Headlines

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಅನಂತಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ ಹೈಕೋರ್ಟ್ – Kannada News | Karnataka High Court Relief to BJP Ex MP Anantkuma hegde Son In Car Over Take Case

ಬೆಂಗಳೂರು, (ಏಪ್ರಿಲ್ 16): ದಾಬಸ್​ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ (Ananth Kumar Hegde) ಪುತ್ರನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪುತ್ರ ಅಶುತೋಷ್ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಗಲಾಟೆ ಪ್ರಕರಣದಿಂದಾಗಿ ಅವರಿಗೆ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಿ ಎಂದು ಮಾಜಿ ಸಂಸದ ಅನಂತಕುಮಾರ್ ಹೆಗಡೆ ಹೈಕೋರ್ಟ್​​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶುತೋಷ್ ವಿರುದ್ಧದ…

Read More

MI vs PBKS IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ – Kannada News | Mumbai Indians vs Punjab Kings IPL 2026 Live Cricket Score MI vs PBKS Match on 16th April latest news in Kannada

ಐಪಿಎಲ್ 19 ನೇ ಸೀಸನ್‌ನ 24 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳಿಗೆ ಇದು ಐದನೇ ಪಂದ್ಯ. ಮುಂಬೈ 4 ಪಂದ್ಯಗಳಲ್ಲಿ 3 ರಲ್ಲಿ ಸೋತಿದೆ. ಆದ್ದರಿಂದ, ಪಂಜಾಬ್ ವಿರುದ್ಧದ ಪಂದ್ಯ ಮುಂಬೈಗೆ ಬಹಳ ಮುಖ್ಯವಾಗಿದೆ. ಆದಾಗ್ಯೂ, ಮುಂಬೈ ಅಜೇಯ ಪಂಜಾಬ್‌ನಿಂದ ಕಠಿಣ ಸವಾಲನ್ನು ಎದುರಿಸಲಿದೆ. ಈ ಋತುವಿನಲ್ಲಿ ಪಂಜಾಬ್ 4 ಪಂದ್ಯಗಳಲ್ಲಿ 3 ರಲ್ಲಿ ಗೆದ್ದಿದೆ. ಆದ್ದರಿಂದ, ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಹೇಗೆ ಪ್ರದರ್ಶನ ನೀಡುತ್ತದೆ ಎಂಬುದನ್ನು…

Read More

CET ವಿದ್ಯಾರ್ಥಿಗಳೇ ಗಮನಿಸಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಹತ್ವದ ಸೂಚನೆ – Kannada News | KEA Alert: CET Students Beware of Cyber Fraudsters and Fake Admit Card Links

ಬೆಂಗಳೂರು, ಏಪ್ರಿಲ್​​ 16: SSLC, ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳೆ ಪ್ರಶ್ನೆಪತ್ರಿಕೆ ಹೆಸರಲ್ಲಿ ವಿದ್ಯಾರ್ಥಿಗಳ ಹಾದಿ ತಪ್ಪಿಲು ಒಂದಿಷ್ಟು ಮಂದಿ ಯತ್ನಿಸಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಆತಂಕಕಾರಿ ವಿಚಾರ ಬಯಲಾಗಿದೆ. KEA ರೀತಿಯಲ್ಲೇ ನಕಲಿ ವೆಬ್​​ಸೈಟ್ ಮಾಡಿರೋದು ಬೆಳಕಿಗೆ ಬಂದಿದ್ದು, CET ಎಕ್ಸಾಂ ಬರೆಯಲು ಮುಂದಾಗುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನೇ ಸೈಬರ್​​ ವಂಚಕರು ಟಾರ್ಗೆಟ್​​ ಮಾಡಹೊರಟಿದ್ದಾರೆ. ಹೀಗಾಗಿ ಪಿಯುಸಿ ಫಲಿತಾಂಶ ಪ್ರಕಟವಾಗಿರುವ ಬೆನ್ನಲ್ಲೇ ಸಿಇಟಿ ಬರೆಯಲು ತುದಿಗಾಲಲ್ಲಿ ನಿಂತಿರುವ ವಿದ್ಯಾರ್ಥಿಗಳು ಹಾಲ್​​ ಟಿಕೆಟ್​​ ಡೌನ್​​ ಮಾಡಿಕೊಳ್ಳುವ…

Read More

IPL 2026: ಆರ್​ಸಿಬಿ ವೇಗಿ ರಸಿಕ್ ಸಲಾಂಗೆ 2 ವರ್ಷ ನಿಷೇಧ ಹೇರಿದ್ದ ಬಿಸಿಸಿಐ..! – Kannada News | Rasikh Salam Dar’s IPL 2026 Brilliance: RCB’s Star Bowler Overcomes Age Fraud Ban

ಹಾಲಿ ಚಾಂಪಿಯನ್ ಆರ್​ಸಿಬಿ (RCB) 2026 ರ ಐಪಿಎಲ್​ನಲ್ಲೂ (IPL 2026) ತನ್ನ ಅಮೋಘ ಪ್ರದರ್ಶನವನ್ನು ಮುಂದುವರೆಸಿದೆ. ತಂಡದ ಈ ಗೆಲುವಿನ ಓಟಕ್ಕೆ ಸಾಂಘಿಕ ಪ್ರದರ್ಶನವೇ ಪ್ರಮುಖ ಕಾರಣವಾಗಿದೆ. ಅದರಲ್ಲೂ ಭಾರತದ ಯುವ ವೇಗಿ ರಸಿಕ್ ಸಲಾಂ ದಾರ್ (Rasikh Salam Dar) ಬೌಲಿಂಗ್ ವಿಭಾಗವನ್ನು ಕೂಡಿಕೊಂಡ ಬಳಿಕ ತಂಡ ಮತ್ತಷ್ಟು ಸಮತೋಲಿತವಾಗಿ ಕಾಣಿಸಿಕೊಂಡಿದೆ. ಜಮ್ಮು ಮತ್ತು ಕಾಶ್ಮೀರದ ಈ ವೇಗದ ಬೌಲರ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ, 4 ಓವರ್‌ಗಳಲ್ಲಿ ಕೇವಲ…

Read More

ರಾಮಾಯಣದ ಬಗ್ಗೆ ಪ್ರಕಾಶ್ ರಾಜ್ ಮಾತನಾಡಿದ ವಿಡಿಯೋ ವೈರಲ್; ತೀವ್ರ ಟೀಕೆ – Kannada News | Prakash Raj gets trolled for saying Ram a North Indian and Ravan a South Indian

ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಅವರು ರಾಜಕೀಯದ ವಿಷಯಗಳ ಬಗ್ಗೆ ಆಗಾಗ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಬಿಜೆಪಿ ನಿಲುವುಗಳನ್ನು ಅವರು ಆಗಾಗ ವಿರೋಧಿಸುತ್ತಾರೆ. ಆ ಕಾರಣದಿಂದ ಅವರನ್ನು ವಿರೋಧಿಗಳು ಟ್ರೋಲ್ ಮಾಡುತ್ತಾರೆ. ಕೇರಳ ಸಾಹಿತ್ಯ ಉತ್ಸವದ ವೇದಿಕೆಯಲ್ಲಿ ಪ್ರಕಾಶ್ ರಾಜ್ ಅವರು ಮಾತನಾಡಿದ್ದ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ರಾಮಾಯಣದ (Ramayana) ಬಗ್ಗೆ ಮಾತನಾಡಿದ್ದಾರೆ. ಈಗಿನ ರಾಜಕೀಯ ಪರಿಸ್ಥಿತಿಯ ವಿಡಂಬನೆಗೆ ಅವರು ರಾಮಾಯಣವನ್ನು ಉದಾಹರಣೆಯಾಗಿ ತೆಗೆದುಕೊಂಡಿದ್ದಾರೆ. ಆದರೆ ಅವರು ಮಾತನಾಡಿದ್ದನ್ನು ಅನೇಕರು ಖಂಡಿಸುತ್ತಿದ್ದಾರೆ….

Read More

ಲಕ್ನೋದಲ್ಲಿ ಇಡೀ ಸ್ಲಮ್ ಬೆಂಕಿಗಾಹುತಿ; ಕರಕಲಾದ ಗುಡಿಸಲುಗಳ ಡ್ರೋನ್ ವಿಡಿಯೋ ವೈರಲ್ – Kannada News | Drone video shows massive slum fire in Lucknow’s Vikas Nagar 2 childrens burnt alive

ಲಕ್ನೋ, ಏಪ್ರಿಲ್ 16: ಉತ್ತರ ಪ್ರದೇಶದ ಲಕ್ನೋದ ವಿಕಾಸ್ ನಗರದ ಸ್ಲಮ್ ಪ್ರದೇಶದಲ್ಲಿ ನಡೆದ ಬೆಂಕಿಯ (Fire Accident) ಭೀಕರ ಚಿತ್ರವನ್ನು ಡ್ರೋನ್ ದೃಶ್ಯಗಳು ತೋರಿಸಿವೆ. ಡಜನ್​ಗಟ್ಟಲೆ ಕೊಳೆಗೇರಿಗಳು ಬೂದಿಯ ರಾಶಿಯಾಗಿ ಬದಲಾಗುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಬೆಂಕಿಯಿಂದಾಗಿ ಮನೆಯ ಎಲ್ಲಾ ವಸ್ತುಗಳು ಸುಟ್ಟುಹೋಗಿವೆ. ಲಕ್ನೋದ ವಿಕಾಸ್ ನಗರ ಪ್ರದೇಶದಲ್ಲಿ ಬುಧವಾರ ಸಂಜೆ ಸಂಭವಿಸಿದ ಭಾರಿ ಬೆಂಕಿಯಲ್ಲಿ ಇಬ್ಬರು ಮಕ್ಕಳು ಜೀವಂತವಾಗಿ ಸುಟ್ಟುಹೋಗಿದ್ದಾರೆ ಮತ್ತು ಡಜನ್ಗಟ್ಟಲೆ ಮನೆಗಳು ಸುಟ್ಟುಹೋಗಿವೆ. ಬೆಂಕಿಯ ಪರಿಣಾಮವಾಗಿ ಕನಿಷ್ಠ 250 ಕುಟುಂಬಗಳು ಮನೆಗಳನ್ನು…

Read More

ಕ್ಷೇತ್ರ ಪುನರ್ ವಿಂಗಡಣೆಯಿಂದ ದಕ್ಷಿಣ ಭಾರತಕ್ಕೆ ಅನ್ಯಾಯವಾಗದು; ಪ್ರಧಾನಿ ಮೋದಿ ಭರವಸೆ – Kannada News | No Discrimination Against North to South PM Modis Guarantee On Delimitation

ನವದೆಹಲಿ, ಏಪ್ರಿಲ್ 16: ಕ್ಷೇತ್ರ ಪುನರ್ ವಿಂಗಡಣೆಯ ಬಗ್ಗೆ ಎದ್ದಿರುವ ವಿವಾದ, ಗೊಂದಲಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ತೆರೆ ಎಳೆದಿದ್ದಾರೆ. ಇಂದು ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಉಂಟಾಗುವುದಿಲ್ಲ ಎಂದು ಗ್ಯಾರಂಟಿ ನೀಡಿದ್ದಾರೆ. “ಪೂರ್ವದಿಂದ ಪಶ್ಚಿಮಕ್ಕೆ, ಉತ್ತರದಿಂದ ದಕ್ಷಿಣಕ್ಕೆ ಯಾವುದೇ ರಾಜ್ಯಕ್ಕೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ನಾನು ಗ್ಯಾರಂಟಿ…

Read More

ಹರಿಯಾಣದ ಕಾಂಗ್ರೆಸ್ ಪಕ್ಷದ 5 ಶಾಸಕರ ಅಮಾನತು; ಕಾರಣ ಇಲ್ಲಿದೆ – Kannada News | Congress suspends 5 Haryana MLAs for cross voting in Rajya Sabha elections

ಚಂಡೀಗಢ, ಏಪ್ರಿಲ್ 16: ಕಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯ (Rajya Sabha Elections) ಸಂದರ್ಭದಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಹರಿಯಾಣದ ಕಾಂಗ್ರೆಸ್ ಇಂದು (ಏಪ್ರಿಲ್ 16) ತನ್ನ ಪಕ್ಷದ 5 ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಮಾಜಿ ಸಂಸದ ಧರ್ಮಪಾಲ್ ಮಲಿಕ್ ನೇತೃತ್ವದ ಪಕ್ಷದ ಹರಿಯಾಣ ಘಟಕದ ಶಿಸ್ತು ಕ್ರಿಯಾ ಸಮಿತಿ ಶಾಸಕರಾದ ಮೊಹಮ್ಮದ್ ಇಲ್ಯಾಸ್ (ಪುನಾಹನ), ಮೊಹಮ್ಮದ್ ಇಸ್ರೇಲ್ (ಹತಿನ್), ರೇಣು ಬಾಲಾ (ಸಧೌರ), ಶಲ್ಲಿ ಚೌಧರಿ (ನರೈಂಗಢ)…

Read More

‘ಟಾಕ್ಸಿಕ್’ ಸಿನಿಮಾವನ್ನು ಆಸ್ಕರ್ ವಿಜೇತ ಸಿನಿಮಾಕ್ಕೆ ಹೋಲಿಸಿದ ಯಶ್ – Kannada News | Yash compares his Toxic movie to Hollywood’s Sinners movie

ಯಶ್ (Yash) ನಟನೆಯ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಪ್ರಸ್ತುತ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಚಿತ್ರವಾಗಿದೆ. ಮಾರ್ಚ್ 19ರಂದೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ, ಅಮೆರಿಕ-ಇರಾನ್ ಯುದ್ಧದ ಕಾರಣದಿಂದಾಗಿ ರಿಲೀಸ್ ಮುಂದೂಡಲ್ಪಟ್ಟಿದೆ. ಇದೀಗ ಸಿನಿಮಾ ಜೂನ್ 4 ರಂದು ರಿಲೀಸ್ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಯಶ್ ಆರಂಭಿಸಿದಂತಿದ್ದಾರೆ. ಯಶ್ ನಟಿಸಿರುವ ‘ರಾಮಾಯಣ’ ಸಿನಿಮಾದ ಪ್ರಚಾರಕ್ಕಾಗಿ ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026ನಲ್ಲಿ ಯಶ್ ಭಾಗಿ ಆಗಿದ್ದರು. ಈ ವೇಳೆ ಅವರು ‘ಟಾಕ್ಸಿಕ್’ ಸಿನಿಮಾದ…

Read More

ಟಿಸಿಎಸ್ ಪ್ರಕರಣ: ತನಿಖೆ ತೀವ್ರ, ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ – Kannada News | TCS Nashik Probe: Conversion Attempts & Sexual Harassment Claims Lead to WFH, NIA

ಮುಂಬೈ, ಏಪ್ರಿಲ್ 16: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಚೇರಿಯಲ್ಲಿ ಕೇಳಿಬಂದಿರುವ ಮತಾಂತರ ಪ್ರಯತ್ನ ಹಾಗೂ ಲೈಂಗಿಕ ಕಿರುಕುಳದ ಗಂಭೀರ ಆರೋಪಗಳು ಈಗ ರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿವೆ. ಪ್ರಕರಣದ ಹಿನ್ನೆಲೆಯಲ್ಲಿ ತನಿಖೆ ತೀವ್ರಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನೌಕರರಿಗೆ ವರ್ಕ್ ಫ್ರಮ್ ಹೋಮ್ (WFH) ಸೂಚಿಸಲಾಗಿದೆ. ನಾಸಿಕ್ ಪೊಲೀಸರು ತನಿಖೆ ವಿಸ್ತರಿಸುತ್ತಿದ್ದು, ಎನ್​ಐಎ, ಎಟಿಎಸ್ (ಭಯೋತ್ಪಾದನಾ ನಿಗ್ರಹ ದಳ) ಹಾಗೂ ರಾಜ್ಯ ಗುಪ್ತಚರ ಘಟಕಗಳ ಸಹಾಯ ಪಡೆಯುತ್ತಿದ್ದಾರೆ. ಏನಿದು ಟಿಸಿಎಸ್ ಪ್ರಕರಣ? ನಾಸಿಕ್‌ನ ಟಿಸಿಎಸ್…

Read More