2026 ರ ವರ್ಷ ಭಾರತದ ಸ್ಟಾರ್ ಬ್ಯಾಟ್ಸ್ಮನ್ ಅಭಿಷೇಕ್ ಶರ್ಮಾಗೆ ಏರಿಳಿತಗಳಿಗಳಿಂದ ಕೂಡಿದೆ. ವರ್ಷ ಪ್ರಾರಂಭವಾಗುವ ಮೊದಲು ಸುಮಾರು 20 ತಿಂಗಳುಗಳ ಕಾಲ ನಿರಂತರವಾಗಿ ಸ್ಫೋಟಕ ಪ್ರದರ್ಶನ ನೀಡಿದ ಅಭಿಷೇಕ್ ಶರ್ಮಾಗೆ ಇದೀಗ ಸ್ಥಿರ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. ಟಿ20 ವಿಶ್ವಕಪ್ನಲ್ಲಿ ಕಳಪೆ ಪ್ರದರ್ಶನದಿಂದ ಬಳಲಿದ್ದ ಅಭಿಷೇಕ್ ಪ್ರಸ್ತುತ ಐಪಿಎಲ್ನಲ್ಲೂ ಅದೇ ಸಮಸ್ಯೆಗೀಡಾಗಿದ್ದಾರೆ. ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ಪರ ಆಡುತ್ತಿರುವ ಅಭಿಷೇಕ್ ಶಮಅರ್ ಶೂನ್ಯಕ್ಕೆ ಅತಿ ಹೆಚ್ಚು ಬಾರಿ ಔಟ್ ಆದ ದಾಖಲೆಯನ್ನು ಮುರಿದಿದ್ದಾರೆ.
ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಮೊದಲ ಎಸೆತದಲ್ಲೇ ಔಟಾಗುವ ಮೂಲಕ ಅನಗತ್ಯ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಗೋಲ್ಡನ್ ಡಕ್ಗೆ ಬಲಿಯಾದ ಅಭಿಷೇಕ್ ಸತತ ಒಂಬತ್ತನೇ ಐಪಿಎಲ್ ಸೀಸನ್ನಲ್ಲಿ ಐದನೇ ಬಾರಿಗೆ ಡಕ್ಗೆ ಔಟಾದರು. 79 ಇನ್ನಿಂಗ್ಸ್ಗಳ ಐಪಿಎಲ್ ವೃತ್ತಿಜೀವನದಲ್ಲಿ ಅಭಿಷೇಕ್ ಗೋಲ್ಡನ್ ಡಕ್ಗೆ ಔಟಾಗಿದ್ದು ಇದೇ ಮೊದಲು. ಈ ಆವೃತ್ತಿಯಲ್ಲಿ ಅಭಿಷೇಕ್ ಎರಡನೇ ಬಾರಿಗೆ ಡಕ್ ಆಗಿದ್ದಾರೆ. ಆದರೆ ಹಿಂದಿನ ಬಾರಿ ಎರಡು ಎಸೆತಗಳನ್ನು ಆಡಿ ಶೂನ್ಯಕ್ಕೆ ಔಟಾಗಿದ್ದರು.
ಇಷ್ಟೇ ಅಲ್ಲ, ಅಭಿಷೇಕ್ ಕೇವಲ 3 ಮತ್ತು ಅರ್ಧ ತಿಂಗಳಲ್ಲಿ ಸಂಜು ಸ್ಯಾಮ್ಸನ್ ಮತ್ತು ರೋಹಿತ್ ಶರ್ಮಾ ಅವರ ಅನಗತ್ಯ ದಾಖಲೆಯನ್ನು ಮುರಿದಿದ್ದಾರೆ. ಈ ವರ್ಷ ಅಭಿಷೇಕ್ ಟಿ20 ಕ್ರಿಕೆಟ್ನಲ್ಲಿ 7 ನೇ ಬಾರಿ ಡಕ್ ಔಟ್ ಆಗಿದ್ದಾರೆ. 2026 ರಲ್ಲಿ ಅಭಿಷೇಕ್ ಒಟ್ಟು 18 ಟಿ20 ಇನ್ನಿಂಗ್ಸ್ಗಳಲ್ಲಿ ಬ್ಯಾಟಿಂಗ್ ಮಾಡಿದ್ದು, ಇದರಲ್ಲಿ 5 ಅರ್ಧಶತಕಗಳನ್ನು ಬಾರಿಸಿದರೆ, ಏಳು ಬಾರಿ ಶೂನ್ಯಕ್ಕೆ ಔಟಾದ್ದಾರೆ. ಈ ಮೂಲಕ ಒಂದೇ ವರ್ಷದಲ್ಲಿ ಟಿ20 ಯಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಭಾರತೀಯ ಬ್ಯಾಟರ್ ಎಂಬ ಬೇಡದ ದಾಖಲೆ ಅಭಿಷೇಕ್ ಪಾಲಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಹುಬ್ಬಳ್ಳಿ, ಏಪ್ರಿಲ್ 13: ಅವರಿಬ್ಬರು ಒಂದೇ ಬಡಾವಣೆಯವರು. ಹೀಗಾಗಿ ಇಬ್ಬರು ಕಳೆದ ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಜಾತಿ ಬೇರೆ ಬೇರೆಯಾಗಿದ್ದರು, ಅವರ ಪ್ರೀತಿಗೆ ಜಾತಿ ಅಡ್ಡಿಯಾಗಿರಲಿಲ್ಲ. ಮದುವೆಯಾಗಿ ಸುಂದರ ಸಂಸಾರ ಕಟ್ಟಿಕೊಳ್ಳುವ ಕನಸು ಕಂಡಿದ್ದರು. ಆದರೆ ಅಂತರ್ಜಾತಿ ವಿವಾಹಕ್ಕೆ (Inter-Caste Love) ಯುವತಿ ಹೆತ್ತವರು ವಿರೋಧ ವ್ಯಕ್ತಪಡಿಸಿದ್ದು, ಹೀಗಾಗಿ ತಮಗೆ ರಕ್ಷಣೆಬೇಕು ಅಂತ ಪ್ರೇಮಿಗಳು ಕೊಪ್ಪಳದಿಂದ ಹುಬ್ಬಳ್ಳಿಗೆ (hubballi) ಓಡಿ ಬಂದಿದ್ದಾರೆ.
ಪ್ರೀತಿಗೆ ಹೆತ್ತವರ ವಿರೋಧ
ನಾಗರಾಜ್ ಮತ್ತು ಶೈಲಜಾ ಕೊಪ್ಪಳ ನಗರದ ಮಿಟ್ಟಿಗೇರಿ ಬಡಾವಣೆ ನಿವಾಸಿಗಳು. ಕಳೆದ ರಾತ್ರಿ ಬಸ್ ಹತ್ತಿಕೊಂಡು ಹುಬ್ಬಳ್ಳಿಗೆ ಬಂದಿರುವ ಜೋಡಿ, ಮುಂದೆ ಎಲ್ಲಿಗೆ ಹೋಗಬೇಕು, ಏನು ಮಾಡಬೇಕು ಅನ್ನೋದು ತಿಳಿಯದೇ ಕಂಗಾಲಾಗಿದ್ದಾರೆ. ಮರಳಿ ಕೊಪ್ಪಳಕ್ಕೆ ಹೋದರೆ ಜೀವ ಭಯ, ಹೀಗಾಗಿ ಹುಬ್ಬಳ್ಳಿಯಲ್ಲಿಯೇ ಅಡ್ಡಾಡುತ್ತಿದ್ದಾರೆ. ಇನ್ನು ಈ ಜೋಡಿ ಕೊಪ್ಪಳದಿಂದ ಹುಬ್ಬಳ್ಳಿಗೆ ಬರಲು ಕಾರಣ ಇವರ ಪ್ರೀತಿಗೆ ಹೆತ್ತವರ ವಿರೋಧ.
ಕೊಪ್ಪಳ ನಗರದ ಮಿಟ್ಟಿಗೇರಿಯ ನಿವಾಸಿಯಾಗಿರುವ ನಾಗರಾಜ್ ಹಡಪದ ಮತ್ತು ಶೈಲಜಾ ವಾಲೀಕಾರ ಒಂದೇ ಬಡಾವಣೆ ನಿವಾಸಿಗಳು. ನಾಗರಾಜ್, ಕಟ್ಟಡ ನಿರ್ಮಾಣ ಕೆಲಸ ಮಾಡಿದರೆ, ಶೈಲಜಾ ಪಿಯುಸಿ ನಂತರ ಮನೆಯಲ್ಲಿಯೇ ಇದ್ದಾಳಂತೆ. ಇನ್ನು ಇಬ್ಬರು ಒಂದೇ ಬಡಾವಣೆಯಲ್ಲಿಯೇ ಮನೆ ಇದ್ದಿದ್ದರಿಂದ ಇಬ್ಬರ ನಡುವೆ ಎಂಟು ವರ್ಷಗಳ ಹಿಂದೆಯೇ ಪ್ರೀತಿಯಾಗಿತ್ತಂತೆ. ಆದರೆ ಕಳೆದ ಒಂದುವರೆ ವರ್ಷದಿಂದ ಬಿಟ್ಟಿರಲಾರದಷ್ಟು ಪ್ರೀತಿ ಗಾಢವಾಗಿದೆ. ಹೀಗಾಗಿ ಇಬ್ಬರು ಮದುವೆಯಾಗಿ ಒಟ್ಟಿಗೆ ಬದುಕು ಕಟ್ಟಿಕೊಳ್ಳಬೇಕು ಅಂತ ಕನಸು ಕಂಡಿದ್ದಾರೆ. ಆದರೆ ಐದು ತಿಂಗಳ ಹಿಂದೆ ಯುವತಿ ಮನೆಯವರಿಗೆ ಪ್ರೀತಿ ವಿಚಾರ ಗೊತ್ತಾಗಿದ್ದು, ನಾಗರಾಜ್ನನ್ನು ಮಾತನಾಡುವುದಾಗಿ ಕರೆದು ಥಳಿಸಿದ್ದರಂತೆ.
ಊರು ಬಿಟ್ಟು ಓಡಿಬಂದ ಪ್ರೇಮಿಗಳು
ನಮ್ಮ ಯುವತಿ ತಂಟೆಗೆ ಬಂದರೆ ಜೀವ ಸಮೇತ ಉಳಿಸಲ್ಲ ಅಂತ ಬೆದರಿಕೆ ಹಾಕಿದ್ದರಂತೆ. ಬಳಿಕ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದ ನಾಗರಾಜ್ಗೆ ಕಳೆದ ರಾತ್ರಿ ಕರೆ ಮಾಡಿದ ಶೈಲಜಾ, ಮದುವೆಯಾದರೆ ನಿನ್ನ ಜೊತೆಯೇ. ನಾವು ಊರು ಬಿಟ್ಟು ಓಡಿ ಹೋಗೋಣ ಅಂತ ಹೇಳಿ, ನಾಗರಾಜ್ನನ್ನು ಕರೆದುಕೊಂಡು ಹುಬ್ಬಳ್ಳಿಗೆ ಬಂದಿದ್ದಾಳೆ.
ಇನ್ನು ನಾಗರಾಜ್ ಮನಯಲ್ಲಿ ಶೈಲಜಾ ಜೊತೆ ವಿವಾಹಕ್ಕೆ ಒಪ್ಪಿಗೆ ಇದೆ. ಆದರೆ ಶೈಲಜಾ ಮನೆಯಲ್ಲಿ ಮಾತ್ರ ವಿವಾಹಕ್ಕೆ ಒಪ್ಪಿಗೆ ಇಲ್ಲ. ಇದಕ್ಕೆ ಕಾರಣ ಅಂತರ್ಜಾತಿ. ನಾಗರಾಜ್ ಹಡಪದ ಸಮುದಾಯದವರಾಗಿದ್ದರೆ, ಶೈಲಜಾ ಗೊಲ್ಲ ಸಮುದಾಯಕ್ಕೆ ಸೇರಿದ್ದಾಳೆ. ಹೀಗಾಗಿ ಜಾತಿ ಬೇರೆ ಬೇರೆಯಾಗಿದ್ದು, ಯಾವುದೇ ಕಾರಣಕ್ಕೂ ಮದುವೆಗೆ ಒಪ್ಪಿಗೆಯಿಲ್ಲ ಅಂತ ಶೈಲಜಾ ಕುಟುಂಬ ಪಟ್ಟುಹಿಡಿದಿದೆ.
ನಮ್ಮ ಪಾಡಿಗೆ ಇರಲು ಬಿಡಿ: ಹೆತ್ತವರಿಗೆ ಮನವಿ
ಇನ್ನು ಶೈಲಜಾಗೆ ಬೇರೆ ಯುವಕನ ಜೊತೆ ವಿವಾಹಕ್ಕೆ ಹೆತ್ತವರು ಮುಂದಾಗಿದ್ದರಂತೆ. ಅದಕ್ಕಾಗಿ ಹುಡುಗನ ಹುಟುಕಾಟ ಕೂಡ ನಡೆಸಿದ್ದರಂತೆ. ಬೇರೆ ಯುವಕನ ಜೊತೆ ವಿವಾಹಕ್ಕೆ ಇಷ್ಟ ಇಲ್ಲದೇ ಇದ್ದಿದ್ದರಿಂದ, ಶೈಲಜಾ, ನಾಗರಾಜ್ ಜೊತೆ ಓಡಿ ಬಂದಿದ್ದಾಳೆ. ನಾವು ನಮ್ಮ ಜೀವನ ಕಟ್ಟಿಕೊಳ್ಳುತ್ತೇವೆ. ದಯವಿಟ್ಟು ನಮಗೆ ಅಡ್ಡಿ ಮಾಡಬೇಡಿ, ನಮ್ಮ ಪಾಡಿಗೆ ಇರಲು ಬಿಡಿ ಅಂತ ಶೈಲಜಾ ಹೆತ್ತವರಿಗೆ ಮನವಿ ಮಾಡಿದ್ದಾಳೆ.
ಇನ್ನು ಈ ಬಗ್ಗೆ ಈ ಹಿಂದೆ ಕೊಪ್ಪಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದರು ಕೂಡ ಯಾವುದೇ ಪ್ರಯೋಜನವಾಗಿಲ್ಲವಂತೆ. ಹೀಗಾಗಿ ಪ್ರೇಮಿಗಳು ದಿಕ್ಕು ತೋಚದಂತಾಗಿ, ಕೊಪ್ಪಳದಿಂದ ಹುಬ್ಬಳ್ಳಿಗೆ ಬಂದಿದ್ದಾರೆ. ಇಬ್ಬರು ಪ್ರಾಪ್ತ ವಯಸ್ಕರರು ಆಗಿದ್ದರಿಂದ ಪೊಲೀಸರು ಅಂತರ್ಜಾತಿ ವಿವಾಹವಾಗಲು ಮುಂದಾಗಿರುವ ಜೋಡಿಗೆ ಸೂಕ್ತ ರಕ್ಷಣೆ ನೀಡಬೇಕಿದೆ.
ಭಾರತದಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಗಳು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಇತ್ತೀಚೆಗೆ ಅಪೊಲೊ ಆಸ್ಪತ್ರೆ ಬಿಡುಗಡೆ ಮಾಡಿದ ‘ಹೆಲ್ತ್ ಆಫ್ ದ ನೇಶನ್ (HoN) 2026’ ವರದಿ ಪ್ರಕಾರ, ದೇಶದಲ್ಲಿ ಪ್ರತೀ 10 ಉದ್ಯೋಗಿಗಳಲ್ಲಿ ಸುಮಾರು 5 ಜನರು ಪ್ರೀಡಯಾಬಿಟೀಸ್ ಅಥವಾ ಡಯಾಬಿಟೀಸ್ (Diabetes) ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಭವಿಷ್ಯದಲ್ಲಿ ದೊಡ್ಡ ಆರೋಗ್ಯ ಸವಾಲಾಗಿ ಪರಿಣಮಿಸುವ ಸಾಧ್ಯತೆ ಇದೆ ಎಂದು ಹೇಳಿದೆ. ಇದು ಒಂದು ರೀತಿಯ ಸೈಲೆಂಟ್ ಕಾಯಿಲೆಯಾದ್ದರಿಂದ ಹಲವರಿಗೆ ತಮ್ಮ ಶುಗರ್ ಮಟ್ಟ ಹೆಚ್ಚಾಗಿರುವುದೇ ತಿಳಿಯುವುದಿಲ್ಲ. ಆರಂಭಿಕ ಲಕ್ಷಣಗಳು ಬಹಳ ಸೂಕ್ಷ್ಮವಾಗಿರುವುದರಿಂದ ಇದನ್ನು ನಿರ್ಲಕ್ಷಿಸುವ ಪ್ರವೃತ್ತಿ ಹೆಚ್ಚಾಗಿದೆ. ದೀರ್ಘಕಾಲ ಇದನ್ನು ಗಮನಿಸದಿದ್ದರೆ ಹೃದಯ, ಮೂತ್ರಪಿಂಡ ಮತ್ತು ಕಣ್ಣುಗಳಿಗೆ ಸಂಬಂಧಿಸಿದ ಗಂಭೀರ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಹಾಗಾದರೆ ಈ ರೀತಿ ಆಗುವುದಕ್ಕೆ ಕಾರಣವೇನು, ಈ ರೀತಿಯ ಸಮಸ್ಯೆಗಳನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಜೀವನಶೈಲಿ ಮುಖ್ಯ ಕಾರಣ:
ಪ್ರತಿನಿತ್ಯ ಕೆಲಸಕ್ಕೆ ಹೋಗುವವರ ಜೀವನದಲ್ಲಿ ಹೆಚ್ಚು ಸಮಯ ಕುಳಿತು ಕೆಲಸ ಮಾಡುವುದು, ವ್ಯಾಯಾಮದ ಕೊರತೆ ಮತ್ತು ಜಂಕ್ ಫುಡ್ ಸೇವನೆ ಪ್ರಮುಖ ಕಾರಣಗಳಾಗಿವೆ. ಅಧಿಕ ಸ್ಕ್ರೀನ್ ಟೈಮ್, ಒತ್ತಡ ಮತ್ತು ಅಸ್ಥಿರ ಆಹಾರ ಪದ್ಧತಿ ದೇಹದ ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಗ್ಗಿಸುತ್ತದೆ. ಇದರಿಂದ ಶುಗರ್ ನಿಯಂತ್ರಣ ಕಷ್ಟವಾಗುತ್ತದೆ. ವರದಿ ಪ್ರಕಾರ, ಮಧುಮೇಹದ ಜೊತೆಗೆ ಹೈ ಬಿಪಿ, ಅತಿಯಾದ ತೂಕ ಮತ್ತು ವಿಟಮಿನ್ ಕೊರತೆಗಳೂ ಹೆಚ್ಚುತ್ತಿವೆ. ಹೆಚ್ಚಿದ ತೂಕ ಇನ್ಸುಲಿನ್ ರೆಸಿಸ್ಟೆನ್ಸ್ ಹೆಚ್ಚಿಸಿ ಶುಗರ್ ನಿಯಂತ್ರಣವನ್ನು ಕಷ್ಟವಾಗಿಸುತ್ತದೆ. ವಿಟಮಿನ್ D ಮತ್ತು B12 ಕೊರತೆ ದೇಹದ ಕಾರ್ಯವಿಧಾನವನ್ನು ಹಾಳುಮಾಡುತ್ತದೆ.
ತಜ್ಞರ ಪ್ರಕಾರ, ದಿನಕ್ಕೆ ಕನಿಷ್ಠ 30 ನಿಮಿಷ ವ್ಯಾಯಾಮ ಮಾಡುವುದು, ಸಮತೋಲನ ಆಹಾರ ಸೇವಿಸುವುದು ಮತ್ತು ಸಿಹಿ ಹಾಗೂ ಪ್ರೊಸೆಸ್ಡ್ ಆಹಾರಗಳಿಂದ ದೂರವಿರುವುದು ಅತ್ಯಗತ್ಯ. ಸರಿಯಾಗಿ ನಿದ್ರೆ ಮತ್ತು ಒತ್ತಡ ನಿಯಂತ್ರಣವೂ ಮುಖ್ಯ. ನಿಯಮಿತ ಆರೋಗ್ಯ ತಪಾಸಣೆ ಮೂಲಕ ಶುಗರ್ ಮತ್ತು ಬಿಪಿ ಮಟ್ಟವನ್ನು ಪರಿಶೀಲಿಸುವುದು ಉತ್ತಮ. ಏಕೆಂದರೆ ಮಧುಮೇಹವು ಈಗ ವಯೋವೃದ್ಧರಲ್ಲಿ ಮಾತ್ರವಲ್ಲದೆ, ಯುವ ಉದ್ಯೋಗಿಗಳಲ್ಲೂ ವೇಗವಾಗಿ ಹೆಚ್ಚುತ್ತಿದೆ. ಸರಿಯಾದ ಸಮಯದಲ್ಲಿ ಜೀವನಶೈಲಿ ಬದಲಾವಣೆ ಮಾಡಿಕೊಂಡರೆ ಈ ಅಪಾಯವನ್ನು ಕಡಿಮೆ ಮಾಡಬಹುದು. ಆರೋಗ್ಯಕರ ಅಭ್ಯಾಸಗಳೇ ಈ ಸಮಸ್ಯೆಗೆ ಶಾಶ್ವತ ಪರಿಹಾರವಾಗಿದೆ.
ಗಾಜಿಯಾಬಾದ್, ಏಪ್ರಿಲ್ 13: ಗಾಜಿಯಾಬಾದ್ನ ಶಾಲಿಮಾರ್ ಗಾರ್ಡನ್ನಲ್ಲಿ ನಿಲ್ಲಿಸಿದ್ದ ಕಾರಿನ ಕೆಳಗೆ 4 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಇದಕ್ಕೂ ಮೊದಲು ಆಕೆಯ ಮೇಲೆ ಅತ್ಯಾಚಾರ ನಡೆಸಲಾಗಿದೆ. ಈ ಅಪರಾಧದ ತನಿಖೆ ನಡೆಸುತ್ತಿದ್ದ ಪೊಲೀಸರು ಆಕೆಯ ಚಿಕ್ಕಪ್ಪನನ್ನು ವಶಕ್ಕೆ ಪಡೆದಿದ್ದಾರೆ. ಅವರೇ ಈ ಘಟನೆಯ ಹಿಂದೆ ಇದ್ದಾರೆ ಎಂದು ಹೇಳಲಾಗಿದೆ. ತಾನೇ ತನ್ನ ಅಣ್ಣನ ಮಗುವನ್ನು ಕೊಂದು ಅಮಾಯಕರಂತೆ ವರ್ತಿಸುತ್ತಿದ್ದಾರೆ ಎಂಬ ಅನುಮಾನ ಪೊಲೀಸರಿಗೆ ಬಂದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ.
ಏಪ್ರಿಲ್ 11ರಂದು ರಾತ್ರಿ 8 ಗಂಟೆ ಸುಮಾರಿಗೆ 80 ಅಡಿ ರಸ್ತೆಯಲ್ಲಿ ಕಾರಿನ ಕೆಳಗೆ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶವವನ್ನು ವಶಕ್ಕೆ ಪಡೆದ ನಂತರ ಈ ಘಟನೆಯ ತನಿಖೆ ಆರಂಭಿಸಲಾಯಿತು. ತನಿಖೆಯ ಸಮಯದಲ್ಲಿ ಈ ಘಟನೆಯ ಹಿಂದೆ ಮಗುವಿನ ಚಿಕ್ಕಪ್ಪ ಜಮೀಲ್ ಅಲಿಯಾಸ್ ಛೋಟು ಅವರ ಕೈವಾಡವಿದೆ ಎಂದು ತಿಳಿದುಬಂದಿದೆ.
ಆರೋಪಿಯು ಒಂಟಿಯಾಗಿದ್ದ ಮಗುವನ್ನು ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಮಗು ಮನೆಯಲ್ಲಿ ಒಂಟಿಯಾಗಿ ಇದ್ದುದರಿಂದ ಆರೋಪಿಯು ಪರಿಸ್ಥಿತಿಯ ಲಾಭ ಪಡೆದು ಅವಳನ್ನು ತನ್ನ ರೂಂಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದಾದ ಸ್ವಲ್ಪ ಸಮಯದ ಬಳಿಕ ಆ ಹುಡುಗಿಯ ಶವವು ಕಾರಿನ ಅಡಿಯಲ್ಲಿ ಪತ್ತೆಯಾಗಿದೆ. ಬಾಲಕಿಯ ಮರಣೋತ್ತರ ಪರೀಕ್ಷೆಯಲ್ಲಿ ನಂತರ ಆಕೆಯ ಕೊಲೆಗೂ ಮೊದಲು ಅತ್ಯಾಚಾರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆಕೆಯ ಕುತ್ತಿಗೆ ಮತ್ತು ಗುಪ್ತಾಂಗಗಳಲ್ಲಿ ಗಾಯದ ಗುರುತುಗಳಿವೆ. ತಪ್ಪಿಸಿಕೊಂಡಿರುವ ಆರೋಪಿಯನ್ನು ಹಿಡಿಯಲು ಪೊಲೀಸರು ಹಲವಾರು ತಂಡಗಳನ್ನು ರಚಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಭಾನುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಮುಂಬೈ ಇಂಡಿಯನ್ಸ್ ಹೀನಾಯ ಸೋಲು ದಾಖಲಿಸಿತು. ಈ ಸೋಲಿನೊಂದಿಗೆ ಈ ಆವೃತ್ತಿಯಲ್ಲಿ ಸತತ ಮೂರನೇ ಪಂದ್ಯ ಸೋತ ಮುಜುಗರಕ್ಕೀಡಾಗಿದೆ. ಇದೆಲ್ಲದರ ನಡುವೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ ಐಸಿಸಿ ದಂಡದ ಬರೆ ಎಳೆದಿದೆ.
ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದಲ್ಲಿ ಓವರ್ಗಳನ್ನು ಪೂರ್ಣಗೊಳಿಸಲು ವಿಫಲವಾದ ಕಾರಣ ಹಾರ್ದಿಕ್ ಪಾಂಡ್ಯಗೆ ದಂಡದ ರೂಪದಲ್ಲಿ ಶಿಕ್ಷೆ ವಿಧಿಸಲಾಗಿದೆ. ಐಪಿಎಲ್ ಶಿಸ್ತು ಸಂಹಿತೆಯ ಪ್ರಕಾರ, ನಿಗದಿತ ಸಮಯದಲ್ಲಿ ಓವರ್ಗಳನ್ನು ಪೂರ್ಣಗೊಳಿಸದಿದ್ದರೆ ತಂಡದ ನಾಯಕನಿಗೆ ದಂಡದ ರೂಪದಲ್ಲಿ ಶಿಕ್ಷೆ ವಿಧಿಸಲಾಗುತ್ತದೆ. ಅದರಂತೆ ಹಾರ್ದಿಕ್ ಪಾಂಡ್ಯ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
ಕ್ರಿಕೆಟ್ ನಿಯಮಗಳ ಪ್ರಕಾರ, ಸೀಮಿತ ಓವರ್ಗಳ ಪಂದ್ಯಗಳಲ್ಲಿ 20 ಓವರ್ಗಳನ್ನು ನಿರ್ದಿಷ್ಟ ಸಮಯದಲ್ಲಿ ಪೂರ್ಣಗೊಳಿಸಬೇಕು. ಆದರೆ ಈ ಪಂದ್ಯದಲ್ಲಿ ಪಾಂಡ್ಯ ಪಡೆ ನಿಗದಿತ ಸಮಯದಲ್ಲಿ ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಅದಕ್ಕಾಗಿಯೇ ಹಾರ್ದಿಕ್ ಅವರ ಮೊದಲ ತಪ್ಪಿಗೆ ದಂಡ ವಿಧಿಸಲಾಗಿದೆ. ಈ ಲೀಗ್ನಲ್ಲಿ ಹಾರ್ದಿಕ್ ಮತ್ತೆ ಇದೇ ರೀತಿಯ ತಪ್ಪುಗಳನ್ನು ಪುನರಾವರ್ತಿಸಿದರೆ ಪಂದ್ಯದಿಂದ ನಿಷೇಧ ಹೇರಬಹುದು.
ಇನ್ನು ಪಂದ್ಯದ ವಿಚಾರಕ್ಕೆ ಬರುವುದಾದರೆ.. ಹಾರ್ದಿಕ್ ಅವರ ಕೆಲವು ನಿರ್ಧಾರಗಳು ಕೂಡ ಟೀಕೆಗೆ ಗುರಿಯಾಗಿವೆ. ಹತ್ತು ಓವರ್ಗಳ ನಂತರ ಅನುಭವಿ ಬೌಲರ್ ಶಾರ್ದೂಲ್ ಠಾಕೂರ್ ಅವರನ್ನು ಬೌಲಿಂಗ್ಗೆ ಕರೆತಂದಿದ್ದು ಹಾರ್ದಿಕ್ ಅವರ ಸರಿಯಾದ ನಿರ್ಧಾರವಾಗಿರಲಿಲ್ಲ ಎಂಬುದು ಪರಿಣಿತರ ವಾದವಾಗಿದೆ.
ಶಾರ್ದೂಲ್ ತಮ್ಮ ಮೊದಲ ಓವರ್ನಲ್ಲೇ ವಿಕೆಟ್ ಪಡೆಯುವ ಮೂಲಕ ತಮ್ಮ ಸಾಮರ್ಥ್ಯವನ್ನು ತೋರಿಸಿದರೂ, ತಡವಾಗಿ ಬೌಲಿಂಗ್ ಮಾಡಿಸಿದ್ದರಿಂದ ಎದುರಾಳಿ ತಂಡಕ್ಕೆ ದೊಡ್ಡ ಸ್ಕೋರ್ ಗಳಿಸಲು ಅವಕಾಶ ಸಿಕ್ಕಿತು. ಹೀಗಾಗಿ ಹಾರ್ದಿಕ್ ಅವರ ನಾಯಕತ್ವದ ಬಗ್ಗೆ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.
ಭಾರತೀಯ ಚಿತ್ರರಂಗದ ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ (Asha Bhosle) ಅವರ ಅಗಲಿಕೆಯಿಂದ ಅಭಿಮಾನಿಗಳಿಗೆ, ಆಪ್ತರಿಗೆ, ಕುಟುಂಬದವರಿಗೆ ತೀವ್ರ ನೋವಾಗಿದೆ. ಏಪ್ರಿಲ್ 12ರಂದು ನಿಧನರಾದ ಅವರ ಅಂತಿಮ ಸಂಸ್ಕಾರ ಇಂದು (ಏ.13) ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಈ ಸಂದರ್ಭದಲ್ಲಿ ಬಾಲಿವುಡ್ನ ಹಲವು ಗಣ್ಯರು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು. ಆದರೆ, ಅಲ್ಲಿ ನಡೆದ ಒಂದು ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಖ್ಯಾತ ನಟ ಜಾಕಿ ಶ್ರಾಫ್ ಅವರು ಪಾಪರಾಜಿಗಳ (Paparazzi) ವರ್ತನೆಗೆ ಬೇಸರಗೊಂಡು ಗರಂ ಆದ ವಿಡಿಯೋ ಈಗ ವೈರಲ್ ಆಗಿದೆ.
ಅಂತಿಮ ಸಂಸ್ಕಾರದ ಸಂದರ್ಭದಲ್ಲಿ ಸಚಿನ್ ತೆಂಡೂಲ್ಕರ್, ಟಬು, ರಣವೀರ್ ಸಿಂಗ್, ಆಮಿರ್ ಖಾನ್, ವಿಕ್ಕಿ ಕೌಶಲ್ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ ಜಾಕಿ ಶ್ರಾಫ್ ಅವರನ್ನು ಕಂಡು ಪಾಪರಾಜಿಗಳು ಮುಗಿಬಿದ್ದರು. ಆಶಾ ಭೋಸ್ಲೆ ಅವರ ನಿಧನದ ಬಗ್ಗೆ ‘ನಿಮಗೆ ಹೇಗನ್ನಿಸುತ್ತಿದೆ’ ಎಂಬ ಸಾಮಾನ್ಯ ಹಾಗೂ ವಿವೇಚನಾರಹಿತ ಪ್ರಶ್ನೆಯನ್ನು ಅವರು ನಟನಿಗೆ ಕೇಳಿದರು.
ಪಾಪರಾಜಿಗಳ ಈ ಪ್ರಶ್ನೆಯಿಂದ ತೀವ್ರ ಅಸಮಾಧಾನಗೊಂಡ ಜಾಕಿ ಶ್ರಾಫ್, ಅಲ್ಲೇ ನಿಂತು ಅವರಿಗೆ ಪಾಠ ಮಾಡಿದರು. ಪಾಪರಾಜಿಗಳಿಗೆ ಅವರು ಮರುಪ್ರಶ್ನೆ ಕೇಳಿದರು. ‘ಯಾರದ್ದಾದರೂ ತಾಯಿ ತೀರಿಕೊಂಡಾಗ ಹೇಗನ್ನಿಸುತ್ತದೆ? ನಮ್ಮ ತಾಯಿ ನಿಧನರಾಗಿದ್ದಾರೆ. ಯಾರಾದರೂ ತಮ್ಮ ತಾಯಿಯನ್ನು ಕಳೆದುಕೊಂಡಾಗ ಹೇಗನ್ನಿಸುತ್ತದೆ ಎಂದು ಕೇಳುವುದರಲ್ಲಿ ಅರ್ಥವಿದೆಯೇ? ನೀವು ಈ ಪರಿಸ್ಥಿತಿಯಲ್ಲಿ ಇದ್ದಿದ್ದರೆ ಹೇಗನಿಸುತ್ತದೆ’ ಎಂದು ಅವರು ಕೇಳಿದರು.
ಜಾಕಿ ಶ್ರಾಫ್ ಅವರ ಪ್ರಶ್ನೆಗೆ ಉತ್ತರಿಸಿದ ಪಾಪರಾಜಿಗಳು ‘ಬಹಳ ಬೇಸರವಾಗುತ್ತದೆ’ ಎಂದು ಉತ್ತರಿಸಿದರು. ತಕ್ಷಣ ಪ್ರತಿಕ್ರಿಯಿಸಿದ ಜಾಕಿ, ‘ಅಷ್ಟೇ, ಅಲ್ಲಿಗೆ ವಿಷಯ ಮುಗಿಯಿತು. ಇಂತಹ ಸಮಯದಲ್ಲಿ ಈ ರೀತಿಯ ಮಾತುಗಳು ಸರಿಯಲ್ಲ. ಬಿಟ್ಟುಬಿಡಿ ಸಹೋದರರೇ, ಮನೆಗೆ ಹೋಗಿ’ ಎಂದು ಹೇಳಿ ಅಲ್ಲಿಂದ ಹೊರನಡೆದರು. ಜಾಕಿ ಶ್ರಾಫ್ ಅವರು ಕ್ಲಾಸ್ ತೆಗೆದುಕೊಂಡ ಈ ವಿಡಿಯೋ ವೈರಲ್ ಆಗಿದೆ.
ಅಂತಿಮ ಸಂಸ್ಕಾರದಂತಹ ಗಂಭೀರ ಮತ್ತು ದುಃಖದ ಸಂದರ್ಭಗಳಲ್ಲಿ ಸೆಲೆಬ್ರಿಟಿಗಳ ಬಳಿ ಇಂತಹ ಪ್ರಶ್ನೆಗಳನ್ನು ಕೇಳುವುದು ಎಷ್ಟು ಸರಿ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಜಾಕಿ ಶ್ರಾಫ್ ಅವರ ಸಮಯೋಚಿತ ಪ್ರತಿಕ್ರಿಯೆ ಮತ್ತು ಆಶಾ ಭೋಸ್ಲೆ ಅವರ ಮೇಲೆ ಅವರಿಗಿದ್ದ ಗೌರವವನ್ನು ಅಭಿಮಾನಿಗಳು ಶ್ಲಾಘಿಸುತ್ತಿದ್ದಾರೆ. ಆಶಾ ಭೋಸ್ಲೆ ಅವರು ಭಾರತೀಯ ಸಂಗೀತಕ್ಕೆ ನೀಡಿದ ಕೊಡುಗೆ ಅಪಾರ. ಅವರ ಅಗಲಿಕೆಗೆ ಚಿತ್ರರಂಗದ ಪ್ರತಿಯೊಬ್ಬರೂ ಕಂಬನಿ ಮಿಡಿಯುತ್ತಿದ್ದು, ಜಾಕಿ ಶ್ರಾಫ್ ಅವರ ಈ ಆಕ್ರೋಶವು ಪರೋಕ್ಷವಾಗಿ ಇಡೀ ಚಿತ್ರರಂಗದ ನೋವನ್ನು ಪ್ರತಿಬಿಂಬಿಸಿದೆ.
ಇಸ್ಲಾಮಾಬಾದ್, ಏಪ್ರಿಲ್ 13: ಪಾಕಿಸ್ತಾನದ ಮಾಧ್ಯಮ ನಿಯಂತ್ರಣ ಪ್ರಾಧಿಕಾರವು ನೋಟಿಸ್ ಜಾರಿ ಮಾಡಿ, ಪಾಕಿಸ್ತಾನದ ಸುದ್ದಿ ವಾಹಿನಿಗಳು ಭಾರತದ ಗಾಯಕಿ ಆಶಾ ಭೋಸ್ಲೆ ಅವರ ನಿಧನದ ವರದಿ ಮಾಡುವಂತಿಲ್ಲ ಎಂದು ನಿರ್ಬಂಧ ವಿಧಿಸಿದೆ. ಭಾರತದ ಹಿರಿಯ ಗಾಯಕಿ ಆಶಾ ಭೋಸ್ಲೆ (Asha Bhosle) ಭಾನುವಾರ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು. ಇದು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಅವರ ಅಭಿಮಾನಿಗಳನ್ನು ಶೋಕದಲ್ಲಿ ಮುಳುಗಿಸಿದೆ.
ಆದರೆ, ಪಾಕಿಸ್ತಾನದ ಎಲೆಕ್ಟ್ರಾನಿಕ್ ಮಾಧ್ಯಮ ನಿಯಂತ್ರಣ ಪ್ರಾಧಿಕಾರ (PEMRA) ಆಶಾ ಭೋಸ್ಲೆ ಅವರ ಸಾವಿನ ವರದಿಗಾಗಿ ಪಾಕಿಸ್ತಾನದ ಸುದ್ದಿ ಚಾನೆಲ್ಗಳಿಗೆ ನೋಟಿಸ್ ಜಾರಿ ಮಾಡಿದೆ. ಆಶಾ ಭೋಸ್ಲೆ ಏಪ್ರಿಲ್ 12ರಂದು ಮುಂಬೈನಲ್ಲಿ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು. ಡಾನ್ ಎಂಬ ಪಾಕಿಸ್ತಾನದ ಮಾಧ್ಯಮ ಇಂದು ಗಾಯಕಿ ಆಶಾ ಭೋಸ್ಲೆ ಅವರ ಕುರಿತಾದ ಲೇಖನದಲ್ಲಿ ‘ಅವರ ಸಂಗೀತವು ಗಡಿಗಳನ್ನು ಮೀರಿ, ಅನೇಕ ಪಾಕಿಸ್ತಾನಿಗಳ ಹೃದಯಗಳನ್ನು ಮುಟ್ಟಿತು’ ಎಂದು ಹೇಳಿದೆ.
PEMRA issued a show cause notice to Geo News today about an airing report about the death of an Indian singer Asha Bhosle pic.twitter.com/KODNSH2Xb7
ಪಾಕಿಸ್ತಾನದೊಂದಿಗಿನ ಅವರ ಸಂಪರ್ಕ ಮತ್ತು ಪಾಕಿಸ್ತಾನದಲ್ಲಿ ಅವರ ಹೆಸರಿನ ಬಗ್ಗೆ ಇರುವ ಗೊಂದಲದ ಬಗ್ಗೆಯೂ ಆ ಸುದ್ದಿಯಲ್ಲಿ ವಿವರಿಸಲಾಗಿತ್ತು. ಜಿಯೋ ನ್ಯೂಸ್ ಕೂಡ ಅವರಿಗೆ ಸಂಬಂಧಿಸಿದ ವಿಷಯವನ್ನು ಪ್ರಸಾರ ಮಾಡಿತ್ತು. ಈಗ ಆ ಮಾಧ್ಯಮಗಳಿಗೆ ನೋಟಿಸ್ ನೀಡಲಾಗಿದೆ. ಪಾಕಿಸ್ತಾನದ ಹೆಚ್ಚಿನ ಪತ್ರಕರ್ತರು ಮತ್ತು ಈ ನೋಟಿಸ್ ಅನ್ನು ಖಂಡಿಸಿದ್ದಾರೆ.
PEMRA has issued a show-cause notice to Geo News for airing content related to the legendary subcontinent singer Asha Bhosle.
It has always been customary to revisit and celebrate the work of iconic artists when reporting on them. In fact, for an artist of Asha Bhosle’s stature,… pic.twitter.com/AuhFPyGZCL
“ಆಶಾ ಭೋಸ್ಲೆ ದೇಶದ ಗಡಿಯನ್ನು ಮೀರಿದ ಗಾಯಕಿ. ಆಶಾ ಭೋಸ್ಲೆ ಸ್ವತಃ ಪಾಕಿಸ್ತಾನದ ಪ್ರಸಿದ್ಧ ಗಾಯಕಿ ನೂರ್ ಜಹಾನ್ ಅವರನ್ನು ಮೆಚ್ಚಿಕೊಂಡಿದ್ದರು. ಅವರನ್ನು ಪ್ರೀತಿಯಿಂದ ‘ಅಕ್ಕ’ ಎಂದು ಕರೆಯುತ್ತಿರು. ಅವರು ನುಸ್ರತ್ ಫತೇಹ್ ಅಲಿ ಖಾನ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ನಾಸಿರ್ ಕಾಜ್ಮಿಯಂತಹ ಶ್ರೇಷ್ಠ ಉರ್ದು ಕವಿಗಳ ಕಾವ್ಯಕ್ಕೆ ಅವರು ಜೀವ ತುಂಬಿದ್ದರು” ಎಂದು ಪತ್ರಕರ್ತ ಅಬ್ಬಾಸ್ ಹೇಳಿದ್ದಾರೆ.
ಜಿಯೋ ನ್ಯೂಸ್ನ ಹಿರಿಯ ಪತ್ರಕರ್ತ ಅಜಾಜ್ ಸೈಯದ್ ಕೂಡ ಪಾಕಿಸ್ತಾನ ಸರ್ಕಾರವನ್ನು ಟೀಕಿಸಿದ್ದು, “ಪಾಕಿಸ್ತಾನದ ಮುಖ್ಯವಾಹಿನಿಯ ಮಾಧ್ಯಮಗಳ ಮೇಲೆ ಇಂತಹ ನಿಯಂತ್ರಣವನ್ನು ಬಹುಶಃ ಹಿಂದೆಂದೂ ಕಂಡಿಲ್ಲ. ಆಶಾ ಭೋಸ್ಲೆ ಅವರ ಸಾವಿನ ಕುರಿತು ತಮ್ಮ ಕೆಲಸವನ್ನು ಪ್ರಸಾರ ಮಾಡಿದ್ದಕ್ಕೂ ಶೋ-ಕಾಸ್ ನೋಟಿಸ್ಗಳನ್ನು ನೀಡಲಾಯಿತು. ಮಾಧ್ಯಮಗಳು ಯಾವಾಗಲೂ ಜವಾಬ್ದಾರಿಯುತವಾಗಿ ಕೆಲಸ ಮಾಡಿವೆ. ಆದರೆ ಮಾಧ್ಯಮವನ್ನು ನಿಯಂತ್ರಿಸುವವರು ತಮ್ಮನ್ನು ದೇಶಭಕ್ತರೆಂದು ಬಿಂಬಿಸಿಕೊಳ್ಳುತ್ತಾ ಮಾಧ್ಯಮವನ್ನು ರಾಜ್ಯ ವಿರೋಧಿ ಎಂದು ಬ್ರಾಂಡ್ ಮಾಡಿದ್ದಾರೆ” ಎಂದು ಅವರು ಎಕ್ಸ್ನಲ್ಲಿ ಬರೆದಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, (ಏಪ್ರಿಲ್ 13): ರಾಜ್ಯ ಸರ್ಕಾರವು 2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆಗೆ (employees transfer) ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಆಡಳಿತಾತ್ಮಕ ದಕ್ಷತೆ ಮತ್ತು ನೌಕರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿಯಮಾವಳಿಗಳನ್ನು ರೂಪಿಸಲಾಗಿದೆ. ಈ ಬಾರಿಯ ವರ್ಗಾವಣೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಸರ್ಕಾರ ನಿರ್ಧರಿಸಿದ್ದು ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ನೌಕರರು ತಮ್ಮ ಸೇವಾ ದಾಖಲೆಗಳನ್ನು (Service Records) ನಿಖರವಾಗಿ ಒದಗಿಸುವುದು ಕಡ್ಡಾಯವಾಗಿದೆ. ಕೇವಲ ವೈಯಕ್ತಿಕ ಬೇಡಿಕೆಗಳಲ್ಲದೆ, ಇಲಾಖೆಯ ಆಡಳಿತಾತ್ಮಕ ಅಗತ್ಯತೆಗಳನ್ನು (Administrative Exigencies) ಪ್ರಮುಖ ಮಾನದಂಡವಾಗಿ ಪರಿಗಣಿಸಿ ವರ್ಗಾವಣೆ ಆದೇಶ ಹೊರಡಿಸಲಾಗುತ್ತದೆ.
ಏಪ್ರಿಲ್ 13ರಿಂದ ಮೇ 31ರ ವರಗೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದ್ದು, ಈ ದಿನಾಂಕದೊಳಗೆ ಆಸಕ್ತ ಮತ್ತು ಅರ್ಹ ನೌಕರರು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ವಿಶೇಷಚೇತನ ನೌಕರರಿಗೆ ವಿನಾಯಿತಿ ಸೇರಿದಂತೆ ಹಲವು ನಿಯಮಗಳನ್ನು ವಿಧಿಸಲಾಗಿದೆ.
ಕೆಲವು ವಿಶೇಷ ಪ್ರಕರಣಗಳಲ್ಲಿ ಮಾನವೀಯ ನೆಲೆಯ ಮೇಲೆ ಆದ್ಯತೆ ನೀಡಲು ಮಾರ್ಗಸೂಚಿಯಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಅವು ಈ ಕೆಳಗಿನಂತಿವೆ ನೋಡಿ.
ಆರೋಗ್ಯ ಸಮಸ್ಯೆ: ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ನೌಕರರಿಗೆ ವಿಶೇಷ ಆದ್ಯತೆ.
ಮಹಿಳಾ ನೌಕರರು:ಗರ್ಭಿಣಿ ಮಹಿಳಾ ನೌಕರರ ವರ್ಗಾವಣೆ ವಿನಂತಿಗಳನ್ನು ಆದ್ಯತೆಯ ಮೇಲೆ ಪರಿಗಣಿಸಲಾಗುವುದು.
ಕುಟುಂಬದ ತುರ್ತು:ಕುಟುಂಬದ ಅನಿವಾರ್ಯ ಪರಿಸ್ಥಿತಿ ಅಥವಾ ಮಕ್ಕಳ ಶಿಕ್ಷಣದಂತಹ ಕಾರಣಗಳಿಗೆ ನಿಯಮಾನುಸಾರ ವಿನಾಯಿತಿ ನೀಡಲಾಗುತ್ತದೆ.
ಭತ್ಯೆ ಮತ್ತು ಸೌಲಭ್ಯಗಳು: ವರ್ಗಾವಣೆಗೊಂಡ ನೌಕರರಿಗೆ ಅವರ ಸೇವಾ ಅವಧಿ ಮತ್ತು ಪ್ರಸ್ತುತ ನಿರ್ವಹಿಸುತ್ತಿರುವ ಹುದ್ದೆಯ ಶ್ರೇಣಿಗೆ ಅನುಗುಣವಾಗಿ ನಿಗದಿಪಡಿಸಿದ ವರ್ಗಾವಣೆ ಭತ್ಯೆ (Transfer Allowance) ಹಾಗೂ ಇತರ ಸರ್ಕಾರಿ ಸೌಲಭ್ಯಗಳು ಲಭ್ಯವಿರಲಿವೆ.
ಸೂಚನೆ: ಅರ್ಹ ನೌಕರರು ನಿಗದಿತ ಕಾಲಮಿತಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಇಲಾಖೆಯ ಅಧಿಕೃತ ಜಾಲತಾಣ ಅಥವಾ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಇಂದಿನ ವೇಗದ ಜೀವನದಲ್ಲಿ, ಒತ್ತಡ ನಿರಂತರವಾಗಿ ಹೆಚ್ಚುತ್ತಿದ್ದು, ಇಂತಹ ಸಂದರ್ಭದಲ್ಲಿ ಖುಷಿಯಿಂದ ಜೀವನ ನಡೆಸುವುದು ಹಲವರಿಗೆ ಸವಾಲಿನ ಸಂಗತಿಯಾಗಿದೆ. ಈ ನಿರಂತರ ಒತ್ತಡ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳು ಮಾಡುತ್ತದೆ. ಹಾಗಾಗಿ ಜೀವನದಲ್ಲಿ ಖುಷಿಯಾಗಿರುವುದು (happy) ತುಂಬಾನೇ ಮುಖ್ಯ. ಹೌದು ಸಂತೋಷದಿಂದ ಇದ್ದರೆ, ಅದು ನಿಮ್ಮ ದೇಹದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಿದ್ದರೆ ಜೀವನದಲ್ಲಿ ಸಂತೋಷವಾಗಿರಲು ಏನು ಮಾಡಬೇಕು ಎಂಬುದನ್ನು ನೋಡೋಣ ಬನ್ನಿ.
ಜೀವನದಲ್ಲಿ ಸಂತೋಷವಾಗಿರಲು ಏನು ಮಾಡಬೇಕು?
ಸಕಾರಾತ್ಮಕವಾಗಿ ಯೋಚಿಸಿ:
ಈ ಸಕಾರಾತ್ಮಕ ಚಿಂತನೆಯು ನಿಮಗೆ ಸಂತೋಷ ಮತ್ತು ತೃಪ್ತಿಯನ್ನು ನೀಡುತ್ತದೆ. ನೀವು ಸಕಾರಾತ್ಮಕ ಆಲೋಚನೆಗಳನ್ನು ಬೆಳೆಸಿಕೊಂಡಾಗ ನಿಮ್ಮ ಮನಸ್ಸು ಅದೇ ರೀತಿಯಲ್ಲಿ ಯೋಚಿಸಲು ಪ್ರಾರಂಭಿಸುತ್ತದೆ. ಇದು ನಿಮ್ಮ ಇಡೀ ದಿನವನ್ನು ಉತ್ತಮಗೊಳಿಸುತ್ತದೆ ಮತ್ತು ನೀವು ಮಾಡುವ ಎಲ್ಲಾ ಕೆಲಸದಲ್ಲೂ ಸಂತೋಷವನ್ನು ನೀಡುತ್ತದೆ. ಹಾಗಾಗಿ ನಕಾರಾತ್ಮಕ ಆಲೋಚನೆಗಳನ್ನು ಬಿಟ್ಟು ಯಾವಾಗಲೂ ಸಕಾರಾತ್ಮಕವಾಗಿ ಯೋಚಿಸುವುದನ್ನು ಕಲಿಯಿರಿ. ಇದರಿಂದ ಖಂಡಿತವಾಗಿಯೂ ಯಾವಾಗಲೂ ಸಂತೋಷದಿಂದಿರುತ್ತೀರಿ.
ಕೃತಜ್ಞತೆಯನ್ನು ವ್ಯಕ್ತಪಡಿಸಿ: ಪ್ರತಿದಿನ ನಿಮ್ಮಲ್ಲಿರುವ ಎಲ್ಲದಕ್ಕೂ ಧನ್ಯವಾದ ಹೇಳಿ. ಒಳ್ಳೆಯ ಊಟ, ಉತ್ತಮ ಸ್ನೇಹಿತರ ಸಹವಾಸ ಅಥವಾ ನಿಮ್ಮಲ್ಲಿರು ಸವಲತ್ತು ಈ ಎಲ್ಲಾ ಸಣ್ಣ ವಿಷಯಗಳಿಗೂ ಸಹ ಧನ್ಯವಾದ ಹೇಳಿ. ಈ ಅಭ್ಯಾಸವು ನಾವು ಹೊಂದಿರುವ ವಸ್ತುಗಳ ಮೌಲ್ಯವನ್ನು ನಮಗೆ ಕಲಿಸುತ್ತದೆ ಅಲ್ಲದೆ ಇದು ನಮ್ಮನ್ನು ಹೆಚ್ಚು ಸಂತೋಷದಿಂದ ಇರುವಂತೆ ಮಾಡುತ್ತದೆ.
ನಿಮ್ಮನ್ನು ನೀವು ಪ್ರೀತಿಸಿ: ಸಂತೋಷದಿಂದ ಜೀವನ ನಡೆಸಲು ನಿಮಗಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುವುದು ಮತ್ತು ನಿಮ್ಮ ಬಗ್ಗೆ ಕಾಳಜಿ ವಹಿಸುವುದು ಮುಖ್ಯ. ಪ್ರತಿದಿನ ಸ್ವಲ್ಪ ಸಮಯ ನೀವು ಆನಂದಿಸುವ ಕೆಲಸವನ್ನು ಮಾಡಿ, ಉದಾಹರಣೆಗೆ ಪುಸ್ತಕ ಓದುವುದು, ಸಂಗೀತ ಕೇಳುವುದು ಅಥವಾ ನಡೆಯಲು ಹೋಗುವುದು. ಇದು ನಿಮ್ಮನ್ನು ಸಂತೋಷವಾಗಿರಿಸುತ್ತದೆ ಮತ್ತು ನಿಮ್ಮ ಶಕ್ತಿಯನ್ನು ಹೆಚ್ಚಿಸುತ್ತದೆ.
ಸಂಬಂಧಗಳಿಗೆ ಬೆಲೆ ಕೊಡಿ: ನಿಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯುವುದು ಅತ್ಯಗತ್ಯ. ಈ ಜನರು ಜೀವನವನ್ನು ವಿಶೇಷವಾಗಿಸುತ್ತಾರೆ ಮತ್ತು ನಮಗೆ ಸಂತೋಷವನ್ನು ತರುತ್ತಾರೆ. ನಾವು ಅವರೊಂದಿಗೆ ಇರುವಾಗ, ನಾವು ತುಂಬಾನೇ ಸಂತೋಷದಿಂದ ಇರುತ್ತೇವೆ. ಆದ್ದರಿಂದ ಆದಷ್ಟು ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯಿರಿ. ಒಳ್ಳೆಯ ಸಂಬಂಧಗಳು ಸಂತೋಷ, ಸಕಾರಾತ್ಮಕತೆ ಇವೆರಡನ್ನೂ ದ್ವಿಗುಣಗೊಳಿಸುತ್ತವೆ. ಆದ್ದರಿಂದ, ನಿಮಗಾಗಿ ಸಮಯ ತೆಗೆದುಕೊಳ್ಳಿ ಮತ್ತು ನಿಮ್ಮ ಹತ್ತಿರವಿರುವವರೊಂದಿಗೆ ಸುಂದರವಾದ ಕ್ಷಣಗಳನ್ನು ಕಳೆಯಿರಿ.
ಒಳ್ಳೆಯ ಸಹವಾಸದಲ್ಲಿರಿ: ನೀವು ಸಮಯ ಕಳೆಯುವ ಜನರು ನಿಮ್ಮ ಆಲೋಚನೆಯ ಮೇಲೆ ಆಳವಾದ ಪ್ರಭಾವ ಬೀರುತ್ತಾರೆ. ಆದ್ದರಿಂದ, ಯಾವಾಗಲೂ ನಿಮ್ಮನ್ನು ಮುಂದುವರಿಯಲು ಪ್ರೇರೇಪಿಸುವ ಮತ್ತು ಸಕಾರಾತ್ಮಕ ಮನೋಭಾವವನ್ನು ಹೊಂದಿರುವ ಜನರೊಂದಿಗೆ ಇರಿ. ಇದರಿಂದ ನೀವು ಸಂತೋಷದಿಂದಿರಲು ಸಾಧ್ಯವಾಗುತ್ತದೆ.
ನಿಮ್ಮನ್ನು ಕ್ಷಮಿಸಲು ಕಲಿಯಿರಿ: ಎಲ್ಲರೂ ತಪ್ಪುಗಳನ್ನು ಮಾಡುತ್ತಾರೆ. ಆದ್ದರಿಂದ, ನಿಮ್ಮನ್ನು ಕ್ಷಮಿಸಲು ಕಲಿಯುವುದು ಮುಖ್ಯ. ತಪ್ಪುಗಳಿಂದ ಕಲಿಯುವುದು ನಾವು ಜೀವನದಲ್ಲಿ ಮುಂದುವರಿಯಲು ಇರುವ ಉತ್ತಮ ಮಾರ್ಗವಾಗಿದೆ. ಭೂತಕಾಲದ ಬಗ್ಗೆ ಯೋಚಿಸುವುದು ನೋವನ್ನು ಮಾತ್ರ ತರುತ್ತದೆ. ಸಕಾರಾತ್ಮಕ ಮನಸ್ಥಿತಿಯೊಂದಿಗೆ ಹೊಸ ಆರಂಭವನ್ನು ಪ್ರಾರಂಭಿಸಿ. ಇದರಿಂದ ನೀವು ಜೀವನದಲ್ಲಿ ಸಂತೋಷವಾಗಿರಬಹುದು.
ಧ್ಯಾನ ಮಾಡಿ: ದಿನಕ್ಕೆ 5 ರಿಂದ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ನಿಮ್ಮ ಮನಸ್ಸು ಶಾಂತವಾಗುತ್ತದೆ. ಇದು ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಆಲೋಚನಾ ಶಕ್ತಿಯನ್ನು ಸುಧಾರಿಸುತ್ತದೆ. ಧ್ಯಾನವು ನಿಮ್ಮನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ.
ಬೆಂಗಳೂರು, ಏಪ್ರಿಲ್ 13: ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ (IPL) ಕ್ರೇಜ್ ಶುರುವಾಗಿದೆ. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯಗಳನ್ನು ನೋಡಲು ಕಾತರರಾಗಿರುವ ಅಭಿಮಾನಿಗಳಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಗುಡ್ ನ್ಯೂಸ್ ನೀಡಿದೆ. ಏಪ್ರಿಲ್ 15, 18 ಮತ್ತು 24ರಂದು ನಡೆಯಲಿರುವ ಪಂದ್ಯಗಳ ದಿನದಂದು ರಾತ್ರಿ 11ರಿಂದ ತಡರಾತ್ರಿ 2 ಗಂಟೆವರೆಗೆ ನಮ್ಮ ಮೆಟ್ರೋ ಸಂಚಾರ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ಏಪ್ರಿಲ್ 15, 18 ಮತ್ತು 24ರಂದು ನಡೆಯುವ ಐಪಿಎಲ್ ಪಂದ್ಯಗಳಿಗೆ ಹೆಚ್ಚುವರಿ ಮೆಟ್ರೋ ಸೇವೆಯನ್ನು ಬಿಎಂಆರ್ಸಿಎಲ್ ಘೋಷಿಸಿದೆ. ಐಪಿಎಲ್ ಅಭಿಮಾನಿಗಳಿಗೆ ಸಹಕಾರಿ ಆಗುವ ದೃಷ್ಟಿಯಲ್ಲಿ ಹೆಚ್ಚುವರಿ ಸೇವೆಯನ್ನು ಒದಗಿಸಲಾಗುತ್ತಿದೆ. ರಾತ್ರಿ 11ರಿಂದ ತಡರಾತ್ರಿ 2 ಗಂಟೆವರೆಗೆ ಮೆಟ್ರೋ ಸಂಚಾರ ಇರಲಿದೆ.
ಬಿಎಂಆರ್ಸಿಎಲ್ ಟ್ವೀಟ್
Extension of Metro Services for IPL 2026 Match in Bengaluru. / ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2026 ಪಂದ್ಯದ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ.ಹೆಚ್ಚಿನ ವಿವರಗಳಿಗೆ ಮಾಧ್ಯಮ ಪ್ರಕಟಣೆ ಯನ್ನು ವೀಕ್ಷಿಸಿ. pic.twitter.com/LAobmD1IT3
ಸಿಲ್ಕ್ ಇನ್ಸ್ಟಿಟ್ಯೂಟ್ ಮತ್ತು ಮಾದವಾರ: ರಾತ್ರಿ 12:45 ಗಂಟೆಗೆ
ಬೊಮ್ಮಸಂದ್ರ: ರಾತ್ರಿ 1 ಗಂಟೆಗೆ
ಆರ್.ವಿ. ರಸ್ತೆ: ರಾತ್ರಿ 2 ಗಂಟೆಗೆ
ಮೆಜೆಸ್ಟಿಕ್ನಿಂದ ನಾಲ್ಕೂ ದಿಕ್ಕುಗಳಿಗೆ ತಡರಾತ್ರಿ 1:30ಕ್ಕೆ ಕೊನೆಯ ರೈಲು ಹೊರಡಲಿದೆ.
ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ
ಇನ್ನು ಐಪಿಎಲ್ ಟಿಕೆಟ್ನಲ್ಲೇ ಮೆಟ್ರೋ ಕ್ಯೂಆರ್ (QR) ಕೋಡ್ ಲಭ್ಯವಿದ್ದು, ಎರಡು ಮಾರ್ಗಗಳ ಪ್ರಯಾಣಕ್ಕೆ ಇದನ್ನು ಬಳಸಬಹುದಾಗಿದೆ. ಸ್ಟೇಡಿಯಂಗೆ ಹತ್ತಿರವಿರುವ ಕಬ್ಬನ್ ಪಾರ್ಕ್ ಮತ್ತು ಎಂ.ಜಿ. ರಸ್ತೆ ನಿಲ್ದಾಣಗಳನ್ನು ಬಳಸಲು ಸೂಚಿಸಲಾಗಿದೆ. ಅದೇ ರೀತಿಯಾಗಿ ನಿಲ್ದಾಣಗಳಲ್ಲಿ ಹೆಚ್ಚಿನ ಪಾರ್ಕಿಂಗ್ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ. ದ್ವಿಚಕ್ರ ವಾಹನಗಳಿಗೆ 30 ರೂ, ಕಾರುಗಳಿಗೆ 60 ರೂ ಪಾರ್ಕಿಂಗ್ ಶುಲ್ಕ ನಿಗದಿ ಮಾಡಲಾಗಿದೆ. ಆ ಮೂಲಕ ಟ್ರಾಫಿಕ್ ಜಾಮ್ ತಪ್ಪಿಸಲು ಮೆಟ್ರೋ ಬಳಸುವಂತೆ ಬಿಎಂಆರ್ಸಿಎಲ್ ಮನವಿ ಮಾಡಿದೆ.
ಇನ್ನು ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲ ದೃಷ್ಟಿಯಿಂದ ಬಿಎಂಟಿಸಿ ಬಸ್ಗಳು ವಿಶೇಷ ಕಾರ್ಯಾಚರಣೆ ನಡೆಸಲಿವೆ. ಪಂದ್ಯ ನಡೆಯುವ ದಿನದಂದು ಬಿಎಂಟಿಸಿ ಬಸ್ಗಳ ಸೇವಾ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಪ್ರಯಾಣಿಕರ ಬೇಡಿಕೆಗೆ ಅನುಸಾರವಾಗಿ ಬಿಎಂಟಿಸಿ ಬಸ್ಗಳನ್ನು ನಿಯೋಜಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಿಂದ ವಿವಿಧ ಪ್ರದೇಶ ನಡುವೆ ಸಂಚರಿಸುವ ಬಸ್ಗಳ ವಿವರ
ಸರ್ಜಾಪುರ ಮತ್ತು ಕಾಡುಗೋಡಿ ಬಸ್ ನಿಲ್ದಾಣ
ಎಲೆಕ್ಟ್ರಾನಿಕ್ ಸಿಟಿ (ಹೊಸೂರು ರಸ್ತೆ)
ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್
ಆರ್.ಕೆ. ಹೆಗಡೆ ನಗರ – ಯಲಹಂಕ (ನಾಗವಾರ, ಟ್ಯಾನರಿ ರಸ್ತೆ ಮೂಲಕ)