IPL 2026: ಅಂಪೈರ್​ಗೆ ಬಾಲ್ ನೀಡದೆ ಸತಾಯಿಸಿದ ಟಿಮ್ ಡೇವಿಡ್​ಗೆ ಭಾರಿ ದಂಡ

IPL 2026: ಅಂಪೈರ್​ಗೆ ಬಾಲ್ ನೀಡದೆ ಸತಾಯಿಸಿದ ಟಿಮ್ ಡೇವಿಡ್​ಗೆ ಭಾರಿ ದಂಡ

ಐಪಿಎಲ್ 2026 (IPL 2026) ರ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ (MI vs RCB) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್​ಸಿಬಿ ಇನ್ನಿಂಗ್ಸ್ ವೇಳೆ ಕ್ರೀಸ್​ನಲ್ಲಿದ್ದ ಟಿಮ್ ಡೇವಿಡ್ (Tim David), ಐಪಿಎಲ್ ನಿಯಮವನ್ನು ಉಲ್ಲಂಘಿಸಿದ ಕೃತ್ಯ ಎಸಗಿದರು. ಇದೀಗ ಅದಕ್ಕೆ ಪ್ರತಿಫಲವಾಗಿ ಟಿಮ್ ಡೇವಿಡ್​ಗೆ ಪಂದ್ಯ ಶುಲ್ಕ ಶೇಕಡಾ 25% ರಷ್ಟು ಮೊತ್ತವನ್ನು ದಂಡವಾಗಿ ವಿಧಿಸಲಾಗಿದೆ. ಟಿಮ್ ಡೇವಿಡ್ ಐಪಿಎಲ್ ನೀತಿ ಸಂಹಿತೆಯ ಸೆಕ್ಷನ್ 2.4 ಅನ್ನು ಉಲ್ಲಂಘಿಸಿದ್ದಾರೆ. ಈ ಸೆಕ್ಷನ್ ಪ್ರಕಾರ, ಪಂದ್ಯದ ಸಮಯದಲ್ಲಿ ಅಂಪೈರ್‌ಗಳ ಸೂಚನೆಗಳನ್ನು ಪಾಲಿಸದ ಆಟಗಾರನಿಗೆ ಪಂದ್ಯ ಶುಲ್ಕದ ಶೇಕಡಾ 25 ರಷ್ಟು ದಂಡವನ್ನು ವಿಧಿಸಲಾಗುತ್ತದೆ. ಹಾಗೆಯೇ ಒಂದು ಡಿಮೆರಿಟ್ ಪಾಯಿಂಟ್ ಕೂಡ ನೀಡಲಾಗುತ್ತದೆ. ಆ ಪ್ರಕಾರ ಡೇವಿಡ್​ಗೆ ಈ ಎರಡೂ ಶಿಕ್ಷೆಯನ್ನು ವಿಧಿಸಲಾಗಿದೆ.

ಮೇಲೆ ಹೇಳಿದಂತೆ ಆರ್‌ಸಿಬಿಯ ಇನ್ನಿಂಗ್ಸ್​ನ 18 ನೇ ಓವರ್‌ ಅನ್ನು ಹಾರ್ದಿಕ್ ಪಾಂಡ್ಯ ಬೌಲ್ ಮಾಡಿದರು. ಈ ಓವರ್​ನ ಮೊದಲ ಎಸೆತವನ್ನು ಟಿಮ್ ಡೇವಿಡ್ ಬೌಂಡರಿ ಗಟ್ಟಿದರು. ಹಾರ್ದಿಕ್ ಮುಂದಿನ ಎಸೆತವನ್ನು ನೋಬಾಲ್ ಮಾಡಿದರು. ಹೀಗಾಗಿ ಫ್ರಿ ಹಿಟ್ ಲಾಭವನ್ನು ಸಂಪೂರ್ಣವಾಗಿ ಬಳಸಿಕೊಂಡ ಟಿಮ್ ಡೇವಿಡ್ ಭರ್ಜರಿ ಸಿಕ್ಸರ್ ಹೊಡೆದರು. ನಂತರದ ಎಸೆತಕ್ಕೂ ಮುನ್ನ ಅಂಪೈರ್​ಗಳು ಚೆಂಡನ್ನು ಪರಿಶೀಲಿಸಿದಾಗ ಚೆಂಡು ಒದ್ದೆಯಾಗಿತ್ತು ಮತ್ತು ಅದರ ಆಕಾರವೂ ಸ್ವಲ್ಪ ಬದಲಾಗಿತ್ತು. ಆದ್ದರಿಂದ ಅಂಪೈರ್‌ಗಳು ಚೆಂಡನ್ನು ಬದಲಾಯಿಸಲು ನಿರ್ಧರಿಸಿದರು.

ಚೆಂಡಿನ ಜೊತೆ ಡೇವಿಡ್ ಆಟ

ಹೀಗಾಗಿ ಚೆಂಡುಗಳ ಪೆಟ್ಟಿಗೆ ಮೈದಾನಕ್ಕೆ ಬಂದಾಗ, ಟಿಮ್ ಡೇವಿಡ್ ಅದರಲ್ಲಿ ಒಂದು ಚೆಂಡನ್ನು ಎತ್ತಿಕೊಂಡು ಅದರೊಂದಿಗೆ ಆಟವಾಡಲು ಪ್ರಾರಂಭಿಸಿದರು. ಅಂಪೈರ್ ಪದೇ ಪದೇ ಚೆಂಡನ್ನು ಕೇಳುತ್ತಲೇ ಇದ್ದರೂ ಡೇವಿಡ್ ಮಾತ್ರ ಅದನ್ನು ಹಿಂತಿರುಗಿಸುವ ಬದಲು, ಆಟ ಮುಂದುವರೆಸಿದರು. ಡೇವಿಡ್‌ನ ಈ ಕ್ರಿಯೆಯಿಂದ ಅಂಪೈರ್ ಸ್ವಲ್ಪ ಸಿಟ್ಟಾದಂತೆ ತೋರುತ್ತಿತ್ತು.

ಟಿಮ್ ಡೇವಿಡ್ ಪದೇ ಪದೇ ಚೆಂಡನ್ನು ಪರಿಶೀಲಿಸುತ್ತಿದ್ದರು. ನಂತರ 20 ಓವರ್‌ನಲ್ಲಿ ಜಿತೇಶ್ ಅವರ ವಿಕೆಟ್ ಬಿದ್ದ ನಂತರ ಮತ್ತೆ ಚೆಂಡನ್ನು ತೆಗೆದುಕೊಂಡ ಡೇವಿಡ್, ಅಂಪೈರ್ ಪದೇ ಪದೇ ಚೆಂಡನ್ನು ಹಿಂದಿರುಗಿಸುವಂತೆ ಕೇಳಿದರು ಚೆಂಡನ್ನು ಹಿಂದಿರುಗಿಸಲಿಲ್ಲ. ಅಂಪೈರ್ ಸೂಚನೆಗಳನ್ನು ಅಥವಾ ನಿರ್ದೇಶನಗಳನ್ನು ಅನುಸರಿಸಲು ಡೇವಿಡ್ ನಿರಾಕರಿಸಿದರು. ಇದೀಗ ಅದಕ್ಕೆ ಶಿಕ್ಷೆಯಾಗಿ ಡೇವಿಡ್​ಗೆ ದಂಡ ವಿಧಿಸಲಾಗಿದೆ. ಡೇವಿಡ್ ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದು, ಪಂದ್ಯದ ಅಧಿಕಾರಿಗಳು ನೀಡಿದ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು, ಏಪ್ರಿಲ್​​ 13: ಮೈಸೂರು ಡಿಸಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ ರಿಲೀಫ್ ಸಿಕ್ಕಿದೆ. ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿದ್ದ ಹೈಕೋರ್ಟ್​​ನ ಆದೇಶಕ್ಕೆ ಸುಪ್ರೀಂಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಕುರಿತು ವಿಚಾರಣೆ ನಡೆಸಿರುವ ಸರ್ವೋಚ್ಚ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ರೋಹಿಣಿ ಸಿಂಧೂರಿ ಅವರು ಮೈಸೂರು ಡಿಸಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಕೇಳಿಬಂದಿತ್ತು. ಹೀಗಿದ್ದರೂ ಇದಕ್ಕೆ ಸಂಬಂಧಿಸಿ ತನಿಖೆಗೆ ಅನುಮತಿ ನೀಡಲು ರಾಜ್ಯ ಸರ್ಕಾರ ನಿರಾಕರಿಸಿತ್ತು. ಈ ಸಂಬಂಧ ದೂರುದಾರ, ವಕೀಲ ರವಿಚಂದ್ರೇಗೌಡ ಎನ್.ಆರ್. ಹೈಕೋರ್ಟ್​​​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್​​ 1ರಂದು ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್​​, ಭ್ರಷ್ಟಾಚಾರ ಕ್ಯಾನ್ಸರ್, ಪ್ಲೇಗ್ ಇದ್ದಂತೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಹಾಗೇ ಬಿಟ್ಟರೆ ಪ್ರಜಾಸತ್ತಾತ್ಮಕ ಅಂಗಗಳನ್ನು ಅಸ್ಥಿರಗೊಳಿಸುತ್ತದೆ. ಭ್ರಷ್ಟಾಚಾರದ ಆರೋಪವಿದ್ದಾಗ ತನಿಖೆ ನಡೆಯದೇ ಸತ್ಯ ಬಹಿರಂಗವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಹೀಗಾಗಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ನಿರ್ದೇಶಿಸಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ; IAS ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶ

ರೋಹಿಣಿ ಸಿಂಧೂರಿ ಮೇಲಿನ ಆರೋಪ ಏನು?

ನಗರಸಭೆ, ಪುರಸಭೆ ಮತ್ತು ಮಹಾನಗರಪಾಲಿಕೆಗಳ ಪೂರ್ವಾನುಮತಿಯಿಲ್ಲದೆ ದುಬಾರಿ ಬೆಲೆಗೆ ಬ್ಯಾಗ್​ಗಳನ್ನು ಖರೀದಿಸಲಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ 10ರಿಂದ 13ಗೆ ರೂಪಾಯಿಗೆ ಸಿಗುವ ಬ್ಯಾಗ್​ಗಳನ್ನು ಜಿಲ್ಲಾಧಿಕಾರಿ 52 ರೂ. ನೀಡಿ ಖರೀದಿಸಿದ್ದಾರೆ. ಹೀಗಾಗಿ ಇದರಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮವಾಗಿದೆ ಎಂದು ಜೆಡಿಎಸ್​​ ನಾಯಕ ಸಾ.ರಾ.ಮಹೇಶ್ ಗಂಭೀರ ಆರೋಪ ಮಾಡಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಇಂಜಿನೀಯರ್‌ ಅನ್ಕೊಂಡೇ ಹೆಣ್ಮಕ್ಕಳಿಗೆ ಖೆಡ್ಡಾ

ಬೆಂಗಳೂರು, (ಏಪ್ರಿಲ್ 13): ಮದುವೆಯನ್ನೇ ಒಂದು ವ್ಯವಹಾರ ಮಾಡಿಕೊಂಡಿದ್ದ ಕಾಮುಕ ಇಂಜಿನಿಯರ್ ಒಬ್ಬನ ಸರಣಿ ವಂಚನೆಗಳು ಬಟಾಬಯಲಾಗಿವೆ.. ಇಬ್ಬರು ಯುವತಿಯರನ್ನು ಮದುವೆಯಾಗಿ, ಮತ್ತೊಬ್ಬಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಅಮಾಯಕ ಹೆಣ್ಣುಮಕ್ಕಳ ಜೀವನದ ಜೊತೆ ಆಟವಾಡುತ್ತಿದ್ದ ರವಿಗೆ ಧರ್ಮದೇಟು ಬಿದ್ದಿವೆ. ತುಮಕೂರಿನ ಚಿಕ್ಕನಾಯಕನಹಳ್ಳಿ ಮೂಲದ ರವಿ, ಬೆಂಗಳೂರಿನ ಜಿಗಣಿ ಬಳಿಯ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದು, 2024ರ ಜನವರಿಯಲ್ಲಿ ಒಂದು ಮದುವೆಯಾಗಿದೆ. ಬಳಿಕ ಆಕೆ ಗರ್ಭಿಣಿಯಾದಾಗ ರವಿ ತನ್ನ ಆಟ ಶುರು ಮಾಡಿಕೊಂಡಿದ್ದ. ಮೊದಲ ಪತ್ನಿ ಗರ್ಭಿಣಿ ಆಗಿರುವಾಗ್ಲೇ ಹುಡುಗಿ ನೋಡೋಕೆ ಶುರು ಮಾಡಿದ್ದ ರವಿ, ತನಗಿನ್ನು ಮದುವೆ ಆಗಿಲ್ಲ ಎಂದು ತನ್ನ ಕುಟುಂಬದವರ ಜೊತೆ ಊರೂರು ಸುತ್ತುತ್ತಿದ್ದ. ಅಲ್ಲದೇ ಅಕ್ಟೋಬರ್ ನಲ್ಲಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದ. ಹೀಗೆ ಈತ ಶರ್ಟ್ ಬದಲಿಸೋ ರೀತಿ ಹೆಣ್ಣು ಮಕ್ಕಳನ್ನ ಬದಲಿಸುವ ಕಾಮುಕ ರವಿ ವಿರುದ್ಧ ಈಗ ಜಿಗಣಿ (Jigani) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೊದಲ ಪತ್ನಿ ಗರ್ಭಿಣಿಯಾದಾಗಲೇ ಮತ್ತೊಬ್ಬಳ ಜತೆ ನಿಶ್ಚಿತಾರ್ಥ! ಏಟು ಬಿದ್ದರೂ ಮತ್ತೆ ಮದುವೆಯಾದ ಎಂಜಿನಿಯರ್ ಕಥೆ ಏನಾಯ್ತು ಗೊತ್ತೇ?

Source link

ಏನ್ ಅದೃಷ್ಟ ನೋಡಿ ಈ 6 ರಾಶಿಯವರದ್ದು!: ಊಹೆಗೂ ಮೀರಿದ ಜವಾಬ್ದಾರಿ, ಜಯ

ಗ್ರಹಗಳ ಪ್ರಭಾವ ಮತ್ತು ರಾಜಕೀಯ ಸಮೀಕರಣ

​ಪ್ರಸ್ತುತ ಆಕಾಶಮಂಡಲದಲ್ಲಿ ಗುರುವು ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ಮತ್ತು ಶನಿಯು ಮೀನ ರಾಶಿಯಲ್ಲಿ ಇರುವುದು ರಾಜ್ಯದ ಆಡಳಿತಾರೂಢರಿಗೆ ಸವಾಲು ಮತ್ತು ಅವಕಾಶ ಎರಡನ್ನೂ ಒಟ್ಟಿಗೆ ತರುತ್ತಿದೆ. ಗುರುವಿನ ಪ್ರಭಾವದಿಂದಾಗಿ ಹೊಸ ಯೋಜನೆಗಳ ಘೋಷಣೆಯಾಗಬಹುದು, ಆದರೆ ಶನಿಯ ಪ್ರಭಾವದಿಂದಾಗಿ ಆ ಯೋಜನೆಗಳ ಅನುಷ್ಠಾನದಲ್ಲಿ ವಿರೋಧ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಲಿದೆ.

​ಗೆಲುವು ಪಡೆಯುವ ರಾಶಿಗಳು:

​ಮೇಷ :

ಸೂರ್ಯನು ನಿಮ್ಮ ರಾಶಿಯಲ್ಲಿ ಉಚ್ಚ ಸ್ಥಾನದಲ್ಲಿರುವುದರಿಂದ, ಈ ರಾಶಿಯ ನಾಯಕರಿಗೆ ಸಿಂಹ ಬಲ ಬರಲಿದೆ. ಅನಿರೀಕ್ಷಿತವಾಗಿ ದೊಡ್ಡ ಜವಾಬ್ದಾರಿಗಳು ಹುಡುಕಿಕೊಂಡು ಬರಬಹುದು. ಸರ್ಕಾರಿ ಮಟ್ಟದ ಮಾತುಕತೆಗಳಲ್ಲಿ ನಿಮ್ಮದೇ ಮೇಲುಗೈ ಆಗಲಿದೆ.

​ಕುಂಭ :

ನಿಮ್ಮ ರಾಶ್ಯಾಧಿಪತಿ ಶನಿಯು ಎರಡನೇ ಮನೆಯಲ್ಲಿರುವುದರಿಂದ ಆರ್ಥಿಕ ಮತ್ತು ಸಂಪನ್ಮೂಲ ಕ್ರೋಢೀಕರಣದಲ್ಲಿ ಯಶಸ್ಸು ಸಿಗಲಿದೆ. ಗುಪ್ತವಾಗಿ ನಡೆಸುವ ರಾಜಕೀಯ ತಂತ್ರಗಳು ಫಲಪ್ರದವಾಗಲಿವೆ.

​ಮಿಶ್ರ ಫಲದ ರಾಶಿಗಳು:

​ಕರ್ಕಾಟಕ :

ಚಂದ್ರನ ಚಲನೆಯಿಂದಾಗಿ ವಾರದ ಆರಂಭದಲ್ಲಿ ಅಸ್ಥಿರತೆ ಇರಲಿದ್ದರೂ, ವಾರಾಂತ್ಯಕ್ಕೆ ಪರಿಸ್ಥಿತಿ ಸುಧಾರಿಸಲಿದೆ. ಸಾರ್ವಜನಿಕ ಭಾಷಣ ಮಾಡುವಾಗ ಎಚ್ಚರವಿರಲಿ; ಮಾತು ತಪ್ಪಾಗಿ ಅರ್ಥೈಸಲ್ಪಡಬಹುದು.

​ಮಕರ :

ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ, ಆದರೆ ವಿರೋಧಿಗಳ ಕುತಂತ್ರದಿಂದಾಗಿ ಗೆಲುವು ಸ್ವಲ್ಪ ವಿಳಂಬವಾಗಬಹುದು. ತಾಳ್ಮೆಯೇ ನಿಮ್ಮ ಯಶಸ್ಸಿನ ಮಂತ್ರ.

​ಸೋಲುವ ರಾಶಿಗಳು:

​ಕನ್ಯಾ :

ಸಪ್ತಮ ಸ್ಥಾನದಲ್ಲಿ ರಾಹುವಿನ ಸಂಚಾರವಿರುವುದರಿಂದ ಮಿತ್ರ ಪಕ್ಷಗಳಿಂದ ಅಥವಾ ಆಪ್ತರಿಂದಲೇ ನಂಬಿಕೆ ದ್ರೋಹವಾಗುವ ಸಾಧ್ಯತೆಯಿದೆ. ಒಪ್ಪಂದಗಳಿಗೆ ಸಹಿ ಹಾಕುವ ಮುನ್ನ ಎಚ್ಚರಿಕೆ ಅಗತ್ಯ.

​ಮಿಥುನ :

ಹತ್ತನೇ ಮನೆಯಲ್ಲಿ ರಾಹು-ಬುಧರ ಯುತಿಯಿಂದಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಗೊಂದಲ ಉಂಟಾಗಬಹುದು. ತಪ್ಪು ಮಾಹಿತಿಯ ಆಧಾರದ ಮೇಲೆ ನೀವು ಇಡುವ ಹೆಜ್ಜೆ ರಾಜಕೀಯವಾಗಿ ದೊಡ್ಡ ಬೆಲೆ ತೆರುವಂತೆ ಮಾಡಬಹುದು.

ವಿಶೇಷ ಸೂಚನೆ ಎಂದರೆ ಮಂಗಳನು ಶನಿಯೊಂದಿಗೆ ಯುತಿಯಲ್ಲಿರುವುದರಿಂದ ರಾಜಕೀಯ ವಲಯದಲ್ಲಿ ತೀವ್ರ ಸ್ವರೂಪದ ವಾಕ್ಸಮರ ಅಥವಾ ಆಂತರಿಕ ಬಂಡಾಯ ಏಳುವ ಸಾಧ್ಯತೆಯಿದೆ. ಹಳೆಯ ನಾಯಕರ ಪ್ರಭಾವ ಕಡಿಮೆಯಾಗಿ, ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ಸಿಗುವಂತಹ ಬೆಳವಣಿಗೆಗಳು ತೆರೆಮರೆಯಲ್ಲಿ ನಡೆಯಲಿವೆ.

​ಈ ಬದಲಾವಣೆಗಳು ವಿಶೇಷವಾಗಿ ಏಪ್ರಿಲ್ ೧೪ರ ಸೌರಮಾನ ಯುಗಾದಿ ಅನಂತರ ವೇಗ ಪಡೆಯಲಿವೆ.

– ಲೋಹಿತ ಹೆಬ್ಬಾರ್

Source link

ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ

ದಾವಣಗೆರೆ, (ಏಪ್ರಿಲ್ 13): ಪಂಚಮಸಾಲಿ ಮಠದಲ್ಲಿ ಲೆಕ್ಕ ಕೊಡಿ ಅಭಿಯಾನ ಮುಂದುವರೆದಿದೆ. ಈ ಸಂಬಂಧ ಇದೀಗ ಪೀಠದಿಂದ ವಚನಾನಂದ ಸ್ವಾಮೀಜಿಗಳನ್ನ (vachanananda swamiji) ಉಚ್ಛಾಟನೆ ಮಾಡಲಾಗಿದೆ. ಇದರಿಂದ ದಾವಣಗೆರೆ (Davanagere) ಜಿಲ್ಲೆಯ ಹರಿಹರದ ಪಂಚಮಸಾಲಿ ಗುರುಪೀಠ ಈಗ ಅಕ್ಷರಶಃ ರಣಾಂಗಣವಾಗಿದೆ. ಮಠದ ಟ್ರಸ್ಟಿಗಳಿಗೆ ‘ಲೆಕ್ಕ ಕೊಡಿ ಎಂದು ಭಕ್ತರು ನಡೆಸುತ್ತಿರುವ ಅಭಿಯಾನ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಟ್ರಸ್ಟಿಗಳಿಗೆ ಚಪ್ಪಲಿ ತೋರಿಸಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಮಠದ ಆವರಣದಲ್ಲಿ ತಳ್ಳಾಟ, ನೂಕಾಟ ಶುರುವಾಗಿದ್ದು, ಈ ಸಂದರ್ಭದಲ್ಲಿ ವಚನಾನಂದ ಸ್ವಾಮೀಜಿ ಕೈಗೆ ಗಾಯವಾಗಿದೆ. ಇದರಿಂದ ಕೆರಳ ಸ್ವಾಮೀಜಿ ಪೊಲೀಸರ ಜತೆ ವಾಗ್ದಾದಕ್ಕಿಳಿದು.

ಇದನ್ನೂ ಓದಿ: ವಚನಾನಂದ ಸ್ವಾಮೀಜಿ ಉಚ್ಛಾಟನೆ: ಕಠಿಣ ನಿರ್ಧಾರಕ್ಕೆ ಹಲವು ಕಾರಣ ಕೊಟ್ಟ ಧರ್ಮದರ್ಶಿ ಸಮಿತಿ

Source link

ಬಿಸಿಲಿಂದ ದೂರವಿರಿ; ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆ

ನವದೆಹಲಿ, ಏಪ್ರಿಲ್ 13: ಭಾರತದಾದ್ಯಂತ ಉಷ್ಣ ಅಲೆಗಳ (Heatwave) ಪರಿಸ್ಥಿತಿ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಭಾರತದಾದ್ಯಂತ ತಾಪಮಾನವು ಏರುತ್ತಲೇ ಇರುವುದರಿಂದ ಈ ವಾರ ಶಾಖ ಹೆಚ್ಚಾಗುವ ಸಾಧ್ಯತೆಯಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹೆಚ್ಚಿನ ಪ್ರದೇಶಗಳಲ್ಲಿ ಬೇಸಿಗೆಯ ಶಾಖ ಹೆಚ್ಚಾಗಲಿದೆ. ಈ ಬಗ್ಗೆ ಇಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದ್ದು, ಏಪ್ರಿಲ್ 17ರ ವೇಳೆಗೆ ದೆಹಲಿಯು ಗರಿಷ್ಠ 41 ಡಿಗ್ರಿ ಸೆಲ್ಸಿಯಸ್ ಅನ್ನು ಮುಟ್ಟಲಿದೆ.

ಏಪ್ರಿಲ್ 18ರವರೆಗೆ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನ 4ರಿಂದ 6 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ. ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢ ಸೇರಿದಂತೆ ಮಧ್ಯ ಭಾಗಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ 3ರಿಂದ 5 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ. ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿಯೂ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ: ಏನೇನು ಮುನ್ನೆಚ್ಚರಿಕೆ ವಹಿಸಬೇಕು? ನೀವು ಮಾಡಬೇಕಾದ್ದಿಷ್ಟು…

ಒಡಿಶಾ, ಗುಜರಾತ್ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿ ವಾತಾವರಣ ಇರಲಿದೆ. ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಇದೇ ರೀತಿಯ ಪರಿಸ್ಥಿತಿಗಳು ಕಂಡುಬರುವ ನಿರೀಕ್ಷೆಯಿದೆ. ಈಶಾನ್ಯದಲ್ಲಿ ಮಳೆ, ಗುಡುಗು ಸಹಿತ ಮಳೆಯಾಗಲಿದೆ. ಈಶಾನ್ಯ ಭಾರತದಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮುಂಬರುವ ದಿನಗಳಲ್ಲಿ ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ (ಗಂಟೆಗೆ 30–50 ಕಿ.ಮೀ) ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಈ ವಾರದ ಕೆಲವು ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿಯೂ ಸಹ ಕೆಲವು ದಿನಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: Karnataka Weather: ಮುಂದಿನ 2 ದಿನಗಳ ಕಾಲ ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ, 6 ಜಿಲ್ಲೆಗಳಲ್ಲಿ ಉಷ್ಣ ಅಲೆ

ಕರ್ನಾಟಕ, ಕೇರಳ ಮತ್ತು ಕರಾವಳಿ ಆಂಧ್ರಪ್ರದೇಶ ಸೇರಿದಂತೆ ದಕ್ಷಿಣ ರಾಜ್ಯಗಳ ಕೆಲವು ಸ್ಥಳಗಳಲ್ಲಿ ಭಾರೀ ಉಷ್ಣ ಅಲೆಯ ನಿರೀಕ್ಷೆಯಿದೆ. ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅರಹಳ್ಳಿ ಕೆರೆಯಲ್ಲಿ ದುರಂತ: ಮಕ್ಕಳನ್ನು ರಕ್ಷಿಸಲು ಹೋಗಿ ಜೀವ ತೆತ್ತ ಮಹಿಳೆಯರು

ಕೋಲಾರ, ಏಪ್ರಿಲ್​ 13: ಕೆರೆಗೆ ಬಿದ್ದಿದ್ದ ಮಕ್ಕಳನ್ನ ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲಾದ (death) ಘಟನೆ ಕೋಲಾರದ ಅರಹಳ್ಳಿ ಕೆರೆಯಲ್ಲಿ ನಡೆದಿದೆ. ಮೊಹಮದಿ(25) ಮತ್ತು ಸಲ್ಮಾ (26) ನೀರುಪಾಲಾದ ಮಹಿಳೆಯರು. ಮೃತ ಮಹಿಳೆಯರು ನಿಸಾರ್ ನಗರದ ನಿವಾಸಿಗಳು. ಸದ್ಯ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದಿದ್ದೇನು?

ಕೋಲಾರದ ಅರಹಳ್ಳಿ ಕೆರೆಗೆ ಮಹಿಳೆಯರು ಸೇರಿದಂತೆ ಮಕ್ಕಳು ಬಟ್ಟೆ ತೊಳೆಯಲು ಹೋಗಿದ್ದಾರೆ. ಈ ವೇಳೆ  ಮಕ್ಕಳು ನೀರಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಣೆ ಮಾಡಲು ನೀರಿಗೆ ಇಳಿದ ಮೊಹಮದಿ ಮತ್ತು ಸಲ್ಮಾ ಸಾವನ್ನಪ್ಪಿದ್ದಾರೆ. ಮನೆಯಲ್ಲಿ ಕಾರ್ಯಕ್ರಮ ಹಿನ್ನೆಲೆ ಸಲ್ಮಾ ಬೆಂಗಳೂರಿಂದ ಬಂದಿದ್ದರು.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರು, ಯುವಕ ಸಾವು!

ಇನ್ನು ನೂತನವಾಗಿ ನಿರ್ಮಾಣವಾಗಿರುವ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಕೃಷ್ಣಾವರಂ ಗ್ರಾಮದ ಸಮೀಪ ಈ ದುರ್ಘಟನೆ ನಡೆದಿದೆ. ಬೆಂಗಳೂರಿನಿಂದ ಚೆನ್ನೈ ಕಡೆಗೆ ತೆರಳುತ್ತಿದ್ದ ಕ್ರೆಟಾ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಮಧ್ಯದ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ಇದನ್ನೂ ಓದಿ: ಜಲ ಕಂಟಕ: ಕರ್ನಾಟಕದಲ್ಲಿ ಸೋಮವಾರ ಒಂದೇ ದಿನ 10 ಮಂದಿ ನೀರು ಪಾಲು

ಅಪಘಾತದಲ್ಲಿ ಬೆಂಗಳೂರು ಮೂಲದ ದೇವಾನಂದ್ (24) ಎಂಬುವವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಸರ್ವೇಶ್ ಎಂಬುವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಪ್ರಯಾಣಿಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಬೇತಮಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಪಘಾತಕ್ಕೀಡಾದ ವಾಹನವನ್ನು ರಸ್ತೆಯಿಂದ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಅತಿಯಾದ ವೇಗವೇ ಈ ಅಪಘಾತಕ್ಕೆ ಪ್ರಾಥಮಿಕ ಕಾರಣ ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಜನ ನಾಯಗನ್’ ರೀತಿ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ‘ಕೆಡಿ’ ಸಿನಿಮಾಗೂ ಸೆನ್ಸಾರ್ ಸಮಸ್ಯೆ

‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ನಿರ್ಮಾಣ ಮಾಡಿರುವ ‘ಜನ ನಾಯಗನ್’ ಸಿನಿಮಾಗೆ ಸೆನ್ಸಾರ್ ಸಮಸ್ಯೆ ಆಗಿರುವುದು ಗೊತ್ತೇ ಇದೆ. ಈಗ ಅದೇ ನಿರ್ಮಾಣ ಸಂಸ್ಥೆಯ ‘ಕೆಡಿ’ ಸಿನಿಮಾ (KD Movie) ಕೂಡ ಇದೇ ರೀತಿಯ ಸಮಸ್ಯೆಗೆ ಸಿಲುಕಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ನಟಿಸಿದ್ದು, ಜೋಗಿ ಪ್ರೇಮ್ ಅವರು ನಿರ್ದೇಶನ ಮಾಡಿದ್ದಾರೆ. ಚಿತ್ರದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿದ್ದಂತೆಯೇ ಹೊಸ ಸಂಕಷ್ಟ ಶುರುವಾಗಿದೆ. ಚಿತ್ರತಂಡದ ಗಮನಕ್ಕೂ ಬಾರದಂತೆ ಈ ಸಿನಿಮಾವನ್ನು ಸೆನ್ಸಾರ್ (Censor) ಮಂಡಳಿಯ ರಿವೈಸಿಂಗ್ ಕಮಿಟಿಗೆ ಕಳಿಸಲಾಗಿದೆ.

‘ಕೆಡಿ’ ಸಿನಿಮಾವನ್ನು ಈಗಾಗಲೇ ಪ್ರಾದೇಶಿಕ ಸೆನ್ಸಾರ್ ಮಂಡಳಿ ಸದಸ್ಯರು ವೀಕ್ಷಿಸಿದ್ದಾರೆ. ಈ ಸಿನಿಮಾದಲ್ಲಿ ಸಾಕಷ್ಟು ರಕ್ತಪಾತ ಇರುವುದರಿಂದ ಸೆನ್ಸಾರ್ ಮಂಡಳಿ ‘ಎ’ ಪ್ರಮಾಣಪತ್ರ ನೀಡಲು ಸಜ್ಜಾಗಿತ್ತು. ಹಾಡಿನ ಸಾಹಿತ್ಯದಲ್ಲಿ ಕೆಲವು ಸಾಲುಗಳನ್ನು ಬದಲಾಯಿಸುವಂತೆ ಸೂಚಿಸಲಾಗಿತ್ತು. ಅದನ್ನು ಚಿತ್ರತಂಡ ಕೂಡ ಒಪ್ಪಿಕೊಂಡಿತ್ತು. ಆದರೆ ಅಂತಿಮವಾಗಿ ಈ ಚಿತ್ರಕ್ಕೆ ಪ್ರಮಾಣಪತ್ರ ನೀಡಿಲ್ಲ.

ಪ್ರಾದೇಶಿಕ ಸೆನ್ಸಾರ್ ಮಂಡಳಿಯು ‘ಎ’ ಪ್ರಮಾಣಪತ್ರ ನೀಡುವ ಬದಲು ಮುಂಬೈನಲ್ಲಿರುವ ಕೇಂದ್ರ ಸೆನ್ಸಾರ್ ಮಂಡಳಿ ಹಾಗೂ ರಿವೈಸಿಂಗ್ ಕಮಿಟಿಗೆ ಸಿನಿಮಾವನ್ನು ಕಳಿಸಲಾಗಿದೆ. ನಿರ್ದೇಶಕರಿಗಾಗಲೀ, ನಿರ್ಮಾಣ ಸಂಸ್ಥೆಗಾಗಲಿ ತಿಳಿಸದೆಯೇ ‘ಕೆಡಿ’ ಚಿತ್ರವನ್ನು ರಿವೈಸಿಂಗ್ ಕಮಿಟಿಗೆ ಕಳಿಸಿದ್ದು ಚಿತ್ರತಂಡದ ಅಸಮಾಧಾನಕ್ಕೆ ಕಾರಣ ಆಗಿದೆ. ಸೆನ್ಸಾರ್ ಮಂಡಳಿಯಿಂದ ನಿಯಮ ಉಲ್ಲಂಘನೆ ಆಗಿದೆ ಎಂದು ಚಿತ್ರತಂಡ ಆರೋಪಿಸಿದೆ.

ದೊಡ್ಡ ಬಜೆಟ್​ನಲ್ಲಿ ‘ಕೆಡಿ’ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ಒಂದು ವೇಳೆ ಸೆನ್ಸಾರ್ ಪ್ರಮಾಣಪತ್ರ ಸಿಗುವುದು ವಿಳಂಬವಾದರೆ ಚಿತ್ರದ ಬಿಡುಗಡೆ ದಿನಾಂಕ ಬದಲಾಗುವ ಸಾಧ್ಯತೆ ಇರುತ್ತದೆ. ಈಗಾಗಲೇ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ‘ಜನ ನಾಯಗನ್’ ಸಿನಿಮಾ ಈ ತೊಂದರೆಯನ್ನು ಅನುಭವಿಸಿದೆ. ರಾಜಕೀಯದ ಕಾರಣದಿಂದ ಸಿನಿಮಾಗೆ ತೊಂದರೆ ಮಾಡಲಾಗಿದೆ ಎಂಬ ಅಭಿಪ್ರಾಯ ಇದೆ.

ಇದನ್ನೂ ಓದಿ: ‘ಕೆಡಿ’ ಹಾಡಿಗಿಂತಲೂ ಅಶ್ಲೀಲ ಸಾಹಿತ್ಯ: ‘ವಾಲ್ಯೂಮ್ 1’ ಡಿಲೀಟ್ ಮಾಡುವಂತೆ ಕೋರ್ಟ್ ಆದೇಶ

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ’ ಹಾಡು ಬಿಡುಗಡೆ ಆಗಾದ ಕೂಡ ಸಾಕಷ್ಟು ವಿವಾದ ಸೃಷ್ಟಿ ಆಗಿತ್ತು. ಆ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ ಇದೆ ಎಂಬ ಕಾರಣಕ್ಕೆ ದೇಶಾದ್ಯಂತ ವಿರೋಧ ವ್ಯಕ್ತವಾಗಿತ್ತು. ಮಹಿಳಾ ಆಯೋಗ ಕೂಡ ಚಿತ್ರತಂಡಕ್ಕೆ ನೋಟಿಸ್ ನೀಡಿತ್ತು. ಅದರ ಪರಿಣಾಮವಾಗಿ ಪೂರ್ತಿ ಹಾಡನ್ನು ಡಿಲೀಟ್ ಮಾಡಬೇಕಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ನೀರ್‌ ಹತ್ರ ಯಾಕೆ ಹೋಗ್ತೀಯಾ; ನೀರಿಗೆ ಬಿದ್ದ ಕಂದಮ್ಮನನ್ನು ರಕ್ಷಿಸಿದ ತಾಯಿ ಸಿಂಹ

ತಾಯಿ (mother) ಪ್ರೀತಿಯೇ ಹಾಗೆ, ಬೆಲೆ ಕಟ್ಟಲು ಸಾಧ್ಯವಿಲ್ಲ. ಮೂಕ ಪ್ರಾಣಿಗಳು ತಮ್ಮ ಕಂದಮ್ಮಗಳನ್ನು ಪ್ರೀತಿಸುತ್ತವೆ, ಕಾಳಜಿ ವಹಿಸುತ್ತವೆ. ತಪ್ಪು ಮಾಡಿದರೆ ದಂಡಿಸುತ್ತವೆ. ಇದೀಗ ತಾಯಿ ಸಿಂಹವೊಂದು ನೀರಿಗೆ ಬಿದ್ದ ತನ್ನ ಕಂದನನ್ನು ರಕ್ಷಿಸಿದೆ. ಈ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ತಾಯಿಯ ನಿಷ್ಕಲ್ಮಶ ಪ್ರೀತಿಗೆ ಕರಗಿ ಹೋಗಿದ್ದಾರೆ.

gulnara.de ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮೃಗಾಲಯದ ದೃಶ್ಯವನ್ನು ಕಾಣಬಹುದು. ಕೆರೆಗೆ ಬಿದ್ದ ಮರಿಯನ್ನು ಹೆಣ್ಣು ಸಿಂಹವೊಂದು ರಕ್ಷಣೆ ಮಾಡಿದೆ. ಇದೇ ವೇಳೆ ಗಂಡು ಸಿಂಹವೂ ಅಡ್ಡಿ ಪಡಿಸಿದೆ.  ಆದರೆ ಗಂಡು ಸಿಂಹದೊಂದಿಗೆ ಜಗಳಕ್ಕಿಳಿದ ಹೆಣ್ಣು ಸಿಂಹವೊಂದು ಕೊನೆಗೂ ತನ್ನ ಮರಿಯನ್ನು ನೀರಿನಿಂದ ಮೇಲೆತ್ತಿ ರಕ್ಷಿಸಿರುವ ದೃಶ್ಯವನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತನ್ನ ಕಂದಮ್ಮನಿಗೆ ನೀರು ಕೊಟ್ಟು ಬಾಯಾರಿಕೆ ನೀಗಿಸಿದ ಯುವಕನಿಗೆ ಧನ್ಯವಾದ ತಿಳಿಸಿದ ಯುವಕ

ಈ ವಿಡಿಯೋ 3.5 ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ತಾಯಿಗಿಂತ ನಮ್ಮನ್ನು ಸದಾ ಕಾಪಾಡುವ ಜೀವ ಮತ್ತೊಂದಿಲ್ಲ ಎಂದು ಹೇಳಿದ್ದಾರೆ. ಇನ್ನೊಬ್ಬರು, ನಂಗೆ ಒಂದು ಕ್ಷಣ ಗಾಬರಿಯಾಯ್ತು, ಒಳ್ಳೆಯ ತಾಯಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಎಲ್ಲಾ ಗಂಡಸರು ಒಂದೇ ರೀತಿ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ: ವಿದ್ಯಾರ್ಥಿಗಳ ಪ್ರಶ್ನೆಗೆ ನೀಡ್ತಾರೆ ಫಟಾಫಟ್​​ ಉತ್ತರ!

ಉಡುಪಿ, ಏಪ್ರಿಲ್​​ 13: ಜಿಲ್ಲೆಯ ಅತ್ಯಂತ ಹಿಂದುಳಿದ ತಾಲೂಕು ಎನ್ನುವ ಹಣೆಪಟ್ಟಿ ಹೊತ್ತಿರುವ ಬೈಂದೂರು ತಾಲೂಕಿನ ಸರಕಾರಿ ಶಾಲೆ ರಾಜ್ಯದ ಉಳಿದ ಶಾಲೆಗಳು ಮೂಗಿನ ಮೇಲೆ ಬೆರಳಿಡುವ ಕೆಲಸ ಮಾಡಿದೆ. ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳು ಹಾಗೂ ತಂತ್ರಜ್ಞಾನ ಆಧಾರಿತ ನವೀನ ಸಾಧನಗಳ ಮೂಲಕ ಈಗಾಗಲೇ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಬೈಂದೂರು ವಲಯದ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ರಾಜ್ಯದಲ್ಲೇ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಬೋಧನೆಗಾಗಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಶಿಕ್ಷಕಿ ಐರಿಸ್​​ನ ಪರಿಚಯಿಸಿದೆ. 2026-27ನೇ ಶೈಕ್ಷಣಿಕ ವರ್ಷದಿಂದ ಇದು ವಿದ್ಯಾರ್ಥಿಗಳಿಗೆ ನೇರ ಬೋಧನೆ ಆರಂಭಿಸುವ ನಿರೀಕ್ಷೆಯಿದೆ. ಈಗಾಗಲೇ ರೋಬೋಟ್​​ನ ಕಾರ್ಯನಿರ್ವಹಣೆಗೆ ಸಜ್ಜುಗೊಳಿಸುವ ತರಬೇತಿ ಹಾಗೂ ತಾಂತ್ರಿಕ ವ್ಯವಸ್ಥೆಗಳ ಅಳವಡಿಕೆ ಕಾರ್ಯ ಶುರುವಾಗಿದೆ. ಐರಿಸ್ ಎಐ ಶಿಕ್ಷಕಿ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಸಂವಾದ ನಡೆಸುವ ಸಾಮರ್ಥ್ಯ ಹೊಂದಿದ್ದು, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ತಕ್ಷಣ ಪ್ರತಿಕ್ರಿಯೆ ನೀಡುವ ಮೂಲಕ ವೈಯಕ್ತಿಕ ಕಲಿಕೆಯ ಅನುಭವವನ್ನು ಒದಗಿಸಲಿದೆ. ಸೀರೆ ಧಾರಣೆಯೊಂದಿಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಐರಿಸ್, ಕೈಕುಲುಕಿ ಮಾತನಾಡುವಂತಹ ವೈಶಿಷ್ಟ್ಯಗಳಿಂದ ಮಕ್ಕಳ ಗಮನ ಸೆಳೆಯುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version