ಸಲ್ಮಾನ್ ಖಾನ್ ತಂದೆ ಸಲೀಂ ಆರೋಗ್ಯ ಹೇಗಿದೆ? ವೈದ್ಯರಿಂದ ಗುಡ್​ನ್ಯೂಸ್ – Kannada News | Salim Khan Hospitalized on Ventilator: Doctors Confirm Stable Condition, Fans Relieved

ನಟ ಸಲ್ಮಾನ್ ಖಾನ್ ಅವರ ತಂದೆ ಮತ್ತು ಬಾಲಿವುಡ್‌ನ ಹಿರಿಯ ಬರಹಗಾರ ಸಲೀಂ ಖಾನ್ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದು ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿದೆ. ಸಲೀಂ ಖಾನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರಬಹುದು ಎಂಬುದು ಅನೇಕರ ಊಹೆ. ಆದರೆ, ಈ ಬಗ್ಗೆ ವೈದ್ಯರು ಸ್ಪಷ್ಟನೆ ನೀಡಿದ್ದಾರೆ, ‘ಸಲೀಂ ಖಾನ್ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ ಎಂದರೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ಅರ್ಥವಲ್ಲ. ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಅವರ ಆರೋಗ್ಯ ಸುಧಾರಿಸುತ್ತಿದೆ’ ಎಂದು ಲೀಲಾವತಿ ಆಸ್ಪತ್ರೆಯ ಡಾ. ಜಲೀಲ್ ಪಾಟ್ಕರ್ ಹೇಳಿದ್ದಾರೆ.

ಡಾ. ಜಲೀಲ್ ಪಾಟ್ಕರ್ ನೀಡಿದ ಮಾಹಿತಿಯ ಪ್ರಕಾರ , ‘ಸಲೀಂ ಖಾನ್ ಅವರನ್ನು ಮಂಗಳವಾರ ರಾತ್ರಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬ ವೈದ್ಯ ಸಂದೀಪ್ ಚೋಪ್ರಾ ಅವರ ಸಲಹೆಯ ಮೇರೆಗೆ, ಸಲೀಂ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಯಿತು. ಮೊದಲ ಪರೀಕ್ಷೆಯ ನಂತರ, ಅವರಿಗೆ ತಕ್ಷಣದ ಚಿಕಿತ್ಸೆಯ ಅಗತ್ಯವಿದೆ ಎಂದು ನಮಗೆ ಅರಿವಾಯಿತು. ಆದ್ದರಿಂದ ಅವರನ್ನು ಐಸಿಯುಗೆ ದಾಖಲಿಸಲಾಯಿತು. ಅವರ ರಕ್ತದೊತ್ತಡ ಹೆಚ್ಚಾಗಿತ್ತು. ಆದ್ದರಿಂದ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಯಿತು’ ಎಂದಿದ್ದಾರೆ.

‘ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ಹಾಗಂತ ಅವರ ಸ್ಥಿತಿ ಗಂಭೀರವಾಗಿಲ್ಲ. ಅಗತ್ಯವಿರುವ ಎಲ್ಲಾ ಪರೀಕ್ಷೆಗಳನ್ನು ಮಾಡಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ. ನಾಳೆ ಅವರನ್ನು ವೆಂಟಿಲೇಟರ್‌ನಿಂದ ತೆಗೆದುಹಾಕಲಾಗುತ್ತದೆ. ಅವರ ವಯಸ್ಸಿನ ಕಾರಣದಿಂದಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದೆ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದಿದ್ದಾರೆ ಜಲೀಲ್. ಸಲೀಂ ಖಾನ್ ಅವರಿಗೆ 90 ವರ್ಷ ವಯಸ್ಸಾಗಿದೆ. ಹೀಗಾಗಿ, ಭಯದ ವಾತಾವರಣ ನಿರ್ಮಾಣ ಆಗಿದೆ. ಆದರೆ, ವೈದ್ಯರು ನೀಡಿದ ಮಾಹಿತಿಯ ನಂತರ, ಕುಟುಂಬ ಮತ್ತು ಅಭಿಮಾನಿಗಳು ನಿರಾಳರಾಗಿದ್ದಾರೆ.

ಇದನ್ನೂ ಓದಿ: 55 ರೂಪಾಯಿ ಬಾಡಿಗೆ ರೂಮಿನಲ್ಲಿ ವಾಸವಾಗಿದ್ದ ಸಲ್ಮಾನ್​ ಖಾನ್​ ತಂದೆ ಸಲೀಂ ಖಾನ್

ಸಲೀಂ ಅನಾರೋಗ್ಯದ ಸುದ್ದಿ ತಿಳಿದ ನಂತರ ಇಡೀ ಖಾನ್ ಕುಟುಂಬ ಲೀಲಾವತಿ ಆಸ್ಪತ್ರೆಗೆ ಧಾವಿಸಿತು. ನಟ ಸಲ್ಮಾನ್ ಖಾನ್ ಕೂಡ ತಕ್ಷಣ ಆಸ್ಪತ್ರೆಗೆ ತಲುಪಿದರು. ಸಂಜಯ್ ದತ್ ಸೇರಿದಂತೆ ಅನೇಕರು ಆಗಮಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?

ರವಿಚಂದ್ರನ್ ಅವರು ತಮ್ಮ ನೇರ ನಡೆನುಡಿಗಳಿಂದ ಫೇಮಸ್ ಆದವರು. ಸಿನಿಮಾ ಬಗ್ಗೆ ಅವರಿಗೆ ಅಪಾರ ಪ್ರೇಮ. ಅವರು ಈಗ ಒಂದು ವಿಷಯದ ಬಗ್ಗೆ ಗರಂ ಆಗಿದ್ದಾರೆ. ಸಿನಿಮಾ ನೋಡಿ ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕುವವರ ವಿರುದ್ಧ ಅವರು ಕೋಪಗೊಂಡಿದ್ದಾರೆ. ಸಿನಿಮಾ ನೋಡಿದ ಬಳಿಕ ಅದು ಹೇಗಿದೆ ಎಂದು ಕೇಳೋದು ಕೂಡ ಸರಿ ಅಲ್ಲ ಎಂಬುದು ಅವರ ಅಭಿಪ್ರಾಯ. ಅವರು ಆಡಿದ ಮಾತಿನ ಸಂಪೂರ್ಣ ವಿಡಿಯೋ ಮೇಲಿದೆ ಕೇಳಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bengaluru: KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ! – Kannada News | Bengaluru KSRTC Bus Robbery: Ticket Vending Machine Stolen

ಬೆಂಗಳೂರು, ಫೆಬ್ರವರಿ 19: ಮೆಜೆಸ್ಟಿಕ್​​ನ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳ ಬಸ್ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದಿದ ಘಟನೆ ನಡೆದಿದೆ. ಬೆಂಗಳೂರು-ಶಿರಸಿ ಮಾರ್ಗದ ನಾನ್-ಎಸಿ ಸ್ಲೀಪರ್ ಬಸ್‌ನಲ್ಲಿ ಈ ಘಟನೆ ನಡೆದಿದ್ದು, ಕಂಡಕ್ಟರ್ ಬ್ಯಾಗ್‌ನಲ್ಲಿದ್ದ ಟಿಕೆಟ್ ಮೆಷಿನ್ ಕಳ್ಳತನವಾಗಿದೆ. ಕೃತ್ಯದಿಂದಾಗಿ, ಮೆಜೆಸ್ಟಿಕ್ ನಿಲ್ದಾಣದಲ್ಲಿ ಬಸ್ ಎರಡು ಗಂಟೆಗಳ ಕಾಲ ನಿಂತಲ್ಲೇ ನಿಂತಿದ್ದು, ಬಸ್ ಸಿಬ್ಬಂದಿ ಮತ್ತು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದಾರೆ.  ಅಂತಿಮವಾಗಿ ಸಿಬ್ಬಂದಿ ಮ್ಯಾನುವಲ್​​ ಟಿಕೆಟ್ ನೀಡಿ ಬಸ್ ಸೇವೆ ಆರಂಭಿಸಿದ್ದಾರೆ. ಖದೀಮರು ಬ್ಯಾಗ್ ಕದ್ದೊಯ್ಯುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ದೃಶ್ಯಾವಳಿಗಳು ಟಿವಿ9ಗೆ ಲಭ್ಯವಾಗಿವೆ. ಘಟನೆ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಪ್ರದೀಪ್,​​ ಟಿವಿ9 ಬೆಂಗಳೂರು

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ – Kannada News | Short Circuit Causes Blaze, Destroys Car at Bengalurus Majestic Railway Parking

ಬೆಂಗಳೂರು, ಫೆ.19: ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ ಕಾರಿಗೆ  ಬೆಂಕಿ ಹೊತ್ತಿಕೊಂಡ ಘಟನೆಯೊಂದು. ಹಲವು ದಿನಗಳಿಂದ ಪಾರ್ಕಿಂಗ್ ಲಾಟ್‌ನಲ್ಲಿ ನಿಂತಿದ್ದ ಈ ಕಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. ಅಗ್ನಿ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದಾವಿಸಿದ್ದಾರೆ. ಬೆಂಕಿ ಪಕ್ಕದಲ್ಲಿದ್ದ ಇತರ ಕಾರುಗಳಿಗೂ ಹರಡುವ ಸಾಧ್ಯತೆಯಿದ್ದುದರಿಂದ, ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ. ಆದರೂ, ಅಗ್ನಿ ಅವಘಡದಿಂದ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ರೈಲ್ವೆ ನಿಲ್ದಾಣದ ಪಾರ್ಕಿಂಗ್‌ನಲ್ಲಿ ಇಂತಹ ಅಗ್ನಿ ಅವಘಡ ಸಂಭವಿಸಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

31 ಕೇಸ್ ಇದ್ದರೂ 9 ವರ್ಷಗಳಿಂದ ಕಣ್ಣಾಮುಚ್ಚಾಲೆ: ರಂಜಾನ್​​ಗೆಂದು ವಿದೇಶದಿಂದ ಬಂದು ಲಾಕ್​​ ಆದ ಆರೋಪಿ – Kannada News | Safwan Hussain Arrested: Notorious Rowdy with 31 Cases Nabbed After 9 Years Abroad

ಮಂಗಳೂರು/ ರಾಮನಗರ, ಫೆಬ್ರವರಿ 19: ಆರೋಪಿಗಳು ಚಾಪೆ ಕೆಳಗೆ ತೂರಿದರೆ, ಪೊಲೀಸರು ರಂಗೋಲಿ ಕೆಳಗೆ ತೂರ್ತಾರೆ ಎನ್ನುವ ಮಾತು ಮತ್ತೊಮ್ಮೆ ಸಾಬೀತಾಗಿದೆ. ಒಂದೆರಡಲ್ಲ ಬರೋಬ್ಬರಿ 31 ಕೇಸ್​ಗಳಿದ್ದರು ಪೊಲೀಸರ ಕೈಗೆ ಸಿಗದೆ 9 ವರ್ಷಗಳಿಂದ ಕಣ್ಣಾಮುಚ್ಚಾಲೆ ಆಡುತ್ತಿದ್ದ ಆರೋಪಿಯನ್ನ ಕೊನೆಗೂ ಖಾಕಿ ಬಂಧಿಸಿದೆ. ರೌಡಿಶೀಟರ್ ಸಫ್ವಾನ್ ಹುಸೈನ್ (42) ಅರೆಸ್ಟ್​​ ಆದ ಆರೋಪಿಯಾಗಿದ್ದು, ಹೆಸರು ಬದಲಿಸಿಕೊಂಡು ಆರೋಪಿ ವಿದೇಶಕ್ಕೆ ಪರಾರಿಯಾಗಿದ್ದ. ರಂಜಾನ್​​ ಹಿನ್ನೆಲೆ ವಿದೇಶದಿಂದ ಈತ ಬಂದಿರುವ ಮಾಹಿತಿ ಆಧರಿಸಿ ಆಂಧ್ರ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿರುವ ಮಂಗಳೂರು ಸಿಸಿಬಿ ಪೊಲೀಸರು ಈತನನ್ನು ಖೆಡ್ಡಾಕ್ಕೆ ಕೆಡವಿದ್ದಾರೆ.

ಟಾರ್ಗೆಟ್ ಗ್ಯಾಂಗ್​​ನಲ್ಲಿ ಸಕ್ರಿಯನಾಗಿದ್ದ ರೌಡಿಶೀಟರ್ ಸಫ್ವಾನ್ ಹುಸೈನ್ ವಿರುದ್ಧ 2 ಕೊಲೆ, ಗ್ಯಾಂಗ್ ರೇಪ್, ಕೊಲೆಯತ್ನ, ದರೋಡೆ ಸೇರಿದಂತೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 31 ಪ್ರಕರಣಗಳಿವೆ. ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ, ಸರಗಳ್ಳತನದಲ್ಲಿಯೂ ಈತ ಭಾಗಿಯಾಗಿದ್ದ ಎನ್ನಲಾಗಿದೆ. ನಕಲಿ ಹೆಸರಿನಲ್ಲಿ ಆಧಾರ್ ಮಾಡಿಸಿ ಆಂಧ್ರ ಪ್ರದೇಶದಲ್ಲಿ ಉಮ್ಮರ್ ಮೊಹಮ್ಮದ್ ನಾಸಿರ್ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದ ಆರೋಪಿ, 2018ರಲ್ಲಿ ವಿದೇಶಕ್ಕೆ ಪರಾರಿಯಾಗಿದ್ದ. ಆದರೆ ಹಬ್ಬದ ಹಿನ್ನೆಲೆ ಈತ ದೇಶಕ್ಕೆ ಮರಳಿ ಬಂದಿರುವ ಮಾಹಿತಿ ಆಧಾರದಲ್ಲಿ ಎಸಿಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ಆಂಧ್ರ ಪ್ರದೇಶದ ರಾಯ್ ಚೋಟೆ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿರುವ ಮಂಗಳೂರು ಸಿಸಿಬಿ ಪೊಲೀಸರ ತಂಡ ಸಫ್ವಾನ್ ಹುಸೈನ್​​ನ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ: ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​; ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು

ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಪಾಪಿ ಪತಿ

ಪತ್ನಿಯನ್ನು ಪತಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ಯಾರಬ್​​ ನಗರದಲ್ಲಿ ನಡೆದಿದೆ. ಸೋಫಿಯಾ ಬಾನು(21) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ಸಲ್ಮಾನ್(22) ಆರೋಪಿಯಾಗಿದ್ದಾನೆ. ಪತ್ನಿಯನ್ನು ಹತ್ಯೆ ಮಾಡಿ ಈತ ತಾನೇ ಪೊಲೀಸ್​​ ಠಾಣೆಗೆ ಹೋಗಿ ಶರಣಾಗಿದ್ದು, ಕೌಟುಂಬಿಕ ಕಲಹ ಅಥವಾ ಅನೈತಿಕ ಸಂಬಂಧ ಹಿನ್ನೆಲೆ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ರಾಮನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

54ನೇ ವಯಸ್ಸಿನಲ್ಲಿ 20 ಕೆಜಿ ತೂಕ ಇಳಿಸಿಕೊಂಡ ಖುಷ್ಬೂ; ಸಾಧ್ಯವಾಗಿದ್ದು ಹೇಗೆ? – Kannada News | Khushboo Sundar: 20kg Weight Loss at 54 Proves Hard Work Overcomes Myths

54 ನೇ ವಯಸ್ಸಿನಲ್ಲಿಯೂ ನಟಿ ಖುಷ್ಬೂ ಅವರು 20 ಕೆಜಿ ದೇಹದ ತೂಕವನ್ನು ಕಳೆದುಕೊಂಡಿದ್ದಾರೆ. ಇಂಜೆಕ್ಷನ್ ಬಳಸಿ ಅವರು ತೂಕ ಕಳೆದುಕೊಂಡರು ಎಂದು ಕೆಲವರು ಹೇಳಿದ್ದಾರೆ. ಈ ವಿಷಯದಲ್ಲಿ ಅವರನ್ನು ಟ್ರೋಲ್ ಮಾಡಿದರು. ಆದರೆ, ಅವರು ತಮ್ಮ ಕಠಿಣ ಪರಿಶ್ರಮವನ್ನು ನಂಬಿದ್ದರು. ಅವರ ತೂಕ ಇಳಿಸುವಿಕೆಯ ಹಿಂದಿನ ಕಠಿಣ ಪರಿಶ್ರಮ ಮತ್ತು ಸಮಾಜದಲ್ಲಿನ ತಪ್ಪು ಕಲ್ಪನೆಗಳನ್ನು ಅವರು ಹೇಗೆ ನಿವಾರಿಸಿದರು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಖುಷ್ಬೂ ಅವರ ತೂಕ ಇಳಿಸುವ ಪ್ರಯಾಣವು 2020ರಲ್ಲಿ ಕಾಣಿಸಿಕೊಂಡ ಕೊರೊನಾ ಸಮಯದಲ್ಲಿ ಆರಂಭ ಆಯಿತು. ಆ ಸಮಯದಲ್ಲಿ, ಅವರ ತೂಕ 93 ಕೆಜಿ ಇತ್ತು. ಅಂದಿನಿಂದ, ಅವರು ಶಿಸ್ತುಬದ್ಧ ಜೀವನಶೈಲಿಯನ್ನು ಅಳವಡಿಸಿಕೊಂಡಿದ್ದಾರೆ. ಯೋಗ, ಜಿಮ್ ಮಾಡೋದು ಮತ್ತು ಕಟ್ಟುನಿಟ್ಟಿನ ಆಹಾರಕ್ರಮವನ್ನು ಅನುಸರಿಸುವ ಮೂಲಕ ಅವರು ತಮ್ಮ ದೇಹವನ್ನು ರೂಪಿಸಿಕೊಂಡಿದ್ದಾರೆ.

ಫಿಟ್ನೆಸ್‌ಗೆ ಅವರ ಸಮರ್ಪಣೆಗಾಗಿ ಖ್ಯಾತ ನಿರ್ದೇಶಕ ಆನಂದ್ ಕುಮಾರ್ ಅವರನ್ನು ಶ್ಲಾಘಿಸಿದ್ದಾರೆ. ಅವರು ಪ್ರತಿದಿನ 10,000 ರಿಂದ 15,000 ಹೆಜ್ಜೆಗಳನ್ನು ನಡೆಯುತ್ತಾರೆ ಮತ್ತು ಅವರು ಪ್ರಯಾಣ ಮಾಡುವಾಗಲೂ
ನಡೆಯುವುದನ್ನು ಎಂದಿಗೂ ನಿರ್ಲಕ್ಷಿಸುವುದಿಲ್ಲ.

40 ವರ್ಷದ ನಂತರ ತೂಕ ಇಳಿಸಿಕೊಳ್ಳುವುದು ಅಸಾಧ್ಯ ಎಂದು ಹಲವರು ಭಾವಿಸುತ್ತಾರೆ. ಆದರೆ ಖುಷ್ಬೂ ಅದನ್ನು ತಳ್ಳಿ ಹಾಕುತ್ತಾರೆ. ‘ವಯಸ್ಸಾದಂತೆ ಚಯಾಪಚಯ ಕ್ರಿಯೆ ನಿಧಾನವಾಗುತ್ತದೆ ನಿಜ, ಆದರೆ ಅದು ಸಂಪೂರ್ಣವಾಗಿ ನಿಲ್ಲುವುದಿಲ್ಲ. ನಾವು ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡುವುದರಿಂದ ಮತ್ತು ನಮ್ಮ ಹಳೆಯ ಆಹಾರ ಪದ್ಧತಿಯನ್ನು ಬದಲಾಯಿಸದ ಕಾರಣ ನಾವು ತೂಕ ಹೆಚ್ಚಿಸಿಕೊಳ್ಳುತ್ತೇವೆ’ ಎಂದು ಅವರು ಹೇಳಿದ್ದಾರೆ.

‘ತೂಕ ಇಳಿಸಿಕೊಳ್ಳಲು ಕೇವಲ ನಡೆಯುವುದು ಅಥವಾ ಓಡುವುದು ಸಾಕಾಗುವುದಿಲ್ಲ. ಸ್ನಾಯುಗಳ ಬಲವನ್ನು ಹೆಚ್ಚಿಸುವ ವ್ಯಾಯಾಮಗಳು ಸಹ ಅಗತ್ಯ. ಸ್ನಾಯುಗಳು ಬಲವಾಗಿದ್ದಷ್ಟೂ ಕ್ಯಾಲೊರಿಗಳು ವೇಗವಾಗಿ ಬರ್ನ್ ಆಗುತ್ತವೆ’ ಎನ್ನುತ್ತಾರೆ ಅವರು.

‘ಋತುಚಕ್ರದ ಸಮಯದಲ್ಲಿ ಹಾರ್ಮೋನುಗಳ ಬದಲಾವಣೆಗಳಿಂದ ತೂಕ ಹೆಚ್ಚಾಗುವುದು ಸಹಜ. ಆದಾಗ್ಯೂ, ಒತ್ತಡವನ್ನು ಕಡಿಮೆ ಮಾಡುವುದು, ಸರಿಯಾದ ನಿದ್ರೆ ಮಾಡುವುದು ಮತ್ತು ಪೌಷ್ಟಿಕ ಆಹಾರವನ್ನು ಸೇವಿಸುವ ಮೂಲಕ ಇದನ್ನು ನಿವಾರಿಸಬಹುದು’ ಎಂಬುದು ಅವರ ಅಭಿಪ್ರಾಯ.

ಇದನ್ನೂ ಓದಿ: ಶೀಘ್ರವೇ ಖುಷ್ಬೂ ಸುಂದರ್ ಹಿರಿಮಗಳು ಚಿತ್ರರಂಗಕ್ಕೆ ಎಂಟ್ರಿ? ಕೇಳಿ ಬಂತು ಬಿಗ್ ಅಪ್​ಡೇಟ್

ಹೇಗೆ ಬದುಕಬೇಕು ಎಂಬುದಕ್ಕೆ ಖುಷ್ಬೂ ಸುಂದರ್ ಒಂದು ಉತ್ತಮ ಉದಾಹರಣೆ. 54 ನೇ ವಯಸ್ಸಿನಲ್ಲಿ ಅವರು ಸಾಧಿಸಿದ ಈ ಬದಲಾವಣೆ ಅನೇಕರಿಗೆ ಮಾದರಿ. ಸರಿಯಾದ ಮನಸ್ಥಿತಿ ಮತ್ತು ಸ್ಥಿರ ಪ್ರಯತ್ನದಿಂದ, ವಯಸ್ಸಿನ ಹೊರತಾಗಿಯೂ ಯಾರಾದರೂ ಆರೋಗ್ಯವಂತರಾಗಬಹುದು.

(ವಿಶೇಷ ಸೂಚನೆ: ಇದು ಸಂಪೂರ್ಣವಾಗಿ ನಟಿಯ ಅಭಿಪ್ರಾಯ. ನೀವು ಕೂಡ ದೇಹದ ತೂಕ ಇಳಿಸಿಕೊಳ್ಳಬೇಕು ಎಂದಿದ್ದರೆ ವೈದ್ಯರ ಸಲಹೆ ಪಡೆದು ಮುಂದುವರಿಯಿರಿ)

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:03 am, Thu, 19 February 26

Source link

ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು, ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ಕು ಮಂದಿ ಸಾವು – Kannada News | Speeding Car Plunges Into Canal in Mathura, Four Killed on Way to Wedding

ಲಕ್ನೋ, ಫೆಬ್ರವರಿ 19: ವೇಗವಾಗಿ ಬಂದ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮದುವೆಗೆ ತೆರಳುತ್ತಿದ್ದಾಗ ತಿರುವು ಬಂದಿದೆ ಆಗ ವೇಗವನ್ನು ನಿಯಂತ್ರಿಸಲು ಸಾಧ್ಯವಾಗದೆ ಕಾಲುವೆಗೆ ಉರುಳಿದೆ. ಎಲ್ಲರೂ ಸಾವನ್ನಪ್ಪಿದ್ದಾರೆ. ತುಂಬಾ ಸಮಯದ ಬಳಿಕ ಕಾರನ್ನು ಕಾಲುವೆಯಿಂದ ಹೊರ ತೆಗೆಯಲಾಯಿತು. ಆ ವಿಡಿಯೋ ಇಲ್ಲಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬಿಜೆಪಿ ತಂತ್ರಜ್ಞಾನದಲ್ಲೂ ‘ಕಾಪಿ-ಪೇಸ್ಟ್’ ಸಂಸ್ಕೃತಿ ಮುಂದುವರಿಸಿದೆ: ‘ರೋಬೋಡಾಗ್’ ವಿವಾದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ – Kannada News | Robodog Controversy: Chinese Tech Fiasco at India AI Summit Sparks ‘Make in India’ Debate

ಬೆಂಗಳೂರು, ಫೆ.19: ದೆಹಲಿಯ ಭರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ನಲ್ಲಿ (India AI Impact Summit) ಪ್ರದರ್ಶಿಸಲಾದ ‘ರೋಬೋಡಾಗ್’ (Robodog) ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರವು ಈ ಹಿಂದೆ ಯುಪಿಎ (UPA) ಸರ್ಕಾರದ ಯೋಜನೆಗಳನ್ನು ನಕಲು ಮಾಡಿ ತನ್ನದೇ ಎಂದು ಹೆಸರಿಟ್ಟುಕೊಂಡಿತ್ತು. ಈಗ ತಂತ್ರಜ್ಞಾನದಲ್ಲೂ ಅದೇ ‘ಕಾಪಿ-ಪೇಸ್ಟ್’ ಸಂಸ್ಕೃತಿಯನ್ನು ಮುಂದುವರಿಸಿದೆ ಎಂದು ಸಿದ್ದರಾಮಯ್ಯ ಎಕ್ಸ್​​ ಖಾತೆಯಲ್ಲಿ ಟೀಕಿಸಿದ್ದಾರೆ.

ಸಮ್ಮೇಳನದಲ್ಲಿ ಪ್ರದರ್ಶಿಸಲಾದ ರೋಬೋಡಾಗ್ ಚೀನಾ ಮೂಲದ ‘ಯೂನಿಟ್ರೀ’ (Unitree) ಕಂಪನಿಯ ಉತ್ಪನ್ನವಾಗಿದೆ. ಆದರೆ ಇದನ್ನು ಭಾರತದ್ದೇ ಆವಿಷ್ಕಾರ ಎಂಬಂತೆ ಬಿಂಬಿಸಿರುವುದು ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮುಜುಗುರ ತಂದಿದೆ ಎಂದು ಅವರು ಕಿಡಿಕಾರಿದ್ದಾರೆ. ಮೋದಿಯವರ ‘ಮೇಕ್ ಇನ್ ಇಂಡಿಯಾ’ (Make in India) ಅಭಿಯಾನವು ಈಗ ‘ಫೇಕ್ ಇನ್ ಇಂಡಿಯಾ’ (Fake in India) ಆಗಿ ಬದಲಾಗಿದೆ. ಸ್ವದೇಶಿ ಆವಿಷ್ಕಾರಗಳನ್ನು ಪ್ರೋತ್ಸಾಹಿಸುವ ಬದಲು ಪರಕೀಯರ ತಂತ್ರಜ್ಞಾನಕ್ಕೆ ಭಾರತದ ಲೇಬಲ್ ಅಂಟಿಸುವ ಕೆಲಸ ಆಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿದೆ ನೋಡಿ ಎಕ್ಸ್​​​ ಪೋಸ್ಟ್​;

ಇಂತಹ ಜಾಗತಿಕ ಮಟ್ಟದ ಸಮ್ಮೇಳನದಲ್ಲಿ ಸರಿಯಾದ ಪರಿಶೀಲನೆ ಇಲ್ಲದೆ ರೋಬೋಟ್ ಪ್ರದರ್ಶನ ಮಾಡಿರುವುದು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಮತ್ತು ಪ್ರಚಾರದ ಹಪಾಹಪಿಯನ್ನು ತೋರಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ರೋಬೋಡಾಗ್ ವಿವಾದವು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ. ದೆಹಲಿಯ ಭರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026’ ರಲ್ಲಿ ನಡೆದ ಈ ಘಟನೆಯು ದೇಶೀಯ ಆವಿಷ್ಕಾರ ಮತ್ತು ತಂತ್ರಜ್ಞಾನದ ನೈಜತೆಯ ಬಗ್ಗೆ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ.

ಇದನ್ನೂ ಓದಿ: ಎಐ ಶೃಂಗಸಭೆಯಲ್ಲಿ ಚೀನಾದ ರೋಬೋಟ್ ಪ್ರದರ್ಶನ; ವಿವಾದಕ್ಕೆ ಕ್ಷಮೆ ಯಾಚಿಸಿದ ಗಾಲ್ಗೋಟಿಯಾಸ್ ವಿವಿ

ವಿವಾದದ ಕೇಂದ್ರಬಿಂದು: ಗಾಲ್ಗೋಟಿಯಸ್ ವಿಶ್ವವಿದ್ಯಾಲಯ:

ಉತ್ತರ ಪ್ರದೇಶದ ಗಾಲ್ಗೋಟಿಯಸ್ ವಿಶ್ವವಿದ್ಯಾಲಯವು ಸಮ್ಮೇಳನದಲ್ಲಿ ಒಂದು ರೋಬೋಟಿಕ್ ನಾಯಿಯನ್ನು ಪ್ರದರ್ಶಿಸಿತು. ಇದಕ್ಕೆ ‘ಒರಿಯನ್’ (Orion) ಎಂದು ಹೆಸರಿಡಲಾಗಿತ್ತು. ಆದರೆ, ನೆಟ್ಟಿಗರು ಇದನ್ನು ತಕ್ಷಣವೇ ಗುರುತಿಸಿ, ಇದು ಚೀನಾದ ‘ಯೂನಿಟ್ರೀ’ (Unitree) ಕಂಪನಿಯ Unitree Go2 ಮಾಡೆಲ್ ಎಂದು ಸಾಕ್ಷ್ಯ ಸಮೇತ ಬಹಿರಂಗಪಡಿಸಿದ್ದಾರೆ. ವಿಶ್ವವಿದ್ಯಾಲಯದ ಪ್ರೊಫೆಸರ್ ನೇಹಾ ಸಿಂಗ್ ಅವರು ಮಾಧ್ಯಮಗಳ ಮುಂದೆ ಮಾತನಾಡುವಾಗ ಇದನ್ನು ನಮ್ಮ ವಿಶ್ವವಿದ್ಯಾಲಯದ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಅಭಿವೃದ್ಧಿಪಡಿಸಲಾಗಿದೆ” ಎಂದು ಹೇಳುತ್ತಿರುವ ವಿಡಿಯೋ ವೈರಲ್ ಆಗಿದೆ. ಇದು ಚೀನಾದಿಂದ ಕೇವಲ 2-3 ಲಕ್ಷ ರೂಪಾಯಿಗೆ ಸಿಗುವ ರೋಬೋಟ್ ಎಂದು ಗೊತ್ತಾದಾಗ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ರಾಜಮನೆತನದ ವಿವಾಹ, ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ – Kannada News | Punjab: Wedding Extravaganza: Groom’s Family Showers Bride With Bundles of Cash

ಅಮೃತಸರ, ಫೆಬ್ರವರಿ 19: ಪಂಜಾಬ್​​ನ ತರಣ್ ತರಣ್​ನಲ್ಲಿ ನಡೆದ ರಾಜಮನೆತನದ ವಿವಾಹವೊಂದು ಎಲ್ಲರ ಗಮನ ಸೆಳೆದಿದೆ. ವರ ವಧುವಿನ ಮೇಲೆ ಬರೋಬ್ಬರು 8 ಕೋಟಿ ರೂ. ಮೌಲ್ಯದ ನೋಟುಗಳ ಸುರಿಮಳೆಗೈದಿದ್ದಾನೆ. ಎಲ್ಲರೂ ಅಚ್ಚರಿಯಿಂದ ಈ ದೃಶ್ಯ ವೀಕ್ಷಿಸಿದ್ದಾರೆ. ಅಲ್ಲಿದ್ದ ಅತಿಥಿಗಳು ಈ ದೃಶ್ಯವನ್ನು ನೋಡಿ ಆಘಾತಕ್ಕೊಳಗಾದರು. ಕೆಲವರು ಇದನ್ನು ರಾಜಮನೆತನದ ಪದ್ಧತಿ ಎಂದು ಕರೆದರೆ, ಇನ್ನು ಕೆಲವರು ಇದನ್ನು ಆಡಂಬರ ಎಂದು ಕರೆದಿದ್ದಾರೆ.

ಕೋಟ್ಯಂತರ ರೂಪಾಯಿಯ ಸುರಿಮಳೆ ಇದು ಎಂಬ ಚರ್ಚೆಗಳು ಸಾಮಾಜಿಕ ಮಾಧ್ಯಮಗಳಲ್ಲಿಯೂ ಪ್ರಾರಂಭವಾದವು. ಬಳಿಕ ಡಿಜೆ ಆಪರೇಟರ್  ಸತ್ಯವನ್ನು ಬಹಿರಂಗಪಡಿಸಿದ್ದಾರೆ. ಸುಮಾರು 3 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಹೆಚ್ಚಿನ ನೋಟುಗಳು ಹತ್ತು ರೂಪಾಯಿಗಳದ್ದಾಗಿದ್ದವು ಎಂದು ಅವರು ಹೇಳಿದ್ದಾರೆ. ಇದು ವಿವಾಹ ಆಚರಣೆಯ ಭಾಗ ಮತ್ತು ಕುಟುಂಬದವರು ಸಂತೋಷವನ್ನು ವ್ಯಕ್ತಪಡಿಸುವ ವಿಧಾನ ಎಂದು ಹೇಳಲಾಗುತ್ತಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಭಾಗ್ಯಲಕ್ಷ್ಮೀ’ ಧಾರಾವಾಹಿ ಕೊನೆಯಾಗುತ್ತಾ? ‘ತಾಂಡವ್’ ಪಾತ್ರಧಾರಿ ಸುದರ್ಶನ್ ಹೇಳೋದೇನು? – Kannada News | Bhagyalakshmi Serial End? Actor Sudarshan Dispels Rumors After 1000 Episodes

ಕಲರ್ಸ್ ಕನ್ನಡದಲ್ಲಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಈಗಾಗಲೇ ಸಾವಿರ ಎಪಿಸೋಡ್​​ಗಳನ್ನು ಪೂರ್ಣಗೊಳಿಸಿದೆ. ಈ ಧಾರಾವಾಹಿ ಒಳ್ಳೆಯ ಟಿಆರ್​​ಪಿಯನ್ನು ಪಡೆದುಕೊಳ್ಳುತ್ತಾ ಬರುತ್ತಿದೆ. ಈಗ ಧಾರಾವಾಹಿ ಕೊನೆ ಆಗುತ್ತಿದೆ ಎಂಬ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಧಾರಾವಾಹಿಯಲ್ಲಿ ತಾಂಡವ್ ಪಾತ್ರ ಮಾಡ್ತಿರೋ ಸುದರ್ಶನ್ ಮಾತನಾಡಿದ್ದಾರೆ. ಅವರು ಧಾರಾವಾಹಿ ಮುಗಿಯುತ್ತಾ ಅಥವಾ ಇಲ್ಲವಾ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

‘ಭಾಗ್ಯಲಕ್ಷ್ಮೀ’ ಧಾರಾವಾಹಿ 2022ರಲ್ಲಿ ಪ್ರಸಾರ ಆರಂಭಿಸಿತು. ಮೊದಲು ಅಕ್ಕ-ತಂಗಿ ಕಥೆಯನ್ನು ಹೊಂದಿದ್ದ ಈ ಧಾರಾವಾಹಿ, ಆ ಬಳಿಕ ಅಕ್ಕನ ಕಥೆಯೇ ಬೇರೆ, ತಂಗಿ ಕಥೆಯೇ ಬೇರೆ ಮಾಡಲಾಯಿತು. ‘ಲಕ್ಷ್ಮೀ ಬಾರಮ್ಮ’ ಹೆಸರಲ್ಲಿ ತಂಗಿ ಧಾರಾವಾಹಿ ಪ್ರಸಾರ ಕಂಡಿತು. ‘ಭಾಗ್ಯಲಕ್ಷ್ಮೀ’ ಹಾಗೆಯೇ ಮುಂದುವರಿಯಿತು. ಈಗ ಧಾರಾವಾಹಿ ಕೊನೆ ಆಗುತ್ತದೆ ಎಂದು ಹೇಳಲಾಗುತ್ತಾ ಇದೆ.

ತಾಂಡವ್ ಒಳ್ಳೆಯವನಾಗೋ ಪ್ರಯತ್ನದಲ್ಲಿ ಇದ್ದಾನೆ. ಭಾಗ್ಯಾಳ ಬಳಿ ಕ್ಷಮೆ ಕೇಳಿ ಮನೆಗೆ ಬರಬೇಕು ಎಂಬ ಪ್ರಯತ್ನಿಸುತ್ತಿದ್ದಾನೆ. ಇದು ನಾಟಕವೋ ಅಥವಾ ನಿಜಕ್ಕೂ ಆತ ಬದಲಾಗಿದ್ದಾನೋ ಎಂಬ ಪ್ರಶ್ನೆ ವೀಕ್ಷಕರದ್ದು. ಇನ್ನು ಅತ್ತ, ಆದಿಯು ಭಾಗ್ಯಾಳ ವಿವಾಹ ಆಗುವ ಪ್ರಯತ್ನದಲ್ಲಿ ಇದ್ದಾನೆ. ಇದು ಕೂಡ ಕುತೂಹಲ ಸೃಷ್ಟಿಸಿದೆ. ಹಾಗಾದರೆ ಸುದರ್ಶನ್ ಹೇಳೋದೇನು?

‘ಒಂದು ಧಾರಾವಾಹಿ ಸಾವಿರ ಎಪಿಸೋಡ್ ಪೂರ್ಣಗೊಳಿಸುತ್ತಿದ್ದಂತೆ ಧಾರಾವಾಹಿ ಮುಗಿಯುತ್ತದೆ ಎಂದು ಎಲ್ಲರೂ ಅಂದುಕೊಳ್ಳುತ್ತಾರೆ. ನಮ್ಮ ಧಾರಾವಾಹಿ ಕಡಿಮೆ ಟಿಆರ್​​ಪಿ ಪಡೆದರೆ ಆ ರೀತಿಯ ಊಹೆ ಅಥವಾ ಕಲ್ಪನೆ ಮಾಡಿಕೊಳ್ಳಬಹುದು. ಆದರೆ, ನಮ್ಮ ಧಾರಾವಾಹಿ ಉತ್ತಮ ಟಿಆರ್​​ಪಿಯನ್ನೇ ಪಡೆದುಕೊಳ್ಳುತ್ತಿದೆ. ಹೀಗಾಗಿ, ಧಾರಾವಾಹಿ ಮುಗಿಯುತ್ತದೆ ಎಂಬುದರಲ್ಲಿ ಅರ್ಥವಿಲ್ಲ. ಆದರೂ ಧಾರಾವಾಹಿ ವಿಷಯದಲ್ಲಿ ವಾಹಿನಿಯವರೇ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು’ ಎನ್ನುತ್ತಾರೆ ಅವರು.

ಇದನ್ನೂ ಓದಿ: ‘ಭಾಗ್ಯಲಕ್ಷ್ಮೀ’ ಧಾರಾವಾಹಿಯಲ್ಲಿ ಆದಿ ಮದುವೆ ಆಗಲು ಬಂದ ಮೇಘಾಶ್ರೀ; ಹೊಸ ತಿರುವಿಗೆ ವೇದಿಕೆ

ಇನ್ನು, ‘ರಾಣಿ’ ಹೆಸರಿನ ಸೀರಿಯಲ್ ಬಿಗ್ ಬಾಸ್ ಸಂದರ್ಭದಲ್ಲೇ ಘೋಷಣೆ ಆಗಿದೆ. ಈ ಧಾರಾವಾಹಿಯ ಪ್ರೋಮೋ ಕೂಡ ರಿಲೀಸ್ ಆಗಿದೆ. ಧಾರಾವಾಹಿ ಪ್ರಸಾರ ಆಗಬೇಕು ಎಂದರೆ ಒಂದು ಧಾರಾವಾಹಿ ಪೂರ್ಣಗೊಳ್ಳಲೇಬೇಕು. ಅದು ‘ಭಾಗ್ಯಲಕ್ಷ್ಮೀ’ನಾ ಎಂಬ ಪ್ರಶ್ನೆ ಸದ್ಯದ್ದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version