ಅಂಬರೀಷ್ ಬೈದರೂ ಜನರಿಗೆ ಏಕೆ ಇಷ್ಟ ಆಗುತ್ತಿತ್ತು? ವಿವರಿಸಿದ್ದ ರೆಬೆಲ್ ಸ್ಟಾರ್ – Kannada News | Rebel Star Ambareesh: Why Fans Loved His Scolding and Unique Personality

ನಟ ಅಂಬರೀಷ್ ಅವರು ಇಂದು ನಮ್ಮ ಜೊತೆ ಇಲ್ಲ ಎಂಬುದು ದುಃಖದ ವಿಷಯ. ಅವರು ನಟನಾಗಿ, ರಾಜಕಾರಣಿ ಆಗಿ ಇಷ್ಟ ಆಗಿದ್ದರು. ಅವರು ನಮ್ಮನ್ನು ಅಗಲಿ ಹಲವು ವರ್ಷಗಳೇ ಕಳೆದಿವೆ. ಅಂಬರೀಷ್ ಅವರುದ್ದು ಭಿನ್ನ ವ್ಯಕ್ತಿತ್ವ ಆಗಿತ್ತು. ಅವರು ಬೈದರೂ ಜನರಿಗೆ ಇಷ್ಟ ಆಗುತ್ತಿತ್ತು. ಅದು ಹೇಗೆ ಮತ್ತು ಏಕೆ ಎಂಬುದನ್ನು ಸ್ವತಃ ಅಂಬರೀಷ್ ಅವರೇ ವಿವರಿಸಿದ್ದರು. ಆ ಬಗ್ಗೆ ಇಲ್ಲಿದೆ ವಿವರ.

ಎಲ್ಲ ಹೀರೋಗಳು ಪ್ರೀತಿ ತೋರಿಸುತ್ತಾ ಇದ್ದಿದ್ದು ತಮ್ಮ ಪ್ರೀತಿಯ ಮಾತುಗಳಿಂದ. ಆದರೆ, ಅಂಬರೀಷ್ ಅವರು ಯಾವಾಗಲೂ ಪ್ರೀತಿಯಿಂದ ಮಾತನಾಡುತ್ತಿರಲಿಲ್ಲ. ಹಾಗಂತ ಅಭಿಮಾನಿಗಳ ಮೇಲೆ ಅವರಿಗೆ ಪ್ರೀತಿ ಇಲ್ಲ ಎಂದಲ್ಲ. ಅವರು ಬೈದರು ಎಂದರೆ ಅವರು ಸಾಕಷ್ಟು ಕೇರ್ ಮಾಡುತ್ತಾರೆ ಹಾಗೂ ಪ್ರೀತಿ ಮಾಡುತ್ತಾರೆ ಎಂಬ ಅರ್ಥವನ್ನು ನೀಡುತ್ತಿತ್ತು. ಅಂಬರೀಷ್ ಅತ್ಯಾಪ್ತರು ಎನಿಸಿಕೊಂಡವರು ಇದನ್ನು ಬಲ್ಲವರಾಗಿದ್ದರು ಮತ್ತು ಅಂಬರೀಷ್ ಅವರಿಂದ ಆ ರೀತಿಯ ಮಾತುಗಳನ್ನೇ ನಿರೀಕ್ಷೆ ಮಾಡುತ್ತಿದ್ದರು.

ಅತ್ಯಾಪ್ತರಿಗೆ ಅಂಬರೀಷ್ ಬಯ್ಯುತ್ತಿರುವ ಸಾಕಷ್ಟು ವಿಡಿಯೋಗಳು ವೈರಲ್ ಆಗಿದ್ದನ್ನು ನೀವು ನೋಡಿರಬಹುದು. ಆದರೆ, ಯಾರೊಬ್ಬರೂ ಅವರು ಬೈದರು ಎಂದು ಬೇಸರ ಮಾಡಿಕೊಳ್ಳುತ್ತಾ ಇರಲಿಲ್ಲ. ಆಪ್ತ ವರ್ಗದಲ್ಲಿ, ಮಾಧ್ಯಮದ ಜೊತೆ ಎಲ್ಲರ ಬಳಿಕಯೂ ಅಂಬರೀಷ್ ನಡೆದುಕೊಳ್ಳುತ್ತಿದ್ದುದೇ ಹಾಗೆ. ಈ ಅಂಬರೀಷ್ ಅವರ ಈ ಡೈಲಾಗ್ ಈಗಲೂ ಮೀಮ್​ಗಳಲ್ಲಿ ಸಾಕಷ್ಟು ಬಳಕೆ ಆಗುತ್ತದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುವ ಕೆಲಸವನ್ನು ಮಾಡುತ್ತಾರೆ.

ಇದನ್ನೂ ಓದಿ: ಕನ್ನಡದಲ್ಲಿ ಅಂಬರೀಷ್, ತೆಲುಗಿನಲ್ಲಿ ಪ್ರಭಾಸ್; ಇಬ್ಬರೂ ರೆಬೆಲ್ ಸ್ಟಾರ್ ಮಧ್ಯೆ ಇದೆ ಸಾಮ್ಯತೆ

ಈ ಬಗ್ಗೆ ಅಂಬರೀಷ್ ಅವರು ಈ ಮೊದಲು ಮಾತನಾಡಿದ್ದರು. ‘ಏನೇ ಮಾಡಿದರೂ ಜನರು ನನ್ನನ್ನು ಇಷ್ಟಪಡುತ್ತಾರೆ. ಮಂಡ್ಯ ಜನರಿಗೆ ಬೇರೆ ಯಾರೇ ಬೈದರೂ ಹೋಗಯ್ಯೋ ಅಂತಾರೆ. ಅದು ನಾನು ಬೈದರೆ ಅಣ್ಣ ಬೈದ, ಆಶೀರ್ವಾದ ಸಿಕ್ಕಿತು ಎನ್ನುತ್ತಾರೆ’ ಎಂದು ಅಂಬರೀಷ್ ಅವರು ಈ ಮೊದಲು ಹೇಳಿದ್ದನ್ನು ನೀವು ಕಾಣಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:37 am, Sat, 18 April 26

Source link

ಕರ್ನಾಟಕ ಹವಾಮಾನ ವರದಿ: ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ; ಮನೆಯಿಂದ ಹೊರ ಬರುವ ಮುನ್ನ ಎಚ್ಚರ! – Kannada News | Karnataka Weather Forecast: Heat wave alert in Udupi, Uttara Kannada and Dakshina Kannada

ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆImage Credit source: google Gemini

ಬೆಂಗಳೂರು, ಏಪ್ರಿಲ್ 18: ಬೇಸಿಗೆಗೆ ಕಾಲಿಡುವಷ್ಟರಲ್ಲೇ ರಾಜ್ಯದಾದ್ಯಂತ ಉಷ್ಣ ಅಲೆ (Karnataka Weather) ಆವರಿಸಿದೆ. ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಕರಾವಳಿಯು ಬಿಸಿಲ ಬೇಗೆಯಲ್ಲಿ ಸುಡುತ್ತಿದೆ. ಉತ್ತರ ಕನ್ನಡದಲ್ಲಿ ಇಂದಿನ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇದ್ದು, ಇದು 42 ಡಿಗ್ರಿಗೂ ಏರಿಕೆಯಾಗಬಹುದು. ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿಯೂ ಹೆಚ್ಚಿನ ತಾಪಮಾನ ದಾಖಲಾಗಿದ್ದು, ಈ ನಡುವೆ ಸಾಧಾರಣ ಮಳೆಯಾಗುವ ಸಂಭವವೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ವಿಜಯಪುರ, ಕಲಬುರ್ಗಿ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿಯೂ ಹೀಟ್ ವೇವ್ ಅಲರ್ಟ್​ ನೀಡಲಾಗಿದೆ.

ಉಷ್ಣಾಘಾತದಿಂದ ರಕ್ಷಣೆ ಹೇಗೆ?

ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅವಶ್ಯಕತೆ ಇಲ್ಲದೆ ಮನೆಯಿಂದ ಹೊರಬರುವುದನ್ನು ತಪ್ಪಿಸುಂತೆ ಹೇಳಲಾಗಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ನಿಯಂತ್ರಿಸುವಂತೆ ಸೂಚಿಸಲಾಗಿದೆ.

ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.

ಇದನ್ನೂ ಓದಿ ಬಿಸಿಲ ಝಳದಿಂದ ತತ್ತರಿಸಿದ ಜನತೆ: ಇನ್ನೂ 3 ದಿನ ಉಷ್ಣ ಅಲೆ, ಬೆಂಗಳೂರಿಗೂ ತಟ್ಟಲಿದೆ ತಾಪಮಾನ ಏರಿಕೆ ಬಿಸಿ

ಎಲ್ಲೆಲ್ಲಿ ಒಣ ಹವೆ?

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು ಹೃದಯಭಾಗದಲ್ಲೇ ಜಲಕ್ಷಾಮ: ನೀರಿಗಾಗಿ ನಿದ್ದೆಬಿಟ್ಟ ರಾಜಾಜಿನಗರದ ಜನ, ಜಲಮಂಡಳಿ ವಿರುದ್ಧ ಆಕ್ರೋಶ – Kannada News | Bengaluru Water Crisis: Rajajinagar Residents Wait Until Midnight for Water; Slam BWSSB Over Bills Without Supply

ಬೆಂಗಳೂರು, ಏಪ್ರಿಲ್ 18: ಒಂದೆಡೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಟೋ ಗ್ಯಾಸ್ ಸಿಗದೆ ಚಾಲಕರು ಹೈರಾಣಾಗಿ ಕ್ಯೂ ನಿಲ್ಲುವಂತಾಗಿದ್ದರೆ, ಮತ್ತೊಂದೆಡೆ ಕುಡಿಯುವ ನೀರಿಗಾಗಿ ಜನ ಕಿಲೋಮೀಟರ್‌ಗಟ್ಟಲೆ ಅಲೆಯುವಂತಾಗಿದೆ. ನಗರದ ಹೃದಯಭಾಗದಲ್ಲಿರುವ ರಾಜಾಜಿನಗರದ ಚಾಮುಂಡಿನಗರದ ನಿವಾಸಿಗಳ ಸ್ಥಿತಿ ಈಗ ಕರುಣಾಜನಕವಾಗಿದ್ದು, ಹನಿ ನೀರಿಗಾಗಿ ಮಧ್ಯರಾತ್ರಿ ನಿದ್ದೆ ಬಿಟ್ಟು ಕಾಯುವ ಪರಿಸ್ಥಿತಿ ಬಂದೊದಗಿದೆ. ರಾಜಾಜಿನಗರದ ವಾರ್ಡ್ ನಂ. 130ರ 5ನೇ ಬ್ಲಾಕ್ ವ್ಯಾಪ್ತಿಯ ಚಾಮುಂಡಿನಗರದಲ್ಲಿ ಸುಮಾರು 3,000ಕ್ಕೂ ಹೆಚ್ಚು ಕುಟುಂಬಗಳಿವೆ. ಆದರೆ, ಇಲ್ಲಿಗೆ ಬಿಡಬ್ಲ್ಯೂಎಸ್‌ಎಸ್‌ಬಿ (BWSSB) ಪೂರೈಸುವ ನೀರು ಯಾರ ಕೈಗೂ ಎಟುಕುತ್ತಿಲ್ಲ.

ದಿನಕ್ಕೆ ಕೇವಲ ಅರ್ಧ ಗಂಟೆ ಮಾತ್ರ ನೀರು ಬಿಡಲಾಗುತ್ತಿದೆ, ಅದೂ ಕೂಡ ಮಧ್ಯರಾತ್ರಿ 2 ಗಂಟೆಗೆ ಅಥವಾ ಮುಂಜಾನೆ 4 ಗಂಟೆಗೆ! ಕುಟುಂಬದ ಒಬ್ಬರಾದರೂ ನಿದ್ದೆ ಬಿಟ್ಟು ಎದ್ದರೆ ಮಾತ್ರ ಅಂದು ನೀರು ಹಿಡಿಯಲು ಸಾಧ್ಯ. ಇಲ್ಲದಿದ್ದರೆ ಅಂದು ಉಪವಾಸ ಅನಿವಾರ್ಯ ಎಂಬಂತಾಗಿದೆ.

ನೀರು ಬರಲ್ಲ, ಬಿಲ್ ಮಾತ್ರ ತಪ್ಪಲ್ಲ!

‘ಕಾವೇರಿ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ, ಆದರೆ ಬಿಡಬ್ಲ್ಯೂಎಸ್‌ಎಸ್‌ಬಿ ಬಿಲ್ ನೀಡುವುದನ್ನು ಮಾತ್ರ ಮರೆತಿಲ್ಲ’ ಎಂದು ನಿವಾಸಿಗಳು ಕಿಡಿಕಾರಿದ್ದಾರೆ. ವಾರಕ್ಕೆ ಕನಿಷ್ಠ ಮೂರು ಟ್ಯಾಂಕರ್ ನೀರನ್ನು ಜನರು ಹಣ ಕೂಡಿಸಿ ಖರೀದಿ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಟ್ಯಾಕ್ಸ್ ಮತ್ತು ನೀರಿನ ಬಿಲ್ ಕಟ್ಟಿ, ಇತ್ತ ಟ್ಯಾಂಕರ್ ಕೂಡ ಹಣ ನೀಡಿ ಜನರು ಆರ್ಥಿಕವಾಗಿ ಕಂಗೆಟ್ಟಿದ್ದಾರೆ. ಚುನಾವಣಾ ಸಮಯದಲ್ಲಿ ಭರವಸೆ ನೀಡುವ ಜನಪ್ರತಿನಿಧಿಗಳು ಈಗ ಇತ್ತ ಸುಳಿಯುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೋರಾಟದ ಎಚ್ಚರಿಕೆ

ಮೂಲಭೂತ ಸೌಕರ್ಯವಾದ ಕುಡಿಯುವ ನೀರಿಗೂ ಇಷ್ಟೊಂದು ಪರದಾಟ ನಡೆಸಬೇಕಿರುವುದು ವಿಪರ್ಯಾಸ. ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಶಾಶ್ವತ ಪರಿಹಾರ ಕಲ್ಪಿಸದಿದ್ದರೆ, ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ ಎಂದು ಚಾಮುಂಡಿನಗರದ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಈ ಬಾರಿಯ ಬೇಸಿಗೆ ಸುಲಭವಿಲ್ಲ! ಕುಡಿಯುವ ನೀರಿಗೆ ಎದುರಾಗಲಿದೆ ಹಾಹಾಕಾರ, 26 ಜಿಲ್ಲೆಗಳ ಸ್ಥಿತಿ ಶೋಚನೀಯ

ವರದಿ: ಅರುಣ್ ಕುಮಾರ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ರೆಹಮಾನ್ ಡಕಾಯಿತ್ ಪಾತ್ರದಲ್ಲಿ ನೀವೇ ನಟಿಸಬೇಕಿತ್ತು’; ಶಿವಣ್ಣನ ಎದುರು ಫ್ಯಾನ್ಸ್ ಈ ಬೇಡಿಕೆ ಇಟ್ಟಿದ್ದೇಕೆ? – Kannada News | Shiva Rajkumar’s Viral Dance: Fans Say He Should Be Dhurandhar’s Rehman Dakait

ಕನ್ನಡದ ನಟ ಶಿವರಾಜ್​​ಕುಮಾರ್ ಅವರು (Shiva Rajkumar) ವಿವಿಧ ರೀತಿಯ ಪಾತ್ರಗಳ ಮೂಲಕ ಜನರ ಗಮನ ಸೆಳೆದಿದ್ದಾರೆ. ಓಂ ಚಿತ್ರದಲ್ಲಿ ಲಾಂಗ್ ಹಿಡಿದು ಮಿಂಚಿದ್ದರು. ಆ ಬಳಿಕ ಅವರಿಗೂ ಮಚ್ಚಿಗೂ ಒಂದು ನಂಟು ಬೆಳೆಯಿತು. ಈ ರೀತಿಯ ಪಾತ್ರಗಳು ಶಿವಣ್ಣಗೆ ಹೆಚ್ಚು ಹೊಂದುತ್ತವೆ. ಶಿವಣ್ಣ ಓರ್ವ ಅದ್ಭುತ ಡ್ಯಾನ್ಸರ್ ಕೂಡ ಹೌದು. ಇತ್ತೀಚೆಗೆ ಅವರು ಡ್ಯಾನ್ಸ್ ಮಾಡಿದ ವಿಡಿಯೋ ವೈರಲ್ ಆಗಿದೆ. ಇದನ್ನು ನೋಡಿದ ಬಳಿಕ ಅನೇಕರು ‘ರೆಹಮಾನ್ ಡಕಾಯಿತ್ ಪಾತ್ರದಲ್ಲಿ ನೀವೇ ನಟಿಸಬೇಕಿತ್ತು’ ಎಂದು ಕಮೆಂಟ್ ಮಾಡಿದ್ದಾರೆ.

‘ಧುರಂಧರ್’ ಚಿತ್ರದಲ್ಲಿ ರೆಹಮಾನ್ ಡಕಾಯಿತ್ ಪಾತ್ರದಲ್ಲಿ ಅಕ್ಷಯ್ ಖನ್ನಾ ನಟಿಸಿದ್ದಾರೆ. ಈ ಪಾತ್ರ ಸಾಕಷ್ಟು ಗಮನ ಸೆಳೆದಿದೆ. ಅಕ್ಷಯ್ ಖನ್ನಾ ಅವರ ಡ್ಯಾನ್ಸ್ ವಿಡಿಯೋ ಅಂತೂ ಮನೆ ಮಾತಾಯಿತು. ಹೋದಲ್ಲಿ ಬಂದಲ್ಲಿ, ಈ ಹಾಡಿನ ಬಗ್ಗೆ ಎಲ್ಲರೂ ಮಾತನಾಡಿದರು. ಇನ್​​ಸ್ಟಾಗ್ರಾಮ್ ರೀಲ್ಸ್​​ನಲ್ಲಿ ಇದರದ್ದೇ ಚರ್ಚೆ ನಡೆಯಿತು. ಈಗ ಈ ಹಾಡಿಗೆ ಶಿವಣ್ಣ ಡ್ಯಾನ್ಸ್ ಮಾಡಿದ್ದಾರೆ.

ಕುಮಾರ್ ಗೌಡ ಎಂಬುವವರು ಈ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ‘ನನ್ನ ಜನ್ಮದಿನದ ಸಂಭ್ರಮಾಚರಣೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ. ಕುಮಾರ್ ಜನ್ಮದಿನಕ್ಕೆ ಶಿವಣ್ಣ ಕೂಡ ಬಂದಿದ್ದರು. ಈ ವೇಳೆ ‘ಧುರಂಧರ್’ ಚಿತ್ರದಲ್ಲಿ ಅಕ್ಷಯ್ ಖನ್ನಾ ಡ್ಯಾನ್ಸ್ ಮಾಡಿದ ಹಾಡನ್ನು ಪ್ಲೇ ಮಾಡಲಾಗಿದೆ. ಇದಕ್ಕೆ ಶಿವಣ್ಣ ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ.

ಇದನ್ನೂ ಓದಿ: ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್

ಈ ವಿಡಿಯೋ ನೋಡಿದ ಬಳಿಕ, ‘ಧುರಂಧರ್’ ಚಿತ್ರದಲ್ಲಿ ರೆಹಮಾನ್ ಡಕಾಯಿತ್ ಪಾತ್ರವನ್ನು ಶಿವಣ್ಣ ಮಾಡಬೇಕಿತ್ತು ಎಂದು ಅನೇಕರು ಹೇಳಿದ್ದಾರೆ. ಶಿವರಾಜ್​​ಕುಮಾರ್ ಅವರು ಕನ್ನಡ, ತೆಲುಗು, ತಮಿಳು ಮೊದಲಾದ ಭಾಷೆಯಲ್ಲಿ ಚಿರಪರಿಚಿತರು. ಅವರು ರೆಹಮಾನ್ ಡಕಾಯಿತ್ ಪಾತ್ರದಲ್ಲಿ ನಟಿಸಿದ್ದರೆ, ದಕ್ಷಿಣ ಭಾರತದಲ್ಲಿ ‘ಧುರಂಧರ್’ ಸಿನಿಮಾ ಮತ್ತಷ್ಟು ಕಲೆಕ್ಷನ್ ಮಾಡಲು ಸಹಕಾರಿ ಆಗುತ್ತಿತ್ತು. ಅವರಿಗೆ ಈಗ ತೆಲುಗು, ತಮಿಳಿನಿಂದ ಆಫರ್ ಬರುತ್ತಿವೆ. ಶೀಘ್ರವೇ ಅವರು ಬಾಲಿವುಡ್​​ಗೂ ಎಂಟ್ರಿ ಕೊಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ತಮಿಳುನಾಡು: ವಾಲ್ಪಾರೈ ಘಾಟ್​ನಲ್ಲಿ ಹತ್ತಾರು ಅಡಿ ಆಳದ ಪ್ರಪಾತಕ್ಕೆ ಉರುಳಿದ ಪ್ರವಾಸಿಗರ ವ್ಯಾನ್, ಕೇರಳದ 9 ಮಂದಿ ಸಾವು – Kannada News | Tamil Nadu Valparai Ghat Road Accident: 9 Tourists from Kerala Killed as Van Plunges into Deep Gorge Near Pollachi

ಕೊಯಮತ್ತೂರು, ಏಪ್ರಿಲ್ 18: ತಮಿಳುನಾಡಿನ (Tamil Nadu) ಪ್ರಸಿದ್ಧ ಪ್ರವಾಸಿ ತಾಣವಾದ ವಾಲ್ಪಾರೈ-ಪೊಳ್ಳಾಚಿ ಘಾಟ್ (Valparai Ghat) ರಸ್ತೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೇರಳ ಮೂಲದ ಒಂಬತ್ತು ಪ್ರವಾಸಿಗರು ಮೃತಪಟ್ಟಿದ್ದಾರೆ. ಪ್ರವಾಸಿಗರು ಪ್ರಯಾಣಿಸುತ್ತಿದ್ದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಹತ್ತಾರು ಅಡಿ ಆಳದ ಪ್ರಪಾತಕ್ಕೆ ಉರುಳಿದ್ದರಿಂದ ಈ ದುರಂತ ಸಂಭವಿಸಿದೆ. ಮೃತಪಟ್ಟವರಲ್ಲಿ ಕೇರಳದ ಮಲಪ್ಪುರಂ ಜಿಲ್ಲೆಯ ಪಾಂಗು ಎಂಬಲ್ಲಿನ ಸರ್ಕಾರಿ ಎಲ್‌ಪಿ ಶಾಲೆಯ ಐವರು ಶಿಕ್ಷಕಿಯರು ಸೇರಿದ್ದಾರೆ.

ಮೃತರನ್ನು ಅಜಿತಾ (54), ರಮ್ಲಾ (52), ಸುಹ್ರಾ (43), ಆಶಾ (41), ಮಜೀತ್ (43), ಸಜಿತಾ (45), ಶಕೀಲಾ (37), ರುಕಿಯಾ (39) ಮತ್ತು ಹಿಶಾಂ (12) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಚಾಲಕ ಸೇರಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಕೊಯಮತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸಂಭವಿಸಿದ್ದು ಹೇಗೆ?

ಕೇರಳದ ಪೆರಿಂತಲ್ಮಣ ಮೂಲದ 13 ಸದಸ್ಯರ ತಂಡ ವಾಲ್ಪಾರೈ ಪ್ರವಾಸ ಮುಗಿಸಿ ವಾಪಸಾಗುತ್ತಿತ್ತು. ಚಾಲಕ ಸೇರಿದಂತೆ 13 ಮಂದಿ ಈ ಪ್ರವಾಸಿಗರ ಗುಂಪಿನ ಭಾಗವಾಗಿದ್ದರು. ಪ್ರಾಥಮಿಕ ವರದಿಗಳ ಪ್ರಕಾರ, ಭಾರಿ ತಿರುವಿನಲ್ಲಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ. ಸಂಜೆ 5:15ರ ಸುಮಾರಿಗೆ 13ನೇ ಹೇರ್ ಪಿನ್ ಬೆಂಡ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆಯಿಂದ ಕೆಳಕ್ಕೆ ಜಾರಿ 9ನೇ ಹೇರ್ ಪಿನ್ ಬೆಂಡ್ ವರೆಗೆ ಉರುಳಿದೆ. ಕಡಿದಾದ ಭೂಪ್ರದೇಶ ಮತ್ತು ದಟ್ಟ ಅರಣ್ಯದ ಕಾರಣದಿಂದ ರಕ್ಷಣಾ ಕಾರ್ಯಾಚರಣೆ ಅತ್ಯಂತ ಸವಾಲಿನದ್ದಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಎನ್​ಡಿಎಗೆ ದೊಡ್ಡ ಸೋಲು; ಮಹಿಳಾ ಮೀಸಲಾತಿ ಮಸೂದೆಗೆ ಸಿಗದ ಬಹುಮತ

ಕೊಯಮತ್ತೂರು ಜಿಲ್ಲಾಧಿಕಾರಿ ಪವನಕುಮಾರ್ ಜಿ. ಗಿರಿಯಪ್ಪನವರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಡಂಪರೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ

ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ತಿಳಿದು ತುಂಬಾ ದುಃಖವಾಯಿತು. ಈ ಅಪಘಾತದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿಯವರು ಸಂದೇಶದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today: ಇಂದು ಈ ರಾಶಿಯವರು ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 18, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಾಡ್ಯ, ಅಶ್ವಿನಿ ನಕ್ಷತ್ರ, ಪ್ರೀತಿಯೋಗ ಮತ್ತು ಭವಕರಣಗಳನ್ನು ಒಳಗೊಂಡಿರುವ ವಿಶೇಷ ದಿನವಾಗಿದೆ. ಈ ದಿನದ ರಾಹುಕಾಲ ಬೆಳಗ್ಗೆ 9:11 ರಿಂದ 10:44 ರವರೆಗೆ ಇದ್ದು, ಸರ್ವಸಿದ್ಧಿ ಕಾಲ ಅಂದರೆ ಶುಭಕಾಲವು ಮಧ್ಯಾಹ್ನ 1:52 ರಿಂದ 3:02 ರವರೆಗೆ ಇರುತ್ತದೆ. ಈ ಪರ್ವದಿನವು ಸಾಕ್ಷಾತ್ ಶನಿ ಭಗವಾನ, ವೆಂಕಟೇಶ ಹಾಗೂ ಹನುಮಂತ ದೇವರ ಲಹರಿಗಳ ಪ್ರಭಾವದಿಂದ ಕೂಡಿದೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಗಳಿಗೂ ಗ್ರಹಗಳ ಶುಭ ಫಲ, ಧನ ಯೋಗ, ಆರೋಗ್ಯ, ವ್ಯವಹಾರ, ಅದೃಷ್ಟ ಸಂಖ್ಯೆ, ಬಣ್ಣ ಮತ್ತು ದಿಕ್ಕಿನ ಬಗ್ಗೆ ವಿವರಿಸಿದ್ದಾರೆ.

 

 

 

Source link

Daily Devotional: ಕುಂಕುಮಾರ್ಚನೆಯನ್ನ ಮನೆಯಲ್ಲಿ ಮಾಡಬಹುದಾ? – Kannada News | Kumkumarchana at Home: Benefits, Ritual and Puja Tips

ಕುಂಕುಮಾರ್ಚನೆಯನ್ನ ಮನೆಯಲ್ಲಿ ಮಾಡಬಹುದಾ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಕುಂಕುಮಾರ್ಚನೆಯನ್ನು ಸಾಮಾನ್ಯವಾಗಿ ದೇವಾಲಯಗಳಲ್ಲಿ ಅರ್ಚಕರು ಮಾಡುವುದನ್ನು ಕಾಣುತ್ತೇವೆ. ಆದರೆ, ಇದನ್ನು ಮನೆಯಲ್ಲಿ ಮಾಡಬಹುದೇ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ. ಖಂಡಿತವಾಗಿಯೂ ಮನೆಯಲ್ಲಿ ಕುಂಕುಮಾರ್ಚನೆಯನ್ನು ಮಾಡಬಹುದು. ಪೂರ್ವಾಭಿಮುಖ ಅಥವಾ ಉತ್ತರಾಭಿಮುಖವಾಗಿ ಕುಳಿತು, ದೇವಿಯ ಅಷ್ಟೋತ್ತರ ನಾಮಾವಳಿಗಳನ್ನು ಪಠಿಸುತ್ತಾ, ತೋರು ಬೆರಳನ್ನು ಹೊರತುಪಡಿಸಿ ಉಳಿದ ಮೂರು ಬೆರಳುಗಳಿಂದ ಶುದ್ಧವಾದ ಕುಂಕುಮವನ್ನು ವಿಳ್ಳೆದೆಲೆ ಅಥವಾ ಬೆಳ್ಳಿ ತಟ್ಟೆಯಲ್ಲಿರುವ ದೇವಿಯ ಚಿತ್ರಕ್ಕೆ ಅರ್ಪಿಸಬಹುದು. ಇದರಿಂದ ನಿಮ್ಮ ಪ್ರಯಾಣ, ಉದ್ಯೋಗ, ವಿವಾಹ, ವಿದ್ಯಾಭ್ಯಾಸ, ಮನೆ ನಿರ್ಮಾಣ ಮತ್ತು ಸಂತಾನ ಸೇರಿದಂತೆ ಯಾವುದೇ ಕಾರ್ಯಗಳಲ್ಲಿ ಎದುರಾಗುವ ಅಡೆತಡೆಗಳು ನಿವಾರಣೆಯಾಗಿ ಯಶಸ್ಸು ಲಭಿಸುತ್ತದೆ. ಮಂಗಳವಾರ, ಶುಕ್ರವಾರ ಅಥವಾ ಪ್ರತಿದಿನ ಬ್ರಾಹ್ಮಿ ಮುಹೂರ್ತದಲ್ಲಿ ಕುಂಕುಮಾರ್ಚನೆ ಮಾಡುವುದು ಉತ್ತಮ ಫಲ ನೀಡುತ್ತದೆ ಎಂದು ಗುರೂಜಿ ಹೇಳಿದ್ದಾರೆ.

 

 

 

Source link

ಕರ್ನಾಟಕದಲ್ಲೂ ಮಹಾರಾಷ್ಟ್ರ ಮಾದರಿ ರೂಲ್ಸ್? ಕನ್ನಡ ಬಾರದ ಕ್ಯಾಬ್ ಚಾಲಕರ ಡಿಎಲ್ ರದ್ದುಪಡಿಸಲು ಹೆಚ್ಚಿದ ಒತ್ತಾಯ – Kannada News | Mandatory Kannada for Auto, Cab Drivers: Transport Unions Demand Maharashtra Style Rules to Cancel DL of Non Kannada Speakers

ಬೆಂಗಳೂರು, ಏಪ್ರಿಲ್ 18: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಅನ್ಯಭಾಷಿಕ ಆಟೋ ಮತ್ತು ಕ್ಯಾಬ್ ಚಾಲಕರ ಸಂಖ್ಯೆ ಹೆಚ್ಚುತ್ತಿದ್ದು, ಭಾಷೆಯ ಸಮಸ್ಯೆಯಿಂದಾಗಿ ಪ್ರಯಾಣಿಕರು ಮತ್ತು ಚಾಲಕರ ನಡುವೆ ನಿತ್ಯ ಗಲಾಟೆಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ಸರ್ಕಾರದ ಮಾದರಿಯಲ್ಲೇ ಕರ್ನಾಟಕದಲ್ಲೂ ಕನ್ನಡ ಬಾರದ ಚಾಲಕರ ಚಾಲನಾ ಪರವಾನಗಿ (DL) ರದ್ದುಪಡಿಸುವ ನಿಯಮ ಜಾರಿಗೆ ತರಬೇಕು ಎಂಬ ಬಲವಾದ ಆಗ್ರಹ ಕೇಳಿಬಂದಿದೆ.

ಮಹಾರಾಷ್ಟ್ರದಲ್ಲಿ ಕಟ್ಟುನಿಟ್ಟಿನ ನಿಯಮ

ಮಹಾರಾಷ್ಟ್ರ ಸರ್ಕಾರವು ಮೇ 1ರ ‘ಮಹಾರಾಷ್ಟ್ರ ದಿನಾಚರಣೆ’ಯ ಅಂಗವಾಗಿ ಹೊಸ ನಿಯಮವೊಂದನ್ನು ಜಾರಿಗೆ ತರುತ್ತಿದೆ. ಅಲ್ಲಿನ ಸಾರಿಗೆ ಇಲಾಖೆಯು ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ಬಾರದ ಆಟೋ ಹಾಗೂ ಕ್ಯಾಬ್ ಚಾಲಕರ ಪರವಾನಗಿಯನ್ನು ರದ್ದುಗೊಳಿಸಲು ನಿರ್ಧರಿಸಿದೆ. ನಾಡಿನ ಭಾಷೆ ತಿಳಿಯದವರಿಂದ ಪ್ರಯಾಣಿಕರಿಗೆ ಆಗುತ್ತಿರುವ ಕಿರಿಕಿರಿ ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಇದೇ ಮಾದರಿಯನ್ನು ಈಗ ಕರ್ನಾಟಕದ ಖಾಸಗಿ ಸಾರಿಗೆ ಸಂಘಟನೆಗಳು ಒತ್ತಾಯಿಸುತ್ತಿವೆ.

ಕನ್ನಡ ಕಡ್ಡಾಯಕ್ಕೆ ಆಗ್ರಹ

ಕನ್ನಡ ಬಾರದ ವಲಸಿಗ ಚಾಲಕರು ಪ್ರಯಾಣಿಕರ ಜೊತೆ ಅಸಭ್ಯವಾಗಿ ವರ್ತಿಸುವುದು, ತಪ್ಪು ದಾರಿ ತೋರಿಸುವುದು ಮತ್ತು ಮೀಟರ್ ವ್ಯವಹಾರದಲ್ಲಿ ವಂಚನೆ ಮಾಡುವುದಕ್ಕೆ ಕಡಿವಾಣ ಹಾಕಲು ಈ ಕಾನೂನು ಅನಿವಾರ್ಯ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮ ತಿಳಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಿಗೆ ಪತ್ರ ಬರೆಯಲು ಒಕ್ಕೂಟ ನಿರ್ಧರಿಸಿದೆ. ಪಕ್ಕದ ತಮಿಳುನಾಡಿನಲ್ಲೂ ಚಾಲನಾ ಪರವಾನಗಿ ನವೀಕರಿಸುವಾಗ ಸ್ಥಳೀಯ ಭಾಷೆಯ ಜ್ಞಾನವನ್ನು ಪರೀಕ್ಷಿಸಲಾಗುತ್ತಿದೆ ಎಂಬ ಅಂಶವನ್ನೂ ಇಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಶಿಕ್ಷಣ ಇಲಾಖೆ ಎಡವಟ್ಟಿನಿಂದ ಫಲಿತಾಂಶ ಕುಸಿತದ ಭೀತಿಯಲ್ಲಿ SSLC ವಿದ್ಯಾರ್ಥಿಗಳು! ಸರ್ಕಾರದ ವಿರುದ್ಧ ಪೋಷಕರ ಆಕ್ರೋಶ

ಒಟ್ಟಿನಲ್ಲಿ, ‘ಕನ್ನಡ ಗೊತ್ತಿದ್ದವರಿಗೆ ಮಾತ್ರ ಡ್ರೈವಿಂಗ್ ಲೈಸೆನ್ಸ್’ ಎಂಬ ಕೂಗು ರಾಜ್ಯಾದ್ಯಂತ ಕೇಳಿಬರುತ್ತಿದ್ದು, ರಾಜ್ಯ ಸರ್ಕಾರ ಈ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಸುಲಭವನ್ನು ಸಂಕೀರ್ಣ ಮಾಡಿಕೊಳ್ಳುವರು – Kannada News | Horoscope April 18 Satursday 2026; Dina Rashi Bhavishya Today, Checkout the details here

ಮೇಷ ರಾಶಿ:

ನಿಮ್ಮ ವಿಶ್ಲೇಷಣಾ ಶಕ್ತಿ ಇಂದಿನ ಪ್ರಮುಖ ಆಸ್ತಿಯಾಗಲಿದೆ. ಹಣದ ವ್ಯವಹಾರಗಳಲ್ಲಿ ನಿಖರತೆ ಅಗತ್ಯ. ವಿಶೇಷವಾಗಿ ಬಾಕಿ ಇರುವ ವಿಚಾರದ ಕಡೆ ಗಮನ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸದ ಗುಣಮಟ್ಟವು ಮೇಲಧಿಕಾರಿಗಳ ಗಮನ ಸೆಳೆಯಲಿದೆ. ಮೋಹದ ಕಾರಣದಿಂದ ನಿಮ್ಮವರ ತಪ್ಪನ್ನು ಹೇಳಲು ನೀವು ತಯಾರಿರುವುದಿಲ್ಲ. ಮಕ್ಕಳ ಜೊತೆ ಸಂತೋಷದಿಂದ ಕಳೆಯುವುದು ಅವರಿಗೂ ಖುಷಿಯಾಗುವುದು. ಬರಬೇಕಾದ ಹಣದ ಚಿಂತೆ ಬಹಳ ಕಾಡಬಹುದು.

ವೃಷಭ ರಾಶಿ:

ಹಣಕಾಸು ವಿಚಾರಗಳಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳುವುದು ಒಳ್ಳೆಯದು. ಮಕ್ಕಳ ಜೊತೆಗೆ ಸಮಯ ಕಳೆಯುವುದು ನಿಜವಾದ ಸಂತೋಷ ನೀಡುತ್ತದೆ. ಉದ್ಯೋಗದಲ್ಲಿ ನಿಮ್ಮ ಶ್ರಮವನ್ನು ಗುರುತಿಸಲಾಗುವುದು. ಅನಾರೋಗ್ಯದಿಂದ ಅವಕಾಶ ವಂಚಿತರಾಗುವಿರಿ. ಸದುಪಯೋಗ ಆಗುವಂತಹ ಕೆಲಸದ ಕಡೆ ಗಮನವಿರಲಿ. ಸುಲಭದ ಕಾರ್ಯವನ್ನು ಸಂಕೀರ್ಣ ಮಾಡಿಕೊಂಡು ಚಿಂತಿಸುವಿರಿ. ಖರೀದಿಯ ವಸ್ತುಗಳು ಕಳೆದುಹೋಗುವ ಸಂಭವವಿದೆ.

ಮಿಥುನ ರಾಶಿ:

ನೀವು ಕೆಲವು ನಷ್ಟಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಮಾನಸಿಕ ಸ್ಥಿತಿಯನ್ನು ಸುಧಾರಿಸಲು ಆಧ್ಯಾತ್ಮಿಕ ಚಟುವಟಿಕೆಗಳು ಉತ್ತಮ. ಭೂಮಿಯ ವಿಸ್ತರಣೆಯ ಬಗ್ಗೆ ಯೋಚಿಸುವಿರಿ. ಹಣಕಾಸಿನ ತೊಂದರೆಗಳು ತುರ್ತು ಖರ್ಚುಗಳಿಂದ ಉಂಟಾಗಬಹುದು. ಮನೆಯ ಕೆಲಸಗಳು ಕೆಲವೊಂದು ತಲೆನೋವಿಗೆ ಕಾರಣವಾಗಲಿದೆ. ನಾಯಕರು ತಮ್ಮ ಬಗ್ಗೆ ಒಳ್ಳಯ ಸುದ್ದಿಯನ್ನು ಕೇಳುವರು. ಅಸಾಧ್ಯವಾದ ಕಾರ್ಯವನ್ನು ಮಾಡಿ ಸಮಯವನ್ನು ವ್ಯರ್ಥ ಮಾಡುವುದು ಬೇಡ.

ಕರ್ಕಾಟಕ ರಾಶಿ:

ಬಹಳ‌ ದಿನಗಳ ಅನಂತರ ಪುಣ್ಯ ಸ್ಥಳಗಳಿಗೆ ಹೋಗುವ ಅವಕಾಶ. ಪ್ರತಿಫಲದ ಅಪೇಕ್ಷೆ ಇಲ್ಲದೇ ಮಾಡಿದ ಸಹಾಯದಿಂದ ತೃಪ್ತಿ. ಅನವಶ್ಯಕ ವ್ಯವಹಾರಗಳಲ್ಲಿ ಪಾಲ್ಗೊಳ್ಳದಿರುವುದು ಉತ್ತಮ. ಕೆಲಸದಲ್ಲಿ ಹೊಸ ಯೋಜನೆಗಳನ್ನು ರೂಪಿಸಲು ಇಂದು ಒಳ್ಳೆಯ ಸಮಯ. ನಿಮ್ಮ ವ್ಯವಹಾರದಲ್ಲಿ ಲೆಕ್ಕವು ತಪ್ಪಾಗಿ ನೀವು ಹಣವನ್ನು ಕಳೆದುಕೊಳ್ಳಬಹುದು. ಸ್ನೇಹಿತರ ಜೊತೆ ಎಲ್ಲಿಗಾದರೂ ಹೋಗಬೇಕು ಎನಿಸುವುದು. ವಿದ್ಯಾರ್ಥಿಗಳು ಕೆಲವುದರಲ್ಲಿ ಸೋಲಬಹುದು.

ಸಿಂಹ ರಾಶಿ:

ಹಂತಹಂತವಾದ ಬೆಳವಣಿಗೆಯಿಂದ ಮಾತ್ರ ನಿರಂತರ ಸಂತಸ. ಸೃಜನಾತ್ಮಕ ಕೆಲಸಗಳಲ್ಲಿ ತೊಡಗಿದರೆ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಇತರರ ಮಾತಿಗೆ ಒಳಗಾಗಬೇಡಿ, ಹಣಕಾಸಿನಲ್ಲಿ ನಷ್ಟವಾಗುವ ಸಂಭವವಿದೆ. ದೂರದ ಸಂಬಂಧಿಗಳು ಸಂಪರ್ಕಿಸಿ ಸಂಭ್ರಮ ತರಬಹುದು. ವ್ಯಾಪಾರದ ಗುತ್ತಿಗೆಗಳಲ್ಲಿ ನಿಖತೆ ಅಗತ್ಯ. ಆಪ್ತರ ಬಗ್ಗೆ ನಿಮಗೆ ಹಲವು ಅನುಮಾನಗಳು ಇರಬಹುದು.‌ ಕಛೇರಿಯ ಕಿರಿಕಿರಿಯಿಂದ‌ ಮನೆಯಲ್ಲಿಯೂ ನಿಮಗೆ ನೆಮ್ಮದಿ ಸಿಗದು.

ಕನ್ಯಾ ರಾಶಿ:

ವ್ಯವಹಾರವನ್ನು ಗೌಪ್ಯವಾಗಿ ನಿಮಗೆ ಮಾತ್ರ ಗೊತ್ತಾಗುವ ಹಾಗೆ ಮಾಡುವುದು ಬೇಡ. ಅನಂತರ ಪಶ್ಚಾತ್ತಾಪ ಪಡಬೇಕಾಗುವುದು. ಇಂದು ನಿಮ್ಮ ಆಂತರಿಕ ಶಕ್ತಿ ಹೆಚ್ಚು ಸ್ಪಷ್ಟವಾಗಿ ತೋರಬಹುದು. ಆರ್ಥಿಕ ವಿಷಯಗಳಲ್ಲಿ ಬುದ್ಧಿವಂತಿಕೆ ಬಳಸಿ ನಿರ್ಧಾರ ತೆಗೆದುಕೊಳ್ಳಿ. ಸ್ತ್ರೀಯರಿಗೆ ತಾಳ್ಮೆಯ ಪರೀಕ್ಷೆ ಆಗಬಹುದು. ಮನೆಯ ಕೆಲಸದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ಸಹೋದರಿಯರ ನಡುವೆ ಕಲಹವಾಗಬಹುದು.

ತುಲಾ ರಾಶಿ:

ಇತ್ತೀಚಿನ ನಿರಾಶೆಯಿಂದ ಹೊರಬರಲು ನೀವು ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಬೇಕು. ಇಂದು ಸಂಗಾತಿಯೊಂದಿಗೆ ಹಣಕಾಸಿನ ವಿಚಾರದಲ್ಲಿ ಚರ್ಚೆ ಆಗಬಹುದಾದರೂ, ಸಹೋದರರ ಸಹಕಾರವು ನಿಮಗೆ ಬಲವನ್ನು ಕೊಡಬಹುದು. ಹೊಸ ಮಾರ್ಗಗಳು ನಿಮಗಾಗಿ ತೆರೆದುಕೊಳ್ಳಬಹುದು. ದಾಂಪತ್ಯದಲ್ಲಿ ಶಾಂತಿಯು ಬೇಕಾದರೆ ಸುಮ್ಮನಿರುವುದು ಉತ್ತಮ. ಕೋಪವನ್ನು ದೀರ್ಘಕಾಲ ಮುಂದುವರಿಸುವುದು ಬೇಡ. ಸ್ವಾಭಿಮಾನ ಬಂಧುಗಳ ಎದುರು ಕಾಣಿಸಿಕೊಳ್ಳಬಹುದು.

ವೃಶ್ಚಿಕ ರಾಶಿ:

ಇಂದು ಹಣದ ನಷ್ಟವನ್ನು ತಪ್ಪಿಸಲು ಖರ್ಚನ್ನು ಮಿತಿಗೊಳಿಸಿ. ಜೀವನದಲ್ಲಿ ಹೊಸತನ್ನು ಸ್ವೀಕರಿಸುವ ಮನಸ್ಥಿತಿಯಿರಲಿ. ಹಳೆಯ ಮನೆಯನ್ನು ದುರಸ್ತಿ ಮಾಡುವ ಚಿಂತನೆಯಿರುವುದು. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕಷ್ಟ. ಅವಶ್ಯಕತೆ ಇದ್ದರಷ್ಟೇ ನಿಮ್ಮನ್ನು ಬಳಸಿಕೊಳ್ಳುವರು. ಸಹೋದರ ಸಹೋದರಿಯರ ಜೊತೆ ಆಸ್ತಿಯ ವಿಷಯಕ್ಕೆ ಸಂಬಂಧಿಸಿದಂತೆ ಜಗಳಗಳು ಆಗಬಹುದು.

ಧನು ರಾಶಿ:

ಹೊಸ ಆರ್ಥಿಕ ಒಪ್ಪಂದಗಳಿಂದ ಲಾಭ ಸಾಧ್ಯ. ಸಣ್ಣ ವಿಚಾರಗಳಿಂದ ಸಂಗಾತಿಯೊಂದಿಗೆ ಮನಸ್ತಾಪ ಸಂಭವಿಸಬಹುದು. ಎಂದೂ ನಂಬದವರ ಮಾತನ್ನು ನೀವು ಇಂದು ನಂಬುವಿರಿ. ಹೂಡಿಕೆಯ ವಿಚಾರದಲ್ಲಿ ನಿಮಗೆ ಪೂರ್ಣ ಆಸಕ್ತಿ ಇರದು. ಅಪರಿಚಿತರ ಮಾತುಗಳಿಂದ ದೂರವಿರಬೇಕು. ಕೆಲವು ಕೆಲಸಗಳಿಗಾಗಿ ನೀವು ಸ್ವಲ್ಪ ದೂರ ಪ್ರಯಾಣಿಸಬೇಕಾಗಬಹುದು. ಏನೂ ಮಾಡಿದರೂ ಆಗುತ್ತದೆ ಎಂದು ಏನನ್ನಾದರೂ ಮಾಡಲು ಹೋಗುವುದು ಬೇಡ.

ಮಕರ ರಾಶಿ:

ಹಣಕಾಸಿನ ಚಟುವಟಿಕೆಗಳಲ್ಲಿ ಸುಧಾರಣೆಯಿಂದ ಬಾಕಿ ಬಿಲ್‌ಗಳನ್ನು ತೀರಿಸಲು ಅನುಕೂಲ. ಸಂಬಂಧಿಕರ ಆಗಮನದಿಂದ ಸಂಜೆಯು ವಿಶೇಷವಾಗಬಹುದು. ಸಾಲ ಬಾಧೆಯ ಕಾರಣ ಕಣ್ತಪ್ಪಿಸಿ ಓಡಾಡುವಿರಿ. ಇಂದು ಹಳೆಯ ತಪ್ಪುಗಳನ್ನು ಮರೆತು ಸಂತೋಷವಾಗಿರಿ. ತಾಯಿಗೆ ಯಾವುದಾದರೂ ಹಳೆಯ ಕಾಯಿಲೆ ಮರುಕಳಿಸಬಹುದು. ಬಹಳ ದಿನಗಳ ಅನಂತರ ಹಳೆಯ ಗೆಳೆಯರನ್ನು ಭೇಟಿಯಾಗುವ ಸಂತಸ ಇರಲಿದೆ.

ಕುಂಭ ರಾಶಿ:

ಆರ್ಥಿಕ ವ್ಯವಹಾರಗಳಲ್ಲಿ ಎಚ್ಚರಿಕೆಯಿಂದಿರುವುದು ಉತ್ತಮ. ತಪ್ಪಾದ ನಿರ್ಧಾರಗಳು ನಷ್ಟಕ್ಕೆ ಕಾರಣವಾಗುತ್ತದೆ. ಕುಟುಂಬದಲ್ಲಿ ಹಿರಿಯರ ಸಲಹೆಗಳನ್ನು ಗೌರವದಿಂದ ಸ್ವೀಕರಿಸಿ. ಸ್ನೇಹಿತರೊಂದಿಗೆ ಚರ್ಚೆಗಳಲ್ಲಿ ಧೈರ್ಯವಂತಿಕೆಯಿಂದ ನಿರ್ವಹಿಸಿ. ಇಂದು ಹೆಚ್ಚಿನ ಸಮಯವನ್ನು ತಂದೆ, ತಾಯಿಯರ ಸೇವೆಯಲ್ಲಿ ಹೆಚ್ಚಿನ ಸಮಯ ಕಳೆಯುವಿರಿ. ಬಹಳ ದಿನಗಳಿಂದ ಒಂದೇ ತರದ ಕೆಲಸಗಳಿಂದ ಬೇಸರವಾಗುವುದು.

ಮೀನ ರಾಶಿ:

ಪ್ರೀತಿಯ ಸಂಗಾತಿಯ ಜೊತೆ ವಿಶೇಷ ಸಮಯ ಕಳೆಯಬಹುದು. ನಿಮ್ಮ ಕೆಲಸದಲ್ಲಿ ಉತ್ತಮ ಸಾಧನೆ ಮಾಡಲು ಸಮಯ ಸೂಕ್ತ. ನಿರೀಕ್ಷಿಸದ ಅತಿಥಿಗಳ ಆಗಮನದಿಂದ ಕೆಲವೊಂದು ಕಾರ್ಯಗಳಲ್ಲಿ ವ್ಯತ್ಯಯ ಉಂಟಾಗಬಹುದು. ನಿಮ್ಮ ವ್ಯವಹಾರವನ್ನು ಕಾನೂನಾತ್ಮಕವಾಗಿ ನಡೆಸಿದರೆ ಉತ್ತಮ. ಆಕಸ್ಮಿಕವಾಗಿ ಬರುವ ಅಲ್ಪ ಸಂಪತ್ತೂ ಕೈಯಲ್ಲಿ ನಿಲ್ಲದು. ಕೋಪವನ್ನು ಮಾಡುವ ಸಂದರ್ಭವು ಎದರಾಗಲಿದ್ದು, ನಿಮ್ಮ ನಿಯಂತ್ರಣದಲ್ಲಿ ಇರಲಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ : ವೈಧೃತಿ, ಕರಣ : ಕಿಂಸ್ತುಘ್ನ, ಸೂರ್ಯೋದಯ – 06 – 10 am, ಸೂರ್ಯಾಸ್ತ – 06 – 37 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:17 – 10:50, ಯಮಗಂಡ ಕಾಲ 13:57 – 15:31, ಗುಳಿಕ ಕಾಲ 06:10 – 07:44

-ಲೋಹಿತ ಹೆಬ್ಬಾರ್ – 8762924271 (what’s app only)

Source link

IPL 2026 GT vs KKR: ಸತತ 6ನೇ ಪಂದ್ಯದಲ್ಲೂ ಕೆಕೆಆರ್​ಗೆ ದಕ್ಕದ ಜಯ – Kannada News | IPL 2026: Gujarat Titans Beat KKR in Ahmedabad, Claim 3rd Win; KKR’s Losing Streak Extends

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 25ನೇ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್​ನಲ್ಲಿ ಮೂರನೇ ಗೆಲುವು ದಾಖಲಿಸಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಲೀಗ್​ನಲ್ಲಿ ತನ್ನ ಮೊದಲ ಗೆಲುವಿಗಾಗಿ ಹಂಬಲಿಸುತ್ತಿರುವ ಕೆಕೆಆರ್ ತಂಡಕ್ಕೆ ಗೆಲುವು ಎಂಬುದು ಗಗನ ಕುಸುಮವಾದಂತ್ತಾಗಿದೆ. ತಂಡ ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ 5 ರಲ್ಲಿ ಸೋತಿದೆ. ಉಳಿದಂತೆ ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ 180 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಗುಜರಾತ್ 5 ವಿಕೆಟ್​​ಗಳಿಂದ ಜಯದ ನಗೆ ಬೀರಿತು.

Source link

Exit mobile version