ತುಂಬಾ ಬೇಗ ಸುಸ್ತಾಗುವುದಕ್ಕೆ ಕಾರಣ ಏನ್ ಗೊತ್ತಾ? ಕಾರಣ ತಿಳಿದರೆ ಆಶ್ಚರ್ಯವಾಗುವುದು ಖಂಡಿತ

ಇತ್ತೀಚಿನ ದಿನಗಳಲ್ಲಿ ಹಲವರಿಗೆ ಯಾವುದೇ ರೀತಿಯ ಕೆಲಸ ಮಾಡದಿದ್ದರೂ ಕೂಡ ಸುಸ್ತಾಗುವುದನ್ನು (Fatigue) ನೋಡಿರಬಹುದು. ಯಾವುದೇ ರೀತಿಯ ದೇಹ ದಂಡಿಸುವ ಕೆಲಸ ಮಾಡದಿದ್ದರೂ ಕೂಡ ದಣಿವು, ದುರ್ಬಲತೆ ಮತ್ತು ನಿಷ್ಕ್ರಿಯತೆ ಕಂಡುಬರುತ್ತದೆ. ಆದರೆ ಈ ರೀತಿಯಾಗುವುದನ್ನು ಯಾರೂ ಕೂಡ ಅಷ್ಟಾಗಿ ಗಣನೆಗೆ ತೆಗದುಕೊಳ್ಳುವುದಿಲ್ಲ. ಸಾಮಾನ್ಯ ಸಮಸ್ಯೆಗಳಲ್ಲಿ ಒಂದೆಂದು ನಿರ್ಲಕ್ಷಿಸುತ್ತಾರೆ. ಆದರೆ ಆರೋಗ್ಯ ತಜ್ಞರು ಈ ರೀತಿ ಮಾಡುವುದು ಸರಿಯಲ್ಲ ಎಂದು ಹೇಳುತ್ತಾರೆ. ಏಕೆಂದರೆ ಈ ರೀತಿ ಕಾರಣವಿಲ್ಲದೆ ದಣಿವಾಗುವುದಕ್ಕೆ ಬಹಳಷ್ಟು ಕಾರಣಗಳಿರಬಹುದು ಅವುಗಳಲ್ಲಿ ಪ್ರಮುಖವಾದದ್ದು ದೇಹದಲ್ಲಿ ಅಗತ್ಯವಿರುವ ವಿಟಮಿನ್ ಕೊರತೆಯಾಗಿದೆ.

ದಣಿವಿಗೆ ಕಾರಣವಾಗುವ ಲಕ್ಷಣಗಳು:

ನಿರಂತರವಾಗಿ ದೌರ್ಬಲ್ಯ, ಕೆಲಸ ಮಾಡಲು ಆಸಕ್ತಿ ಕಡಿಮೆ, ತಲೆಸುತ್ತು, ಸ್ನಾಯು ನೋವು, ಗಮನ ಕೇಂದ್ರೀಕರಣದಲ್ಲಿ ತೊಂದರೆ ಮತ್ತು ಬೇಗನೆ ದಣಿವು ಕಾಣಿಸಿಕೊಳ್ಳುವುದು ಪ್ರಮುಖ ಲಕ್ಷಣಗಳು. ಕೆಲವರಿಗೆ ಮೆಟ್ಟಿಲೇರುವಾಗ ಉಸಿರಾಟ ತೊಂದರೆ, ಹೃದಯ ಬಡಿತ ಹೆಚ್ಚಾಗುವುದು ಅಥವಾ ತಲೆ ಭಾರವಾಗಿರುವ ಅನುಭವವೂ ಕಾಣಬಹುದು.

ಇದನ್ನೂ ಓದಿ: ಸಾಮಾನ್ಯ ವೈದ್ಯಕೀಯ ಪರೀಕ್ಷೆಗಳ ವರದಿ ನಾರ್ಮಲ್ ಇದ್ದರೂ ದಿನಪೂರ್ತಿ ದಣಿವೇ? ಈ 4 ಆರೋಗ್ಯ ಸಮಸ್ಯೆಗಳ ಬಗ್ಗೆ ಇರಲಿ ಗಮನ

ಯಾವ ವಿಟಮಿನ್ ಮುಖ್ಯ?

ದಣಿವನ್ನು ಕಡಿಮೆ ಮಾಡಿಕೊಳ್ಳಲು ವಿಟಮಿನ್ ಬಿ12 ಅತ್ಯಂತ ಮುಖ್ಯವಾಗಿದೆ. ಇದು ರಕ್ತದ ಕೆಂಪು ರಕ್ತಕಣಗಳ ನಿರ್ಮಾಣಕ್ಕೆ ಸಹಾಯ ಮಾಡುತ್ತದೆ ಮತ್ತು ನರಮಂಡಲದ ಕಾರ್ಯವನ್ನು ಸರಾಗವಾಗಿ ನಡೆಸುತ್ತದೆ. ಈ ವಿಟಮಿನ್ ಕೊರತೆಯಿಂದ ದೇಹದಲ್ಲಿ ಆಮ್ಲಜನಕ ಸರಬರಾಜು ಕಡಿಮೆಯಾಗುತ್ತದೆ, ಇದರಿಂದ ದಣಿವು ಹೆಚ್ಚಾಗುತ್ತದೆ. ಈ ವಿಟಮಿನ್ ಬಿ12ನ್ನು ಸರಿಯಾಗಿ ಪಡೆಯಲು ಹಾಲು, ಮೊಸರು, ಪನೀರ್, ಮೊಟ್ಟೆ, ಮೀನು ಮತ್ತು ಮಾಂಸಾಹಾರವನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಸಸ್ಯಾಹಾರಿಗಳು ಫೋರ್ಟ್‌ಫೈಡ್ ಆಹಾರಗಳನ್ನು ಆಯ್ಕೆ ಮಾಡಬಹುದು. ಕೆಲ ಸಂದರ್ಭಗಳಲ್ಲಿ ವೈದ್ಯರು ಸಪ್ಲಿಮೆಂಟ್ ಅಥವಾ ಇಂಜೆಕ್ಷನ್ ಸಲಹೆ ನೀಡಬಹುದು, ಆದರೆ ವೈದ್ಯರ ಸಲಹೆಯಿಲ್ಲದೆ ಅವನ್ನು ಬಳಸಬಾರದು.

ಜೀವನಶೈಲಿಯೂ ಮುಖ್ಯ:

ಸರಿಯಾದ ನಿದ್ರೆ, ನಿಯಮಿತ ವ್ಯಾಯಾಮ ಮತ್ತು ಒತ್ತಡ ನಿಯಂತ್ರಣ ದೇಹದ ಶಕ್ತಿಯನ್ನು ಹೆಚ್ಚಿಸಲು ಸಹಕಾರಿ. ಹೆಚ್ಚು ಸ್ಕ್ರೀನ್ ಟೈಮ್ ಕಡಿಮೆ ಮಾಡಿ, ದಿನದ ನಡುವೆ ವಿರಾಮ ತೆಗೆದುಕೊಳ್ಳುವುದು ಸಹ ಉಪಯುಕ್ತ. ನಿರಂತರ ದಣಿವು ಕೇವಲ ವಿಶ್ರಾಂತಿ ಕೊರತೆಯ ಕಾರಣವಲ್ಲ, ಅದು ವಿಟಮಿನ್ ಕೊರತೆಯ ಸೂಚನೆಯಾಗಿರಬಹುದು. ಹಾಗಾಗಿ ಸರಿಯಾದ ಆಹಾರ ಮತ್ತು ಜೀವನಶೈಲಿಯಿಂದ ಈ ಸಮಸ್ಯೆಯನ್ನು ನಿಯಂತ್ರಿಸಬಹುದು. ಅಗತ್ಯವಿದ್ದರೆ ವೈದ್ಯರ ಸಲಹೆ ಪಡೆಯುವುದು ಉತ್ತಮ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಹಿಳಾ ಮೀಸಲಾತಿಗೆ ವೇದಿಕೆ ಸಜ್ಜು; ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 850ಕ್ಕೆ ಏರಿಸಲು ಮೋದಿ ಸರ್ಕಾರ ಪ್ರಸ್ತಾಪ – Kannada News | Modi Government proposes increase of Lok Sabha seats from 543 to 850 setting stage for womens reservation

ನವದೆಹಲಿ, ಏಪ್ರಿಲ್ 14: ಮಹಿಳಾ ಮೀಸಲಾತಿ ಮಸೂದೆಯನ್ನು (Women’s Reservation Bill) ಜಾರಿಗೆ ತರಲು ವೇದಿಕೆ ಸಿದ್ಧವಾಗಿದೆ. ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಸ್ಥಾನಗಳ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಿದೆ. ಈ ವಿಸ್ತರಣೆಯು ನಾರಿ ಶಕ್ತಿ ವಂದನ (Nari Shakti Vandana) ಅಧಿನಿಯಮ (ಮಹಿಳಾ ಮೀಸಲಾತಿ ಕಾಯ್ದೆ) ಅನುಷ್ಠಾನವನ್ನು ಜಾರಿಗೊಳಿಸುವ ಯೋಜನೆಯ ಭಾಗವಾಗಿದೆ. ಇದು ಕೆಳಮನೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಗುರಿಯನ್ನು ಹೊಂದಿದೆ.

ಈ ಕಾಯ್ದೆ ಸದನದ ಸುಮಾರು ಮೂರನೇ ಒಂದು ಭಾಗದಷ್ಟು ಅಥವಾ 273 ಸ್ಥಾನಗಳನ್ನು ಮಹಿಳಾ ಶಾಸಕರಿಗೆ ಮೀಸಲಿಡಲು ಅವಕಾಶ ಕಲ್ಪಿಸುತ್ತದೆ. ಮಹಿಳಾ ಮೀಸಲಾತಿ ಮಸೂದೆಯ ಜಾರಿಗೆ ಕೇಂದ್ರ ಸರ್ಕಾರವು ಏಪ್ರಿಲ್ 16ರಿಂದ 18ರವರೆಗೆ ಮೂರು ದಿನಗಳ ವಿಶೇಷ ಸಂಸತ್ ಅಧಿವೇಶನವನ್ನು ನಿಗದಿಪಡಿಸಿದೆ. ಮಸೂದೆಯ ಪ್ರತಿಯನ್ನು ಇಂದು ಸಂಸದರೊಂದಿಗೆ ಹಂಚಿಕೊಳ್ಳಲಾಯಿತು.

ಈ ಪ್ರಸ್ತಾವನೆಯಡಿಯಲ್ಲಿ 815 ಸ್ಥಾನಗಳು ರಾಜ್ಯಗಳಿಗೆ ಮತ್ತು 35 ಕೇಂದ್ರಾಡಳಿತ ಪ್ರದೇಶಗಳಿಗೆ ಹೋಗಲಿದ್ದು, ಒಟ್ಟು ಬಲವನ್ನು 850ಕ್ಕೆ ಏರಿಸಲಾಗುವುದು. ಈ ಬದಲಾವಣೆಗಳು 2029ರ ಲೋಕಸಭಾ ಚುನಾವಣೆಯಿಂದ ಜಾರಿಗೆ ಬರುವ ನಿರೀಕ್ಷೆಯಿದೆ. ಮಹಿಳೆಯರಿಗೆ ಹಂಚಿಕೆಯಾಗುವ ಸ್ಥಾನಗಳನ್ನು ನಿರ್ಧರಿಸಲು ಡಿಲಿಮಿಟೇಶನ್ ಆಯೋಗವನ್ನು ರಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Explainer: ಸಂಸತ್​​ನಲ್ಲಿ ಅಂಗೀಕಾರವಾಗುತ್ತಾ ಮಹಿಳಾ ಮೀಸಲಾತಿ ಮಸೂದೆ? ಏನಿದರ ಮಹತ್ವ, ವಿಪಕ್ಷಗಳ ವಿರೋಧವೇಕೆ?

ನಾರಿ ಶಕ್ತಿ ವಂದನ ಅಧಿನಿಯಮವನ್ನು ಭಾರತೀಯ ಸಂಸತ್ ಸೆಪ್ಟೆಂಬರ್ 202 ರಲ್ಲಿ ಅಂಗೀಕರಿಸಿತು. ಇದನ್ನು ಸೆಪ್ಟೆಂಬರ್ 19, 2023ರಂದು ಲೋಕಸಭೆಯಲ್ಲಿ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪರಿಚಯಿಸಲಾಯಿತು. ಸೆಪ್ಟೆಂಬರ್ 20, 2023ರಂದು 454 ಮತಗಳ ಪರವಾಗಿ ಮತ್ತು 2 ಮತಗಳ ವಿರುದ್ಧವಾಗಿ ಅಂಗೀಕರಿಸಲಾಯಿತು. ರಾಜ್ಯಸಭೆಯು ಸೆಪ್ಟೆಂಬರ್ 21, 2023ರಂದು 214 ಮತಗಳೊಂದಿಗೆ ಸರ್ವಾನುಮತದಿಂದ ಈ ಮಸೂದೆಯನ್ನು ಅಂಗೀಕರಿಸಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 28, 2023ರಂದು ಇದನ್ನು ಕಾನೂನಾಗಿ ಪರಿವರ್ತಿಸಲು ಸಹಿ ಮಾಡಿದರು.

ಇದನ್ನೂ ಓದಿ: Women’s Reservation Bill 2026: ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ಬೆಂಬಲ ಕೋರಿ ಸಂಸದರಿಗೆ ಪ್ರಧಾನಿ ಮೋದಿ ಪತ್ರ

ಇದರ ಪ್ರಕಾರ ಮಹಿಳೆಯರಿಗೆ 33% ಮೀಸಲಾತಿ: ನೀಡಲಾಗಿದ್ದು, ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ದೆಹಲಿ ವಿಧಾನಸಭೆಯಲ್ಲಿ ಮಹಿಳೆಯರಿಗೆ ಎಲ್ಲಾ ಸ್ಥಾನಗಳಲ್ಲಿ ಮೂರನೇ ಒಂದು ಭಾಗವನ್ನು ಮೀಸಲಿಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು? – Kannada News | Samrat Choudharys first reaction after being selected as Bihar Chief Minister

ಪಾಟ್ನಾ, ಏಪ್ರಿಲ್ 14: ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ (Samrat Chaudhary) ಇಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಬುಧವಾರ (ಏಪ್ರಿಲ್ 15) ಬೆಳಿಗ್ಗೆ 11 ಗಂಟೆಗೆ ಅವರು ಬಿಹಾರ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎ ನಡೆದ ಶಾಸಕಾಂಗ ಸಭೆಯಲ್ಲಿ ಘೋಷಣೆಯಾದ ಕೂಡಲೇ ಸಾಮ್ರಾಟ್ ಚೌಧರಿ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಮೇಲೆ ನಂಬಿಕೆ ಇರಿಸಿ ಬಿಹಾರ ಶಾಸಕಾಂಗ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ವಹಿಸಿದ್ದಕ್ಕಾಗಿ ಬಿಜೆಪಿ ಹೈಕಮಾಂಡ್​ಗೆ ಸಾಮ್ರಾಟ್ ಚೌಧರಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.

“ನನ್ನ ಮೇಲೆ ನಂಬಿಕೆ ಇಟ್ಟು ಬಿಜೆಪಿ ಬಿಹಾರ ಶಾಸಕಾಂಗ ಪಕ್ಷದ ನಾಯಕನಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಬಿಜೆಪಿ ಹೈಕಮಾಂಡ್​​ಗೆ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ನನಗೆ, ಇದು ಕೇವಲ ಒಂದು ಹುದ್ದೆಯಲ್ಲ. ಇದು ಬಿಹಾರದ ಜನರಿಗೆ ಸೇವೆ ಸಲ್ಲಿಸಲು, ಅವರ ನಂಬಿಕೆ ಮತ್ತು ಕನಸುಗಳನ್ನು ನನಸಾಗಿಸಲು ಒಂದು ಪವಿತ್ರ ಅವಕಾಶ. ಪ್ರತಿಯೊಬ್ಬ ನಾಗರಿಕನ ನಿರೀಕ್ಷೆಗಳನ್ನು ಸಂಪೂರ್ಣ ಸಮಗ್ರತೆ, ಸಮರ್ಪಣೆ ಮತ್ತು ಪ್ರಾಮಾಣಿಕತೆಯಿಂದ ಪೂರೈಸಲು ನಾನು ಪ್ರತಿಜ್ಞೆ ಮಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ ಮತ್ತು ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಮಾರ್ಗದರ್ಶನದಲ್ಲಿ ಬಿಹಾರವನ್ನು ಅಭಿವೃದ್ಧಿ, ಉತ್ತಮ ಆಡಳಿತ ಮತ್ತು ಸಮೃದ್ಧಿಯ ಹೊಸ ಆಯಾಮಗಳತ್ತ ಕೊಂಡೊಯ್ಯಲು ನಾನು ನಿರಂತರವಾಗಿ ಬದ್ಧನಾಗಿರುತ್ತೇನೆ. ನಿಮ್ಮ ಪ್ರೀತಿ, ಆಶೀರ್ವಾದ ಮತ್ತು ಬೆಂಬಲ ನನ್ನ ದೊಡ್ಡ ಶಕ್ತಿ. ಜೈ ಬಿಹಾರ, ಜೈ ಭಾರತ್!” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಯ್ಯಪ್ಪ ಮಾಲೆ ಧಾರಣೆ ಮಾಡುವುದೇಕೆ: ರಾಮ್ ಚರಣ್ ಕೊಟ್ಟರು ಉತ್ತರ – Kannada News | Ram Charan talks about Ayyappa Deeksha and why he take that

ಹಲವಾರು ನಟರು ಅಯ್ಯಪ್ಪ ಮಾಲೆ ಧಾರಣೆ ಮಾಡುತ್ತಾರೆ. ಆದರೆ ಮಾಲೆ ಧರಿಸಿದಾಗ ಹೊರಗೆ ಕಾಣಿಸಿಕೊಳ್ಳುವುದೇ ಇಲ್ಲ. ಬಹುತೇಕರು ಒಂದೇ ದಿನಕ್ಕೆ ಮಾಲೆ ಧರಿಸಿ, ಶಬರಿಮಲೆಗೆ ಹೊರಟು ಬಿಡುತ್ತಾರೆ. ಆದರೆ ನಟ ರಾಮ್ ಚರಣ್ ಹಾಗಲ್ಲ. ಅವರು ಹಲವು ದಿನಗಳ ಕಾಲ ಮಾಲೆ ಧರಿಸಿ, ನೇಮ-ನಿಷ್ಠೆಯಿಂದ ವೃತ ಪಾಲಿಸುತ್ತಾರೆ. ವರ್ಷದಲ್ಲಿ ಸುಮಾರು 80ಕ್ಕೂ ಹೆಚ್ಚು ದಿನಗಳು ಅವರು ವೃತದಲ್ಲಿ ಕಳೆಯುತ್ತಾರೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ರಾಮ್ ಚರಣ್ ಅವರಿಗೆ ಪ್ರಶ್ನಿಸಲಾಗಿದ್ದು, ತಾವೇಕೆ ಪದೇ ಪದೇ ಮಾಲಧಾರಿ ಆಗುವುದೆಂದು ವಿವರಿಸಿದ್ದಾರೆ.

ಇತ್ತೀಚೆಗೆ ‘ಎಸ್ಕ್ವೈರ್ ಇಂಡಿಯಾ’ ಮ್ಯಾಗಜೀನ್​​ನ ಶೂಟಿಂಗ್​​ಗಾಗಿ ಹಾಂಕಾಂಗ್‌ಗೆ ಹೋಗಿದ್ದರು ರಾಮ್ ಚರಣ್. ಅಲ್ಲಿನ ಐಷಾರಾಮಿ ಹೋಟೆಲ್‌ನಲ್ಲಿ ಬರಿಗಾಲಿನಲ್ಲಿ ಓಡಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಈ ಸಂದರ್ಭದಲ್ಲಿ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ಆಧ್ಯಾತ್ಮಿಕ ಜೀವನ, ಮಾಲಧಾರಣೆ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

‘ನಾನು ಕಳೆದ 20 ವರ್ಷಗಳಿಂದ ಪ್ರತಿ ವರ್ಷ ಎರಡು ಬಾರಿ ತಪ್ಪದೇ ಅಯ್ಯಪ್ಪ ದೀಕ್ಷೆಯನ್ನು ಪಾಲಿಸುತ್ತಿದ್ದೇನೆ. ಈ 41 ದಿನಗಳ ಕಾಲ ಬರಿಗಾಲಿನಲ್ಲಿ ನಡೆಯುವುದು, ಕಪ್ಪು ವಸ್ತ್ರ ಧರಿಸುವುದು ಮತ್ತು ಸಾತ್ವಿಕ ಆಹಾರ ಸೇವಿಸುವುದು ನನ್ನ ಜೀವನದ ಅವಿಭಾಜ್ಯ ಅಂಗವಾಗಿದೆ. ಇದು ನನಗೆ ಮಾನಸಿಕ ಶಾಂತಿ ಮತ್ತು ಶಿಸ್ತನ್ನು ನೀಡುತ್ತದೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:‘ಪೆದ್ದಿ’ ಸಿನಿಮಾ ಶೂಟಿಂಗ್ ಮುಗಿಯಿತೇ? ರಾಮ್ ಚರಣ್ ಕೊಟ್ಟರು ಉತ್ತರ

‘ನನ್ನ ತಂದೆಯ ಸಲಹೆಯ ಮೇರೆಗೆ ನಾನು 17 ನೇ ವಯಸ್ಸಿನಲ್ಲಿ ಅಯ್ಯಪ್ಪ ದೀಕ್ಷೆಯನ್ನು ಪ್ರಾರಂಭಿಸಿದೆ. ಈ ದೀಕ್ಷೆ ನನ್ನ ಜೀವನದಲ್ಲಿ ಶಿಸ್ತನ್ನು ಹೆಚ್ಚಿಸಿತು. ಇದು ನನ್ನ ಆಲೋಚನೆಗಳನ್ನು ನಿಯಂತ್ರಿಸಲು ಸಹಾಯ ಮಾಡಿತು. ಅನಗತ್ಯ ವಿಷಯಗಳಿಂದ ದೂರವಿರಲು ಮತ್ತು ಮಾನಸಿಕ ಶಾಂತಿಯನ್ನು ಪಡೆಯಲು ಇದು ನನಗೆ ಸಹಾಯ ಮಾಡಿತು ಎಂದಿದ್ದಾರೆ.

ತಮ್ಮ ತಂದೆ ಮೆಗಾಸ್ಟಾರ್ ಚಿರಂಜೀವಿ ಬಗ್ಗೆ ಮಾತನಾಡಿ, ‘ಅವರಿಂದ ಕಠಿಣ ಪರಿಶ್ರಮದ ಪಾಠವನ್ನು ನಾನು ಕಲಿತಿದ್ದೇನೆ. ‘ಉಳಿದವರೆಲ್ಲರೂ 50 ಗಂಟೆ ಕೆಲಸ ಮಾಡಿದರೆ, ನೀವು 100 ಗಂಟೆ ಕೆಲಸ ಮಾಡಬೇಕು’ ಎಂಬುದು ನನ್ನ ತಂದೆ ನನಗೆ ಕಲಿಸಿದ ತತ್ವ. ಅವರ ಪ್ರಭಾವ ನನ್ನ ಜೀವನದ ಮೇಲೆ ಸಾಕಷ್ಟಿದೆ’ ಎಂದಿದ್ದಾರೆ ರಾಮ್ ಚರಣ್.

ತಮ್ಮ ಪ್ರೀತಿಯ ಸಾಕುನಾಯಿ ‘ರೈಮ್’ ಬಗ್ಗೆ ಮಾತನಾಡುತ್ತಾ, ‘ರೈಮ್ ನನ್ನ ಮಗಳಿಗೆ ಒಬ್ಬಳು ಗದರಿಸುವ ಅಕ್ಕನಂತಿದ್ದಾಳೆ. ಕ್ಲಿನ್ ಕಾರಾ ಸ್ವಿಮ್ಮಿಂಗ್ ಪೂಲ್ ಹತ್ತಿರ ಹೋದಾಗಲೆಲ್ಲಾ ರೈಮ್ ಅವಳನ್ನು ತಡೆದು ನಿಲ್ಲಿಸುತ್ತಾಳೆ. ಅವಳ ಬುದ್ಧಿವಂತಿಕೆಯನ್ನು ಕಂಡು ನನಗೆ ಆಶ್ಚರ್ಯವಾಗುತ್ತದೆ’ ಎಂದು ಮಗಳ ಸುರಕ್ಷತೆಯ ಬಗ್ಗೆ ರೈಮ್ ವಹಿಸುವ ಕಾಳಜಿಯನ್ನು ಶ್ಲಾಘಿಸಿದರು.

‘ಈಗ ನಾನು ಕೇವಲ ನಟನಾಗಿ ಮಾತ್ರವಲ್ಲದೆ, ತಂದೆಯಾಗಿ, ಪತಿಯಾಗಿ ಮತ್ತು ಮಗನಾಗಿ ಹಲವಾರು ಜವಾಬ್ದಾರಿಗಳನ್ನು ಹೊಂದಿದ್ದೇನೆ. ಕೆಲಸ ಮುಗಿಸಿ ಮನೆಗೆ ಬಂದ ತಕ್ಷಣ ನಾನು ಸೋಮಾರಿಯಾಗಲು ಸಾಧ್ಯವಿಲ್ಲ. ಮಕ್ಕಳ ಜೊತೆ ಆಟವಾಡಬೇಕು, ಹೆಂಡತಿಯ ಅಗತ್ಯಗಳನ್ನು ಗಮನಿಸಬೇಕು ಮತ್ತು ಅಭಿಮಾನಿಗಳ ಸಮಸ್ಯೆಗಳಿಗೂ ಸ್ಪಂದಿಸಬೇಕು. ಪ್ರತಿ ದಿನವೂ ನಾನು ಶೇ. 100 ರಷ್ಟು ಸಕ್ರಿಯನಾಗಿರಬೇಕು’ ಎಂದು ತಮ್ಮ ಜೀವನಶೈಲಿಯ ಬಗ್ಗೆ ವಿವರಿಸಿದ್ದಾರೆ.

ರಾಮ್ ಚರಣ್ ಪ್ರಸ್ತುತ ‘ಪೆದ್ದಿ’ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾ ಏಪ್ರಿಲ್ 30ರಂದು ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ಶಿವರಾಜ್ ಕುಮಾರ್ ಸಹ ನಟಿಸಿದ್ದಾರೆ. ಜಾನ್ಹವಿ ಕಪೂರ್ ಸಿನಿಮಾದ ನಾಯಕಿ. ಸಿನಿಮಾ ನಿರ್ದೇಶನ ಮಾಡಿರುವುದು ಬುಚ್ಚಿಬಾಬು ಸನಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಾಗಲಕೋಟೆ ಉಪಚುನಾವಣೆ ಪ್ರಚಾರದ ವೇಳೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರಿಗೆ ಸಂಕಷ್ಟ – Kannada News | Bagalkot By election: C.C. Patil’s Kuruba Remarks Spark Outrage, Pratap Simha Also Under Fire

ಬಾಗಲಕೋಟೆ, ಏಪ್ರಿಲ್​ 14: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ (By-election) ಎಲ್ಲರ ಗಮನ ಸೆಳೆದಿವೆ. ಉಪಚುನಾವಣೆ ಪ್ರಯುಕ್ತ ಘಟಾನುಘಟಿ ನಾಯಕರು ಬಂದು ಮತಯಾಚನೆ ಮಾಡಿ ಹೋಗಿದ್ದಾರೆ. ಆದರೆ ಪ್ರಚಾರದ ಭರಾಟೆಯಲ್ಲಿ ನಾಯಕರು ಆಡಿದ ಮಾತುಗಳು ಇದೀಗ ವಿವಾದಕ್ಕೆ ಈಡಾಗಿವೆ. ಮಾಜಿ ಸಚಿವ ಸಿಸಿ ಪಾಟಿಲ್ ಕುರುಬ ಸಮಾಜದ ಬಗ್ಗೆ ಟುರ್ ಎಂದು ಬಳಸಿದ ಪದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಹೆಚ್​ವೈ ಮೇಟಿ ಅಕಾಲಿಕ ನಿಧನದಿಂದ ಬಾಗಲಕೋಟೆಗೆ ಉಪಚುನಾವಣೆ ಮಾಡಲಾಗುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಪರ ಎರಡು ಪ್ರಮುಖ ಪಕ್ಷದ ಘಟಾನುಘಟಿ ನಾಯಕರು ಪ್ರಚಾರ ಮಾಡಿ ಹೋಗಿದ್ದಾರೆ. ಆದರೆ ಪ್ರಚಾರದ ಭರಾಟೆಯಲ್ಲಿ ಕೆಲ ನಾಯಕರು ನಾಲಿಗೆ ಹರಿಬಿಟ್ಟು ಸುದ್ದಿಯಾಗಿದ್ದರು.

ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ದೂರು 

ಮೈಸೂರು ಮಾಜಿ ಸಂಸದ ಪ್ರತಾಪ ಸಿಂಹ ಸಿಎಂ ಸಿದ್ದರಾಮಯ್ಯ ವಿರುದ್ದ ನಾಲಿಗೆ ಹರಿಬಿಟ್ಟಿದ್ದರು. ಮಾಂಸನಾದ್ರೂ ತಿನ್ನು, ಸುನ್ನತ್​​ ಆದರೂ ಮಾಡಿಕೋ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಅವರ ವಿರುದ್ಧ ಕಾಂಗ್ರೆಸ್ ಮುಖಂ ವಕೀಲ ರಮೇಶ್ ಬದ್ನೂರು ನವನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಸಿಸಿ ಪಾಟೀಲ್ ಕ್ಷಮೆ ಕೇಳಬೇಕು: ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಆಗ್ರಹ

ಇದೊಂದು ಕಡೆ ಆದರೆ ಪಂಚಮಸಾಲಿ ಸಮಾಜದ ಪ್ರಚಾರ ಸಭೆ ವೇಳೆ ಮಾಜಿ ಸಚಿವ ಸಿಸಿ ಪಾಟೀಲ್​ ಆಡಿದ ಮಾತಿಗೆ ಕುರುಬ ಸಮಾಜದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಟುರ್‌ ಎಂಬ ಪದ ಬಳಕೆ ಮಾಡಿರುವುದು ಕುರುಬ ಸಮಾಜದ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಡಿಬಿ ಸಿದ್ದಾಪುರ ಸಿಸಿ ಪಾಟೀಲ್ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.

ಮನೆಗೆ ಮುತ್ತಿಗೆ ಹಾಕುವ ಎಚ್ಚರಿಕೆ 

ಸಿಸಿ ಪಾಟೀಲ್​ ಆಡಿದ ಮಾತಿಗೆ ಬಿಜೆಪಿ ಕುರುಬ ಸಮಾಜದ‌ ನಾಯಕರೂ ಕಿಡಿ ಕಾರುತ್ತಿದ್ದಾರೆ. ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ತಾಯಿ‌ ಮಗನ ರೀತಿ ಸಂಬಂಧ ಹೊಂದಿದವರು. ಆದರೆ ಸಿಸಿ ಪಾಟೀಲ್​ ಇಂತಹ ಮಾತುಗಳನ್ನಾಡಿ ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ. ಕೂಡಲೇ ಒಂದು ವಾರದೊಳಗೆ ಸಿಸಿ ಪಾಟೀಲ್​ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ನರಗುಂದದಲ್ಲಿರುವ ಅವರ ಮನೆಗೆ ಕುರಿ ಸಮೇತ​ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ

ಇನ್ನು ಪ್ರಚಾರದ ವೇಳೆ ಮತದಾರರನ್ನು ಸೆಳೆಯೋದಕ್ಕೆ ನಾಯಕರು ವಿವಿಧ ಟ್ರಿಕ್ ಬಳಸಿದ್ದರು. ಸಮಾಜದ ಸಭೆಗಳ ಮೂಲಕ ಆಯಾ ಸಮಾಜದ ಮತ ಸೆಳೆಯುವಲ್ಲಿ ಪ್ರಯತ್ನಿಸಿದ್ದರು. ಆದರೆ ಮಾತಿನ ಭರದಲ್ಲಿ‌ ನಾಲಿಗೆ ಹಿಡಿತ‌ ಕಳೆದುಕೊಂಡು ಆಕ್ರೋಶಕ್ಕೆ‌ ಕಾರಣರಾಗಿದ್ದಾರೆ. ಒಟ್ಟಿನಲ್ಲಿ ಪ್ರಚಾರದ ವೇಳೆ ಆಡಿದ ಮಾತುಗಳು ನಾಯಕರಿಗೆ ಮುಳುವಾಗುತ್ತಿವೆ. ಆಡಿದ‌ ಮಾತಿಗೆ ಸ್ವಪಕ್ಷದಿಂದಲೇ ಇದೀಗ ವಿರೋಧ ಎದುರಿಸುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Source link

CSK vs KKR Playing XI: ಕಿಂಗ್ಸ್ vs ರೈಡರ್ಸ್​: ಹೀಗಿದೆ ಪ್ಲೇಯಿಂಗ್ 11 – Kannada News | CSK vs KKR Playing XI Chennai Super Kings vs Kolkata Knight Riders Today IPL 2026 match Confirmed playing 11 details with name in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 21ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಮ್ಯಾಚ್​ನಲ್ಲಿ ಟಾಸ್ ಗೆದ್ದಿರುವ ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಸಿಎಸ್​ಕೆ ಮೊದಲು ಬ್ಯಾಟ್ ಮಾಡಿದೆ.

ಇನ್ನು ಈ ಪಂದ್ಯಕ್ಕೂ ಮಹೇಂದ್ರ ಸಿಂಗ್ ಧೋನಿ ಅಲಭ್ಯರಾಗಿದ್ದು, ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಸರ್ಫರಾಝ್ ಖಾನ್, ಶಿವಂ ದುಬೆ, ಡೆವಾಲ್ಡ್ ಬ್ರೆವಿಸ್, ಜೇಮಿ ಓವರ್ಟನ್, ನೂರ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಖಲೀಲ್ ಅಹ್ಮದ್.

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ಅಜಿಂಕ್ಯ ರಹಾನೆ (ನಾಯಕ), ಕ್ಯಾಮರೋನ್ ಗ್ರೀನ್, ಆಂಗ್​ಕ್ರಿಶ್ ರಘುವಂಶಿ (ವಿಕೆಟ್ ಕೀಪರ್), ರೋವ್​ಮನ್ ಪೊವೆಲ್, ರಿಂಕು ಸಿಂಗ್, ಸುನಿಲ್ ನರೈನ್, ರಮಣ್​ದೀಪ್ ಸಿಂಗ್, ಅನುಕುಲ್ ರಾಯ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಕಾರ್ತಿಕ್ ತ್ಯಾಗಿ.

ಉಭಯ ತಂಡಗಳ ಮುಖಾಮುಖಿ:

ಸಿಎಸ್​ಕೆ ಮತ್ತು ಕೆಕೆಆರ್ ತಂಡಗಳು ಐಪಿಎಲ್​ನಲ್ಲಿ ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಗೆದ್ದಿರುವುದು ಕೇವಲ 11 ಮ್ಯಾಚ್​ಗಳಲ್ಲಿ ಮಾತ್ರ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿದ್ದವು. ಇದೀಗ ಬಲಿಷ್ಠತೆಯಲ್ಲಿ ಸಮಬಲ ಹೊಂದಿರುವುದರಿಂದ ಇಂದಿನ ಮ್ಯಾಚ್​ನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ: ಅಜಿಂಕ್ಯ ರಹಾನೆ (ನಾಯಕ), ಅಂಗ್​ಕ್ರಿಶ್ ರಘುವಂಶಿ, ಅನುಕುಲ್ ರಾಯ್, ಮನೀಶ್ ಪಾಂಡೆ, ರಮಣದೀಪ್ ಸಿಂಗ್, ರಿಂಕು ಸಿಂಗ್, ರೋವ್​ಮನ್ ಪೊವೆಲ್, ಸುನಿಲ್ ನರೈನ್, ಉಮ್ರಾನ್ ಮಲಿಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಕ್ಯಾಮೆರೋನ್ ಗ್ರೀನ್, ಫಿನ್ ಅಲೆನ್, ಮಥೀಶ ಪತಿರಾಣ, ತೇಜಸ್ವಿ ಸಿಂಗ್, ಕಾರ್ತಿಕ್ ತ್ಯಾಗಿ, ಪ್ರಶಾಂತ್ ಸೋಲಂಕಿ, ರಾಹುಲ್ ತ್ರಿಪಾಠಿ, ಟಿಮ್ ಸೈಫರ್ಟ್, ಬ್ಲೆಸ್ಸಿಂಗ್ ಮುಝರಬಾನಿ, ಸಾರ್ಥಕ್ ರಂಜನ್, ದಕ್ಷ್ ಕಮ್ರಾ, ರಚಿನ್ ರವೀಂದ್ರ, ಆಕಾಶ್ ದೀಪ್.

ಇದನ್ನೂ ಓದಿ: CSK vs KKR IPL 2026 Live Score: ಕಿಂಗ್ಸ್ ಮತ್ತು ರೈಡರ್ಸ್ ನಡುವಣ ಕದನ

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಖಲೀಲ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ನಾಥನ್ ಎಲ್ಲಿಸ್, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್.

Source link

ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು? – Kannada News | A Woman Commits Suicide after Killed Daughter In Bengaluru

ಬೆಂಗಳೂರು, (ಏಪ್ರಿಲ್ 14): ತನ್ನ 14 ವರ್ಷದ ಮಗಳನ್ನು (Daughter) ಕೊಂದು ಬಳಿಕ ತಾಯಿ (Mother)ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ವೈಟ್‌ಫೀಲ್ಡ್ (Whitefield) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯ ಕೋಣೆಯಲ್ಲಿ ಮಗಳು ಕಾರುಣ್ಯಳನ್ನ ಉಸಿರುಗಟ್ಟಿಸಿ ಕೊಂದು ನಂತರ ತಾಯಿ ಸುವರ್ಣಾ(40) ನೇಣುಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Source link

ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ 500 ರೂ. ಶುಲ್ಕ ರಿಯಾಯಿತಿ; ವಿವಾದಕ್ಕೀಡಾದ ವೈದ್ಯ – Kannada News | Kolkata cardiologist doctor offers Rs 500 discount if patients say Jai Shree Ram at his clinic

ಕೊಲ್ಕತ್ತಾ, ಏಪ್ರಿಲ್ 14: ಕೊಲ್ಕತ್ತಾದ ಹೃದ್ರೋಗ ತಜ್ಞರೊಬ್ಬರು ತಮ್ಮ ಕ್ಲಿನಿಕ್​ನಲ್ಲಿ “ಜೈ ಶ್ರೀ ರಾಮ್” (Jai Shree Ram) ಎಂದು ಹೇಳುವ ರೋಗಿಗಳಿಗೆ ಶುಲ್ಕದಲ್ಲಿ 500 ರೂ. ರಿಯಾಯಿತಿ ನೀಡುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಸದ್ಯದಲ್ಲೇ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ವೈದ್ಯರ ನಡೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕೊಲ್ಕತ್ತಾದ ಹೃದ್ರೋಗ ತಜ್ಞ ಡಾ. ಪಿ. ಕೆ. ಹಜ್ರಾ ತಮ್ಮ ಖಾಸಗಿ ಕ್ಲಿನಿಕ್​ನಲ್ಲಿ ಬಿಳಿ ಕೋಟ್ ಧರಿಸಿ, ಅದರ ಮೇಲೆ ಬಿಜೆಪಿಯ ಚಿಹ್ನೆ ಇರುವ ಶಾಲು ಹಾಕಿಕೊಂಡಿರುವ ಪೋಸ್ಟರ್ ಹಾಕಿಕೊಂಡಿದ್ದಾರೆ. ಆ ಪೋಸ್ಟರ್ ಮೇಲೆ ಜೈ ಶ್ರೀರಾಮ್ ಎಂದು ಹೇಳುವ ರೋಗಿಗಳಿಗೆ 500 ರೂ. ಡಿಸ್ಕೌಂಟ್ ನೀಡುವುದಾಗಿ ಘೋಷಿಸಿದ್ದಾರೆ. ಈ ಆಫರ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿಯೂ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಪಿಟಿಐ ಜೊತೆ ಮಾತನಾಡಿದ ಡಾ. ಹಜ್ರಾ, “ಹಲವು ವರ್ಷಗಳಲ್ಲಿ ವೈದ್ಯನಾಗಿ ಕೆಲಸ ಮಾಡಿರುವ ನಾನು ಬಿಜೆಪಿಯ ಅನುಯಾಯಿ. ಜೈ ಶ್ರೀರಾಮ್ ಎಂಬುದು ರಾಜಕೀಯ ಘೋಷಣೆಯೇ ವಿನಃ ಧಾರ್ಮಿಕ ಘೋಷಣೆಯಲ್ಲ. ಹೀಗಾಗಿ, ಯಾವ ಧರ್ಮದವರು ಬೇಕಾದರೂ ಈ ಘೋಷಣೆ ಕೂಗಬಹುದು. ಬಂಗಾಳದ ರೋಗಿಗಳು ಅಸ್ಸಾಂ, ಒಡಿಶಾ ಅಥವಾ ದಕ್ಷಿಣ ಭಾರತಕ್ಕೆ ಹೋಗುವುದನ್ನು ನಾನು ನೋಡಿದಾಗಲೆಲ್ಲಾ ನನಗೆ ಬೇಸರವಾಗುತ್ತದೆ. ಹೀಗಾಗಿ, ನನ್ನ ರೋಗಿಗಳಿಗೂ ಸಹಾಯವಾಗಲೆಂದು 500 ರೂ. ರಿಯಾಯಿತಿ ಘೋಷಿಸಿದ್ದೇನೆ. ನನ್ನ ಕನ್ಸಲ್ಟೇಷನ್ ಫೀಸ್ 2000 ರೂ. ಆದರೆ, ಜೈ ಶ್ರೀರಾಮ್ ಹೇಳಿದವರಿಗೆ 1,500 ರೂ. ಶುಲ್ಕ ವಿಧಿಸುತ್ತೇನೆ. ಇದರಿಂದ ನನಗೂ ಲಾಭ, ಅವರಿಗೂ ಲಾಭ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಅಲ್ಲಾ..ಹೇಳಬೇಡ,’ಜೈ ಶ್ರೀ ರಾಮ್’ ಹೇಳಬೇಕು ಎಂದು 3 ಮಕ್ಕಳಿಗೆ ಚಪ್ಪಲಿಯಲ್ಲಿ ಹೊಡೆದ ಯುವಕ

ಕೊಲ್ಕತ್ತಾದ ಖಾಸಗಿ ಆಸ್ಪತ್ರೆಯ ಇಂಟರ್ವೆನ್ಷನಲ್ ಕಾರ್ಡಿಯಾಲಜಿ ವಿಭಾಗದ ನಿರ್ದೇಶಕರೂ ಆಗಿರುವ ಡಾ. ಹಜ್ರಾ ಆ ಆಸ್ಪತ್ರೆಯಲ್ಲಿ ಈ ರೀತಿಯ ವಿನಾಯಿತಿ ಇಲ್ಲ. ಅದರ ಬದಲಾಗಿ ನನ್ನ ಖಾಸಗಿ ಕ್ಲಿನಿಕ್​ಗೆ ಬರುವ ರೋಗಿಗಳಿಗೆ ಮಾತ್ರ ಈ ರಿಯಾಯಿತಿ ಇರಲಿದೆ ಎಂದು ಹೇಳಿದ್ದಾರೆ. ಹೀಗಾಗಿ, ಅವರ ಕ್ಲಿನಿಕ್ ಹೊರಗೆ ‘ಜೈ ಶ್ರೀ ರಾಮ್’ ಘೋಷಣೆಯನ್ನು ಕೂಗುವ ರೋಗಿಗಳಿಗೆ ವೈದ್ಯರ ಸಮಾಲೋಚನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ನೀಡಲಾಗುತ್ತದೆ ಎಂದು ಪೋಸ್ಟರ್ ಹಾಕಲಾಗಿದೆ.

ಇದನ್ನೂ ಓದಿ: ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!

“ನಾನು ಬಿಜೆಪಿಯೊಂದಿಗೆ ನೇರವಾಗಿ ಸಂಬಂಧ ಹೊಂದಿಲ್ಲ, ಆದರೆ ಅವರ ಆಡಳಿತದಲ್ಲಿರುವ ಇತರ ರಾಜ್ಯಗಳು ಪ್ರಗತಿ ಸಾಧಿಸಿದ ರೀತಿಯನ್ನು ನಾನು ಮೆಚ್ಚುತ್ತೇನೆ. ಅಲ್ಲದೆ, ಪ್ರಧಾನಿ ಮೋದಿಯವರೆಂದರೆ ನನಗೆ ಬಹಳ ಇಷ್ಟ. ನನ್ನ ಈ ಕಾರ್ಯದಿಂದ ಬಿಜೆಪಿಗೆ ಸಹಾಯವಾಗಲೆಂಬುದು ನನ್ನ ಉದ್ದೇಶ” ಎಂದು ಅವರು ಹೇಳಿದ್ದಾರೆ. ಹಾಗೇ, ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತಾವು ವಾಸಿಸುವ ಪಶ್ಚಿಮ ಮೇದಿನಿಪುರ ಜಿಲ್ಲೆಯ ಪಿಂಗ್ಲಾದಿಂದ ಬಿಜೆಪಿಯಿಂದ ಟಿಕೆಟ್ ಪಡೆಯುವ ನಿರೀಕ್ಷೆಯಿದೆ ಎಂದು ಕೂಡ ಡಾ. ಹಜ್ರಾ ಹೇಳಿಕೊಂಡಿದ್ದಾರೆ. ಹೀಗಾಗಿ, ಬಿಜೆಪಿ ಟಿಕೆಟ್ ಪಡೆಯಲು ತಮ್ಮ ವೃತ್ತಿಯನ್ನು ಬಳಸಿಕೊಳ್ಳುತ್ತಿರುವ ಅವರ ವಿರುದ್ಧ ಟಿಎಂಸಿ ಸೇರಿದಂತೆ ವಿಪಕ್ಷಗಳು ಟೀಕಾಪ್ರಹಾರ ನಡೆಸಿವೆ.

294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಗೆ ಏಪ್ರಿಲ್ 23 ಮತ್ತು 29ರಂದು ಚುನಾವಣೆ ನಡೆಯಲಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:24 pm, Tue, 14 April 26

Source link

ಎನ್​ವಿಡಿಯಾದ ಭಾರತೀಯ ಉದ್ಯೋಗಿಗಳಿಗೆ ಭರ್ಜರಿ ಕೊಡಗೆ; ಒಂದು ಕೋಟಿ ರೂವರೆಗೆ ಸ್ಟಾಕ್ ಗ್ರಾಂಟ್ – Kannada News | Nvidia’s Rs 1 Cr Stock Grant for Indian Employees: AI Talent Retention Strategy

ಬೆಂಗಳೂರು, ಏಪ್ರಿಲ್ 14: ಕೃತಕ ಬುದ್ಧಿಮತ್ತೆ (AI) ಮತ್ತು ಚಿಪ್ ಡಿಸೈನಿಂಗ್ ಕ್ಷೇತ್ರದಲ್ಲಿ ಜಾಗತಿಕ ಮುಂಚೂಣಿಯಲ್ಲಿರುವ ಎನ್​ವಿಡಿಯಾ (Nvidia) ಕಂಪನಿಯು ತನ್ನ ಭಾರತೀಯ ಉದ್ಯೋಗಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಭಾರತ ಮೂಲದ ಹೆಚ್ಚಿನ ಉದ್ಯೋಗಿಗಳಿಗೆ ಒನ್ ಟೈಮ್ ಸ್ಪೆಷಲ್ ‘ಸ್ಟಾಕ್ ಗ್ರಾಂಟ್’ (ಷೇರುಗಳ ಹಂಚಿಕೆ) ಘೋಷಿಸಲಾಗಿದೆ. ಇದರ ಮೌಲ್ಯ 5 ಲಕ್ಷ ರೂನಿಂದ 1 ಕೋಟಿ ರೂವರೆಗಿದೆ ಎನ್ನಲಾಗಿದೆ.

ಏನಿದು ‘ಜೆನ್ಸನ್ ಸ್ಪೆಷಲ್ ಗ್ರಾಂಟ್’?

ಎನ್​ವಿಡಿಯಾದ ಸಿಇಒ ಜೆನ್ಸನ್ ಹುವಾಂಗ್ ಅವರು 2024 ರಲ್ಲಿ ಈ ವಿಶೇಷ ಯೋಜನೆಯನ್ನು ಪರಿಚಯಿಸಿದ್ದಾರೆ. ಇದರ ಅಡಿಯಲ್ಲಿ ಉದ್ಯೋಗಿಗಳಿಗೆ ಅವರ ಮೂಲ ‘ರೆಸ್ಟ್ರಿಕ್ಟೆಡ್ ಸ್ಟಾಕ್ ಯೂನಿಟ್ಸ್’ (RSUs) ಮೇಲೆ ಹೆಚ್ಚುವರಿ 25% ರಷ್ಟು ಷೇರುಗಳನ್ನು ನೀಡಲಾಗುತ್ತಿದೆ. ಭಾರತದಲ್ಲಿರುವ ಸುಮಾರು 10,000 ಉದ್ಯೋಗಿಗಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಒತ್ತಡದ ನಡುವೆಯೂ ಏರದ ಪೆಟ್ರೋಲ್ ಬೆಲೆ; ಪೆಟ್ರೋಲಿಯಂ ಕಂಪನಿಗಳಿಗೆ ಒಂದು ಲೀಟರ್ ಪೆಟ್ರೋಲ್​ಗೆ ಆಗುತ್ತಿರುವ ನಷ್ಟವೆಷ್ಟು ಗೊತ್ತಾ?

ಷೇರು ಹಂಚಿಕೆಯ ಪ್ರಮುಖಾಂಶಗಳು

ಈ ಷೇರುಗಳು ಒಮ್ಮೆಗೆ ಕೈ ಸೇರುವುದಿಲ್ಲ. ಸೆಪ್ಟೆಂಬರ್ 2024 ರಿಂದ ಆರಂಭಗೊಂಡು 2028 ರವರೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಕಂತುಗಳಲ್ಲಿ ಉದ್ಯೋಗಿಗಳಿಗೆ ಹಸ್ತಾಂತರವಾಗಲಿವೆ. ಉದಾಹರಣೆಗೆ, ಮಧ್ಯಮ ಹಂತದ ಉದ್ಯೋಗಿಯೊಬ್ಬರು ವಾರ್ಷಿಕ ವೇತನದ ಹೊರತಾಗಿ ಸುಮಾರು 5.3 ಲಕ್ಷ ರೂ ಮೌಲ್ಯದ ಹೆಚ್ಚುವರಿ ಷೇರುಗಳನ್ನು ಪಡೆದಿದ್ದಾರೆ. ಅನುಭವೀ ಎಂಜಿನಿಯರ್‌ಗಳ ವಿಷಯದಲ್ಲಿ ಈ ಮೊತ್ತ 1 ಕೋಟಿ ರೂ ದಾಟಿದೆ.

ಈ ಹಂಚಿಕೆಯ ಒಟ್ಟು ಮೌಲ್ಯವು ಎನ್ವಿಡಿಯಾ ಕಂಪನಿಯ ಷೇರು ಮಾರುಕಟ್ಟೆ ಬೆಲೆ ಮತ್ತು ಡಾಲರ್ ವಿನಿಮಯ ದರದ ಮೇಲೆ ಆಧಾರಿತವಾಗಿರುತ್ತದೆ.

ಪ್ರತಿಭೆ ಉಳಿಸಿಕೊಳ್ಳಲು ಹೊಸ ತಂತ್ರ

ತಂತ್ರಜ್ಞಾನ ಕ್ಷೇತ್ರದಲ್ಲಿ, ವಿಶೇಷವಾಗಿ AI ಮತ್ತು ಸೆಮಿಕಂಡಕ್ಟರ್ ವಿಭಾಗದಲ್ಲಿ ನುರಿತ ಉದ್ಯೋಗಿಗಳನ್ನು ಉಳಿಸಿಕೊಳ್ಳಲು ಕಂಪನಿಗಳು ಈಗ ಕೇವಲ ಸಂಬಳವನ್ನಷ್ಟೇ ನಂಬಿಲ್ಲ. ಎನ್​ವಿಡಿಯಾದಲ್ಲಿ ಹಿರಿಯ ಎಂಜಿನಿಯರ್‌ಗಳ ಒಟ್ಟು ವೇತನದ ಶೇ 50 ರಿಂದ ಶೇ 75 ರಷ್ಟು ಭಾಗ ಈ ಷೇರುಗಳ ರೂಪದಲ್ಲೇ ಇರುತ್ತದೆ.

ಇದನ್ನೂ ಓದಿ: ಬ್ಯಾಟರಿ ಸ್ವಾವಲಂಬನೆಗೆ 3.5 ಲಕ್ಷ ಕೋಟಿ ರೂ ಯೋಜನೆ; ಬ್ಯಾಟರಿ ತಯಾರಕರ ಪಟ್ಟಿ ರೂಪಿಸಲು ಸರ್ಕಾರ

ಭಾರತವು AI ಮತ್ತು ಚಿಪ್ ವಿನ್ಯಾಸದ ಪ್ರಮುಖ ಕೇಂದ್ರವಾಗಿ ಬೆಳೆಯುತ್ತಿರುವುದರಿಂದ, ಉನ್ನತ ಮಟ್ಟದ ಎಂಜಿನಿಯರ್‌ಗಳಿಗೆ ವರ್ಷಕ್ಕೆ 2 ರಿಂದ 3 ಕೋಟಿ ರೂವರೆಗಿನ ಪ್ಯಾಕೇಜ್ ನೀಡುವುದು ಈಗ ಸಾಮಾನ್ಯವಾಗುತ್ತಿದೆ. ಇಷ್ಟು ದೊಡ್ಡ ಮೊತ್ತದ ವೇತನಕ್ಕೆ ಕಂಪನಿಗಳು ನೀಡುವ ಈ ಸ್ಟಾಕ್ ಇನ್ಸೆಂಟಿವ್‌ಗಳೇ ಪ್ರಮುಖ ಕಾರಣ.

ಒಟ್ಟಾರೆಯಾಗಿ, ಎನ್ವಿಡಿಯಾದ ಈ ನಡೆ ಭಾರತೀಯ ಟೆಕ್ ವಲಯದಲ್ಲಿ ಷೇರು ಆಧಾರಿತ ವೇತನ ಪದ್ಧತಿಯ ಮಹತ್ವವನ್ನು ಸಾರುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 6:32 pm, Tue, 14 April 26

Source link

Chanakya Niti: ಈ ನಾಲ್ಕು ತಪ್ಪು ನಿರ್ಧಾರಗಳು ಜೀವವನ್ನು ಹಾಳು ಮಾಡಬಹುದು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: These 4 wrong decisions can ruin your life

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿ ಅನೇಕಾರು ವಿಷಯಗಳ ಬಗ್ಗೆಯೂ ಸಾಕಷ್ಟು ಮಾಹಿತಿಯನ್ನು ನೀಡಿದ್ದಾರೆ. ಅದೇ ರೀತಿ ಜೀವನದಲ್ಲಿ ತೆಗೆದುಕೊಳ್ಳುವ ತಪ್ಪು ನಿರ್ಧಾರಗಳು ಜೀವನವನ್ನೇ ಹಾಳು ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ. ಅವರ ಪ್ರಕಾರ, ನೀವು ಈ ತಪ್ಪು ನಿರ್ಧಾರಗಳನ್ನು ತೆಗೆದುಕೊಂಡರೆ, ನೀವು ನಿಮ್ಮ ಜೀವನದುದ್ದಕ್ಕೂ ವಿಷಾದಿಸಬೇಕಾಗುತ್ತದೆ, ಇದಲ್ಲದೆ ಆ ನಿರ್ಧಾರಗಳು ಭವಿಷ್ಯದಲ್ಲಿ ಸಮಸ್ಯೆಗಳನ್ನು ತಂದೊಡ್ಡಬಹುದು. ಆದ್ದರಿಂದ ಯಾವುದೇ ರೀತಿಯ ಹಾನಿಯನ್ನು ತಪ್ಪಿಸಲು ಈ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಎಚ್ಚರ ವಹಿಸುವುದು ಒಳ್ಳೆಯದು. ಹಾಗಿದ್ದರೆ ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಎಚ್ಚರಿಕೆ ವಹಿಸುವು ಅಗತ್ಯ ಎಂಬುದನ್ನು ನೋಡೋಣ ಬನ್ನಿ.

ಈ ತಪ್ಪು ನಿರ್ಧಾರಗಳಿಂದ ಜೀವನವೇ ಹಾಳಾಗಬಹುದು:

ಯೋಚಿಸದೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದು: ಆಚಾರ್ಯ ಚಾಣಕ್ಯರ ಪ್ರಕಾರ, ಯಾವುದೇ ಆತುರದ ನಿರ್ಧಾರವು ಯಾವಾಗಲೂ ಹಾನಿಗೆ ಕಾರಣವಾಗುತ್ತದೆ. ಅನೇಕ ಜನರು ಭಾವನೆಗೆ ಒಳಗಾಗಿ ಅಥವಾ ಒತ್ತಡಕ್ಕೊಳಗಾಗಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅದು ಉದ್ಯೋಗಗಳನ್ನು ಬದಲಾಯಿಸುವುದು, ಉಳಿತಾಯ ಮಾಡುವುದು ಅಥವಾ ಸಂಬಂಧಗಳನ್ನು ಕೊನೆಗೊಳಿಸುವುದು ಅಥವಾ ಹಣವನ್ನು ಹೂಡಿಕೆ ಮಾಡುವುದು ಹೀಗೆ ಯಾವುದೇ ವಿಚಾರದಲ್ಲಿ ಯೋಚಿಸದೆ ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಭವಿಷ್ಯದಲ್ಲಿ ಸಂಕಷ್ಟ ಎದುರಾಗುವ ಸಾಧ್ಯತೆ ಇರುತ್ತದೆ.

ಕೆಟ್ಟವರ ಸಹವಾಸ ಮಾಡುವುದು: ನೀವು ಕೆಟ್ಟವರ ಸಹವಾಸ ಮಾಡಲು ಪ್ರಾರಂಭಿಸಿದಾಗ, ನಿಮ್ಮ ಜೀವನ ನಿಧಾನವಾಗಿ ಕುಸಿಯಲು ಪ್ರಾರಂಭಿಸುತ್ತದೆ ಎನ್ನುತ್ತಾರೆ ಚಾಣಕ್ಯ.  ಆಚಾರ್ಯ ಚಾಣಕ್ಯರ ಪ್ರಕಾರ, ಒಂದು ಕೆಟ್ಟ ಹಣ್ಣು ಇಡೀ ಬುಟ್ಟಿಯ ಹಣ್ಣುಗಳನ್ನು ಹಾಳು ಮಾಡುವಂತೆ, ಕೆಟ್ಟವರ ಸಹವಾಸವು ನಿಮ್ಮ ಆಲೋಚನೆ ಮತ್ತು ಅಭ್ಯಾಸಗಳನ್ನು ಸಹ ಹಾಳುಮಾಡುತ್ತದೆ. ಇದರಿಂದ ನಿಮ್ಮ ಖ್ಯಾತಿ, ಜೀವನ ಎರಡೂ ಹಾಳಾಗುತ್ತದೆ. ಹಾಗಾಗಿ ಜೀವನದಲ್ಲಿ ಮುಂದುವರಿಯಲು ಬಯಸಿದರೆ  ನಿಮ್ಮನ್ನು ಪ್ರೇರೇಪಿಸುವ ಬುದ್ಧಿವಂತ, ಸಕಾರಾತ್ಮಕ ಮನಸ್ಥಿತಿಯ  ಜನರ ಸಹವಾಸದಲ್ಲಿರಿ.

ಇದನ್ನೂ ಓದಿ: ಅಭ್ಯಾಸಗಳು ಪುರುಷರ ಬದುಕನ್ನೇ ಸರ್ವನಾಶ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ ಚಾಣಕ್ಯ

ಹಣದ ದುರುಪಯೋಗ: ನೀವು ನಿಮ್ಮ ಹಣವನ್ನು ಬುದ್ಧಿವಂತಿಕೆಯಿಂದ ಬಳಸದಿದ್ದರೆ, ಮುಂದೊಂದು ದಿನ ವಿಷಾದಿಸಬೇಕಾಗುತ್ತದೆ. ಅನೇಕ ಜನರು, ಎಚ್ಚರಿಕೆಯನ್ನು ಪರಿಗಣಿಸದೆ, ತಮ್ಮ ಹಣವನ್ನು ತಪ್ಪು ಸ್ಥಳಗಳಲ್ಲಿ ಖರ್ಚು ಮಾಡಲು ಅಥವಾ ಹೂಡಿಕೆ ಮಾಡಲು ನಿರ್ಧರಿಸುತ್ತಾರೆ. ಚಾಣಕ್ಯ ನೀತಿಯ ಪ್ರಕಾರ, ನೀವು ಯಾವಾಗಲೂ ನಿಮ್ಮ ಹಣವನ್ನು ಬುದ್ಧಿವಂತಿಕೆಯಿಂದ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಬೇಕು. ಅನಗತ್ಯ ಖರ್ಚು ಮತ್ತು ದುರಾಸೆಯು ಹಣಕಾಸಿನ ಸಂಕಷ್ಟ ಎದುರಾಗಲು ಕಾರಣವಾಗಬಹುದು.

ಶಿಕ್ಷಣ ಮತ್ತು ಸಮಯವನ್ನು ನಿರ್ಲಕ್ಷಿಸುವುದು: ಆಚಾರ್ಯ ಚಾಣಕ್ಯರ ಪ್ರಕಾರ, ತಮ್ಮ ಸಮಯ ಮತ್ತು ಶಿಕ್ಷಣಕ್ಕೆ ಬೆಲೆ ಕೊಡದ ವ್ಯಕ್ತಿ ಜೀವನದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯವಿಲ್ಲ. ನಿಮ್ಮ ಸಮಯ ಮತ್ತು ಜ್ಞಾನವು ನಿಮ್ಮ ದೊಡ್ಡ ಆಸ್ತಿಯಾಗಿದೆ. ಅವುಗಳನ್ನು ವ್ಯರ್ಥ ಮಾಡುವುದರಿಂದ ಜೀವನದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಪ್ರತಿದಿನ ಹೊಸದನ್ನು ಕಲಿಯಲು ಮತ್ತು ಸಮಯವನ್ನು ಸರಿಯಾಗಿ ವ್ಯಯಿಸಿದರೆ ಮಾತ್ರ ಜೀವನದಲ್ಲಿ ಮುಂದುವರೆಯಲು ಸಾಧ್ಯ ಎಂದಿದ್ದಾರೆ ಚಾಣಕ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version