Headlines

ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ ಮೂರನೇ ಬಾರಿ ಪರೀಕ್ಷೆ ಇರಲ್ಲ – Kannada News | Karnataka SSLC Exam: No Third Exam for Failed Students

ಬೆಂಗಳೂರು, ಏಪ್ರಿಲ್ 23: ಶಿಕ್ಷಣ ಸಚಿವ ಮಧು ಬಂಗಾರಪ್ಪನವರು 2025-26ನೇ ಸಾಲಿನ SSLC ಫಲಿತಾಂಶವನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ದ್ವಿತೀಯ ಹಾಗೂ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನದಲ್ಲಿವೆ. ಈ ಬಾರಿಯ ಫಲಿತಾಂಶವು ದಾಖಲೆ ಮಟ್ಟದ ಪ್ರಗತಿ ಕಂಡಿರುವುದರಿಂದ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೂರನೇ ಬಾರಿಯ ಪರೀಕ್ಷೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಎರಡನೇ ಪರೀಕ್ಷೆಯು ಮೇ 18 ರಿಂದ ಮೇ 25ರವರೆಗೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಪಾಸ್ ಆಗಲು…

Read More

ರಸ್ತೆ ಗುಂಡಿಗಳ ಪತ್ತೆಗೆ ಎಐ ಮೊರೆಹೋದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ – Kannada News | NHAI Adopts AI and Drones for Smart Pothole Detection and Highway Maintenance

ಬೆಂಗಳೂರು, ಜೂನ್​​ 17: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ದೇಶದ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆಯಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದ್ದು, ಕೃತಕ ಬುದ್ಧಿಮತ್ತೆ (AI), ಡ್ರೋನ್‌ಗಳು ಹಾಗೂ ಸುಧಾರಿತ ಡೇಟಾ ವಿಶ್ಲೇಷಣಾ ತಂತ್ರಜ್ಞಾನಗಳನ್ನು ಬಳಸುವ ಪೂರ್ವಾನುಮಾನ ಆಧಾರಿತ ಆಸ್ತಿ ನಿರ್ವಹಣಾ ವ್ಯವಸ್ಥೆ (Predictive Asset Management Framework) ಅಳವಡಿಸಿಕೊಳ್ಳುತ್ತಿದೆ. ಗುಂಡಿಗಳು ಮತ್ತು ಇತರ ರಸ್ತೆ ದೋಷಗಳು ಗಂಭೀರ ಸಮಸ್ಯೆಗಳಾಗುವ ಮುನ್ನವೇ ಅವುಗಳನ್ನು ಪತ್ತೆಹಚ್ಚಿ ದುರಸ್ತಿಗೊಳಿಸುವುದು ಈ ಹೊಸ ವ್ಯವಸ್ಥೆಯ ಮುಖ್ಯ ಉದ್ದೇಶವಾಗಿದೆ. ರಾಷ್ಟ್ರೀಯ ಹೆದ್ದಾರಿಗಳ ಸ್ಥಿತಿಯನ್ನು ಪರಿಶೀಲಿಸಲು…

Read More

ಪಾಕ್ ಆಟಗಾರನ ಕಳ್ಳಾಟ ಬಯಲು..! – Kannada News | Shaheen Afridi Faces Disciplinary Heat Over Ball Tampering

ಕ್ರಿಕೆಟ್ ಎನ್ನುವುದು ಜಂಟಲ್​ಮ್ಯಾನ್ ಗೇಮ್. ಇದರ ಜೊತೆಗೆ ಕ್ರೀಡಾ ಸ್ಫೂರ್ತಿಗೆ ಹೆಸರಾದ ಆಟ. ಆದರೆ, ಗೆಲುವಿನ ಹಪಾಹಪಿ ಅಥವಾ ಮೈದಾನದ ಹತಾಶೆ ಕೆಲವೊಮ್ಮೆ ಸ್ಟಾರ್ ಆಟಗಾರರನ್ನೂ ದಾರಿ ತಪ್ಪಿಸುತ್ತದೆ. ಇದಕ್ಕೆ ತಾಜಾ ಉದಾಹರಣೆ ಪಾಕಿಸ್ತಾನ್ ವೇಗಿ ಶಾಹೀನ್ ಶಾ ಆಫ್ರಿದಿ. ಬಾಂಗ್ಲಾದೇಶ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ವೇಳೆ ಶಾಹೀನ್ ‘ಬಾಲ್ ಟ್ಯಾಂಪರಿಂಗ್’ (ಚೆಂಡು ವಿರೂಪಗೊಳಿಸುವಿಕೆ) ಮಾಡಿದ ಗಂಭೀರ ಆರೋಪಕ್ಕೆ ಗುರಿಯಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರಿಕೆಟ್ ವಲಯದಲ್ಲಿ ಭಾರಿ…

Read More

ನೀವು ಪದೇ ಪದೇ ಎಸಿ ಆನ್, ಆಫ್ ಮಾಡುತ್ತಿದ್ದರೆ ಏನಾಗುತ್ತದೆ?

ನವದೆಹಲಿ, ಮೇ 27: ಈ ಬಾರಿಯ ಬೇಸಿಗೆ ಜೋರಾಗಿದೆ. ಹಲವೆಡೆ ಉಷ್ಣಅಲೆ (Heat Wave)  ಉಂಟಾಗಿದೆ. ಬಿಸಿಲಿನಿಂದಾಗಿ ಜನರು ಪರದಾಡುತ್ತಿದ್ದಾರೆ. ಸೆಖೆಯನ್ನು ಸಹಿಸಲಾಗದೆ ಫ್ಯಾನ್‌ಗಳು, ಕೂಲರ್‌ಗಳು ಮತ್ತು ಎಸಿಗಳನ್ನು (AC) ಬಳಸುತ್ತಿದ್ದಾರೆ. ಫ್ಯಾನ್​ನಲ್ಲೂ ಸೆಖೆ ನೀಗದೆ ಎಸಿ ಬಳಸುತ್ತಿದ್ದಾರೆ. ಆದರೆ, ಕೆಲವರಿಗೆ ರೂಂ ತಂಪಾದಾಗ ಎಸಿ ಆಫ್ ಮಾಡಿ, ಮತ್ತೆ ಸೆಖೆ ಅನಿಸಿದಾಗ ಅದನ್ನು ಆನ್ ಮಾಡುವ ಅಭ್ಯಾಸವಿದೆ. ನಿಮಗೂ ಆ ಅಭ್ಯಾಸವಿದೆಯೇ? ಈ ರೀತಿ ಪದೇ ಪದೇ ಎಸಿ ಆನ್ ಮತ್ತು ಆಫ್ ಮಾಡುವುದರಿಂದ ಗಂಭೀರ…

Read More

ಫಾಲೋಆನ್​ ಹೇರಿದ ಟೀಮ್ ಇಂಡಿಯಾ: ಭಾರತದ ಗೆಲುವು ಖಚಿತ..! – Kannada News

ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಅಫ್ಘಾನಿಸ್ತಾನ್ ತಂಡ ಕೇವಲ 152 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100), ಶುಭ್​ಮನ್ ಗಿಲ್ (126) ಶತಕ ಬಾರಿಸಿದರೆ, ಸಾಯಿ ಸುದರ್ಶನ್, ವಾಷಿಂಗ್ಟನ್ ಸುಂದರ್ ಹಾಗೂ ರಿಷಭ್ ಪಂತ್…

Read More

IPL 2026: ಐಪಿಎಲ್​ಗೆ ತಯಾರಿ ಶುರು ಮಾಡಿದ ಧೋನಿ; ವಿಡಿಯೋ ಬಿಡುಗಡೆ – Kannada News | MS Dhoni Begins IPL 2026 Preparations in Ranchi: Is This His Last Season for CSK?

2026 ರ ಐಪಿಎಲ್​ಗೆ (IPL 2026) ಅಭಿಮಾನಿಗಳು ಕೌಂಟ್‌ಡೌನ್ ಪ್ರಾರಂಭಿಸಿದ್ದಾರೆ. ಮಾರ್ಚ್​ ತಿಂಗಳಲ್ಲಿ ಈ ಮಿಲಿಯನ್ ಡಾಲರ್​ ಟೂರ್ನಿಗೆ ಚಾಲನೆ ಸಿಗಲಿದೆ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳು ಕೂಡ ತಮ್ಮ ತಯಾರಿಯನ್ನು ಆರಂಭಿಸಲು ಸಜ್ಜಾಗಿವೆ. ಕಳೆದ ಕೆಲವು ಆವೃತ್ತಿಗಳಿಂದ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿರುವ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಈ ಬಾರಿ ಯುವ ಪಡೆಯೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ. ಇದರೊಂದಿಗೆ ಕೊನೆಯ ಐಪಿಎಲ್ ಆಡುತ್ತಿರುವ ಎಂಎಸ್ ಧೋನಿ (MS Dhoni) ಕೂಡ ವರ್ಷದ ಬಳಿಕ ಮೈದಾನಕ್ಕೆ ಮರಳಲು ಸಜ್ಜಾಗಿದ್ದು,…

Read More

ಮಲೆನಾಡಿಗರ ದಶಕಗಳ ಕನಸು ನನಸು ಮಾಡಿದ ಕೇಂದ್ರ ಸರ್ಕಾರ – Kannada News | Akashavani Bhadravati FM Upgraded to 10kW: Malenadu Radio Dream Realized in Shivamogga

ಶಿವಮೊಗ್ಗ, ಫೆಬ್ರವರಿ 26: ಆಕಾಶವಾಣಿ ಭದ್ರಾವತಿ ಕೇಂದ್ರದ ಎಫ್​ಎಂ (FM) ಪ್ರಸಾರ ಕೇಂದ್ರ ಮೇಲ್ದರ್ಜೆಗೇರಿಸಲಾಗಿದೆ. 10 ಕಿಲೋವ್ಯಾಟ್ ಎಫ್​ಎಂ ಟ್ರಾನ್ಸ್‌ಮೀಟರ್ ಲೋಕಾರ್ಪಣೆಗೊಳಿಸಿರುವುದು ದಶಕಗಳ ಕನಸು ನನಸಾದಂತಾಗಿದೆ. ಮಲೆನಾಡು ಎಫ್​​ಎಂ ಎಂದೇ ಖ್ಯಾತಿ ಪಡೆದಿದ್ದ ಆಕಾಶವಾಣಿ ಭದ್ರಾವತಿ ಕೇಂದ್ರ 1 ಕಿಲೋವ್ಯಾಟ್‌ದಿಂದ 10 ಕಿಲೋವ್ಯಾಟ್ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಿರುವ ಈ ಎಫ್​ಎಂ ಕೇಂದ್ರದ ಬಾನುಲಿ ಈಗ ಎಲ್ಲೆಡೆ ಕನ್ನಡಿರಿಗೆ ಪಸರಿಸುವಂತಾಗಿದೆ. 10 ಕಿಲೋವ್ಯಾಟ್ ಎಫ್.ಎಂ. ಟ್ರಾನ್ಸ್‌ಮೀಟರ್ ಲೋಕಾರ್ಪಣೆ ಮಲೆನಾಡಿಗರ ಬಹು ದಶಕಗಳ ಕನಸು ನನಸಾದಂತಾಗಿದೆ. ಭದ್ರಾವತಿ ಆಕಾಶವಾಣಿ ಭದ್ರಾವತಿ ರೇಡಿಯೋ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಪೇಕ್ಷೆಯಲ್ಲಿ ಗೊಂದಲ‌ ಅಧಿಕ – Kannada News | Horoscope 21 Satursday 2026; Dina Rashi Bhavishya Today, Checkout the details here

ಮೇಷ ರಾಶಿ: ಅಕಾರಣವಾಗಿ ಬರುವ ಕೋಪವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ನಿಜವಾದ ಮಿತ್ರನ ಬಗ್ಗೆ ನಿಮಗೆ ಗೊತ್ತಾಗಲಿದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು. ಮಕ್ಕಳಿಂದ ಪ್ರೀತಿಯನ್ನು ಪಡೆಯುವಿರಿ. ವೃಷಭ ರಾಶಿ: ಇಂದು ಲೆಕ್ಕಕ್ಕೆ ಸಿಗದೇ ಇರುವ ಎಷ್ಟೋ ಹಣವನ್ನು ಕಳೆದುಕೊಳ್ಳಬೇಕಾಗುವುದು. ಹುಡುಗಾಟಿಕೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಅತಿಯಾದ ಸಂತೋಷದ ಕ್ಷಣವು…

Read More

Oil Prices: ಟ್ರಂಪ್ ವರಸೆ ಬದಲು; ಕಚ್ಛಾ ತೈಲ ಬೆಲೆ ದಿಢೀರ್ ಇಳಿಕೆ

ನವದೆಹಲಿ, ಮಾರ್ಚ್ 23: ಇರಾನ್ ಮೇಲೆ ಅಮೆರಿಕ ದಾಳಿ ಮಾಡಿದ ಪರಿಣಾಮ ಗಗನಕ್ಕೇರಿದ್ದ ತೈಲ ಬೆಲೆಗಳು (crude oil prices) ಇದೀಗ ತಗ್ಗಿವೆ. ಸೋಮವಾರ ಬ್ರೆಂಟ್ ಕ್ರೂಡ್ ಶೇ 11ರಷ್ಟು ಕಡಿಮೆ ಆಗಿದೆ. ಒಂದು ಬ್ಯಾರಲ್ ತೈಲದ ಬೆಲೆ 100 ಡಾಲರ್​ಗಿಂತ ಕಡಿಮೆಗೆ ಇಳಿದಿದೆ. ತೈಲ ಬೆಲೆ ಏರಲು ಕಾರಣವಾಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಟ್ರೂತ್ ಸೋಷಿಯಲ್​ನಲ್ಲಿ ಪೋಸ್ಟ್ ಹಾಕಿದ ಬಳಿಕ ತೈಲ ಬೆಲೆ ಕೆಳ ಜಾರಿದೆ. ಬ್ರೆಂಟ್ ಮತ್ತು ಡಬ್ಲ್ಯುಟಿಐ…

Read More

ಗ್ಯಾಸ್ ಟ್ರಬಲ್ ಆಯ್ತು, ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!

ಬೆಂಗಳೂರು, ಮಾರ್ಚ್ 25: ಭಾರತ್ ಪೆಟ್ರೋಲಿಯಂ ಲಿಮಿಟೆಡ್‌ನಿಂದ ಇಂಧನ ಪೂರೈಕೆ ಸ್ಥಗಿತಗೊಂಡಿರುವುದರಿಂದ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗುವ ಆತಂಕ ಎದುರಾಗಿದೆ. ಅಖಿಲ ಕರ್ನಾಟಕ ಫೆಡರೇಶನ್ ಆಫ್ ಪೆಟ್ರೋಲಿಯಂ ಟ್ರೇಡರ್ಸ್ ಈ ಕುರಿತು ಎಚ್ಚರಿಕೆ ನೀಡಿದೆ. ಕಂಪನಿಯು ಮುಂಗಡ ಹಣ ಪಡೆದಿದ್ದರೂ ಲೋಡ್ ನೀಡುತ್ತಿಲ್ಲ ಎಂದು ಫೆಡರೇಶನ್ ತಿಳಿಸಿದೆ. ಈ ಸಮಸ್ಯೆ ಪ್ರಸ್ತುತ ಬೆಂಗಳೂರು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಾದ ಆನೇಕಲ್, ಕೋಲಾರ, ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ಭಾಗಗಳಲ್ಲಿ ಕಂಡುಬಂದಿದೆ. ಇದು ಮುಂದಿನ ದಿನಗಳಲ್ಲಿ ರಾಜಧಾನಿ…

Read More