Tech Tips: ಆಂಡ್ರಾಯ್ಡ್ ಬಳಕೆದಾರರು ಇನ್ಮುಂದೆ ಸ್ಟೋರೇಜ್ ಬಗ್ಗೆ ಚಿಂತಿಸಬೇಕಿಲ್ಲ, ಗೂಗಲ್ ಮಾಸ್ಟರ್ ಪ್ಲ್ಯಾನ್

Tech Tips: ಆಂಡ್ರಾಯ್ಡ್ ಬಳಕೆದಾರರು ಇನ್ಮುಂದೆ ಸ್ಟೋರೇಜ್ ಬಗ್ಗೆ ಚಿಂತಿಸಬೇಕಿಲ್ಲ, ಗೂಗಲ್ ಮಾಸ್ಟರ್ ಪ್ಲ್ಯಾನ್

ಬೆಂಗಳೂರು (ಏ. 13): ಸ್ಮಾರ್ಟ್‌ಫೋನ್ (Smartphone) ಸ್ಟೋರೇಜ್ ಖಾಲಿಯಾಗುವುದು ಸಾಮಾನ್ಯ ಸಮಸ್ಯೆ. ನೀವು 1TB ಸ್ಟೋರೇಜ್ ಹೊಂದಿರುವ ಮೊಬೈಲ್ ರೂಪಾಂತರವನ್ನು ಖರೀದಿಸಿದರೂ, ಸ್ವಲ್ಪ ಸಮಯದ ನಂತರ ಆ ಸ್ಟೋರೇಜ್ ಕೂಡ ಸಾಕಾಗುವುದಿಲ್ಲ. ನೀವು ಹಳೆಯ ಫೋನ್ ಹೊಂದಿದ್ದರೆ ಈ ಸಮಸ್ಯೆ ಬಗ್ಗೆ ಕೇಳೋದೇ ಬೇಡ. ಅನೇಕ ಜನರು ಇದರಿಂದ ನಿರಾಶೆಗೊಂಡು ಹೊಸ ಫೋನ್ ಖರೀದಿಸಬೇಕಾಗುತ್ತದೆ. ಈಗ, ಈ ಸಮಸ್ಯೆಯನ್ನು ಪರಿಹರಿಸಲು ಗೂಗಲ್ ಆಟೋಮ್ಯಾಟಿಕ್ ಬ್ಯಾಕಪ್ ಎಂಬ ಹೊಸ ವೈಶಿಷ್ಟ್ಯವನ್ನು ತರುತ್ತಿದೆ. ಈ ವೈಶಿಷ್ಟ್ಯವು ಸ್ಟೋರೇಜ್-ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುತ್ತದೆ. ಈ ಫೀಚರ್ ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಅದರ ಪ್ರಯೋಜನ ಏನು ಎಂಬುದನ್ನು ನೋಡೋಣ.

ಬೀಟಾ ಆವೃತ್ತಿಯಲ್ಲಿ ಸ್ವಯಂಚಾಲಿತ ಬ್ಯಾಕಪ್ ವೈಶಿಷ್ಟ್ಯ

ಮಾಧ್ಯಮ ವರದಿಗಳ ಪ್ರಕಾರ, ಈ ವೈಶಿಷ್ಟ್ಯವನ್ನು Google Play ಸೇವೆಗಳ ಬೀಟಾ ಆವೃತ್ತಿಯಲ್ಲಿ (v26.15.31) ಗುರುತಿಸಲಾಗಿದೆ. ಇದು ಬಳಕೆದಾರರಿಗೆ ತಮ್ಮ ಫೋನ್‌ನಿಂದ PC ಗೆ ಫೈಲ್‌ಗಳನ್ನು ಬ್ಯಾಕಪ್ ಮಾಡುವ ಆಯ್ಕೆಯನ್ನು ನೀಡುತ್ತದೆ. PC ಯಲ್ಲಿ ಬ್ಯಾಕಪ್ ಪೂರ್ಣಗೊಂಡ ನಂತರ, ನೀವು ನಿಮ್ಮ ಫೋನ್‌ನಿಂದ ಫೈಲ್‌ಗಳನ್ನು ಅಳಿಸಿದರೂ, ಅವು PC ಯಲ್ಲಿ ಸಂಗ್ರಹವಾಗಿರುತ್ತವೆ. ಈ ರೀತಿಯಾಗಿ, ನೀವು ನಿಮ್ಮ ಫೋನ್‌ನಲ್ಲಿ ಎಲ್ಲಾ ಫೈಲ್‌ಗಳನ್ನು ಇಟ್ಟುಕೊಳ್ಳುವ ಅಗತ್ಯವಿಲ್ಲ ಮತ್ತು ಸ್ಟೋರೇಜ್ ಫ್ರೀ ಆಗಿರುತ್ತದೆ.

ಅಟೊಮೆಟಿಕ್ ಬ್ಯಾಕಪ್ ವೈಶಿಷ್ಟ್ಯವು ಹೇಗೆ ಕಾರ್ಯನಿರ್ವಹಿಸುತ್ತದೆ?

ಈ ವೈಶಿಷ್ಟ್ಯವು ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಆಯ್ಕೆ ಮಾಡಿದ ಫೈಲ್‌ಗಳನ್ನು ನಿಮ್ಮ ಕಂಪ್ಯೂಟರ್‌ಗೆ ಸ್ವಯಂಚಾಲಿತವಾಗಿ ಕಾಪಿ ಮಾಡಬಹುದು ಎಂದು ವರದಿಯಾಗಿದೆ. ಇದರ ಪ್ರಯೋಜನವೆಂದರೆ ನೀವು ಮೊದಲು ಫೋಟೋಗಳು ಮತ್ತು ವಿಡಿಯೋಗಳನ್ನು ಕ್ಲೌಡ್‌ಗೆ ಅಪ್‌ಲೋಡ್ ಮಾಡಬೇಕಾಗಿಲ್ಲ. ಈ ಫೈಲ್‌ಗಳನ್ನು ನಿಮ್ಮ ಕಂಪ್ಯೂಟರ್‌ನಲ್ಲಿ ವರ್ಗಾಯಿಸಲಾಗುತ್ತದೆ ಮತ್ತು ಸಂಗ್ರಹಿಸಲಾಗುತ್ತದೆ.

Tech Tips: ವಾಟ್ಸ್ಆ್ಯಪ್​ನಲ್ಲಿ ಯಾರಾದರೂ ನಿಮ್ಮನ್ನು ಬ್ಲಾಕ್ ಮಾಡಿದ್ದಾರಾ? ಈಗ ಸುಲಭವಾಗಿ ಕಂಡುಹಿಡಿಯಿರಿ

ಈ ಆಯ್ಕೆಯನ್ನು ಬಳಸಿಕೊಂಡು, ಬಳಕೆದಾರರು ಕ್ಯಾಮೆರಾದಿಂದ ತೆಗೆದ ಫೋಟೋಗಳು, ವಿಡಿಯೋಗಳು ಮತ್ತು ಆಡಿಯೊ ಫೈಲ್‌ಗಳನ್ನು ಸಂಗ್ರಹಿಸಲು ಸಾಧ್ಯವಾಗುತ್ತದೆ. ಈ ವೈಶಿಷ್ಟ್ಯವನ್ನು ಸಕ್ರಿಯಗೊಳಿಸಲು ಅಥವಾ ನಿಷ್ಕ್ರಿಯಗೊಳಿಸಲು ಟಾಗಲ್ ಅನ್ನು ಒದಗಿಸಲಾಗುತ್ತದೆ. ನೀವು ಅಟೊಮೆಟಿಕ್ ಸಿಂಕ್‌ಗಾಗಿ ಕಾಯಲು ಬಯಸದಿದ್ದರೆ, ಈ ವೈಶಿಷ್ಟ್ಯವು “ಈಗ ಬ್ಯಾಕಪ್ ಮಾಡಿ” ಬಟನ್ ಅನ್ನು ಸಹ ಒಳಗೊಂಡಿದೆ. ಈ ಬಟನ್ ಅನ್ನು ಟ್ಯಾಪ್ ಮಾಡುವುದರಿಂದ ನಿಮ್ಮ ಫೋನ್‌ನ ಫೋಟೋಗಳನ್ನು ನಿಮ್ಮ ಪಿಸಿಗೆ ಬ್ಯಾಕಪ್ ಮಾಡಲು ಪ್ರಾರಂಭಿಸುತ್ತದೆ.

ಅಟೊಮೆಟಿಕ್ ಬ್ಯಾಕಪ್ ವೈಶಿಷ್ಟ್ಯವು ಕ್ವಿಕ್ ಶೇರ್‌ನ ಭಾಗವಾಗಿದೆ

ಈ ವೈಶಿಷ್ಟ್ಯವು ಆಂಡ್ರಾಯ್ಡ್‌ನ ಕ್ವಿಕ್ ಶೇರ್‌ನ ಭಾಗವಾಗಿದ್ದು, ಡಿವೈಸ್-ಟು-ಡಿವೈಸ್ ವರ್ಗಾವಣೆಯನ್ನು ಬಳಸುತ್ತದೆ. ಇದರರ್ಥ ಫೈಲ್‌ಗಳನ್ನು ವರ್ಗಾಯಿಸಲು ನಿಮಗೆ ಇಂಟರ್ನೆಟ್ ಸಂಪರ್ಕದ ಅಗತ್ಯವಿರುವುದಿಲ್ಲ. ಆದಾಗ್ಯೂ, ನೀವು ಎರಡೂ ಸಾಧನಗಳಲ್ಲಿ ಒಂದೇ ಗೂಗಲ್ ಖಾತೆಯೊಂದಿಗೆ ಲಾಗಿನ್ ಆಗಬೇಕಾಗಬಹುದು. ಗೂಗಲ್ ಪ್ರಸ್ತುತ ಈ ವೈಶಿಷ್ಟ್ಯದ ಮೇಲೆ ಕಾರ್ಯನಿರ್ವಹಿಸುತ್ತಿದೆ, ಇದನ್ನು ಸಾರ್ವಜನಿಕರಿಗೆ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬುದರ ಕುರಿತು ಕೆಲವೇ ದಿನಗಳಲ್ಲಿ ಮಾಹಿತಿ ಹಂಚಿಕೊಳ್ಳಬಹುದು.

ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಟ್ಟಿಗೆ ಓಡಾಡಿಕೊಂಡಿದ್ದವರು ಜತೆಯಲ್ಲೇ ಹೆಣವಾದರು; ಸ್ನೇಹಿತರ ಸಾವಿನ ಹತ್ತಾರು ಅನುಮಾನ

ಕೊಪ್ಪಳ, (ಏಪ್ರಿಲ್ 13): ಜಿಲ್ಲೆಯಲ್ಲಿ ಕುಕನೂರು ತಾಲೂಕಿನ ಮಸಬ ಹಂಚಿನಾಳ ಗ್ರಾಮದ ಹೊರವಲಯದಲ್ಲಿ ಪೈಪ್‌ಲೈನ್ ಕಾಮಗಾರಿಗಾಗಿ ಅಗೆದ ಗುಂಡಿಯಲ್ಲಿ ಇಬ್ಬರು ಯುವಕರ (Youths) ಮೃತದೇಹಗಳು ಪತ್ತೆಯಾಗಿದ್ದು, ಪ್ರಕರಣವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು ರುದ್ರೇಶ್ ಗಂಗಾವತಿ ಮತ್ತು ರವಿ ರಾಮಣ್ಣ ತಟ್ಟಿ ಎಂದು ಗುರುತಿಸಲಾಗಿದ್ದು, ಪೊಲೀಸರು ಇದು ಕೊಲೆ ಎಂದು ಶಂಕಿಸಿ ತನಿಖೆ ನಡೆಸುತ್ತಿದ್ದಾರೆ. ಇವರಿಬ್ಬರು ಸ್ನೇಹಿತರಾಗಿದ್ದು (Friends), ಒಟ್ಟಿಗೆ ಕೆಲಸ ಮಾಡಿಕೊಂಡಿದ್ದರು. ಆದ್ರೆ, ಇಂದು (ಏಪ್ರಿಲ್ 13) ಏಕಾಏಕಿ ಶವವಾಗಿ ಪತ್ತೆಯಾಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

23 ವರ್ಷದ ರುದ್ರೇಶ್ ಗಂಗಾವತಿ ಮತ್ತು 32 ವರ್ಷದ ರವಿ ರಾಮಣ್ಣ ತಟ್ಟಿ ಇವರಿಬ್ಬರೂ ಕುಕನೂರು ನಿವಾಸಿಗಳಾಗಿದ್ದು, ಸ್ನೇಹಿತರಾಗಿದ್ದರೆಂದು ತಿಳಿದುಬಂದಿದೆ. ಕಳೆದ ಕೆಲವು ವರ್ಷಗಳಿಂದ ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದು, ಕುಟುಂಬದ ಆಧಾರಸ್ತಂಭರಾಗಿದ್ದರು. ನಾಲ್ಕೈದು ದಿನಗಳ ಹಿಂದೆ ಕೆಲಸಕ್ಕೆ ಎಂದು ಮನೆಯಿಂದ ತೆರಳಿದ್ದರು. ಇದೀಗ ಶವವಾಗಿ ಪತ್ತೆಯಾಗಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಬಸ್‌ನಲ್ಲಿ ಅರಳಿದ ಪ್ರೇಮ, ದೇವಸ್ಥಾನದಲ್ಲಿ ಮದುವೆಯಾದ ಜೋಡಿಗೆ ಈಗ ಜೀವಭಯ!

ಘಟನಾ ಸ್ಥಳದಲ್ಲಿ ಮೃತದೇಹಗಳು ಸುಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದು, ಪಕ್ಕದಲ್ಲೇ ಎಣ್ಣೆ ಪ್ಯಾಕೆಟ್‌ಗಳು ಹಾಗೂ ತುಂಡಾದ ಚಪ್ಪಲಿಗಳು ಪತ್ತೆಯಾಗಿವೆ. ಇದರಿಂದ ಶವಗಳಿಗೆ ಬೆಂಕಿ ಹಚ್ಚಲಾಗಿದೆಯೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಇನ್ನು ಮೃತರ ಬೈಕ್ ಘಟನೆ ನಡೆದ ಸ್ಥಳದಿಂದ ಬೇರೆಡೆ ಪತ್ತೆಯಾಗಿದ್ದು, ಅದಕ್ಕೆ ಹೆಚ್ಚಿನ ಹಾನಿ ಕಂಡುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ ಭೇಟಿ ನೀಡಿ ಪರಿಶೀಲಿಸಿದರು.

ಗೆಳೆಯರ ಸಾವಿನ ಹಿಂದೆ ಹತ್ತಾರು ಅನುಮಾನ

ಇಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವುದನ್ನು ನೋಡಿ ಕೆಲವರು ಇದೊಂದು ಹಿಟ್ ಆ್ಯಂಡ್ ರನ್ ಇರಬಹುದು ಎನ್ನುತ್ತಿದ್ದಾರೆ. ಇನ್ನು ಕೆಲವರು ಪ್ರೀ ಪ್ಲ್ಯಾನ್ ಮರ್ಡರ್ ಎನ್ನುತ್ತಿದ್ದಾರೆ. ಅದಕ್ಕೆ ಅಕ್ಕ ಪಕ್ಕ ಬಿದ್ದಿರೋ ಡ್ರಿಂಕ್ಸ್ ಪಾಕೆಟ್ ಗಳು ಕೂಡಾ ಕಾರೆಣ. ರಾತ್ರಿ ಎಲ್ಲೋ ಪಾರ್ಟಿ ಮಾಡಿದ್ದು, ಅಲ್ಲಿ ಅವರನ್ನು ಕೊಲೆ ಮಾಡಿ ಇಲ್ಲಿಗೆ ತಂದು ಹಾಕಿರಬಹುದು ಎನ್ನುವ ಶಂಕೆ ಸಹ ವ್ಯಕ್ತವಾಗಿದೆ.

ಇನ್ನು ಅಪಘಾತ ಬೈಕ್ ಗೆ ಹಾನಿಯಾಗಬೇಕಾಗಿತ್ತು, ಆದ್ರೆ ಬೈಕ್ ಗೆ ಅಂತಹ ಯಾವುದೇ ಹಾನಿಯಾಗಿಲ್ಲ, ಹೀಗಾಗಿ ಈ ಪ್ರಕರಣ ಸಾಕಷ್ಟು ಅನುಮಾನ ಹುಟ್ಟುಹಾಕಿದೆ. ಇನ್ನು ಶವ ಬಿದ್ದಿವೆ ಅನ್ನೋ ವಿಚಾರ ತಿಳಿದು ಜನ ತಂಡೋಪ ತಂಡವಾಗಿ ದೌಡಾಯಿಸಿದ್ದು, ಇನ್ನೊಂದೆಡೆ ಜನರನ್ನ ನಿಯಂತ್ರಿಸಲು ಪೊಲೀಸರು ಹಸರಸಾಹ ಪಡಬೇಕಾಯ್ತ. ಇನ್ನು ಕುಕನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿವಿಧ ಆಯಾಮಾಗಳಲ್ಲಿ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಫಾಸ್ಟ್ ಆಗಿ ಊಟ ಮಾಡುವ ಅಭ್ಯಾಸದಿಂದ ದೇಹದ ತೂಕ ಹೆಚ್ಚಾಗುತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಇಂದಿನ ವೇಗದ ಜೀವನಶೈಲಿಯಲ್ಲಿ ಜನರು ಎಲ್ಲ ಕೆಲಸಗಳನ್ನು ಬೇಗ ಮುಗಿಸಲು ಪ್ರಯತ್ನಿಸುತ್ತಾರೆ. ಇದರಲ್ಲಿ ಊಟ ಮಾಡುವುದು ಕೂಡ ಹೊರತಾಗಿಲ್ಲ. ಕೆಲಸದ ಒತ್ತಡದಲ್ಲಿ ಊಟ, ತಿಂಡಿಯನ್ನು ಸರಿಯಾಗಿ ಮಾಡಲು ಕೂಡ ಸರಿಯಾಗಿ ಸಮಯವಿರುವುದಿಲ್ಲ. ಈ ರೀತಿ ಬದಲಾದ ಜೀವನಶೈಲಿಯಿಂದ ಹಲವರು ತ್ವರಿತವಾಗಿ ಅಂದರೆ ಫಾಸ್ಟ್ ಆಗಿ ಊಟ ಮಾಡುವ ಅಭ್ಯಾಸ ಬೆಳೆಸಿಕೊಂಡಿದ್ದಾರೆ. ಆದರೆ ಈ ಅಭ್ಯಾಸ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಅದರಲ್ಲಿಯೂ ಬೊಜ್ಜಿನ ಸಮಸ್ಯೆಯನ್ನು (Obesity) ಹೆಚ್ಚಿಸುತ್ತದೆ ಎಂಬುದು ನಿಮಗೆ ತಿಳಿದಿದೆಯೇ, ಹೌದು ವೇಗವಾಗಿ ಊಟ ಮಾಡುವುದು ನಾನಾ ರೀತಿಯ ಸಮಸ್ಯೆಗಳಿಗೆ ಕಾರಣವಾಗುತ್ತದೆ, ಹಾಗಾದರೆ ಇದನ್ನು ತಡೆಯಲು ಏನು ಮಾಡಬಹುದು, ಇದರ ಬದಲಾಗಿ ಆರೋಗ್ಯಕರ ಅಭ್ಯಾಸಗಳು ಬೆಳೆಸಿಕೊಳ್ಳಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ವೇಗವಾಗಿ ಊಟ ಮಾಡುವುದರಿಂದ ಏನಾಗುತ್ತದೆ?

ಆರೋಗ್ಯ ತಜ್ಞರು ಹೇಳುವ ಪ್ರಕಾರ, ವೇಗವಾಗಿ ಊಟ ಮಾಡಿದಾಗ ದೇಹಕ್ಕೆ ಹೊಟ್ಟೆ ತುಂಬಿದ ಸೂಚನೆ ಸರಿಯಾಗಿ ತಲುಪುವುದಿಲ್ಲ. ಇದರಿಂದ ವ್ಯಕ್ತಿ ಅಗತ್ಯಕ್ಕಿಂತ ಹೆಚ್ಚು ಆಹಾರ ಸೇವಿಸುತ್ತಾನೆ. ಇದರ ಪರಿಣಾಮವಾಗಿ ದೇಹದ ತೂಕ ಹೆಚ್ಚಾಗಿ, ಬೊಜ್ಜಿನ ಸಮಸ್ಯೆ ಉಂಟಾಗುತ್ತದೆ. ಅಷ್ಟೇಅಲ್ಲ, ಆಹಾರವನ್ನು ಸರಿಯಾಗಿ ಜಗಿದು ತಿನ್ನುವುದರಿಂದ ಜೀರ್ಣಕ್ರಿಯೆ ನಿಧಾನಗೊಳ್ಳುತ್ತದೆ. ಇದರಿಂದ ಅಜೀರ್ಣ, ಹೊಟ್ಟೆ ಉಬ್ಬರ ಸಮಸ್ಯೆಗಳು ಉಂಟಾಗುತ್ತವೆ. ದೀರ್ಘಕಾಲ ಈ ಅಭ್ಯಾಸ ಮುಂದುವರಿದರೆ ಮೆಟಾಬಾಲಿಸಂ ಕಡಿಮೆಯಾಗುತ್ತದೆ ಮತ್ತು ದೇಹದಲ್ಲಿ ಕೊಬ್ಬು ಜಮೆಯಾಗಲು ಶುರುವಾಗುತ್ತದೆ.

ಇದನ್ನೂ ಓದಿ: ಮಹಿಳೆಯರೇ… ನೀವು ಬಲು ಬೇಗನೆ ವಯಸ್ಸಾದವರಂತೆ ಕಾಣಲು ಇದೇ ಕಾರಣವಂತೆ

ಇತರ ಆರೋಗ್ಯ ಸಮಸ್ಯೆಗಳು:

ತ್ವರಿತವಾಗಿ ಊಟ ಮಾಡುವವರು ಹೆಚ್ಚು ಕ್ಯಾಲೊರಿ ಸೇವಿಸುವ ಸಾಧ್ಯತೆ ಇರುವುದರಿಂದ ಹೃದಯ ಸಂಬಂಧಿತ ಕಾಯಿಲೆಗಳ ಅಪಾಯವೂ ಹೆಚ್ಚಾಗುತ್ತದೆ. ಜೊತೆಗೆ ಇನ್ಸುಲಿನ್ ಅಸಮತೋಲನ ಉಂಟಾಗಿ ಟೈಪ್- 2 ಮಧುಮೇಹದ ಅಪಾಯ ಹೆಚ್ಚಬಹುದು. ಹಾರ್ಮೋನ್ ಅಸಮತೋಲನ ಮತ್ತು ದಣಿವು ಕೂಡ ಹೆಚ್ಚಾಗಬಹುದು.

ಹೇಗೆ ತಡೆಯಬೇಕು?

ಈ ಸಮಸ್ಯೆಯನ್ನು ತಪ್ಪಿಸಲು ನಿಧಾನವಾಗಿ, ಊಟವನ್ನು ಆಸ್ವಾದಿಸುತ್ತಾ ತಿನ್ನುವುದು ಬಹಳ ಮುಖ್ಯ. ಆಹಾರವನ್ನು ಯಾವಾಗಲು ಚೆನ್ನಾಗಿ ಅಗಿದು ತಿನ್ನಬೇಕು. ಮೊಬೈಲ್ ಅಥವಾ ಟಿವಿ ನೋಡುತ್ತಾ ಊಟ ಮಾಡುವುದನ್ನು ತಪ್ಪಿಸಬೇಕು. ಇದೆಲ್ಲದರ ಜೊತೆಗೆ ಊಟದ ನಡುವೆ ಸ್ವಲ್ಪ ವಿರಾಮ ತೆಗೆದುಕೊಳ್ಳುವುದು ಕೂಡ ಸಹಾಯಕವಾಗುತ್ತದೆ. ನಿಯಮಿತ ಸಮಯಕ್ಕೆ ಊಟ ಮಾಡುವುದು, ಸಮತೋಲನ ಆಹಾರ ಸೇವಿಸುವುದು ಮತ್ತು ಜಂಕ್ ಫುಡ್ ಕಡಿಮೆ ಮಾಡುವುದು ಮುಖ್ಯ. ಹಣ್ಣು, ತರಕಾರಿ, ಪ್ರೋಟೀನ್ ಮತ್ತು ಫೈಬರ್ ಇರುವ ಆಹಾರವನ್ನು ಒಳಗೊಂಡ ಡೈಟ್ ಅನುಸರಿಸಬೇಕು. ದಿನವೂ ವ್ಯಾಯಾಮ ಮತ್ತು ಸರಿಯಾಗಿ ನಿದ್ರೆ ಮಾಡುವುದರಿಂದ ಆರೋಗ್ಯ ಕಾಪಾಡಲು ಸಹಾಯವಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

SRH vs RR Playing XI: ಟಾಸ್ ಗೆದ್ದ ರಾಜಸ್ಥಾನ; ಎರಡೂ ತಂಡಗಳಲ್ಲಿ ಎರಡೆರಡು ಬದಲಾವಣೆ

ಐಪಿಎಲ್ 2026 (IPL 2026) ರ 21 ನೇ ಪಂದ್ಯದಲ್ಲಿ ಎರಡು ಚಾಂಪಿಯನ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯವು ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ (SRH vsRR) ನಡುವೆ ನಡೆಯುತ್ತಿದೆ. ಈ 19 ನೇ ಸೀಸನ್‌ನಲ್ಲಿ ಎರಡೂ ತಂಡಗಳ ಐದನೇ ಪಂದ್ಯ ಇದಾಗಿದೆ. ರಿಯಾನ್ ಪರಾಗ್ ನಾಯಕತ್ವದಲ್ಲಿ ರಾಜಸ್ಥಾನ ಸತತ 4 ಪಂದ್ಯಗಳನ್ನು ಗೆದ್ದಿದ್ದರೆ, ಇತ್ತ ಇಶಾನ್ ಕಿಶನ್ ನಾಯಕತ್ವದಲ್ಲಿ ಹೈದರಾಬಾದ್ ತಂಡವು 4 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಆದ್ದರಿಂದ, ರಾಜಸ್ಥಾನದ ಗೆಲುವಿನ ಓಟವನ್ನು ನಿಲ್ಲಿಸಿ ಗೆಲುವಿನ ಹಾದಿಗೆ ಮರಳಲು ಹೈದರಾಬಾದ್‌ಗೆ ದೊಡ್ಡ ಸವಾಲು ಎದುರಾಗಿದೆ. ಆದ್ದರಿಂದ, ಹೈದರಾಬಾದ್ ಈ ಪಂದ್ಯವನ್ನು ಗೆದ್ದು ಮತ್ತೆ ಗೆಲುವಿನ ಲಯಕ್ಕೆ ಮರಳುತ್ತಾ ಅಥವಾ ರಾಜಸ್ಥಾನ ಸತತ ಐದನೇ ಗೆಲ್ಲುವು ಸಾಧಿಸುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಟಾಸ್ ಗೆದ್ದ ರಾಜಸ್ಥಾನ

ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಬ್ರಿಜೇಶ್ ಶರ್ಮಾ ಮತ್ತು ಶಿಮ್ರಾನ್ ಹೆಟ್ಮೈರ್ ಅವರನ್ನು ಆಡುವ ಹನ್ನೊಂದರಿಂದ ಕೈಬಿಡಲಾಗಿದೆ. ಹಾಗೆಯೇ ತವರು ನೆಲದಲ್ಲಿ ಆಡುತ್ತಿರುವ ಹೈದರಾಬಾದ್ ತಂಡ ಕೂಡ ಎರಡು ಬದಲಾವಣೆಗಳನ್ನು ಮಾಡಿ ಪ್ರಫುಲ್ ಹಿಂಗೆ ಮತ್ತು ಹರ್ಷಲ್ ಪಟೇಲ್‌ಗೆ ವಿಶ್ರಾಂತಿ ನೀಡಿದೆ.

ಹೆಡ್ ಟು ಹೆಡ್ ದಾಖಲೆ

ರಾಜಸ್ಥಾನ ಮತ್ತು ಹೈದರಾಬಾದ್ ತಂಡಗಳು ಐಪಿಎಲ್‌ನಲ್ಲಿ ಇದುವರೆಗೆ ಒಟ್ಟು 21 ಬಾರಿ ಮುಖಾಮುಖಿಯಾಗಿವೆ. ಈ 21 ಪಂದ್ಯಗಳಲ್ಲಿ ಹೈದರಾಬಾದ್ 12 ಪಂದ್ಯಗಳಲ್ಲಿ ರಾಜಸ್ಥಾನವನ್ನು ಸೋಲಿಸಿದೆ. ಇತ್ತ ರಾಜಸ್ಥಾನ 9 ಪಂದ್ಯಗಳಲ್ಲಿ ಹೈದರಾಬಾದ್ ತಂಡವನ್ನು ಸೋಲಿಸಿದೆ. ಈಗ 22 ನೇ ಪಂದ್ಯದಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

SRH vs RR IPL 2026 Live Score: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ

ಪಾಯಿಂಟ್ ಪಟ್ಟಿಯಲ್ಲಿ 2 ತಂಡಗಳ ಸ್ಥಾನ

ಆಡಿದ ನಾಲ್ಕು ಪಂದ್ಯಗಳಲ್ಲೂ ರಾಜಸ್ಥಾನ ಜಯ ಸಾಧಿಸಿದ್ದು, +2.055 ರ ನೆಟ್ ರನ್​ರೇಟ್​ನಲ್ಲಿ ತನ್ನ ಖಾತೆಯಲ್ಲಿ 8 ಅಂಕಗಳನ್ನು ಹೊಂದಿದೆ. ಇತ್ತ ಹೈದರಾಬಾದ್ 4 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದ್ದು -0.024 ನೆಟ್ ರನ್​ರೇಟ್​ ಹಾಗೂ 2 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

ಉಭಯ ತಂಡಗಳ ಪ್ಲೇಯಿಂಗ್ 11

ಸನ್ ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ವಿಕೆಟ್ ಕೀಪರ್/ನಾಯಕ), ಹೆನ್ರಿಚ್ ಕ್ಲಾಸೆನ್, ಸಲಿಲ್ ಅರೋರಾ, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಶಿವಂಗ್ ಕುಮಾರ್, ಪ್ರಫುಲ್ ಹಿಂಗೆ, ಇಶಾನ್ ಮಾಲಿಂಗ.

ಇಂಪ್ಯಾಕ್ಟ್ ಪ್ಲೇಯರ್: ಆರ್ ಸ್ಮರಣ್, ಸಾಕಿಬ್ ಹುಸೇನ್, ಲಿಯಾಮ್ ಲಿವಿಂಗ್ಸ್ಟೋನ್, ಶಿವಂ ಮಾವಿ, ಹರ್ಷಲ್ ಪಟೇಲ್.

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಲುವಾನ್-ಡ್ರೆ ಪ್ರಿಟೋರಿಯಸ್, ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯ್, ತುಷಾರ್ ದೇಶಪಾಂಡೆ.

ಇಂಪ್ಯಾಕ್ಟ್ ಪ್ಲೇಯರ್: ವೈಭವ್ ಸೂರ್ಯವಂಶಿ, ಶಿಮ್ರಾನ್ ಹೆಟ್ಮೆಯರ್, ರವಿ ಸಿಂಗ್, ಶುಭಂ ದುಬೆ, ಬ್ರಿಜೇಶ್ ಶರ್ಮಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನೀವು ಆರ್‌ಎಸ್‌ಎಸ್‌ ಸಂಬಂಧಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೀರಿ; ನ್ಯಾಯಾಧೀಶರ ಕುರಿತು ಕೇಜ್ರಿವಾಲ್ ಆರೋಪ

ನವದೆಹಲಿ, ಏಪ್ರಿಲ್ 13: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕೀಲರ ಸಂಸ್ಥೆಯಾದ ಅಧಿವಕ್ತ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 4 ಬಾರಿ ಭಾಗವಹಿಸಿದ್ದಾರೆ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಆರೋಪಿಸಿದ್ದಾರೆ. ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ 4 ಬಾರಿ ಹಾಜರಾಗಿರುವುದು ಆತಂಕವನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿ-ಆರ್‌ಎಸ್‌ಎಸ್ ಸಿದ್ಧಾಂತವನ್ನು ನಾನು ವಿರೋಧಿಸುತ್ತೇನೆ. ಅಂತಹ ಸಂಘಟನೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವ ನ್ಯಾಯಮೂರ್ತಿ ಸ್ವರಣಾ ಶರ್ಮಾ ನನ್ನ ಕೇಸನ್ನು ವಿಚಾರಣೆ ನಡೆಸುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ. ಹೀಗಾಗಿ, ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ಅರ್ಜಿಯನ್ನು ವಿಚಾರಣೆ ನಡೆಸುವುದರಿಂದ ನ್ಯಾಯಮೂರ್ತಿ ಸ್ವರಣಾ ಶರ್ಮಾ ಅವರನ್ನು ಹಿಂತೆಗೆದುಕೊಳ್ಳಬೇಕೆಂದು ಕೇಜ್ರಿವಾಲ್ ಕೋರಿದ್ದಾರೆ. ಈ ವಿಷಯದಲ್ಲಿ ತಮ್ಮ ಪ್ರಕರಣದ ವಿಚಾರಣೆ ನಿಷ್ಪಕ್ಷಪಾತ ಮತ್ತು ತಟಸ್ಥವಾಗಿರುವುದಿಲ್ಲ ಎಂಬ ಗಂಭೀರವಾದ ಆತಂಕವಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: RSS ಬಗ್ಗೆ ಅವಹೇಳನಕಾರಿ ಮಾತು: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸಿಡಿದೆದ್ದ ಬಿಜೆಪಿ, ದೂರು ದಾಖಲು

“ಅಧಿವಕ್ತ ಪರಿಷತ್ ಎಂಬ ವಕೀಲರ ಸಂಸ್ಥೆ ಇದೆ. ಅದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸೈದ್ಧಾಂತಿಕ ಸಂಸ್ಥೆ. ನ್ಯಾಯಮೂರ್ತಿ ಸ್ವರಣಾ ಅವರು ಇದರ ಕಾರ್ಯಕ್ರಮಗಳಿಗೆ 4 ಬಾರಿ ಹಾಜರಾಗಿದ್ದಾರೆ. ಅವರು ಅನುಸರಿಸುವ ಸಿದ್ಧಾಂತವನ್ನು ನಾವು ಬಲವಾಗಿ ವಿರೋಧಿಸುತ್ತೇವೆ. ಈ ಪ್ರಕರಣ ರಾಜಕೀಯವಾಗಿದೆ” ಎಂದು ನ್ಯಾಯಾಲಯಕ್ಕೆ ಹಾಜರಾದ ಕೇಜ್ರಿವಾಲ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

SRH vs RR Playing XI: ಟಾಸ್ ಗೆದ್ದ ರಾಜಸ್ಥಾನ; ಎರಡೂ ತಂಡಗಳಲ್ಲಿ ಎರಡೆರಡು ಬದಲಾವಣೆ

ಐಪಿಎಲ್ 2026 ರ 21 ನೇ ಪಂದ್ಯದಲ್ಲಿ ಎರಡು ಚಾಂಪಿಯನ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯವು ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ. ಈ 19 ನೇ ಸೀಸನ್‌ನಲ್ಲಿ ಎರಡೂ ತಂಡಗಳ ಐದನೇ ಪಂದ್ಯ ಇದಾಗಿದೆ. ರಿಯಾನ್ ಪರಾಗ್ ನಾಯಕತ್ವದಲ್ಲಿ ರಾಜಸ್ಥಾನ ಸತತ 4 ಪಂದ್ಯಗಳನ್ನು ಗೆದ್ದಿದ್ದರೆ, ಇತ್ತ ಇಶಾನ್ ಕಿಶನ್ ನಾಯಕತ್ವದಲ್ಲಿ ಹೈದರಾಬಾದ್ ತಂಡವು 4 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಆದ್ದರಿಂದ, ರಾಜಸ್ಥಾನದ ಗೆಲುವಿನ ಓಟವನ್ನು ನಿಲ್ಲಿಸಿ ಗೆಲುವಿನ ಹಾದಿಗೆ ಮರಳಲು ಹೈದರಾಬಾದ್‌ಗೆ ದೊಡ್ಡ ಸವಾಲು ಎದುರಾಗಿದೆ. ಆದ್ದರಿಂದ, ಹೈದರಾಬಾದ್ ಈ ಪಂದ್ಯವನ್ನು ಗೆದ್ದು ಮತ್ತೆ ಗೆಲುವಿನ ಲಯಕ್ಕೆ ಮರಳುತ್ತಾ ಅಥವಾ ರಾಜಸ್ಥಾನ ಸತತ ಐದನೇ ಗೆಲ್ಲುವು ಸಾಧಿಸುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಟಾಸ್ ಗೆದ್ದ ರಾಜಸ್ಥಾನ

ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಬ್ರಿಜೇಶ್ ಶರ್ಮಾ ಮತ್ತು ಶಿಮ್ರಾನ್ ಹೆಟ್ಮೈರ್ ಅವರನ್ನು ಆಡುವ ಹನ್ನೊಂದರಿಂದ ಕೈಬಿಡಲಾಗಿದೆ. ಹಾಗೆಯೇ ತವರು ನೆಲದಲ್ಲಿ ಆಡುತ್ತಿರುವ ಹೈದರಾಬಾದ್ ತಂಡ ಕೂಡ ಎರಡು ಬದಲಾವಣೆಗಳನ್ನು ಮಾಡಿ ಪ್ರಫುಲ್ ಹಿಂಗೆ ಮತ್ತು ಹರ್ಷಲ್ ಪಟೇಲ್‌ಗೆ ವಿಶ್ರಾಂತಿ ನೀಡಿದೆ.

ಹೆಡ್ ಟು ಹೆಡ್ ದಾಖಲೆ

ರಾಜಸ್ಥಾನ ಮತ್ತು ಹೈದರಾಬಾದ್ ತಂಡಗಳು ಐಪಿಎಲ್‌ನಲ್ಲಿ ಇದುವರೆಗೆ ಒಟ್ಟು 21 ಬಾರಿ ಮುಖಾಮುಖಿಯಾಗಿವೆ. ಈ 21 ಪಂದ್ಯಗಳಲ್ಲಿ ಹೈದರಾಬಾದ್ 12 ಪಂದ್ಯಗಳಲ್ಲಿ ರಾಜಸ್ಥಾನವನ್ನು ಸೋಲಿಸಿದೆ. ಇತ್ತ ರಾಜಸ್ಥಾನ 9 ಪಂದ್ಯಗಳಲ್ಲಿ ಹೈದರಾಬಾದ್ ತಂಡವನ್ನು ಸೋಲಿಸಿದೆ. ಈಗ 22 ನೇ ಪಂದ್ಯದಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಪಾಯಿಂಟ್ ಪಟ್ಟಿಯಲ್ಲಿ 2 ತಂಡಗಳ ಸ್ಥಾನ

ಆಡಿದ ನಾಲ್ಕು ಪಂದ್ಯಗಳಲ್ಲೂ ರಾಜಸ್ಥಾನ ಜಯ ಸಾಧಿಸಿದ್ದು, +2.055 ರ ನೆಟ್ ರನ್​ರೇಟ್​ನಲ್ಲಿ ತನ್ನ ಖಾತೆಯಲ್ಲಿ 8 ಅಂಕಗಳನ್ನು ಹೊಂದಿದೆ. ಇತ್ತ ಹೈದರಾಬಾದ್ 4 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದ್ದು -0.024 ನೆಟ್ ರನ್​ರೇಟ್​ ಹಾಗೂ 2 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

ಉಭಯ ತಂಡಗಳ ಪ್ಲೇಯಿಂಗ್ 11

ಸನ್ ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ವಿಕೆಟ್ ಕೀಪರ್/ನಾಯಕ), ಹೆನ್ರಿಚ್ ಕ್ಲಾಸೆನ್, ಸಲಿಲ್ ಅರೋರಾ, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಶಿವಂಗ್ ಕುಮಾರ್, ಪ್ರಫುಲ್ ಹಿಂಗೆ, ಇಶಾನ್ ಮಾಲಿಂಗ.

ಇಂಪ್ಯಾಕ್ಟ್ ಪ್ಲೇಯರ್: ಆರ್ ಸ್ಮರಣ್, ಸಾಕಿಬ್ ಹುಸೇನ್, ಲಿಯಾಮ್ ಲಿವಿಂಗ್ಸ್ಟೋನ್, ಶಿವಂ ಮಾವಿ, ಹರ್ಷಲ್ ಪಟೇಲ್.

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಲುವಾನ್-ಡ್ರೆ ಪ್ರಿಟೋರಿಯಸ್, ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯ್, ತುಷಾರ್ ದೇಶಪಾಂಡೆ.

ಇಂಪ್ಯಾಕ್ಟ್ ಪ್ಲೇಯರ್: ವೈಭವ್ ಸೂರ್ಯವಂಶಿ, ಶಿಮ್ರಾನ್ ಹೆಟ್ಮೆಯರ್, ರವಿ ಸಿಂಗ್, ಶುಭಂ ದುಬೆ, ಬ್ರಿಜೇಶ್ ಶರ್ಮಾ.

Source link

ಫೆಬ್ರುವರಿಯಲ್ಲಿ ಶೇ. 3.21 ಇದ್ದ ರೀಟೇಲ್ ಹಣದುಬ್ಬರ ಮಾರ್ಚ್​ನಲ್ಲಿ ಶೇ. 3.4ಕ್ಕೆ ಏರಿಕೆ

ನವದೆಹಲಿ, ಏಪ್ರಿಲ್ 13: ಗ್ರಾಹಕ ಬೆಲೆ ಅನುಸೂಚಿ ಆಧಾರದ ರೀಟೇಲ್ ಹಣದುಬ್ಬರ (Retial Inflation) ಮಾರ್ಚ್ ತಿಂಗಳಲ್ಲಿ ಶೇ. 3.4ಕ್ಕೆ ಏರಿದೆ. ಹಿಂದಿನ ತಿಂಗಳಲ್ಲಿ (2026ರ ಫೆಬ್ರುವರಿ) ಹಣದುಬ್ಬರ ಶೇ. 3.21 ಇತ್ತು. ಮಾರ್ಚ್​ನಲ್ಲಿ ಹಣದುಬ್ಬರ ದರ ಏರಲು ಆಹಾರ ಬೆಲೆಗಳಲ್ಲಿ ಆಗಿರುವ ಏರಿಕೆ ಎಂದು ಹೇಳಲಾಗಿದೆ. ಫೆಬ್ರುವರಿಯಲ್ಲಿ ಶೇ. 3.47ರಷ್ಟಿದ್ದ ಆಹಾರ ಹಣದುಬ್ಬರ ಮಾರ್ಚ್​ನಲ್ಲಿ ಶೇ. 3.87ಕ್ಕೆ ಹೆಚ್ಚದೆ.

ಹಣದುಬ್ಬರ ಮಾರ್ಚ್ ತಿಂಗಳಲ್ಲಿ ಹೆಚ್ಚುವುದು ನಿರೀಕ್ಷಿತವೇ ಆಗಿತ್ತು. ಇರಾನ್ ಯುದ್ಧದಿಂದಾಗಿ ತೈಲ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಇದರ ಪರಿಣಾಮದಿಂದ ಸಾಮಾನ್ಯ ಬೆಲೆ ಏರಿಕೆ ಆಗಿದೆ. ಮಾರ್ಚ್​ನಲ್ಲಿ ದಾಖಲಾಗಿರುವ ಶೇ. 3.4 ಹಣದುಬ್ಬರವು ಹಿಂದಿನ ವರ್ಷದ ಮಾರ್ಚ್​ನಲ್ಲಿದ್ದ ದರಕ್ಕೆ ಹೋಲಿಸಲಾಗಿದೆ. ರಾಷ್ಟ್ರೀಯ ಸಾಂಖ್ಯಿಕ ಕಚೇರಿಯಿಂದ ಬಿಡುಗಡೆ ಮಾಡಲಾದ ಈ ದತ್ತಾಂಶವು 2024 ಅನ್ನು ಆಧಾರ ವರ್ಷವಾಗಿ ಇಟ್ಟುಕೊಂಡು ಎಣಿಸಲಾಗಿದೆ.

ಇದನ್ನೂ ಓದಿ: ಸಂಧಾನ ಮುರಿದುಬಿದ್ದ ಬೆನ್ನಲ್ಲೇ ರಾಕೆಟ್​ನಂತೆ ಮೇಲೇರಿದ ತೈಲ ಬೆಲೆ

ಮಾರ್ಚ್​ನಲ್ಲಿ ಹಣದುಬ್ಬರ ಏರಿಕೆಗೆ ಕಾರಣವಾದ ವಸ್ತುಗಳಲ್ಲಿ ಆಹಾರ ಇದೆ. ಹಾಗೆಯೇ, ಚಿನ್ನ, ಬೆಳ್ಳಿ, ತೆಂಗಿನಕಾಯಿ, ಟೊಮೆಟೋ, ಕೋಸು ಇತ್ಯಾದಿ ವಸ್ತುಗಳ ಬೆಲೆ ಅಧಿಕಗೊಂಡಿದೆ.

ಇನ್ನೊಂದೆಡೆ, ಈರುಳ್ಳಿ, ಆಲೂಗಡ್ಡೆ, ಬೆಳ್ಳುಳ್ಳಿ ಇತ್ಯಾದಿ ಆಹಾರವಸ್ತುಗಳ ಬೆಲೆ ಕಡಿಮೆಗೊಂಡಿದ್ದು, ಹಣದುಬ್ಬರ ಶೇ. 4 ದಾಟದಂತೆ ನೋಡಲು ಸಾಧ್ಯವಾಗಿದೆ.

ಇದನ್ನೂ ಓದಿ: ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಸುಂಕದಲ್ಲಿ ಭರ್ಜರಿ ಹೆಚ್ಚಳ; ಡೀಸಲ್​ಗೆ 55.5 ರೂ, ಎಟಿಎಫ್​ಗೆ 42 ರೂ ಸುಂಕ

ವಿದ್ಯುತ್, ಗ್ಯಾಸ್ ಹಾಗೂ ಇತರ ಇಂಧನಗಳ ಹಣದುಬ್ಬರವು ಫೆಬ್ರುವರಿಯಲ್ಲಿ ಶೇ. 1.52 ಇತ್ತು. ಮಾರ್ಚ್​ನಲ್ಲಿ ಶೇ. 1.65ಕ್ಕೆ ಏರಿದೆ. ಗೃಹ ನಿರ್ಮಾಣ ಹಣದುಬ್ಬರ ದರ ಮಾರ್ಚ್​ನಲ್ಲಿ ಶೇ. 2.11 ಇತ್ತು. ಸರ್ಕಾರವು ಪೆಟ್ರೋಲ್ ಮತ್ತು ಡೀಸಲ್ ಬೆಲೆ ಹೆಚ್ಚಳವಾಗದಂತೆ ಕ್ರಮ ತೆಗೆದುಕೊಂಡಿದ್ದರಿಂದ ಹಣದುಬ್ಬರವು ಮಿತಿಮೀರಿ ಹೋಗಿಲ್ಲ.

ಆರ್​ಬಿಐ ಹಣದುಬ್ಬರವನ್ನು ಶೇ. 4ಕ್ಕೆ ನಿಯಂತ್ರಿಸುವ ಗುರಿ ಹೊಂದಿದೆ. ಕೆಲವಾರು ತಿಂಗಳುಗಳಿಂದ ಹಣದುಬ್ಬರವು ಇದೇ ಗಡಿಯೊಳಗೆ ಇದೆ. ಹಣದುಬ್ಬರ ಏರಿಕೆಯಾಗುವ ಸಾಧ್ಯತೆ ತೋರಿದರೆ ಆರ್​ಬಿಐ ರಿಪೋ ದರ ಏರಿಕೆ ಇತ್ಯಾದಿ ಅಸ್ತ್ರ ಬಳಸಲು ಸಜ್ಜಾಗಬೇಕಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

SRH vs RR IPL 2026 Live Score: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ

ಇಂದು, ಐಪಿಎಲ್ 2026 ರ 21 ನೇ ಪಂದ್ಯದಲ್ಲಿ, ಸತತ ನಾಲ್ಕು ಪಂದ್ಯಗಳನ್ನು ಗೆದ್ದಿರುವ ರಾಜಸ್ಥಾನವನ್ನು ತಡೆಯುವ ಕಠಿಣ ಸವಾಲನ್ನು ಹೈದರಾಬಾದ್ ಎದುರಿಸುತ್ತಿದೆ. ಸತತ ಎರಡು ಪಂದ್ಯಗಳನ್ನು ಸೋತಿರುವ ಇಶಾನ್ ಕಿಶನ್ ನಾಯಕತ್ವದ ಹೈದರಾಬಾದ್, ಆವೃತ್ತಿಯ ಎರಡನೇ ಗೆಲುವನ್ನು ಹುಡುಕುತ್ತಿದೆ. ಏತನ್ಮಧ್ಯೆ, ಹೊಸ ನಾಯಕ ರಿಯಾನ್ ಪರಾಗ್ ನಾಯಕತ್ವದಲ್ಲಿ, ರಾಯಲ್ಸ್ ಸತತ ಐದು ಗೆಲುವುಗಳೊಂದಿಗೆ ಅಗ್ರಸ್ಥಾನದಲ್ಲಿ ತನ್ನ ಹಿಡಿತವನ್ನು ಬಲಪಡಿಸಲು ನೋಡುತ್ತಿದೆ. ಹೈದರಾಬಾದ್ ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ-ಟ್ರಾವಿಸ್ ಹೆಡ್ ಮತ್ತು ರಾಜಸ್ಥಾನ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್-ವೈಭವ್ ಸೂರ್ಯವಂಶಿ ನಡುವಿನ ಸ್ಪರ್ಧೆಯ ಮೇಲೆ ಎಲ್ಲರ ಕಣ್ಣುಗಳಿವೆ.

Source link

Asha Bhosle Funeral: ಸರ್ಕಾರಿ ಗೌರವದೊಂದಿಗೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಅನಾರೋಗ್ಯದಿಂದ ನಿಧನರಾದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ (Asha Bhosle Funeral) ಇಂದು (ಏಪ್ರಿಲ್ 13) ನಡೆದಿದೆ. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ಮಾಡಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಆಶಾ ಭೋಸ್ಲೆ ಅವರ ಅಂತಿಮ ದರ್ಶನ ಪಡೆದರು. ಕುಟುಂಬದವರು, ಆಪ್ತರು ಮತ್ತು ಚಿತ್ರರಂಗದ ಅನೇಕರು ಬಂದು ಅಂತಿಮ ನಮನ ಸಲ್ಲಿಸಿದರು. ಸಾವಿರಾರು ಗೀತೆಗಳ ಮೂಲಕ ಎಲ್ಲರ ಮನ ಗೆದ್ದಿದ್ದ ಆಶಾ ಭೋಸ್ಲೆ (Asha Bhosle) ಅವರು ಈಗ ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಆಶಾ ಭೋಸ್ಲೆ ಅವರು ಏಪ್ರಿಲ್ 12ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವೈಯಕ್ತಿಕ ಬದುಕಿನಲ್ಲಿ ಸಾಕಷ್ಟು ಏಳು-ಬೀಳುಗಳನ್ನು ಕಂಡಿದ್ದ ಆಶಾ ಭೋಸ್ಲೆ ಅವರು ಸಂಗೀತ ಲೋಕದಲ್ಲಿ ಸಾಧನೆ ಮಾಡಿದ್ದರು. ಅವರ ಅಗಲಿಕೆಗೆ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.

‘ಧುರಂಧರ್ 2’ ಸಿನಿಮಾದ ನಟ ರಣವೀರ್ ಸಿಂಗ್ ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು. ಕಣ್ಣೀರು ಹಾಕುತ್ತಾ ಅಂತಿಮ ನಮನ ಸಲ್ಲಿಸಿದ ಅವರು ಆಶಾ ಭೋಸ್ಲೆ ಕುಟುಂಬಕ್ಕೆ ಸಾಂತ್ವನ ಹೇಳಿದರು. ಆಮಿರ್ ಖಾನ್, ಟಬು, ರಿತೇಶ್ ದೇಶಮುಖ್, ಎ.ಆರ್. ರೆಹಮಾನ್, ಸಚಿನ್ ತೆಂಡೂಲ್ಕರ್, ರಾಕೇಶ್ ರೋಷನ್, ಜಾಕಿ ಶ್ರಾಫ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಸುನೇತ್ರಾ ಪವಾರ್ ಮುಂತಾದವರು ಬಂದು ಆಶಾ ಭೋಸ್ಲೆ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಸೋಶಿಯಲ್ ಮೀಡಿಯಾ ಮೂಲಕ ನರೇಂದ್ರ ಮೋದಿ, ಮಮತಾ ಬ್ಯಾನರ್ಜಿ, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್ ಮುಂತಾದವರು ಆಶಾ ಭೋಸ್ಲೆ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ: ಪ್ರಧಾನಿ ನರೇಂದ್ರ ಮೋದಿ ಸಂತಾಪ

80 ವರ್ಷಗಳ ಕಾಲ ಆಶಾ ಭೋಸ್ಲೆ ಅವರು ಗಾಯನದಲ್ಲಿ ಸಕ್ರಿಯರಾಗಿದ್ದರು. ಸಾವಿರಾರು ಗೀತೆಗಳ ಮೂಲಕ ಅವರು ಜನಪ್ರಿಯತೆ ಗಳಿಸಿದ್ದರು. ಹಿಂದಿ ಮಾತ್ರವಲ್ಲದೇ ಹಲವು ಭಾಷೆಗಳ ಗೀತೆಗಳಿಗೆ ಧ್ವನಿ ನೀಡುವ ಮೂಲಕ ಅವರು ಪ್ರಖ್ಯಾತರಾಗಿದ್ದರು. ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ, ‘ಪದ್ಮ ವಿಭೂಷಣ’ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಆಶಾ ಭೋಸ್ಲೆ ಪಾತ್ರರಾಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭುಗಿಲೆದ್ದ ಮಂತ್ರಾಲಯ ರಾಯರ ಜಪದ ಕಟ್ಟೆ ವಿವಾದ: ಸರ್ವೆ ವೇಳೆ ಹೈಡ್ರಾಮಾ, ರೈತರು ಪೊಲೀಸ್ ವಶಕ್ಕೆ

ರಾಯಚೂರು, ಏಪ್ರಿಲ್​ 13: ಮಂತ್ರಾಲಯ ರಾಯರು (Mantralaya Rayaru) ತಪಸ್ಸು ಮಾಡಿದ್ದ ಜಪದ ಕಟ್ಟೆ ಸಮೀಪವಿರುವ ಜಮೀನಿನ ವಿವಾದ (Land Dispute) ಇದೀಗ ತಾರಕ್ಕೇರಿದೆ. ಸರ್ಕಾರದ ಆದೇಶದನ್ವಯ ಇಂದು ಸರ್ವೆ ಕಾರ್ಯ ನಡೆಯುತ್ತಿದ್ದ ವೇಳೆ ಕೆಲ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ತಳ್ಳಾಟ-ನೂಕಾಟ ಉಂಟಾಗಿದ್ದು, ದೊಡ್ಡ ಹೈಡ್ರಾಮಾವೇ ನಡೆದು ಹೋಗಿದೆ‌‌.

ಏನಿದು ಪ್ರಕರಣ?

ರಾಯಚೂರು ತಾಲ್ಲೂಕಿನ ಬಿಚ್ಚಾಲಿ ಗ್ರಾಮದಲ್ಲಿ ಮಂತ್ರಾಲಯ ರಾಯರ 13 ವರ್ಷಗಳ ಕಾಲ ತಪಸ್ಸು ಮಾಡಿದ್ದಾರೆ. ರಾಯರ ತಪಸ್ಸು ಮಾಡಿದ ಜಪದ ಕಟ್ಟೆ ಈಗಲೂ ಬಿಚ್ಚಾಲಿ ಗ್ರಾಮದಲ್ಲಿದೆ. ಇದೇ ಬಿಚ್ಚಾಲಿ ಗ್ರಾಮದಲ್ಲಿ ರಾಯರ ಜಪದ ಕಟ್ಟೆ ದರ್ಶನಕ್ಕೆ ಅಪಾರ ಭಕ್ತರು ನಿತ್ಯ ಇಲ್ಲಿಗೆ ಬರ್ತಾರೆ. ಈ ಜಪದ ಕಟ್ಟೆ ಬಿಚ್ಚಾಲಿ ಮೂಲದ ಬಿಚ್ಚಾಲೆ ಅಪ್ಪಣ್ಣಾಚಾರ್ಯ ಸೇವಾ ಟ್ರಸ್ಟ್ ಮೂಲಕ ಕಾರ್ಯನಿರ್ವಹಿಸುತ್ತಿದೆ. ಇದೇ ಜಪದ ಕಟ್ಟೆಗೆ ಹೊಂದಿಕೊಂಡಿರುವ ಸ್ಥಳ ಹಾಗೂ ಅದರ ಪಕ್ಕದಲ್ಲಿರುವ ಒಟ್ಟು 2.33 ಎಕರೆ ಜಮೀನಿನ ವಿವಾದ ಈಗ ತಾರಕ್ಕೇರಿದೆ. ಇದೇ ಭೂ ವಿವಾದ ಸಂಬಂಧ ಇಂದು ಸರ್ವೆ ನಡೆಯುವ ವೇಳೆ ದೊಡ್ಡ ಹೈಡ್ರಾಮಾವೇ ನಡೆದಿದೆ.

ಇದನ್ನೂ ಓದಿ: ಮಂತ್ರಾಲಯದ ಕರ್ನಾಟಕ ಅತಿಥಿ ಗೃಹದಲ್ಲಿ ಭ್ರಷ್ಟಾಚಾರದ ಹೊಗೆ: ಅಸ್ವಚ್ಛತೆ, ದುರಾಡಳಿತ ವಿರುದ್ಧ ಉಪಲೋಕಾಯುಕ್ತರ ಗರಂ!

ಬಿಚ್ಚಾಲಿ ಗ್ರಾಮದ ರಾಯರ ಜಪದ ಕಟ್ಟೆಗೆ ಹೊಂದಿಕೊಂಡಿರುವ ಸರ್ವೆ ನಂಬರ್ 35 ರಲ್ಲಿ 1.2 ಎಕರೆ ಹಾಗೂ ಸರ್ವೆ ನಂಬರ್ 37 ರಲ್ಲಿ 1.31 ಎಕರೆ ಸೇರಿ ಒಟ್ಟು 2 ಎಕರೆ 33 ಗುಂಟೆ ಜಮೀನನ್ನ ರಾಜ್ಯ ಸರ್ಕಾರ, ರಾಘವೇಂದ್ರ ಮಠ ನಂಜನಗೂಡು ಹಾಗೂ ಮಂತ್ರಾಲಯ ಕ್ಯಾಂಪ್ ಮಠಕ್ಕೆ ಮಂಜೂರು ಮಾಡಿ‌ ಆದೇಶಿಸಿದೆ. ರಾಘವೇಂದ್ರ ಸ್ವಾಮಿ ಚಾರಿತ್ರಿಕ ಸ್ಥಳಗಳನ್ನ ಅಭಿವೃದ್ಧಿ ಪಡಿಸಿ, ಧಾರ್ಮಿಕ ಹಾಗೂ ಪ್ರೇಕ್ಷಣೀಯ ಸ್ಥಳಗಳನ್ನಾಗಿ ಅಭಿವೃದ್ಧಿ ಪಡೆಸುವ ಉದ್ದೇಶಕ್ಕೆ 2021-22ರ ಸಾಲಿನಲ್ಲಿ ರಾಜ್ಯ ಸರ್ಕಾರ ಮಂಜೂರು ಮಾಡಿತ್ತು. ಆದರೆ ಇದೇ ಸರ್ವೆ ನಂಬರ್​ನ ಕೆಲವೆಡೆ ಬಿಚ್ಚಾಲಿ ಗ್ರಾಮದ ಕೆಲವರು ಸಾಗುವಳಿ ಮಾಡುತ್ತಿದ್ದಾರೆ. ಹೀಗಾಗಿ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಪಾಡದ ರಾಘವೇಂದ್ರ ಆಚಾರ್ಯ ಹಾಗೂ ಇತರರು ರಿಟ್ ಅರ್ಜಿ ಸಲ್ಲಿಸಿದ್ದು, ಕೇಸ್ ನಡೆದಿತ್ತು.

ಸರ್ವೆ ವೇಳೆ ರಂಪಾಟ: ಕೆಲವರು ಪೊಲೀಸ್​ ವಶಕ್ಕೆ 

ಕಳೆದ ವಾರ ರಿಟ್ ಅರ್ಜಿಯನ್ನ ವಜಾಗೊಳಿಸಲಾಗಿದೆ. ಹೀಗಾಗಿ ಸರ್ಕಾರದ ಮಂಜೂರಾತಿ ಆದೇಶದನ್ವಯ ಗಡಿ ಗುರುತಿಸಿ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆದಿದೆ. ಹೀಗಾಗಿ ಹೈಕೋರ್ಟ್ ಆದೇಶದನ್ವಯ ಇಂದು ಅಧಿಕಾರಿಗಳ ತಂಡ ಸರ್ವೆಗೆ ಮುಂದಾದ್ದರು. ಸೂಕ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ನಿಯೋಜಿಸಲಾಗಿತ್ತು. ಆದರೆ ಸರ್ವೆ ವೇಳೆ ನಡೆದಿದ್ದೇ ಬೇರೆ. ಸರ್ವೆ ವೇಳೆ ಕೆಲ ಸ್ಥಳೀಯರು, ಸಾಗುವಳಿದಾರರು ಆಕ್ರೋಶ ಹೊರಹಾಕಿದರು. ಸರ್ವೆ ಮಾಡುವುದಕ್ಕೆ ಬಿಡಲ್ಲ ಅಂತ ಅಡ್ಡಿಪಡಿಸಿದರು. ಈ ವೇಳೆ ಪೊಲೀಸರು ಎಷ್ಟೇ ಹೇಳಿದರು ಸುಮ್ಮನಾಗದ ಕೆಲವರು ದೊಡ್ಡ ರಂಪಾಟವೇ ಮಾಡಿದ್ದಾರೆ. ಈ ವೇಳೆ ಕೆಲವರು ಪೊಲೀಸರ ಜೊತೆ ವಾಗ್ವಾದ ಉಂಟಾಗಿದೆ. ಆಗ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕೆಲವರನ್ನ ವಶಕ್ಕೆ ಪಡೆದರು. ಬಳಿಕ ಪೊಲೀಸರ ಸಮ್ಮುಖದಲ್ಲಿ ಸರ್ವೆ ಕಾರ್ಯ ನಡೆಯಿತು.

ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಹೇಳಿದ್ದಿಷ್ಟು 

ಇನ್ನು ಈ ಬಗ್ಗೆ ರಾಯಚೂರು ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಪ್ರತಿಕ್ರಿಯಿಸಿದ್ದು, 2022ರಲ್ಲಿ ಕರ್ನಾಟಕ ಸರ್ಕಾರ ರಾಘವೇಂದ್ರ ಸ್ವಾಮಿ ಮಠ ನಂಜನಗೂಡು ಹಾಗೂ ಮಂತ್ರಾಲಯ ಕ್ಯಾಂಪ್‌ ಆಫೀಸ್​ಗೆ ಭೂ ಮಂಜೂರು ಮಾಡಿದೆ. ಸರ್ಕಾರದ ಮಂಜೂರಾತಿ ಆದೇಶದನ್ವಯ ಗಡಿ ಗುರುತಿಸಿ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆದಿದೆ. ಅತಿಕ್ರಮಣ ಸ್ಥಳದಲ್ಲಿ ಕಟ್ಟಡ ಕಟ್ಟಿದ್ದರೆ ಅದನ್ನ ಕಾನೂನು, ನಿಯಮದಡಿ ತೆರವು ಮಾಡಲಾಗತ್ತೆ. ಈ ಸರ್ವೆ ಜಪದ ಕಟ್ಟೆಗೆ ಬರಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮಂತ್ರಾಲಯ ರಾಯರ ಹುಂಡಿಯಲ್ಲಿ ಕೇವಲ 21 ದಿನಗಳಲ್ಲಿ 2.48 ಕೋಟಿ ರೂ. ಸಂಗ್ರಹ

ಸದ್ಯ ಸರ್ವೆ ಕಾರ್ಯ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಆದರೆ ಈ ವಿವಾದ ಸದ್ಯ ಬೂದಿ ಮುಚ್ಚಿದ ಕೆಂಡವಾಗಿದ್ದು, ಮುಂದೆ ಯಾವ ತಿರುವು ಪಡೆಯುತ್ತೆ ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version