ಖ್ಯಾತ ಗಾಯಕಿ ಆಶಾ ಭೋಸ್ಲೆ (Asha Bhosle) ಅವರನ್ನು ಕಳೆದುಕೊಂಡು ಭಾರತದ ಸಂಗೀತ ಲೋಕ ಬಡವಾಗಿದೆ. ಅವರ ಅಗಲಿಕೆಯಿಂದ ತುಂಬಲಾರದ ನಷ್ಟ ಆಗಿದೆ. ಸಾವಿರಾರು ಗೀತೆಗಳ ಮೂಲಕ ಆಶಾ ಭೋಸ್ಲೆ ಅವರು ಜನಮನ ಗೆದ್ದಿದ್ದರು. ಕನ್ನಡದಲ್ಲಿ ಅವರು ಧ್ವನಿ ನೀಡಿದ್ದು 4 ಹಾಡುಗಳಿಗೆ ಮಾತ್ರ. ಆ ಪೈಕಿ ಕೊನೆಯ ಹಾಡು, ಅಂದರೆ ನಾಲ್ಕನೇ ಹಾಡು ಬಿಡುಗಡೆ ಆಗಿಲ್ಲ. ಆ ಗೀತೆಗೆ ವೀರ್ ಸಮರ್ಥ್ ಅವರು ಸಂಗೀತ ನಿರ್ದೇಶನ ಮಾಡಿದ್ದರು. ಕಡಿಮೆ ಸಂಭಾವನೆ ಕೊಟ್ಟರೂ ಕೂಡ ಆಶಾ ಭೋಸ್ಲೆ ಅವರು ಆ ಗೀತೆಯನ್ನು ಹಾಡಲು ಒಪ್ಪಿಕೊಂಡಿದ್ದರು. ಆ ಘಟನೆಯನ್ನು ಈಗ ವೀರ್ ಸಮರ್ಥ್ (Veer Samarth) ಅವರು ಮೆಲುಕು ಹಾಕಿದ್ದಾರೆ. ಸಂಗೀತದ ಬಗ್ಗೆ ಆಶಾ ಭೋಸ್ಲೆ ಅವರಿಗೆ ಇದ್ದ ಪ್ರೀತಿ ಎಂಥದ್ದು ಎಂಬುದನ್ನು ಅವರು ವಿವರಿಸಿದ್ದಾರೆ. ‘ಟಿವಿ9’ ಜೊತೆ ವೀರ್ ಸಮರ್ಥ್ ಮಾತನಾಡಿದ ವಿಡಿಯೋ ಇಲ್ಲಿದೆ..
ಖ್ಯಾತ ಗಾಯಕಿ ಆಶಾ ಭೋಸ್ಲೆ (Asha Bhosle) ಅವರು ನಿಧನರಾಗಿದ್ದಾರೆ. ಅವರು ಕನ್ನಡದಲ್ಲಿ ಹಾಡಿದ ಮೂರು ಗೀತೆಗಳು ಬಿಡುಗಡೆ ಆಗಿವೆ. ಆದರೆ ನಾಲ್ಕನೇ ಹಾಡು ರಿಲೀಸ್ ಆಗಲೇ ಇಲ್ಲ. ಆ ಗೀತೆಗೆ ಸಂಗೀತ ನಿರ್ದೇಶಕ ವೀರ್ ಸಮರ್ಥ್ ಅವರು ಸಂಗೀತ ನೀಡಿದ್ದರು. ಆ ದಿನಗಳನ್ನು ವೀರ್ ಸಮರ್ಥ್ (Veer Samarth) ಅವರು ಈಗ ನೆನಪಿಸಿಕೊಂಡಿದ್ದಾರೆ. ‘ಮಾಣಿಕ್ಯ’ ಎಂಬ ಸಿನಿಮಾದ ಸಲುವಾಗಿ ಈ ಹಾಡನ್ನು ಸಿದ್ಧಪಡಿಸಲಾಗಿತ್ತು. ಆಶಾ ಭೋಸ್ಲೆ ಅವರಿಂದ ಹಾಡಿಸಬೇಕು ಎಂಬುದು ವೀರ್ ಸಮರ್ಥ್ ಅವರ ಕನಸಾಗಿತ್ತು. ‘ನಾವು ಒಂದು ಸಿ.ಡಿ. ಸಿದ್ಧಪಡಿಸಿ ಆಶಾ ಭೋಸ್ಲೆ ಅವರ ಮಗನಿಗೆ ಕಳಿಸಿದ್ದೆವು. ಹಲವು ತಿಂಗಳು ಕಳೆದರೂ ಪ್ರತಿಕ್ರಿಯೆ ಬರಲಿಲ್ಲ. ನಂತರ ನಾವು ಸುಮ್ಮನಾದೆವು. ಆದರೆ ಒಂದು ದಿನ ಅನಿರೀಕ್ಷಿತವಾಗಿ ನಮಗೆ ಕರೆ ಬಂತು. ಸ್ವತಃ ಆಶಾ ಭೋಸ್ಲೆ ಅವರು ಕರೆ ಮಾಡಿ ಹಾಡಲು ಒಪ್ಪಿಕೊಂಡಿರುವುದಾಗಿ ತಿಳಿಸಿದರು. ನನಗೆ ಶಾಕ್ ಆಯಿತು’ ಎಂದು ವೀರ್ ಸಮರ್ಥ್ ಅವರು ಹೇಳಿದ್ದಾರೆ.
ನವದೆಹಲಿ, ಏಪ್ರಿಲ್ 13: ರಾತ್ರಿಯಾಗುತ್ತಿದ್ದಂತೆ ಕಳ್ಳರು ಅಲರ್ಟ್ ಆಗಿ ಬಿಡುತ್ತಾರೆ. ಎಷ್ಟೇ ಬಂದೋಬಸ್ತ್ ಇದ್ದರೂ ಕಳ್ಳರಿಂದ ಅಂಗಡಿ, ಮನೆಗಳನ್ನು ಕಾಪಾಡಿಕೊಳ್ಳುವುದೇ ನಗರಗಳ ಜನರಿಗೆ ದೊಡ್ಡ ತಲೆನೋವು. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿರುವ ವಿಡಿಯೋದಲ್ಲಿ ಕಳ್ಳರು ದರೋಡೆ ಮಾಡಲೆಂದು ಅಂಗಡಿಯೊಳಗೆ ನುಗ್ಗುತ್ತಾರೆ. ಆದರೆ, ಅಂಗಡಿಯ ಹೊರಗಿದ್ದ ಜನರು ಆ ಶಾಪ್ನ ಶಟರ್ ಎಳೆದು ಆ ಕಳ್ಳರನ್ನು ಕೂಡಿಹಾಕುತ್ತಾರೆ. ಇದರಿಂದ ಒಳಗಿರುವ ಕಳ್ಳರು ಗಾಬರಿಯಾಗಿ ಕಿರುಚಾಡುತ್ತಾ ಶಟರ್ ಬಾಗಿಲು ಬಡಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೊರಗಿದ್ದ ಜನರ ಜಾಣತನಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಏಪ್ರಿಲ್ 13: ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಇಂದು ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆ ಮಾಡಲಾಗಿದೆ. 11 ಹೊಸ ಬಂಡವಾಳ ಹೂಡಿಕೆ ಹಾಗೂ 6 ಹೆಚ್ಚುವರಿ ಬಂಡವಾಳ ಹೂಡಿಕೆ ಸೇರಿದಂತೆ ಒಟ್ಟು 17 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. 18,430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಸುಮಾರು 15,032 ಜನರಿಗೆ ಉದ್ಯೋಗವಕಾಶ ಸಿಗಲಿದೆ.
ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೋಟ್ಯಂತರ ರೂ ಬಂಡವಾಳ
11 ಹೊಸ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 14,906.9 ಕೋಟಿ ರೂ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 13,050 ಉದ್ಯೋಗ ಸೃಷ್ಠಿಯಾಗಲಿದೆ. 6 ಹೆಚ್ಚುವರಿ ಬಂಡವಾಳ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಒಟ್ಟು 3523.54 ಕೋಟಿಗಳ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 1,982 ಉದ್ಯೋಗ ಸೃಷ್ಟಿಯಾಗುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಟ್ವಿಟ್
ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆಯ ಇಂದು ನಡೆದಿದ್ದು, ಒಟ್ಟು 18,430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 15,032 ಜನರಿಗೆ ಉದ್ಯೋಗ ಲಭ್ಯವಾಗಲಿದೆ.
ಇಂದಿನ ಸಭೆಯಲ್ಲಿ 11 ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ 6 ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು… pic.twitter.com/p7AAFCoKKR
ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಎಂಬಿ ಪಾಟೀಲ್, ಕೆಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಚಲುವರಾಯಸ್ವಾಮಿ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಮಿಸ್ ಯೂನಿವರ್ಸ್ ಕರ್ನಾಟಕ 2026 ವಿಜೇತೆ ಕು.ಲೇಖನ
ಪ್ರತಿಷ್ಠಿತ ‘ಮಿಸ್ ಯೂನಿವರ್ಸ್ ಕರ್ನಾಟಕ 2026’ ಕಿರೀಟವನ್ನು ಮುಡಿಗೇರಿಸಿಕೊಂಡಿರುವ ಕುಮಾರಿ ಲೇಖನ ಮಲ್ಲಿಕಾರ್ಜುನ ಹೆಗ್ಡೆ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಲೇಖನ ಅವರ ಸಾಧನೆಯನ್ನು ಶ್ಲಾಘಿಸಿ, ಮುಂದಿನ ಸ್ಪರ್ಧೆಗಳಿಗೆ ಶುಭ ಹಾರೈಸಿದ್ದಾರೆ. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಉಪಸ್ಥಿತರಿದ್ದರು.
ಐಪಿಎಲ್ 2026 ರ 21 ನೇ ಪಂದ್ಯ ಐಪಿಎಲ್ ಇತಿಹಾಸದಲ್ಲೇ ಕಂಡು ಕೇಳರಿಯದೆ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದೆ. ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ನಡುವೆ ನಡೆದ ಈ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಪರ ಚೊಚ್ಚಲ ಪಂದ್ಯವನ್ನಾಡಿದ ಪ್ರಫುಲ್ ಹಿಂಗೆ ಐಪಿಎಲ್ ಇತಿಹಾಸದಲ್ಲೇ ಯಾವ ಆಟಗಾರನೂ ಮಾಡಿರದ ಮತ್ತು ಮುಂದೆ ಮಾಡಲು ಸಾಧ್ಯವಾಗದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಸನ್ರೈಸರ್ಸ್ ಹೈದರಾಬಾದ್ ಪರ ಆಡುವ ಮೂಲಕ ಐಪಿಎಲ್ಗೆ ಪದಾರ್ಪಣೆ ಮಾಡಿದ ಪ್ರಫುಲ್ ತಾವು ಬೌಲ್ ಮಾಡಿದ ಮೊದಲ ಓವರ್ನಲ್ಲೇ ಮೂರು ವಿಕೆಟ್ಗಳನ್ನು ಉರುಳಿಸಿದರು. ಇದರಲ್ಲಿ ವಿಶೇಷತೆ ಅಂದರೆ ಈ ಮೂವರು ಬ್ಯಾಟ್ಸ್ಮನ್ಗಳಿಗೆ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ. ಐಪಿಎಲ್ ಇತಿಹಾಸದಲ್ಲಿ ಪಾದಾರ್ಪಣೆ ಮಾಡಿದ ಮೊದಲ ಪಂದ್ಯದಲ್ಲಿ ಯಾವ ವೇಗಿಯೂ ಈ ಸಾಧನೆ ಮಾಡಿರಲಿಲ್ಲ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ 216 ರನ್ ಕಲೆಹಾಕಿತು. ರಾಜಸ್ಥಾನ ತಂಡದ ಬ್ಯಾಟಿಂಗ್ ಬಲಿಷ್ಠವಾಗಿರುವ ಕಾರಣ, ಈ ಪಂದ್ಯದಲ್ಲೂ ರಾಜಸ್ಥಾನದ್ದೇ ಗೆಲುವು ಎಂಬುದು ಖಚಿತವಾಗಿತ್ತು. ಆದರೆ ಸನ್ರೈಸರ್ಸ್ ಪರ ಬೌಲಿಂಗ್ ಆರಂಭಿಸಿದ ಪ್ರಫುಲ್ ಮೊದಲ ಓವರ್ನಲ್ಲೇ ಎಲ್ಲರ ಲೆಕ್ಕಾಚಾರವನ್ನು ಬುಡಮೇಲು ಮಾಡಿದರು.
ನವದೆಹಲಿ, ಏಪ್ರಿಲ್ 13: ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಇಂದು ಟಿಸಿಎಸ್ ನಾಸಿಕ್ನಲ್ಲಿ ನಡೆದ ಲೈಂಗಿಕ ಕಿರುಕುಳ ಆರೋಪಗಳನ್ನು ಟೀಕಿಸಿದ್ದಾರೆ. “ಈ ಘಟನೆ ಗಂಭೀರವಾಗಿದ್ದು, ಕಳವಳಕಾರಿ ಮತ್ತು ದುಃಖಕರದ್ದಾಗಿದೆ” ಎಂದು ಬೇಸರ ಹೊರಹಾಕಿದ್ದಾರೆ. ಟಿಸಿಎಸ್ (Tata Consultancy Services) ಕಂಪನಿಯ ಹಿರಿಯ ಕಾರ್ಯನಿರ್ವಾಹಕರ ನೇತೃತ್ವದಲ್ಲಿ ಈ ಘಟನೆಯ ಬಗ್ಗೆ ತನಿಖೆ ನಡೆಸುವುದಾಗಿ ಘೋಷಿಸಿದ್ದಾರೆ. ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಬಹುರಾಷ್ಟ್ರೀಯ ಕಂಪನಿಯ ಕಚೇರಿಯಲ್ಲಿ 8 ಮಹಿಳಾ ಉದ್ಯೋಗಿಗಳಿಂದ ಲೈಂಗಿಕ ಕಿರುಕುಳ ಮತ್ತು ಬಲವಂತದ ಧಾರ್ಮಿಕ ಮತಾಂತರದ ಆರೋಪಗಳು ಕೇಳಿಬಂದಿತ್ತು.
ಟಾಟಾ ಗ್ರೂಪ್ ತನ್ನ ಉದ್ಯೋಗಿಗಳಿಂದ ಯಾವುದೇ ರೀತಿಯ ದಬ್ಬಾಳಿಕೆ ಅಥವಾ ದುಷ್ಕೃತ್ಯವನ್ನು ಸಹಿಸುವುದಿಲ್ಲ ಎಂದು ಎನ್. ಚಂದ್ರಶೇಖರನ್ ಹೇಳಿದ್ದಾರೆ. “ಸತ್ಯಗಳನ್ನು ಪತ್ತೆಹಚ್ಚಲು ಮತ್ತು ಈ ಪರಿಸ್ಥಿತಿಗೆ ಕಾರಣರಾದ ಎಲ್ಲ ವ್ಯಕ್ತಿಗಳನ್ನು ಗುರುತಿಸಲು ಸಂಪೂರ್ಣ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಸೂಕ್ತ ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.
“ಟಿಸಿಎಸ್ನ ನಾಸಿಕ್ ಶಾಖೆಯಿಂದ ಬಂದಿರುವ ದೂರುಗಳು ಮತ್ತು ಆರೋಪಗಳು ತೀವ್ರ ಕಳವಳಕಾರಿ ಮತ್ತು ತೀವ್ರ ದುಃಖಕರವಾಗಿವೆ. ಆರೋಪಿಗಳಾದ ಉದ್ಯೋಗಿಗಳ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ನಡೆಯುತ್ತಿರುವ ತನಿಖೆಗಳಿಗೆ ಕಂಪನಿಯು ತನ್ನ ಸಂಪೂರ್ಣ ಸಹಕಾರವನ್ನು ನೀಡುತ್ತಿದೆ” ಎಂದು ಚಂದ್ರಶೇಖರನ್ ಹೇಳಿದ್ದಾರೆ.
“ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ನ ನಾಸಿಕ್ ಶಾಖೆಯಿಂದ ಬಂದಿರುವ ದೂರುಗಳು ಮತ್ತು ಆರೋಪಗಳು ತೀವ್ರ ಕಳವಳಕಾರಿ ಮತ್ತು ದುಃಖಕರವಾಗಿವೆ. ಆರೋಪಿ ಉದ್ಯೋಗಿಗಳ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಕಂಪನಿಯು ನಡೆಯುತ್ತಿರುವ ತನಿಖೆಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿದೆ” ಎಂದು ಚಂದ್ರಶೇಖರನ್ ಪ್ರತಿಕ್ರಿಯೆ ನೀಡಿದ್ದಾರೆ.
ಟಿಸಿಎಸ್ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಆರತಿ ಸುಬ್ರಮಣಿಯನ್ ಈ ಪ್ರಕರಣದ ತನಿಖೆಯ ನೇತೃತ್ವ ವಹಿಸಲಿದ್ದಾರೆ. ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಟಾಟಾ ಗ್ರೂಪ್ ಸೂಕ್ತ ಮತ್ತು ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಚಂದ್ರಶೇಖರನ್ ಹೇಳಿದ್ದಾರೆ.
ಮಾರ್ಚ್ನಲ್ಲಿ ಟಿಸಿಎಸ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿ ತನ್ನ ಸಹೋದ್ಯೋಗಿಯೊಬ್ಬರು ಮದುವೆಯ ಭರವಸೆ ನೀಡುವ ಮೂಲಕ ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದಿದ್ದಾರೆಂದು ಆರೋಪಿಸಿ ದೂರು ಸಲ್ಲಿಸಿದ್ದರು. ಈ ಪ್ರಕರಣದ ತನಿಖೆಯ ಸಮಯದಲ್ಲಿ ಪೊಲೀಸರು ಟಿಸಿಎಸ್ ಉದ್ಯೋಗಿಯ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಧಾರ್ಮಿಕ ಮತಾಂತರ ಪ್ರಕರಣಗಳಿಗೆ ಸಂಬಂಧಿಸಿದಂತೆ 8 ಎಫ್ಐಆರ್ಗಳನ್ನು ದಾಖಲಿಸಿದ್ದರು.
ಇಲ್ಲಿಯವರೆಗೆ, ಟಿಸಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ 7 ಜನರನ್ನು ಬಂಧಿಸಲಾಗಿದೆ. ನಾಸಿಕ್ ಪೊಲೀಸ್ ಆಯುಕ್ತರ ಕಚೇರಿಗೆ ಬಂದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಆಸಿಫ್ ಅನ್ಸಾರಿ, ಶಫಿ ಶೇಖ್, ಶಾರುಖ್ ಖುರೇಷಿ, ರಜಾ ಮೆಮನ್, ತೌಸಿಫ್ ಅತ್ತಾರ್ ಮತ್ತು ಡ್ಯಾನಿಶ್ ಶೇಖ್ ಎಂದು ಗುರುತಿಸಲಾಗಿದೆ. ಇವರ ಜೊತೆಗೆ ಗುರುತು ಪತ್ತೆಯಾಗದ ಮಹಿಳೆಯೂ ಇದ್ದಾರೆ ಎನ್ನಲಾಗಿದೆ. ಈ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ವಿಜಯಪುರ, ಏಪ್ರಿಲ್ 13: ಜಿಲ್ಲೆಯಲ್ಲಿನ ಸರ್ಕಾರಿ ಇಲಾಖೆಯ ಅಧಿಕಾರಿಗಳು (government offices) ಹಾಗೂ ಸಿಬ್ಬಂದಿ ಅನ್ನ ಹೇಳುವವರು, ಕೇಳುವವರು ಯಾರೂ ಇಲ್ಲವಾಗಿದೆ. ಕಾರಣ ಯಾರೋಬ್ಬರು ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸುತ್ತಿಲ್ಲ. ಬಿಸಿಲಿನ (summer) ಕಾರಣ ಎಲ್ಲಾ ಸರ್ಕಾರಿ ಇಲಾಖೆಗಳ ಸಮಯ ಬೆಳಿಗ್ಗೆ 8ರಿಂದ ಮದ್ಯಾಹ್ನ 1:30 ರವರೆಗೆ ನಿಗದಿ ಮಾಡಲಾಗಿದೆ. ಆದರೆ 9ಗಂಟೆಯಾದರೂ ಅಧಿಕಾರಿಗಳು, ಸಿಬ್ಬಂದಿ ಕಚೇರಿಗೆ ಆಗಮಿಸದೇ ಸೇವಾ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚುತ್ತಿರುವ ತೀವ್ರ ಬಿಸಿಲು ಜನ ಜೀವನದ ಮೇಲೆ ಪರಿಣಾಮ ಬೀರಿದೆ. ಬಿಸಿಲಿನ ತಾಪಮಾನದಿಂದ ಜನತೆ ಬಸವಳಿಯುತ್ತಿದೆ. ಇದನ್ನು ಮನಗಂಡ ಸರ್ಕಾರ ವಿವಿಧ ಸರ್ಕಾರಿ ಕಚೇರಿಗಳ ಕಾರ್ಯ ಸಮಯವನ್ನು ಬದಲಿಸಿದೆ. ಏಪ್ರಿಲ್ 1 ರಿಂದ ಮೇ ತಿಂಗಳ ಕೊನೆಯವರೆಗೆ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ಜಿಲ್ಲೆಗಳ ಸರ್ಕಾರಿ ಕಚೇರಿಗಳಿಗೆ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1-30ರವರೆಗೆ ಕೆಲಸದ ಸಮಯ ನಿಗದಿಪಡಿಸಲಾಗಿದೆ. ಆದರೆ ಸಮಯ ಬದಲಾವಣೆಯಾದರೂ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ಲಕ್ಷ್ಯ ಮುಂದುವರಿದಿದೆ ಎಂಬ ಆರೋಪ ಕೇಳಿಬಂದಿದೆ.
ಹಲವು ಇಲಾಖೆಗಳ ಕಚೇರಿಗಳಲ್ಲಿ ಸಿಬ್ಬಂದಿ ಬೆಳಿಗ್ಗೆ 8 ಗಂಟೆಗೆ ಹಾಜರಾಗದೆ, 9ಗಂಟೆಯಾದರೂ ಕಚೇರಿಗೆ ಬಾರದ ಸ್ಥಿತಿ ಕಂಡುಬರುತ್ತಿದೆ. ಯೋಜನಾ ನಿರ್ದೇಶಕರ ಕಾರ್ಯಾಲಯ, ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ, ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ಉಪ ನಿರ್ದೇಶಕರ ಕಚೇರಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಸೇರಿದಂತೆ ಹಲವೆಡೆ ಈ ನಿರ್ಲಕ್ಷ್ಯ ಕಂಡುಬಂದಿದೆ.
ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
ಸರ್ಕಾರಿ ಕೆಲಸವನ್ನು ದೇವರ ಕೆಲಸ ಎಂದು ಪರಿಗಣಿಸಿದರೂ, ನಿಗದಿತ ಸಮಯಕ್ಕೆ ಅಧಿಕಾರಿಗಳು ಹಾಜರಾಗದೇ ಜನರ ಕೆಲಸ ವಿಳಂಬವಾಗುತ್ತಿದೆ. ತಡವಾಗಿ ಬರುವ ಸಿಬ್ಬಂದಿ ಮಧ್ಯಾಹ್ನಕ್ಕೂ ಮುನ್ನವೇ ಕಚೇರಿ ತೊರೆಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬಿಸಿಲಿನ ತೀವ್ರತೆಯನ್ನು ಮನಗಂಡು ಸರ್ಕಾರ ಸಮಯ ಬದಲಾವಣೆ ಮಾಡಿದ್ದರೂ, ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿ ಅದನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದಾಗಿ ಆರೋಪಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ನಿಗದಿತ ಸಮಯಕ್ಕೆ ಬಾರದಿದ್ದರೆ ಹಾಜರಾತಿ ಗೈರು
ಸರ್ಕಾರದ ಆದೇಶದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಳಿಗ್ಗೆ 8 ಗಂಟೆಗೆ ಸೇವೆಗೆ ಹಾಜರಾಗಲೇಬೇಕು. ಮಧ್ಯಾಹ್ನ 1:30 ರವರೆಗೆ ಕೆಲಸ ಮಾಡಬೇಕು. ಆದರೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನಿಗದಿತ ಸಮಯಕ್ಕೆ ಯಾರೊಬ್ಬ ಅಧಿಕಾರಿಗಳು ಆಗಮಿಸುತ್ತಿಲ್ಲ. ಮನಸ್ಸಿಗೆ ಬಂದಂತೆ ಕರ್ತವ್ಯ ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ವಿ ವಿ ಸಾಲೀಮಠ ಇಲಾಖೆಯ ಇತರೆ ಅಧಿಕಾರಿಗಳು, ಸಿಬ್ಬಂದಿ ಹಾಜರಾತಿ ಪುಸ್ತಕವನ್ನು ತಮ್ಮ ಚೇಂಬರ್ನಲ್ಲೇ ಇಟ್ಟುಕೊಂಡಿದ್ದಾರೆ. ನಿಗದಿತ ಸಮಯಕ್ಕೆ ಸರಿಯಾಗಿ ಬಾರದ ಅಧಿಕಾರಿಗಳು, ಸಿಬ್ಬಂದಿ ಹಾಜರಾತಿಯನ್ನು ಗೈರು ಎಂದು ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.
ಡಿಸಿ ಕೆ ಆನಂದ್ ಹೇಳಿದ್ದಿಷ್ಟು
ಇನ್ನು ಈ ವಿಷಯ ಕುರಿತು ಡಿಸಿ ಕೆ ಆನಂದ್ ಪ್ರತಿಕ್ರಿಯಿಸಿದ್ದು, ಬಿಸಿಲಿನ ಕಾರಣ ಏಪ್ರಿಲ್ 1 ರಿಂದ ಮೇ ಕೊನೆಯವರೆಗೆ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳ ಸಮಯ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1-30 ರವರೆಗೆ ಮಾಡಲಾಗಿದೆ. ನಿಗದಿತ ಸಮಯಕ್ಕೆ ಅಧಿಕಾರಿಗಳು, ಸಿಬ್ಬಂದಿ ಹಾಜರಾಗಬೇಕು. ಇಲ್ಲವಾದರೆ ಮೊದಲಿಗೆ ನೋಟಿಸ್ ಜಾರಿ ಮಾಡಲಾಗುತ್ತದೆ. ಆಗಲೂ ಸರಿಯಾಗಿ ಸೇವೆಗೆ ಹಾಜರಾಗದಿದ್ದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಸದ್ಯ ವಿಜಯಪುರ ಜಿಲ್ಲೆಯ ಸರ್ಕಾರಿ ಕಚೇರಿಗಳ ಅಧಿಕಾರಿಗಳಿಗೆ, ಸಿಬ್ಬಂದಿಗೆ ಒಂದು ರೀತಿಯ ಸಮ್ಮರ್ ವೆಕೇಷನ್ ಎಂಬಂತಾಗಿದೆ. ಬಿಸಿಲಿನ ಕಾರಣ ಕಚೇರಿ ಸಮಯ ಬದಲಾವಣೆಯಾಗಿದ್ದರೂ ಸರಿಯಾಗಿ ಕಚೇರಿಗೆ ಆಗಮಿಸದ ಅಧಿಕಾರಿಗಳು, ಸಿಬ್ಭಂದಿ ಮೇಲೆ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಕ್ರಮ ತೆಗೆದುಕೊಳ್ಳಬೇಕಿದೆ. ಇಲ್ಲವಾದರೆ ಸಾರ್ವಜನಿಕರಿಗೆ ಸಮಸ್ಯೆ ಮುಂದುವರೆಯಲಿದೆ.
ಚಿಕ್ಕಮಗಳೂರು, (ಏಪ್ರಿಲ್ 13): ಎನ್ಆರ್ಪುರ (NR Pura) ಪಟ್ಟಣದ ಹೊರಹೊಲಯದಲ್ಲಿ ನಿರ್ಮಾಣಗೊಂಡಿರುವ ತಮ್ಮದೇ ಹೆಸರಿನ ಸೇತುವೆಯನ್ನು (Siddaramaiah Bridge) ಸಿಎಂ ಸಿದ್ದರಾಮಯ್ಯ (Siddaramaiah) ಇಂದು (ಏಪ್ರಿಲ್ 13) ಉದ್ಘಾಟಿಸಿದ್ದಾರೆ. ಭದ್ರಾ ಹಿನ್ನೀರಿನ ಹಂದೂರು ಬಳಿ 38 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಅರ್ಧ ಕಿಲೋ ಮೀಟರ್ ಉದ್ದದ ಸೇತುವೆ ಇದಾಗಿದ್ದು, ಹತ್ತಾರು ಹಳ್ಳಿ ಗ್ರಾಮಸ್ಥರ 6 ದಶಕಗಳ ಕನಸು ನನಸಾಗಿದೆ. ಈ ಸೇತುವೆ ನಿರ್ಮಾಣದಿಂದ 10ಕ್ಕೂ ಹೆಚ್ಚು ಹಳ್ಳಿಗಳಿಗೆ ವರದಾನವಾಗಿದ್ದು, ಗ್ರಾಮಸ್ಥರು ಪಟ್ಟಣಕ್ಕೆ ಬರಲು ಮೊದಲು 30 ಕಿಮೀ ಸುತ್ತಿ ಬರಬೇಕಿತ್ತು. ಈ ದೂರವನ್ನು ಸೇತುವೆ ಕೇವಲ 3 ಕಿಮೀಗೆ ಇಳಿಸಿದೆ.
ಸೇತುವೆಗೆ ಸಿದ್ದರಾಮಯ್ಯ ಹೆಸರು
504 ಮೀಟರ್ ಉದ್ಧದ ಈ ಸೇತುವೆಗೆ ‘ಸಿದ್ದರಾಮಯ್ಯ’ ಎಂದು ಹೆಸರಿಡಲಾಗಿದೆ. ಸುಮಾರು 38 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಸೇತುಗೆ 2017 ರಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದ್ದರು. ಈಗ ಅವರೇ ಈ ಸೇತುವೆಯನ್ನು ಲೋಕಾರ್ಪಣೆ ಮಾಡಿದ್ದಾರೆ. ಈ ಸೇತುವೆಯಿಂದ ಹತ್ತಾರು ಹಳ್ಳಿಗಳಿಗೆ ಜೀವ ಬಂದಂತಾಗಿದೆ.
ಈ ಸೇತುವೆ ಮೇಲೆ ಎರಡು ಅಡಿಗಳಷ್ಟು ಎತ್ತರದ ಕೃಷ್ಣ ಶಿಲೆಯ ಕಲ್ಲಿನಿಂದ ಸಿದ್ದರಾಮಯ್ಯ ಅವರ ಪುತ್ಥಳಿ ನಿರ್ಮಾಣ ಮಾಡಲಾಗಿದೆ. ಸಿದ್ದರಾಮಯ್ಯ ಅವರ ಅಭಿಮಾನಿಗಳು ,MLC ಶ್ರೀನಿವಾಸ್ ಅವರು ಸೇತುವೆ ಮೇಲೆ ಸಿದ್ದರಾಮಯ್ಯ ಅವರ ಪುತ್ಥಳಿ ನಿರ್ಮಾಣ ಮಾಡಿದ್ದಾರೆ. ಗ್ರಾಮ ಪಂಚಾಯತಿಯಿಂದ ಸಿದ್ದರಾಮಯ್ಯ ಸೇತುವೆಗೆ ಹೆಸರು ಮತ್ತು ಪುತ್ಥಳಿಗೆ ಅನುಮತಿ ಪಡೆದಿದ್ದು, ಇಂದು ಸಚಿವ ಕೆ.ಜೆ ಜಾರ್ಜ್ ಸಿದ್ದರಾಮಯ್ಯ ಪುತ್ಥಳಿ ಅನಾವರಣ ಮಾಡಿದ್ದಾರೆ.
30 ಕಿಮೀಟರ್ನಿಂದ 3 ಕಿಮೀಗೆ ಇಳಿಕೆ
ಭದ್ರಾ ಹಿನ್ನೀರಿನಲ್ಲಿ ಸೇತುವೆ ನಿರ್ಮಾಣದಿಂದ NR ಪುರ ನಗರಕ್ಕೆ ಬರಲು ಅನುಕೂಲವಾಗಿದ್ದು , ಭದ್ರಾ ಹಿನ್ನೀರಿನ ಹಂದೂರು ಬಳಿ 38 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ 58 ಮೀಟರ್ ಉದ್ದದ ಸೇತುವೆ ಇದಾಗಿದೆ. ಹತ್ತಾರು ಹಳ್ಳಿ ಗ್ರಾಮಸ್ಥರು 6 ದಶಕಗಳಿಂದ ಸೇತುವೆಗೆ ಬೇಡಿಕೆ ಇಟ್ಟಿದ್ದರು. ಸೇತುವೆ ನಿರ್ಮಾಣದಿಂದ 10ಕ್ಕೂ ಹೆಚ್ಚು ಹಳ್ಳಿಗಳಿಗೆ ವರದಾನವಾಗಿದೆ. ಗ್ರಾಮಸ್ಥರು ಪಟ್ಟಣಕ್ಕೆ ಬರಲು ಮೊದಲು 30 ಕಿಮೀ ಸುತ್ತಿ ಬರಬೇಕಿತ್ತು. ಈ ದೂರವನ್ನು ಸೇತುವೆ ಕೇವಲ 3 ಕಿಮೀಗೆ ಇಳಿಸಿದೆ.
ಪ್ರವಾಸಿ ತಾಣವಾದ ಸೇತುವೆ
ನೂತನ ಸೇತುವೆ ಈಗ ಸಾವಿರಾರು ಜನರಿಗೆ ಉಪಯೋಗ ಆಗುವ ಜೊತೆಗೆ ಒಂದು ರೀತಿಯ ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ. ಭದ್ರಾ ನೀರಿನಲ್ಲಿ ನಿರ್ಮಿಸಿರುವುದರಿಂದ ಸುತ್ತಲು ಹಚ್ಚ ಹಸಿರು, ನೀರಿನಿಂದ ಕಂಗೊಳಿಸುತ್ತಿದ್ದು, ಈ ಸೇತುವೆಯನ್ನು ನೋಡಲು ಜಿಲ್ಲೆಯ ವಿವಿಧ ಭಾಗದಿಂದ ಜನರು ಸಂಜೆ ವೇಳೆ ಆಗಮಿಸುತ್ತಿದ್ದಾರೆ. ಸೇತುವೆ ಮೇಲೆ ನಿಂತು ಅದ್ಭುತ ಪ್ರಕೃತಿ ಸೌದರ್ಯವನ್ನು ಕಣ್ತುಂಬಿಕೊಂಡು ಖುಷಿ ಪಡುತ್ತಿದ್ದಾರೆ.
ಐಪಿಎಲ್ 2026 ರಲ್ಲಿ ಈಗಾಗಲೇ 20 ಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಪೂರ್ಣ ವೇಳಾಪಟ್ಟಿಯನ್ನು ಕೂಡ ಈಗಾಗಲೇ ಘೋಷಿಸಲಾಗಿದೆ. ಆದಾಗ್ಯೂ, ಲೀಗ್ ಆರಂಭವಾದ ಎರಡು ವಾರಗಳ ಬಳಿಕ ಬಿಸಿಸಿಐ ಇದ್ದಕ್ಕಿದ್ದಂತೆ ವೇಳಾಪಟ್ಟಿಯಲ್ಲಿ ಗಮನಾರ್ಹ ಬದಲಾವಣೆಯನ್ನು ಮಾಡಿದೆ. ಅದರಂತೆ ಎರಡು ಪ್ರಮುಖ ಪಂದ್ಯಗಳ ದಿನಾಂಕಗಳು ಮತ್ತು ಸ್ಥಳಗಳನ್ನು ಬದಲಾಯಿಸಲಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಎರಡು ಪಂದ್ಯಗಳಿಗೆ ಸಂಬಂಧಿಸಿದಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
2 ಪಂದ್ಯಗಳ ಸ್ಥಳ ಬದಲು
ಈ ಬಗ್ಗೆ ಏಪ್ರಿಲ್ 13 ರಂದು ಬಿಸಿಸಿಐ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ. ಈ ಆವೃತ್ತಿಯಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಎರಡು ಪಂದ್ಯಗಳು ನಡೆಯಲಿವೆ. ಆರಂಭಿಕ ವೇಳಾಪಟ್ಟಿಯ ಪ್ರಕಾರ, ಎರಡೂ ತಂಡಗಳ ನಡುವಿನ ಮೊದಲ ಪಂದ್ಯವನ್ನು ಏಪ್ರಿಲ್ 26 ರಂದು ಮಧ್ಯಾಹ್ನ 3:30 ಕ್ಕೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಿಗದಿಪಡಿಸಲಾಗಿತ್ತು. ಆದಾಗ್ಯೂ, ಈ ಪಂದ್ಯವನ್ನು ಈಗ ಅಹಮದಾಬಾದ್ ಬದಲಿಗೆ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಅದೇ ಸಮಯ ಮತ್ತು ದಿನಾಂಕದಂದು ನಡೆಸಲಾಗುವುದು.
NEWS @gujarat_titans – @ChennaiIPL fixtures swapped for April 26 and May 21, owing to municipal corporation elections in Ahmedabad and other parts of Gujarat!
ಅದೇ ರೀತಿ, ಎರಡೂ ತಂಡಗಳ ನಡುವಿನ ಎರಡನೇ ಪಂದ್ಯವು ಮೇ 21 ರಂದು ಚೆನ್ನೈನಲ್ಲಿ ನಡೆಯಬೇಕಿತ್ತು. ಈ ಪಂದ್ಯವು ಮೂಲತಃ ಸಂಜೆ 7:30 ಕ್ಕೆ ಆರಂಭವಾಗಬೇಕಿತ್ತು, ಆದರೆ ಈಗ ಚಿದಂಬರಂ ಕ್ರೀಡಾಂಗಣದ ಬದಲಿಗೆ ಅದೇ ದಿನಾಂಕದಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಇದರರ್ಥ ಪಂದ್ಯಗಳ ದಿನಾಂಕಗಳು ಮತ್ತು ಸಮಯಗಳಲ್ಲಿ ಯಾವುದೇ ಬದಲಾವಣೆಗಳಾಗಿಲ್ಲವಾದರೂ ಸ್ಥಳಗಳನ್ನು ಮಾತ್ರ ಬದಲಾಯಿಸಲಾಗಿದೆ.
ಸ್ಥಳ ಬದಲಾವಣೆಗೆ ಕಾರಣವೇನು?
ಬಿಸಿಸಿಐ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಚುನಾವಣೆ. ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿದ್ದು, ಏಪ್ರಿಲ್ 26 ರಂದು ಅಹಮದಾಬಾದ್ ಸೇರಿದಂತೆ ಗುಜರಾತ್ನ ಹಲವಾರು ಭಾಗಗಳಲ್ಲಿ ಪುರಸಭೆ ಚುನಾವಣೆಗಳು ನಡೆಯಲಿವೆ. ಪರಿಣಾಮವಾಗಿ, ಏಪ್ರಿಲ್ 26 ರಂದು ಅಹಮದಾಬಾದ್ನಲ್ಲಿ ಪಂದ್ಯವನ್ನು ನಡೆಸುವುದು ಭದ್ರತಾ ದೃಷ್ಟಿಕೋನದಿಂದ ಸವಾಲಿನದ್ದಾಗಿತ್ತು. ಈ ಹಿನ್ನೆಲೆಯಲ್ಲಿ ಮಂಡಳಿಯು ಈ ಬದಲಾವಣೆಯನ್ನು ಮಾಡಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಸಂಸ್ಥಾಪಕ ದಳಪತಿ ವಿಜಯ್ ಅವರ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆಗೂ ಮುನ್ನವೇ ಸೋರಿಕೆಯಾಗಿ ದೊಡ್ಡ ವಿವಾದ ಸೃಷ್ಟಿಸಿದೆ. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಸ್ಥಳೀಯ ಕೇಬಲ್ ಟಿವಿ (Cable Tv) ಆಪರೇಟರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಂಬತ್ತೂರು ಜಿಲ್ಲೆಯ ಕರುಮತ್ತಂಪಟ್ಟಿ ನಿವಾಸಿ ಎಸ್. ಪಳನಿಸ್ವಾಮಿ ಎಂಬಾತ ಬಂಧಿತ ಆರೋಪಿ. ಈತ ಆ ಭಾಗದಲ್ಲಿ ‘ರಾಶಿ ಕೇಬಲ್ ಟಿವಿ’ ಎಂಬ ಚಾನೆಲ್ ನಡೆಸುತ್ತಿದ್ದಾನೆ.
ಏಪ್ರಿಲ್ 11ರಂದು ರಾತ್ರಿ ಪಳನಿಸ್ವಾಮಿ ಒಡೆತನದ ‘ರಾಶಿ ಪ್ರೈಮ್ ಮೂವೀಸ್’ ಎಂಬ ಸ್ಥಳೀಯ ಚಾನೆಲ್ನಲ್ಲಿ ಲೀಕ್ ಆದ ‘ಜನ ನಾಯಗನ್’ ಸಿನಿಮಾವನ್ನು ಪ್ರಸಾರ ಮಾಡಲಾಗಿತ್ತು. ವರದಿಗಳ ಪ್ರಕಾರ, ಚಿತ್ರದ ವಿರಾಮದ ನಂತರ ಸುಮಾರು 21 ನಿಮಿಷಗಳ ಕಾಲ ಸಿನಿಮಾವನ್ನು ಕಾನೂನುಬಾಹಿರವಾಗಿ ಪ್ರಸಾರ ಮಾಡಲಾಗಿದೆ. ಇದನ್ನು ಗಮನಿಸಿದ ವಿಜಯ್ ಅವರ ಪಕ್ಷದ ಪದಾಧಿಕಾರಿ ಮೋಹನಪ್ರಿಯಾ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು.
ದೂರು ದಾಖಲಾಗುತ್ತಿದ್ದಂತೆಯೇ ಕರುಮತ್ತಂಪಟ್ಟಿ ಪೊಲೀಸರು ಕೇಬಲ್ ಟಿವಿ ಕಚೇರಿಗೆ ಧಾವಿಸಿ ಪ್ರಸಾರವನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಆದೇಶಿಸಿದರು. ಅಲ್ಲದೇ, ತಲೆಮರೆಸಿಕೊಂಡಿದ್ದ ಪಳನಿಸ್ವಾಮಿಯನ್ನು ಸೋಮವಾರ (ಏಪ್ರಿಲ್ 13) ಪೊಲೀಸರು ಬಂಧಿಸಿದ್ದಾರೆ. ಆತನಿಂದ 4 ಹಾರ್ಡ್ ಡಿಸ್ಕ್ಗಳು ಮತ್ತು 1 ಪರ್ಸನಲ್ ಕಂಪ್ಯೂಟರ್ ವಶಕ್ಕೆ ಪಡೆಯಲಾಗಿದೆ.
ಆರೋಪಿಯ ವಿರುದ್ಧ ಕಾಪಿರೈಟ್ ಕಾಯ್ದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಸಿನಿಮಾಟೋಗ್ರಾಫ್ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ‘ಜನ ನಾಯಗನ್ ಸಿನಿಮಾದ ಪೈರಸಿ ಕಾಪಿ ಈತನಿಗೆ ಎಲ್ಲಿಂದ ಸಿಕ್ಕಿತು ಎಂಬ ಬಗ್ಗೆ ನಾವು ಆಳವಾದ ತನಿಖೆ ನಡೆಸುತ್ತಿದ್ದೇವೆ’ ಎಂದು ಡಿಎಸ್ಪಿ ಕರಿಕಾಳ ಪರಿ ಶಂಕರ್ ತಿಳಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಇದಲ್ಲದೇ, ಸೈಬರ್ ಪೊಲೀಸರು ಪೈರಸಿ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡಿದ್ದು, 6 ಜನರನ್ನು ಬಂಧಿಸಿದ್ದಾರೆ.
‘ಜನ ನಾಯಗನ್’ ಚಿತ್ರವು ವಿಜಯ್ ಅವರ ರಾಜಕೀಯ ಜೀವನದ ದೃಷ್ಟಿಯಿಂದ ಅತ್ಯಂತ ಪ್ರಮುಖ ಚಿತ್ರವಾಗಿದ್ದು, ನೂರಾರು ಕೋಟಿ ಹೂಡಿಕೆ ಮಾಡಲಾಗಿದೆ. ಈ ರೀತಿ ಸಿನಿಮಾ ಲೀಕ್ ಮಾಡಿ ಪ್ರಸಾರ ಮಾಡುವುದು ಚಿತ್ರೋದ್ಯಮಕ್ಕೆ ದೊಡ್ಡ ನಷ್ಟ ಉಂಟುಮಾಡುತ್ತದೆ ಎಂದು ಚಿತ್ರತಂಡ ಆತಂಕ ವ್ಯಕ್ತಪಡಿಸಿದೆ. ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ಈ ಸಿನಿಮಾವನ್ನು ನಿರ್ಮಿಸಿದೆ.