Headlines

Spiritual Tips: ಮನೆಯಲ್ಲಿ ಊಟದ ನಂತರ ನಮ್ಮ ತಟ್ಟೆಯನ್ನು ನಾವೇ ತೊಳೆಯಬೇಕು ಯಾಕೆ ಗೊತ್ತಾ? – Kannada News | The Spiritual and Scientific Benefits of Clearing Your Own Plate After Meals

ಊಟದ ನಂತರ ತಮ್ಮ ತಟ್ಟೆಯನ್ನು ನಾವೇ ಏಕೆ ತೆಗೆಯಬೇಕು ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಆಹಾರ ಸೇವನೆಯನ್ನು ಅನ್ನಯಜ್ಞ ಎಂದು ಕರೆಯಲಾಗುತ್ತದೆ. ಈ ಯಜ್ಞದ ಪ್ರಾರಂಭದಿಂದ ಮುಕ್ತಾಯದವರೆಗೆ ವಿನಯ, ವಿಧೇಯತೆ, ಭಕ್ತಿ ಮತ್ತು ಕೃತಜ್ಞತಾ ಭಾವ ಇರಬೇಕು. ಮನೆಯಲ್ಲಿ ತಾಯಿ, ಶ್ರೀಮತಿ, ಅಕ್ಕ, ತಂಗಿಯರು ಅಥವಾ ಬೇರೆಯವರು ಆಹಾರ ತಯಾರಿಸಿರಬಹುದು, ಅಥವಾ ನೀವೇ ತಯಾರಿಸಿರಬಹುದು. ಅನ್ನವು ಪರಬ್ರಹ್ಮ…

Read More

Video: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಡಿಸ್ಟರ್ಬ್​ ಮಾಡಿದ ರಾಹುಲ್ ಗಾಂಧಿ – Kannada News | Awkward Moment Outside Parliament as Pralhad Joshi Walks Away After Rahul Gandhi Joins In

ನವದೆಹಲಿ, ಫೆಬ್ರವರಿ 12: ಸಂಸತ್ತಿನ ಮುಂಭಾಗ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಅಶ್ವಿನಿ ವೈಷ್ಣವ್ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯೆ ಬಂದು ತೊಂದರೆ ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಇಬ್ಬರು ನಾಯಕರು ಮಾಧ್ಯಮದವರೊಂದಿಗೆ ಮಾತನಾಡುತ್ತಿರುವ ಸಮಯದಲ್ಲಿ ರಾಹುಲ್ ಗಾಂಧಿ  ಸಚಿವರ ಪಕ್ಕ ಬಂದು ನಿಂತಿದ್ದರು. ಕೂಡಲೇ ಇರುಸು ಮುರುಸು ಉಂಟಾಗಿ ಸಚಿವರು ಅಲ್ಲಿಂದ ಹೋಗಿದ್ದಾರೆ. ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಲಿರಲಿಲ್ಲ ಎಂದು ಬಿಜೆಪಿ ಫೇಸ್​​ಬುಕ್​​ನಲ್ಲಿ ವಿಡಿಯೋವನ್ನು…

Read More

IPL 2026: ಗೆದ್ದರೂ ಚಿಂತೆಗೀಡಾದ ಚೆನ್ನೈ ಸೂಪರ್ ಕಿಂಗ್ಸ್​ – Kannada News | 8 drop catches by CSK so far joint most with SRH in this season

IPL 2026: ಕ್ರಿಕೆಟ್​ ಅಂಗಳದಲ್ಲಿ ‘ಕ್ಯಾಚಸ್ ವಿನ್ ಮ್ಯಾಚಸ್’ ಎಂಬ ಮಾತೊಂದಿದೆ. ಆದರೆ ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಈ ಮಾತು ಮರೀಚಿಕೆಯಾದಂತಿದೆ.  ಚುರುಕಾದ ಫೀಲ್ಡಿಂಗ್‌ಗೆ ಹೆಸರಾಗಿದ್ದ ಧೋನಿ ಪಡೆಯ ಉತ್ತರಾಧಿಕಾರಿಗಳು, ಈ ಬಾರಿ ಮೈದಾನದಲ್ಲಿ ಕ್ಯಾಚ್‌ಗಳನ್ನು ಕೈಬಿಡುವುದರಲ್ಲೇ ದಾಖಲೆ ಬರೆಯುವ ಆತಂಕ ಅಭಿಮಾನಿಗಳಲ್ಲಿ ಮೂಡಿದೆ. ಅಂಕಿ-ಅಂಶಗಳ ಆಘಾತ: ಪ್ರಸಕ್ತ ಸೀಸನ್‌ನಲ್ಲಿ ಇದುವರೆಗೆ ಸಿಎಸ್‌ಕೆ ಆಟಗಾರರು ಬರೋಬ್ಬರಿ 8 ಕ್ಯಾಚ್‌ಗಳನ್ನು ಕೈಬಿಟ್ಟಿದ್ದಾರೆ. ಈ ಮೂಲಕ ಅತಿ ಹೆಚ್ಚು ಕ್ಯಾಚ್‌ಗಳನ್ನು ಬಿಟ್ಟ ತಂಡಗಳ…

Read More

Video: ಪುಟ್ಟ ಮಗುವಿನಂತೆ ಮನೆಮಾಲೀಕನನ್ನು ಹಿಂಬಾಲಿಸಿದ ಬಾತುಕೋಳಿ – Kannada News | The duck followed the homeowner, video goes viral

ಸ್ವಾರ್ಥ(selfishness) ತುಂಬಿದ ಪ್ರಪಂಚದಲ್ಲಿ ಮನುಷ್ಯ ಮನುಷ್ಯನನ್ನು ನಂಬುವುದೇ ಕಷ್ಟ. ಹೀಗಾಗಿ ಮೂಕ ಜೀವಿಗಳೇ ಎಷ್ಟೋ ವಾಸಿ. ಒಮ್ಮೆ ಪ್ರೀತಿ, ಕಾಳಜಿ ತೋರಿಸಿದ್ರೆ ಆ ವ್ಯಕ್ತಿಯನ್ನು ಜೀವನ ಪರ್ಯಂತ ಮರೆಯಲ್ಲ. ಮಕ್ಕಳಂತೆ ಮನೆ ಮಾಲೀಕನ ಬರುವಿಕೆಗಾಗಿ ಕಾಯುತ್ತದೆ. ಈ ದೃಶ್ಯ ನೋಡಿದ ಮೇಲೆ ನಿಮಗೂ ಹಾಗೆಯೇ ಅನಿಸಬಹುದು. ತನ್ನ ಹಸಿವು ನೀಗಿಸಿದ ಮನೆ ಮಾಲೀಕನ ಮೇಲೆ ಈ ಬಾತುಕೋಳಿಗೆ ಎಷ್ಟು ಪ್ರೀತಿಯಿದೆ ಎನ್ನುವುದಕ್ಕೆ ಇದುವೇ ಸಾಕ್ಷಿ. ಇದೀಗ ಪುಟ್ಟ ಮಗುವಿನಂತೆ ಬಾತುಕೋಳಿಯೊಂದು (duck) ಮನೆ ಮಾಲೀಕನನ್ನು ಹಿಂಬಾಲಿಸಿಕೊಂಡು ಹೋಗುವ…

Read More

ವಿಜಯಪುರ: ಟ್ರ್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಚಡಚಣದಲ್ಲಿ ಪತ್ತೆ, ಬಯಲಾಯ್ತು ರಹಸ್ಯ! – Kannada News | GPS Tracked Vulture Found in Vijayapura Farm Reveals Maharashtra Forest Department Research

ವಿಜಯಪುರ, ಜನವರಿ 16: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ್ಯಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಮಾದರಿಯ ಉಪಕರಣಗಳನ್ನು ಹೊಂದಿದ್ದ ರಣಹದ್ದು ಪತ್ತೆಯಾಗಿದ್ದು, ಈ ಘಟನೆ ಹಲವು ಅನುಮಾನಗಳಿಗೆ ತೆರೆ ಎಳೆದಿದೆ. ತೋಟದಲ್ಲಿ ಅಸಹಜ ಸ್ಥಿತಿಯಲ್ಲಿ ಕುಳಿತಿದ್ದ ದೊಡ್ಡ ಪಕ್ಷಿಯನ್ನು ಕಂಡ ಸ್ಥಳೀಯರು ತಕ್ಷಣ 112 ಗೆ ಕರೆ ಮಾಡಿದರು. ಸ್ಥಳಕ್ಕೆ ಧಾವಿಸಿದ 112 ಪೊಲೀಸರು ರಣಹದ್ದನ್ನು ವಶಕ್ಕೆ ಪಡೆದು, ಝಳಕಿ ಪೊಲೀಸ್ ಠಾಣೆಗೆ ಸ್ಥಳಾಂತರಿಸಿದರು. ರಣಹದ್ದಿನ ಕಾಲಿಗೆ ಗುರುತಿನ ಸಂಖ್ಯೆಯ ಟ್ಯಾಗ್ ಅಳವಡಿಸಿರುವುದು…

Read More

MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್ – Kannada News | Desert Vipers won their maiden ILT20 title

ದುಬೈ ಇಂಟರ್​​​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಇಂಟರ್​​ನ್ಯಾಷನಲ್ ಲೀಗ್ ಟಿ20 ಫೈನಲ್ ಪಂದ್ಯದಲ್ಲಿ ಎಂಐ ಎಮಿರೇಟ್ಸ್ ತಂಡಕ್ಕೆ ಸೋಲುಣಿಸಿ ಡೆಸರ್ಟ್ ವೈಪರ್ಸ್ ತಂಡವು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಸರ್ಟ್ ವೈಪರ್ಸ್ ಪರ ನಾಯಕ ಸ್ಯಾಮ್ ಕರನ್ 51 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 74 ರನ್ ಬಾರಿಸಿದ್ದರು. ಈ ಅರ್ಧಶತಕದ…

Read More

ದೀರ್ಘಾವಧಿ ಸಿಎಂ: ದೇವರಾಜ ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು – Kannada News | Siddaramaiah Reacts about Breaks Devaraj urs record of karnatakas long term chief minister

ಮೈಸೂರು, (ಜನವರಿ 05): ಕರ್ನಾಟಕದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ (Siddaramaiah) ಅವರು ಪಾತ್ರರಾಗಲು ಕೇವಲ ಒಂದೇ ದಿನ ಬಾಕಿ ಇದ್ದು, ದೇವರಾಜ ಅರಸು ಅವರ ದಾಖಲೆಯನ್ನು ನಾಳೆ (ಜನವರಿ 06) ಮುರಿಯಲಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು (D Devaraj urs )ಕರ್ನಾಟಕದ ಸಿಎಂ‌ ಆಗಿದ್ದ‌ರು. ಇದೀಗ ಈ ದಾಖಲೆಯನ್ನು ನಾಳೆ ಸಿದ್ದರಾಮಯ್ಯ ಮುರಿಯಲಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಇಂದು (ಜನವರಿ 05) ಮಾಧ್ಯಮಗಳಿಗೆ…

Read More

ಪ್ರೀತಿಸಿ ಕೊನೆಗೆ ಜಾತಿ ಬೇರೆ ಎಂದು ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ – Kannada News | Young Medical Intern Found Dead in Telangana, Caste Angle Alleged

ಸಾವು-ಸಾಂದರ್ಭಿಕ ಚಿತ್ರImage Credit source: Hindustan Times ಹೈದರಾಬಾದ್, ಜನವರಿ 07: ಪ್ರೀತಿಸಿ ಕೊನೆಗೆ ಜಾತಿ ಬೇರೆ ಎಂದು ಮದುವೆ(Marriage)ಯಾಗಲು ನಿರಾಕರಿಸಿದ್ದಕ್ಕೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಸಿದ್ದಿಪೇಟೆ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಯುವತಿ ಹೌಸ್ ಸರ್ಜನ್ ಆಗಿ ಕೆಲಸ ನಿರ್ವಹಿಸುತ್ತಿದ್ದಳು, ಅಲ್ಲೇ ಕೆಲಸ ಮಾಡುತ್ತಿರುವ ಸಹೋದ್ಯೋಗಿ ಮೇಲೆ ಪ್ರೇಮಾಂಕುರವಾಗಿತ್ತು. ಮದುವೆಯಾಗುವುದಾಗಿ ನಂಬಿಸಿ ಕೊನೆಗೆ ಕೈಕೊಟ್ಟಿದ್ದಕ್ಕೆ ಆಕೆ ಮನನೊಂದು ಆಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜನವರಿ 3ರಂದು ಕಾಲೇಜಿನ ಹಾಸ್ಟೆಲ್​​ನಲ್ಲಿ ಕಳೆನಾಶಕ…

Read More