ಫೆಬ್ರವರಿ 08):: ಬಬಲೇಶ್ವರ ತಾಲೂಕಿನ ಮಂಗಳೂರು (Mangaluru) ಗ್ರಾಮದಲ್ಲಿ ಜೆಟ್ ವಿಮಾನವೊಂದು (Private Jet Plane) ಪತನವಾಗಿದೆ. ಇಂದು (ಫೆಬ್ರವರಿ 08) ಮಧ್ಯಾಹ್ನ ವೇಳೆ ರೆಡ್ ಬರ್ಡ್ ಖಾಸಗಿ ಜೆಟ್ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಿಸಲಾಗಿದೆ. ಕಲಬುರಗಿಯಿಂದ ಬೆಳಗಾವಿಗೆ (Belagavi) ತೆರಳುತ್ತಿದ್ದ ವೇಳೆ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ರೆಡ್ ಬರ್ಡ್‌ ಕಂಪನಿಯ ಖಾಸಗಿ ಕಂಪನಿಯ ವಿಮಾನ ಪತನಗೊಂಡು ರೈತರ ಜಮೀನಿನ ಮೇಲೆ ಬಿದ್ದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಜೆಟ್‌ನಲ್ಲಿದ್ದ ಇಬ್ಬರು ತೀವ್ರ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.

ಸ್ಥಳಕ್ಕೆ ಬಬಲೇಶ್ವರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಘಟನೆಗೆ ಏನು ಕಾರಣ ಎನ್ನುವುದು ತಿಳಿದುಬರಬೇಕಿದೆ.

Published On – 3:56 pm, Sun, 8 February 26

Source link

Exit mobile version