Headlines

ಮತ್ತೆ ಮುನ್ನೆಲೆಗೆ ಬಂದ ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ: ಪರ, ವಿರೋಧ ಚರ್ಚೆ ಶುರು – Kannada News

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆImage Credit source: Tv9 Kannada ತುಮಕೂರು, ಜೂನ್​​ 11: ಹೇಮಾವತಿ ನೀರನ್ನು ಲಿಂಕಿಂಗ್ ಕೆನಾಲ್ ಮೂಲಕ ಕುಣಿಗಲ್​​ಗೆ ಹರಿಸುವ ನಿರ್ಧಾರ ತುಮಕೂರು ಜಿಲ್ಲೆಯಲ್ಲಿ ವಿವಾದ ಸೃಷ್ಟಿಸಿತ್ತು. ಕಾಮಗಾರಿ ಸ್ಥಳದಲ್ಲಿ ನಡೆದ ಭಾರಿ ಹೈಡ್ರಾಮಾ ಬಳಿಕ ಯೋಜನೆಗೆ ಬ್ರೇಕ್ ಬಿದಿತ್ತು. ಆದರೆ ಹತ್ತು ತಿಂಗಳ ಬಳಿಕ ಈ ಯೋಜನೆಗೆ ಸರ್ಕಾರ ಮರು ಜೀವ ನೀಡಲು ಮುಂದಾಗಿರೋದು ಜಿಲ್ಲೆಯ ಶಾಸಕರ ನಡುವೆಯೇ ಪರ-ವಿರೋಧಕ್ಕೆ ನಾಂದಿ ಹಾಡಿದೆ. ಹೀಗಾಗಿ ಮತ್ತೆ ವಿರೋಧ ಕಿಡಿ ಹೊತ್ತಿಕೊಳ್ಳುವ…

Read More

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್​ನ ಹಲವು ಪ್ರದೇಶಗಳ ಮೇಲೆ ಮತ್ತೆ ಅಮೆರಿಕ ದಾಳಿ, ಹಾರ್ಮುಜ್ ಜಲಸಂಧಿ ಮತ್ತೆ ಬಂದ್ – Kannada News

ಟೆಹ್ರಾನ್, ಜೂನ್ 11: ಇರಾನ್​ನ ಹಲವು ಪ್ರದೇಶಗಳ ಮೇಲೆ ಅಮೆರಿಕ(America) ಮತ್ತೆ ದಾಳಿ ನಡೆಸಿದೆ, ಇದರ ಪರಿಣಾಮ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಬಂದ್ ಮಾಡಲಾಗಿದೆ. ಅಮೆರಿಕದ ಮಿಲಿಟರಿ ಕ್ರಮಗಳ ಬೆನ್ನಲ್ಲೇ, ಇರಾನ್ ನಾಯಕರು ನೇರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕರೆ ಮಾಡಿ ಸಂವಹನ ನಡೆಸಿದ್ದಾರೆ. ಅಮೆರಿಕ ವಿಧಿಸಿರುವ ಷರತ್ತುಗಳನ್ನು ಇರಾನ್ ಒಪ್ಪಿಕೊಂಡರೆ ಪ್ರಸ್ತುತ ಬಿಕ್ಕಟ್ಟು ತಕ್ಷಣವೇ ಕೊನೆಗೊಂಡು ಶಾಂತಿ ಒಪ್ಪಂದ ಏರ್ಪಡುವ ಸಾಧ್ಯತೆ ದಟ್ಟವಾಗಿದೆ. ಕುವೈತ್, ಬಹ್ರೇನ್ ಮತ್ತು ಜೋರ್ಡಾನ್ ಮೇಲೆ ದಾಳಿ ನಡೆಸಿರುವುದಾಗಿ…

Read More

ಕೇರಳ, ತಮಿಳುನಾಡು ಮಾದರಿ: ಡಿಕೆಶಿ ಸಂಪುಟದಲ್ಲಿ 3-4 ಯುವ ಮುಖಗಳಿಗೆ ಮಣೆ ಸಾಧ್ಯತೆ – Kannada News

ದೆಹಲಿಯಲ್ಲಿ ಸೋನಿಯಾ ಗಾಂಧಿ ನಿವಾಸದಲ್ಲಿ ಡಿಕೆ ಶಿವಕುಮಾರ್Image Credit source: @DKShivakumar ಬೆಂಗಳೂರು, ಜೂನ್ 11: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಜಿದ್ದಾಜಿದ್ದಿ, ಪ್ರಮುಖ ಖಾತೆಗಳಿಗಾಗಿ ಸಚಿವರ ಪಟ್ಟು ಹಾಗೂ ಸಚಿವ ಸ್ಥಾನ ವಂಚಿತರ ಬೆಂಬಲಿಗರ ಭಾರಿ ಪ್ರತಿಭಟನೆಗಳ ನಡುವೆಯೇ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಚರ್ಚೆಯೂ ಜೋರಾಗಿದೆ. ಈ ಎಲ್ಲಾ ಗೊಂದಲಗಳನ್ನು ಬಗೆಹರಿಸಿ, ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮ ಪಟ್ಟಿ ಸಿದ್ಧಪಡಿಸುವ ಸಲುವಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ…

Read More

75 ಲಕ್ಷ ರೂಪಾಯಿ ಪಡೆದರೂ ಪ್ರಚಾರಕ್ಕೆ ಅಸಹಕಾರ ತೋರಿದ ‘ರನ್ನ’ ನಟಿ ವರಲಕ್ಷ್ಮಿ? – Kannada News

ಕನ್ನಡದಲ್ಲಿ ಸುದೀಪ್ (Sudeep) ನಟನೆಯ ‘ರನ್ನ’, ‘ಮಾಣಿಕ್ಯ’ ಹಾಗೂ ‘ಮ್ಯಾಕ್ಸ್’ ಸಿನಿಮಾಗಳಲ್ಲಿ ಬಣ್ಣ ಹಚ್ಚಿ ಕನ್ನಡಿಗರಿಗೂ ಹತ್ತಿರವಾದವರು ನಟಿ ವರಲಕ್ಷ್ಮಿ ಶರತ್‌ಕುಮಾರ್‌. ಅವರು ಈಗ ಟಾಲಿವುಡ್‌ನಲ್ಲಿ ಹೊಸ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಸಾಲು ಸಾಲು ಬಲವಾದ ಪಾತ್ರಗಳ ಮೂಲಕ ಅಲ್ಲಿನ ಪ್ರೇಕ್ಷಕರ ಮನಗೆದ್ದಿದ್ದ ವರಲಕ್ಷ್ಮಿ ವಿರುದ್ಧ ಈಗ ನಿರ್ದೇಶಕರೊಬ್ಬರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ತೆಲುಗಿನಲ್ಲಿ ‘ಪೊಲೀಸ್ ಕಂಪ್ಲೇಂಟ್’ ಹೆಸರಿನ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದ ಪ್ರೆಸ್‌ಮೀಟ್‌ನಲ್ಲಿ ಚಿತ್ರದ ನಿರ್ದೇಶಕರು ವರಲಕ್ಷ್ಮಿ ವಿರುದ್ಧ ಗಂಭೀರ ಆರೋಪಗಳನ್ನು…

Read More

Karnataka Weather Forecast: ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಅಬ್ಬರ; ತೀವ್ರ ಗಾಳಿಯ ಎಚ್ಚರಿಕೆ – Kannada News

ಬೆಂಗಳೂರು, ಜೂನ್​​ 11: ನೈಋತ್ಯ ಮುಂಗಾರು ರಾಜ್ಯದ ಬಹುತೇಕ ಭಾಗಗಳನ್ನು ಆವರಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುಂದಿನ ಒಂದು ವಾರ ಮಳೆ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಕರ್ನಾಟಕದ ಹಲವು ಜಿಲ್ಲೆಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಮತ್ತು ಬಲವಾದ ಗಾಳಿಯ ಎಚ್ಚರಿಕೆ ನೀಡಿದೆ. ಐಎಂಡಿಯ ಏಳು ದಿನಗಳ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕದಲ್ಲಿ ಜೂನ್ 11 (ಇಂದು) ಮತ್ತು 12ರಂದು ಭಾರಿ ಮಳೆ ಸಾಧ್ಯತೆ ಇದೆ. ಜೂನ್ 14ರಿಂದ…

Read More

ಇಂದು ಈ ರಾಶಿಯವರಿಗೆ ಲಾಭ-ನಷ್ಟದ ಮಿಶ್ರಫಲವಿದ್ದು, ಕೋಪ-ತಾಪಗಳ ಬಗ್ಗೆ ಎಚ್ಚರಿಕೆ ಅಗತ್ಯ

ಟಿವಿ9 ಡಿಜಿಟಲ್ ವಾಹಿನಿಯ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 11ರ ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಅಧಿಕ ಜ್ಯೇಷ್ಠ ಮಾಸದಲ್ಲಿ ಬರುವ ಏಕಾದಶಿ ತಿಥಿಯನ್ನು ಒಳಗೊಂಡಿದ್ದು, ಇದನ್ನು ಸರ್ವತ್ರ ಏಕಾದಶಿ ಅಥವಾ ಪರಮ ಏಕಾದಶಿ ಎಂದು ಕರೆಯಲಾಗುತ್ತದೆ. ಈ ವಿಶೇಷ ದಿನದಂದು ಅಲ್ಪ ಜಪದಿಂದಲೂ ಅಪಾರ ಫಲ ದೊರೆಯುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ. ಪ್ರತಿ ರಾಶಿಗೆ ಅನುಗುಣವಾಗಿ ಅವರು ನೀಡಿರುವ…

Read More

ಮೊದಲ ಮಗು ಹೆಣ್ಣಾದರೆ ಅದೃಷ್ಟಗಳ ಮಹಾಪೂರ! – Kannada News

ಮೊದಲ ಮಗು ಹೆಣ್ಣು ಮಗುವಾದರೆ ಅದು ಅದೃಷ್ಟವೇ, ಅಶುಭವೇ ಎಂಬ ಪ್ರಶ್ನೆ ಇತ್ತೀಚಿನ ದಿನಗಳಲ್ಲಿ ಕಡಿಮೆ ಆಗಿದೆಯಾದರೂ, ಹಲವರ ಮನಸ್ಸಿನಲ್ಲಿ ಇನ್ನೂ ಇದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ‘ಟಿವಿ9 ಕನ್ನಡ ಡಿಜಿಟಲ್​’ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಅವರು ಹೇಳಿರುವಂತೆ, ನಮ್ಮ ಸನಾತನ ಸಂಸ್ಕೃತಿಯ ಪ್ರಕಾರ, ಮೊದಲ ಹೆಣ್ಣು ಮಗು ಜನಿಸುವುದು ಮನೆಗೆ ಮಹಾಲಕ್ಷ್ಮಿಯ ಆಗಮನಕ್ಕೆ ಸಮಾನ. ಇದು ಕೇವಲ ಶುಭ ಸಂಕೇತ ಮಾತ್ರವಲ್ಲದೆ, ಕುಟುಂಬಕ್ಕೆ, ವಿಶೇಷವಾಗಿ ತಂದೆಗೆ,…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಅನ್ಯ ಮನಃಸ್ಥಿತಿಯಿಂದ ಉದ್ಯಮ ನಷ್ಟ – Kannada News

ಮೇಷ ರಾಶಿ: ಕಾಲಕ್ಕಾಗಿ ತಾಳ್ಮೆಯಿಂದ ಕುಳಿತುಕೊಳ್ಳಬೇಕಾಗಬಹುದು. ಕೂಡಿಟ್ಟ ಹಣವು ಇಂದು ನಿಮ್ಮ ಸಮಯಕ್ಕೆ ಸರಿಯಾಗಿ ಸಿಗುವುದು. ನಿಮ್ಮಿಂದ ಪ್ರೀತಿಯನ್ನು ಬಯಸುವವರಿಗೆ ಪ್ರೀತಿಯನ್ನು ಕೊಡಿ. ಅನಾರೋಗ್ಯದ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬೇಕು. ನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸವಾಗಲಿದೆ. ಸಂಗಾತಿಯು ನಿಮ್ಮ ಗುಟ್ಟನ್ನು ಹೊರಹಾಕಬಹುದು. ಬಹಳ ದಿನಗಳಿಂದ ಕಾರ್ಮಿಕರ ವಿಚಾರದಲ್ಲಿ ನಿಮಗೆ ಅಸಮಾಧಾನವಿದ್ದು ಅದನ್ನು ತೋರ್ಪಡಿಸುವಿರಿ. ವೃಷಭ ರಾಶಿ: ನಿರಂತರ ಶ್ರಮಕ್ಕೆ ಫಲವಿರುತ್ತದೆ. ಕರ್ತವ್ಯದ ದೃಷ್ಟಯಿಂದ ಮಾಡಿ. ಫಲಾಪೇಕ್ಷೆಯು ಇದ್ದರೆ ಹತಾಶೆಯು ಖಂಡಿತಾ ಇರುವುದು. ಮನಸ್ಸಿನಲ್ಲಿ ನಕಾರಾತ್ಮಕ ಭಾವನೆಗಳನ್ನು ತೆಗೆದುಹಾಕಿ. ಬರಬೇಕಾದ ಹಣವು…

Read More

ಕಾಶ್ಮೀರದ ದೋಡಾ ಜಿಲ್ಲೆಯ ಹೆದ್ದಾರಿಯಲ್ಲಿ ಭೀಕರ ಭೂಕುಸಿತ; ವಾಹನ ಸಂಚಾರ ಸಂಪೂರ್ಣ ಸ್ಥಗಿತ – Kannada News

ಶ್ರೀನಗರ, ಜೂನ್ 10: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಯಾದ ಥಾತ್ರಿ-ಕಿಲೋತ್ರಾನ್ ಹೆದ್ದಾರಿಯ ಧಾರಿವಾರಿ ನಲ್ಲಾ ಬಳಿ ಇಂದು ಭಾರಿ ಪ್ರಮಾಣದ ಭೂಕುಸಿತ (Landslide) ಸಂಭವಿಸಿದೆ. ಪಕ್ಕದ ಗುಡ್ಡದಿಂದ ಬೃಹತ್ ಗಾತ್ರದ ಬಂಡೆಗಳು ಮತ್ತು ಟನ್‌ಗಟ್ಟಲೆ ಮಣ್ಣು ಹೆದ್ದಾರಿಯ ಮೇಲೆ ಬಿದ್ದ ಪರಿಣಾಮವಾಗಿ ಇಡೀ ರಸ್ತೆ ಸಂಪೂರ್ಣವಾಗಿ ಮುಚ್ಚಿಹೋಗಿದೆ. ಈ ಹೆದ್ದಾರಿಯು ಗಂದೋಹ್ ಮತ್ತು ಭಲೇಶ್ಸಾ ಸೇರಿದಂತೆ ಹಲವು ಗ್ರಾಮೀಣ ಮತ್ತು ದೂರದ ಪ್ರದೇಶಗಳನ್ನು ಜಿಲ್ಲಾ ಕೇಂದ್ರ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಜೋಡಿಸುವ…

Read More

ಕಾಂಗ್ರೆಸ್ ಜೊತೆ ವಿಲೀನವಾಗುವ ವದಂತಿ ಸುಳ್ಳು; ಟಿಎಂಸಿ ಸ್ಪಷ್ಟನೆ – Kannada News

ನವದೆಹಲಿ, ಜೂನ್ 10: ತೃಣಮೂಲ ಕಾಂಗ್ರೆಸ್ (TMC) ಕಾಂಗ್ರೆಸ್ ಪಕ್ಷದ ಜೊತೆ ವಿಲೀನವಾಗಲಿದೆ ಎಂಬ ಮಾತುಗಳಿಗೆ ಯಾವುದೇ ಆಧಾರವಿಲ್ಲ ಎಂದು ಟಿಎಂಸಿ ನಾಯಕರು ಸ್ಪಷ್ಟಪಡಿಸಿದ್ದಾರೆ. ಎರಡೂ ಪಕ್ಷಗಳ ನಾಯಕರ ನಡುವೆ ಇತ್ತೀಚೆಗೆ ರಾಜಕೀಯ ಚರ್ಚೆಗಳು ನಡೆದಿದ್ದರೂ ಸಹ, ವಿಲೀನದ ಯಾವುದೇ ಪ್ರಸ್ತಾಪವನ್ನು ಉಭಯ ಪಕ್ಷಗಳು ಪರಿಗಣಿಸುತ್ತಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರಿಗೆ ಕಾಂಗ್ರೆಸ್‌ನಲ್ಲಿ ಉನ್ನತ ಹುದ್ದೆಗಳನ್ನು ನೀಡಲಾಗುತ್ತಿದೆ ಮತ್ತು ಪಕ್ಷಗಳನ್ನು ವಿಲೀನಗೊಳಿಸಲಾಗುತ್ತಿದೆ ಎಂಬ ಸುದ್ದಿಗಳು ಕೇವಲ ಊಹಾಪೋಹಗಳಾಗಿದ್ದು, ಇವುಗಳಲ್ಲಿ ಯಾವುದೇ…

Read More