Headlines

ಸಚಿನ್, ಧೋನಿ, ಕೊಹ್ಲಿಗೂ ಸಾಧ್ಯವಾಗಿಲ್ಲ; ಐತಿಹಾಸಿಕ ಸಾಧನೆಯತ್ತ ರಾಹುಲ್ ಚಿತ್ತ

ಶುಭ್​ಮನ್ ಗಿಲ್ ನಾಯಕತ್ವದ ಟೀಂ ಇಂಡಿಯಾ ಆಗಸ್ಟ್ 15 ರಿಂದ ಶ್ರೀಲಂಕಾ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಪ್ರವಾಸಕ್ಕೆ ತಂಡವನ್ನು ಸಹ ಪ್ರಕಟಿಸಲಾಗಿದೆ. ಸರಣಿಯ ಮೊದಲ ಪಂದ್ಯ ಗ್ಯಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ನಂತರ ಕೊಲಂಬೊದ ಐತಿಹಾಸಿಕ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಉಭಯ ತಂಡಗಳ ನಡುವೆ ಎರಡನೇ ಟೆಸ್ಟ್ ನಡೆಯಲಿದೆ(PC-PTI). ಈ ಟೆಸ್ಟ್ ಸರಣಿಯು ಭಾರತದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕೆಎಲ್ ರಾಹುಲ್‌ಗೆ ಬಹಳ ವಿಶೇಷವಾಗಿರುತ್ತದೆ. ಏಕೆಂದರೆ ಈ ಸರಣಿಯಲ್ಲಿ ರಾಹುಲ್ ವಿಶಿಷ್ಟ…

Read More

ನಾಳೆ ಮೈಸೂರಿಗೆ ಪ್ರಧಾನಿ ಮೋದಿ: ಬಿಗಿ ಪೊಲೀಸ್ ಬಂದೋಬಸ್ತ್; 12 ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ – Kannada News | PM Modi to Visit Mysuru Tomorrow: Tight Security, Traffic Curbs on 12 Roads

ಮೈಸೂರು, ಜುಲೈ 31: ಸಾಂಸ್ಕೃತಿಕ ನಗರಿ ಮೈಸೂರಿಗೆ (Mysuru) ನಾಳೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಆಗಮಿಸಲಿದ್ದಾರೆ. ಶ್ರೀ ರಾಮಕೃಷ್ಣ ಆಶ್ರಮದ ವತಿಯಿಂದ ಆಯೋಜಿಸಲಾಗಿರುವ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವಜನ ಕೇಂದ್ರದ ‘ವಿವೇಕ ಸ್ಮಾರಕ’ವನ್ನು ಉದ್ಘಾಟಿಸಲಿದ್ದಾರೆ. ಈಗಾಗಲೇ ಕಾರ್ಯಕ್ರಮದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪ್ರಧಾನಿ ಮೋದಿ ಸಂಚರಿಸುವ ರಸ್ತೆಗಳಲ್ಲಿ ಬ್ಯಾರಿಕೇಡ್ ಕೂಡ ಅಳವಡಿಸಲಾಗಿದೆ. ಪ್ರಧಾನಿ ಮೋದಿ ಮೈಸೂರು ಪ್ರವಾಸದ ವೇಳಾಪಟ್ಟಿ ಹೀಗಿದೆ ಆಗಸ್ಟ್ 1 ರಂದು ಮಧ್ಯಾಹ್ನ 2:55ಕ್ಕೆ ಪ್ರಧಾನಿ ಮೋದಿ ವಿಶೇಷ ವಿಮಾನದ…

Read More

ಪಿರಿಯಡ್ಸ್ ವೇಳೆ ಸ್ಯಾನಿಟರಿ ಪ್ಯಾಡ್ ಬಳಸುವಾಗ ಈ ತಪ್ಪುಗಳನ್ನು ಮಾಡಬೇಡಿ; ಗೈನಕಾಲಜಿಸ್ಟ್ ಸಲಹೆ – Kannada News | Choosing the Right Sanitary Pad: Essential Women’s Health Tips

ಮಾಸಿಕ ಋತುಚಕ್ರ (Periods) ಮಹಿಳೆಯರ ಜೀವನದ ಸಹಜ ಜೈವಿಕ ಪ್ರಕ್ರಿಯೆಯಾಗಿದ್ದು, ಈ ಸಮಯದಲ್ಲಿ ಸರಿಯಾದ ಮೆನ್ಸ್ಟ್ರುವಲ್ ಹೈಜೀನ್ (Menstrual Hygiene) ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಸ್ಯಾನಿಟರಿ ಪ್ಯಾಡ್, ಟ್ಯಾಂಪಾನ್ ಅಥವಾ ಮೆನ್ಸ್ಟ್ರುವಲ್ ಕಪ್ ಬಳಸುವುದು ಅಗತ್ಯವಾದರೂ, ಅವುಗಳನ್ನು ಸರಿಯಾದ ರೀತಿಯಲ್ಲಿ ಬಳಸುವುದು ಮತ್ತು ಸಮಯಕ್ಕೆ ಬದಲಾಯಿಸುವುದು ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಸ್ತ್ರೀರೋಗ ತಜ್ಞರ ಪ್ರಕಾರ, ಇಂದು ಮಹಿಳೆಯರು ಪ್ಯಾಡ್ ಖರೀದಿಸುವಾಗ ಅದರ ಲೀಕೆಜ್ ಪ್ರೊಟೆಕ್ಷನ್ ಅಥವಾ ಹೆಚ್ಚು ಹೀರಿಕೊಳ್ಳುವ ಸಾಮರ್ಥ್ಯ (Absorbency) ಮಾತ್ರವಲ್ಲದೆ, ಅದರ ತಯಾರಿಕೆಯಲ್ಲಿ…

Read More

ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ – Kannada News | Vijayalakshmi Holds Discussions with Darshan Thoogudeepa in Parappana Agrahara Jail for More Than 1 Hour

ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಅವರಿಗೆ ಜಾಮೀನು ಸಿಗದ ಕಾರಣ ಹಲವು ತಿಂಗಳಿಂದ ಜೈಲುವಾಸ ಅನುಭವಿಸುತ್ತಿದ್​ದಾರೆ. ಅವರನ್ನು ಭೇಟಿ ಮಾಡಲು ಪತ್ನಿ ವಿಜಯಲಕ್ಷ್ಮಿ ಅವರು ಆಗಾಗ ಜೈಲಿಗೆ ಬರುತ್ತಿದ್ದಾರೆ. ಇಂದು (ಜುಲೈ 31) ಕೂಡ ಅವರು ಪರಪ್ಪನ ಅಗ್ರಹಾರಕ್ಕೆ ಬಂದಿದ್ದಾರೆ. ಈ ಬಾರಿ ಅವರು ಒಂದು ಗಂಟೆಗೂ ಹೆಚ್ಚು ಕಾಲ ದರ್ಶನ್ (Darshan) ಜೊತೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಸಂಜೆ 4 ಗಂಟೆಗೆ ಜೈಲಿನ…

Read More

70 ಸಾವಿರಕ ಹುದ್ದೆಗಳ ನೇಮಕಾತಿ: ಸ್ಪರ್ಧಾತ್ಮಕ ಪರೀಕ್ಷೆ- ನೇಮಕಾತಿ ವ್ಯವಸ್ಥೆಯ ಸುಧಾರಣೆಗೆ ಸಮಿತಿ ರಚನೆ – Kannada News | DK Shivakumar instructions to Officer for preparations for the recruitment of over 70,000 government posts across Karnataka

ಬೆಂಗಳೂರು, (ಜುಲೈ 31): ಕರ್ನಾಟಕದಲ್ಲಿ (Karnataka) ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಅಧಿಕ ಹುದ್ದೆಗಳ (Job recruitment)  ನೇಮಕಾತಿಗೆ ಸಿದ್ಧತೆಗಳು ನಡೆದಿವೆ. ಈ ಸಂಬಂಧ ಡಿಕೆ ಶಿವಕುಮಾರ್ (DK SHivakumar) ಅವರು ರಾಜ್ಯದಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿಗಾಗಿ ಕೈಗೊಳ್ಳಲಾಗುವ ಪರೀಕ್ಷೆಗಳ ಸನ್ನದ್ಧತೆಯ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ, ಕಟ್ಟುನಿಟ್ಟಿನಿಂದ ನಡೆಸಲು ಕ್ರಮ ಕೈಗೊಳ್ಳಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ.  ಇನ್ನು ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ನೇಮಕಾತಿ ವ್ಯವಸ್ಥೆಯ ಸುಧಾರಣೆಗೆ…

Read More

319 KAS ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಅರ್ಜಿ ಸಲ್ಲಿಕೆ ಯಾವಾಗಿನಿಂದ? ಇಲ್ಲಿದೆ ವಿವರ – Kannada News | Karnataka Government Notifies Recruitment for 319 KAS Posts: Check Application Dates

ಕರ್ನಾಟಕ ಲೋಕಸೇವಾ ಆಯೋಗImage Credit source: kpsc.kar.nic.in ಬೆಂಗಳೂರು, ಜುಲೈ 31: ಕರ್ನಾಟಕ ಲೋಕಸೇವಾ ಆಯೋಗವು (KPSC) 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ (ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’) ಒಟ್ಟು 319 ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಆಕಾಂಕ್ಷಿಗಳಿಗೆ ಗುಡ್​​ ನ್ಯೂಸ್ ನೀಡಿದೆ. 319 ಹುದ್ದೆಗಳು ಗ್ರೂಪ್ ‘ಎ’ ವಿಭಾಗದ 117 ಹುದ್ದೆಗಳು ಹಾಗೂ ಗ್ರೂಪ್ ‘ಬಿ’ ವಿಭಾಗದ 202 ಹುದ್ದೆಗಳಿವೆ. ಗ್ರೂಪ್ ‘ಎ’…

Read More

CWG 2026: ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ 30 ಪದಕಗಳು ಖಚಿತ – Kannada News | India Shines at 2026 Commonwealth Games: 17 Medals and 30 Guaranteed with Boxing, Judo Success

ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್ (commonwealth games 2026) ಕ್ರೀಡಾಕೂಟದಲ್ಲಿ ಭಾರತ ಇದುವರೆಗೆ 17 ಪದಕಗಳನ್ನು ಗೆದ್ದಿದೆ. ಇದರಲ್ಲಿ 3 ಚಿನ್ನ, 10 ಬೆಳ್ಳಿ ಮತ್ತು 4 ಕಂಚಿನ ಪದಕಗಳು ಸೇರಿವೆ. ಈ ಮೂಲಕ ಭಾರತ ಪದಕಗಳ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದೆ. ಆದಾಗ್ಯೂ ಭಾರತಕ್ಕೆ ಇನ್ನು 13 ಪದಕಗಳು ಧಕ್ಕುವುದು ಖಚಿತವಾಗಿದೆ. ಅಂದರೆ 9ನೇ ದಿನದ ಪ್ರದರ್ಶನಗಳ ಆಧಾರದ ಮೇಲೆ ಭಾರತಕ್ಕೆ 30 ಪದಕಗಳು ಲಭಿಸುವುದು ಖಚಿತವಾಗಿದೆ. ಬಾಕ್ಸಿಂಗ್‌ನಲ್ಲಿ ಭಾರತ ಈಗಾಗಲೇ 10 ಪದಕಗಳನ್ನು…

Read More

ಪ್ರಧಾನಿ ಮೋದಿ ಪೋಸ್ಟ್​ಗೆ ನಿರ್ಬಂಧ; ಅಲ್ಗಾರಿದಮ್‌ ತಾರತಮ್ಯದ ಬಗ್ಗೆ ಮೆಟಾ ತಂಡಕ್ಕೆ ಸರ್ಕಾರದಿಂದ ಸಮನ್ಸ್ – Kannada News | Meta summons Indian Government to question Meta team over algorithmic bias after PM Modi Facebook Post row

ನವದೆಹಲಿ, ಜುಲೈ 31: ಸಾಮಾಜಿಕ ಜಾಲತಾಣ ಸಂಸ್ಥೆಯಾದ ಮೆಟಾ (Meta) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಫೇಸ್‌ಬುಕ್ ಪೋಸ್ಟ್ ಅನ್ನು ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಸಮನ್ಸ್ ನೀಡಿದ್ದು, ಮೆಟಾದ ಜಾಗತಿಕ ತಂಡವನ್ನು ಅಲ್ಗಾರಿದಮ್ ಪಕ್ಷಪಾತ ಹಾಗೂ ಸಾರ್ವಜನಿಕ ಸುವ್ಯವಸ್ಥೆಯಲ್ಲಿ ಅವರ ಪಾತ್ರಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ವಿಚಾರಣೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಪೋಸ್ಟ್ ಅನ್ನು ಫೇಸ್‌ಬುಕ್ ತಾತ್ಕಾಲಿಕವಾಗಿ ನಿರ್ಬಂಧಿಸಿದ್ದ ಹಿನ್ನೆಲೆಯಲ್ಲಿ ಈ ಕ್ರಮ…

Read More

12 ಲಕ್ಷ ಸಾಲಬಾಧೆಯಿಂದ ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ – Kannada News | HD Kumaraswamy Visits Mandya Family After Farmer Couple Dies Over Rs 12 Lakh Debt

ಮಂಡ್ಯ, ಜುಲೈ 31: ತಾಲೂಕಿನ ಬಿ.ಹಟ್ನ ಗ್ರಾಮದಲ್ಲಿ ಸಾಲಬಾಧೆಯಿಂದ ಬೇಸತ್ತ ರೈತ ದಂಪತಿ ಮೀಸೆ ಪುಟ್ಟಸ್ವಾಮಿ (58) ಮತ್ತು ನಾಗಮ್ಮ (55) ಪ್ರಾಣ ಕಳೆದುಕೊಂಡಿರುವ ಘಟನೆ ನಡೆದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೃತ ದಂಪತಿಯ ನಿವಾಸಕ್ಕೆ ಭೇಟಿ ನೀಡಿದ್ದು, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ. ರೈತ ದಂಪತಿ 11 ರಿಂದ 12 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 90,000 ರೂ. ಸಾಲವಿದ್ದು, ಇತರೆ ಬ್ಯಾಂಕ್‌ಗಳಲ್ಲಿ,…

Read More

ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ್ಚರಿಕೆ – Kannada News | Police Recruitment Exam: KEA Warns of Legal Action Over False Social Media Posts

ಬೆಂಗಳೂರು, ಜುಲೈ 31: ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿರುವ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಲಾಗಿದ್ದು, ಅಭ್ಯರ್ಥಿಗಳು ಸಣ್ಣಪುಟ್ಟ ಎಡವಟ್ಟುಗಳನ್ನು ಮಾಡಿಕೊಳ್ಳದಂತೆ’ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಎಚ್ಚರಿಕೆ ನೀಡಿದ್ದಾರೆ. ಟಿವಿ9 ಜೊತೆಗೆ ಮಾತನಾಡಿದ ಅವರು, ‘ಈ ಬಾರಿ ಪರೀಕ್ಷೆ ಮುಗಿದ ತಕ್ಷಣವೇ ಕಲಬುರಗಿ, ರಾಯಚೂರು, ಧಾರವಾಡ, ದಾವಣಗೆರೆ ಹಾಗೂ ಮೈಸೂರು ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಓಎಂಆರ್ ಶೀಟ್‌ಗಳನ್ನು ಸ್ಕ್ಯಾನ್ ಮಾಡಿ, ಮಧ್ಯರಾತ್ರಿಯೊಳಗಾಗಿ ವೆಬ್‌ಸೈಟ್‌ನಲ್ಲಿ ಲೈವ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳು…

Read More