Headlines

IPL 2026: ರಾಜಸ್ಥಾನ್ ವಿರುದ್ಧ ಆಡ್ತಾರಾ ಹಾರ್ದಿಕ್ ಪಾಂಡ್ಯ?

ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದ ಮುಂಬೈ ಇಂಡಿಯನ್ಸ್, 2012 ರ ನಂತರ ಮೊದಲ ಬಾರಿಗೆ 19 ನೇ ಐಪಿಎಲ್ (IPL) ಸೀಸನ್‌ನಲ್ಲಿ ತಮ್ಮ ಅಭಿಯಾನವನ್ನು ಗೆಲುವಿನ ಆರಂಭವನ್ನು ಮಾಡಿತು. ಮಾರ್ಚ್ 29 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸುವ ಮೂಲಕ ಮುಂಬೈ ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಪ್ರಾರಂಭಿಸಿತು. ಆದರೆ, ಆ ನಂತರ ಮುಂಬೈ ತನ್ನ ಗೆಲುವಿನ ಓಟವನ್ನು ಕಾಯ್ದುಕೊಳ್ಳಲು ವಿಫಲವಾಯಿತು. ಶನಿವಾರ ನಡೆದ ತನ್ನ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಡೆಲ್ಲಿ…

Read More

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಹಣ ಮರುಪಾವತಿಗೆ ಆದೇಶ, ಪ್ರಕ್ರಿಯೆ ಹೇಗೆ? – Kannada News | Karnataka Governmnet Orders Students Bus Pass Money refund, here Is Details How to Apply And Where

ಬೆಂಗಳೂರು, (ಜೂನ್ 24): ಕರ್ನಾಟಕದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ (Students) ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸಿಹಿಸುದ್ದಿಯೊಂದನ್ನು ನೀಡಿದೆ. ಈಗಾಗಲೇ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ (Free Bus Pass) ವಿತರಣಗೆ ಕೆಎಸ್​​ಆರ್​​​ಟಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಈಗಾಗಲೇ ಹಣ ನೀಡಿ ಬಸ್ ಪಾಸ್ ಪಡೆದ ವಿದ್ಯಾರ್ಥಿಗಳ ಹಣವನ್ನು ಮರುಪಾವತಿಗೆ ಮಹತ್ವದ ಆದೇಶ ಹೊರಡಿಸಿದೆ. KSRTC, BMTC, NWKRTC, KKRTC ನಿಗಮಗಳು ಹಣ ವಾಪಸ್ ಪಡೆಯುವ ಬಗ್ಗೆ ವಿದ್ಯಾರ್ಥಿಗಳಿ ಅವಕಾಶ…

Read More

ಇರಾನ್ ಸಂಘರ್ಷ ತೀವ್ರ ಕಳವಳಕಾರಿ; ಶಾಂತಿಯುತ ಮಾತುಕತೆಗೆ ಕರೆ ನೀಡಿದ ಭಾರತ – Kannada News | Deeply Concerned India Reacts To Iran Conflict Urges To Avoid Escalation

ನವದೆಹಲಿ, ಫೆಬ್ರವರಿ 28: ಯುನೈಟೆಡ್ ಸ್ಟೇಟ್ಸ್ (ಯುಎಸ್) ಮತ್ತು ಇಸ್ರೇಲ್ ದೇಶಗಳು ಇರಾನ್ (Iran) ಮೇಲೆ ಜಂಟಿಯಾಗಿ ದಾಳಿ ನಡೆಸಿದ ನಂತರ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಎರಡೂ ಕಡೆಯ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಬಗೆಹರಿಸಲು ‘ಮಾತುಕತೆ ಮತ್ತು ರಾಜತಾಂತ್ರಿಕತೆ’ಗೆ ಭಾರತ ಕರೆ ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರ ರಣಧೀರ್ ಜೈಸ್ವಾಲ್ ಈ ಬಗ್ಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರದೇಶದಲ್ಲಿನ ಭಾರತೀಯ ರಾಯಭಾರ ಕಚೇರಿಗಳು ಅಲ್ಲಿನ ಎಲ್ಲಾ ಭಾರತೀಯ…

Read More

‘ಈ ಜೀವ ನಿಮಗೆ ಅರ್ಪಣೆ’: ಡಿಕೆ ಶಿವಕುಮಾರ್ ಸ್ನೇಹವನ್ನು ಕೊಂಡಾಡಿದ ಕ್ರೇಜಿಸ್ಟಾರ್ – Kannada News | Ravichandran praised DK Shivakumar and said his life is dedicated for DKS only

ನಟ ರವಿಚಂದ್ರನ್ (Ravichandran) ದಶಕಗಳಿಂದಲೂ ಚಿತ್ರರಂಗದಲ್ಲಿರುವವರು. ಅವರ ತಂದೆ ವೀರಾಸ್ವಾಮಿ ಖ್ಯಾತ ನಿರ್ಮಾಪಕರು ಮತ್ತು ಉದ್ಯಮಿಗಳು ಸಹ ಆಗಿದ್ದವರು. ರವಿಚಂದ್ರನ್ ಅವರಿಗೆ ಚಿತ್ರರಂಗದ ಜೊತೆಗೆ ರಾಜಕೀಯ ರಂಗದ ಹಲವು ಪ್ರಮುಖರ ಆಪ್ತ ಪರಿಚಯವಿದೆ. ಆದರೆ ರವಿಚಂದ್ರನ್ ಅವರು ಎಂದಿಗೂ ರಾಜಕೀಯದ ಅಖಾಡದತ್ತ ಮುಖ ಸಹ ಹಾಕಿದವರಲ್ಲ. ಅವರ ಗೆಳೆತನವನ್ನು ಬಳಸಿಕೊಂಡವರೂ ಅಲ್ಲ. ಆದರೆ ಇದೀಗ ಕಾರ್ಯಕ್ರಮವೊಂದರಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಮನಸಾರೆ ಕೊಂಡಾಡಿರುವ ರವಿಚಂದ್ರನ್, ‘ಈ ಜೀವ ನಿಮಗೆ ಅರ್ಪಣೆ’ ಎಂದು ಭಾವುಕರಾಗಿ ಹೇಳಿದ್ದಾರೆ….

Read More

Video: ಎಳನೀರು ವ್ಯಾಪಾರಿಯೊಂದಿಗೆ ಚೌಕಾಸಿ ಮಾಡಿದ ವಿದೇಶಿ ಮಹಿಳೆ – Kannada News | A foreign woman haggling with a coconut water vendor

ಹೆಣ್ಣು ಮಕ್ಕಳು ಚೌಕಾಸಿ ಮಾಡೋದ್ರಲ್ಲಿ ಎತ್ತಿದ ಕೈ. ಯಾವುದೇ ಅಂಗಡಿಗೆ ಹೋದ್ರು ಚೌಕಾಸಿ ಮಾಡದೇ ಏನನ್ನೂ ಖರೀದಿಸಲ್ಲ. ಆದರೆ ಇದೀಗ ಈ ವಿದೇಶಿ ಮಹಿಳೆ (foreign woman) ಚೌಕಾಸಿ ಮಾಡೋದ್ರಲ್ಲಿ ಭಾರತೀಯ ನಾರಿಯರನ್ನೇ ಮೀರಿಸುವಂತಿದ್ದಾಳೆ. ರಸ್ತೆ ಬದಿಯಲ್ಲಿದ್ದ ಎಳನೀರು ವ್ಯಾಪಾರಿ ಬಳಿ ವಿದೇಶಿ ಚೌಕಾಸಿ ಮಾಡಿ ಎಳನೀರು ಖರೀದಿ ಮಾಡಿದ್ದಾಳೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಶಾಕ್ ಆಗಿದ್ದಾರೆ. Jennifer ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ವಿದೇಶಿ ಮಹಿಳೆ ಕನ್ನಡದಲ್ಲಿ ಮಾತನಾಡುತ್ತಾ ಬೀದಿ ಬದಿಯಲ್ಲಿ…

Read More

ದಾವಣಗೆರೆ ದಕ್ಷಿಣ ಉಪ ಚುನಾವಣೆ ಗೆದ್ದರೂ ಕಾಂಗ್ರೆಸ್​​ಗೆ ತಪ್ಪದ ಚಿಂತೆ: ಕಾರಣ ಇಲ್ಲಿದೆ – Kannada News | Davangere By election: Congress Wins but Margin Sparks Concern Over Muslim Vote Shift

ದಾವಣಗೆರೆ, ಮೇ 05: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಜಯಗಳಿಸಿದೆ. ಆದರೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಫಲಿತಾಂಶ ಕಾಂಗ್ರೆಸ್‌ಗೆ ಆತಂಕ ಮೂಡಿಸಿದೆ. ಕಾಂಗ್ರೆಸ್ ಗೆದ್ದಿದ್ದರೂ, ವಿಜಯದ ಅಂತರ ಬಹಳ ಕಡಿಮೆಯಾಗಿದೆ. ಇದು ಮುಸ್ಲಿಂ ಮತದಾರರು ಕಾಂಗ್ರೆಸ್‌ನಿಂದ ದೂರ ಸರಿದಿರುವುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಎಸ್ಡಿಪಿಐ ಅಭ್ಯರ್ಥಿಗೆ ದಾಖಲೆಯ ಸುಮಾರು 19,000 ಮತಗಳು ಬಂದಿದ್ದು, ಇತರೆ ಮುಸ್ಲಿಂ ಅಭ್ಯರ್ಥಿಗಳಿಗೆ 2-3 ಸಾವಿರ ಮತಗಳು ಲಭಿಸಿವೆ. ಈ ಬೆಳವಣಿಗೆಯು ಮುಂದಿನ ದಿನಗಳಲ್ಲಿ 40-50 ಕ್ಷೇತ್ರಗಳಲ್ಲಿ…

Read More

ಆಂಧ್ರಪ್ರದೇಶದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ; ಸ್ಥಳೀಯ ನಿವಾಸಿಗಳ ಸ್ಥಳಾಂತರ – Kannada News | Major gas leak in Andhra Pradesh Konaseema local residents evacuated

ಕೊನಸೀಮಾ, ಜನವರಿ 5: ಆಂಧ್ರಪ್ರದೇಶದ ಕೊನಸೀಮಾ ಜಿಲ್ಲೆಯಲ್ಲಿ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ಪೈಪ್‌ಲೈನ್‌ನಿಂದ ಭಾರಿ ಅನಿಲ ಸೋರಿಕೆಯಾಗಿದ್ದು, ಆ ಗ್ಯಾಸ್​​ಗೆ ಬೆಂಕಿ (Fire Accident) ಹೊತ್ತಿಕೊಂಡಿದೆ. ಇದರಿಂದಾಗಿ ಇಡೀ ಹಳ್ಳಿಯಲ್ಲಿ ಬೆಂಕಿಯ ದಟ್ಟ ಹೊಗೆ ತುಂಬಿದೆ. ಮಾಲಿಕಿಪುರಂ ಮಂಡಲದ ಇರುಸಮಂಡದ ಬಳಿ ಅನಿಲ ಸೋರಿಕೆ ಮತ್ತು ಬೆಂಕಿಯಿಂದಾಗಿ ಇಡೀ ಗ್ರಾಮವೇ ಹೊಗೆಯಿಂದ ಆವೃತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಅಧಿಕಾರಿಗಳು ಆ ಗ್ರಾಮದ ಜನರನ್ನು ಅವರ ಮನೆಗಳಿಂದ ಬೇರೆಡೆಗೆ ಸ್ಥಳಾಂತರಿಸುತ್ತಿದ್ದಾರೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ…

Read More

Harvard Free Online Courses: ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಉಚಿತ ಎಐ ಮತ್ತು ಡೇಟಾ ಸೈನ್ಸ್ ಕೋರ್ಸ್‌ಗಳು!

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನದ ಜ್ಞಾನವಿಲ್ಲದೆ ವೃತ್ತಿಜೀವನದಲ್ಲಿ ಮುನ್ನಡೆಯುವುದು ಅಸಾಧ್ಯ ಎಂಬಂತಾಗಿದೆ. ಇದನ್ನು ಮನಗಂಡ ವಿಶ್ವದ ಪ್ರತಿಷ್ಠಿತ ಹಾರ್ವರ್ಡ್ ವಿಶ್ವವಿದ್ಯಾಲಯವು (Harvard University), ಕೃತಕ ಬುದ್ಧಿಮತ್ತೆ (AI), ಡೇಟಾ ಸೈನ್ಸ್ ಮತ್ತು ಪ್ರೋಗ್ರಾಮಿಂಗ್‌ನಂತಹ ಅತ್ಯಾಧುನಿಕ ವಿಷಯಗಳಲ್ಲಿ ಉಚಿತ ಆನ್‌ಲೈನ್ ಕೋರ್ಸ್‌ಗಳನ್ನು ಆರಂಭಿಸಿದೆ. ನೀವು ಈಗಷ್ಟೇ ಪದವಿ ಮುಗಿಸಿದ್ದರೆ ಅಥವಾ ಅನುಭವಿ ವೃತ್ತಿಪರರಾಗಿರಲಿ, ಈ ಕೋರ್ಸ್‌ಗಳು ನಿಮ್ಮ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ಉತ್ತಮ ವೇದಿಕೆಯಾಗಿವೆ. ಈ ಕೋರ್ಸ್‌ಗಳ ಪ್ರಮುಖ ವಿವರಗಳು ಇಲ್ಲಿವೆ: ಡೇಟಾ ಸೈನ್ಸ್ ಮತ್ತು ಮೆಷಿನ್ ಲರ್ನಿಂಗ್ (Data…

Read More

1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ

ಬೆಂಗಳೂರು, (ಮಾರ್ಚ್ 26): ಶಾಲೆ ದಾಖಲಿಗೆ ಮಕ್ಕಳಿಗೆ ನಿಗದಿಪಡಿಸಿದ್ದ ವಯೋಮಿತಿಯನ್ನು ಸರ್ಕಾರ ಸಡಿಲಿಕೆ ಮಾಡಿದೆ. 1 ನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ 60 ದಿನ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು (ಮಾರ್ಚ್ 26)ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಯುಕೆಜಿ ಮುಗಿಸಿದರೂ 6 ವರ್ಷ ಪೂರ್ಣಗೊಂಡಿಲ್ಲವೆಂದು ಚಿಂತೆಯಲ್ಲಿದ್ದ  ಪೋಷಕರು ನಿರಾಳರಾಗಿದ್ದಾರೆ. ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ, ಪ್ರಸಕ್ತ ವರ್ಷಕ್ಕೆ ಅನ್ವಯವಾಗುವಂತೆ…

Read More

ಬಾಲ್ಯ ವಿವಾಹ ತಡೆದದ್ದೇ ತಪ್ಪಾಯ್ತು!: ಕೋಲಾರದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಕುತ್ತಿಗೆಗೆ ವೇಲ್ ಬಿಗಿದು ಕೊಲೆಗೆ ಯತ್ನಿಸಿದ ಅಪ್ರಾಪ್ತ ಬಾಲಕಿ – Kannada News | Mulbagal Child Marriage Revenge: Minor Girl Attacks Anganwadi Worker Padmavathi

ಕೋಲಾರ, ಜೂ.30: ಸಾಮಾಜಿಕ ಪಿಡುಗಾಗಿರುವ ಬಾಲ್ಯ ವಿವಾಹವನ್ನು ತಡೆದು ಇಲಾಖೆಗೆ ಮಾಹಿತಿ ನೀಡಿದ್ದಕ್ಕಾಗಿ, ಆಕ್ರೋಶಗೊಂಡ ಅಪ್ರಾಪ್ತ ಬಾಲಕಿಯೊಬ್ಬಳು ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಯ ಕುತ್ತಿಗೆಗೆ ವೇಲ್ (ದುಪಟ್ಟಾ) ಬಿಗಿದು ಕೊಲೆ ಮಾಡಲು ಯತ್ನಿಸಿರುವ ಭೀಕರ ಘಟನೆ ಕೋಲಾರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮುಳಬಾಗಿಲು ತಾಲೂಕಿನ ಜೆ.ಕುರುಬರಹಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಪದ್ಮಾವತಿ ಹಲ್ಲೆಗೊಳಗಾದ ಮಹಿಳೆ, ಸದ್ಯ ತೀವ್ರ ಗಾಯಗೊಂಡಿದ್ದು ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೆ.ಕುರುಬರಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಆಕೆಯ ತಂದೆ-ತಾಯಿ ಕೆಲವು ತಿಂಗಳುಗಳ ಹಿಂದೆ…

Read More