Headlines

TV9 Kannada Live: ರಾಜ್ಯ, ದೇಶ ಸೇರಿ ಇಂದಿನ ಪ್ರಮುಖ ಸುದ್ದಿಗಳ ಮುಖ್ಯಾಂಶಗಳು

ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಎನ್​​ಡಿಎ ನಾಯಕರ ಜೊತೆ ಸಾಲು ಸಾಲು ಸಭೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್​​ ತನ್ನದೇ ಆದ ರಾಜಕೀಯ ಲೆಕ್ಕಾಚಾರಗಳನ್ನು ಹಾಕುತ್ತಿದ್ದು, ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಪ್ರಧಾನ ಕಾರ್ಯದರ್ಶಿಗಳ ಜೊತೆಗಿನ ಸಭೆ ಕುತೂಹಲ ಮೂಡಿಸಿದೆ. ಇತ್ತ ಕರ್ನಾಟಕದಲ್ಲಿ ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿದಿದ್ದು, ಸಚಿವಾಕಾಂಕ್ಷಿಗಳಿಂದ ಲಾಬಿ ಜೋರಾಗಿದೆ. ಯುವ ಮುಖಗಳಿಗೆ ಹೈಕಮಾಂಡ್​​…

Read More

ಹಾವೇರಿ ಬಳಿಕ ತುಮಕೂರಿನಲ್ಲೂ SLV ಮಹಿಳಾ ಮಾರ್ಟ್ ಭಾರೀ ವಂಚನೆ: ಮಹಿಳೆಯರಿಗೆ ಲಕ್ಷ ಲಕ್ಷ ವಂಚನೆ – Kannada News

ತುಮಕೂರು ಎಸ್‌ಎಲ್‌ವಿ ಮಹಿಳಾ ಮಾರ್ಟ್​ಗೆ ಬೀಗ ಜಡಿದಿರುವುದುImage Credit source: tv9 ತುಮಕೂರು, ಜೂನ್ 11: ಹಾವೇರಿಯಲ್ಲಿ ಸ್ವಯಂ ಉದ್ಯೋಗದ ಹೆಸರಿನಲ್ಲಿ ಮಹಿಳೆಯರಿಗೆ ಕೋಟ್ಯಂತರ ರೂಪಾಯಿ ವಂಚಿಸಿ ಸದ್ದು ಮಾಡಿದ್ದ ‘ಎಸ್‌ಎಲ್‌ವಿ ಮಹಿಳಾ ಮಾರ್ಟ್’ (SLV Mahila Mart) ಕಂಪನಿಯ ವಂಚನಾ ಜಾಲ ರಾಜ್ಯದಾದ್ಯಂತ ವಿಸ್ತರಿಸಿದೆ ಎನ್ನಲಾಗಿತ್ತು. ಇದೀಗ ತುಮಕೂರು ಜಿಲ್ಲೆಯಲ್ಲಿಯೂ ಮಹಾ ಮೋಸ ನಡೆದಿರುವುದು ಗೊತ್ತಾಗಿದೆ. ತುಮಕೂರು ನಗರದ ಜಯನಗರದಲ್ಲಿ ಶಾಖೆ ತೆರೆದಿದ್ದ ಈ ಸಂಸ್ಥೆಯು, ಗೃಹಿಣಿಯರು ಹಾಗೂ ವಿದ್ಯಾವಂತ ಮಹಿಳೆಯರಿಗೆ ಸ್ವಯಂ ಉದ್ಯೋಗದ ಆಮಿಷ…

Read More

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​: ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ಸಾಧ್ಯತೆ – Kannada News

ಬೆಂಗಳೂರು, ಜೂನ್​​ 11: ಡಬಲ್ ಡೆಕ್ಕರ್‌ ಯೋಜನೆ ಸೇರ್ಪಡೆಯಿಂದ ಅನುಮೋದನೆಗಾಗಿ ಬಾಕಿ ಉಳಿದಿದ್ದ ನಮ್ಮ ಮೆಟ್ರೋ 3ನೇ ಹಂತ (Phase-3) ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆ ದೊರೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಯಾದ RITES Ltd ಸಿದ್ಧಪಡಿಸಿರುವ ಕರಡು ವರದಿಯಲ್ಲಿ, 44.65 ಕಿ.ಮೀ ಉದ್ದದ ಈ ಯೋಜನೆಯ ಆರ್ಥಿಕ ಆಂತರಿಕ ಆದಾಯ ಪ್ರಮಾಣ (Economic Internal Rate of Return – EIRR) ಶೇ. 15.9ರಷ್ಟಿರಲಿದೆ ಎಂದು ಅಂದಾಜಿಸಲಾಗಿದೆ….

Read More

ಪಶ್ಚಿಮ ಬಂಗಾಳದ ಬಳಿಕ ಮಹಾರಾಷ್ಟ್ರದಲ್ಲೂ ರಾಜಕೀಯ ಹೈಡ್ರಾಮ, ಏಕನಾಥ್ ಶಿಂಧೆ ಬಣದ ಸಂಪರ್ಕದಲ್ಲಿದ್ದಾರಾ ಶಿವಸೇನೆಯ 7 ಸಂಸದರು – Kannada News

ಮುಂಬೈ, ಜೂನ್ 11: ಮಹಾರಾಷ್ಟ್ರ(Maharashtra) ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಒಟ್ಟು 9 ಲೋಕಸಭಾ ಸಂಸದರ ಪೈಕಿ ಬರೋಬ್ಬರಿ ಏಳು ಮಂದಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನೇತೃತ್ವದ ಶಿವಸೇನೆ ಬಣದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಬೆಳವಣಿಗೆಯು ರಾಜ್ಯದಲ್ಲಿ ಮತ್ತೊಂದು ದೊಡ್ಡ ರಾಜಕೀಯ ಹೈಡ್ರಾಮಕ್ಕೆ ಮುನ್ನುಡಿ ಬರೆದಿದೆ. ಮಾಹಿತಿಗಳ ಪ್ರಕಾರ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಅವರ ಪುತ್ರ, ಲೋಕಸಭಾ ಸಂಸದ ಶ್ರೀಕಾಂತ್ ಶಿಂಧೆ ಅವರು ಕಳೆದ…

Read More

ಇಂದಿನಿಂದ ಫಿಫಾ ವಿಶ್ವಕಪ್​ ಟೂರ್ನಿ ಆರಂಭ! – Kannada News

ವಿಶ್ವದ ಅತ್ಯಂತ ದೊಡ್ಡ ಫುಟ್‌ಬಾಲ್ ಟೂರ್ನಮೆಂಟ್ ಫಿಫಾ ವಿಶ್ವಕಪ್ 2026 ಆರಂಭಕ್ಕೆ ದಿನಗಣನೆ ಮುಗಿದಿದೆ. ಅದರಂತೆ ಅಮೆರಿಕ, ಕೆನಡಾ ಹಾಗೂ ಮೆಕ್ಸಿಕೋ ಜಂಟಿಯಾಗಿ ಆಯೋಜಿಸಲಿರುವ ಫಿಫಾ ವಿಶ್ವಕಪ್​ಗೆ ಇಂದು ಚಾಲನೆ ದೊರೆಯಲಿದೆ. ಆದರೆ ಕ್ರೀಡಾಭಿಮಾನಿಗಳಲ್ಲಿ ಈ ಬಾರಿಯ ವಿಶ್ವಕಪ್ ಜೂನ್ 11 ಕ್ಕೆ ಶುರುವಾಗುತ್ತದೆಯೇ ಅಥವಾ ಜೂನ್ 12 ಕ್ಕೆ ಎಂಬ ಸಣ್ಣ ಗೊಂದಲವಿದೆ. ಇದಕ್ಕೆ ಮುಖ್ಯ ಕಾರಣ ಉತ್ತರ ಅಮೆರಿಕ ಮತ್ತು ಭಾರತದ ನಡುವಿನ ಭೌಗೋಳಿಕ ಸಮಯದ ವ್ಯತ್ಯಾಸ. ಆತಿಥೇಯ ದೇಶವಾದ ಮೆಕ್ಸಿಕೋದಲ್ಲಿ ಪಂದ್ಯಾವಳಿಯು ಗುರುವಾರ,…

Read More

Bengaluru Traffic advisory: ವಾಹನ ಸವಾರರ ಗಮನಕ್ಕೆ, ಬೆಂಗಳೂರಿನ ಈ ರಸ್ತೆಗಳಲ್ಲಿಂದು ಸಂಚಾರ ಬದಲಾವಣೆ – Kannada News

ಬೆಂಗಳೂರು, ಜೂನ್ 11: ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್‌ನಲ್ಲಿ ಇಂದು (ಜೂನ್ 11, ಗುರುವಾರ) ಕರ್ನಾಟಕ ದಲಿತ ಸಂಘಟನೆಗಳ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದ್ದು, ಸುಗಮ ವಾಹನ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು ತಾತ್ಕಾಲಿಕ ಸಂಚಾರ ನಿರ್ಬಂಧ ಹಾಗೂ ಸಂಚಾರಕ್ಕೆ ಪರ್ಯಾಯ ಮಾರ್ಗಗಳಳನ್ನು ಪ್ರಕಟಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದೆ….

Read More

ಪತಿ ಬಗ್ಗೆ ಇರೋ ಆತಂಕ ಹೇಳಿದ ಅಮೃತವರ್ಷಿಣಿ ರಜಿನಿ

ನಟಿ ರಜಿನಿ ಹಾಗೂ ಅರುಣ್ ಗೌಡ ಅವರ ಮಧ್ಯೆ ಜಿಮ್​​ನಲ್ಲಿ ಪ್ರೀತಿ ಮೂಡಿತು. ಆ ಬಳಿಕ ಇಬ್ಬರೂ ಮದುವೆ ಆದರು. ಈಗ ಪತಿ ಅರುಣ್ ಕುಮಾರ್ ಬಗ್ಗೆ ಇರುವ ಭಯದ ಬಗ್ಗೆ ರಜಿನಿ ಹೇಳಿಕೊಂಡಿದ್ದಾರೆ. ‘ಜೋಡಿ ನಂಬರ್ 1’ ಶೋನಲ್ಲಿ ಇವರು ಸ್ಪರ್ಧಿಗಳಾಗಿದ್ದಾರೆ. ಈ ಸ್ಪರ್ಧೆಯಲ್ಲಿ ಮನದಾಳದ ಮಾತನ್ನು ಹೇಳಿಕೊಳ್ಳುವ ಅವಕಾಶ ಇತ್ತು. ಈ ವೇಳೆ ರಜಿನಿ ಅವರು, ‘ಬಾಡಿ ಬಿಲ್ಡರ್​​ಗಳಿಗೆ ಆಯಸ್ಸು ಕಡಿಮೆ ಎಂಬ ಮಾತಿದೆ’ ಎಂದು ಆತಂಕ ಹೊರಹಾಕಿದ್ದಾರೆ. ಆಗ ಅರುಣ್ ಕುಮಾರ್ ಅವರು…

Read More

ಧಾರವಾಡ ಜಿಲ್ಲೆಯಲ್ಲಿ ಹಳ್ಳ ಹಿಡಿದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ?: ಇಂದಿರಾ ಕ್ಯಾಂಟೀನ್​​ ಆಹಾರ ಗುಣಮಟ್ಟದ ಬಗ್ಗೆ ಆಕ್ರೋಶ – Kannada News

ಇಂದಿರಾ ಕ್ಯಾಂಟೀನ್​Image Credit source: Tv9 Kannada ಹುಬ್ಬಳ್ಳಿ, ಜೂನ್​​ 11: ನಗರ ಮತ್ತು ಪಟ್ಟಣದಲ್ಲಿನ ಕಾರ್ಮಿಕರು, ವಿದ್ಯಾರ್ಥಿಗಳು, ಬಡಜನರು ಹಸಿವಿನಿಂದ ಇರಬಾರದು ಎಂಬ ಸದುದ್ದೇಶದಿಂದ ಈ ಹಿಂದೆ ಸಿಎಂ ಆಗಿದ್ದ ಸಿದ್ದರಾಮಯ್ಯ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್​​ಗಳನ್ನು ಆರಂಭಿಸಿದ್ದರು. ಹುಬ್ಬಳ್ಳಿ-ಧಾರವಾಡದಲ್ಲಿಯೂ  ಅನೇಕ ಇಂದಿರಾ ಕ್ಯಾಂಟೀನ್​​ಗಳು ತಲೆ ಎತ್ತಿದ್ದವು. ಆದರೆ ಇತ್ತೀಚೆಗೆ ಇಂದಿರಾ ಕ್ಯಾಂಟೀನ್​​ಗಳ ಆಹಾರದ ಗುಣಮಟ್ಟದ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮೊದಲು ಇಂದಿರಾ ಕ್ಯಾಂಟೀನ್​​ಗಳಲ್ಲಿ ಅನ್ನ ಸಾರು, ಮೊಸರನ್ನ, ಪಲಾವ್​, ಮುಂಜಾನೆ ಉಪಹಾರಕ್ಕೆ…

Read More

MI ಮೀಟಿಂಗ್: ಹಾರ್ದಿಕ್ ಪಾಂಡ್ಯ ಭವಿಷ್ಯ ನಿರ್ಧಾರ! – Kannada News

ಐಪಿಎಲ್ 2026ರ ಸೀಸನ್ ಮುಕ್ತಾಯಗೊಂಡ ಬೆನ್ನಲ್ಲೇ, ಮುಂಬೈ ಇಂಡಿಯನ್ಸ್ (MI) ತಂಡದಲ್ಲಿ ಭಾರಿ ಬದಲಾವಣೆಯಾಗುವ ಸೂಚನೆ ಸಿಗುತ್ತಿದೆ. ಬ್ಯಾಕ್ ಟು ಬ್ಯಾಕ್ ಮೂರು ಸೀಸನ್​ಗಳಲ್ಲಿ ತೀವ್ರ ನಿರಾಶಾದಾಯಕ ಪ್ರದರ್ಶನದ ಬಳಿಕ, ನಾಯಕ ಹಾರ್ದಿಕ್ ಪಾಂಡ್ಯ ಅವರ ಭವಿಷ್ಯದ ಕುರಿತು ಮುಂಬೈ ಇಂಡಿಯನ್ಸ್ ಮ್ಯಾನೇಜ್‌ಮೆಂಟ್ ಶೀಘ್ರದಲ್ಲೇ ಒಂದು ಪ್ರಮುಖ ಸಭೆ ನಡೆಸಲಿದೆ ಎಂದು ವರದಿಯಾಗಿದೆ. ಈ ಸಭೆಯಲ್ಲಿ ಆಟಗಾರ ಮತ್ತು ಫ್ರಾಂಚೈಸಿ ಇಬ್ಬರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ. ಅಂದರೆ ಈ ಸಭೆಯಲ್ಲಿ…

Read More

ಸಲ್ಮಾನ್ ಖಾನ್- ಸಂದೀಪ್ ರೆಡ್ಡಿ ವಂಗಾ ಸಿನಿಮಾ ಸೆಟ್ಟೇರೋದು ಯಾವಾಗ? – Kannada News

ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ (Salman Khan) ಮತ್ತು ಸದ್ಯ ಸೌತ್ ಇಂಡಸ್ಟ್ರಿಯಲ್ಲಿ ಸೆನ್ಸೇಷನ್ ಸೃಷ್ಟಿಸುತ್ತಿರುವ ಸ್ಟಾರ್ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾವೊಂದು ಬರಲಿದೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ‘ಅನಿಮಲ್’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ಸಂದೀಪ್ ವಂಗಾ ಅವರ ಡಾರ್ಕ್ ಮತ್ತು ಇಂಟೆನ್ಸ್ ಸಿನಿಮ್ಯಾಟಿಕ್ ಜಗತ್ತಿನಲ್ಲಿ ಸಲ್ಮಾನ್ ಖಾನ್ ಅವರನ್ನು ನೋಡಲು ಅಭಿಮಾನಿಗಳು ಕ್ಯೂರಿಯಾಸಿಟಿಯಿಂದ ಕಾಯುತ್ತಿದ್ದಾರೆ. ಆದರೆ, ಈ ಪ್ರಾಜೆಕ್ಟ್ ಸದ್ಯಕ್ಕೆ ಸೆಟ್ಟೇರುವುದು ಅಸಾಧ್ಯ ಎನ್ನಲಾಗುತ್ತಿದೆ….

Read More