Maha Shivaratri 2026: ಮಹಾ ಶಿವರಾತ್ರಿಯಂದು ಮೂರು ಶಕ್ತಿಶಾಲಿ ರಾಜಯೋಗ ರೂಪು; ಈ ರಾಶಿಗೆ ಅದೃಷ್ಟ

ಮಹಾ ಶಿವರಾತ್ರಿ ಕೇವಲ ಒಂದು ಧಾರ್ಮಿಕ ಹಬ್ಬ ಮಾತ್ರವಲ್ಲ, ಅದು ಆಧ್ಯಾತ್ಮಿಕ ಹಾಗೂ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದಲೂ ಅತ್ಯಂತ ಮಹತ್ವದ್ದಾಗಿದೆ. ಶಿವನ ಆರಾಧನೆಗೆ ಮೀಸಲಾದ ಈ ಪವಿತ್ರ ದಿನವು ಮನಸ್ಸಿನ ಶುದ್ಧೀಕರಣ, ಪಾಪಕ್ಷಯ ಮತ್ತು ಜೀವನದಲ್ಲಿ ಹೊಸ ಆರಂಭಕ್ಕೆ ಸಂಕೇತವಾಗಿದೆ. ಈ ವರ್ಷ ಫೆಬ್ರವರಿ 15ರಂದು ಆಚರಿಸಲಾಗುವ ಮಹಾ ಶಿವರಾತ್ರಿ ವಿಶೇಷ ಗ್ರಹಸ್ಥಿತಿಗಳ ಕಾರಣದಿಂದ ಅಪರೂಪದ ಮಹತ್ವವನ್ನು ಪಡೆದುಕೊಂಡಿದೆ. ಈ ದಿನ ಚತುರ್ಗ್ರಹಿ ಯೋಗ, ಬುಧಾದಿತ್ಯ ಯೋಗ ಮತ್ತು ಸರ್ವಾರ್ಥ ಸಿದ್ಧಿ ಯೋಗ ಎಂಬ ಮೂರು ಶಕ್ತಿಶಾಲಿ ರಾಜಯೋಗಗಳು ರೂಪುಗೊಳ್ಳುತ್ತಿದ್ದು, ಇವು ಕೆಲವು ರಾಶಿಗಳ ಜೀವನದಲ್ಲಿ ಅದೃಷ್ಟದ ಬಾಗಿಲು ತೆರೆಯುವ ಸಾಧ್ಯತೆ ಇದೆ ಎಂದು ಜ್ಯೋತಿಷಿಗಳು ತಿಳಿಸಿದ್ದಾರೆ. ಆರ್ಥಿಕ ಲಾಭ, ವೃತ್ತಿ ಬೆಳವಣಿಗೆ, ಮನಶ್ಶಾಂತಿ ಮತ್ತು ಕುಟುಂಬ ಸುಖದಂತಹ ಅನೇಕ ಶುಭ ಫಲಿತಾಂಶಗಳು ಈ ಅವಧಿಯಲ್ಲಿ ಕಾಣಿಸಿಕೊಳ್ಳಬಹುದು.

ಮೇಷ ರಾಶಿ:

ಮೇಷ ರಾಶಿಯವರಿಗೆ ಈ ಮಹಾ ಶಿವರಾತ್ರಿ ಹೊಸ ಆಶಾಕಿರಣ ತರಲಿದೆ. ದೀರ್ಘಕಾಲದಿಂದ ಕಾಡುತ್ತಿದ್ದ ಆರ್ಥಿಕ ಸಮಸ್ಯೆಗಳು ಕ್ರಮೇಣ ನಿವಾರಣೆಯಾಗಲಿದೆ. ಸ್ಥಗಿತಗೊಂಡ ಕೆಲಸಗಳು ಮತ್ತೆ ಚೇತರಿಸಿಕೊಂಡು ಮುಂದುವರಿಯಲಿದೆ. ಆದಾಯದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದ್ದು, ಮನೆ, ವಾಹನ ಅಥವಾ ಐಷಾರಾಮಿ ವಸ್ತುಗಳ ಖರೀದಿಗೆ ಅನುಕೂಲಕರ ಕಾಲವಾಗಿರುತ್ತದೆ. ಅವಿವಾಹಿತರಿಗೆ ಸೂಕ್ತ ಸಂಗಾತಿ ದೊರೆಯುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಓದಿನಲ್ಲಿ ಉತ್ತಮ ಸಾಧನೆ ತೋರಿಸಿ ಪರೀಕ್ಷೆಗಳಲ್ಲಿ ಯಶಸ್ಸು ಸಿಗಲಿದೆ. ಶನಿಯ ಪ್ರಭಾವ ಕಡಿಮೆಯಾಗುವುದರಿಂದ ಮಾನಸಿಕ ಒತ್ತಡವೂ ಇಳಿಯಲಿದೆ.

ಕನ್ಯಾ ರಾಶಿ:

ಕನ್ಯಾ ರಾಶಿಯವರಿಗೆ ಈ ಸಮಯ ಆರ್ಥಿಕ ಸ್ಥಿರತೆ ಮತ್ತು ಸಂತೋಷದ ಸಂಕೇತವಾಗಿರುತ್ತದೆ. ರಾಜಯೋಗಗಳ ಪರಿಣಾಮದಿಂದ ಆದಾಯದ ಹೊಸ ಮಾರ್ಗಗಳು ತೆರೆದಾಡುತ್ತವೆ. ಹಳೆಯ ಸಾಲಗಳು ಕಡಿಮೆಯಾಗುವ ಅಥವಾ ತೀರಿಸುವ ಅವಕಾಶಗಳು ಸಿಗಬಹುದು. ಕುಟುಂಬ ಜೀವನದಲ್ಲಿ ಸೌಹಾರ್ದ ಹೆಚ್ಚಾಗುತ್ತದೆ. ಮದುವೆಯಾಗದವರಿಗೆ ಉತ್ತಮ ಸಂಬಂಧದ ಮಾತುಕತೆಗಳು ಆರಂಭವಾಗಬಹುದು. ಮಕ್ಕಳ ಶಿಕ್ಷಣ ಮತ್ತು ವೃತ್ತಿಜೀವನದಲ್ಲೂ ಪ್ರಗತಿ ಕಾಣಬಹುದು. ಹಠಾತ್ ಲಾಭ ಅಥವಾ ಶುಭ ಸುದ್ದಿ ಜೀವನದಲ್ಲಿ ಸಂತೋಷದ ಕ್ಷಣಗಳನ್ನು ತರಬಹುದು.

ಇದನ್ನೂ ಓದಿ: ಈ ರಾಶಿಯವರು ತಪ್ಪಿಯೂ ಬೆಳ್ಳಿ ಧರಿಸಬೇಡಿ, ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು!

ಕುಂಭ ರಾಶಿ:

ಕುಂಭ ರಾಶಿಯವರಿಗೆ ಮಹಾ ಶಿವರಾತ್ರಿ ವಿಶೇಷವಾಗಿ ವೃತ್ತಿ ಮತ್ತು ಆಸ್ತಿ ಸಂಬಂಧಿತ ಕ್ಷೇತ್ರಗಳಲ್ಲಿ ಲಾಭಕರವಾಗಿರುತ್ತದೆ. ಉದ್ಯೋಗದಲ್ಲಿರುವವರಿಗೆ ಪದೋನ್ನತಿ ಅಥವಾ ಹೊಸ ಅವಕಾಶಗಳು ಸಿಗಲಿದೆ. ಉದ್ಯೋಗ ಹುಡುಕುತ್ತಿರುವವರಿಗೆ ಉತ್ತಮ ಅವಕಾಶಗಳು ಲಭ್ಯವಾಗುವ ಸೂಚನೆಗಳಿವೆ. ಮನೆ ಅಥವಾ ಭೂಮಿಯನ್ನು ಖರೀದಿಸಲು ಬಯಸುವವರಿಗೆ ಇದು ಸೂಕ್ತ ಕಾಲ. ಸಮಾಜದಲ್ಲಿ ಗೌರವ ಹಾಗೂ ಮನ್ನಣೆ ಹೆಚ್ಚಾಗುತ್ತದೆ. ದೀರ್ಘಾವಧಿಯ ಹೂಡಿಕೆಗಳಿಗೆ ಸಹ ಈ ಅವಧಿ ಅನುಕೂಲಕರವಾಗಿದ್ದು, ಆರೋಗ್ಯ ಮತ್ತು ಉತ್ಸಾಹವೂ ಉತ್ತಮವಾಗಿರುತ್ತದೆ.

ಒಟ್ಟಾರೆ, ಈ ಮಹಾ ಶಿವರಾತ್ರಿ ಕೇವಲ ಗ್ರಹಯೋಗಗಳ ದೃಷ್ಟಿಯಿಂದ ಮಾತ್ರವಲ್ಲ, ಭಕ್ತಿ ಮತ್ತು ಧ್ಯಾನದ ಮೂಲಕ ಜೀವನವನ್ನು ಬದಲಾಯಿಸುವ ಅಪರೂಪದ ಅವಕಾಶವಾಗಿದೆ. ಶಿವನನ್ನು ಶ್ರದ್ಧೆಯಿಂದ ಪೂಜಿಸಿ, ಸಕಾರಾತ್ಮಕ ಮನೋಭಾವದೊಂದಿಗೆ ನಿರ್ಧಾರಗಳನ್ನು ತೆಗೆದುಕೊಂಡರೆ, ಜೀವನದಲ್ಲಿ ಹೊಸ ಬೆಳಕು ಮತ್ತು ಯಶಸ್ಸು ಕಾಣಬಹುದು. ಶಿವನ ಕೃಪೆ ಇದ್ದರೆ ಕಷ್ಟಗಳು ದೂರಾಗಿ ಸಮೃದ್ಧಿಯ ದಾರಿ ತೆರೆದುಕೊಳ್ಳುತ್ತದೆ ಎಂಬ ನಂಬಿಕೆಯಿಂದ ಈ ಪವಿತ್ರ ದಿನವನ್ನು ಆಚರಿಸುವುದು ಅತ್ಯಂತ ಫಲಪ್ರದವಾಗಿರುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ವಿನಾಶ ಕಾಲೆ’ ಸಿನಿಮಾಗೆ ಸಾಥ್ ನೀಡಿದ ಮಲ್ಲಮ್ಮ, ಡಾಗ್ ಸತೀಶ್, ಕರಿಬಸಪ್ಪ – Kannada News | Bigg Boss Mallamma new movie Vinasha Kale muhurtha attended by Dog Satish and Karibasappa

‘ವಿನಾಶ ಕಾಲೆ ವಿಪರೀತ ಬುದ್ದಿ’ ಎಂಬ ಮಾತಿದೆ. ವೇದ ಸುಳ್ಳಾದರೂ ಗಾದೆ ಸುಳ್ಳಾಗಲ್ಲ ಎನ್ನುತ್ತಾರೆ. ‘ವಿನಾಶ ಕಾಲೆ’ (Vinasha Kale) ಎಂಬುದನ್ನೇ ಶೀರ್ಷಿಕೆಯಾಗಿ ಇಟ್ಟುಕೊಂಡು ಹೊಸ ಸಿನಿಮಾ ಮೂಡಿಬರುತ್ತಿದೆ. ಇತ್ತೀಚೆಗೆ ಈ ಸಿನಿಮಾಗೆ ಮುಹೂರ್ತ ಮಾಡಲಾಯಿತು. ರಾಜಾಜಿನಗರದ ಕೈಗಾರಿಕಾ ಕೇಂದ್ರದಲ್ಲಿರುವ ಮದ್ದುರಮ್ಮ ದೇವಿ ಹಾಗೂ ಯಲ್ಲಮ್ಮ ದೇವಿ ಸನ್ನಿಧಿಯಲ್ಲಿ ಮುಹೂರ್ತ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ.ಮ. ಹರೀಶ್ ಅವರು ಈ ಚಿತ್ರದ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಈ ವೇಳೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಸ್ಪರ್ಧಿಗಳಾದ ಕರಿಬಸಪ್ಪ, ಡಾಗ್ ಸತೀಶ್, ಮಲ್ಲಮ್ಮ (Mallamma) ಅವರು ಸಾಥ್ ನೀಡಿದರು.

‘ಶಕ್ತಿ ಫಿಲ್ಮ್ಸ್’ ಮೂಲಕ ‘ವಿನಾಶ ಕಾಲೆ’ ಸಿನಿಮಾ ನಿರ್ಮಾಣ ಆಗುತ್ತಿದೆ. ತುಮಕೂರು ಮೂಲದ ಎಸ್. ಕಿರಣ್‌ಕುಮಾರ್ ಅವರು ಕಳೆದ ಐದು ವರ್ಷಗಳಿಂದ ಹಲವು ನಿರ್ದೇಶಕರ ಬಳಿ ಅನುಭವ ಪಡೆದುಕೊಂಡು ಈಗ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಪಾವನಿ ಸಿರಿ, ರಿಷಿಕಾ ಗೌಡ, ವೈಷ್ಣವಿ, ರಚನಾ, ಶ್ರೀನಿಧಿ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಶೋಭ ಅವರು ಮಾಂತ್ರಿಕಳಾಗಿ ಕಾಣಿಸಿಕೊಳ್ಳಲಿದ್ದಾರೆ. ಮಂಡ್ಯಸಿದ್ದು ಅವರು ಅಘೋರಿ ಪಾತ್ರ ಮಾಡುತ್ತಿದ್ದಾರೆ. ಬಿಗ್ ಬಾಸ್ ಮಲ್ಲಮ್ಮ, ಪ್ರವಲಿಕಾ, ದಿಶಾ ಮುಂತಾದವರು ನಟಿಸುತ್ತಿದ್ದಾರೆ. ಪಾತ್ರವರ್ಗಕ್ಕೆ ಐದು ಹುಡುಗಿಯರು ಆಯ್ಕೆಯಾಗಿದ್ದಾರೆ. ಹುಡುಗರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಮಾರ್ಚ್ ತಿಂಗಳಿಂದ ಮೂವತ್ತು ದಿನಗಳ ಕಾಲ ಬೆಂಗಳೂರು, ಚಿಕ್ಕಮಗಳೂರು ಮುಂತಾದೆಡೆ ಶೂಟಿಂಗ್ ನಡೆಯುತ್ತದೆ.

ಮಂಜುಕವಿ ಅವರು ‘ವಿನಾಶ ಕಾಲೆ’ ಸಿನಿಮಾದ ಮೂರು ಹಾಡುಗಳಿಗೆ ಸಂಗೀತ ನೀಡಿ ಸಾಹಿತ್ಯ ಬರೆದಿದ್ದಾರೆ. ವಿನಯ್‌ ಗೌಡ ಛಾಯಾಗ್ರಹಣ ಮಾಡಲಿದ್ದಾರೆ. ಜೀವನ್ ಅವರು ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕರು ಈ ಸಿನಿಮಾದ ಕತೆ ಏನೆಂಬುದನ್ನು ವಿವರಿಸಿದರು. ಇದು ಸತ್ಯ ಘಟನೆ ಆಧಾರಿತ ಸಿನಿಮಾ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ

‘ಕಡಿಮೆ ಸಮಯದಲ್ಲಿ ದುಡ್ಡು ಮಾಡಬೇಕೆಂಬ ದುರಾಸೆಯಿಂದ ದೈವ ಸಂಬಂದಕ್ಕೆ ಕೈ ಹಾಕಿದರೆ ಏನೇನು ಅನಾಹುತಗಳು ನಡೆಯುತ್ತದೆ ಎಂಬುದು ಈ ಸಿನಿಮಾದಲ್ಲಿದೆ. ಮಧ್ಯಮ ವರ್ಗದ ಕುಟುಂಬದ ಹುಡುಗರು ಮತ್ತು ಹುಡುಗಿಯರು ಉದ್ಯೋಗ ಅರಸಿಕೊಂಡು ನಗರಕ್ಕೆ ಬರುತ್ತಾರೆ. ಇದರಿಂದ ಧಿಡೀರ್ ಶ್ರೀಮಂತರಾಗಲು ಕೆಟ್ಟ ಹಾದಿಗೆ ಹೋಗುತ್ತಾರೆ. ಅದರ ಪರಿಣಾಮದಿಂದ ಯಾವ ರೀತಿ ತತ್ತರಿಸಿ ಹೋಗುತ್ತಾರೆ ಎಂಬುದನ್ನು ಹಾರರ್ ಥ್ರಿಲ್ಲರ್ ಮಾದರಿಯಲ್ಲಿ ತೋರಿಸುತ್ತೇವೆ’ ಎಂದು ನಿರ್ದೇಶಕರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸ್ ಸಿಬ್ಬಂದಿ ಗರಂ: ವಿಡಿಯೋ ವೈರಲ್​ – Kannada News | Police Staff Angry at Woman Over Repeated Calls to 112 Helpline; Video Goes Viral

ಹಾಸನ, ಫೆಬ್ರವರಿ 08: ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸ್ ಸಿಬ್ಬಂದಿ ಗರಂ ಆಗಿ ರೇಗಾಡಿ ಗರಂ ಆಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಪತಿ ಮನೆಯವರ ಕಿರುಕುಳ ಎಂದು ಅರ್ಪಿತಾ ಎಂಬಾಕೆ 112ಕ್ಕೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದು ಮಹಿಳೆ ಸಮಸ್ಯೆ ಆಲಿಸಿ ದೂರು ನೀಡಲು ಸಿಬ್ಬಂದಿ ತಿಳಿಸಿದ್ದರೂ ಪದೇಪದೆ ಕರೆ ಮಾಡಿದ್ದಕ್ಕೆ ಮಹಿಳೆ ಜೊತೆಗೆ ಪೊಲೀಸ್ ಅಧಿಕಾರಿ ರೇಗಾಡಿದ್ದಾರೆ. ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯ ವಿಡಿಯೋ ವೈರಲ್​​ ಆಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ತೆಕ್ಕಲಕೋಟೆ ಬಳಿ ಉತ್ಖನನದಲ್ಲಿ ಸಿಕ್ತು ಒಂದರ ಪಕ್ಕದಲ್ಲೊಂದು 5 ಸಾವಿರ ವರ್ಷ ಹಳೆಯ ಅಸ್ಥಿಪಂಜರಗಳು! – Kannada News | Ancient Human Remains Discovered at Ballari Tekkalakote Excavation

ತೆಕ್ಕಲಕೋಟೆ ಬಳಿ ಉತ್ಖನನದಲ್ಲಿ ಸಿಕ್ತು ಒಂದರ ಪಕ್ಕದಲ್ಲೊಂದು 5 ಸಾವಿರ ವರ್ಷ ಹಳೆಯ ಅಸ್ಥಿಪಂಜರಗಳು!

ಬಳ್ಳಾರಿ, ಫೆಬ್ರುವರಿ 08: ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ನಡೆಯುತ್ತಿರುವ ಉತ್ಖನನದ (Excavation) ವೇಳೆ ಪ್ರಾಗೈತಿಹಾಸಿಕ ಕಾಲಕ್ಕೆ ಸೇರಿದ ಎರಡು ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ. ಅಮೆರಿಕಾದ ಹಾರ್ಟ್‌ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಹಾಗೂ ಉತ್ಖನನ ತಂಡದ ಸಹ ನಿರ್ದೇಶಕಿ ನಮಿತಾ ಎಸ್. ಸುಗಂಧಿ ನೇತೃತ್ವದ ಸಂಶೋಧಕರ ತಂಡ ಈ ಉತ್ಖನನ ಕಾರ್ಯವನ್ನು ನಡೆಸುತ್ತಿದೆ. ಕಳೆದ ವಾರ ಮಣ್ಣನ್ನು ಅಗೆದಾಗ ಮೊದಲು ಮಾನವ ಮೂಳೆಗಳು ಪತ್ತೆಯಾಗಿದ್ದು, ನಂತರ ಮತ್ತಷ್ಟು ಆಳವಾಗಿ ಅಗೆದಾಗ ಸುಮಾರು 5.5 ಅಡಿ ಉದ್ದದ ಎರಡು ಸಂಪೂರ್ಣ ಮಾನವ ಅಸ್ಥಿಪಂಜರಗಳು ಒಂದರ ಪಕ್ಕದಲ್ಲೊಂದು ಪತ್ತೆಯಾಗಿವೆ.

ಪಳೆಯುಳಿಕೆ ಸುತ್ತ ಮುತ್ತ ಮಡಿಕೆ ಚೂರುಗಳು ಪತ್ತೆ

ಅಸ್ಥಿಪಂಜರಗಳು ಯಾವುದೇ ರೀತಿಯಲ್ಲಿ ಹಾಳಾಗದೆ ಉತ್ತಮ ಸ್ಥಿತಿಯಲ್ಲಿ ದೊರೆತಿದ್ದು, ಮೃತದೇಹಗಳ ಮೇಲೆ ಕಲ್ಲುಗಳನ್ನು ಇಟ್ಟು ಶವಸಂಸ್ಕಾರ ಮಾಡಿದ ಪದ್ಧತಿಯ ಸ್ಪಷ್ಟ ಕುರುಹುಗಳು ಕಂಡುಬಂದಿವೆ. ಪಳೆಯುಳಿಕೆಗಳ ಸುತ್ತ ಮಡಿಕೆ ಚೂರುಗಳು, ಸೂಕ್ಷ್ಮ ಶಿಲಾಯುಗದ ಅವಶೇಷಗಳು ಹಾಗೂ ಮಾನವ ಆಯುಧ ಬಳಕೆಗೆ ಸಂಬಂಧಿಸಿದ ಸಾಕ್ಷ್ಯಗಳು ಪತ್ತೆಯಾಗಿವೆ. ಇದರಿಂದ ಇದು ನವಶಿಲಾಯುಗ ಅಥವಾ ಪ್ರಾಗೈತಿಹಾಸಿಕ ಕಾಲದ ಪ್ರಮುಖ ಮಾನವ ನೆಲೆ ಆಗಿರಬಹುದೆಂದು ತಜ್ಞರು ಅಂದಾಜಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ವೀಡಿಯೋ ನೋಡಿ

ಇದನ್ನೂ ಓದಿ Ballari: ತೆಕ್ಕಲಕೋಟೆ ಬಳಿ ಉತ್ಖನನದ ವೇಳೆ ಸಾವಿರಾರು ವರ್ಷಗಳ ಹಿಂದಿನ ಅಸ್ಥಿಪಂಜರ ಪತ್ತೆ

ಕಾರ್ಬನ್ ಡೇಟಿಂಗ್‌ಗೆ ನಿರ್ಧಾರ

ಪತ್ತೆಯಾದ ಅಸ್ಥಿಪಂಜರಗಳು ಸುಮಾರು 3,000 ರಿಂದ 5,000 ವರ್ಷಗಳ ಹಿಂದಿನವು ಆಗಿರಬಹುದೆಂದು ಹೇಳಲಾಗಿದ್ದು, ನಿಖರ ಕಾಲಮಾನದ ನಿರ್ಧಾರಕ್ಕಾಗಿ ಕಾರ್ಬನ್ ಡೇಟಿಂಗ್ ಪರೀಕ್ಷೆಗೆ ಒಳಪಡಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಉತ್ಖನನ ಕಾರ್ಯದ ನಿರ್ದೇಶಕರಾದ ಪರಂಪರೆ ಇಲಾಖೆ ಉಪ ನಿರ್ದೇಶಕ ಆರ್. ಶೇಜೇಶ್ವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತೆಕ್ಕಲಕೋಟೆ ಪ್ರದೇಶವನ್ನು ಸಂರಕ್ಷಿಸುವ ಅಗತ್ಯವಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Samudrik Shastra: ನಾಲಿಗೆ ಮೇಲೆ ಮಚ್ಚೆ ಇದ್ದವರು ಹೇಳಿದ್ದೆಲ್ಲ ನಿಜವಾಗುತ್ತಾ? ಸಾಮುದ್ರಿಕ ಶಾಸ್ತ್ರ ಹೇಳುವುದೇನು? – Kannada News | The Mystical Significance of Moles on the Tongue: A Look into Ancient Beliefs

ನಾಲಿಗೆ ಮೇಲೆ ಮಚ್ಚೆ ಇರುವವರ ಕುರಿತಾದ ನಂಬಿಕೆಗಳು ನಮ್ಮ ಸಮಾಜದಲ್ಲಿ ಬಹಳ ಹಿಂದಿನಿಂದಲೂ ಪ್ರಚಲಿತದಲ್ಲಿವೆ. ಚಿಕ್ಕ ವಯಸ್ಸಿನಿಂದಲೂ, ವಿಶೇಷವಾಗಿ ಹಳ್ಳಿಗಳಲ್ಲಿ, ನಾಲಿಗೆ ಮೇಲೆ ಮಚ್ಚೆ ಇರುವ ವ್ಯಕ್ತಿಗಳ ಬಗ್ಗೆ ಹಿರಿಯರು “ಅವರು ಏನಾದರೂ ಹೇಳಿದರೆ ಅದು ನಿಜವಾಗುತ್ತದೆ, ಅವರೊಂದಿಗೆ ಹುಷಾರಾಗಿರಿ” ಎಂದು ಹೇಳುವುದನ್ನು ಕೇಳಿದ್ದೇವೆ. ಈ ನಂಬಿಕೆಯ ಸತ್ಯಾಸತ್ಯತೆಯನ್ನು ಶಾಸ್ತ್ರೀಯವಾಗಿ ಪರಿಶೀಲಿಸಿದಾಗ, ನಾಲಿಗೆಯ ಮೇಲೆ ಮಚ್ಚೆ ಇದ್ದರೆ ವ್ಯಕ್ತಿಗಳ ಮಾತುಗಳು, ಶಾಪಗಳು ನಿಜವಾಗುವ ಸಾಧ್ಯತೆಗಳಿವೆ ಎಂದು ಶಾಸ್ತ್ರಗಳು ಮತ್ತು ನಂಬಿಕೆಗಳು ಸೂಚಿಸುತ್ತವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ನಾಲಿಗೆಯ ಮೇಲೆ ಮಚ್ಚೆಗಳು ಸಾಮಾನ್ಯವಾಗಿ ಕಪ್ಪು ಚುಕ್ಕೆಗಳ ರೂಪದಲ್ಲಿ ಕಾಣಿಸುತ್ತವೆ. ಈ ಮಚ್ಚೆಗಳು ನಾಲಿಗೆಯ ಮೇಲ್ಭಾಗ, ಕೆಳಭಾಗ ಅಥವಾ ಮುಂಭಾಗದಲ್ಲಿ ಇರಬಹುದು, ಮತ್ತು ಪ್ರತಿ ಸ್ಥಳಕ್ಕೂ ವಿಭಿನ್ನ ಮಹತ್ವವಿದೆ. ಅಂತಹ ವ್ಯಕ್ತಿಗಳೊಂದಿಗೆ ವ್ಯವಹರಿಸುವಾಗ ಜಾಗರೂಕರಾಗಿರುವುದು ಅವಶ್ಯಕ ಎಂದು ಹೇಳಲಾಗುತ್ತದೆ.

ಶಾಸ್ತ್ರಗಳ ಪ್ರಕಾರ, ನಾಲಿಗೆ ಮೇಲೆ ಮಚ್ಚೆ ಇರುವವರು ಪೂರ್ವಜನ್ಮದಲ್ಲಿ ಬಹಳಷ್ಟು ಪುಣ್ಯ ಕಾರ್ಯಗಳನ್ನು, ದೊಡ್ಡ ಕಾರ್ಯಗಳನ್ನು ಮಾಡಿರುತ್ತಾರೆ. ಸಮಾಜ ಸೇವೆ, ದೀನದಲಿತರನ್ನು ಸಲಹಿದ್ದು, ಅಶಕ್ತರಿಗೆ ಸಹಾಯ ಮಾಡಿದ್ದು, ಒಳ್ಳೆಯ ವೃಕ್ಷಗಳನ್ನು ನೆಟ್ಟಿದ್ದು, ಅನ್ನದಾನ ಮಾಡಿದ್ದು ಹೀಗೆ ಅನೇಕ ಸತ್ಕಾರ್ಯಗಳಲ್ಲಿ ನಿರತರಾಗಿರುತ್ತಾರೆ. ಅಂತಹವರಿಗೆ ಭಗವಂತನ ಆಶೀರ್ವಾದವಿರುತ್ತದೆ ಮತ್ತು ಅವರು ವಿಶೇಷವಾದ ನಾಲಿಗೆಯ ಮಚ್ಚೆಯೊಂದಿಗೆ ಜನ್ಮ ತಾಳುತ್ತಾರೆ ಎಂಬುದು ನಂಬಿಕೆ.

ಇದನ್ನೂ ಓದಿ: ಈ ರಾಶಿಯವರು ತಪ್ಪಿಯೂ ಬೆಳ್ಳಿ ಧರಿಸಬೇಡಿ, ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು!

ಇಂತಹ ವ್ಯಕ್ತಿಗಳಿಗೆ ಸೂಕ್ಷ್ಮ ಬುದ್ಧಿ, ವಿಶೇಷ ಶಕ್ತಿ ಮತ್ತು ಉತ್ತಮ ಆಲೋಚನಾ ಲಹರಿ ಇರುತ್ತದೆ. ಅವರು ಹೇಳಿದ ತಕ್ಷಣ ಎಲ್ಲವೂ ಆಗಬೇಕು ಎಂದೇನಿಲ್ಲ. ಆದರೆ, ಸತ್ಯಕ್ಕೆ ಸತ್ಯವಾಗಿ ನಡೆದುಕೊಳ್ಳುವ ಇಂತಹ ವ್ಯಕ್ತಿಗಳು ನೋವು ತಿಂದಾಗ, ಮೋಸ ಹೋದಾಗ ಅಥವಾ ತೀವ್ರ ಕೋಪದಿಂದ ಏನಾದರೂ ಹೇಳಿದಾಗ, ಆ ಮಾತುಗಳು ಕೆಲವೊಮ್ಮೆ ಪ್ರಭಾವ ಬೀರಬಹುದು. ಇದು ಸಾಮುದ್ರಿಕ ಶಾಸ್ತ್ರದ ಪ್ರಕಾರ ಒಂದು ಪ್ರಮುಖ ಅಂಶ. ನಾಲಿಗೆಯ ಕಾಣುವ ಭಾಗದಲ್ಲಿ ಕಪ್ಪು ಮಚ್ಚೆಗಳು ಮಹಿಳೆಯರಿಗಾಗಲಿ, ಪುರುಷರಿಗಾಗಲಿ, ಯಾವುದೇ ವಯಸ್ಸಿನವರಿಗಾಗಲಿ ಇರಬಹುದು. ಅವರಿಗೆ ವಂಚನೆ ಅಥವಾ ಮೋಸವಾದಾಗ, ಆ ನೋವನ್ನು ಸಹಿಸಲಾರದೆ ಅವರು ಶಪಿಸಿದರೆ ಅದು ನಿಜವಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಇಂತಹ ನಾಲಿಗೆ ಮೇಲೆ ಮಚ್ಚೆ ಇರುವವರ ಹತ್ತಿರ ಬಹಳ ಜಾಗ್ರತೆಯಿಂದ ಇರಬೇಕಾಗುತ್ತದೆ.

ನಾಲಿಗೆಯ ಕೆಳಭಾಗದಲ್ಲಿ ಮಚ್ಚೆ ಇದ್ದರೆ, ಅವರಿಗೆ ದೈವಾನುಗ್ರಹ ಹೆಚ್ಚಾಗಿರುತ್ತದೆ ಮತ್ತು ಭಗವಂತನ ಸಾಮೀಪ್ಯವಿರುತ್ತದೆ ಎಂದು ಹೇಳಲಾಗುತ್ತದೆ. ನಾಲಿಗೆ ಮೇಲೆ ಮಚ್ಚೆ ಇರುವವರು ಸಾಮಾನ್ಯವಾಗಿ ಸಾಧಕರಾಗಿರುತ್ತಾರೆ, ಕಲಾಪ್ರಿಯರಾಗಿರುತ್ತಾರೆ, ಪ್ರಕೃತಿ ಆರಾಧಕರಾಗಿರುತ್ತಾರೆ. ಅವರು ಮೃದುವಾಗಿ ಮಾತನಾಡುತ್ತಾರೆ ಮತ್ತು ವಿದ್ವಾಂಸರಾಗಿರುತ್ತಾರೆ. ಅವರು ಗುರುತರವಾದ ಕೆಲಸಗಳನ್ನು ಕೈಗೊಳ್ಳುತ್ತಾರೆ. ಅವರಿಗೆ ದೈವಾನುಗ್ರಹ ಮತ್ತು ಪ್ರಕೃತಿಯ ಪಂಚಭೂತಗಳ ಸ್ಪಂದನೆ ದೊರೆಯುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ – Kannada News | BBK 12 Winner Gilli Nata fans craze in Hassan Ramotsava event

ಹಾಸ್ಯ ಕಲಾವಿದ ಗಿಲ್ಲಿ ನಟ (Gilli Nata) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಟ್ರೋಫಿ ಗೆದ್ದರು. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಅವರು ಹೋದಲೆಲ್ಲ ಜನ ಜಂಗುಳಿ ಸೇರುತ್ತದೆ. ಗಿಲ್ಲಿ ನಟ ಅವರನ್ನು ಹತ್ತಿರದಿಂದ ನೋಡಬೇಕು ಎಂಬುದು ಅಭಿಮಾನಿಗಳ ಆಸೆ. ಇತ್ತೀಚೆಗೆ ಹಾಸನದ ರಾಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಅವರನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಗಿಲ್ಲಿ ನಟ ಅವರಿಗೆ ಸಿನಿಮಾಗಳಿಂದ ಹಲವು ಅವಕಾಶಗಳು ಬರುತ್ತಿವೆ. ಅವರ ಜನಪ್ರಿಯತೆ ಜಾಸ್ತಿ ಆಗಿದೆ. ಅದಕ್ಕೆ ಈ ಜನಜಂಗುಳಿಯೇ ಸಾಕ್ಷಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಟೀಮ್ ಇಂಡಿಯಾ ವಿರುದ್ಧ ಮಿಂಚಿದ ಕನ್ನಡಿಗ..!

Source link

Gold Rate Today: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 8th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 8: ಈ ವಾರ ಹೆಚ್ಚಿನ ದಿನ ಕುಸಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ (Gold Rate) ಗ್ರಾಮ್​ಗೆ ಮುನ್ನೂರಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ ಮತ್ತೆ 14,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,56,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,43,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 8ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,660 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,355 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,745 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,660 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,355 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,355 ರೂ
  • ಚೆನ್ನೈ: 14,420 ರೂ
  • ಮುಂಬೈ: 14,355 ರೂ
  • ದೆಹಲಿ: 14,370 ರೂ
  • ಕೋಲ್ಕತಾ: 14,355 ರೂ
  • ಕೇರಳ: 14,355 ರೂ
  • ಅಹ್ಮದಾಬಾದ್: 14,360 ರೂ
  • ಜೈಪುರ್: 14,370 ರೂ
  • ಲಕ್ನೋ: 14,370 ರೂ
  • ಭುವನೇಶ್ವರ್: 14,355 ರೂ

ಇದನ್ನೂ ಓದಿ: ಭಾರತೀಯರ ಇಂಧನ ಭದ್ರತೆಗೆ ಮೊದಲ ಆದ್ಯತೆ; ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 599 ರಿಂಗಿಟ್ (13,970 ರುಪಾಯಿ)
  • ದುಬೈ: 553.25 ಡಿರಾಮ್ (13,866 ರುಪಾಯಿ)
  • ಅಮೆರಿಕ: 153.50 ಡಾಲರ್ (13,701 ರುಪಾಯಿ)
  • ಸಿಂಗಾಪುರ: 192.10 ಸಿಂಗಾಪುರ್ ಡಾಲರ್ (13,965 ರುಪಾಯಿ)
  • ಕತಾರ್: 547 ಕತಾರಿ ರಿಯಾಲ್ (13,554 ರೂ)
  • ಸೌದಿ ಅರೇಬಿಯಾ: 559 ಸೌದಿ ರಿಯಾಲ್ (13,438 ರುಪಾಯಿ)
  • ಓಮನ್: 58.60 ಒಮಾನಿ ರಿಯಾಲ್ (13,676 ರುಪಾಯಿ)
  • ಕುವೇತ್: 45.21 ಕುವೇತಿ ದಿನಾರ್ (13,372 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 285 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 285 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 285 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕೈಕೊಟ್ಟ 3 ವರ್ಷ ಪ್ರೀತಿಸಿದ ಪ್ರೇಯಸಿ: ನೊಂದ ಬಾಡಿಬಿಲ್ಡರ್​​ ತೆಗೆದುಕೊಂಡಿದ್ದು ದುಡುಕಿನ ನಿರ್ಧಾರ – Kannada News | Love Failure Triggers Tragedy in Bengaluru: Mahalakshmi Layout Bodybuilder Commits Suicide

ಬೆಂಗಳೂರು, ಫೆಬ್ರವರಿ 08: ಪ್ರೀತಿಸಿದ ಯುವತಿ ಕೈಕೊಟ್ಟ ಹಿನ್ನೆಲೆ ಬಾಡಿ ಬಿಲ್ಡರ್​ ಆತ್ಮಹತ್ಯೆ ನಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನಲ್ಲಿ ನಡೆದಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ಕಿರಣ್(26) ಪ್ರಾಣಬಿಟ್ಟಿದ್ದು, 3 ವರ್ಷಗಳಿಂದ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ಯುವತಿಗೆ ಬೇರೆ ಯುವಕನ ಜತೆ ಮದುವೆ ನಿಶ್ಚಯವಾದ ಕಾರಣ, ಯುವತಿ ಹಾಗೂ ಆಕೆಯ ತಾಯಿ ಹೆಸರನ್ನು ಡೆತ್​​ನೋಟ್​​ನಲ್ಲಿ ಉಲ್ಲೇಖಿಸಿ ಕಿರಣ್​​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತನಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯವಾಗಿದೆ ಎಂದು ಯುವತಿ ಕಿರಣ್​​ಗೆ ಹೇಳಿದ್ದಲ್ಲದೆ ಮದುವೆಯ ಆಮಂತ್ರಣ ಪತ್ರಿಕೆ, ಹೊಸ ಸೀರೆ ತೋರಿಸಿದ್ದಳು. ಇದರಿಂದ ಮನನೊಂದು ನೇರವಾಗಿ ಮನೆಗೆ ಬಂದು ಕಿರಣ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಮಹಾಲಕ್ಷ್ಮೀಲೇಔಟ್ ಠಾಣೆಯ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ‌ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಹಲವು ವರ್ಷಗಳಿಂದ ಜಿಮ್​ ಟ್ರೈನರ್, ಬಾಡಿ ಬಿಲ್ಡಿಂಗ್ ಮಾಡ್ತಿದ್ದ ಕಿರಣ್, ಪ್ರಿಯತಮೆಗೆ ಪ್ರೇಮಿಗಳ ದಿನಾಚರಣೆಗೆ ಗಿಫ್ಟ್ ಕೊಡಲು ಸಹ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಈ ನಡುವೆ ಪ್ರೇಯಸಿ ಮತ್ತೊಬ್ಬನ ಜೊತೆ ಮದುವೆ ವಿಷಯ ಪ್ರಸ್ತಾಪಿಸಿದ ಕಾರಣ ಆಘಾತಕೊಳ್ಳಗಾಗಿದ್ದ ಕಿರಣ್​​ ದುಡುಕಿನ ನಿರ್ಧಾರ ಮಾಡಿದ್ದಾರೆ.

ಇದನ್ನೂ ಓದಿ:  ವೇಶ್ಯಾವಾಟಿಕೆ ನಡೆಸುವಂತೆ ಅತ್ತೆಯಿಂದ ಒತ್ತಾಯ; 11 ತಿಂಗಳ ಮಗು ಬಿಟ್ಟು ಗೃಹಿಣಿ ಆತ್ಮಹತ್ಯೆ

ಇನ್ನು ಪ್ರಿಯತಮೆ ಮದುವೆ ವಿಚಾರ ತಿಳಿದು ಬೇಸರದಲ್ಲಿ ಮನೆಗೆ ಬಂದಿದ್ದ ಕಿರಣ್​​ ನಿನ್ನೆ ಸಂಜೆ ತಾಯಿಯನ್ನ ವೈಟ್ ಶೀಟ್ ಮತ್ತು ಪೆನ್ ಕೇಳಿದ್ದರು. ಇದರಿಂದ ಅನುಮಾನಗೊಂಡ ತಾಯಿ ಯಾಕಪ್ಪಾ ವೈಟ್ ಹಾಳೆ ಎಂದು ವಿಚಾರಿಸಿದಾಗ, ಹೆದರಬೇಡಮ್ಮ ಫೈನಾನ್ಸ್ ಲೆಕ್ಕ ಬರೀತಿನಿ ಎಂದು ಕಿರಣ್​​ ಹೇಳಿದ್ದರಂತೆ. ಘಟನೆ ಸಂಬಂಧ ಸದ್ಯ ಯುವತಿ ಹಾಗೂ ಕುಟುಂಬಸ್ಥರ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಠಾಣೆಗೆ ಕಿರಣ್ ಕುಟುಂಬಸ್ಥರು ದೂರು ನೀಡಿದ್ದು, ತನಿಖೆ ಮುಂದುವರಿದಿದೆ.

ವರದಿ: ವಿಕಾಸ್​​, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Chocolate Day 2026 Date: ವ್ಯಾಲೆಂಟೈನ್‌ ವೀಕ್‌ನಲ್ಲಿ ಚಾಕೊಲೇಟ್ ಡೇ ಆಚರಿಸುವುದೇಕೆ? ಇದರ ಹಿಂದೆಯೂ ಇದೆ ಕಾರಣ – Kannada News | Chocolate Day 2026: When did the celebration of Chocolate Day begin? Here’s the information

ಪ್ರೇಮಿಗಳ ವಾರವು ಪ್ರೀತಿ ಮತ್ತು ಪ್ರಣಯದಿಂದ ತುಂಬಿದ ವಿಶೇಷ ಸಮಯವಾಗಿದ್ದು, ವ್ಯಾಲೆಂಟೈನ್‌ ವೀಕ್‌ನ  ಪ್ರತಿ ದಿನವೂ ತನ್ನದೇ ಆದ ಮಹತ್ವವನ್ನು ಹೊಂದಿದೆ. ಪ್ರೇಮಿಗಳ ವಾರದ ಮೊದಲ ದಿನ ರೋಸ್‌ ಡೇಯನ್ನು ಆಚರಿಸಿದರೆ, ಮೂರನೇ ದಿನ ಅಂದರೆ ಫೆಬ್ರವರಿ 9 ರಂದು ಚಾಕೊಲೇಟ್‌ ದಿನವನ್ನು (Chocolate Day) ಆಚರಿಸಲಾಗುತ್ತದೆ. ಇದು ಸಂಬಂಧಗಳಿಗೆ ಮಾಧುರ್ಯವನ್ನು ಸೇರಿಸುವ ವಿಶೇಷ  ಸಂದರ್ಭವಾಗಿದ್ದು, ಈ ದಿನದಂದು ಜನರು ತಮ್ಮ ಪ್ರೀತಿಪಾತ್ರರಿಗೆ ಚಾಕೊಲೇಟ್ ನೀಡುವ ಮೂಲಕ ತಮ್ಮ ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸುತ್ತಾರೆ.  ಅಷ್ಟಕ್ಕೂ ಚಾಕೊಲೇಟ್ ದಿನದ ಆಚರಣೆ ಯಾವಾಗ ಮತ್ತು ಹೇಗೆ ಪ್ರಾರಂಭವಾಯಿತು, ಈ ದಿನವ ಮಹತ್ವವೇನು ಎಂಬುದನ್ನು ತಿಳಿಯಿರಿ.

ಚಾಕೊಲೇಟ್ ದಿನದ ಇತಿಹಾಸವೇನು?

ಚಾಕೊಲೇಟ್ ದಿನದ ಇತಿಹಾಸವು 19 ನೇ ಶತಮಾನದ ಯುರೋಪಿನಲ್ಲಿ ಪ್ರಾರಂಭವಾಯಿತು, ಆಗ ಚಾಕೊಲೇಟ್ ಜನಪ್ರಿಯವಾಯಿತು ಮತ್ತು ಚಾಕೊಲೇಟ್ ಪ್ರೀತಿ ಮತ್ತು ವಾತ್ಸಲ್ಯದ ಸಂಕೇತವೆಂದು ಪರಿಗಣಿಸಲ್ಪಟ್ಟಿತು.  ಕ್ರಮೇಣ, ಚಾಕೊಲೇಟ್ ಅನ್ನು ಪ್ರೇಮ ಪ್ರಸ್ತಾಪಗಳು ಮತ್ತು ವಿಶೇಷ ಸಂದರ್ಭಗಳಲ್ಲಿ ಉಡುಗೊರೆಯಾಗಿ ನೀಡುವುದು ಒಂದು ಸಂಪ್ರದಾಯವಾಯಿತು.

ವ್ಯಾಲೆಂಟೈನ್‌ ವೀಕ್‌ಗೆ ಚಾಕೊಲೇಟ್ ದಿನವನ್ನು 1990 ರಲ್ಲಿ ಸೇರಿಸಲಾಯಿತು. ಪ್ರೇಮಿಗಳ ವಾರದ ಮೂರನೇ ದಿನವಾದ ಫೆಬ್ರವರಿ 9 ಅನ್ನು ಅಮೆರಿಕದಲ್ಲಿ ಚಾಕೊಲೇಟ್ ದಿನವೆಂದು ಘೋಷಿಸಲಾಯಿತು ಎಂದು ನಂಬಲಾಗಿದೆ. ಚಾಕೊಲೇಟ್ ಮಾರಾಟವನ್ನು ಹೆಚ್ಚಿಸಲು ಈ ನಿರ್ಧಾರ ತೆಗೆದುಕೊಳ್ಳಲಾಯಿತು, ಇದು ಚಾಕೊಲೇಟ್ ಮಾರಾಟದ ಹೆಚ್ಚಳಕ್ಕೆ ಕಾರಣವಾಯಿತು  ಎಂದು ಹೇಳಲಾಗುತ್ತದೆ.

ಚಾಕೊಲೇಟ್ ದಿನವನ್ನು ಏಕೆ ಆಚರಿಸಲಾಗುತ್ತದೆ?

ಚಾಕೊಲೇಟ್ ದಿನದ ಆಚರಣೆಯು ಪಾಶ್ಚಿಮಾತ್ಯ ದೇಶಗಳಲ್ಲಿ ಹುಟ್ಟಿಕೊಂಡಿತು, ಅಲ್ಲಿ ಚಾಕೊಲೇಟ್ ಅನ್ನು ಸಂತೋಷ, ಪ್ರೀತಿ ಮತ್ತು ಕಾಳಜಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಚಾಕೊಲೇಟ್ ರುಚಿಯಲ್ಲಿ ಸಿಹಿಯಾಗಿರುತ್ತದೆ, ಜೊತೆಗೆ ಅದನ್ನು ತಿನ್ನುವುದರಿಂದ ಮನಸ್ಥಿತಿಯೂ ಸುಧಾರಿಸುತ್ತದೆ. ಇದಲ್ಲದೆ, ಚಾಕೊಲೇಟ್ ಅಥವಾ ಸಿಹಿತಿಂಡಿಗಳನ್ನು ತಿಂದ ನಂತರ ಪ್ರತಿಯೊಬ್ಬರೂ ಸಂತೋಷವಾಗಿರುತ್ತಾರೆ. ಆದ್ದರಿಂದ, ಸಂಬಂಧದಲ್ಲಿ  ಪ್ರೀತಿ ಮತ್ತು ಮಾಧುರ್ಯವನ್ನು ಬಲಪಡಿಸಲು  ಈ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಪ್ರಪೋಸ್‌ ಡೇ ಯಾವಾಗ? ಪ್ರೇಮಿಗಳ ಮಹತ್ವದ ದಿನದ ಹಿನ್ನೆಲೆಯ ಬಗ್ಗೆ ತಿಳಿಯಿರಿ

ಚಾಕೊಲೇಟ್ ದಿನವನ್ನು ಆಚರಿಸುವ ಕಾರಣ ಮತ್ತು ಮಹತ್ವವೇನು?

  • ಚಾಕೊಲೇಟ್‌ನ ಸಿಹಿ ರುಚಿ ಪ್ರೀತಿ ಮತ್ತು ಸ್ನೇಹದ ಮಾಧುರ್ಯವನ್ನು ಸಂಕೇತಿಸುತ್ತದೆ. ಈ ದಿನವು ಜನರಿಗೆ ಸಂಬಂಧಗಳನ್ನು ಬಲಪಡಿಸಲು ಮತ್ತು ತಪ್ಪುಗ್ರಹಿಕೆಗಳನ್ನು ಪರಿಹರಿಸಲು ಅವಕಾಶವನ್ನು ನೀಡುತ್ತದೆ.
  • ಚಾಕೊಲೇಟ್ ತಿನ್ನುವುದರಿಂದ ಸಿರೊಟೋನಿನ್ ಮತ್ತು ಡೋಪಮೈನ್ ಎಂಬ ಸಂತೋಷದ ಹಾರ್ಮೋನುಗಳು ಬಿಡುಗಡೆಯಾಗುತ್ತವೆ, ಇದು ಮನಸ್ಥಿತಿಯನ್ನು ಹೆಚ್ಚಿಸುತ್ತದೆ ಮತ್ತು ಸಂತೋಷವನ್ನು ತರುತ್ತದೆ.
  • ನಿಮ್ಮ ಪ್ರೀತಿ ಪಾತ್ರರಿಗೆ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಬಯಸಿದರೆ, ಚಾಕೊಲೇಟ್ ದಿನದಂದು ಅವರಿಗೆ ಚಾಕೊಲೇಟ್ ನೀಡುವ ಮೂಲಕ ನೀವು ಸ್ನೇಹ ಮತ್ತು ಪ್ರೀತಿಯನ್ನು ಪ್ರಾರಂಭಿಸಬಹುದು.
  • ಚಾಕೊಲೇಟ್ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಆದ್ದರಿಂದ ನಿಮ್ಮ ಸಂಗಾತಿ ಅಥವಾ ಸ್ನೇಹಿತರಿಗೆ ಚಾಕೊಲೇಟ್ ಉಡುಗೊರೆಯಾಗಿ ನೀಡುವುದರಿಂದ ಅವರ ಮನಸ್ಥಿತಿ ಉತ್ತಮವಾಗಿರುತ್ತದೆ.
  • ಚಾಕೊಲೇಟ್ ದಿನದಂದು ನಿಮ್ಮ ಸಂಗಾತಿಗೆ ಚಾಕೊಲೇಟ್‌ ನೀಡುವುದು ಕೇವಲ ಉಡುಗೊರೆಯಲ್ಲ, ಅದು ಒಂದು ಭಾವನೆ. ನಿಮ್ಮ ಸಂಬಂಧದಲ್ಲಿ ಮಾಧುರ್ಯ, ತಿಳುವಳಿಕೆ ಮತ್ತು ಸಂತೋಷವನ್ನು ಕಾಪಾಡಿಕೊಳ್ಳಲು ನೀವು ಬಯಸುತ್ತೀರಿ ಎಂದು ಇದು ತೋರಿಸುತ್ತದೆ.
  • ಡಾರ್ಕ್ ಚಾಕೊಲೇಟ್ ಆಳವಾದ ಪ್ರೀತಿ ಮತ್ತು ವಿಶ್ವಾಸವನ್ನು ಪ್ರತಿನಿಧಿಸುತ್ತದೆ, ಮಿಲ್ಕ್ ಚಾಕೊಲೇಟ್ ಕಾಳಜಿ ಮತ್ತು ಮೃದು ಭಾವನೆಗಳನ್ನು ಸಂಕೇತಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version