ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌, ಒಂದೇ ಕಿಡಿಗೆ ಬಸ್ ಅವಸ್ಥೆ ನೋಡಿ – Kannada News | Drunk men sets fire To Private Bus In Bengaluru

ಬೆಂಗಳೂರು, (ಫೆಬ್ರವರಿ 18): ಬೆಂಗಳೂರಿನಲ್ಲಿ ಖಾಸಗಿ ಬಸ್ ಹೊತ್ತಿ ಉರಿದಿದೆ. ಚಂದ್ರಲೇಔಟ್ ಬಿಎಂಟಿಸಿ ಡಿಪೋ ಬಳಿ ನಿಂತಿದ್ದ ಬಸ್ ಧಗಧಗಿಸಿದೆ. ಬೆಂಕಿಯಿಂದಾಗಿ ದಟ್ಟ ಹೊಗೆ ಆವರಿಸಿತ್ತು. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕುಡಿದ ನಶೆಯಲ್ಲಿ ಸಿಗರೇಟ್‌ ಹಚ್ಚಿ ಬಸ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪ್ರತೀ ದಿನ ಬೆಳಗ್ಗೆ ಪ್ರಾಣಾಯಾಮ ಮಾಡುವುದರಿಂದ ಏನು ಪ್ರಯೋಜನ? ಬಾಬಾ ರಾಮದೇವ್ ಅವರ ಟಿಪ್ಸ್ ಇಲ್ಲಿದೆ – Kannada News | Baba Ramdev explains health benefits from doing Pranayama regularly

ಪ್ರಾಣಾಯಾಮವು ದೇಹ ಮತ್ತು ಮನಸ್ಸನ್ನು ಸಮತೋಲನಗೊಳಿಸಲು ಪರಿಣಾಮಕಾರಿ ಮಾರ್ಗವಾಗಿದೆ. ಇದು ಉಸಿರಾಟದ ಮೂಲಕ ದೇಹಕ್ಕೆ ಶಕ್ತಿ ಒದಗಿಸುತ್ತದೆ. ನಿಯಮಿತ ಪ್ರಾಣಾಯಾಮವು ಶ್ವಾಸಕೋಶಗಳನ್ನು ಬಲಪಡಿಸುತ್ತದೆ ಮತ್ತು ದೇಹಕ್ಕೆ ಸಾಕಷ್ಟು ಆಮ್ಲಜನಕವನ್ನು ಒದಗಿಸುತ್ತದೆ. ಇದರಿಂದ ಅಂಗಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯವಾಗುತ್ತದೆ. ಇಂದಿನ ವೇಗದ ಮತ್ತು ಒತ್ತಡದ ಜೀವನಶೈಲಿಯಲ್ಲಿ, ಆಯಾಸ, ಚಡಪಡಿಕೆ ಮತ್ತು ಮಾನಸಿಕ ಒತ್ತಡವು ಸಾಮಾನ್ಯವಾಗಿದೆ. ಪ್ರಾಣಾಯಾಮವು ಮನಸ್ಸನ್ನು ಶಾಂತಗೊಳಿಸಲು ಮತ್ತು ಏಕಾಗ್ರತೆ ಹೆಚ್ಚಿಸಲು ಸಹಾಯಕವಾಗಿದೆ ಎಂದು ಪರಿಗಣಿಸಲಾಗಿದೆ.

ಪ್ರಾಣಾಯಾಮವು ದೇಹದ ಕ್ಷಮತೆಯನ್ನು ಸುಧಾರಿಸುತ್ತದೆ ಮತ್ತು ದಿನವಿಡೀ ನಿಮ್ಮನ್ನು ಚಟುವಟಿಕೆಯಿಂದ ಇರುವಂತೆ ಮಾಡುತ್ತದೆ. ಯೋಗ ಗುರು ಬಾಬಾ ರಾಮದೇವ್ ಕೂಡ ಪ್ರತಿದಿನ ಬೆಳಿಗ್ಗೆ ಪ್ರಾಣಾಯಾಮ ಮಾಡಲು ಶಿಫಾರಸು ಮಾಡುತ್ತಾರೆ. ಅವರ ಪ್ರಕಾರ, ನಿಯಮಿತ ಅಭ್ಯಾಸವು ದೇಹದ ನ್ಯಾಚುರಲ್ ಇಮ್ಯೂನಿಟಿಯನ್ನು ಬಲಪಡಿಸಿ, ಅನೇಕ ಆರೋಗ್ಯ ಸಮಸ್ಯೆಗಳನ್ನು ನಿಯಂತ್ರಿಸಬಲ್ಲುದು. ಈ ಸಂದರ್ಭದಲ್ಲಿ, ಬಾಬಾ ರಾಮದೇವ್ ಶಿಫಾರಸು ಮಾಡಿದ ಕೆಲವು ಪ್ರಾಣಾಯಾಮಗಳು ವಿಶೇಷವಾಗಿ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಅವುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಪ್ರತಿದಿನ ಬೆಳಿಗ್ಗೆ ಈ ಪ್ರಾಣಾಯಾಮಗಳನ್ನು ಮಾಡಿ

ಕಪಾಲಭಾತಿ ಪ್ರಾಣಾಯಾಮ

ಬಾಬಾ ರಾಮದೇವ್ ವಿವರಿಸುವಂತೆ ಈ ಕಪಾಲಭಾತಿ ಪ್ರಾಣಾಯಾಮವು ತ್ವರಿತ ಉಸಿರಾಟ ಕ್ರಮವನ್ನು ಒಳಗೊಂಡಿರುತ್ತದೆ. ಇದು ಜೀರ್ಣಾಂಗ ವ್ಯವಸ್ಥೆ ಬಲಪಡಿಸಲು, ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಮತ್ತು ದೇಹವನ್ನು ಒಳಗಿನಿಂದ ಸಕ್ರಿಯವಾಗಿಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಜೇನುತುಪ್ಪದ ಪ್ರಯೋಜನಗಳೇನು, ಪತಂಜಲಿ ಜೇನುತುಪ್ಪದ ಶುದ್ಧತೆ ಎಷ್ಟು? ಇಲ್ಲಿದೆ ಮಾಹಿತಿ

ಅನುಲೋಮ-ವಿಲೋಮ ಪ್ರಾಣಾಯಾಮ

ಈ ಅಭ್ಯಾಸವು ಎರಡೂ ಮೂಗಿನ ಹೊಳ್ಳೆಗಳ ಮೂಲಕ ಪರ್ಯಾಯವಾಗಿ ಉಸಿರನ್ನು ಒಳಗೆಳೆದುಕೊಳ್ಳುವುದು ಮತ್ತು ಹೊರಹಾಕುವುದನ್ನು ಒಳಗೊಂಡಿರುತ್ತದೆ. ಇದು ಮನಸ್ಸನ್ನು ಶಾಂತಗೊಳಿಸುತ್ತದೆ ಮತ್ತು ದೇಹದಲ್ಲಿ ಶಕ್ತಿಯ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಭಸ್ತ್ರಿಕಾ ಪ್ರಾಣಾಯಾಮ

ಈ ಪ್ರಾಣಾಯಾಮವು ತ್ವರಿತವಾಗಿ ಉಸಿರು ಒಳಗೆಳೆದುಕೊಳ್ಳುವುದು ಮತ್ತು ಹೊರಹಾಕುವ ಕ್ರಮ ಹೊಂದಿದೆ. ಭಸ್ತ್ರಿಕಾ ಪ್ರಾಣಾಯಾಮದಿಂದ ಶ್ವಾಸಕೋಶ ಬಲಗೊಳ್ಳುತ್ತದೆ, ಮತ್ತು ದೇಹಕ್ಕೆ ಆಮ್ಲಜನಕದ ಪೂರೈಕೆ ಸುಧಾರಿಸುತ್ತದೆ.

ಭ್ರಮರಿ ಪ್ರಾಣಾಯಾಮ

ಭಮರಿ ಪ್ರಾಣಾಯಾಮದಲ್ಲಿ ದೀರ್ಘವಾಗಿ ಉಸಿರು ಒಳಗೆಳೆದುಕೊಳ್ಳಬೇಕು. ಎರಡೂ ಕಿವಿಗಳನ್ನು ಕೈ ಬೆರಳಿನಿಂದ ಮುಚ್ಚಿ, ಬಾಯಿಯನ್ನೂ ಮುಚ್ಚಿ, ಜೇನ್ನೊಣದ ರೀತಿಯಲ್ಲಿ ಶಬ್ದ ಮಾಡುತ್ತಾ ಮೂಗಿನಿಂದ ಉಸಿರು ಹೊರಹಾಕಬೇಕು. ಇದು ಒತ್ತಡವನ್ನು ಕಡಿಮೆ ಮಾಡಲು ಮತ್ತು ಮಾನಸಿಕ ಶಾಂತಿಯನ್ನು ಸಾಧಿಸಲು ಪ್ರಯೋಜನಕಾರಿ ಎಂದು ನಂಬಲಾಗಿದೆ.

ಪ್ರಾಣಾಯಾಮದಿಂದ ಆರೋಗ್ಯದ ಮೇಲೆ ಯಾವ ಪರಿಣಾಮ ಬೀರುತ್ತದೆ?

ಬೆಳಗ್ಗೆ ನಿಯಮಿತವಾಗಿ ಪ್ರಾಣಾಯಾಮ ಮಾಡುವುದರಿಂದ ರೋಗ ನಿರೋಧಕ ಶಕ್ತಿ ಬಲಗೊಳ್ಳುತ್ತದೆ ಮತ್ತು ದೇಹವು ಅನಾರೋಗ್ಯದ ವಿರುದ್ಧ ಹೋರಾಡಲು ಹೆಚ್ಚು ಸಮರ್ಥವಾಗುತ್ತದೆ. ಇದು ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ, ಇದರಿಂದಾಗಿ ಉತ್ತಮ ಮಾನಸಿಕ ಆರೋಗ್ಯಕ್ಕೆ ಕಾರಣವಾಗುತ್ತದೆ.

ಪ್ರಾಣಾಯಾಮವನ್ನು ಅಭ್ಯಾಸ ಮಾಡುವವರು ದಿನವಿಡೀ ಚೆನ್ನಾಗಿ ನಿದ್ರಿಸುತ್ತಾರೆ ಮತ್ತು ಹೆಚ್ಚು ಚೈತನ್ಯಶೀಲರಾಗಿರುತ್ತಾರೆ. ಇದಲ್ಲದೆ, ಜೀರ್ಣಕ್ರಿಯೆ, ಉಸಿರಾಟದ ತೊಂದರೆಗಳು ಮತ್ತು ಆಯಾಸದಲ್ಲಿ ಸುಧಾರಣೆಗಳನ್ನು ಕಾಣಬಹುದು.

ಇದನ್ನೂ ಓದಿ: ಪತಂಜಲಿ ಲೋಹಾಸವ ಸಿರಪ್; ಏನಿದು, ಯಾಕಾಗಿ ಬೇಕು, ಇದು ಹೇಗೆ ಕೆಲಸ ಮಾಡುತ್ತೆ? ಇಲ್ಲಿದೆ ವಿವರ

ಇದು ಉತ್ತಮ ಆರೋಗ್ಯಕ್ಕೂ ಮುಖ್ಯ

ಪ್ರಾಣಾಯಾಮದ ಜೊತೆಗೆ, ಸಮತೋಲಿತ ಆಹಾರವು ಉತ್ತಮ ಆರೋಗ್ಯಕ್ಕೆ ಅತ್ಯಗತ್ಯ. ಪ್ರತಿದಿನ ಸಾಕಷ್ಟು ನೀರು ಕುಡಿಯಿರಿ ಮತ್ತು ಸಮಯಕ್ಕೆ ಸರಿಯಾಗಿ ಊಟ ಮಾಡಿ. ನಿಯಮಿತ ದೈಹಿಕ ಚಟುವಟಿಕೆ ಮತ್ತು ಸಾಕಷ್ಟು ನಿದ್ರೆಯನ್ನು ನಿಮ್ಮ ದಿನಚರಿಯಲ್ಲಿ ಸೇರಿಸಿಕೊಳ್ಳಿ.

ನಿಮ್ಮ ಮೊಬೈಲ್ ಫೋನ್ ಮತ್ತು ಸ್ಕ್ರೀನ್ ಸಮಯವನ್ನು ಮಿತಿಗೊಳಿಸಿ ಮತ್ತು ನಿಮಗಾಗಿ ಸ್ವಲ್ಪ ಸಮಯ ತೆಗೆದುಕೊಳ್ಳಿ. ಈ ಅಭ್ಯಾಸಗಳ ಜೊತೆಗೆ ಪ್ರಾಣಾಯಾಮವನ್ನು ಅಭ್ಯಾಸ ಮಾಡುವುದರಿಂದ ದೇಹ ಮತ್ತು ಮನಸ್ಸು ಎರಡನ್ನೂ ಆರೋಗ್ಯಕರವಾಗಿರುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ? ಅದ್ರಿಂದ ಆಚೆ ತರೋದು ಹೇಗೆ? – Kannada News | How To identity children addiction to mobile, here Is details

ಊಟ ಮಾಡಿಲ್ಲಾ ಅಂದ್ರು ಮೊಬೈಲ್​, ಹಠ ಮಾಡಿದ್ರು ಮೊಬೈಲ್​, ಮಲಗೋದಕ್ಕೂ ಮೊಬೈಲ್​, ಕೈ ಕಟ್ಟಿ ಕೂರೋದಕ್ಕೂ ಮೊಬೈಲ್​. ಹೀಗೆ ಪೋಷಕರು​​ ಮಕ್ಕಳಿಗೆ ಮೊಬೈಲ್​ ಕೊಟ್ಟು ಕೊಟ್ಟು ಇವತ್ತು ಮೊಬೈಲ್​ ಅಡಿಕ್ಷನ್​ ಮಕ್ಕಳಲ್ಲಿ ಹೆಚ್ಚಾಗಿದೆ. ಪೋಷಕರ ಮೊಬೈಲ್ ಗೀಳು ಮಕ್ಕಳ ಮೇಲೆ ಕೂಡ ಪರಿಣಾಮ ಬೀರುತ್ತಿದೆ. ಎಷ್ಟರ ಮಟ್ಟಿಗೆ ಅಂದ್ರೆ ಮಗುಗೆ ಊಟ ಮಾಡಿಸೋದ್ರಿಂದ ಮಲಗಿಸೋವರೆಗೂ ಎಲ್ಲದಕ್ಕೂ ಮಕ್ಕಳ ಕೈನಲ್ಲಿ ಮೊಬೈಲ್​ ಕೊಟ್ಟು ಬಿಡ್ತಾರೆ ಪೋಷಕರು. ಇದೀಗ ಮಾಡಿದ್ದೋಣ ಮರಾಯ ಅನ್ನೋ ಹಾಗೆ ಮಕ್ಕಳ ಮೊಬೈಲ್​ ಅಡಿಕ್ಷನ್ (mobile addiction) ಪೋಷಕರಿಗೆ ಗೋಳು ಕೊಡುತ್ತಿದೆ. ಇನ್ನು ಮಕ್ಕಳನ್ನು ಮೊಬೈಲ್ ಅಡಿಕ್ಷನ್​​ನಿಂದ ಪೋಷಕರು ಏನು ಮಾಡಬೇಕು ಎನ್ನುವುದನ್ನು ಡಾಕ್ಟರ್ ಸೌಜನ್ಯ ಮಾಹಿತಿ ನೀಡಿದ್ದಾರೆ ತಿಳಿದುಕೊಳ್ಳಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಎಐ ಶೃಂಗಸಭೆಯಲ್ಲಿ ಚೀನಾದ ರೋಬೋಟ್ ಪ್ರದರ್ಶನ; ವಿವಾದಕ್ಕೆ ಕ್ಷಮೆ ಯಾಚಿಸಿದ ಗಾಲ್ಗೋಟಿಯಾಸ್ ವಿವಿ – Kannada News | Galgotias University apologises after Chinese robodog row at AI Summit

ನವದೆಹಲಿ, ಫೆಬ್ರವರಿ 18: ಭಾರತದ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Summit) ಚೀನಾದ ಬ್ರಾಂಡ್ ರೋಬೋಡಾಗ್ (Robodog) ಅನ್ನು ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯ ಪ್ರದರ್ಶಿಸಿತ್ತು. ಅದು ಭಾರತೀಯ ರೋಬೋಟ್ ಅಲ್ಲ ಎಂಬ ವಿವಾದ ಶುರುವಾಗುತ್ತಿದ್ದಂತೆ ವಿಶ್ವವಿದ್ಯಾಲಯದ ಮಳಿಗೆಯನ್ನು ತೆರವುಗೊಳಿಸಲಾಗಿತ್ತು. ಒರಿಯನ್ ಎಂಬ ಹೆಸರಿನಲ್ಲಿ ಪ್ರದರ್ಶಿಸಲಾಗಿದ್ದ ರೋಬೋಡಾಗ್ ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯದ ಆವಿಷ್ಕಾರವಲ್ಲ, ಅದು ಚೀನಾದ ರೋಬೋಟ್ ಎಂದು ವಿವಾದ ಸೃಷ್ಟಿಯಾಗಿತ್ತು.

“ಇತ್ತೀಚಿನ ಎಐ ಶೃಂಗಸಭೆಯಲ್ಲಿ ಸೃಷ್ಟಿಯಾದ ಗೊಂದಲಕ್ಕಾಗಿ ನಾವು ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯದಿಂದ ಕ್ಷಮೆಯಾಚಿಸಲು ಬಯಸುತ್ತೇವೆ. ಪೆವಿಲಿಯನ್ ಅನ್ನು ನಿರ್ವಹಿಸುತ್ತಿದ್ದ ನಮ್ಮ ಪ್ರತಿನಿಧಿಗಳಲ್ಲಿ ಒಬ್ಬರಿಗೆ ಸರಿಯಾದ ಮಾಹಿತಿ ಇರಲಿಲ್ಲ. ಉತ್ಪನ್ನದ ತಾಂತ್ರಿಕ ಮೂಲದ ಬಗ್ಗೆ ಅವರಿಗೆ ತಿಳಿದಿರಲಿಲ್ಲ. ಅವರು ತಪ್ಪಾಗಿ ಮಾಹಿತಿ ನೀಡಿದ್ದಾರೆ. ಸಂಘಟಕರ ಭಾವನೆಯನ್ನು ಅರ್ಥಮಾಡಿಕೊಂಡು ನಾವು ಆವರಣವನ್ನು ಖಾಲಿ ಮಾಡಿದ್ದೇವೆ” ಎಂದು ವಿಶ್ವವಿದ್ಯಾಲಯವು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

ದೆಹಲಿಯಲ್ಲಿ ನಡೆಯುತ್ತಿರುವ AI ಶೃಂಗಸಭೆಯಲ್ಲಿ ಚೀನಾದಲ್ಲಿ ನಿರ್ಮಿತ ರೋಬೋಟಿಕ್ ನಾಯಿಯನ್ನು ಪ್ರದರ್ಶಿಸಿದ ವಿವಾದದ ನಡುವೆ, ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವು ಕ್ಷಮೆಯಾಚಿಸಿದೆ. ಈ ವಿವಾದದ ನಂತರ, AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿನ ತನ್ನ ಸ್ಟಾಲ್ ಅನ್ನು ಖಾಲಿ ಮಾಡಲು ಗಾಲ್ಗೋಟಿಯಾಸ್‌ಗೆ ಸೂಚಿಸಲಾಯಿತು. ಇದಲ್ಲದೆ, ಯಾವುದೇ ಪ್ರದರ್ಶಕರು ತಮ್ಮದಲ್ಲದ ವಸ್ತುಗಳನ್ನು ಪ್ರದರ್ಶಿಸುವುದನ್ನು ಸರ್ಕಾರ ಒಪ್ಪುವುದಿಲ್ಲ ಎಂದು ಐಟಿ ಕಾರ್ಯದರ್ಶಿ ಎಸ್ ಕೃಷ್ಣನ್ ಹೇಳಿದರು.

ವಿಶ್ವವಿದ್ಯಾಲಯದ ಸಂವಹನ ಪ್ರಾಧ್ಯಾಪಕಿ ನೇಹಾ ಸಿಂಗ್ ಮಂಗಳವಾರ ಡಿಡಿ ನ್ಯೂಸ್‌ಗೆ ಓರಿಯನ್ ಎಂಬ ರೋಬೋಟಿಕ್ ನಾಯಿಯನ್ನು ತೋರಿಸಿ, ಇದನ್ನು “ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯದ ಶ್ರೇಷ್ಠತಾ ಕೇಂದ್ರವು ಅಭಿವೃದ್ಧಿಪಡಿಸಿದೆ” ಎಂದು ಹೇಳಿದ ನಂತರ ವಿವಾದ ಭುಗಿಲೆದ್ದಿತು. ಈ ರೋಬೋಟ್ ವಾಸ್ತವವಾಗಿ ಯುನಿಟ್ರೀ ಗೋ2 ಆಗಿದ್ದು, ಇದನ್ನು ಚೀನಾದ ಯುನಿಟ್ರೀ ರೊಬೊಟಿಕ್ಸ್ ತಯಾರಿಸಿದೆ. ಇದನ್ನು ಪ್ರಪಂಚದಾದ್ಯಂತ ಸಂಶೋಧನೆ ಮತ್ತು ಶಿಕ್ಷಣದಲ್ಲಿ ಸಾಮಾನ್ಯವಾಗಿ ಬಳಸಲಾಗುತ್ತದೆ.

“ನಾವು ಈ ರೋಬೋಡಾಗ್ ಅನ್ನು ನಿರ್ಮಿಸಿಲ್ಲ ಅಥವಾ ಹಾಗೆ ಮಾಡಿದ್ದೇವೆ ಎಂದು ಹೇಳಿಕೊಂಡಿಲ್ಲ. ನಮ್ಮ ಸಿಬ್ಬಂದಿ ತಪ್ಪಾಗಿ ಮಾಹಿತಿ ನೀಡಿದ್ದಾರೆ” ಎಂದು ವಿಶ್ವವಿದ್ಯಾಲಯದ ವಕ್ತಾರರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅದ್ಧೂರಿಯಾಗಿದೆ ರಶ್ಮಿಕಾ-ವಿಜಯ್ ಲಗ್ನ ಪತ್ರಿಕೆ: ಆಮಂತ್ರಣ ಪತ್ರಿಕೆಯ ಒಳಗೆ ಏನೇನಿದೆ? – Kannada News | What are there inside Rashmika Mandanna and Vijay Deverakonda wedding invitation box

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ತೆಲುಗಿನ ನಟ ವಿಜಯ್ ದೇವರಕೊಂಡ ತಮ್ಮ ಬಹುವರ್ಷಗಳ ಪ್ರೀತಿಯನ್ನು ದಾಂಪತ್ಯಕ್ಕೆ ಬಡ್ತಿ ನೀಡುತ್ತಿದ್ದಾರೆ. ಈ ಜೋಡಿ ಫೆಬ್ರವರಿ 26 ರಂದು ಅದ್ಧೂರಿಯಾಗಿ ವಿವಾಹ ಆಗಲಿದ್ದು, ಮದುವೆ ಆಮಂತ್ರಣ ಪತ್ರಿಕೆಗಳನ್ನು ನೀಡಿ ಗಣ್ಯರನ್ನು ಮದುವೆಗೆ ಆಹ್ವಾನಿಸುತ್ತಿದ್ದಾರೆ. ಈ ಜೋಡಿ ರಾಜಸ್ಥಾನದಲ್ಲಿ ಅದ್ಧೂರಿಯಾಗಿ ವಿವಾಹ ಆಗಲಿದ್ದು, ಇವರ ಮದುವೆ ಆಮಂತ್ರಣ ಪತ್ರಿಕೆ ಸಹ ಬಲು ಅದ್ಧೂರಿಯಾಗಿದೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ಅವರು ಆಮಂತ್ರಣ ಪತ್ರಿಕೆ ಬಾಕ್ಸ್ ಮಾದರಿಯಲ್ಲಿದ್ದು, ಬಾಕ್ಸ್​​ನಲ್ಲಿ ಆಮಂತ್ರಣ ಪತ್ರಿಕೆಯ ಜೊತೆಗೆ ಹಲವು ವಸ್ತುಗಳನ್ನು ಇಡಲಾಗಿದೆ. ರಶ್ಮಿಕಾ ತಮ್ಮ ನ್ಯಾಷನಲ್ ಕ್ರಶ್ ಹೆಸರಿನ ಸುಗಂಧ ದ್ರವ್ಯ ಬ್ರ್ಯಾಂಡ್ ಹೊಂದಿದ್ದು, ಅದನ್ನು ಆಮಂತ್ರಣ ಪತ್ರಿಕೆಯ ಜೊತೆಗೆ ಇರಿಸಿದ್ದಾ. ಜೊತೆಗೆ ಹ್ಯಾಂಡ್ ಲೋಷನ್ ಮತ್ತು ಫುಟ್ ಕ್ರೀಮ್​​ಗಳು ಸಹ ಆಮಂತ್ರಣ ಪತ್ರಿಕೆಯ ಬಾಕ್ಸ್​​ನಲ್ಲಿವೆ. ಇನ್ನು ವಿಜಯ್ ದೇವರಕೊಂಡ ‘ರೌಡಿ’ ಹೆಸರಿನ ಪ್ಯಾಷನ್ ಬ್​ರ್ಯಾಂಡ್ ಹೊಂದಿರುವುದು ಗೊತ್ತೇ ಇದೆ. ಅವರು ತಮ್ಮ ಬ್ರ್ಯಾಂಡಿನ ಟಿ-ಶರ್ಟ್ ಬಾಕ್ಸ್​​ನಲ್ಲಿ ಇರಿಸಿದ್ದಾರೆ.

ಆಮಂತ್ರಣ ಪತ್ರಿಕೆ ಬಾಕ್ಸ್​​ನಲ್ಲಿ ಪ್ರೀಮಿಯಮ್ ಬ್ರ್ಯಾಂಡಿನ ಒಣ ಹಣ್ಣುಗಳ ಪಾಕೆಟ್ ಅನ್ನು ಸಹ ಇರಿಸಲಾಗಿದೆ. ಇವೆಲ್ಲವನ್ನೂ ಸುಂದರವಾಗಿ ಪ್ರೆಸೆಂಟೆಬಲ್ ರೀತಿಯಲ್ಲಿ ಪ್ಯಾಕ್ ಮಾಡಲಾಗಿದೆ. ಇವುಗಳ ಜೊತೆಗೆ ಹಾಳೆಯೊಂದರಲ್ಲಿ ಸರಳದ ಆಮಂತ್ರಣ ಪತ್ರಿಕೆ ಇದ್ದು, ಅದರಲ್ಲಿ ಮದುವೆಯ ದಿನಾಂಕ, ಬಳಿಕ ರಿಸೆಪ್ಷನ್ ದಿನಾಂಕವನ್ನು ನಮೂದಿಸಲಾಗಿದೆ. ಮದುವೆ ಫೆಬ್ರವರಿ 26 ಕ್ಕೆ ನಡೆಯಲಿದ್ದು, ಮದುವೆ ಕಾರ್ಯಕ್ರಮದಲ್ಲಿ ಕುಟುಂಬ ಸದಸ್ಯರು ಮತ್ತು ಅತ್ಯಾಪ್ತ ಸ್ನೇಹಿತರಷ್ಟೆ ಭಾಗಿ ಆಗಲಿದ್ದಾರೆ. ಬಳಿಕ ಮಾರ್ಚ್ 04 ರಂದು ಹೈದರಾಬಾದ್​​ನ ತಾಜ್ ಕೃಷ್ಣನಲ್ಲಿ ಅದ್ಧೂರಿ ರಿಸೆಪ್ಷನ್ ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಟಾಲಿವುಡ್ ಮತ್ತು ಬಾಲಿವುಡ್​ನ ಸೆಲೆಬ್ರಿಟಿಗಳು ಭಾಗಿ ಆಗಲಿದ್ದಾರೆ.

ಇದನ್ನೂ ಓದಿ:‘ಛಾವ’ ಸಿನಿಮಾಗೆ ಒಂದು ವರ್ಷ: ನೆನಪಿನ ಪುಟ ತೆರೆದ ರಶ್ಮಿಕಾ ಮಂದಣ್ಣ

ಅದಾದ ಕೆಲವು ದಿನಗಳ ಬಳಿಕ ಹೈದರಾಬಾದ್​ ಮತ್ತು ಮುಂಬೈಗಳಲ್ಲಿ ಮಾಧ್ಯಮದವರು ಫೋಟೊಗ್ರಾಫರ್​​ಗಳಿಗಾಗಿ ವಿಶೇಷ ಔತಣಕೂಟವನ್ನು ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರುಗಳು ಆಯೋಜಿಸಿದ್ದಾರೆ.

ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಕಳೆದ ಕೆಲವಾರು ವರ್ಷಗಳಿಂದಲೂ ಪರಸ್ಪರ ಪ್ರೀತಿಯಲ್ಲಿದ್ದರು. ಇಬ್ಬರೂ ಒಟ್ಟಿಗೆ ‘ಗೀತ ಗೋವಿಂದಂ’ ಸಿನಿಮಾನಲ್ಲಿ ನಟಿಸಿದ್ದರು. ಆ ಸಿನಿಮಾ 2018 ರಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿತ್ತು. ಆಗ ಇಬ್ಬರು ಗೆಳೆಯರಾಗಿದ್ದರು, ಆದರೆ ಬಳಿಕ ಆ ಗೆಳೆತನ ಪ್ರೀತಿಗೆ ತಿರುಗಿತು. ಕಳೆದ ಕೆಲ ವರ್ಷಗಳಿಂದ ಇಬ್ಬರೂ ಲಿವಿನ್ ರಿಲೇಷನ್​​ನಲ್ಲಿದ್ದರು ಎನ್ನಲಾಗಿತ್ತು. ಇದೀಗ ಕೊನೆಗೂ ಇಬ್ಬರೂ ಮದುವೆ ಆಗುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 6:55 pm, Wed, 18 February 26

Source link

ಕಾಂಗ್ರೆಸ್ ಕಚೇರಿಗಳ ನಿರ್ಮಾಣಕ್ಕೆ ಸಿಎ ನಿವೇಶನಗಳ ಹಂಚಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ – Kannada News | Union Minister Pralhad Joshi Accuses Congress of Misusing CA Sites for Party Offices, Warns Protest

ಕೇಂದ್ರ ಸಚಿವ ಪ್ರಲ್ಹಾದ ಜೋಶಿImage Credit source: Google

ನವದೆಹಲಿ, ಫೆಬ್ರವರಿ 18: ನಾಗರಿಕರಿಗೆ ಮೂಲಸೌಕರ್ಯ ಒದಗಿಸಬೇಕಾದ 24ಕ್ಕೂ ಹೆಚ್ಚು ನಿವೇಶನಗಳನ್ನು ಕಾಂಗ್ರೆಸ್ ಕಚೇರಿಗಳಿಗೆ ಬಳಸಲು ಅದೇನು ಕಾಂಗ್ರೆಸ್ ಪಿತ್ರಾರ್ಜಿತ ಆಸ್ತಿಯೇ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೆಂಡ ಕಾರಿದ್ದಾರೆ. ರಾಜ್ಯದಲ್ಲಿ ನಾಗರಿಕ ಸೌಲಭ್ಯದ(CA) ನಿವೇಶನಗಳನ್ನು ಕಡಿಮೆ ಬೆಲೆಗೆ, ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕೆ ಹಂಚಿಕೆ ಮಾಡಿರುವುದು ರಾಜ್ಯ ಸರ್ಕಾರದ ಭ್ರಷ್ಟಾಚಾರದ ಪರಮಾವಧಿ ಎಂದು ಅವರು ಆರೋಪಿಸಿದ್ದಾರೆ.

‘ಸಾರ್ವಜನಿಕ ಆಸ್ತಿ ಕಬಳಿಕೆ’

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಎಕ್ಸ್​​ ಪೋಸ್ಟ್​​

ಸಾರ್ವಜನಿಕ ಉದ್ಯಾನವನ, ಗ್ರಂಥಾಲಯ, ಆಸ್ಪತ್ರೆಗಳಿಗೆ ಬಳಕೆ ಆಗಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಭೂಮಿಯನ್ನು ‘ಕಾಂಗ್ರೆಸ್ ಭವನ’ಗಳಿಗೆ ಮೀಸಲಿಟ್ಟಿರುವುದು ರಾಜ್ಯದ ಜನತೆಗೆ ಮಾಡಿದ ದ್ರೋಹ . ಒಂದೆಡೆ ಬಡವರಿಗೆ ನಿವೇಶನ ನೀಡಲು ಜಾಗವಿಲ್ಲ ಎನ್ನುವ ಈ ಕಾಂಗ್ರೆಸ್ ಸರ್ಕಾರ, ಇನ್ನೊಂದೆಡೆ ತನ್ನ ಪಕ್ಷದ ಕಚೇರಿಗಳಿಗೆ ಬಳಸಿಕೊಳ್ಳುತ್ತಿದೆ. ಈ ಮೂಲಕ ಸಾರ್ವಜನಿಕ ಆಸ್ತಿಯನ್ನು ಕಬಳಿಸುತ್ತಿದೆ. ರಾಜ್ಯದ ಸಾರ್ವಜನಿಕ ಆಸ್ತಿಯನ್ನು ಕಾಂಗ್ರೆಸ್ ಪಕ್ಷ ತನ್ನ ಪಿತ್ರಾರ್ಜಿತ ಆಸ್ತಿ ಎಂಬಂತೆ ಬಳಸಿಕೊಳ್ಳುತ್ತಿದ್ದು, ಬಡವರ ಹಿತ ಕಾಯುವ ಬದಲು ಕಾಂಗ್ರೆಸ್‌ ತನ್ನ ‘ಪಕ್ಷದ ಹಿತ’ಕ್ಕೆ ಸಾರ್ವಜನಿಕ ಆಸ್ತಿಯನ್ನು ಲೂಟಿ ಮಾಡುತ್ತಿದೆ ಎಂದವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​​ ಕಚೇರಿಗಳಿಗಾಗಿ ಕರ್ನಾಟಕದಲ್ಲಿ ಸಿಎ ಸೈಟ್​​ಗಳ ಬಳಕೆ; ದೆಹಲಿಯಲ್ಲೂ ಸದ್ದು ಮಾಡಿದ ವಿವಾದ

ಹೋರಾಟದ ಎಚ್ಚರಿಕೆ

ಲೂಟಿ ಹೊಡೆಯುವುದೇ ಕಾಂಗ್ರೆಸ್‌ನ ಮೂಲ ಸಿದ್ಧಾಂತ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದಿರುವ ಜೋಶಿ, ಪಕ್ಷದ ಕಚೇರಿಗಳಿಗೆ ಮಾಡಿರುವ ಈ ಅಕ್ರಮ ಹಂಚಿಕೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಬಿಜೆಪಿ ಬೃಹತ್ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಅವರು ಇದೇ ವೇಳೆ ಖಡಕ್​​ ಎಚ್ಚರಿಕೆಯನ್ನೂ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹಣ, ಶ್ರೀಮಂತಿಕೆ ಗಳಿಸಲು ಬಯಸಿದರೆ ಈ ಅಭ್ಯಾಸಗಳನ್ನು ಬೆಳೆಸಿಕೊಳ್ಳಿ – Kannada News | Those who want to become rich must follow these habits

ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕು, ಶ್ರೀಮಂತಿಕೆಯನ್ನು (richness) ಗಳಿಸಬೇಕು ಎಂದು ಪ್ರತಿಯೊಬ್ಬರೂ ಕನಸು ಕಾಣುತ್ತಾರೆ. ಆದರೆ ಈ ಕನಸನ್ನು ನನಸಾಗಿಸುವುದು ಅಷ್ಟು ಸುಲಭದ ಮಾತಲ್ಲ. ಹಲವರಿಗೆ ಹಣ, ಶ್ರೀಮಂತಿಕೆಯನ್ನು ಗಳಿಸಲು ಏನು ಮಾಡಬೇಕು ಎಂಬುದರ ಬಗ್ಗೆಯೂ ತಿಳಿದಿಲ್ಲ. ಹೀಗಿರುವಾಗ ಶ್ರೀಮಂತ ವ್ಯಕ್ತಿಗಳು ಪಾಲಿಸುವಂತಹ ಈ ಒಂದಷ್ಟು ಅಭ್ಯಾಸಗಳನ್ನು ನೀವು ಸಹ ಪಾಲಿಸುವ ಮೂಲಕ ಜೀವನದಲ್ಲಿ ಶ್ರೀಮಂತಿಕೆಯನ್ನು ಗಳಿಸಬಹುದು. ಶ್ರೀಮಂತರ ಆ ರಹಸ್ಯ ಅಭ್ಯಾಸಗಳು ಯಾವುವು ಎಂಬ ಮಾಹಿತಿ ಇಲ್ಲಿದೆ.

ಶ್ರೀಮಂತಿಕೆಯನ್ನು ಗಳಿಸಲು ನೀವು ಪಾಲಿಸಬೇಕಾದ ಅಭ್ಯಾಸಗಳಿವು:

 ಹಣದ ಮೌಲ್ಯವನ್ನು ಕಲಿಯಿರಿ: ಹೆಚ್ಚಿನ ಜನರು ಹಣ ಗಳಿಸಿದ ಹಣವನ್ನು ತಕ್ಷಣ ಖರ್ಚು ಮಾಡಲು ಪ್ರಾರಂಭಿಸುತ್ತಾರೆ. ಈ ರೀತಿ ಮಾಡಿದರೆ ಖಂಡಿತವಾಗಿಯೂ ಉಳಿತಾಯ ಮಾಡಲು ಸಾಧ್ಯವಾಗುವುದಿಲ್ಲ ಹಾಗಾಗಿ ಹಣದ ಮೌಲ್ಯವನ್ನು ಕಲಿಯಿರಿ. ನಿಮ್ಮ ಸಂಬಳವನ್ನು ಯಾವಾಗಲೂ 4 ಭಾಗಗಳಾಗಿ ವಿಂಗಡಿಸಿ – ಅಗತ್ಯ ವೆಚ್ಚಗಳು, ತುರ್ತು ನಿಧಿ, ಹೂಡಿಕೆ ಮತ್ತು ಮನರಂಜನೆ. ನೀವು ಅಗತ್ಯ ವೆಚ್ಚಗಳನ್ನು ಕಡಿಮೆ ಮಾಡಲು ಸಾಧ್ಯವಿಲ್ಲ, ಆದರೆ ಮನರಂಜನೆಯ ವೆಚ್ಚವನ್ನು ಆದಷ್ಟು ಕಡಿಮೆ ಮಾಡಲು ಪ್ರಯತ್ನಿಸಿ. ಈ ಅಭ್ಯಾಸ ಹಣ ಉಳಿತಾಯಕ್ಕೆ ಸಹಾಯವಾಗಲಿದೆ.

ಕಲಿಕೆಯ ಕೌಶಲ್ಯಗಳು ಅತ್ಯಗತ್ಯ: ಕೇವಲ ಒಂದು ಕೆಲಸ ಮಾಡುವುದರಿಂದ ಯಾರೂ ಶ್ರೀಮಂತರಾಗಲು ಸಾಧ್ಯವಿಲ್ಲ. ನೀವು ಶ್ರೀಮಂತರಾಗಲು ಬಯಸಿದರೆ, ಯಾವಾಗಲೂ ಹೊಸ ಕೌಶಲ್ಯಗಳನ್ನು ಕಲಿಯಿರಿ ಮತ್ತು ಬಹು ಆದಾಯದ ಮೂಲಗಳನ್ನು ಸೃಷ್ಟಿಸಿ. ಉದಾಹರಣೆಗೆ, ನೀವು ವ್ಯವಹಾರವನ್ನು ಪ್ರಾರಂಭಿಸಬಹುದು ಅಥವಾ ಸ್ವಯಂ ಉದ್ಯೋಗಿಯಾಗಬಹುದು. ಹೀಗೆ ಬಹು ಮೂಲಗಳಿಂದ ಹಣ ಸಂಪಾದಣೆ ಮಾಡುವುದರಿಂದ ಶ್ರೀಮಂತಿಕೆಯನ್ನು ಗಳಿಸಬಹುದು.

ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಿ: ಪುಸ್ತಕಗಳು ಒಬ್ಬ ವ್ಯಕ್ತಿಯ ಅತ್ಯುತ್ತಮ ಸ್ನೇಹಿತ. ನೀವು ಹೆಚ್ಚು ಪುಸ್ತಕಗಳನ್ನು ಓದಿದಷ್ಟು, ನೀವು ಹೆಚ್ಚು ಜ್ಞಾನವನ್ನು ಪಡೆಯುತ್ತೀರಿ. ಶ್ರೀಮಂತರಾಗಲು, ಹಣಕಾಸು ಮತ್ತು ಜೀವನದ ಕುರಿತಾದ ಪುಸ್ತಕಗಳನ್ನು ಓದಿ. ಪ್ರತಿದಿನ ಮಲಗುವ ಮುನ್ನ ಪುಸ್ತಕದ ಒಂದು ಪುಟವನ್ನು ಓದುವುದನ್ನು ರೂಢಿಸಿಕೊಳ್ಳಿ. ನಿಮ್ಮೊಂದಿಗೆ ಒಂದು ಡೈರಿ ಮತ್ತು ಪೆನ್ನು ಇಟ್ಟುಕೊಳ್ಳಿ. ನೀವು ಪ್ರತಿದಿನ ಕಲಿಯುವ ಹೊಸ ವಿಷಯಗಳನ್ನು ಬರೆಯಿರಿ. ಅಲ್ಲದೆ, ಯಾವುದೇ ಹೊರೆಗಳು ನಿಮ್ಮನ್ನು ಆವರಿಸದಂತೆ ನಿಮ್ಮ ಆಲೋಚನೆಗಳನ್ನು ಅದರಲ್ಲಿ ಬರೆಯಿರಿ.

ಇದನ್ನೂ ಓದಿ: ಯೌವನದಲ್ಲಿ ಕೆಲಸಗಳನ್ನು ಮಾಡಿದರೆ ವೃದ್ಧಾಪ್ಯವು ಸಂತೋಷದಿಂದಿರುವುದು

ವ್ಯಾಯಾಮ ಮಾಡಿ: ಶ್ರೀಮಂತರು ಬೆಳಕ್ಕೆ ಬೇಗನೆ ಎದ್ದು ತಮ್ಮ ಆರೋಗ್ಯಕ್ಕೆ ಸಮಯ ಮೀಸಲಿಡುತ್ತಾರೆ. ಅದೇ ರೀತಿ ನೀವು ಸಹ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿಮಗಾಗಿ ಸ್ವಲ್ಪ ಸಮಯವನ್ನು ಮೀಸಲಿಡಿ.  ಪ್ರತಿದಿನ ಬೆಳಿಗ್ಗೆ 5 ಗಂಟೆಗೆ ಎದ್ದು ವ್ಯಾಯಾಮ, ವಾಕಿಂಗ್, ಜಾಗಿಂಗ್, ಯೋಗ ಮತ್ತು ಧ್ಯಾನ ಮಾಡಿ. ನೀವು ಕ್ರೀಡೆಗಳನ್ನು ಆನಂದಿಸುತ್ತಿದ್ದರೆ, ಅವುಗಳನ್ನು ಆಡಿ. ಹೀಗೆ ಪ್ರತಿದಿನ 40 ರಿಂದ 2 ಗಂಟೆಗಳ ಕಾಲ ನಿಮಗಾಗಿ ಸಮಯ ಮೀಸಲಿಡಿ. ಇದು ಒತ್ತಡವನ್ನು ಕಡಿಮೆ ಮಾಡುತ್ತದೆ,  ಉತ್ಪಾದಕತೆ ಮತ್ತು ಸೃಜನಶೀಲತೆಯನ್ನು ಹೆಚ್ಚಿಸುತ್ತದೆ,

ಹಣವನ್ನು ಸರಿಯಾಗಿ ಹೂಡಿಕೆ ಮಾಡಿ: ಶ್ರೀಮಂತರು ಯಾವಾಗಲೂ ಸ್ಮಾರ್ಟ್ ಹೂಡಿಕೆಯಲ್ಲಿ ನಂಬಿಕೆ ಇಡುತ್ತಾರೆ. ಅವರು ಎಂದಿಗೂ ತಮ್ಮ ಹಣವನ್ನು ಉಳಿತಾಯ ಖಾತೆಗಳಲ್ಲಿ ಸಂಗ್ರಹಿಸುವುದಿಲ್ಲ. ಅವರು ಷೇರುಗಳು, ಮ್ಯೂಚುವಲ್ ಫಂಡ್‌ಗಳು ಮತ್ತು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡುತ್ತಾರೆ. ಅವರು ಮತ್ತು ಅವರ ಕುಟುಂಬಗಳು ಆರ್ಥಿಕ ಸಂಕಷ್ಟವನ್ನು ಎದುರಿಸದಂತೆ ನೋಡಿಕೊಳ್ಳಲು ಅವರು ಯಾವಾಗಲೂ ವೈದ್ಯಕೀಯ ಸೇರಿದಂತೆ ಇನ್ನಿತರ ವಿಮೆಗಳನ್ನು ಸಹ ಹೊಂದಿರುತ್ತಾರೆ. ಅದೇ ರೀತಿ ನೀವು ಕೂಡ ಉಳಿತಾಯ ಖಾತೆಯಲ್ಲಿ ಹಣ ಸಂಗ್ರಹಿಸಿಡುವ ಬದಲು ಸರಿಯಾದ ಜಾಗದಲ್ಲಿ ಹಣವನ್ನು ಹೂಡಿಕೆ ಮಾಡಲು ಕಲಿಯಿರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸರ್ಕಾರದಿಂದ 140 ಕೋಟಿ ರೂ ಬಾಕಿ: ಕೋಲಾರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಸೇವೆಗಳು ಸ್ಥಗಿತ – Kannada News | Kolar District Hospital Scans Crisis: Free CT, MRI Halted Over 140 Cr Dues to Krishna

ಸರ್ಕಾರಿ ಜಿಲ್ಲಾಸ್ಪತ್ರೆImage Credit source: tv9 kannada

ಕೋಲಾರ​, ಫೆಬ್ರವರಿ 18: ಕೋಲಾರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಇಷ್ಟು ದಿನ ಆ ಎಲ್ಲಾ ಸ್ಕ್ಯಾನಿಂಗ್​ ಸೇವೆಗಳು (Scanning services) ಬಡ ರೋಗಿಗಳಿಗೆ ಉಚಿತವಾಗಿ ಸಿಗುತ್ತಿತ್ತು. ಆದರೆ ಸರ್ಕಾರದಿಂದ ಕೊಡಬೇಕಿದ್ದ ಹಣ ಬಾಕಿ ಉಳಿಸಿಕೊಂಡ ಹಿನ್ನೆಲೆ ಆ ಎಲ್ಲಾ ಸ್ಕ್ಯಾನಿಂಗ್ ಸೇವೆಗಳನ್ನು ಸ್ಥಗಿತಗೊಳಸಲಾಗಿದೆ. ಪರಿಣಾಮ ರೋಗಿಗಳು ಹಾಗೂ ಅವರ ಸಂಬಂಧಿಕರು ಅಕ್ರೋಶ ವ್ಯಕ್ತಪಡಿಸಿದದ್ದು, ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಗೊಂದಲದ ವಾತಾರವರಣ ನಿರ್ಮಾಣವಾಗಿತ್ತು.

ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಇಷ್ಟು ದಿನ ಸಿಟಿ ಹಾಗೂ ಎಂ.ಆರ್.ಐ ಸ್ಕ್ಯಾನಿಂಗ್​ಯನ್ನ ಉಚಿತವಾಗಿ ಮಾಡಲಾಗುತ್ತಿತ್ತು. ಆದರೆ ಇಂದು ಏಕಾಏಕಿ ಸ್ಕ್ಯಾನಿಂಗ್ ಘಟಕದ ಸಿಬ್ಬಂದಿ ಹಣ ಕೊಟ್ಟರೆ ಮಾತ್ರ ಸ್ಕ್ಯಾನಿಂಗ್ ಮಾಡಲಾಗುತ್ತದೆ, ಉಚಿತ ಸ್ಕ್ಯಾನಿಂಗ್ ಇಲ್ಲಾ ಎಂದಿದ್ದಾರೆ. ಇದರಿಂದ ರೋಗಿಗಳು ಹಾಗೂ ಅವರ ಸಂಬಂಧಿಕರು ತಮ್ಮ ಆಕ್ರೊಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಅವ್ಯವಸ್ಥೆ ಆಗರವಾದ ಗದಗ ಜಿಮ್ಸ್ ಆಸ್ಪತ್ರೆ: ಫ್ಯಾನ್​, ಎಸಿ ಇಲ್ಲದೆ ಹಸುಗೂಸು, ಬಾಣಂತಿಯರು ನರಳಾಟ

ನಾವೆಲ್ಲಾ ಬಡವರು ಅಷ್ಟೊಂದು ಹಣ ಇಲ್ಲಾ ಅಂತಲೇ ನಾವೆಲ್ಲಾ ಸರ್ಕಾರಿ ಆಸ್ಪತ್ರೆಗೆ ಬಂದಿರುವುದು. ಇಷ್ಟು ದಿನ ಉಚಿತವಾಗಿ ಮಾಡುತ್ತಿದ್ದ ಸ್ಕ್ಯಾನಿಂಗ್​ಗೆ ಇವಾಗ ಏಕೆ ಹಣ ಕೊಡಬೇಕು, ನಮ್ಮ ಬಳಿ ಹಣವಿಲ್ಲ ಎಂದು ಆಕ್ರೊಶ ಹೊರಹಾಕಿದ್ದಾರೆ. ಈ ವೇಳೆ ಸ್ಕ್ಯಾನಿಂಗ್ ಘಟಕದ ಸಿಬ್ಬಂದಿ ಹಾಗೂ ರೋಗಿಗಳ ಸಂಬಂಧಿಕರ ನಡುವೆ ಮಾತಿನ ಚಕಮಕಿ ನಡೆಯಿತು. ಕೆಲಕಾಲ ಜಿಲ್ಲಾಸ್ಪತ್ರೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಜಿಲ್ಲಾಸ್ಪತ್ರೆಗೆ ಸ್ಕ್ಯಾನಿಂಗ್​ಗಾಗಿ ದೂರುದ ಊರುಗಳಿಂದ ಬಂದಿದ್ದ ಬಡರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ವೇಳೆ ಸರ್ಕಾರ ಕೂಡಲೇ ಉಚಿತ ಸ್ಕ್ಯಾನಿಂಗ್​ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರ ಹಣ ಬಾಕಿ ಉಳಿಸಿಕೊಂಡರೆ ನಾವು ಬದುಕುವುದು ಹೇಗೆ

ಕೋಲಾರ ಜಿಲ್ಲಾಸ್ಪತ್ರೆಯ ಸ್ಕ್ಯಾನಿಂಗ್ ಹಾಗೂ ಸಿಟಿ ಘಟಕವಷ್ಟೇ ಅಲ್ಲದೆ ಇಲ್ಲಿನ ಹೊರಗುತ್ತಿಗೆ ಸಿಬ್ಬಂದಿ ಕೂಡ ಕಳೆದ ನಾಲ್ಕು ತಿಂಗಳಿಂದ ವೇತನ ನೀಡಿಲ್ಲವೆಂದು ಆಸ್ಪತ್ರೆಯ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ಹಣಕ್ಕಾಗಿಯೇ ಕೆಲಸ ಮಾಡುತ್ತಿದ್ದೇವೆ. ಸರ್ಕಾರ ಹೀಗೆ ಹಣ ಬಾಕಿ ಉಳಿಸಿಕೊಂಡರೆ ನಾವು ಬದುಕುವುದು ಹೇಗೆ ಎಂದು ಆಸ್ಪತ್ರೆ ಎದುರು ಕಣ್ಣೀರಿಡುತ್ತಿದ್ದಾರೆ. ಈಬೆನ್ನಲ್ಲೇ  ಸ್ಕ್ಯಾನಿಂಗ್ ಘಟಕ ಕೂಡ ಸ್ಥಗಿತವಾಗಿದೆ.

ಇನ್ನು ಇದಕ್ಕೆ ಕಾರಣ ನೋಡುವುದಾದರೆ​ ಸರ್ಕಾರ ಕ್ರಸ್ನಾ ಡಯಾಗ್ನೋಸ್ಟಿಕ್​ ಕಂಪನಿಯವರಿಗೆ ಸ್ಕ್ಯಾನಿಂಗ್​ ಘಟಕವನ್ನ ಹೊರಗುತ್ತಿಗೆ ನೀಡಿದೆ. ಹಾಗಾಗಿ ಕಳೆದ ಹಲವು ವರ್ಷಗಳಿಂದ ಇದೇ ಕ್ರಸ್ನಾ ಕಂಪನಿಯವರೇ ಸ್ಕ್ಯಾನಿಂಗ್ ಘಟಕವನ್ನು ನಿರ್ವಹಣೆ ಮಾಡಿಕೊಂಡು ಬರುತ್ತಿದ್ದಾರೆ. ಆದರೆ ಸರ್ಕಾರ ಕಳೆದ ಮೂರು-ನಾಲ್ಕು ವರ್ಷಗಳಿಂದ ಕ್ರಸ್ನಾ ಕಂಪನಿಗೆ ನೀಡಬೇಕಿದ್ದ ಹಣವನ್ನು ನೀಡದೆ ಕೋಲಾರ ಜಿಲ್ಲಾಸ್ಪತ್ರೆಯೊಂದರಲ್ಲೇ ಸುಮಾರು 140 ಕೋಟಿ ರೂ ಅಷ್ಟು ಹಣ ಬಾಕಿ ಉಳಿಸಿಕೊಂಡಿದ್ದು, ಸರ್ಕಾರಕ್ಕೆ ಈವರೆಗೆ ಹಲವು ಬಾರಿ ಮನವಿ ಮಾಡಿದರೂ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಇದರಿಂದ ಕ್ರಸ್ನಾ ಡಯಾಗ್ನೋಸ್ಟಿಕ್​ ಕಂಪನಿಯವರು ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ.

ಸರ್ಕಾರ ಬಾಕಿ ಹಣ ನೀಡಿದರೆ ಸ್ಕ್ಯಾನಿಂಗ್ ಎಂದ ರಾಹುಲ್

ಒಂದು ವೇಳೆ ಹಣ ಕೊಟ್ಟರೆ ಸ್ಕ್ಯಾನಿಂಗ್ ಮಾಡಿ ಎಂದು ಇಲ್ಲಿನ ಸಿಬ್ಬಂದಿಗೆ ತಿಳಿಸಿರುವ ಹಿನ್ನೆಲೆ ಸ್ಕ್ಯಾನಿಂಗ್ ಸೇವೆಗಳನ್ನು ಸ್ಥಗಿತಗೊಳಿಸಿ, ಹಣ ಕೊಟ್ಟವರಿಗೆ ಸ್ಕ್ಯಾನಿಂಗ್ ಮಾಡುವುದಾಗಿ ತಿಳಿಸಿದ್ದಾರೆ. ಕೂಡಲೇ ಸರ್ಕಾರ ನಮ್ಮ ಬಾಕಿ ಹಣ ನೀಡಿದರೆ ನಾವು ಸ್ಕ್ಯಾನಿಂಗ್​ ಸೇವೆಗಳನ್ನು ಎಂದಿನಂತೆ ಮುಂದುವರೆಸುತ್ತೇವೆ ಅನ್ನೋದು ಕ್ರಸ್ನಾ ಸಂಸ್ಥೆಯ ಮುಖ್ಯಸ್ಥ ರಾಹುಲ್ ಮಾತು.

ಇದನ್ನೂ ಓದಿ: ಕೋಲಾರದಲ್ಲಿ ಜೀರೋ ಹೆಸರಿನಲ್ಲಿ ಭೂ ಹಗರಣ: ವಾರಸುದಾರರಿಲ್ಲದ ಭೂಮಿ ಲಪಟಾಯಿಸಿದ ಪ್ರಭಾವಿಗಳು

ಒಟ್ಟಾರೆ ಸರ್ಕಾರದ ಬಳಿ ಹಣ ಇಲ್ಲವೋ ಅಥವಾ ಸರ್ಕಾರದ ನಿರ್ಲಕ್ಷವೋ ಗೊತ್ತಿಲ್ಲ ಸರ್ಕಾರ ಸ್ಕ್ಯಾನಿಂಗ್ ಸೇರಿದಂತೆ ವಿವಿಧ ಸೇವೆಗಳನ್ನು ಹೊರಗುತ್ತಿಗೆಯವರಿಗೆ ಕೊಟ್ಟು ಅವರಿಗೆ ನೀಡಬೇಕಾದ ಹಣ ನೀಡದೆ ಬಾಕಿ ಉಳಿಸಿಕೊಂಡಿರುವ ಪರಿಣಾಮ ಇಂದು ಕೋಲಾರ ಜಿಲ್ಲಾಸ್ಪತ್ರೆ ಗೊಂದಲದ ಗೂಡಾಗಿ ಕಂಡುಬಂದಿದ್ದಂತು ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಋತುಚಕ್ರದ ಸಮಯದಲ್ಲಿ ಈ ಆಹಾರಗಳನ್ನು ಕಡ್ಡಾಯವಾಗಿ ಸೇವಿಸಬೇಕು! – Kannada News | Eating Right for Period Pain Relief

ಋತುಚಕ್ರ (Periods) ಅಥವಾ ಮುಟ್ಟಿನ ಸಮಯದಲ್ಲಿ ಆಹಾರದ ಬಗ್ಗೆ ವಿಶೇಷ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಈ ಸಮಯದಲ್ಲಿ, ದೇಹದಲ್ಲಾಗುವ ಹಾರ್ಮೋನುಗಳ ಬದಲಾವಣೆ, ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ಸಮಯದಲ್ಲಿ ಮಹಿಳೆಯರು ನೋವು, ಹೊಟ್ಟೆ ಸೆಳೆತ, ಆಯಾಸ, ದೌರ್ಬಲ್ಯ ಮತ್ತು ಮನಸ್ಥಿತಿಯಲ್ಲಿ ಬದಲಾವಣೆಗಳಂತಹ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಕೆಲವರಿಗೆ ತಲೆನೋವು ಅಥವಾ ಬೆನ್ನುನೋವು ಕೂಡ ಕಾಡಬಹುದು. ಹಾಗಾಗಿ ಇಂತಹ ಸಮಯದಲ್ಲಿ ಸರಿಯಾದ ಆರೈಕೆ ಮತ್ತು ಸಮತೋಲಿತ ಆಹಾರ ಸೇವನೆ ಮಾಡುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಇಲ್ಲವಾದಲ್ಲಿ ದೌರ್ಬಲ್ಯ ಮತ್ತು ಕಿರಿಕಿರಿ ಹೆಚ್ಚಾಗಬಹುದು. ಆದ್ದರಿಂದ, ದೇಹದ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವ ಮೂಲಕ ಪೌಷ್ಟಿಕ ಮತ್ತು ಸಮತೋಲಿತ ಆಹಾರವನ್ನು ಸೇವಿಸುವುದು ಬಹಳ ಒಳ್ಳೆಯದು. ಹಾಗಾದರೆ ಮುಟ್ಟಿನ ಸಮಯದಲ್ಲಿ ಯಾವ ರೀತಿಯ ಆಹಾರಗಳು ದೇಹಕ್ಕೆ ಒಳ್ಳೆಯದು ಮತ್ತು ಹೇಗೆ ಪ್ರಯೋಜನಕಾರಿ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪಿರಿಯಡ್ಸ್ ಸಮಯದಲ್ಲಿ ಸೇವಿಸಬೇಕಾದ ಆಹಾರಗಳು:

ಋತುಚಕ್ರದ ಸಮಯದಲ್ಲಿ ಕಬ್ಬಿಣಾಂಶಯುಕ್ತ ಆಹಾರವನ್ನು ಸೇವಿಸುವುದು ಪ್ರಯೋಜನಕಾರಿಯಾಗಿದೆ ಏಕೆಂದರೆ ದೇಹದಿಂದ ರಕ್ತದ ಹೊರಹೋಗುವುದರಿಂದ ಸೊಪ್ಪು, ತರಕಾರಿ, ದಾಳಿಂಬೆ, ಬೀಟ್ರೂಟ್ ಮತ್ತು ಬೆಳೆ ಉತ್ತಮ ಆಯ್ಕೆಗಳಾಗಿವೆ. ಹಾಲು, ಮೊಸರು, ಬಾದಾಮಿ ಮತ್ತು ಎಳ್ಳಿನಂತಹ ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿರುವ ಆಹಾರಗಳು ನೋವು ಮತ್ತು ಸೆಳೆತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬಾಳೆಹಣ್ಣು ಮತ್ತು ಓಟ್ಸ್ ನಂತಹ ಆಹಾರಗಳು ದೇಹಕ್ಕೆ ಶಕ್ತಿಯನ್ನು ನೀಡುತ್ತವೆ. ಶುಂಠಿ ಮತ್ತು ಅರಿಶಿನ ಬೆರೆಸಿದ ಹಾಲು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ದೇಹವನ್ನು ಹೈಡ್ರೀಕರಿಸಲು ಮತ್ತು ಊತವನ್ನು ಕಡಿಮೆ ಮಾಡಲು ಸಾಕಷ್ಟು ನೀರು ಕುಡಿಯುವುದು ಕೂಡ ಬಹಳ ಮುಖ್ಯವಾಗುತ್ತದೆ. ಜೊತೆಗೆ ಸೂಪ್‌ ಮತ್ತು ಮನೆಯಲ್ಲಿ ತಯಾರಿಸಿದ ಆಹಾರ ಸೇವನೆ ಮಾಡುವುದು ದೇಹಕ್ಕೆ ಒಳ್ಳೆಯದು.

ಇದನ್ನೂ ಓದಿ: ಹೆರಿಗೆಯ ನಂತರ ಮುಟ್ಟು ವಿಳಂಬವಾಗುವುದು ಅಪಾಯಕಾರಿಯೇ? ಯಾವಾಗ ವೈದ್ಯರ ಸಲಹೆ ಪಡೆಯಬೇಕು?

ಮುಟ್ಟಿನ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬಾರದು?

ಋತುಚಕ್ರದ ಸಮಯದಲ್ಲಿ, ಅತಿಯಾದ ಉಪ್ಪು, ಕರಿದ ಮತ್ತು ಮಸಾಲೆಯುಕ್ತ ಆಹಾರಗಳ ಸೇವನೆ ಮಾಡುವುದನ್ನು ತಪ್ಪಿಸಬೇಕು. ಏಕೆಂದರೆ ಅವು ಊತ ಮತ್ತು ಹೊಟ್ಟೆ ನೋವನ್ನು ಹೆಚ್ಚಿಸಬಹುದು. ಕಾಫಿ ಮತ್ತು ತಂಪು ಪಾನೀಯಗಳಂತಹ ಹೆಚ್ಚಿನ ಕೆಫೀನ್ ವಸ್ತುಗಳು ಆತಂಕ ಮತ್ತು ಚಡಪಡಿಕೆಯನ್ನು ಹೆಚ್ಚಿಸಬಹುದು. ಹೆಚ್ಚು ಸಕ್ಕರೆ ಸೇವಿಸುವುದರಿಂದ ಮನಸ್ಥಿತಿ ಬದಲಾವಣೆ ಮತ್ತು ಆಯಾಸವೂ ಹೆಚ್ಚಾಗುತ್ತದೆ. ಸಂಸ್ಕರಿಸಿದ ಆಹಾರಗಳು ಮತ್ತು ಪ್ಯಾಕ್ ಮಾಡಿದ ತಿಂಡಿಗಳ ಸೇವನೆ ಕೂಡ ಒಳ್ಳೆಯದಲ್ಲ. ಹಾಗಾಗಿ ಈ ರೀತಿಯ ಆಹಾರಗಳಿಂದ ಆದಷ್ಟು ದೂರವಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

PAK vs NAM: ಭಾರತದೊಂದಿಗೆ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟ ಪಾಕಿಸ್ತಾನ – Kannada News | Pakistan Qualifies for T20 World Cup Super 8: Namibia Crushed, Farhan Century Shines

2026 ರ ಟಿ20 ವಿಶ್ವಕಪ್​ನ (T20 World Cup 2026) ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು ಎದುರಿಸಿದ್ದ ಪಾಕಿಸ್ತಾನ (Pakistan vs Namibia) ಭಾರಿ ಅಂತರದಲ್ಲಿ ಗೆಲುವು ಸಾಧಿಸಿ ಮುಂದಿನ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ವಾಸ್ತವವಾಗಿ ಭಾರತದ ವಿರುದ್ಧದ ಪಂದ್ಯವನ್ನು ಸೋತು, ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬೀಳುವ ಆತಂಕದಲ್ಲಿದ್ದ ಪಾಕ್ ಪಡೆ, ಸೂಪರ್ 8 ಸುತ್ತಿಗೆ ಅರ್ಹತೆ ಪಡೆಯಬೇಕೆಂದರೆ ನಮೀಬಿಯಾ ವಿರುದ್ಧದ ಮಾಡು-ಅಥವಾ-ಮಡಿ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಕೊಲಂಬೊದಲ್ಲಿ ನಡೆದ ಈ ಪಂದ್ಯದಲ್ಲಿ ನಮೀಬಿಯಾವನ್ನು 102 ರನ್‌ಗಳಿಂದ ಸೋಲಿಸುವ ಮೂಲಕ ಪಾಕಿಸ್ತಾನ ಸೂಪರ್ 8 ಸುತ್ತಿಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿತು. ಸೂಪರ್ 8 ತಲುಪಿದ ಕೊನೆಯ ತಂಡವಾಗಿರುವ ಪಾಕ್ ತಂಡ, ಭಾರತದ ವಿರುದ್ಧ ಮತ್ತೊಂದು ಪಂದ್ಯದ ಭರವಸೆಯನ್ನು ಹುಟ್ಟುಹಾಕಿದೆ.

ನಮೀಬಿಯಾಕ್ಕೆ 102 ರನ್‌ಗಳ ಸೋಲು

ಕೊಲಂಬೊ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ, ನಮೀಬಿಯಾಗೆ 200 ರನ್‌ಗಳ ಗುರಿಯನ್ನು ನೀಡಿತು. ತಂಡದ ಪರ ಸಾಹಿಬ್‌ಜಾದಾ ಫರ್ಹಾನ್ 58 ಎಸೆತಗಳಲ್ಲಿ ಅಜೇಯ 100 ರನ್ ಗಳಿಸಿ ತಂಡವನ್ನು 199 ರನ್‌ಗಳಿಗೆ ಕೊಂಡೊಯ್ದರು. ಇದಕ್ಕೆ ಪ್ರತಿಯಾಗಿ ಗುರಿ ಬೆನ್ನಟ್ಟಿದ ನಮೀಬಿಯಾ ಉಸ್ಮಾನ್ ತಾರಿಕ್ ದಾಳಿಗೆ ತತ್ತರಿಸಿ 100 ರನ್‌ಗಳನ್ನು ಕಲೆಹಾಕಲು ಸಾಧ್ಯವಾಗದೆ 97 ರನ್​ಗಳಿಗೆ ಆಲೌಟ್ ಆಯಿತು. ಹೀಗಾಗಿ, ಪಾಕಿಸ್ತಾನವು ನಿರ್ಣಾಯಕ ಪಂದ್ಯದಲ್ಲಿ ಬೃಹತ್ ಗೆಲುವು ಸಾಧಿಸಿ ಸೂಪರ್ 8 ಸುತ್ತಿನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿತು.

ಸೂಪರ್-8 ತಲುಪಿದ 8 ತಂಡಗಳಿವು

ನಮೀಬಿಯಾ ವಿರುದ್ಧದ ಗೆಲುವಿನೊಂದಿಗೆ, ಪಾಕಿಸ್ತಾನ ಈಗ ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಇದರೊಂದಿಗೆ, ಸೂಪರ್ 8 ಸುತ್ತಿನಲ್ಲಿ ಯಾವ್ಯಾವ ತಂಡಗಳು ಕಾಣಿಸಿಕೊಳ್ಳಲಿವೆ ಎಂಬುದು ಖಚಿತವಾಗಿದೆ. ಗುಂಪು 1 ರಲ್ಲಿ ಭಾರತ, ಜಿಂಬಾಬ್ವೆ, ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ಸೇರಿದ್ದರೆ, ಗುಂಪು 2 ರಲ್ಲಿ ಪಾಕಿಸ್ತಾನ, ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಸೇರಿವೆ. ಪ್ರತಿ ತಂಡವು ತನ್ನ ಗುಂಪಿನಲ್ಲಿರುವ ಇತರ ಮೂರು ತಂಡಗಳ ವಿರುದ್ಧ ತಲಾ ಒಂದೊಂದು ಪಂದ್ಯವನ್ನು ಆಡುತ್ತದೆ. ಅಂತಿಮವಾಗಿ ಗುಂಪಿನಲ್ಲಿ ಅಗ್ರಸ್ಥಾನ ಪಡೆಯುವ ಎರಡು ತಂಡಗಳು ಸೆಮಿಫೈನಲ್​ಗೆ ಎಂಟ್ರಿಕೊಡಲಿವೆ.

IND vs NED: ಕೊನೆಯ ಲೀಗ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ

ಸೆಮಿಫೈನಲ್‌ನಲ್ಲಿ ಭಾರತ- ಪಾಕ್ ಮುಖಾಮುಖಿ

ಮೇಲೆ ಹೇಳಿದಂತೆ ಸೂಪರ್ 8 ಹಂತದಲ್ಲಿ, ಪ್ರತಿ ತಂಡವು ತನ್ನ ಗುಂಪಿನಲ್ಲಿರುವ ಪ್ರತಿಯೊಂದು ತಂಡದ ವಿರುದ್ಧ ಒಂದು ಪಂದ್ಯವನ್ನು ಆಡುತ್ತದೆ. ಇದರರ್ಥ ಈ ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ನಡೆಯುವುದಿಲ್ಲ. ಆದರೆ ಉಭಯ ತಂಡಗಳು ಸೆಮಿಫೈನಲ್‌ನಲ್ಲಿ ಪರಸ್ಪರ ಮುಖಾಮುಖಿಯಾಗಬಹುದು. ಭಾರತವು ಗ್ರೂಪ್ 1 ರಲ್ಲಿ ಅಗ್ರಸ್ಥಾನ ಪಡೆದು, ಇತ್ತ ಪಾಕಿಸ್ತಾನ ಗ್ರೂಪ್ 2 ರಲ್ಲಿ ಎರಡನೇ ಸ್ಥಾನ ಪಡೆದು ಸೆಮಿಫೈನಲ್‌ಗೆ ಮುನ್ನಡೆದರೆ ಉಭಯ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version