Headlines

Apply Now: ಮಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ; ಆನ್‌ಲೈನ್ ಲಿಂಕ್, ಶೈಕ್ಷಣಿಕ ಅರ್ಹತೆ ಪೂರ್ಣ ವಿವರ ಇಲ್ಲಿದೆ – Kannada News | Mangalore University Guest Faculty Recruitment 2026: Apply Online for PG Teaching Posts

ಮಂಗಳೂರು ವಿಶ್ವವಿದ್ಯಾನಿಲಯವು 2026-27 ನೇ ಶೈಕ್ಷಣಿಕ ಸಾಲಿಗೆ ವಿವಿಧ ಸ್ನಾತಕೋತ್ತರ (PG) ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ (Guest Faculty) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಈ ಬೋಧನಾ ಹುದ್ದೆಗಳು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಲಭ್ಯವಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಕೊನೆಯ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಹುದ್ದೆಗಳು ಲಭ್ಯವಿರುವ ಪ್ರಮುಖ ವಿಷಯಗಳು: ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ, ಇಂಗ್ಲಿಷ್, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸೋಷಿಯಲ್ ವರ್ಕ್,…

Read More

ದೊಡ್ಡ ಡೆಪಾಸಿಟ್​ಗಳಿಗೆ ತಮ್ಮದೇ ಬಡ್ಡಿದರ ನಿಗದಿ ಮಾಡಲು ಬ್ಯಾಂಕುಗಳಿಗೆ ಆರ್​ಬಿಐ ಅನುಮತಿ – Kannada News | Bulk Deposits, RBI allows banks to fix differential interest rates

ನವದೆಹಲಿ, ಜುಲೈ 31: ಬ್ಯಾಂಕುಗಳ ಬಡ್ಡಿದರ ವಿಚಾರದಲ್ಲಿ ಆರ್​ಬಿಐನ ಕಟ್ಟುಪಾಡುಗಳು ಬಿಗಿಯಾಗಿವೆ. ಬ್ಯಾಂಕುಗಳು ಈ ಕಟ್ಟುಪಾಡುಗಳ ಒಳಗೆ ಬಡ್ಡಿ ನಿಗದಿ ಮಾಡಬೇಕು. ಆದರೆ, ಬಲ್ಕ್ ಡೆಪಾಸಿಟ್ (Bulk Deposits) ವಿಚಾರದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಸ್ವಲ್ಪ ನಿಯಮ ಸಡಿಲಿಸಿದೆ. ಬ್ಯಾಂಕುಗಳಿಗೆ ಬಲ್ಕ್ ಡೆಪಾಸಿಟ್‌ಗಳ (ಬೃಹತ್ ಠೇವಣಿಗಳು) ಮೇಲಿನ ಬಡ್ಡಿದರಗಳ ನಿಯಮದಲ್ಲಿ ಪ್ರಮುಖ ಬದಲಾವಣೆ ತಂದಿದೆ. ಬಲ್ಕ್ ಡೆಪಾಸಿಟ್‌ಗಳಿಗೆ ಲಿಕಿಡಿಟಿ ಕವರೇಜ್ ರೇಶಿಯೋ (LCR) ಚೌಕಟ್ಟಿನಡಿಯಲ್ಲಿ ವಿಭಿನ್ನ ಬಡ್ಡಿದರಗಳನ್ನು (Differential Rates) ನೀಡಲು ಅವಕಾಶ ಮಾಡಿಕೊಟ್ಟಿದೆ. ಠೇವಣಿದಾರರ…

Read More

ಗಾಲ್ವಾನ್ ಸಂಘರ್ಷದ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ – Kannada News | Xi Jinping Likely to Visit India for BRICS Summit After Years of Border Tensions

ನವದೆಹಲಿ, ಜುಲೈ 31: ಭಾರತದ ಆತಿಥ್ಯದಲ್ಲಿ ನಡೆಯಲಿರುವ 18ನೇ ಬ್ರಿಕ್ಸ್​ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್(Xi Jinping) ಅವರು ಸೆಪ್ಟೆಂಬರ್​​ನಲ್ಲಿ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. 2020 ರ ಗಾಲ್ವಾನ್ ಕಣಿವೆ ಭೀಕರ ಸಂಘರ್ಷ ಹಾಗೂ ವಾಸ್ತವ ನಿಯಂತ್ರಣ ರೇಖೆಯ (LAC) ಮಿಲಿಟರಿ ಬಿಕ್ಕಟ್ಟಿನ ನಂತರ ಚೀನಾ ಅಧ್ಯಕ್ಷರು ಭಾರತಕ್ಕೆ ಆಗಮಿಸುತ್ತಿರುವುದು ಇದೇ ಮೊದಲ ಬಾರಿಯಾಗಿದ್ದು, ಈ ಭೇಟಿಯು ದ್ವಿಪಕ್ಷೀಯ ರಾಜತಾಂತ್ರಿಕತೆಯಲ್ಲಿ ಅತ್ಯಂತ ಐತಿಹಾಸಿಕ ಎಂದೇ ವಿಶ್ಲೇಷಿಸಲಾಗಿದೆ. ಸೆಪ್ಟೆಂಬರ್ 12-13ರಂದು ನವದೆಹಲಿಯಲ್ಲಿ ಬ್ರಿಕ್ಸ್…

Read More

ಕಾವೇರಿ ಜಲ ವಿವಾದ: ಆ.13ರಂದು ಅಖಂಡ ಕರ್ನಾಟಕ ಬಂದ್​​ಗೆ ಕರೆ ನೀಡಿದ ಕನ್ನಡಪರ ಸಂಘಟನೆಗಳು – Kannada News | Cauvery Water Dispute: Pro Kannada Outfits Call for Total Karnataka Bandh on August 13 Against CWMA Order

ವಾಟಾಳ್​​ ನಾಗರಾಜ್​​ ಸುದ್ದಿಗೋಷ್ಠಿImage Credit source: Tv9 Kannada ಬೆಂಗಳೂರು, ಜುಲೈ 31: ಕರ್ನಾಟಕದಲ್ಲಿಯೇ ನೀರಿಲ್ಲದಿರುವಾಗ ನೆರೆ ರಾಜ್ಯ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿರುವ CWMA ನಿರ್ಧಾರ ಖಂಡಿಸಿ ಕನ್ನಡಪರ ಸಂಘಟನೆಗಳು ಆಗಸ್ಟ್ 13ರ ಗುರುವಾರ ಅಖಂಡ ಕರ್ನಾಟಕ ಬಂದ್​​ಗೆ ಕರೆ ನೀಡಿವೆ. ಈ ಬಗ್ಗೆ ಕನ್ನಡ ಪರ ಸಂಘಟನೆಗಳ ಜೊತೆ ಚರ್ಚೆ ನಂತರ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್ ಅಧಿಕೃತ ಘೋಷಣೆ ಮಾಡಿದ್ದಾರೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್​​ಗೆ ತೀರ್ಮಾನಿಸಲಾಗಿದೆ. ಬಂದ್​​ಗೆ…

Read More

ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?: ವಕೀಲ ಸುನೀಲ್ ಹೇಳಿದ್ದೇನು? – Kannada News | Karnataka High Court Suspends Vinay Kulkarnis Conviction, Granting Bail and Reviving His MLA Position

ಬೆಂಗಳೂರು, ಜು.31: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್ ಮತ್ತು ಜಿ. ಬಸವರಾಜ ಅವರಿದ್ದ ಪೀಠವು ಈ ಆದೇಶ ನೀಡಿದೆ. ಕುಲಕರ್ಣಿ ಅವರಿಗೆ ಕೆಳಹಂತದ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ತಡೆಯನ್ನು ನೀಡಿದ್ದು, ಜೀವಾವಧಿ ಶಿಕ್ಷೆಯ ತೀರ್ಪಿಗೆ ತಡೆಯಾಜ್ಞೆ ನೀಡಲಾಗಿದೆ. ವಕೀಲ ಸುನೀಲ್ ಅವರು ಈ ಕುರಿತು ಮಾತನಾಡಿ, ಇದು ಕಾನೂನು ಹೋರಾಟದ ಒಂದು ಮಧ್ಯಂತರ ಜಯ…

Read More

‘ಟಾಕ್ಸಿಕ್’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ಕಿಯಾರಾ – Kannada News | Kiara Advani explains why she choose to act in Toxic movie

ಕಿಯಾರಾ ಅಡ್ವಾಣಿ (Kiara Advani), ಬಾಲಿವುಡ್​​ನ ಸ್ಟಾರ್ ನಟಿ. ಕಿಯಾರಾ ಅವರು ಸಿನಿಮಾಗಳಲ್ಲಿ ಅತಿಯಾಗಿ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವುದು ಬಹಳ ಕಡಿಮೆ. ಮದುವೆಯಾದ ಬಳಿಕವಂತೂ ಗ್ಲಾಮರಸ್ ಪಾತ್ರಗಳಿಗೆ ನೋ ಎಂದಿದ್ದೇ ಹೆಚ್ಚು. ಆದರೆ ‘ಟಾಕ್ಸಿಕ್’ ಸಿನಿಮಾನಲ್ಲಿ ಮಾತ್ರ ಯಾವುದೇ ಮುಜುಗರಗಳಿಲ್ಲದೆ ಗ್ಲಾಮರಸ್ ಪಾತ್ರವನ್ನು ಒಪ್ಪಿಕೊಂಡಿರುವುದು ಮಾತ್ರವಲ್ಲದೆ, ಕೆಲವು ಹಸಿ-ಬಿಸಿ ದೃಶ್ಯಗಳಲ್ಲಿಯೂ ಸಹ ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಕಿಯಾರಾ, ‘ಟಾಕ್ಸಿಕ್’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ಅವರೇ ವಿವರಿಸಿದ್ದಾರೆ. ‘ಫೆಮಿನಾ’ ಜೊತೆಗೆ ಮಾತನಾಡಿದ್ದ ಕಿಯಾಂಡಾ ಅಡ್ವಾಣಿ ತಾವು ‘ಟಾಕ್ಸಿಕ್’ ಸಿನಿಮಾ…

Read More

ಪಶ್ಚಿಮ ಬಂಗಾಳದಲ್ಲಿ ಜೈಶ್ ಉಗ್ರ ಹಮೀದ್ ಮಂಡಲ್ ಬಂಧನ: ಸಿಎಂ ಸುವೇಂದು ಕಾರ್ಯಕ್ರಮಗಳ ಮೇಲೆ ಕಣ್ಣು – Kannada News | West Bengal: JeM Terrorist Hamid Mondal Arrested, Monitored CM, Huge Explosives Seized

ಕೋಲ್ಕತ್ತಾ, ಜುಲೈ 31: ಪಶ್ಚಿಮ ಬಂಗಾಳದ ಬರ್ಧಮಾನ್‌ನಲ್ಲಿ ಭಯೋತ್ಪಾದನಾ ವಿರೋಧಿ ಪಡೆ (STF) ನಡೆಸಿದ ಕಾರ್ಯಾಚರಣೆಯಲ್ಲಿ ‘ಜೈಶ್-ಎ-ಮೊಹಮ್ಮದ್’ (JeM) ಉಗ್ರ ಸಂಘಟನೆಯ ಸಕ್ರಿಯ ಸದಸ್ಯ ಹಮೀದ್ ಮಂಡಲ್ ಎಂಬುವವನನ್ನು ಶುಕ್ರವಾರ ಬಂಧಿಸಲಾಗಿದೆ. ಬಂಧಿತ ಉಗ್ರನಿಂದ ವಶಪಡಿಸಿಕೊಂಡ ಮೊಬೈಲ್ ಫೋನ್ ಮತ್ತು ಪ್ರಮುಖ ದಾಖಲೆಗಳನ್ನು ವಿಶ್ಲೇಷಿಸಿರುವ ಎಸ್‌ಟಿಎಫ್ ಪಡೆಗಳು, ಆತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳ ಕಾರ್ಯಕ್ರಮಗಳನ್ನು ಲಕ್ಷ್ಯವಿಟ್ಟು ವಿಐಪಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಎಂಬ ಭಾರಿ ಶಂಕೆ ವ್ಯಕ್ತಪಡಿಸಿವೆ. ಬರ್ಧಮಾನ್‌ನ ನವೋದಯ ಟೌನ್‌ಶಿಪ್ ಪ್ರದೇಶದ ಬಾಡಿಗೆ…

Read More

ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆಂದ ಹೋರಾಟಗಾರ ಬಸವರಾಜ್ ಕೊರವರ್ – Kannada News | Vinay Kulkarni Bail: Yogesh Gowda Case Activist Basavaraj Koravar Says Will Move Supreme Court

ಧಾರವಾಡ, ಜುಲೈ 31: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್‌ನಿಂದ ತಡೆಯಾಜ್ಞೆ ದೊರೆತಿರುವ ಬಗ್ಗೆ ಹೋರಾಟಗಾರ ಬಸವರಾಜ್ ಕೊರವರ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ಹೈ ಪ್ರೊಫೈಲ್ ಕ್ರಿಮಿನಲ್ ಪ್ರಕರಣಗಳಲ್ಲಿ ಜಾಮೀನು, ತಡೆಯಾಜ್ಞೆ ಕೂಡ ಸಿಗಬಾರದು ಎಂದು ಅವರು ಅಭಿಪ್ರಾಯಪಟ್ಟರು. ನ್ಯಾಯಾಲಯದ ಆದೇಶವನ್ನು ಗೌರವಿಸುವುದಾಗಿ ಹೇಳಿದ ಅವರು, ಆದೇಶದ ಸಂಪೂರ್ಣ ಪ್ರತಿ ಬಂದ ನಂತರ, ಯಾವ ಅಂಶಗಳ ಆಧಾರದ ಮೇಲೆ ಹೈಕೋರ್ಟ್ ಈ ತಡೆಯಾಜ್ಞೆ…

Read More

‘ರಾಮಾಯಣ’ ಟ್ರೇಲರ್​​ ಬೆನ್ನಲ್ಲೇ ರಾವಣನ ಪ್ರತಿಮೆ ಎದುರು ಪೋಸ್​ ಕೊಟ್ಟ ರಾಧಿಕಾ ಪಂಡಿತ್ – Kannada News | Radhika Pandit Shares Striking Picture With Ravana Idol After Husband Yash Ramayana Trailer Creates Record

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ಟ್ರೇಲರ್ ಜುಲೈ 30ರಂದು ಬಿಡುಗಡೆಯಾಗಿ ವಿಶ್ವಾದ್ಯಂತ ಧೂಳೆಬ್ಬಿಸುತ್ತಿದೆ. ಚಿತ್ರದಲ್ಲಿ ಲಂಕಾಧಿಪತಿ ರಾವಣನಾಗಿ ಯಶ್ ಕಾಣಿಸಿಕೊಂಡಿರುವ ಅಬ್ಬರದ ಝಲಕ್ ಅಭಿಮಾನಿಗಳಲ್ಲಿ ಭಾರಿ ರೋಮಾಂಚನ ಸೃಷ್ಟಿಸಿದೆ. ಈ ಸಂಭ್ರಮದ ನಡುವೆಯೇ ಯಶ್ ಪತ್ನಿ, ನಟಿ ರಾಧಿಕಾ ಪಂಡಿತ್ (Radhika Pandit) ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಹೊಸ ಫೋಟೋವೊಂದು ಈಗ ಇಂಟರ್ನೆಟ್‌ನಲ್ಲಿ ಸಖತ್ ವೈರಲ್ ಆಗುತ್ತಿದೆ. ರಾವಣನ ಮೂರ್ತಿ ಮುಂದೆ ನಿಂತ ರಾಧಿಕಾ ಪಂಡಿತ್ ರಾಧಿಕಾ ಪಂಡಿತ್ ಅವರು ಹಂಚಿಕೊಂಡಿರುವ ಫೋಟೋದಲ್ಲಿ…

Read More

KEA Recruitment 2026: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ! – Kannada News | KEA Village Administrative Officer Recruitment 2026: Application Last Date Extended, Check New Dates

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ (Village Administrative Officer – VA) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿದೆ. ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿನ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದ ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಈ ಪ್ರಮುಖ ಪ್ರಕಟಣೆಯನ್ನು ಹೊರಡಿಸಲಾಗಿದೆ. ವಿಸ್ತರಿಸಲಾದ ಹೊಸ ದಿನಾಂಕಗಳ ವಿವರ: ಈ ಹಿಂದೆ ಹೊರಡಿಸಲಾಗಿದ್ದ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು 30.07.2026 ಮತ್ತು ಶುಲ್ಕ…

Read More