Headlines

ರಾಮ ಮಂದಿರ ದೇಣಿಗೆ ಹಗರಣ: ಎಣಿಕೆ ಕಾರ್ಯದಿಂದ 40 ಸಿಬ್ಬಂದಿ ವಜಾ, ಸಿಎಂ ಯೋಗಿಗೆ ಇಂದು ಎಸ್‌ಐಟಿ ವರದಿ ಸಲ್ಲಿಕೆ – Kannada News | Ram Mandir Donation Scam: 40 Staff Fired as SIT Submits Report to CM Yogi

ಅಯೋಧ್ಯೆ, ಜೂನ್ 22: ಅಯೋಧ್ಯೆಯ ಶ್ರೀ ರಾಮ ಮಂದಿರ(Ram Mandir)ದಲ್ಲಿ ಭಕ್ತರು ನೀಡಿದ ಕಾಣಿಕೆ ಹಣ ಹಾಗೂ ಆಭರಣಗಳ ಎಣಿಕೆಯಲ್ಲಿ ಭಾರಿ ಅಕ್ರಮ ಮತ್ತು ಕಳ್ಳತನ ನಡೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ದೇಣಿಗೆ ಎಣಿಕೆ ಪ್ರಕ್ರಿಯೆಯಲ್ಲಿದ್ದ ಸುಮಾರು 40 ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಲಸದಿಂದ ತೆಗೆದುಹಾಕಲಾಗಿದೆ. ಬ್ಯಾಂಕ್ ಟ್ರಸ್ಟ್ ಈಗ ಅವರ ಜಾಗಕ್ಕೆ ಸಂಪೂರ್ಣ ಹೊಸ ಸಿಬ್ಬಂದಿಯನ್ನು ನೇಮಕ ಮಾಡಿದ್ದು, ಹಣ ಮತ್ತು ಆಭರಣಗಳ ಎಣಿಕೆಗೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ಇರಿಸಲಾಗಿದೆ. ಮತ್ತೊಂದೆಡೆ, ಆರು ದಿನಗಳ…

Read More

ಅಂದು ಬಾಡಿ ಶೇಮಿಂಗ್ ಎದುರಿಸಿದ್ದ ಜೂ. ಎನ್‌ಟಿಆರ್; ಈಗ ಕಟ್ಟುಮಸ್ತಾದ ಫೋಟೋ ವೈರಲ್ – Kannada News | Jr NTR body transformation Built Not Bought Instagram pic Prashanth Neel Dragon movie

ಎಸ್‌ಎಸ್ ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’ ಸಿನಿಮಾದಲ್ಲಿನ ನಟನೆಯ ಮೂಲಕ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ ನಟ ಜೂನಿಯರ್ ಎನ್‌ಟಿಆರ್ (Jr NTR) ಅವರು ಈಗ ಸ್ಟೈಲಿಶ್ ಲುಕ್‌ನಿಂದಾಗಿ ಭಾರಿ ಸುದ್ದಿಯಲ್ಲಿದ್ದಾರೆ. ‘ಡ್ರ್ಯಾಗನ್’ ಸಿನಿಮಾಗಾಗಿ ಅವರು ದೇಹವನ್ನು ಹುರಿಗೊಳಿಸಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಒಂದು ಕಾಲದಲ್ಲಿ ಜೂನಿಯರ್ ಎನ್​ಟಿಆರ್ ಅವರಿಗೂ ಬಾಡಿ ಶೇಮಿಂಗ್ (Body Shaming) ಮಾಡಲಾಗಿತ್ತು ಎಂಬುದನ್ನು ಮರೆಯುವಂತಿಲ್ಲ. ಜೂನಿಯರ್ ಎನ್‌ಟಿಆರ್ ಅವರು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ….

Read More

Horoscope Today: ಇಂದು ಈ ರಾಶಿಯವರು ಅನುಮಾನಗಳನ್ನು ಬದಿಗಿಟ್ಟರೆ ಶುಭ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 07, ಭಾನುವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಅಧಿಕ ಜೇಷ್ಠ ಮಾಸದಲ್ಲಿ, ಕುಂಭ ರಾಶಿಯ ಶತಭಿಷಾ ನಕ್ಷತ್ರದಲ್ಲಿ ಚಂದ್ರ ಸಂಚಾರ ಮಾಡಲಿರುವ ಈ ದಿನ, ಸೂರ್ಯ ನಮಸ್ಕಾರಕ್ಕೆ ಹೆಚ್ಚಿನ ಮಹತ್ವವಿದೆ ಎಂದು ಗುರೂಜಿ ತಿಳಿಸಿದ್ದಾರೆ. ಇದು ವಿಶ್ವ ಆಹಾರ ಸುರಕ್ಷತಾ ದಿನ ಕೂಡ ಆಗಿದ್ದು, ಮಿತ ಆಹಾರ ಮತ್ತು ಹಸಿದವರಿಗೆ ಅನ್ನ ನೀಡುವ ಮಹತ್ವವನ್ನು…

Read More

ರಜನೀಕಾಂತ್​​ಗೆ ಕೈಕೊಟ್ಟ ಶಾರುಖ್ ಖಾನ್, ‘ಜೈಲರ್ 2’ಗೆ ನೋ?

ರಜನೀಕಾಂತ್ (Rajinikanth) ನಟನೆಯ ‘ಜೈಲರ್ 2’ ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿಯುವ ಹಂತದಲ್ಲಿದೆ. ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ಇನ್ನೂ ಕೆಲವು ಸ್ಟಾರ್ ನಟರುಗಳು ನಟಿಸಲಿದ್ದಾರೆ. ‘ಜೈಲರ್’ ಸಿನಿಮಾನಲ್ಲಿ ತಮ್ಮ ಅತಿಥಿ ಪಾತ್ರದಿಂದ ಮ್ಯಾಜಿಕ್ ಮಾಡಿದ್ದ ಶಿವಣ್ಣ ಸೇರಿದಂತೆ ಮೋಹನ್​​ಲಾಲ್, ಜಾಕಿ ಶ್ರಾಫ್ ಇನ್ನೂ ಕೆಲವರಿದ್ದಾರೆ. ಈ ಸಿನಿಮಾನಲ್ಲಿ ಬಾಲಿವುಡ್​​ನ ಸೂಪರ್ ಸ್ಟಾರ್ ನಟ ಶಾರುಖ್ ಖಾನ್ ಸಹ ನಟಿಸಲಿದ್ದಾರೆ ಎಂಬ ಸುದ್ದಿ ಗಟ್ಟಿಯಾಗಿ ಕೇಳಿ ಬಂದಿತ್ತು. ಆದರೆ ಅದು ಸುಳ್ಳು ಎನ್ನಲಾಗುತ್ತಿದೆ. ರಜನಿಕಾಂತ್ ಅವರ ‘ಜೈಲರ್ 2’…

Read More

ಪ್ರತಿಭಟನೆಯಿಂದ ಉದ್ವಿಗ್ನಗೊಂಡಿರುವ ಇರಾನ್​​ನಲ್ಲಿ ಸಿಲುಕಿದ ಭಾರತೀಯರ ಸ್ಥಳಾಂತರ ನಾಳೆಯಿಂದ ಶುರು – Kannada News | India to begin evacuation of Indian citizens stuck in Iran from tomorrow amid protests

ನವದೆಹಲಿ, ಜನವರಿ 15: ವ್ಯಾಪಕ ಪ್ರತಿಭಟನೆಗಳ ಮಧ್ಯೆ ಭಾರತವು ನಾಳೆಯಿಂದ ಇರಾನ್‌ನಲ್ಲಿ (Iran Protest) ಸಿಲುಕಿರುವ ನಾಗರಿಕರನ್ನು ಸ್ಥಳಾಂತರಿಸಲು ಪ್ರಾರಂಭಿಸಲಿದೆ. ಪ್ರತಿಭಟನೆಯಿಂದ ಇರಾನ್​​ನಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಭಾರತ ಈ ಕ್ರಮ ತೆಗೆದುಕೊಂಡಿದೆ. ಮೂಲಗಳ ಪ್ರಕಾರ, ಸ್ಥಳಾಂತರಿಸುವವರ ಮೊದಲ ಬ್ಯಾಚ್ ಅನ್ನು ನಾಳೆ ಮುಂಜಾನೆಯೇ ವಿಮಾನದಲ್ಲಿ ಕಳುಹಿಸುವ ಸಾಧ್ಯತೆಯಿದೆ. ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ವಿವಿಧ ಪ್ರದೇಶಗಳಲ್ಲಿನ ಭಾರತೀಯ ವಿದ್ಯಾರ್ಥಿಗಳನ್ನು ಸಂಪರ್ಕಿಸಲು ಪ್ರಾರಂಭಿಸಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಆದರೆ, ಹಲವಾರು ಪ್ರದೇಶಗಳಲ್ಲಿ ಇಂಟರ್ನೆಟ್…

Read More

Weekly Employment Predictions: ಈ ರಾಶಿಯ ನಿರುದ್ಯೋಗಿಗಳಿಗೆ ಈ ವಾರ ಪ್ರಭಾವಿ ವ್ಯಕ್ತಿಗಳಿಂದ ಉದ್ಯೋಗಕ್ಕೆ ಸಹಾಯವಾಗಲಿದೆ – Kannada News | Weekly Employment Predictions 2026: Zodiac Job Opportunities and Challenges

28-12-2025ರಿಂದ 03-01-2026ರವರಗೆ ಉದ್ಯೋಗದಲ್ಲಿ ಹಲವು ಬದಲಾವಣೆ ಹಾಗೂ ಎಚ್ಚರಿಕೆ ಎಲ್ಲವೂ ಬರಲಿದ್ದು, ಅದಕ್ಕೂ ಮೊದಲೇ ಸಿದ್ಧತೆಯಲ್ಲಿದ್ದರೆ ಒಳ್ಳೆಯದು. ಉದ್ಯೋಗದಲ್ಲಿ ಅನ್ಯರ ಹಸ್ತಕ್ಷೇಪವೂ ಆಗಲಿದೆ. ಎದುರಿಸುವ ಚಾಕಚಕ್ಯತೆ ಇರಲಿ. ಬುದ್ಧಿ ಮನಸ್ಸುಗಳು ದೃಢವಾಗಿದ್ದರೆ ಎಂತಹ ಆಟವನ್ನೂ ಗೆಲ್ಲಬಹುದು. ಸೋತರೂ ಗೆಲುವಿನಂತೆ ಬಿಗಬಹುದು. ಮೇಷ ರಾಶಿ: ಡಿಸೆಂಬರ್ ಕೊನೆಯ ವಾರ ಮಂಗಳ‌ ಮತ್ತು ಗುರು ಪ್ರಭಾವದಿಂದ ಉದ್ಯೋಗದಲ್ಲಿ ಚಟುವಟಿಕೆ ಹೆಚ್ಚಾಗುತ್ತದೆ. ಹೊಸ ಜವಾಬ್ದಾರಿ ಅಥವಾ ಹುದ್ದೆ ಬದಲಾವಣೆ ಸಾಧ್ಯ. ಅವಿರತ ಶ್ರಮಕ್ಕೆ ಫಲ ಸಿಗುತ್ತದೆ. ನಿರುದ್ಯೋಗಿಗಳಿಗೆ ಸಂದರ್ಶನಕ್ಕೆ ಅವಕಾಶ. ಈ…

Read More

ಕರ್ನಾಟಕ ಕರಾವಳಿಯಲ್ಲಿ SIR ಎಫೆಕ್ಟ್: ಬಂಗಾಳ ಚುನಾವಣೆಗೆಂದು ಹೋದ ಕಾರ್ಮಿಕರು ಬರಲೇ ಇಲ್ಲ! – Kannada News | Mangaluru Construction Workers Shortage: Suspected Illegal Bangladeshis Flee Fearing Voter List Verification SIR Campaign

ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿರುವುದುImage Credit source: tv9 ಮಂಗಳೂರು, ಜೂನ್ 26: ದೇಶಾದ್ಯಂತ ಚುನಾವಣಾ ಆಯೋಗ ಹಮ್ಮಿಕೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಕರ್ನಾಟಕ (Karnataka) ಕರಾವಳಿ ಜಿಲ್ಲೆಗಳಲ್ಲಿ ಹೊಸ ಸಂಚಲನ ಮೂಡಿಸಿದೆ. ಈ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಮಾಣ ವಲಯದಲ್ಲಿ ದಿಢೀರ್ ಕಾರ್ಮಿಕರ ಕೊರತೆ ಸೃಷ್ಟಿಯಾಗಿದೆ. ಕಳೆದ ಎರಡು ತಿಂಗಳ ಹಿಂದೆ ಪಶ್ಚಿಮ ಬಂಗಾಳದ ಚುನಾವಣೆ ನೆಪವೊಡ್ಡಿ ಸ್ವಗ್ರಾಮಗಳಿಗೆ ತೆರಳಿದ್ದ ಉತ್ತರ ಭಾರತದ ಕಾರ್ಮಿಕರಲ್ಲಿ ಶೇಕಡಾ 25…

Read More

ಹಿಟಾಚಿ ಕೆಟ್ಟೋಗಿದ್ದಕ್ಕೆ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಅಷ್ಟಕ್ಕೇ ಸುಮ್ಮನಾಗದೆ ಏನು ಮಾಡಿದ್ರು ನೋಡಿ! – Kannada News | Customer Unique Protest Continues in Tumakuru after Locking Tata Hitachi Showroom After Machine Breakdown

ಹಿಟಾಚಿ ಶೋರೂಮ್ ಎದುರು ಗ್ರಾಹಕನ ವಿಭಿನ್ನ ಪ್ರತಿಭಟನೆImage Credit source: tv9 ತುಮಕೂರು, ಫೆಬ್ರವರಿ 11: ಹೊಸದಾಗಿ ಖರೀದಿಸಿದ ಹಿಟಾಚಿ ಯಂತ್ರವು ಮೂರೇ ತಿಂಗಳಲ್ಲಿ ಕೆಟ್ಟು ನಿಂತ ಹಿನ್ನೆಲೆಯಲ್ಲಿ ಬೇಸತ್ತ ಗ್ರಾಹಕ ಶೋರೂಂಗೆ ಬೀಗ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ಇಷ್ಟಾದರೂ ಕಂಪನಿ ಸ್ಪಂದಿಸದ ಕಾರಣ ಅಂತರಸನಹಳ್ಳಿ ಬಳಿಯಿರುವ ಟಾಟಾ ಹಿಟಾಚಿ (Tata Hitachi) ಶೋರೂಂ ಮುಂದೆ ಗ್ರಾಹಕ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಶೋರೂಂ ಮುಂದೆ ಶಾಮಿಯಾನ ಹಾಕಿ ಕುಳಿತುಕೊಂಡು…

Read More

ಏಕೈಕ ವೇಗಿ, ಮೂವರು ಸ್ಪಿನ್ನರ್​: ಹೀಗಿರಲಿದೆ ಟೀಮ್ ಇಂಡಿಯಾದ ರಣತಂತ್ರ – Kannada News | T20 World Cup 2026: India will make spin puzzle against Pakistan

T20 World Cup 2026: ಟಿ20 ವಿಶ್ವಕಪ್​​ನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು ನಡೆಯಲಿರುವ ಟಿ20 ವಿಶ್ವಕಪ್​​ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಕೊಲಂಬೊದ ಆರ್​​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡುವ ಮುನ್ಸೂಚನೆ ಸಿಕ್ಕಿದೆ. ಅದರಂತೆ ಭಾರತ ತಂಡದ ಆಡುವ ಬಳಗದಲ್ಲಿ 2 ಬದಲಾವಣೆಯಾಗುವುದು ಬಹುತೇಕ ಖಚಿತ. ಈ ಬದಲಾವಣೆಯೊಂದಿಗೆ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ….

Read More

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026: ಈ ಬಾರಿ ಯಾರಿಗೆಲ್ಲ ಸಿಕ್ಕಿದೆ ಪ್ರಶಸ್ತಿ?

7ನೇ ವರ್ಷದ ‘ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ’ (Chandanavana Film Critics Academy Awards) ಪ್ರದಾನ ಮಾಡಲಾಗಿದೆ. ಇತ್ತೀಚೆಗೆ ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಅದ್ದೂರಿಯಾಗಿ ಸಮಾರಂಭ ನಡೆಯಿತು. 2025ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಅಭಿನಯಕ್ಕಾಗಿ ರಿಷಬ್ ಶೆಟ್ಟಿ (Rishab Shetty) ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡರು. ‘ಗತ ವೈಭವ’ ಸಿನಿಮಾದ ನಟನೆಗಾಗಿ ಆಶಿಕಾ ರಂಗನಾಥ್ ಅವರು ಅತ್ಯುತ್ತಮ ನಟಿ…

Read More