ತಿಹಾರ್ ಜೈಲು ಪಾಲಾದ ಖ್ಯಾತ ಹಾಸ್ಯ ನಟ ರಾಜ್​ಪಾಲ್ ಯಾದವ್; ಕಾರಣ ಏನು? – Kannada News | Actor Rajpal Yadav sent to Tihar Jail in check bounce case

ಹಿಂದಿ ಚಿತ್ರರಂಗದ ಖ್ಯಾತ ಹಾಸ್ಯ ನಟ ರಾಜ್​​ಪಾಲ್ ಯಾದವ್ (Rajpal Yadav) ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆರ್ಥಿಕ ಅಪರಾಧದ ಕಾರಣದಿಂದ ಅವರು ಜೈಲು ಪಾಲಾಗುವಂತಾಗಿದೆ. ಒಂದೂವರೆ ದಶಕದ ಹಿಂದೆ ಪಡೆದಿದ್ದ ಸಾಲವನ್ನು ಮರುಪಾವತಿ ಮಾಡಲಾಗದೇ ಇದ್ದಿದ್ದಕ್ಕಾಗಿ ಅವರನ್ನು ಜೈಲಿಗೆ ಕಳಿಸಲಾಗಿದೆ. ರಾಜ್​ಪಾಲ್ ಯಾದವ್ ಅವರು ಈಗ ತಿಹಾರ್ ಜೈಲು (Tihar Jail) ಸೇರಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ. ಸಿನಿಮಾ ಮಾಡುವ ಸಲುವಾಗಿಯೇ ಸಾಲ ಪಡೆದಿದ್ದ ರಾಜ್​ಪಾಲ್ ಯಾದವ್ ಅವರು ಜೈಲುವಾಸ ಅನುಭವಿಸುತ್ತಿದ್ದಾರೆ.

ದೆಹಲಿ ಮೂಲದ ಉದ್ಯಮಿಯೊಬ್ಬರಿಂದ ರಾಜ್​ಪಾಲ್ ಯಾದವ್ ಅವರು 5 ಕೋಟಿ ರೂಪಾಯಿ ಸಾಲ ಪಡೆದಿದ್ದರು. ತಮ್ಮದೇ ನಿರ್ದೇಶನದ ‘ಅತಾ ಪತಾ ಲಾಪತಾ’ ಸಿನಿಮಾ ಸಲುವಾಗಿ ಅವರ ಸಾಲ ಮಾಡಿದ್ದರು. ಆದರೆ ಆ ಸಿನಿಮಾ ಸೋತಿತು. ಆದ್ದರಿಂದ ಅವರಿಗೆ ಆರ್ಥಿಕ ಸಂಕಷ್ಟ ಶುರು ಆಯಿತು. ಸಾಲ ತೀರಿಸಲು ರಾಜ್​ಪಾಲ್ ಯಾದವ್ ಅವರಿಗೆ ಸಾಧ್ಯವಾಗಲೇ ಇಲ್ಲ.

ಸಾಲ ಕೊಟ್ಟವರು ರಾಜ್​ಪಾಲ್ ಯಾದವ್ ಮೇಲೆ ಕೇಸ್ ಹಾಕಿದರು. ರಾಜ್​ಪಾಲ್ ಯಾದವ್ ನೀಡಿದ್ದ ಹಲವು ಚೆಕ್​​ಗಳು ಬೌನ್ಸ್ ಆಗಿದ್ದರಿಂದ ಅವರಿಗೆ 2018ರಲ್ಲೇ ಶಿಕ್ಷೆ ಪ್ರಕಟ ಆಯಿತು. 6 ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಲಾಯಿತು. ಆ ಬಳಿಕವೂ ರಾಜ್​ಪಾಲ್ ಯಾದವ್ ಬುದ್ಧಿ ಕಲಿಯಲಿಲ್ಲ. ಸಾಲ ತೀರಿಸಲು ಅವರು ವಿಫಲರಾದರು.

ಒಂದೂವರೆ ದಶಕಗಳ ಕಾಲ ಎಳೆದಾಡಿಕೊಂಡು ಬಂದಿದ್ದ ಈ ಕೇಸ್ ಈಗ ಅಂತಿಮ ಘಟಕ್ಕೆ ಬಂದಿದೆ. ನೀವು ಕೂಡಲೇ ಶರಣಾಗಬೇಕು ಎಂದು ರಾಜ್​ಪಾಲ್ ಯಾದವ್ ಅವರಿಗೆ ಕೋರ್ಟ್ ಸೂಚನೆ ನೀಡಿತು. ಅದರಂತೆ, ರಾಜ್​ಪಾಲ್ ಯಾದವ್ ಅವರು ತಿಹಾರ್ ಜೈಲಿನ ಅಧಿಕಾರಿಗಳ ಎದುರು ಶರಣಾಗಿದ್ದಾರೆ. ಸಮಯಾವಕಾಶ ನೀಡುವಂತೆ ಅವರು ಸಲ್ಲಿಸಿದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಇದನ್ನೂ ಓದಿ: Rajpal Yadav: 26,000 ರೂ. ನೀಡಿ ಹೇರ್​ಕಟ್​ ಮಾಡಿಸಿಕೊಂಡಿದ್ದ ರಾಜ್​ಪಾಲ್​ ಯಾದವ್​; ಹಾಸ್ಯ ನಟನ ಪ್ರಯತ್ನವೆಲ್ಲ ನೀರಲ್ಲಿ ಹೋಮ

2010ರಲ್ಲಿ ರಾಜ್​ಪಾಲ್ ಯಾದವ್ ಪಡೆದಿದ್ದ 5 ಕೋಟಿ ರೂಪಾಯಿ ಸಾಲ ಈಗ 9 ಕೋಟಿ ರೂಪಾಯಿ ಆಗಿ ಬೆಳೆದಿದೆ. ಇದನ್ನು ಮರುಪಾವತಿ ಮಾಡಲು ಅವರಿಗೆ ಹಲವು ಅವಕಾಶಗಳನ್ನು ನೀಡಲಾಗಿತ್ತು. ಆದರೆ ಅದನ್ನು ಅವರು ಗಂಭೀರವಾಗಿ ಪರಿಗಣಿಸಿಲ್ಲ. ಆದ್ದರಿಂದ ಈ ಬಾರಿ ಜೈಲು ಶಿಕ್ಷೆ ವಿಧಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವೇಶ್ಯಾವಾಟಿಕೆ ನಡೆಸುವಂತೆ ಅತ್ತೆಯಿಂದ ಒತ್ತಾಯ: 11 ತಿಂಗಳ ಮಗು ಬಿಟ್ಟು ಗೃಹಿಣಿ ಆತ್ಮಹತ್ಯೆ – Kannada News | Married Woman Dies by Suicide Over Alleged Harassment by Mother in Law in Basavakalyan, Bidar

ಮೃತ ಅಂಜನಾಬಾಯಿ ಶೇಖರ್ ಪಾಟೀಲ್Image Credit source: Tv9 Kannada

ಬೀದರ್​​, ಫೆಬ್ರವರಿ 08: ವೇಶ್ಯಾವಾಟಿಕೆಗೆ ಅತ್ತೆಯಿಂದ ಒತ್ತಾಯ ಆರೋಪ ಹಿನ್ನೆಲೆ 11 ತಿಂಗಳ ಮಗು ಬಿಟ್ಟು ಗೃಹಿಣಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ನಡೆದಿದೆ. ಅಂಜನಾಬಾಯಿ ಶೇಖರ್ ಪಾಟೀಲ್(22) ಮೃತ ಯುವತಿಯಾಗಿದ್ದು, ಪತಿ ಮನೆಯವರಿಂದ ನಿತ್ಯ ಕಿರುಕುಳ ಹಿನ್ನೆಲೆ ಮನನೊಂದು ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಮೂರು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

2022ರಲ್ಲಿ ಬಸವಕಲ್ಯಾಣದ ಶೇಖರ್ ಪಾಟೀಲ್ ಜತೆ ಅಂಜನಾಬಾಯಿ ವಿವಾಹ ನಡೆದಿದ್ದು, ಮದುವೆ ಬಳಿಕ ವೇಶ್ಯಾವಾಟಿಕೆ ಮಾಡುವಂತೆ ಒತ್ತಾಯಿಸಿ ಯುವತಿಗೆ ನಿತ್ಯವೂ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಅಂಜನಾಬಾಯಿ ಪತಿ ಶೇಖರ್​​ ಪಾನಿಪುರಿ ವ್ಯಾಪಾರ ಮಾಡಿಕೊಂಡಿದ್ದ ಎನ್ನಲಾಗಿದ್ದು, ನಿತ್ಯವೂ ರಾತ್ರಿ 11-12 ಗಂಟೆ ಅವಧಿಯಲ್ಲಿ ಮನೆಗೆ ಬರುತ್ತಿದ್ದ. ಈ ಬಗ್ಗೆ ತಕರಾರು ಮಾಡಿದ್ದ ಅಂಜನಾಬಾಯಿ ಬೇಗ ಮನೆಗೆ ಬನ್ನಿ ಎಂದಿದ್ದಳು. ಆದರೆ ಇದೇ ವಿಚಾರವಾಗಿ ಅತ್ತೆ ಮಾವ ಆಕೆ ಜೊತೆ ಜಗಳ ಮಾಡಿದ್ದಾರೆ. ನಿನಗೆ ಅಡುಗೆ ಬರಲ್ಲ, ನೀನು ಚೆನ್ನಾಗಿಲ್ಲ ಎಂದೆಲ್ಲ ಹೀಯಾಳಿಸಿದ್ದಾರೆ. ಜೊತೆಗೆ ನೀನು ವೇಶ್ಯಾವಾಟಿಕೆ ಮಾಡು ಎಂದು ಆಕೆಯನ್ನು ಪೀಡಿಸಿದ್ದು, ಆ ಬಗ್ಗೆ ಅಂಜನಾಬಾಯಿ ಹೆತ್ತವರ ಬಳಿಯೂ ಹೇಳಿಕೊಂಡಿದ್ದಳು. ಆದರೆ ಈ ಬಗ್ಗೆ ಪೋಷಕರು ಆಕೆಗೆ ಸಮಾಧಾನ ಮಾಡಿದ್ದು, ಇಂದೆಲ್ಲ ನಾಳೆ ಸರಿಹೋಗಬಹುದು ಎಂದು ತಿಳುವಳಿಕೆ ಹೇಳಿದ್ದರು.  ಈ ನಡುವೆ ಕಿರುಕುಳ ತಾಳಲಾರದೆ ಅಂಜನಾಬಾಯಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಈ ಬಗ್ಗೆ ಆಕೆಯ ತಂದೆ ವಿಜಯಕುಮಾರ್ ದೂರಿನ ಮೇರೆಗೆ ಮೃತಳ ಗಂಡ ಶೇಖರ್ ಸೇರಿ ಮೂವರ ವಿರುದ್ಧ ಬಸವಕಲ್ಯಾಣ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಾತ್ರಿ ಹಿಂದೂ ಮಹಿಳೆಯ ಮನೆಯಲ್ಲಿ ಕಾಂಗ್ರೆಸ್​​ ಮುಖಂಡ ಸಿಕ್ಕಿಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸ್ಪಿರಿಟ್ ಕುಡಿದು ಇಬ್ಬರು ಯುವಕರ ಸಾವು

ಪಾರ್ಟಿಗೆಂದು ಹೋದಾಗ ಸ್ಪಿರಿಟ್ ಕುಡಿದು ಅಸ್ವಸ್ಥರಾಗಿದ್ದ ಇಬ್ಬರು ಯುವಕರು ಮೃತಪಟ್ಟಿರವ ಘಟನೆ ಕೊಪ್ಪಳ ತಾಲೂಕಿನ ಕೂಕನಪಳ್ಳಿಯಲ್ಲಿ ನಡೆದಿದೆ. ಫೆಬ್ರವರಿ 4ರಂದು ಸ್ಪಿರಿಟ್ ಸೇವಿಸಿದ್ದ ಬಳಿಕ ನಾಲ್ವರು ಅಸ್ವಸ್ಥಗೊಂಡಿದ್ದರು. ಆ ಪೈಕಿ ಹುಬ್ಬಳ್ಳಿಯ ಕಿಮ್ಸ್​​ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಮೇಶ್ ಹೊಸಹಳ್ಳಿ ಮತ್ತು ಅಮರಯ್ಯ ಹಿರೇಮಠ ಪ್ರಾಣ ಕಳೆದುಕೊಂಡಿದ್ದರೆ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಇಬ್ಬರಿಗೆ ಅನಾರೋಗ್ಯ… ಟೀಮ್ ಇಂಡಿಯಾಗೆ ಚಿಂತೆ ಶುರು

Source link

ಮೆಟ್ರೋ ಪ್ರಯಾಣಿಕರಿಗೆ ಬಿಗ್​​ ಶಾಕ್​​: ವಿವಾದದ ನಡುವೆಯೂ ನಿರ್ಧಾರದಂತೆ ನಾಳೆಯಿಂದ ದರ ಏರಿಕೆ ಫಿಕ್ಸ್​ – Kannada News | Namma Metro Fare Hike Confirmed: Ticket Prices to Increase from February 9

ನಮ್ಮ ಮೆಟ್ರೋ ರೈಲುಗಳ ಟಿಕೆಟ್​​ ದರ ಏರಿಕೆ ಫಿಕ್ಸ್​Image Credit source: Google

ಬೆಂಗಳೂರು, ಫೆಬ್ರವರಿ 08: ನಮ್ಮ ಮೆಟ್ರೋ ಬೆಲೆ ಏರಿಕೆ ವಿಚಾರವಾಗಿ ಪ್ರಯಾಣಿಕರ ಆಕ್ರೋಶ ಒಂದೆಡೆಯಾದ್ರೆ ರಾಜಕೀಯ ಕೆಸರೆರೆಚಾಟಗಳು ಮತ್ತೊಂದೆಡೆ ನಡೆಯುತ್ತಿವೆ. ಈ ನಡುವೆ ಬಿಎಂಆರ್​​ಸಿಎಲ್​​ ಮಾತ್ರ ನಾಳೆಯಿಂದಲೇ ದರ ಏರಿಕೆ ಆಗೋದು ಫಿಕ್ಸ್​​ ಎಂದಿದೆ. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ BMRCL ಎಂಡಿ ರವಿಶಂಕರ್, ಕೇಂದ್ರ ಸರ್ಕಾರದಿಂದ ಅಧಿಸೂಚನೆ ಬಾರದ ಕಾರಣ ಮೆಟ್ರೋ ದರ ಏರಿಕೆಗೆ ಸದ್ಯ ತಡೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ತುರ್ತಾಗಿ ದರ ಏರಿಕೆ ನಿಲ್ಲಿಸುವಂತೆ ಆದೇಶ ಬಂದರೆ ಮಾತ್ರ ಈ ನಿರ್ಧಾರಕ್ಕೆ ಬ್ರೇಕ್​​ ಬೀಳಲಿದೆ ಎಂದು ತಿಳಿಸಿದ್ದಾರೆ.

ಸೋಮವಾರದಿಂದ ನಮ್ಮ ಮೆಟ್ರೋ ರೈಲುಗಳ ಟಿಕೆಟ್ ದರ ಹೆಚ್ಚಳ ಆಗೋದಿಲ್ಲ. ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಕಟ್ಟರ್ ಇದಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದಾರೆ ಎಂದು ಸಂಸದ ತೇಜಸ್ವಿಸೂರ್ಯ ಹೇಳಿದ್ದರು. ಆದರೆ ಇತ್ತ BMRCL ಅಧಿಕಾರಿಗಳು ಮಾತ್ರ, ನಮಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ. ಅಲ್ಲಿಯವರೆಗೆ ನಮ್ಮ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ. ಮಾಹಿತಿ ಬಂದ ನಂತರ ಟಿಕೆಟ್ ದರ ಇಳಿಕೆ ಬಗ್ಗೆ ತೀರ್ಮಾನ ಮಾಡುತ್ತೇವೆ ಅಂತಿದ್ದಾರೆ.

ಇದನ್ನೂ ಓದಿ: ಮೆಟ್ರೋ ಟಿಕೆಟ್ ದರ ಸಮರ; ಯುದ್ಧ ಪೂರ್ತಿ ಗೆದ್ದಿಲ್ಲ ಎಂದ ಸಂಸದ

ಬೆಲೆ ಏರಿಕೆಗೆ ಬ್ರೇಕ್​​ ಬಿದ್ದರೂ ಅದು ತಾತ್ಕಾಲಿಕ?

ಇನ್ನು ನಾಳೆಯಿಂದ ಟಿಕೆಟ್​​ ದರ ಏರಿಕೆಗೆ ಒಂದೊಮ್ಮೆ ಬ್ರೇಕ್​​ ಬಿದ್ದರೂ ಅದು ಕೇವಲ ತಾತ್ಕಾಲಿಕ ಅವಧಿಗೆ ಮಾತ್ರ. ಮುಂದೆ ಮಾರ್ಚ್​​ ಅಥವಾ ಎಪ್ರಿಲ್​​ ತಿಂಗಳಲ್ಲಿ ರೇಟ್​​ ಹೆಚ್ಚಳ ಆಗೋದು ಪಕ್ಕಾ ಎನ್ನುವ ಮಾಹಿತಿ ಕೂಡ ಇದೆ. ಈ ವರ್ಷ ಫೆಬ್ರವರಿಯಲ್ಲಿ ಟಿಕೆಟ್​​ ದರ ವಾರ್ಷಿಕವಾಗಿ ಶೇ.5ರಷ್ಟು ಹೆಚ್ಚಳ ಮಾಡದಿದ್ದರೆ ಮುಂದಿನ ವರ್ಷ ಶೇ.10ರಷ್ಟು ಏರಿಕೆ ಮಾಡುವ ಅನಿವಾರ್ಯತೆ ಸೃಷ್ಟಿಯಾಗಲಿದೆ ಎನ್ನುವ ಬಗ್ಗೆ ಮಾಹಿತಿಯನ್ನು BMRCL ಅಧಿಕಾರಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೀಡಿದ್ದಾರಂತೆ.

ಮೆಟ್ರೋ ನಿಲ್ದಾಣಗಳಿಗೆ ಭದ್ರತೆಗೆ ಮನವಿ

ಮತ್ತೊಂದೆಡೆ ಫೆಬ್ರವರಿ 9ರಿಂದ (ನಾಳೆ)  ಟಿಕೆಟ್ ದರ ಏರಿಕೆ ಹಿನ್ನೆಲೆ ಬೆಂಗಳೂರಿನ ಹಲವು ಮೆಟ್ರೋ ನಿಲ್ದಾಣಗಳಲ್ಲಿ ಭದ್ರತೆ ಕೋರಿ ಪೊಲೀಸರಿಗೆ ಪತ್ರ ಬರೆಯಲಾಗಿದೆ. ದರ ಏರಿಕೆ ವಿರೋಧಿಸಿ ಆಗಬಹುದಾದ ಅಹಿತಕರ ಘಟನೆ ತಪ್ಪಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗ್ತಿದ್ದು, ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣಕ್ಕೆ ಭದ್ರತೆ ಕೋರಿ ಶಂಕರಪುರಂ ಠಾಣೆಗೆ ಮನವಿ ನೀಡಲಾಗಿದೆ. ಫೆಬ್ರವರಿ 9ರಿಂದ 11ರ ವರೆಗೂ ಮೆಟ್ರೋ ನಿಲ್ದಾಣದ ಒಳಗೆ ಹಾಗೂ ಹೊರಗೆ ಭದ್ರತೆಗೆ ಆಗ್ರಹಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 12:38 pm, Sun, 8 February 26

Source link

ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು! ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ – Kannada News | Bengaluru: Boy on Cycle Hit by car in Girinagar, CCTV Captures Horrific Crash

ಬೆಂಗಳೂರು, ಫೆಬ್ರುವರಿ 08: ಮನೆಯ ಮುಂದೆ ಸೈಕಲ್ ಹೊಡೆಯುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ (Car accident) ಹೊಡೆದಿರುವ ಘಟನೆ ಗಿರಿನಗರದ ಮೊದಲನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ರಸ್ತೆ ಬದಿ ನಿಂತಿದ್ದ ಮಹೀಂದ್ರಾ XUV300 ಕಾರನ್ನು ಚಾಲಕ ರಸ್ತೆಗಿಳಿಸುವ ವೇಳೆ ಸೈಲಕ್​ನಲ್ಲಿದ್ದ ಬಾಲಕ ವಿಕಾಸ್ ಅಡ್ಡ ಬಂದಿದ್ದಾನೆ. ಈ ವೇಳೆ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡ ವಿಕಾಸ್‌ನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬನಶಂಕರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ಸರ್ವಮ್ ಎಐನಿಂದ ಹೊಸ ಮಾಡಲ್; ಡಾಕ್ಯುಮೆಂಟ್ ಇಂಟೆಲಿಜೆನ್ಸ್​ನಲ್ಲಿ ವಿಶ್ವಲ್ಲೇ ಬೆಸ್ಟ್; ಕಟು ಟೀಕಾಕಾರರಿಗೂ ಅಚ್ಚರಿ – Kannada News | Sarvam AI releases advanced document intelligence model for Indic languages, gets praises from critical reviewers

ನವದೆಹಲಿ, ಫೆಬ್ರುವರಿ 8: ಭಾರತದ ಎಐ ಸ್ಟಾರ್ಟಪ್ ಸರ್ವಮ್ ಎಐ (Sarvam AI) ಇದೀಗ ಹೊಸ ಹೊಸ ಮಲ್ಟಿಮೋಡಲ್ ಎಐ ಮಾಡಲ್​ವೊಂದನ್ನು ಅನಾವರಣಗೊಳಿಸಿದೆ. ಸರ್ವಮ್ ವಿಶನ್ (Sarvam Vision) ಎಂದು ಕರೆಯಲಾಗಿರುವ ಈ ಮಾಡಲ್ ಭಾರತೀಯ ಭಾಷೆಗಳಲ್ಲಿ ಡಾಕ್ಯುಮೆಂಟ್ ಇಂಟೆಲಿಜೆನ್ಸ್, ಆಪ್ಟಿಕಲ್ ಕ್ಯಾರೆಕ್ಟರ್ ರೆಗಗ್ನಿಶನ್ (ಒಸಿಆರ್) ಮತ್ತು ವಿಶುವಲ್ ಲ್ಯಾಂಗ್ವೇಜ್ ಗ್ರಹಿಕೆಯ (Visual Language Understanding) ಪರಿಣಿತಿ ಹೊಂದಿದೆ. ಅಂದರೆ, ಭಾರತೀಯ ಭಾಷೆಗಳ ವಿಡಿಯೋ, ಪಠ್ಯ ಮತ್ತು ದಾಖಲೆಗಳನ್ನು ಇದು ಗ್ರಹಿಸಿ, ನಿಮಗೆ ಬೇಕಾದ ಹೂರಣವಾಗಿ ಸಿದ್ದಪಡಿಸಬಲ್ಲುದು.

ಇದರ ಡಾಕ್ಯುಮೆಂಟ್ ಇಂಟೆಲಿಜೆನ್ಸ್ ಸಾಮರ್ಥ್ಯ ಸಾಕಷ್ಟು ಪ್ರಶಂಸೆಗೆ ಒಳಗಾಗಿದೆ. ಚ್ಯಾಟ್​ಜಿಪಿಟಿ 5.2, ಜೆಮಿನಿ 3 ಪ್ರೋ ಇತ್ಯಾದಿ ವಿಶ್ವದ ಶಕ್ತಿಶಾಲಿ ಎಐ ಮಾಡಲ್​ಗಳನ್ನು ಮೀರಿಸುವ ಮಟ್ಟಿಗೆ ಇದರ ಡಾಕ್ಯುಮೆಂಟ್ ಇಂಟೆಲಿಜೆನ್ಸ್ ಸಾಮರ್ಥ್ಯ ಇದೆ. ಭಾರತದ ಹೆಚ್ಚಿನ ಸಾಂಪ್ರದಾಯಿಕ ಜ್ಞಾನವು ಭೌತಿಕ ದಾಖಲೆಗಳು, ಸ್ಕ್ಯಾನ್ ಆದ ಪ್ರತಿಗಳು ಇತ್ಯಾದಿಗಳ ರೂಪದಲ್ಲಿವೆ. ಇವುಗಳಲ್ಲಿರುವ ಪಠ್ಯವನ್ನು ಹೆಕ್ಕಿ ತೆಗೆಯುವ ಕೆಲಸವನ್ನು ಸರ್ವಮ್ ಎಐ ನಿರಾಯಾಸವಾಗಿ ಮಾಡಬಲ್ಲುದು.

ಇದನ್ನೂ ಓದಿ: ಭಾರತೀಯರ ಇಂಧನ ಭದ್ರತೆಗೆ ಮೊದಲ ಆದ್ಯತೆ; ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ಭಾರತೀಯ ಭಾಷೆಗಳ ಪಠ್ಯವನ್ನು ಸರ್ವಮ್ ಎಐನಷ್ಟು ಕರಾರುವಾಕ್ಕಾಗಿ ವಿಶ್ವದ ಯಾವುದೇ ಮಾಡಲ್​ಗಳು ಓದಲಾಗಿಲ್ಲ ಎಂದು ಹೇಳಲಾಗುತ್ತಿದೆ. ಕನ್ನಡವೂ ಸೇರಿದಂತೆ 22 ಭಾರತೀಯ ಭಾಷೆಗಳಲ್ಲಿ ಇದು ಪರಿಣಿತಿ ಹೊಂದಿದೆ. ಪಠ್ಯ ಮತ್ತು ದೃಶ್ಯಗಳಲ್ಲಿರುವ ವಿಚಾರಗಳನ್ನು ಇದು ಹೆಚ್ಚು ನಿಖರವಾಗಿ ಗ್ರಹಿಸಬಲ್ಲುದು.

ಕಟು ಟೀಕಾಕಾರರಿಂದಲೂ ಸರ್ವಮ್ ಪ್ರಶಂಸೆ

ಸರ್ವಮ್ ಎಐ ಆವಿಷ್ಕಾರಗಳನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಪ್ರಶಂಸಿಸಿದ್ದಾರೆ. ‘ದೇಶೀಯ ಮಾಡಲ್ ನಿರ್ಮಿಸುವ ತಂತ್ರಗಾರಿಕೆಯು ಫಲಕೊಡುತ್ತಿದೆ. ನಮ್ಮ ಎಐ ಮಿಷನ್​ನ ಭಾಗವಾಗಿ ಸರ್ವಂ ಬಿಡುಗಡೆ ಮಾಡಿದ ಸುಧಾರಿತ ಮಾಡಲ್ ಅನ್ನು ಕಟು ಟೀಕಾಕಾರರೂ ಪ್ರಶಂಸಿಸುತ್ತಿದ್ದಾರೆ. ಈ ಮಧ್ಯೆ ನಮ್ಮ ಬುದ್ಧಿವಂತ ಯುವ ಎಂಜಿನಿಯರುಗಳು ಮೆಟೀರಿಯಲ್ ಸೈನ್ಸ್, ಹೆಲ್ತ್​ಕೇರ್ ಮತ್ತು ಸೈಬರ್​ಸೆಕ್ಯೂರಿಟಿ ಕ್ಷೇತ್ರದಲ್ಲಿ ನಾವೀನ್ಯತೆ ಸಾಧಿಸಲು ಕೆಲಸ ಮಾಡುತ್ತಿದ್ದು, ಅದನ್ನು ಇಡೀ ವಿಶ್ವವೇ ಆದರಿಸುವಂತಾಗುತ್ತದೆ’ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವರು ಟ್ವೀಟ್ ಮಾಡಿದ್ದಾರೆ.

ವರ್ಷದ ಹಿಂದೆ ಸರ್ವಮ್ ಎಐನ ಮೂಲ ಮಾಡಲ್ ಬಿಡುಗಡೆಯಾದಾಗ ಕಟುವಾಗಿ ಟೀಕಿಸಿದ್ದ ವ್ಯಕ್ತಿಯೊಬ್ಬರು ಈಗ ಸರ್ವಮ್​ನ ಅಡ್ವಾನ್ಸ್ಡ್ ಮಾಡಲ್ ಕಂಡು ಬೆರಗಾಗಿದ್ದಾರೆ. ತಾನು ಸರ್ವಮ್ ಬಗ್ಗೆ ಆಗ ಹೇಳಿದ್ದು ತಪ್ಪಾಗಿದೆ ಎಂದು ಹೇಳಿ, ಸರ್ವಮ್ ಅದೆಷ್ಟು ಉಪಯುಕ್ತ ಮಾಡಲ್ ಆಗಿ ರೂಪುಗೊಂಡಿದೆ ಎಂಬುದನ್ನು ವಿವರಿಸಿದ್ದಾರೆ. ವೈಷ್ಣವ್ ಅವರು ಆ ವ್ಯಕ್ತಿಯ ಆ ಟ್ವೀಟ್ ಅನ್ನು ಪ್ರಸ್ತಾಪಿಸಿದ್ದಾರೆ.

ಅಶ್ವಿನಿ ವೈಷ್ಣವ್ ಅವರ ಟ್ವೀಟ್

ಇದನ್ನೂ ಓದಿ: ಭಾರತ ಯಾವುದೇ ದೇಶದಿಂದ ತೈಲ ಖರೀದಿಸಲು ಸ್ವತಂತ್ರವಾಗಿದೆ, ವೆನೆಜುವೆಲಾದ ತೈಲ ಖರೀದಿ ಕುರಿತು ರಷ್ಯಾ ಮಾತು

ಸರ್ವಮ್ ಬಗ್ಗೆ ಹೇಳಿದ್ದೇನು?

‘ವರ್ಷದ ಹಿಂದೆ ಅವರ ಬಗ್ಗೆ (ಸರ್ವಮ್ ಎಐ) ನಾನು ಬರೆದಾಗ, ಸಣ್ಣ ಭಾರತೀಯ ಭಾಷಾ ಮಾಡಲ್​ಗಳನ್ನು ಟ್ರೈನ್ ಮಾಡುವ ರೀತಿ ತಪ್ಪಿದೆ ಎನಿಸಿತ್ತು. ಆದರೆ, ಪೂರ್ಣ ಪರಿವರ್ತನೆಯೇ ಮಾಡಿಬಿಟ್ಟಿದ್ದಾರೆ. ಇಂಡಿಕ್ ಲ್ಯಾಂಗ್ವೇಜ್​ಗಳಿಗೆ ಇವರ ಪಠ್ಯದಿಂದ ಮಾತು, ಮಾತಿನಿಂದ ಪಠ್ಯ, ಒಸಿಆರ್ ಮಾಡಲ್​ಗಳು ಅತ್ಯುತ್ತಮ ಎನಿಸಿವೆ. ಬೆಲೆಯೂ ಕಡಿಮೆ ಇದೆ. ವೆಬ್​ಸೈಟ್ ಕೂಡ ಸುಂದರವಾಗಿದೆ. ಬಳಕೆಗೆ ಸುಲಭವಿದೆ’ ಎಂದು ಡೀಡಿ ಹೆಸರಿನ ಆ ವ್ಯಕ್ತಿ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 11:36 am, Sun, 8 February 26

Source link

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ: ಕರ್ನಾಟಕದಲ್ಲೂ ಶುರುವಾಯತ್ತು H5N1 ಟೆನ್ಷನ್ – Kannada News | Bird Flu Alert in Karnataka: Doctors Urge Preventive Measures

ಬೆಂಗಳೂರು, ಫೆಬ್ರವರಿ 08: ನೆರೆ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತಮಿಳುನಾಡುಗಳಲ್ಲಿ ಹಕ್ಕಿ ಜ್ವರದ ಭೀತಿ ಹಿನ್ನೆಲೆ ರಾಜ್ಯದಲ್ಲೂ H5N1 ಟೆನ್ಷನ್ ಶುರುವಾಗಿದೆ. ಹಕ್ಕಿ ಜ್ವರಕ್ಕೆ ತಮಿಳನಾಡಿನಲ್ಲಿ 1,500ಕ್ಕೂ ಹೆಚ್ಚು ಕಾಗೆಗಳು ಮೃತಪಟ್ಟಿದ್ದರೆ, ಇತ್ತ ಮಹಾರಷ್ಟ್ರದಲ್ಲೂ ವೈರಸ್​​ ಸದ್ದು ಮಾಡತೊಡಗಿದೆ. ಹೀಗಾಗಿ ಗಡಿ ಭಾಗದ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಪಶುಸಂಗೋಪಾನ ಇಲಾಖೆ ಸೂಚಿಸಿದೆ. ಹಕ್ಕಿ ಜ್ವರದ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಏನಿದು ಹಕ್ಕಿಜ್ವರ?

ಇದು H5N1 ವೈರಸ್‌ನಿಂದ ಪಕ್ಷಿಗಳಲ್ಲಿ ಹರಡುವ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಸೋಂಕಿತ ಪಕ್ಷಿಗಳ ನೇರ ಸಂಪರ್ಕ, ಲಾಲಾರಸ ಅಥವಾ ಮಲದಿಂದ ಮನುಷ್ಯರಲ್ಲೂ ಹಕ್ಕಿ ಜ್ವರ ಕಾಣಿಸಿಕೊಳ್ಳಬಹುದಾಗಿದೆ. ಸೋಂಕಿತ ಪ್ರಾಣಿಗಳ ಮಲ, ಮೂಗು ಅಥವಾ ಬಾಯಿಯ ಸ್ರವಿಸುವಿಕೆಯಿಂದ ಮನುಷ್ಯರಿಗೆ ಈ ವೈಎಸ್​​ ಹರಡುವ ಸಾಧ್ಯತೆ ಹೆಚ್ಚು. ಮಾನವರಲ್ಲಿ ಹಕ್ಕಿ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಸೋಂಕಿತ ಹಕ್ಕಿಯೊಂದಿಗೆ ಸಂಪರ್ಕಕ್ಕೆ ಬಂದ 4 ರಿಂದ 6 ದಿನಗಳ ನಂತರ ಪ್ರಾರಂಭವಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: ಹಕ್ಕಿ ಜ್ವರ ಹೇಗೆ ಹರಡುತ್ತೆ? ಯಾವ ಲಕ್ಷಣಗಳು ಕಂಡುಬಂದಲ್ಲಿ ವೈದ್ಯರನ್ನು ಸಂಪರ್ಕಿಸಬೇಕು

ರೋಗ ಲಕ್ಷಣಗಳು ಏನು?

  • ಉಸಿರಾಟದಲ್ಲಿ ತೊಂದರೆ
  • ಜ್ವರ
  • ಕಣ್ಣು ಕೆಂಪಾಗುವುದು ಮತ್ತು ಕಿರಿಕಿರಿ
  • ಕೆಮ್ಮು
  • ಗಂಟಲು ನೋವು
  • ಸ್ನಾಯು ಅಥವಾ ದೇಹದ ನೋವು
  • ತಲೆನೋವು -ಆಯಾಸ
  • ನ್ಯೂಮೋನಿಯಾ

ಇನ್ನು ಈ ಬಗ್ಗೆ ಮಾಹಿತಿ ನೀಡಿರುವ ಕೆ.ಸಿ. ಜನರಲ್ ಆಸ್ಪತ್ರೆಯ ವೈದ್ಯ ಡಾ.ಸುರೇಶ್, ಪೌಲ್ಟ್ರಿ ಮತ್ತು ವೆಟರ್ನರಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಈ ಸೋಂಕು ತಗಲುವ ಸಾಧ್ಯತೆ ಹೆಚ್ಚಿರುತ್ತೆ. ಹಕ್ಕಿ ಜ್ವರಕ್ಕೆ ತುತ್ತಾದವರ ಸಾವಿನ ಪ್ರವಾಣ ಶೇ.50ರಷ್ಟಿದ್ದು, ಸೋಂಕು ಹೆಚ್ಚಾದರೆ ಸಾಂಕ್ರಾಮಿಕ ಆಗುವ ಸಾಧ್ಯತೆ ಇದೆ. ಹೀಗಾಗಿ ಸೆಮಿ ಬಾಯ್ಲ್ಡ್‌ ಫುಡ್ ಬಗ್ಗೆ ಜನರು ಎಚ್ಚರ ವಹಿಸಬೇಕು. ಅರೆಬೆಂದ ಮಾಂಸಾಹಾರದಿಂದ ಈ ವೈರಸ್​​ ಹರಡುವ ಸಾಧ್ಯತೆ ಹೆಚ್ಚಿದೆ. ಹ್ಯಾಂಡ್ ಹೈಜಿನ್ ಕಡೆಗೂ ಮುಖ್ಯವಾಗಿ ಗಮನ ವಹಿಸಬೇಕು ಎಂದು ತಿಳಿಸಿದ್ದಾರೆ. ರೋಗ ಲಕ್ಷಣಗಳು ಕಂಡು ಬಂದಲ್ಲಿ ನಿರ್ಲಕ್ಷಯ ವಹಿಸದೆ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆಯೂ ಅವರು ಸಲಹೆ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Viral Post: ಮದುವೆ ದುಡ್ಡಿನಲ್ಲಿ ಮನೆ ಖರೀದಿಸಿ, ಹೊಸ ಮನೆಯಲ್ಲೇ ಸಿಂಪಲ್​ ಆಗಿ ವಿವಾಹವಾದ ಜೋಡಿ – Kannada News | Wedding Budget to Home: Couple’s Smart Choice for Debt Free Marriage and Future

ಮದುವೆ ಜೀವನ ಒಂದು ಮುಖ್ಯ ಭಾಗ ಮತ್ತು ಅದು ಎಲ್ಲ ರೀತಿಯಲ್ಲೂ ಪರಿಪೂರ್ಣವಾಗಬೇಕೆಂಬ ಆಸೆಯಿಂದ ಸಾಕಷ್ಟು ಜನರು ಸಾಲ ಮಾಡಿ ಅದ್ದೂರಿಯಾಗಿ ವಿವಾಹವಾಗುತ್ತಾರೆ. ಇತ್ತೀಚಿನ ದಿನಗಳಲ್ಲಿ ವೆಡ್ಡಿಂಗ್​ ಲೋನ್​ ಕೂಡ ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಮದುವೆ ಆಗಿ ವರ್ಷಗಳೇ ಕಳೆದರೂ ಕೂಡ ಖುಷಿಗಿಂತ ಸಾಲ ಮುಗಿದಿಲ್ಲ ಎಂಬ ಚಿಂತೆಯೇ ಜೋಡಿಯನ್ನು ಹೆಚ್ಚು ಕಾಡುತ್ತಿರುತ್ತದೆ. ಆದರೆ ಇಲ್ಲೊಂದು ಜೋಡಿ ಒಂದು ದಿನದ ಆಚರಣೆಗಾಗಿ ಲಕ್ಷಗಟ್ಟಲೆ ಹಣ ಖರ್ಚು ಮಾಡುವ ಬದಲು, ಆ ದುಡ್ಡಿನಲ್ಲಿ ತಮ್ಮ ಜೀವನದುದ್ದಕ್ಕೂ ಆಸರೆಯಾಗುವ ಮನೆಯೊಂದನ್ನು ಖರೀದಿಸಿದ್ದಾರೆ. ಈ ಮೂಲಕ ಮದುವೆ ದುಡ್ಡಿನಲ್ಲಿ ಮನೆ ಖರೀದಿಸಿ, ಹೊಸ ಮನೆಯಲ್ಲೇ ಸಿಂಪಲ್​​ ಆಗಿ ಮದುವೆಯಾಗಿದ್ದಾರೆ.

@ArnazHathiram ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಶಿಷ್ಟ ಮದುವೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಸಸದ್ಯ ಪೋಸ್ಟ್ ಎಲ್ಲೆಡೆ ವೈರಲ್ ಆಗುತ್ತಿದೆ. ಪೋಸ್ಟ್​ನಲ್ಲಿ ಹೊಸ ಮನೆಯಲ್ಲೇ ವಿವಾಹವಾಗಿರುವ ಫೋಟೋವನ್ನು ಕಾಣಬಹುದು. ನವ ಜೋಡಿಯ ಈ ನಿರ್ಧಾರಕ್ಕೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ಪಿಯುಸಿ ವಿದ್ಯಾರ್ಥಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ಬಂದ ಅತಿಥಿಗಳಿಗೆ ಹೆಚ್ಚು ಖರ್ಚು ಮಾಡದೆ, ತಮ್ಮ ಕನಸಿನ ಮನೆಯಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ಅತ್ಯಂತ ಸರಳ ರೀತಿಯಲ್ಲಿ ವಿವಾಹವಾಗಿದ್ದಾರೆ. ಮದುವೆಯ ಹೆಸರಿನಲ್ಲಿ ಸಾಲ ಮಾಡಿ ನಂತರ ಉಂಟಾಗುವ ಆರ್ಥಿಕ ತೊಂದರೆಗಳಿಗಿಂತ ಇಂತಹ ಪ್ರಾಯೋಗಿಕ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಉತ್ತಮ ಎಂದು ಈ ದಂಪತಿ ಸಾಬೀತುಪಡಿಸಿದ್ದಾರೆ. ಕೇವಲ ಪ್ರದರ್ಶನಕ್ಕಾಗಿ ಅಲ್ಲ, ಭವಿಷ್ಯದ ಭದ್ರತೆಗಾಗಿ ಹೂಡಿಕೆ ಮಾಡುವುದು ಉತ್ತಮ ವಿಷಯ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ನ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್ – Kannada News | Saurabh Netravalkar Scripts Unwanted Record in T20 World Cup 2026

ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ ಬೌಲರ್ ಯಾರು? ಈ ಪ್ರಶ್ನೆಗೆ ಉತ್ತರ ಸೌರಭ್ ನೇತ್ರವಲ್ಕರ್. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಸೌರಭ್ ನೇತ್ರವಲ್ಕರ್ 4 ಓವರ್​ಗಳಲ್ಲಿ ಚಚ್ಚಿಸಿಕೊಂಡಿದ್ದು ಬರೋಬ್ಬರಿ 65 ರನ್​ಗಳು.

ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಸ್ಪೆಲ್ ಎಸೆದ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಸನತ್ ಜಯಸೂರ್ಯ ಹೆಸರಿನಲ್ಲಿತ್ತು.

2007 ರ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ ಸನತ್ ಜಯಸೂರ್ಯ 4 ಓವರ್​ಗಳಲ್ಲಿ ಬರೋಬ್ಬರಿ 64 ರನ್ ನೀಡಿದ್ದರು. ಇದಾದ ಬಳಿಕ ಯಾವುದೇ ಬೌಲರ್ ಇಷ್ಟೊಂದು ದುಬಾರಿಯಾಗಿರಲಿಲ್ಲ.

ಆದರೆ ಸೌರಭ್ ನೇತ್ರವಲ್ಕರ್ ಓವರ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ ಸಿಕ್ಸ್​-ಫೋರ್​ಗಳ ಸುರಿಮಳೆಗೈದಿದ್ದಾರೆ. ಪರಿಣಾಮ ಸೌರಭ್ ಕಡೆಯಿಂದ 4 ಓವರ್​ಗಳಲ್ಲಿ ಬರೋಬ್ಬರಿ 65 ರನ್​ಗಳು ಮೂಡಿಬಂದಿವೆ.  ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ ಬೌಲರ್ ಎನಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಬ್ಯಾಟರ್​ಗಳು 20 ಓವರ್​ಗಳಲ್ಲಿ 161 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ತಂಡವು 20 ಓವರ್​ಗಳಲ್ಲಿ 132 ರನ್​ಗಳಿಸಿ 29 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

Source link

ಬಳ್ಳಾರಿ: ವರ್ಗಾವಣೆಯಾದ IPS ಅಧಿಕಾರಿ ವರ್ತಿಕಾ ವಿರುದ್ಧ ಬೆದರಿಕೆ ಆರೋಪ! ಮೊಬೈಲ್ ಸಂಭಾಷಣೆ ವೈರಲ್ – Kannada News | Ballari IPS Vartika Katiyar Faces New Allegations of Threatening Juniors and Admin Interference After Transfer from DIGP Post

ವರ್ಗಾವಣೆಯಾದ IPS ಅಧಿಕಾರಿ ವರ್ತಿಕಾ ವಿರುದ್ಧ ಬೆದರಿಕೆ ಆರೋಪ!

ಬಳ್ಳಾರಿ, ಫೆಬ್ರುವರಿ 08: ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದ ಬ್ಯಾನರ್ ಗಲಭೆ (Banner clash) ಪ್ರಕರಣದ ಬಳಿಕ DIGP ಹುದ್ದೆಯಿಂದ ವರ್ಗಾವಣೆಗೊಂಡಿರುವ IPS ಅಧಿಕಾರಿ ವರ್ತಿಕಾ ಕಟಿಯಾರ್ ವಿರುದ್ಧ ಇದೀಗ ಗಂಭೀರ ಆರೋಪಗಳು ಕೇಳಿಬಂದಿವೆ. ವರ್ಗಾವಣೆ ಆದ ನಂತರವೂ ಕಡತಗಳ ವಿಚಾರದಲ್ಲಿ ಕೆಳ ಹಂತದ ಅಧಿಕಾರಿಗಳಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಸಂಚಲನ ಮೂಡಿಸಿದೆ.

ನೂತನ ಅಧಿಕಾರಿಗೆ ಕಡತ ನೀಡಬೇಡಿ ಎಂದ ಅಧಿಕಾರಿ

ಬಳ್ಳಾರಿ ವಲಯ ಆಡಳಿತಾಧಿಕಾರಿಗೆ ವಾಟ್ಸಾಪ್ ಕರೆ ಮೂಲಕ ಮಾತನಾಡಿದ ವರ್ತಿಕಾ ಕಟಿಯಾರ್, ಹೊಸದಾಗಿ ಆಗಮಿಸಿರುವ ಅಧಿಕಾರಿಗೆ ಯಾವುದೇ ಪ್ರಮುಖ ದಾಖಲೆಗಳನ್ನು ಹಸ್ತಾಂತರಿಸದಂತೆ ಸೂಚನೆ ನೀಡಿದ್ದಾರೆಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೇ ತಮ್ಮ ವರ್ಗಾವಣೆ ವಿಚಾರ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (CAT)ಯಲ್ಲಿ ವಿಚಾರಣೆಯಲ್ಲಿದೆ ಎಂದು ಹೇಳಿಕೊಂಡಿರುವ ವರ್ತಿಕಾ ಕಟಿಯಾರ್, ಕಡತಗಳನ್ನು ನೀಡಿದರೆ CATನಲ್ಲಿ ಪ್ರತಿವಾದಿಯಾಗಿ ಸೇರಿಸಲಾಗುವುದು ಎಂದು ಬೆದರಿಕೆ ಹಾಕಿದ್ದಾರೆಂದು ಆರೋಪಿಸಲಾಗಿದೆ. ಈ ಸಂಬಂಧ ವಲಯ ಆಡಳಿತಾಧಿಕಾರಿಗೆ ಮಾಡಿರುವ ಕರೆಗಳ ವಿಡಿಯೋ ಹಾಗೂ ದಾಖಲೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ವೈರಲ್ ವೀಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ ಬಳ್ಳಾರಿ ಬ್ಯಾನರ್ ಗಲಾಟೆ: ಡಿಐಜಿಪಿ ವರ್ತಿಕಾ ಕಟಿಯಾರ್ ಎತ್ತಂಗಡಿ; ನೂತನ ಎಸ್ಪಿ ನೇಮಕ

ಮೌಖಿಕ ಸೂಚನೆ ನೀಡದಂತೆ ಆಡಳಿತಾಧಿಕಾರಿ ಪತ್ರ

ಇದಕ್ಕೆ ಪ್ರತಿಕ್ರಿಯೆಯಾಗಿ ಬಳ್ಳಾರಿ ವಲಯ ಆಡಳಿತಾಧಿಕಾರಿ ಬಸವರಾಜ್ ಅವರು ವರ್ತಿಕಾ ಕಟಿಯಾರ್ ಅವರಿಗೆ ಅಧಿಕೃತ ಪತ್ರ ಬರೆದು, ನಿಮ್ಮ ನಿರ್ದೇಶನಗಳು ನನ್ನ ಕರ್ತವ್ಯ ನಿರ್ವಹಣೆಗೆ ಅಡ್ಡಿಯಾಗುತ್ತಿವೆ ಎಂದು ತಿಳಿದ್ದಾರೆ. ಯಾವುದೇ ರೀತಿಯ ಕರೆ, ಪತ್ರ ಅಥವಾ ಮೌಖಿಕ ಸೂಚನೆಗಳನ್ನು ನೀಡದಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಬಳ್ಳಾರಿ ಗಲಭೆ ಬಳಿಕ ಜನವರಿ 7ರಂದು DIGP ಹುದ್ದೆಯಿಂದ ವರ್ಗಾವಣೆಗೊಂಡಿರುವ ವರ್ತಿಕಾ ಕಟಿಯಾರ್ ತಮ್ಮ ವರ್ಗಾವಣೆಯನ್ನು ಪ್ರಶ್ನಿಸಿ CATಗೆ ಮೇಲ್ಮವಿ ಸಲ್ಲಿಸಿದ್ದರು. ಆದರೆ ವರ್ಗಾವಣೆ ಬಳಿಕವೂ ಆಡಳಿತಾತ್ಮಕ ಕಾರ್ಯಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪಗಳು ಇದೀಗ ರಾಜ್ಯದ ಆಡಳಿತ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version