RCB vs LSG ಪಂದ್ಯದಿಂದ ವಿರಾಟ್ ಕೊಹ್ಲಿ ಔಟ್?

Source link

ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಂತಾಪ ಸೂಚಿಸಿದ ಜಾನ್ ಸೀನಾ, ಬ್ರೆಟ್ ಲೀ – Kannada News | Legendary singer Asha Bhosle passes away at 92 global tributes from John Cena Brett Lee

ಭಾರತೀಯ ಸಂಗೀತ ಲೋಕದ ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ (Asha Bhosle) ಅವರು ಏಪ್ರಿಲ್ 12ರಂದು ವಿಧಿವಶರಾದರು. ಅವರ ನಿಧನಕ್ಕೆ ಚಿತ್ರರಂಗ, ಕ್ರೀಡಾಲೋಕ ಸೇರಿದಂತೆ ವಿಶ್ವದಾದ್ಯಂತ ಗಣ್ಯರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಆಶಾ ಭೋಸ್ಲೆ ಅವರ ಅಗಲಿಕೆ ಕೇವಲ ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವದ ಸಂಗೀತ ಪ್ರೇಮಿಗಳಿಗೆ ತುಂಬಲಾರದ ನಷ್ಟವಾಗಿದೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದ ಸೆಲೆಬ್ರಿಟಿಗಳು ಕೂಡ ಆಶಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. WWE ರಸ್ಲರ್ ಜಾನ್ ಸೀನಾ (John Cena) ಮತ್ತು ಮಾಜಿ ಕ್ರಿಕೆಟಿಗ ಬ್ರೆಟ್ ಲೀ (Brett Lee) ಕೂಡ ಗೌರವ ಸಲ್ಲಿಸಿದ್ದಾರೆ.

WWE ಖ್ಯಾತಿಯ ಜಾನ್ ಸೀನಾ ಅವರು ಆಶಾ ಭೋಸ್ಲೆ ಅವರಿಗೆ ಅತ್ಯಂತ ಸರಳ ರೀತಿಯಲ್ಲಿ ಗೌರವ ಸಲ್ಲಿಸಿದ್ದಾರೆ. ಯಾವುದೇ ಶೀರ್ಷಿಕೆ ಇಲ್ಲದೇ, ಆಶಾ ಅವರ ಭಾವಚಿತ್ರವನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳುವ ಮೂಲಕ, ಅವರ ಸಾಧನೆಗೆ ಮೌನವಾಗಿಯೇ ನಮನ ಸಲ್ಲಿಸಿದ್ದಾರೆ. ಈ ನಡೆಯು ಭಾಷೆಗಳ ಗಡಿ ಮೀರಿ ಆಶಾ ಅವರ ಕೀರ್ತಿ ಹರಡಿದ್ದನ್ನು ತೋರಿಸಿಕೊಟ್ಟಿದೆ.

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರೆಟ್ ಲೀ ಅವರು ಆಶಾ ಅವರೊಂದಿಗಿನ ತಮ್ಮ ಹಳೆಯ ಒಡನಾಟವನ್ನು ಸ್ಮರಿಸಿದ್ದಾರೆ. 2006ರಲ್ಲಿ ಅವರಿಬ್ಬರೂ ಸೇರಿ ಹಾಡಿದ್ದ ‘You’re the One for Me’ ಹಾಡಿನ ಫೋಟೋ ಅವರು ಹಂಚಿಕೊಂಡಿದ್ದಾರೆ. ‘ಆಶಾ ಅವರಂತಹ ದಂತಕಥೆಯೊಂದಿಗೆ ಹಾಡು ರೆಕಾರ್ಡ್ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ’ ಎಂದು ಬ್ರೆಟ್ ಲೀ ಹೇಳಿದ್ದಾರೆ.

‘ಆಶಾ ಭೋಸ್ಲೆ ಅವರ ಪ್ರತಿಭೆಗಿಂತ ಅವರಲ್ಲಿದ್ದ ವಿನಯ ಮತ್ತು ನಗುಮುಖ ನನ್ನನ್ನು ಹೆಚ್ಚು ಪ್ರಭಾವಿಸಿತ್ತು. ಇಷ್ಟು ದೊಡ್ಡ ಸಾಧನೆ ಮಾಡಿದ್ದರೂ ಅವರು ಅತ್ಯಂತ ಪ್ರೀತಿಯಿಂದ ನಡೆದುಕೊಳ್ಳುತ್ತಿದ್ದರು. ಅಂಥ ವ್ಯಕ್ತಿ ಜೊತೆ ಸ್ವಲ್ಪ ಸಮಯ ಕಳೆಯಲು ಸಿಕ್ಕಿದ್ದು ನನ್ನ ಪುಣ್ಯ. ಅವರ ಪರಂಪರೆ ಮುಂದುವರಿಯಲಿದೆ ಅವರ ಕುಟುಂಬದವರಿಗೆ ಮತ್ತು ಆಪ್ತರಿಗೆ ಸಂತಾಪಗಳು’ ಎಂದು ಬ್ರೆಟ್​ ಲೀ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ

ಏಪ್ರಿಲ್ 13ರಂದು ಮುಂಬೈನ ಶಿವಾಜಿ ಪಾರ್ಕ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆಯು ನೆರವೇರಿತು. ಸರ್ಕಾರದ ಉನ್ನತ ಅಧಿಕಾರಿಗಳು, ರಾಜಕೀಯ ಗಣ್ಯರು, ಕ್ರೀಡಾಪಟುಗಳು ಮತ್ತು ಚಿತ್ರರಂಗದ ನೂರಾರು ಕಲಾವಿದರು ಭಾಗವಹಿಸಿ ತಮ್ಮ ನೆಚ್ಚಿನ ಗಾಯಕಿಗೆ ಅಂತಿಮ ವಿದಾಯ ಹೇಳಿದರು. ವಿಶ್ವಾದ್ಯಂತ ಇರುವ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ; ಯುವತಿಯರ ಗಾಯನಕ್ಕೆ ಮೆಚ್ಚುಗೆ – Kannada News | PM Narendra Modi visited Kali temple near Dehradun before inaugurating expressway

ಡೆಹ್ರಾಡೂನ್, ಏಪ್ರಿಲ್ 14: ದೆಹಲಿ, ಉತ್ತರಾಖಂಡ ಮತ್ತು ಉತ್ತರ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೇಶದ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಾ ಪ್ರಧಾನಿ ಮೋದಿ ಸುಮಾರು 15 ನಿಮಿಷಗಳ ಕಾಲ ದೇವಾಲಯದಲ್ಲಿ ಸಮಯ ಕಳೆದರು.

ಪ್ರಧಾನಿ ಮೋದಿ ಭೇಟಿಗಾಗಿ ದೇವಾಲಯವನ್ನು ಹೂವುಗಳಿಂದ ಅಲಂಕರಿಸಲಾಗಿತ್ತು. ಪ್ರಧಾನಿ ಮೋದಿ ಆಗಮಿಸುತ್ತಿದ್ದಂತೆ ದೇವಾಲಯದ ಎದುರು ಯುವತಿಯರು ಅಯಿಗಿರಿ ನಂದಿನಿ ಭಕ್ತಿಗೀತೆಯನ್ನು ಹಾಡಿದರು. ಈ ಹಾಡನ್ನು ಕೇಳುತ್ತಾ ತಲ್ಲೀನರಾಗಿ ನಿಂತ ಮೋದಿ ಮೆಚ್ಚುಗೆ ಸೂಚಿಸಿದರು. ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಗಡಿಯಲ್ಲಿರುವ ಈ ಸುಮಾರು 200 ವರ್ಷಗಳಷ್ಟು ಹಳೆಯದಾದ ದೇವಾಲಯ ಕಾಳಿ ದೇವಿಗೆ ಅರ್ಪಿತವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮತ್ತೆ ತೆಲುಗು ಸಿನಿಮಾನಲ್ಲಿ ನಟಿಸಲಿರುವ ಆಲಿಯಾ ಭಟ್, ನಾಯಕ ಯಾರು? – Kannada News | Ali Bhatt to act with Jr NTR in Telugu Pan India movie

ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದಿರುವ ಆಲಿಯಾ ಭಟ್ (Alia Bhatt), ಬಾಲಿವುಡ್​​ನ ಸೂಪರ್ ಸ್ಟಾರ್ ನಟಿ. ಹಿಂದಿ ಚಿತ್ರರಂಗದ ಸ್ಟಾರ್ ನಟಿ ಆಗಿರುವ ಆಲಿಯಾ ಭಟ್, ಬಾಲಿವುಡ್​​ನ ಬಲು ದುಬಾರಿ ನಟಿ ಸಹ ಹೌದು. ಹಿಂದಿ ಮಾತ್ರವಲ್ಲದೆ, ತೆಲುಗಿನ ‘ಆರ್​​ಆರ್​​ಆರ್’ ಸಿನಿಮಾನಲ್ಲಿಯೂ ಆಲಿಯಾ ಭಟ್ ನಟಿಸಿದ್ದು, ಆ ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಇದೀಗ ಹಲವು ವರ್ಷಗಳ ಬಳಿಕ ಆಲಿಯಾ ಭಟ್ ಮತ್ತೊಮ್ಮೆ ತೆಲುಗು ಸಿನಿಮಾನಲ್ಲಿ ನಟಿಸಲಿದ್ದಾರೆ. ಅಂದಹಾಗೆ ಈ ಬಾರಿಯೂ ಅತಿಥಿ ಪಾತ್ರದಲ್ಲೇ.

ಈ ಹಿಂದೆ ‘RRR’ ಚಿತ್ರದಲ್ಲಿ ‘ಸೀತಾ’ ಪಾತ್ರದ ಮೂಲಕ ದಕ್ಷಿಣ ಭಾರತದ ಪ್ರೇಕ್ಷಕರ ಮನ ಗೆದ್ದಿದ್ದ ಆಲಿಯಾ ಭಟ್, ಈಗ ಮತ್ತೊಂದು ಭಾರಿ ಬಜೆಟ್‌ನ ಪ್ಯಾನ್ ಇಂಡಿಯಾ ಚಿತ್ರದ ಭಾಗವಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಜೂನಿಯರ್ ಎನ್​​ಟಿಆರ್ ಮತ್ತು ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಸದ್ಯ ‘ಡ್ರ್ಯಾಗನ್’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಈ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ಆಲಿಯಾ ಭಟ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

‘ಡ್ರ್ಯಾಗನ್’ ಸಿನಿಮಾದ ನಾಯಕಿಯಾಗಿ ರುಕ್ಮಿಣಿ ವಸಂತ್ ನಟಿಸುತ್ತಿದ್ದಾರೆ. ಆದರೆ ಈ ಸಿನಿಮಾನಲ್ಲಿ ಜೂ ಎನ್​​ಟಿಆರ್ ಅವರದ್ದು ದ್ವಿಪಾತ್ರ ಎನ್ನಲಾಗುತ್ತಿದ್ದು, ಜೂ ಎನ್​​ಟಿಆರ್ ಅವರ ಒಂದು ಪಾತ್ರದ ನಾಯಕಿಯಾಗಿ ಆಲಿಯಾ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಲ್ಲದೆ, ಆಲಿಯಾ ನಟಿಸುತ್ತಿರುವ ಪಾತ್ರ ಸಹ ಸಖತ್ ಪವರ್​​ಫುಲ್ ಆಗಿ ಇರಲಿದೆಯಂತೆ. ಆಲಿಯಾ ಅವರದ್ದು ಪರಿಪೂರ್ಣ ನಾಯಕಿ ಪಾತ್ರ ಅಲ್ಲದೆ, ಎಕ್ಸ್​​ಟೆಂಡೆಂಡ್ ಕ್ಯಾಮಿಯೋ ರೀತಿ ಇರಲಿದೆಯಂತೆ.

ಇದನ್ನೂ ಓದಿ:550 ಕೋಟಿ ರೂಪಾಯಿ ಒಡತಿ ಆಲಿಯಾ ಭಟ್; ಗಳಿಕೆ ಹೇಗೆ?

ಆಲಿಯಾ ಭಟ್ ಅವರು ‘ಆರ್​​ಆರ್​​ಆರ್’ ಸಿನಿಮಾನಲ್ಲಿ ನಟ ರಾಮ್ ಚರಣ್ ಪ್ರೇಯಸಿಯಾಗಿ ನಟಿಸಿದ್ದರು. ರಾಮ್ ಚರಣ್, ಜೂ ಎನ್​​ಟಿಆರ್ ಮತ್ತು ಆಲಿಯಾ ಅವರ ಹಾಡು ಸಹ ಸಿನಿಮಾದ ಅಂತ್ಯದಲ್ಲಿ ಇತ್ತು. ಆದರೆ ಜೂ ಎನ್​​ಟಿಆರ್ ಮತ್ತು ಆಲಿಯಾ ನಡುವೆ ಕೇವಲ ಒಂದು ದೃಶ್ಯವಷ್ಟೆ ಇತ್ತು. ಇದೀಗ ಜೂ ಎನ್​​ಟಿಆರ್ ಅವರಿಗೆ ನಾಯಕಿಯಾಗಿ ಆಲಿಯಾ ಭಟ್ ನಟಿಸುತ್ತಿದ್ದಾರೆ.

‘ಡ್ರ್ಯಾಗನ್’ ಸಿನಿಮಾಕ್ಕಾಗಿ ಜೂ ಎನ್​​ಟಿಆರ್ ಸಾಕಷ್ಟು ಶ್ರಮಪಡುತ್ತಿದ್ದಾರೆ. ದೇಹವನ್ನು ಹುರಿಗೊಳಿಸಿಕೊಂಡಿದ್ದು, ಸಿನಿಮಾಕ್ಕಾಗಿ ಸಿಕ್ಸ್ ಪ್ಯಾಕ್ ಸಹ ಮಾಡಿಕೊಂಡಿದ್ದಾರೆ. ಇನ್ನು ಈ ಸಿನಿಮಾನಲ್ಲಿ ಸಾಕಷ್ಟು ಪ್ರತಿಭಾವಂತ ಕಲಾವಿದರು ನಟಿಸುತ್ತಿದ್ದಾರೆ. ಬಾಲಿವುಡ್ ನಟ ವಿವೇಕ್ ಒಬೆರಾಯ್, ಈ ಸಿನಿಮಾದ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಕನ್ನಡದ ನಟರೊಬ್ಬರು ಸಹ ಈ ಸಿನಿಮಾನಲ್ಲಿ ಇರಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Video: ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್, 19ರ ಯುವತಿ ಸಾವು – Kannada News | Ghaziabad Bike Accident: Iqra Dies, Hashim Critically Injured in Viral Speed Crash Video

ಉತ್ತರ ಪ್ರದೇಶ: ಗಾಜಿಯಾಬಾದ್‌ನಲ್ಲಿ ಭಾನುವಾರ ಬೆಳಿಗ್ಗೆ ಅತಿವೇಗ ಹಾಗೂ ಅಜಾಗರೂಕತೆಯಿಂದಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ದುರ್ಮರಣಕ್ಕೀಡಾಗಿದ್ದಾಳೆ. 19 ವರ್ಷದ ಇಕ್ರಾ ಎಂಬ ಯುವತಿ ತನ್ನ ಸ್ನೇಹಿತ ಹಾಶಿಮ್ (20) ಜೊತೆ ಯಮಹಾ ಆರ್-15 ಸ್ಪೋರ್ಟ್ಸ್ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಹಠ ಮಾಡಿ ತಾನೇ ಬೈಕ್ ಓಡಿಸಿದ್ದಾಳೆ. ಇಕ್ರಾ ಅತಿವೇಗವಾಗಿ ಬೈಕ್ ಚಲಾಯಿಸುತ್ತಿದ್ದ ದೃಶ್ಯವನ್ನು ಹಿಂದಕ್ಕೆ ಕುಳಿತಿದ್ದ ಹಾಶಿಮ್ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದಾಗ, ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಜೋರಾಗಿ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದ ಪರಿಣಾಮವಾಗಿ ಇಕ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡ ಹಾಶಿಮ್ ಪ್ರಸ್ತುತ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ವಿಜಯಪುರದಲ್ಲೊಂದು ಅಮಾನವೀಯ ಘಟನೆ: ನೋಡಲು ತನ್ನಂತಿಲ್ಲ ಎಂದು ಮಗನನ್ನೇ ಕೊಂದ ತಂದೆ – Kannada News | Vijayapura: Father Kills 6 Year Old Son: Pushed into Krishna River over Resemblance

ವಿಜಯಪುರ, ಏಪ್ರಿಲ್​ 14: ವಿಜಯಪುರದಲ್ಲೊಂದು ವಿಚಿತ್ರ ಮತ್ತು ಅಮಾನವೀಯ ಘಟನೆ ನಡೆದಿದೆ. ನೋಡಲು ತನ್ನಂತೆ ಇಲ್ಲ ಎಂದು 6 ವರ್ಷದ ತನ್ನ ಮಗನನ್ನೇ ತಂದೆ (Father) ಕೊಲೆ (Kill) ಮಾಡಿರುವಂತಹ ದಾರುಣ ಘಟನೆ ನಗರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕರಾಡ್ ಜಿಲ್ಲೆಯ ವಡೋಲಿಯ ಕೃಷ್ಣಾ ನದಿ ಬಳಿ ಮಗ ಸಿದ್ದಾರ್ಥನನ್ನ ಕರೆದುಕೊಂಡು ಹೋದ ತಂದೆ ಮಲ್ಲಿಕಾರ್ಜುನ ಅರಕೇರಿ ನದಿಗೆ ತಳ್ಳಿ ಹತ್ಯೆ ಮಾಡಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಮತ್ತು ಭಾಗ್ಯಶ್ರೀ ದಂಪತಿ ವಾಸವಾಗಿದ್ದಾರೆ. ಇವರ ಮಗ ಸಿದ್ದಾರ್ಥ. ಮಗನ ಹೋಲಿಕೆ ನಿನ್ನಂತಿಲ್ಲ ಎಂದು ಗ್ರಾಮದಲ್ಲಿ ಕೆಲವರು ಛೇಡಿಸಿದ್ದರು. ಇದರಿಂದಾಗಿ ರೋಸಿಹೋದ ಮಲ್ಲಿಕಾರ್ಜುನ ಇಂತಹದೊಂದು ಕೆಟ್ಟ ನಿರ್ಧಾರಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ನಿಶ್ಚಿತಾರ್ಥವಾದ ಯುವಕನ ಮನೆಯವರಿಗೆ ಯುವತಿಯೊಂದಿಗಿನ ಫೋಟೋ ಕಳುಹಿಸಿದ ಪ್ರೇಮಿ; ಮುಂದಾಗಿದ್ದು ದುರಂತ

ಮಾರ್ಚ್ 16ರಂದು ಮಗನನ್ನು ಶಾಲೆಗೆ ಸೇರಿಸುವುದಾಗಿ ಹೇಳಿ ಮಲ್ಲಿಕಾರ್ಜುನ ಕರೆದೊಯ್ದಿದ್ದಾರೆ. ಮಹಾರಾಷ್ಟ್ರದ ಕರಾಡ್ ಜಿಲ್ಲೆಯ ವಡೋಲಿಗೆ ಕರೆದುಕೊಂಡು ಬಂದಿದ್ದ ತಂದೆ, ಕೃಷ್ಣಾ ನದಿಗೆ ತಳ್ಳಿ ಸಿದ್ದಾರ್ಥನನ್ನು ಹತ್ಯೆಗೈದ್ದಾರೆ. ಬಳಿಕ ಮನೆಯಲ್ಲಿ ಶಾಲೆಗೆ ಸೇರಿಸಿ ಹಾಸ್ಟೆಲ್​ನಲ್ಲಿ ಬಿಟ್ಟಿದ್ದಾಗಿ ಹೇಳಿದ್ದಾರೆ. ಏಪ್ರಿಲ್ 1ರಂದು ಮಗ ಸಿದ್ದಾರ್ಥ ಹುಟ್ಟುಹಬ್ಬ ಇರುವ ಹಿನ್ನೆಲೆ ಮಗನನ್ನು ಕರೆದುಕೊಂಡು ಬರುವಂತೆ ತಾಯಿ ಭಾಗ್ಯಶ್ರೀ ಪಟ್ಟುಹಿಡಿದಿದ್ದಾರೆ.

ಪೊಲೀಸ್ ವಿಚಾರಣೆ ವೇಳೆ ಅಸಲಿ ಕಹಾನಿ ಬಾಯಿಬಿಟ್ಟ ತಂದೆ 

ಈ ಬಗ್ಗೆ ಹೆಚ್ಚು ವಿಚಾರಿಸಿದಾಗ ಮಲ್ಲಿಕಾರ್ಜುನ ಮನೆಯಿಂದ ಪರಾರಿ ಆಗಿದ್ದಾರೆ. ಇದರಿಂದ ಅನುಮಾನ ಬಂದು ಭಾಗ್ಯಶ್ರೀ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಮಹಾರಾಷ್ಟ್ರದಲ್ಲಿ ಕೊಲೆಗೈದಿರುವುದಾಗಿ ಆರೋಪಿ ಮಲ್ಲಿಕಾರ್ಜುನ ಅಸಲಿ ಸತ್ಯ ಬಾಯಿಬಿಟ್ಟಿದ್ದಾರೆ. ಸದ್ಯ ಆರೋಪಿ ಮಲ್ಲಿಕಾರ್ಜುನ ನನ್ನು ಬಂಧಿಸಿ‌ದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

14 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು ತಾಯಿಯೂ ಆತ್ಮಹತ್ಯೆ

14 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರಿನ ವೈಟ್​ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗಳು ಕಾರುಣ್ಯ ಕೊಲೆಗೈದು ತಾಯಿ ಸುವರ್ಣಾ(40) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಯುವ ಮುಖಂಡನ ಹತ್ಯೆ: 24 ಗಂಟೆಯೊಳಗೇ ಹಂತಕರು ಅರೆಸ್ಟ್, ಕೊಲೆ ರಹಸ್ಯ ಬಯಲು

ಇಮ್ಮಡಿಹಳ್ಳಿಯ ಮನೆಯ ಕೋಣೆಯಲ್ಲಿ ಮಗಳನ್ನು ಕೊಂದು ಬಳಿಕ ತಾಯಿ ಸುವರ್ಣಾ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IPL vs PSL: KKR ಆಟಗಾರ 2 ವರ್ಷ ಬ್ಯಾನ್..!

Source link

ಬಿಹಾರದಲ್ಲಿ ಬಿಜೆಪಿ ಯುಗ ಆರಂಭ; ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ – Kannada News | Bihar Gets First BJP Chief Minister, Samrat Chaudhary To Take Oath as Bihar new CM Tomorrow

ಪಾಟ್ನಾ, ಏಪ್ರಿಲ್ 14: ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ಜೆಡಿಯು ನಾಯಕ ನಿತೀಶ್ ಕುಮಾರ್ (Nitish Kumar) ಇಂದು ರಾಜೀನಾಮೆ ನೀಡಿದ್ದರು. ಅದರ ಬೆನ್ನಲ್ಲೇ ಪಾಟ್ನಾದಲ್ಲಿ ಎನ್​ಡಿಎ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ (Samrat Chaudhary) ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ಬಿಹಾರದ ಉಪಮುಖ್ಯಮಂತ್ರಿಯಾಗಿದ್ದಾರೆ. ಈ ಮೂಲಕ ಬಿಹಾರದಲ್ಲಿ ಮೊದಲ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಹೀಗಾಗಿ, ಇದು ಬಿಜೆಪಿ ಪಾಲಿಗೆ ಮಹತ್ವದ ಕ್ಷಣವಾಗಿದೆ.

Published On – 4:26 pm, Tue, 14 April 26

Source link

Vastu Secrets: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ – Kannada News | Vastu Secrets: Choosing the Right Pooja Lamp Wick for Prosperity and Peace

ಮನೆಯ ಪೂಜಾ ಸ್ಥಳವು ಅತ್ಯಂತ ಪವಿತ್ರವಾದುದು. ಇಲ್ಲಿ ಇರಿಸಲಾಗಿರುವ ಪ್ರತಿಯೊಂದು ವಸ್ತುವು ಮನೆಯ ವಾತಾವರಣ ಮತ್ತು ವಾಸ್ತುವಿನ ಮೇಲೆ ನೇರ ಪರಿಣಾಮ ಬೀರುತ್ತದೆ. ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ದೀಪ ಬೆಳಗಿಸುವುದು ಪೂಜೆಯ ಪ್ರಮುಖ ಭಾಗ. ಆದರೆ, ನೀವು ಬಳಸುವ ಹತ್ತಿಯ ಬತ್ತಿಯ ಆಕಾರವು ಎಷ್ಟು ಮುಖ್ಯ ಎಂದು ನಿಮಗೆ ತಿಳಿದಿದೆಯೇ? ವಾಸ್ತು ಶಾಸ್ತ್ರದ ಪ್ರಕಾರ, ಉದ್ದ ಮತ್ತು ದುಂಡಗಿನ ಬತ್ತಿಗಳು ವಿಭಿನ್ನ ಧಾರ್ಮಿಕ ಮಹತ್ವವನ್ನು ಹೊಂದಿವೆ.

ಉದ್ದನೆಯ ಬತ್ತಿ ಮತ್ತು ದುಂಡು ಬತ್ತಿ: ಯಾವುದು ಶ್ರೇಷ್ಠ?

ವಾಸ್ತು ಶಾಸ್ತ್ರದ ಪ್ರಕಾರ, ಎರಡೂ ರೀತಿಯ ಬತ್ತಿಗಳು ತನ್ನದೇ ಆದ ವಿಶೇಷ ಫಲಿತಾಂಶಗಳನ್ನು ನೀಡುತ್ತವೆ.

  • ಉದ್ದನೆಯ ಬತ್ತಿ (Long Wick): ಇದು ಸಂಪತ್ತು, ಸಮೃದ್ಧಿ ಮತ್ತು ವಂಶದ ಬೆಳವಣಿಗೆಯ ಸಂಕೇತ. ಲಕ್ಷ್ಮಿ ದೇವತೆ, ಸರಸ್ವತಿ, ದುರ್ಗಾ ಮಾತೆ ಅಥವಾ ನಿಮ್ಮ ಕುಲದೇವತೆಯ ಮುಂದೆ ದೀಪ ಹಚ್ಚುವಾಗ ಉದ್ದನೆಯ ಬತ್ತಿಯನ್ನು ಬಳಸುವುದು ಅತ್ಯಂತ ಶುಭ.
  • ದುಂಡು ಬತ್ತಿ (Round Wick): ಮನಸ್ಸಿನ ಸ್ಥಿರತೆ ಮತ್ತು ಆಧ್ಯಾತ್ಮಿಕ ಶಾಂತಿಗಾಗಿ ಇದನ್ನು ಬಳಸಲಾಗುತ್ತದೆ. ಭಗವಾನ್ ವಿಷ್ಣು, ಶಿವ ಅಥವಾ ಹನುಮಂತನ ಮುಂದೆ ದೀಪ ಬೆಳಗಿಸಲು ದುಂಡು ಬತ್ತಿ ಶ್ರೇಷ್ಠವೆಂದು ಪರಿಗಣಿಸಲಾಗಿದೆ.

ದೀಪದ ಬತ್ತಿಯ ದಿಕ್ಕು ನಿಮ್ಮ ಯಶಸ್ಸಿನ ದಾರಿ:

ದೀಪ ಹಚ್ಚುವಾಗ ಬತ್ತಿಯು ಯಾವ ದಿಕ್ಕಿಗೆ ಮುಖ ಮಾಡಿದೆ ಎಂಬುದು ಮುಖ್ಯ:

  • ಪೂರ್ವ ದಿಕ್ಕು: ಆರೋಗ್ಯ ಸುಧಾರಿಸುತ್ತದೆ ಮತ್ತು ಆಯುಷ್ಯ ವೃದ್ಧಿಯಾಗುತ್ತದೆ.
  • ಉತ್ತರ ದಿಕ್ಕು: ಆರ್ಥಿಕ ಲಾಭ, ಹಣಕಾಸಿನ ಮುಗ್ಗಟ್ಟು ನಿವಾರಣೆ ಮತ್ತು ಯಶಸ್ಸಿಗೆ ಈ ದಿಕ್ಕು ಸೂಕ್ತ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಸಮಸ್ಯೆಗಳ ನಿವಾರಣೆಗೆ ವಿಶೇಷ ಪರಿಹಾರಗಳು:

  • ನಕಾರಾತ್ಮಕತೆ ದೂರವಾಗಲು: ಮನೆಯಲ್ಲಿ ಅಶಾಂತಿ ಅಥವಾ ಉದ್ವಿಗ್ನತೆ ಇದ್ದರೆ ತುಪ್ಪದ ದೀಪವನ್ನು ಬೆಳಗಿಸಿ. ಅದರಲ್ಲೂ ಮಂಗಳವಾರ ಮತ್ತು ಶನಿವಾರದಂದು ಹನುಮಂತನ ಮುಂದೆ ಮಲ್ಲಿಗೆ ಎಣ್ಣೆಯ ದೀಪ ಹಚ್ಚುವುದರಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ.
  • ಆರ್ಥಿಕ ಅಭಿವೃದ್ಧಿಗೆ: ನೀವು ಆರ್ಥಿಕ ಸಂಕಷ್ಟದಿಂದ ಹೊರಬರಲು ಬಯಸಿದರೆ, ಬತ್ತಿಯನ್ನು ತಯಾರಿಸುವಾಗ ಅದಕ್ಕೆ ಸ್ವಲ್ಪ ಶ್ರೀಗಂಧದ ಪೇಸ್ಟ್ ಹಚ್ಚಿ, ನಂತರ ತುಪ್ಪದಿಂದ ದೀಪ ಬೆಳಗಿಸಿ. ಇದು ಮನೆಯಲ್ಲಿ ಸಕಾರಾತ್ಮಕ ಸುಗಂಧದ ಜೊತೆಗೆ ಸಮೃದ್ಧಿಯನ್ನು ತರುತ್ತದೆ.

ದೀಪವು ಕೇವಲ ಕತ್ತಲನ್ನು ಓಡಿಸುವುದಲ್ಲದೆ, ನಮ್ಮ ಜೀವನದ ಅಡೆತಡೆಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ. ಸರಿಯಾದ ನಿಯಮಗಳೊಂದಿಗೆ ದೀಪ ಬೆಳಗಿಸುವ ಮೂಲಕ ನಿಮ್ಮ ಮನೆಯಲ್ಲಿ ಸಂತೋಷ, ಶಾಂತಿ ಮತ್ತು ಸಕಾರಾತ್ಮಕತೆಯನ್ನು ಹೆಚ್ಚಿಸಿಕೊಳ್ಳಿ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಖಾಲಿ ಹುದ್ದೆಗಳ ಭರ್ತಿಗೆ ಹೋರಾಟಕ್ಕಿಳಿದವರ ಬಂಧನ: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಬಿತ್ತು ಬ್ರೇಕ್ – Kannada News | Karnataka Job Vacancies: Dharwad Protest for 2.84 Lakh Posts Faces Police Crackdown

ಪ್ರತಿಭಟನಾಕಾರರ ಬಂಧಿಸಿದ ಪೊಲೀಸ್​Image Credit source: tv9 kannada

ಧಾರವಾಡ, ಏಪ್ರಿಲ್​ 14: ರಾಜ್ಯದಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳ ಭರ್ತಿಗಾಗಿ (government jobs) ಧಾರವಾಡದಲ್ಲಿ ನಿರಂತರವಾಗಿ ಉದ್ಯೋಗಾಕಾಂಕ್ಷಿಗಳು ಹೋರಾಟ (Protest) ಮಾಡುತ್ತಲೇ ಬಂದಿದ್ದಾರೆ. ಸಾವಿರಾರು ಉದ್ಯೋಗಾಕಾಂಕ್ಷಿಗಳು ಹೋರಾಟ ಮಾಡಿದ ಬಳಿಕವಷ್ಟೇ ಸರಕಾರ ಹುದ್ದೆಗಳ ಭರ್ತಿ ಮಾಡಿಕೊಳ್ಳುವುದಾಗಿ ಘೋಷಿಸಿತ್ತು. ಇದೀಗ ಹೋರಾಟದ ಮುಂದುವರೆದ ಭಾಗವಾಗಿ ಇಂದು ವಿದ್ಯಾರ್ಥಿಗಳ ಸಂಘಟನೆಯಿಂದ ಹೋರಾಟವನ್ನು ಆಯೋಜಿಸಲಾಗಿತ್ತು. ಆದರೆ ಹೋರಾಟಕ್ಕೆ ಅನುಮತಿ ನಿರಾಕರಿಸಿದ ಪೊಲೀಸರು, ಬೆಳಿಗ್ಗೆಯೇ ಮುಖಂಡರನ್ನು ಬಂಧಿಸಿ, ಹೋರಾಟಕ್ಕೆ ಬ್ರೇಕ್ ಹಾಕಿದರು.

ರಾಜ್ಯದಲ್ಲಿ ಖಾಲಿ ಇರುವ 2.84 ಲಕ್ಷ ಸರಕಾರಿ ಹುದ್ದೆಗಳ ಭರ್ತಿಗಾಗಿ ಆಗ್ರಹಿಸಿ ವಿದ್ಯಾರ್ಥಿಗಳ ಸಂಘಟನೆ ಕರೆ ಕೊಟ್ಟಿತ್ತು. ಈ ಕರೆಗೆ ರೈತ ಸಂಘಟನೆ ಹಾಗೂ ಇತರೆ ಎಡಪಂಥೀಯ ಸಂಘಟನೆಗಳು ಕೂಡ ಸಾಥ್ ನೀಡಿದ್ದವು. ಆದರೆ ಹೋರಾಟಕ್ಕೆ ಉಪನಗರ ಠಾಣೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ಹಿಂದೆ ನಡೆದಿದ್ದ ಅನೇಕ ಹೋರಾಟದ ವೇಳೆಯಲ್ಲಿ ಅಹಿತಕರ ಘಟನೆಗಳು ನಡೆದಿದ್ದವಲ್ಲದೇ ಸಾರ್ವಜನಿಕರಿಗೆ ಸಮಸ್ಯೆಯಾಗಿತ್ತು. ಇದನ್ನೇ ಕಾರಣವಾಗಿಟ್ಟುಕೊಂಡು ಪೊಲೀಸರು ಅನುಮತಿ ನಿರಾಕರಿಸಿದ್ದರು. ಆದರೂ ಹೋರಾಟ ಮಾಡೋದಾಗಿ ವಿದ್ಯಾರ್ಥಿ ಸಂಘಟನೆ ಮುಖಂಡರು ಹೇಳಿದ್ದರು.

ಐವರು ಮುಖಂಡರ ಬಂಧನ 

ಅಲ್ಲದೇ ಅಂಬೇಡ್ಕರ್ ಜಯಂತಿ ದಿನವೇ ನಮ್ಮ ನಡಿಗೆ ಭೀಮನೆಡೆಗೆ ಘೋಷವಾಕ್ಯದಡಿ ಪ್ರತಿಭಟನೆ ನಡೆಸಲು ಯೋಚಿಸಿದ್ದರು. ಆದರೆ ಪೊಲೀಸರು ಅನುಮತಿ ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡ ಮುಖಂಡರು ಹೋರಾಟ ಮಾಡಿಯೇ ತೀರೋದಾಗಿ ಹೇಳಿ ಬೀದಿಗೆ ಇಳಿದರು. ಈ ವೇಳೆ ಯಲ್ಲಪ್ಪ ಹೆಗಡೆ, ನಾಗರಾಜ ಸೇರಿದಂತೆ ಐವರು ಮುಖಂಡರನ್ನು ಪೊಲೀಸರು ಜಯನಗರ ವೃತ್ತದ ಬಳಿ ಬಂಧಿಸಿ, ಕರೆದೊಯ್ದರು. ಪೊಲೀಸರ ಈ ಕ್ರಮಕ್ಕೆ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​: ಷರತ್ತು ಅನ್ವಯ

ಕಳೆದ ವರ್ಷ ಸೆಪ್ಟೆಂಬರ್ ಹಾಗೂ ಈ ವರ್ಷದ ಫೆಬ್ರವರಿಯಲ್ಲಿ ನಡೆದಿದ್ದ ಹೋರಾಟದಿಂದಾಗಿ ರಾಜ್ಯ ಸರಕಾರಕ್ಕೆ ಮುಜುಗರ ಉಂಟಾಗಿತ್ತು. ಇದೇ ವೇಳೆ ನಗರದ ಜ್ಯುಬಿಲಿ ವೃತ್ತದ ಬಳಿ ರಸ್ತೆ ತಡೆ ನಡೆಸಿದ್ದಕ್ಕೆ ಗಂಟೆಗಳ ಕಾಲ ಇಡೀ ಧಾರವಾಡ ಸ್ತಬ್ಧವಾಗಿತ್ತು. ಈ ಹಿನ್ನೆಲೆ ಮುಂದಿನ ದಿನಗಳಲ್ಲಿ ಪೊಲೀಸರು ಅನುಮತಿ ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ ಧಾರವಾಡ ಹೈಕೋರ್ಟ್ ಮೊರೆ ಹೋಗಿತ್ತು. ಇದರ ವಿಚಾರಣೆ ನಡೆಸಿದ್ದ ಹೈಕೋರ್ಟ್ ಸಂಘಟನೆಗೆ ಹೋರಾಟ ಮಾಡಲು ಅನುಮತಿ ನೀಡಿ, ಹುಬ್ಬಳ್ಳಿಯ ನೆಹರು ಮೈದಾನದಲ್ಲಿ 100 ಜನರಷ್ಟೇ ಹೋರಾಟ ಮಾಡಲು ಸೂಚಿಸಿತ್ತು.

ಸರಕಾರ ಸ್ಪಂದಿಸಿದಲೂ ಹೋರಾಟ ಮಾಡೋದು ಎಷ್ಟು ಸರಿ? ಸಚಿವ ಸಂತೋಷ ಲಾಡ್

ಅಲ್ಲದೇ ಹೋರಾಟದಲ್ಲಿ ಭಾಗಿಯಾಗುವವರ ಮಾಹಿತಿಯನ್ನು ಮುಂಚೆಯೇ ಪೊಲೀಸರಿಗೆ ನೀಡಿ, ಬಳಿಕ ಹೋರಾಟ ಮಾಡುವಂತೆ ಸೂಚನೆ ನೀಡಿತ್ತು. ಇದೇ ಕಾರಣಗಳನ್ನಿಟ್ಟುಕೊಂಡು ಪೊಲೀಸರು ಅನುಮತಿ ನಿರಾಕರಿಸಿದ್ದರು. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಹೋರಾಟಕ್ಕೆ ರಾಜ್ಯ ಸರಕಾರ ಸ್ಪಂದಿಸಿದೆ. ಆದರೂ ಅದೇಕೆ ಮತ್ತೆ ಹೋರಾಟ ಮಾಡುತ್ತಿದ್ದಾರೋ ಗೊತ್ತಿಲ್ಲ. ಅವರ ಹೋರಾಟವನ್ನು ನಾನು ಕೂಡ ಬೆಂಬಲಿಸುವೆ. ಆದರೆ ಇಷ್ಟೆಲ್ಲಾ ಸ್ಪಂದನೆ ಸಿಕ್ಕ ಬಳಿಕವೂ ಹೋರಾಟ ಮಾಡೋದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಉದ್ಯೋಗಾಕಾಕ್ಷಿಗಳಿಂದ ಮತ್ತೊಂದು ಸುತ್ತಿನ ಹೋರಾಟಕ್ಕೆ ಕರೆ: ಧಾರವಾಡದಲ್ಲಿ ನಾಳೆ ನಡೆಯಲಿದ್ಯಾ ಹೈಡ್ರಾಮಾ?

ಇದೇ ವೇಳೆ ಹೋರಾಟಕ್ಕೆ ದಲಿತ ಸಂಘಟನೆಗಳು ಕೂಡ ವಿರೋಧ ವ್ಯಕ್ತಪಡಿಸಿದ್ದವು. ಅಂಬೇಡ್ಕರ್ ಜಯಂತಿ ದಿನ ಇಂಥ ಹೋರಾಟ ಮಾಡುವ ಅವಶ್ಯಕತೆ ಇದೆಯೇ ಅನ್ನೋದು ದಲಿತ ಸಂಘಟನೆಗಳ ಪ್ರಶ್ನೆಯಾಗಿತ್ತು. ಈ ಎಲ್ಲ ಕಾರಣಗಳಿಂದ ಪೊಲೀಸರು ಹೋರಾಟಕ್ಕೆ ಬ್ರೇಕ್ ಹಾಕಿದ್ದರು. ಆದರೆ ಇದೀಗ ಹೋರಾಟವನ್ನು ಹತ್ತಿಕ್ಕಲಾಗುತ್ತಿದೆ ಅನ್ನೋ ಆರೋಪಕ್ಕೆ ಪೊಲೀಸರು ಗುರಿಯಾಗಿದ್ದಂತೂ ಸತ್ಯ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version