Headlines

Karnataka Weather Forecast: ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಅಬ್ಬರ; ತೀವ್ರ ಗಾಳಿಯ ಎಚ್ಚರಿಕೆ – Kannada News

ಬೆಂಗಳೂರು, ಜೂನ್​​ 11: ನೈಋತ್ಯ ಮುಂಗಾರು ರಾಜ್ಯದ ಬಹುತೇಕ ಭಾಗಗಳನ್ನು ಆವರಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುಂದಿನ ಒಂದು ವಾರ ಮಳೆ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಕರ್ನಾಟಕದ ಹಲವು ಜಿಲ್ಲೆಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಮತ್ತು ಬಲವಾದ ಗಾಳಿಯ ಎಚ್ಚರಿಕೆ ನೀಡಿದೆ. ಐಎಂಡಿಯ ಏಳು ದಿನಗಳ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕದಲ್ಲಿ ಜೂನ್ 11 (ಇಂದು) ಮತ್ತು 12ರಂದು ಭಾರಿ ಮಳೆ ಸಾಧ್ಯತೆ ಇದೆ. ಜೂನ್ 14ರಿಂದ…

Read More

ಇಂದು ಈ ರಾಶಿಯವರಿಗೆ ಲಾಭ-ನಷ್ಟದ ಮಿಶ್ರಫಲವಿದ್ದು, ಕೋಪ-ತಾಪಗಳ ಬಗ್ಗೆ ಎಚ್ಚರಿಕೆ ಅಗತ್ಯ

ಟಿವಿ9 ಡಿಜಿಟಲ್ ವಾಹಿನಿಯ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 11ರ ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಅಧಿಕ ಜ್ಯೇಷ್ಠ ಮಾಸದಲ್ಲಿ ಬರುವ ಏಕಾದಶಿ ತಿಥಿಯನ್ನು ಒಳಗೊಂಡಿದ್ದು, ಇದನ್ನು ಸರ್ವತ್ರ ಏಕಾದಶಿ ಅಥವಾ ಪರಮ ಏಕಾದಶಿ ಎಂದು ಕರೆಯಲಾಗುತ್ತದೆ. ಈ ವಿಶೇಷ ದಿನದಂದು ಅಲ್ಪ ಜಪದಿಂದಲೂ ಅಪಾರ ಫಲ ದೊರೆಯುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ. ಪ್ರತಿ ರಾಶಿಗೆ ಅನುಗುಣವಾಗಿ ಅವರು ನೀಡಿರುವ…

Read More

ಮೊದಲ ಮಗು ಹೆಣ್ಣಾದರೆ ಅದೃಷ್ಟಗಳ ಮಹಾಪೂರ! – Kannada News

ಮೊದಲ ಮಗು ಹೆಣ್ಣು ಮಗುವಾದರೆ ಅದು ಅದೃಷ್ಟವೇ, ಅಶುಭವೇ ಎಂಬ ಪ್ರಶ್ನೆ ಇತ್ತೀಚಿನ ದಿನಗಳಲ್ಲಿ ಕಡಿಮೆ ಆಗಿದೆಯಾದರೂ, ಹಲವರ ಮನಸ್ಸಿನಲ್ಲಿ ಇನ್ನೂ ಇದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ‘ಟಿವಿ9 ಕನ್ನಡ ಡಿಜಿಟಲ್​’ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಅವರು ಹೇಳಿರುವಂತೆ, ನಮ್ಮ ಸನಾತನ ಸಂಸ್ಕೃತಿಯ ಪ್ರಕಾರ, ಮೊದಲ ಹೆಣ್ಣು ಮಗು ಜನಿಸುವುದು ಮನೆಗೆ ಮಹಾಲಕ್ಷ್ಮಿಯ ಆಗಮನಕ್ಕೆ ಸಮಾನ. ಇದು ಕೇವಲ ಶುಭ ಸಂಕೇತ ಮಾತ್ರವಲ್ಲದೆ, ಕುಟುಂಬಕ್ಕೆ, ವಿಶೇಷವಾಗಿ ತಂದೆಗೆ,…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಅನ್ಯ ಮನಃಸ್ಥಿತಿಯಿಂದ ಉದ್ಯಮ ನಷ್ಟ – Kannada News

ಮೇಷ ರಾಶಿ: ಕಾಲಕ್ಕಾಗಿ ತಾಳ್ಮೆಯಿಂದ ಕುಳಿತುಕೊಳ್ಳಬೇಕಾಗಬಹುದು. ಕೂಡಿಟ್ಟ ಹಣವು ಇಂದು ನಿಮ್ಮ ಸಮಯಕ್ಕೆ ಸರಿಯಾಗಿ ಸಿಗುವುದು. ನಿಮ್ಮಿಂದ ಪ್ರೀತಿಯನ್ನು ಬಯಸುವವರಿಗೆ ಪ್ರೀತಿಯನ್ನು ಕೊಡಿ. ಅನಾರೋಗ್ಯದ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬೇಕು. ನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸವಾಗಲಿದೆ. ಸಂಗಾತಿಯು ನಿಮ್ಮ ಗುಟ್ಟನ್ನು ಹೊರಹಾಕಬಹುದು. ಬಹಳ ದಿನಗಳಿಂದ ಕಾರ್ಮಿಕರ ವಿಚಾರದಲ್ಲಿ ನಿಮಗೆ ಅಸಮಾಧಾನವಿದ್ದು ಅದನ್ನು ತೋರ್ಪಡಿಸುವಿರಿ. ವೃಷಭ ರಾಶಿ: ನಿರಂತರ ಶ್ರಮಕ್ಕೆ ಫಲವಿರುತ್ತದೆ. ಕರ್ತವ್ಯದ ದೃಷ್ಟಯಿಂದ ಮಾಡಿ. ಫಲಾಪೇಕ್ಷೆಯು ಇದ್ದರೆ ಹತಾಶೆಯು ಖಂಡಿತಾ ಇರುವುದು. ಮನಸ್ಸಿನಲ್ಲಿ ನಕಾರಾತ್ಮಕ ಭಾವನೆಗಳನ್ನು ತೆಗೆದುಹಾಕಿ. ಬರಬೇಕಾದ ಹಣವು…

Read More

ಕಾಶ್ಮೀರದ ದೋಡಾ ಜಿಲ್ಲೆಯ ಹೆದ್ದಾರಿಯಲ್ಲಿ ಭೀಕರ ಭೂಕುಸಿತ; ವಾಹನ ಸಂಚಾರ ಸಂಪೂರ್ಣ ಸ್ಥಗಿತ – Kannada News

ಶ್ರೀನಗರ, ಜೂನ್ 10: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಯಾದ ಥಾತ್ರಿ-ಕಿಲೋತ್ರಾನ್ ಹೆದ್ದಾರಿಯ ಧಾರಿವಾರಿ ನಲ್ಲಾ ಬಳಿ ಇಂದು ಭಾರಿ ಪ್ರಮಾಣದ ಭೂಕುಸಿತ (Landslide) ಸಂಭವಿಸಿದೆ. ಪಕ್ಕದ ಗುಡ್ಡದಿಂದ ಬೃಹತ್ ಗಾತ್ರದ ಬಂಡೆಗಳು ಮತ್ತು ಟನ್‌ಗಟ್ಟಲೆ ಮಣ್ಣು ಹೆದ್ದಾರಿಯ ಮೇಲೆ ಬಿದ್ದ ಪರಿಣಾಮವಾಗಿ ಇಡೀ ರಸ್ತೆ ಸಂಪೂರ್ಣವಾಗಿ ಮುಚ್ಚಿಹೋಗಿದೆ. ಈ ಹೆದ್ದಾರಿಯು ಗಂದೋಹ್ ಮತ್ತು ಭಲೇಶ್ಸಾ ಸೇರಿದಂತೆ ಹಲವು ಗ್ರಾಮೀಣ ಮತ್ತು ದೂರದ ಪ್ರದೇಶಗಳನ್ನು ಜಿಲ್ಲಾ ಕೇಂದ್ರ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಜೋಡಿಸುವ…

Read More

ಕಾಂಗ್ರೆಸ್ ಜೊತೆ ವಿಲೀನವಾಗುವ ವದಂತಿ ಸುಳ್ಳು; ಟಿಎಂಸಿ ಸ್ಪಷ್ಟನೆ – Kannada News

ನವದೆಹಲಿ, ಜೂನ್ 10: ತೃಣಮೂಲ ಕಾಂಗ್ರೆಸ್ (TMC) ಕಾಂಗ್ರೆಸ್ ಪಕ್ಷದ ಜೊತೆ ವಿಲೀನವಾಗಲಿದೆ ಎಂಬ ಮಾತುಗಳಿಗೆ ಯಾವುದೇ ಆಧಾರವಿಲ್ಲ ಎಂದು ಟಿಎಂಸಿ ನಾಯಕರು ಸ್ಪಷ್ಟಪಡಿಸಿದ್ದಾರೆ. ಎರಡೂ ಪಕ್ಷಗಳ ನಾಯಕರ ನಡುವೆ ಇತ್ತೀಚೆಗೆ ರಾಜಕೀಯ ಚರ್ಚೆಗಳು ನಡೆದಿದ್ದರೂ ಸಹ, ವಿಲೀನದ ಯಾವುದೇ ಪ್ರಸ್ತಾಪವನ್ನು ಉಭಯ ಪಕ್ಷಗಳು ಪರಿಗಣಿಸುತ್ತಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರಿಗೆ ಕಾಂಗ್ರೆಸ್‌ನಲ್ಲಿ ಉನ್ನತ ಹುದ್ದೆಗಳನ್ನು ನೀಡಲಾಗುತ್ತಿದೆ ಮತ್ತು ಪಕ್ಷಗಳನ್ನು ವಿಲೀನಗೊಳಿಸಲಾಗುತ್ತಿದೆ ಎಂಬ ಸುದ್ದಿಗಳು ಕೇವಲ ಊಹಾಪೋಹಗಳಾಗಿದ್ದು, ಇವುಗಳಲ್ಲಿ ಯಾವುದೇ…

Read More

ಬೆನ್ ಸ್ಟೋಕ್ಸ್​ಗೆ ಗೇಟ್​ ಪಾಸ್; 4 ವರ್ಷಗಳ ಬಳಿಕ ಜೋ ರೂಟ್​ಗೆ ಟೆಸ್ಟ್ ನಾಯಕತ್ವ – Kannada News

ಪ್ರಸ್ತುತ ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (England vs New Zealand) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ಆತಿಥೇಯ ಇಂಗ್ಲೆಂಡ್‌ ಇದೀಗ ಎರಡನೇ ಪಂದ್ಯಕ್ಕಾಗಿ ತಯಾರಿ ಶುರು ಮಾಡಿದೆ. ಆದರೆ ಅದಕ್ಕೂ ಮುನ್ನ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಖಾಯಂ ನಾಯಕ ಬೆನ್ ಸ್ಟೋಕ್ಸ್ (Ben Stokes) ಅವರನ್ನು ಸರಣಿಯ ಎರಡನೇ ಪಂದ್ಯದಿಂದ ಹೊರಗಿಡಲಾಗಿದೆ. ಹೀಗಾಗಿ ಅವರ ಬದಲಿಗೆ ಅನುಭವಿ ಜೋ ರೂಟ್ (Joe Root) ಅವರನ್ನು ತಂಡದ…

Read More

‘ಧುರಂಧರ್’ ಬಗ್ಗೆ ಮೌನ, ಆದ್ರೆ ಆಲಿಯಾ ಸಿನಿಮಾಗೆ ಹೊಗಳಿಕೆ: ಟ್ರೋಲ್ ಆದ ಶಾರುಖ್ ಖಾನ್ – Kannada News

ಬಾಲಿವುಡ್‌ನ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಆಲ್ಪಾ’ (Alpha) ಟೀಸರ್ ಬಿಡುಗಡೆಯಾಗುತ್ತಿದ್ದಂತೆಯೇ, ವೈಆರ್‌ಎಫ್ ಸ್ಪೈ ಯೂನಿವರ್ಸ್‌ನ ಪ್ರಮುಖ ಪಾತ್ರಧಾರಿಗಳಲ್ಲಿ ಒಬ್ಬರಾಗಿರುವ ಶಾರುಖ್ ಖಾನ್ (Shah Rukh Khan) ಅವರು ಚಿತ್ರತಂಡಕ್ಕೆ ವಿಶೇಷವಾಗಿ ಶುಭ ಹಾರೈಸಿದ್ದಾರೆ. ಆಲಿಯಾ ಭಟ್ ಅವರ ಹೈ-ವೋಲ್ಟೇಜ್ ಆ್ಯಕ್ಷನ್ ಅವತಾರವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಶಾರುಖ್ ಖಾನ್ ಅವರು, ನಟಿಯನ್ನು ‘ಸಿಗ್ಮಾ ಗರ್ಲ್’ ಎಂದು ಕರೆದಿದ್ದಾರೆ. ಇದರೊಂದಿಗೆ ನಟ ಬಾಬಿ ಡಿಯೋಲ್ ಮತ್ತು ನಿರ್ದೇಶಕ ಶಿವ ರವೈಲ್ ಅವರನ್ನು ಶಾರುಖ್ ಶ್ಲಾಘಿಸಿದ್ದಾರೆ. ಇದರಿಂದಾಗಿ ‘ಧುರಂಧರ್’ (Dhurandhar)…

Read More

ಗರ್ಭಿಣಿಯರಲ್ಲಿ ಅವಧಿ ಪೂರ್ವ ಹೆರಿಗೆಗೆ ವಾಯು ಮಾಲಿನ್ಯದ ಹೆಚ್ಚಳವೂ ಕಾರಣವಾಗುತ್ತದೆಯೇ? – Kannada News

ಇತ್ತೀಚಿನ ದಿನಗಳಲ್ಲಿ ವಾಯು ಮಾಲಿನ್ಯವು ದೊಡ್ಡ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ವಿಶೇಷವಾಗಿ ಗರ್ಭಿಣಿಯರು (Pregnant Women) ಮತ್ತು ಗರ್ಭದಲ್ಲಿರುವ ಶಿಶುಗಳ ಆರೋಗ್ಯದ ಮೇಲೆ ಇದರ ದುಷ್ಪರಿಣಾಮ ಹೆಚ್ಚಾಗಿ ಕಂಡುಬರಬಹುದು ಎಂದು ಹೊಸ ಅಧ್ಯಯನಗಳು ಹೇಳಿವೆ. ಹೌದು, ದೆಹಲಿಯ ಏಮ್ಸ್ (AIIMS) ನಡೆಸಿದ ಅಧ್ಯಯನದಲ್ಲಿ ವಾಯು ಮಾಲಿನ್ಯದಲ್ಲಿರುವ ಸೂಕ್ಷ್ಮ ಕಣಗಳು ಗರ್ಭದಲ್ಲಿರುವ ಮಗುವಿನ ಬೆಳವಣಿಗೆಯ ಮೇಲೂ ಕೆಟ್ಟ ಪರಿಣಾಮ ಬೀರುತ್ತವೆ ಎಂಬುದು ಬೆಳಕಿಗೆ ಬಂದಿದೆ. ಹಾಗಾದರೆ ಇದು ಗರ್ಭದಲ್ಲಿರುವ ಮಗುವಿನ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಮತ್ತು ಈ…

Read More

ಕಾಂಗ್ರೆಸ್​​ ದುರಾಡಳಿತದಿಂದ ಭಾರತವನ್ನು ಮುಕ್ತಗೊಳಿಸಿದ್ದೇ ನಮ್ಮ ಸರ್ಕಾರದ ಅತಿದೊಡ್ಡ ಸಾಧನೆ; ಪ್ರಧಾನಿ ಮೋದಿ ವಾಗ್ದಾಳಿ – Kannada News

ನವದೆಹಲಿ, ಜೂನ್ 10: ಕೇಂದ್ರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (NDA) ಸರ್ಕಾರವು ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಇಂದು ನಡೆದ ಮಹಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್‌ನ ದಶಕಗಳ ಕಾಲದ ದುರಾಡಳಿತವು ಭಾರತವನ್ನು ತೀವ್ರ ಹತಾಶೆ ಮತ್ತು ಭ್ರಷ್ಟಾಚಾರದ ಕೂಪಕ್ಕೆ ತಳ್ಳಿತ್ತು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ದೇಶವನ್ನು ಕೋಟ್ಯಂತರ ರೂಪಾಯಿಗಳ ಹಗರಣಗಳಲ್ಲಿ ಮುಳುಗಿಸಿತ್ತು. ಆದರೆ, 2014ರಲ್ಲಿ ಎನ್‌ಡಿಎ ಸರ್ಕಾರ…

Read More