Headlines

Bengaluru Traffic advisory: ವಾಹನ ಸವಾರರ ಗಮನಕ್ಕೆ, ಬೆಂಗಳೂರಿನ ಈ ರಸ್ತೆಗಳಲ್ಲಿಂದು ಸಂಚಾರ ಬದಲಾವಣೆ – Kannada News

ಬೆಂಗಳೂರು, ಜೂನ್ 11: ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್‌ನಲ್ಲಿ ಇಂದು (ಜೂನ್ 11, ಗುರುವಾರ) ಕರ್ನಾಟಕ ದಲಿತ ಸಂಘಟನೆಗಳ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದ್ದು, ಸುಗಮ ವಾಹನ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು ತಾತ್ಕಾಲಿಕ ಸಂಚಾರ ನಿರ್ಬಂಧ ಹಾಗೂ ಸಂಚಾರಕ್ಕೆ ಪರ್ಯಾಯ ಮಾರ್ಗಗಳಳನ್ನು ಪ್ರಕಟಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದೆ….

Read More

ಪತಿ ಬಗ್ಗೆ ಇರೋ ಆತಂಕ ಹೇಳಿದ ಅಮೃತವರ್ಷಿಣಿ ರಜಿನಿ

ನಟಿ ರಜಿನಿ ಹಾಗೂ ಅರುಣ್ ಗೌಡ ಅವರ ಮಧ್ಯೆ ಜಿಮ್​​ನಲ್ಲಿ ಪ್ರೀತಿ ಮೂಡಿತು. ಆ ಬಳಿಕ ಇಬ್ಬರೂ ಮದುವೆ ಆದರು. ಈಗ ಪತಿ ಅರುಣ್ ಕುಮಾರ್ ಬಗ್ಗೆ ಇರುವ ಭಯದ ಬಗ್ಗೆ ರಜಿನಿ ಹೇಳಿಕೊಂಡಿದ್ದಾರೆ. ‘ಜೋಡಿ ನಂಬರ್ 1’ ಶೋನಲ್ಲಿ ಇವರು ಸ್ಪರ್ಧಿಗಳಾಗಿದ್ದಾರೆ. ಈ ಸ್ಪರ್ಧೆಯಲ್ಲಿ ಮನದಾಳದ ಮಾತನ್ನು ಹೇಳಿಕೊಳ್ಳುವ ಅವಕಾಶ ಇತ್ತು. ಈ ವೇಳೆ ರಜಿನಿ ಅವರು, ‘ಬಾಡಿ ಬಿಲ್ಡರ್​​ಗಳಿಗೆ ಆಯಸ್ಸು ಕಡಿಮೆ ಎಂಬ ಮಾತಿದೆ’ ಎಂದು ಆತಂಕ ಹೊರಹಾಕಿದ್ದಾರೆ. ಆಗ ಅರುಣ್ ಕುಮಾರ್ ಅವರು…

Read More

ಧಾರವಾಡ ಜಿಲ್ಲೆಯಲ್ಲಿ ಹಳ್ಳ ಹಿಡಿದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ?: ಇಂದಿರಾ ಕ್ಯಾಂಟೀನ್​​ ಆಹಾರ ಗುಣಮಟ್ಟದ ಬಗ್ಗೆ ಆಕ್ರೋಶ – Kannada News

ಇಂದಿರಾ ಕ್ಯಾಂಟೀನ್​Image Credit source: Tv9 Kannada ಹುಬ್ಬಳ್ಳಿ, ಜೂನ್​​ 11: ನಗರ ಮತ್ತು ಪಟ್ಟಣದಲ್ಲಿನ ಕಾರ್ಮಿಕರು, ವಿದ್ಯಾರ್ಥಿಗಳು, ಬಡಜನರು ಹಸಿವಿನಿಂದ ಇರಬಾರದು ಎಂಬ ಸದುದ್ದೇಶದಿಂದ ಈ ಹಿಂದೆ ಸಿಎಂ ಆಗಿದ್ದ ಸಿದ್ದರಾಮಯ್ಯ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್​​ಗಳನ್ನು ಆರಂಭಿಸಿದ್ದರು. ಹುಬ್ಬಳ್ಳಿ-ಧಾರವಾಡದಲ್ಲಿಯೂ  ಅನೇಕ ಇಂದಿರಾ ಕ್ಯಾಂಟೀನ್​​ಗಳು ತಲೆ ಎತ್ತಿದ್ದವು. ಆದರೆ ಇತ್ತೀಚೆಗೆ ಇಂದಿರಾ ಕ್ಯಾಂಟೀನ್​​ಗಳ ಆಹಾರದ ಗುಣಮಟ್ಟದ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮೊದಲು ಇಂದಿರಾ ಕ್ಯಾಂಟೀನ್​​ಗಳಲ್ಲಿ ಅನ್ನ ಸಾರು, ಮೊಸರನ್ನ, ಪಲಾವ್​, ಮುಂಜಾನೆ ಉಪಹಾರಕ್ಕೆ…

Read More

MI ಮೀಟಿಂಗ್: ಹಾರ್ದಿಕ್ ಪಾಂಡ್ಯ ಭವಿಷ್ಯ ನಿರ್ಧಾರ! – Kannada News

ಐಪಿಎಲ್ 2026ರ ಸೀಸನ್ ಮುಕ್ತಾಯಗೊಂಡ ಬೆನ್ನಲ್ಲೇ, ಮುಂಬೈ ಇಂಡಿಯನ್ಸ್ (MI) ತಂಡದಲ್ಲಿ ಭಾರಿ ಬದಲಾವಣೆಯಾಗುವ ಸೂಚನೆ ಸಿಗುತ್ತಿದೆ. ಬ್ಯಾಕ್ ಟು ಬ್ಯಾಕ್ ಮೂರು ಸೀಸನ್​ಗಳಲ್ಲಿ ತೀವ್ರ ನಿರಾಶಾದಾಯಕ ಪ್ರದರ್ಶನದ ಬಳಿಕ, ನಾಯಕ ಹಾರ್ದಿಕ್ ಪಾಂಡ್ಯ ಅವರ ಭವಿಷ್ಯದ ಕುರಿತು ಮುಂಬೈ ಇಂಡಿಯನ್ಸ್ ಮ್ಯಾನೇಜ್‌ಮೆಂಟ್ ಶೀಘ್ರದಲ್ಲೇ ಒಂದು ಪ್ರಮುಖ ಸಭೆ ನಡೆಸಲಿದೆ ಎಂದು ವರದಿಯಾಗಿದೆ. ಈ ಸಭೆಯಲ್ಲಿ ಆಟಗಾರ ಮತ್ತು ಫ್ರಾಂಚೈಸಿ ಇಬ್ಬರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ. ಅಂದರೆ ಈ ಸಭೆಯಲ್ಲಿ…

Read More

ಸಲ್ಮಾನ್ ಖಾನ್- ಸಂದೀಪ್ ರೆಡ್ಡಿ ವಂಗಾ ಸಿನಿಮಾ ಸೆಟ್ಟೇರೋದು ಯಾವಾಗ? – Kannada News

ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ (Salman Khan) ಮತ್ತು ಸದ್ಯ ಸೌತ್ ಇಂಡಸ್ಟ್ರಿಯಲ್ಲಿ ಸೆನ್ಸೇಷನ್ ಸೃಷ್ಟಿಸುತ್ತಿರುವ ಸ್ಟಾರ್ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾವೊಂದು ಬರಲಿದೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ‘ಅನಿಮಲ್’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ಸಂದೀಪ್ ವಂಗಾ ಅವರ ಡಾರ್ಕ್ ಮತ್ತು ಇಂಟೆನ್ಸ್ ಸಿನಿಮ್ಯಾಟಿಕ್ ಜಗತ್ತಿನಲ್ಲಿ ಸಲ್ಮಾನ್ ಖಾನ್ ಅವರನ್ನು ನೋಡಲು ಅಭಿಮಾನಿಗಳು ಕ್ಯೂರಿಯಾಸಿಟಿಯಿಂದ ಕಾಯುತ್ತಿದ್ದಾರೆ. ಆದರೆ, ಈ ಪ್ರಾಜೆಕ್ಟ್ ಸದ್ಯಕ್ಕೆ ಸೆಟ್ಟೇರುವುದು ಅಸಾಧ್ಯ ಎನ್ನಲಾಗುತ್ತಿದೆ….

Read More

ಚಲಿಸುತ್ತಿರುವ ರೈಲಿನಿಂದ ಪ್ಯಾಕ್ ಮಾಡಿದ ಆಹಾರ ಪೊಟ್ಟಣಗಳನ್ನು ಎಸೆದ ರೈಲ್ವೆ ಸಿಬ್ಬಂದಿ – Kannada News

ನವದೆಹಲಿ, ಜೂನ್ 11: ಚಲಿಸುತ್ತಿರುವ ರೈಲಿನಿಂದ ರೈಲ್ವೆ ಸಿಬ್ಬಂದಿ ಪ್ಯಾಕ್ ಮಾಡಿದ ಆಹಾರ(Food) ಪೊಟ್ಟಣಗಳನ್ನು ಎಸೆದಿರುವ ವಿಡಿಯೋ ವೈರಲ್ ಆಗಿದೆ. ರೈಲಿನಲ್ಲಿ ಮಾರಾಟಕ್ಕೆ ಇಡಲಾಗಿದ್ದ ಆಹಾರ ಹಳಸಿತ್ತು ಅದರಿಂದ ದುರ್ವಾಸನೆ ಬರುತ್ತಿತ್ತು ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಆಹಾರದ ಗುಣಮಟ್ಟ ಕಳಪೆಯಾಗಿದ್ದ ಕಾರಣ ಅನೇಕರು ಊಟ ಖರೀದಿಸಲು ನಿರಾಕರಿಸಿದ್ದದ್ದರಿಂದ, ತಯಾರಿಸಿದ ಆಹಾರ ಹಾಗೆಯೇ ಉಳಿದಿತ್ತು. ಎಕ್ಸ್​ನಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ರೈಲು ಅತಿ ವೇಗದಲ್ಲಿ ಚಲಿಸುತ್ತಿರುವುದು ಕಾಣಿಸುತ್ತದೆ. ಆದರೆ, ಅದರ ಬಾಗಿಲ ಬಳಿ ನಿಂತಿರುವ ಪ್ಯಾಂಟ್ರಿ ಕಾರ್‌ನ…

Read More

ನಿಮಗೆ ಸಹಾಯ ಬೇಕಿದ್ದರೆ ಕೇಳಿ; ಬಾಲಿವುಡ್​​ ನಟನಿಗೆ ನೇರ ಆಫರ್ ಕೊಟ್ಟಿದ್ದ ದಾವೂದ್ – Kannada News

ಬಾಲಿವುಡ್ ಚಿತ್ರರಂಗ ಹಾಗೂ ಭೂಗತ ಲೋಕದ ಲಿಂಕ್ ಬಗ್ಗೆ ಆಗಾಗ ಒಂದಿಲ್ಲೊಂದು ಸುದ್ದಿಗಳು ಕೇಳಿಬರುತ್ತಲೇ ಇರುತ್ತವೆ. ಈ ಹಿಂದೆ ಹಿರಿಯ ನಟ ದಿವಂಗತ ರಿಷಿ ಕಪೂರ್ ಕೂಡ ತಾವು ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂನನ್ನು ಭೇಟಿಯಾಗಿದ್ದ ವಿಷಯವನ್ನು ಬಹಿರಂಗಪಡಿಸಿದ್ದರು. ತಮ್ಮ ಆತ್ಮಕಥೆ ‘ಖುಲ್ಲಂ ಖುಲ್ಲಾ’ ಪುಸ್ತಕದಲ್ಲಿ ದುಬೈನಲ್ಲಿ ತಾವು ದಾವೂದ್‌ನನ್ನು ಎರಡು ಬಾರಿ ಮುಖಾಮುಖಿಯಾಗಿದ್ದ ಸಂಗತಿಯನ್ನು ಅವರು ಮುಕ್ತವಾಗಿ ಹಂಚಿಕೊಂಡಿದ್ದರು. 1993 ರ ಮುಂಬೈ ಸರಣಿ ಬಾಂಬ್ ಸ್ಫೋಟಕ್ಕೂ ಮುನ್ನ ಈ ಭೇಟಿಗಳು ನಡೆದಿದ್ದರಿಂದ,…

Read More

ರಿಚಾ ಘೋಷ್ ಸಿಡಿಲಬ್ಬರ: ಸ್ಟಂಪ್ ಔಟ್​ನಿಂದ ಕೈತಪ್ಪಿದ ಗೆಲುವು!

172 ರನ್​​ಗಳ ಕಠಿಣ ಗುರಿ… ಟೀಮ್ ಇಂಡಿಯಾ ಮೊದಲ 10 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 64 ರನ್​ಗಳು. ಪರಿಣಾಮ ಭಾರತ ತಂಡಕ್ಕೆ ಗೆಲ್ಲಲು 60 ಎಸೆತಗಳಲ್ಲಿ 108 ರನ್​ಗಳ ಅವಶ್ಯಕತೆಯಿತ್ತು. ಅಷ್ಟರಲ್ಲಾಗಲೇ ಟೀಮ್ ಇಂಡಿಯಾದ ಟಾಪ್ ಆರ್ಡರ್ ಬ್ಯಾಟರ್​ಗಳಾದ ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ ಹಾಗೂ ಹರ್ಮನ್​ಪ್ರೀತ್ ಕೌರ್ ಪೆವಿಲಿಯನ್ ಸೇರಿದ್ದರು. ಹೀಗಾಗಿಯೇ ಇಂಗ್ಲೆಂಡ್​ ಈ ಅಭ್ಯಾಸ ಪಂದ್ಯದಲ್ಲಿ ಸುಲಭವಾಗಿ ಗೆಲ್ಲಲಿದೆ ಎಂದು ಎಲ್ಲರೂ ಷರಾ ಬರೆದಿದ್ದರು. ಆದರೆ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟೀಮ್…

Read More

IPL ‘ತಿಂಗಳ’ ಬದಲಾವಣೆಗೆ ಭರ್ಜರಿ ಪ್ಲ್ಯಾನ್

ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮಹತ್ವದ ಬದಲಾವಣೆ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಗಂಭೀರ ಚಿಂತನೆ ನಡೆಸುತ್ತಿದೆ. ಈ ಬದಲಾವಣೆಯೊಂದಿಗೆ ಐಪಿಎಲ್ ಆರಂಭದ ತಿಂಗಳು ಕೂಡ ಬದಲಾಗಲಿದೆ. (PC: IPL) ಸಾಮಾನ್ಯವಾಗಿ ಐಪಿಎಲ್​​ ಅನ್ನು ಮಾರ್ಚ್ ತಿಂಗಳಿಂದ ಆರಂಭಿಸಿ ಮೇ ತಿಂಗಳಲ್ಲಿ ಕೊನೆಗೊಳಿಸಲಾಗುತ್ತದೆ. ಆದರೆ ಮುಂಬರುವ ಟೂರ್ನಿಯನ್ನು ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅವಧಿಗೆ ಸ್ಥಳಾಂತರಿಸಲು ಬಿಸಿಸಿಐ ಯೋಜನೆ ರೂಪಿಸುತ್ತಿದೆ. (PC: IPL) ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್ ಅವರ ಪ್ರಕಾರ, ಈ…

Read More

ಲಾಲ್‌ಬಾಗ್‌ನಲ್ಲಿ ಸಜ್ಜಾಯ್ತು ನೂತನ ಬೋನ್ಸಾಯ್ ಪಾರ್ಕ್: ತೋಟಗಾರಿಕೆಗೆ ಸಚಿವರೇ ಇಲ್ಲದೆ ಫಲಪುಷ್ಪ ಪ್ರದರ್ಶನ ಸಿದ್ಧತೆ ವಿಳಂಬ! – Kannada News

ಲಾಲ್‌ಬಾಗ್ ಬೋನ್ಸಾಯ್ ಪಾರ್ಕ್Image Credit source: tv9 ಬೆಂಗಳೂರು, ಜೂನ್ 11: ಬೆಂಗಳೂರಿನ (Bengaluru) ಹಸಿರು ಹೃದಯ ಎಂದೇ ಖ್ಯಾತಿ ಪಡೆದಿರುವ ಐತಿಹಾಸಿಕ ಲಾಲ್‌ಬಾಗ್ (Lalbagh) ಸಸ್ಯಕಾಶಿಯಲ್ಲಿ ವೀಕ್ಷಕರಿಗಾಗಿ ಮತ್ತೊಂದು ವಿಶೇಷ ಆಕರ್ಷಣೆ ಸಜ್ಜಾಗಿದೆ. ಪರಿಸರ ಪ್ರಿಯರು ಹಾಗೂ ಸಾರ್ವಜನಿಕರ ದೀರ್ಘಕಾಲದ ನಿರೀಕ್ಷೆಯಾಗಿದ್ದ ಅತ್ಯಾಧುನಿಕ ‘ಬೋನ್ಸಾಯ್ ಪಾರ್ಕ್ (Bonsai Park)’ ಶೀಘ್ರದಲ್ಲೇ ಲೋಕಾರ್ಪಣೆಯಾಗಲಿದ್ದು, ಪ್ರವಾಸಿಗರನ್ನು ಸೆಳೆಯಲು ಸಿದ್ಧಗೊಂಡಿದೆ. ಆದರೆ, ಮತ್ತೊಂದೆಡೆ ಪ್ರತಿವರ್ಷ ಸ್ವಾತಂತ್ರ್ಯ ದಿನಾಚರಣೆಯ (ಆಗಸ್ಟ್ 15) ಅಂಗವಾಗಿ ಜಾಗತಿಕ ಗಮನ ಸೆಳೆಯುವ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದ…

Read More