Headlines

Horoscope Today 10​​​​​​th​​ March​: ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 10​​​​​​, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಸಪ್ತಮಿ, ಅನುರಾಧ ನಕ್ಷತ್ರ, ವೃಷಿಣ ಯೋಗ ಮತ್ತು ಭದ್ರಕರಣವನ್ನು ಹೊಂದಿದೆ. ಮಾರ್ಚ್ 10, 2026 ರಂದು ರಾಹುಕಾಲವು ಮಧ್ಯಾಹ್ನ 3:29 ರಿಂದ ಸಂಜೆ 4:51 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲವು ಬೆಳಿಗ್ಗೆ…

Read More

Women’s Day 2026 ನಿಮ್ಮ ನೆಚ್ಚಿನ ಮಹಿಳೆಗೆ ಈ ಉಡುಗೊರೆ ನೀಡುವ ಮೂಲಕ ವುಮೆನ್ಸ್‌ ಡೇಯನ್ನು ವಿಶೇಷವಾಗಿ ಆಚರಿಸಿ

ಮಹಿಳೆಯರ (Women’s) ಸಾಧನೆಗಳನ್ನು ಗೌರವಿಸಲು, ಮನೆ ಹಾಗೂ ಸಮಾಜಕ್ಕೆ ಅವರ ಕೊಡುಗೆಗಳನ್ನು ಸ್ಮರಿಸಲು, ಒಬ್ಬ ತಾಯಿಯಾಗಿ, ಹೆಂಡತಿಯಾಗಿ, ಮಗಳಾಗಿ ಆಕೆಯ ತ್ಯಾಗ, ಪರಿಶ್ರಮವನ್ನು ಗೌರವಿಸಲು ಪ್ರತಿ ವರ್ಷ ಮಾರ್ಚ್ 8 ರಂದು  ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಇಂತಹ ಈ ವಿಶೇಷ ಸಂದರ್ಭದಲ್ಲಿ ನಿಮ್ಮ ಬಾಳಿನಲ್ಲಿ ವಿಶೇಷ ಸ್ಥಾನ ಪಡೆದ ಸ್ಪೆಷಲ್‌ ಮಹಿಳೆಗೆ ಸರ್‌ಪ್ರೈಸ್‌ ಉಡುಗೊರೆ ನೀಡುವ ಮೂಲಕ ನಿಮಗಾಗಿ ಆಕೆ ಮಾಡಿದ  ತ್ಯಾಗ, ಪರಿಶ್ರಮಕ್ಕೊಂದು ಥ್ಯಾಂಕ್ಸ್‌ ಹೇಳಬಹುದು. ಜೊತೆಗೆ ಆಕೆಯ ಮೊಗದಲ್ಲಿ ನಗು ಮೂಡಿಸಬಹುದು. ಹಾಗಾಗಿ…

Read More

Weekly Horoscope: ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿಯಾಗಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 23 ರಿಂದ ಮಾರ್ಚ್ 29 ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ವಾರ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷದಿಂದ ಕೂಡಿದೆ. ಪಂಚಮಿಯಿಂದ ಏಕಾದಶಿಯವರೆಗೆ ತಿಥಿಗಳಿವೆ. ಈ ವಾರದಲ್ಲಿ ದೇವರ ದಾಸಿಮಯ್ಯ ಜಯಂತಿ, ದಾವಣಗೆರೆ ಜಾತ್ರಾ ಮಹೋತ್ಸವ, ಅಶೋಕ ಅಷ್ಟಮಿ, ಸ್ಕಂದ ದವನಾರ್ಪಣೆ, ಸಂತಾನ ಸಪ್ತಮಿ, ಶ್ರೀರಾಮ ನವಮಿ, ಸರ್ವತ್ರ ಏಕಾದಶಿ ಸೇರಿದಂತೆ ಹಲವು ಹಬ್ಬ…

Read More

ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ.. – Kannada News | Rashmika Mandanna Vijay Deverakonda marriage costume and jewellery interesting facts

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆಯಲ್ಲಿ ಅವರು ಧರಿಸಿದ್ದ ಕಾಸ್ಟ್ಯೂಮ್ ಮತ್ತು ಆಭರಣಗಳು ಸಖತ್ ಹೈಲೈಟ್ ಆಗಿವೆ. ಭಾರಿ ಬೆಲೆಬಾಳುವ ಆಭರಣಗಳನ್ನು ಧರಿಸಿ ಅವರು ಹಸೆಮಣೆ ಏರಿದ್ದಾರೆ. ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಮಹಾರಾಜ ಮತ್ತು ಮಹಾರಾಣಿ ರೀತಿಯಲ್ಲಿ ಉಡುಗೆ ಧರಿಸಿದ್ದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರು ಮಿರಿಮಿರಿ ಮಿಂಚಿದ್ದಾರೆ. ಈ ಬಟ್ಟೆಗಳ ವಿನ್ಯಾಸದ ಬಗ್ಗೆ ಅಭಿಮಾನಿಗಳು ಮತ್ತು ಫ್ಯಾಷನ್​ಪ್ರಿಯರು…

Read More

ಏಪ್ರಿಲ್‌ನಲ್ಲಿ ಭಾರತದ ಖಾಸಗಿ ವಲಯ ಭರ್ಜರಿ ಏರಿಕೆ: ಉತ್ಪಾದನಾ, ಸೇವಾ ವಲಯಗಳ PMI ವರದಿಯಲ್ಲಿ ಗಮನಾರ್ಹ ಸಂಗತಿಗಳು – Kannada News | India’s Private Sector Booms in April: PMI Surges on Manufacturing & Services Growth

ಫ್ಯಾಕ್ಟರಿ ಸಾಂದರ್ಭಿಕ ಚಿತ್ರImage Credit source: AI/Mediaforge/TV9 ನವದೆಹಲಿ, ಏಪ್ರಿಲ್ 23: ಭಾರತದ ಖಾಸಗಿ ವಲಯವು ಏಪ್ರಿಲ್ ತಿಂಗಳಿನಲ್ಲಿ ಭರ್ಜರಿ ಬೆಳವಣಿಗೆಯನ್ನು ಸಾಧಿಸಿದೆ. ವಿಶೇಷವಾಗಿ ಉತ್ಪಾದನಾ ವಲಯದಲ್ಲಿ (Manufacturing sector) ಕಂಡುಬಂದ ಚೇತರಿಕೆಯು ಈ ಪ್ರಗತಿಗೆ ಮುಖ್ಯ ಕಾರಣ ಎಂದು ‘ಪರ್ಚೇಸಿಂಗ್ ಮ್ಯಾನೇಜರ್ಸ್ ಇಂಡೆಕ್ಸ್’ (PMI) ವರದಿ ತಿಳಿಸಿದೆ. ಸರ್ವಿಸ್ ಸೆಕ್ಟರ್ ಕೂಡ ಏಪ್ರಿಲ್​ನಲ್ಲಿ ಚುರುಕುಗೊಂಡಿದೆ. ಹಿಂದಿನ ತಿಂಗಳಾದ ಮಾರ್ಚ್​ನಲ್ಲಿ ಇವೆರಡೂ ಕೂಡ ಮಂದ ಬೆಳವಣಿಗೆ ಕಂಡಿದ್ದವು. ಎಸ್ ಅಂಡ್ ಪಿ ಗ್ಲೋಬಲ್​ನಿಂದ ಕಲೆಹಾಲಾದ ಎಚ್​ಎಸ್​ಬಿಸಿ ಫ್ಯಾಶ್…

Read More

ಹೆಚ್ಚು ನಾಮಿನಿಗಳು, ಸೊನ್ನೆ ಲೋನ್ ಪ್ರೀಪೇಮೆಂಟ್ ಚಾರ್ಜ್; ಜನಸಾಮಾನ್ಯರು ಗಮನಿಸಬೇಕಾದ ಹೊಸ ನಿಯಮಗಳಿವು

ಜನಸಾಮಾನ್ಯರಿಗೆ ಅನುಕೂಲವಾಗುವ ಉದ್ದೇಶದಿಂದ ಸಾಲ ನಿಯಮಗಳಲ್ಲಿ ಆರ್​ಬಿಐ (RBI) ಕೆಲ ಬದಲಾವಣೆ ಮಾಡಿದೆ. ಬ್ಯಾಂಕ್ ಅಕೌಂಟ್ ಮತ್ತು ಲಾಕರ್​ಗಳಿಗೆ ಹೆಚ್ಚು ಜನರನ್ನು ಹೆಸರಿಸಲು ಅವಕಾಶ ನೀಡಿರುವುದು; ಕ್ರೆಡಿಟ್ ಸ್ಕೋರ್ ಬೇಗ ಅಪ್​ಡೇಟ್ ಆಗುವುದು, ಸಾಲಗಳ ಮರುಪಾವತಿಗೆ ಪ್ರೀಪೇಮೆಂಟ್ ಚಾರ್ಜ್ ಇಲ್ಲದಿರುವುದು ಇತ್ಯಾದಿ ಹೊಸ ನಿಯಮಗಳು ಜಾರಿಗೆ ಬಂದಿವೆ. ಬ್ಯಾಂಕ್ ಗ್ರಾಹಕರಿಗೆ ಇದರಿಂದ ಹೆಚ್ಚು ಅನುಕೂಲವಾಗಲಿದೆ. ಈ ವರ್ಷದಿಂದ ಜಾರಿಗೆ ಬರಲಿರುವ ಕೆಲ ಬ್ಯಾಂಕಿಂಗ್ ಮತ್ತು ಹಣಕಾಸು ನಿಯಮಗಳು ಈ ಕೆಳಕಂಡಂತಿವೆ: ನಾಲ್ಕು ನಾಮಿನಿಗಳಿಗೆ ಅವಕಾಶ ಬ್ಯಾಂಕ್ ಖಾತೆ…

Read More

ವೈಯಲೆಂಟ್ ಅವತಾರದಲ್ಲಿ ವಿಜಯ್ ದೇವರಕೊಂಡ, ವಾವ್ ಎಂದ ರಶ್ಮಿಕಾ – Kannada News | Vijay Deverakonda starts another movie, Rashmika sends best wishes

ವಿಜಯ್ ದೇವರಕೊಂಡ (Vijay Deverakonda) ತೆಲುಗು ಚಿತ್ರರಂಗದ ಸ್ಟಾರ್ ನಟ. ಆದರೆ ಕಳೆದ ಕೆಲ ವರ್ಷಗಳಿಂದಲೂ ಗೆಲುವು ಅವರಿಂದ ಬಲು ದೂರವೇ ಉಳಿದಿದೆ. ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಲೇ ಇದ್ದಾರಾದರೂ ಗೆಲುವು ಎಂಬುದು ಅವರ ಪಾಲಿಗೆ ಮರೀಚಿಕೆಯೇ ಆಗಿದೆ. ರೊಮ್ಯಾಂಟಿಕ್, ಆಕ್ಷನ್, ಕೌಟುಂಬಿಕ, ಹಾರರ್, ಕಾಮಿಡಿ ಸಿನಿಮಾ ಹೀಗೆ ಹಲವು ಜಾನರ್​​ನ ಸಿನಿಮಾಗಳಲ್ಲಿ ವಿಜಯ್ ದೇವರಕೊಂಡ ಕಳೆದ ಕೆಲ ವರ್ಷಗಳಲ್ಲಿ ನಟಿಸಿದ್ದಾರೆ. ಆದರೆ ಯಾವೊಂದು ಸಿನಿಮಾ ಸಹ ಗೆದ್ದಿಲ್ಲ. ಇದೀಗ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಪ್ರತಿ ಬಾರಿಯಂತೆ…

Read More

Kitchen Tips: ಈ ಸಣ್ಣ ಅಡುಗೆ ಟ್ರಿಕ್ಸ್ ನಿಮ್ಮ ಆಹಾರದ ರುಚಿಯನ್ನು ಅದ್ಭುತವಾಗಿಸುತ್ತೆ

ಬೆಂಗಳೂರು (ಏ. 02): ದಿನನಿತ್ಯದ ಅಡುಗೆಮನೆಯಲ್ಲಿ (Kitchen), ರುಚಿಕರವಾದ ಆಹಾರವನ್ನು ತಯಾರಿಸಲು ಸಾಕಷ್ಟು ಶ್ರಮ, ಸಮಯ ಮತ್ತು ದುಬಾರಿ ಪದಾರ್ಥಗಳು ಬೇಕಾಗುತ್ತವೆ ಎಂದು ಅನೇಕರು ಭಾವಿಸುತ್ತಾರೆ. ಆದರೆ ಇದು ನಿಜವಲ್ಲ, ಕೆಲವೊಮ್ಮೆ ಸರಳ ಅಡುಗೆ ಸಲಹೆಗಳು ನಿಮ್ಮ ಆಹಾರದ ರುಚಿಯನ್ನು ಅದ್ಭುತವಾಗಿಸುತ್ತದೆ. ಸ್ವಲ್ಪ ಸಾಮಾನ್ಯ ಜ್ಞಾನ, ಸರಿಯಾದ ಸಮಯದಲ್ಲಿ ಸರಿಯಾದ ಪದಾರ್ಥಗಳನ್ನು ಬಳಸುವುದು ಮತ್ತು ಕೆಲವು ಸರಳ ತಂತ್ರಗಳನ್ನು ಅನುಸರಿಸುವುದರಿಂದ ರುಚಿಯಾದ ಅಡುಗೆ ಮಾಡಬಹುದು. ಈ ಲೇಖನದಲ್ಲಿ, ನಿಮ್ಮ ಆಹಾರದ ರುಚಿಯನ್ನು ಹೆಚ್ಚಿಸುವ ಐದು ಅಡುಗೆ ಸಲಹೆಗಳನ್ನು…

Read More

ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್​ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ: ತರೀಕೆರೆಯಲ್ಲಿ ಯುವಕನ ಬರ್ಬರ ಹತ್ಯೆ – Kannada News | Tarikere Murder Case: Youth Brutally Killed for Harassing Engaged Woman on Instagram message

ಯುವಕ ಮಂಜುನಾಥ್ ಹಾಗೂ ತರೀಕೆರೆ ಪೊಲೀಸ್ ಠಾಣೆ ಚಿಕ್ಕಮಗಳೂರು, ಜನವರಿ 1: ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಆರೋಪದ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ. ಮಂಜುನಾಥ್ ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ನಿವಾಸಿಯಾಗಿದ್ದು, ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇಪದೇ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್…

Read More

ರಾತ್ರಿ ವೇಳೆಯೂ ಉಷ್ಣ ಅಲೆ, ಇನ್ನಷ್ಟು ಹೆಚ್ಚಾಗಲಿದೆ ತಾಪಮಾನ: ಹವಾಮಾನ ತಜ್ಞ ಸ್ಫೋಟಕ ಮುನ್ಸೂಚನೆ – Kannada News | Karnataka Weather: Night Temperatures to Rise Further; Meteorologist CS Patil Warns of Heatwave Intensifies

ಬೆಂಗಳೂರು, ಏಪ್ರಿಲ್ 20: ಕರ್ನಾಟಕದಲ್ಲಿ ರಣಬಿಸಿಲಿನಿಂದ ಜನ ತತ್ತರಿಸಿದ್ದಾರೆ. ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಕೆರೆ, ಬಾವಿ ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆಯಾಗುವ ಸಾಧ್ಯತೆಗಳು ಗೋಚರಿಸುತ್ತಿವೆ. ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಅವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ನೀರಿನ ಅಭಾವ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದಾರೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಗಲು…

Read More