ದಿನ ಭವಿಷ್ಯ: ಇಂದು ಈ ರಾಶಿಯವರ ಅನ್ಯ ಮನಃಸ್ಥಿತಿಯಿಂದ ಉದ್ಯಮ ನಷ್ಟ – Kannada News

ಮೇಷ ರಾಶಿ:

ಕಾಲಕ್ಕಾಗಿ ತಾಳ್ಮೆಯಿಂದ ಕುಳಿತುಕೊಳ್ಳಬೇಕಾಗಬಹುದು. ಕೂಡಿಟ್ಟ ಹಣವು ಇಂದು ನಿಮ್ಮ ಸಮಯಕ್ಕೆ ಸರಿಯಾಗಿ ಸಿಗುವುದು. ನಿಮ್ಮಿಂದ ಪ್ರೀತಿಯನ್ನು ಬಯಸುವವರಿಗೆ ಪ್ರೀತಿಯನ್ನು ಕೊಡಿ. ಅನಾರೋಗ್ಯದ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬೇಕು. ನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸವಾಗಲಿದೆ. ಸಂಗಾತಿಯು ನಿಮ್ಮ ಗುಟ್ಟನ್ನು ಹೊರಹಾಕಬಹುದು. ಬಹಳ ದಿನಗಳಿಂದ ಕಾರ್ಮಿಕರ ವಿಚಾರದಲ್ಲಿ ನಿಮಗೆ ಅಸಮಾಧಾನವಿದ್ದು ಅದನ್ನು ತೋರ್ಪಡಿಸುವಿರಿ.

ವೃಷಭ ರಾಶಿ:

ನಿರಂತರ ಶ್ರಮಕ್ಕೆ ಫಲವಿರುತ್ತದೆ. ಕರ್ತವ್ಯದ ದೃಷ್ಟಯಿಂದ ಮಾಡಿ. ಫಲಾಪೇಕ್ಷೆಯು ಇದ್ದರೆ ಹತಾಶೆಯು ಖಂಡಿತಾ ಇರುವುದು. ಮನಸ್ಸಿನಲ್ಲಿ ನಕಾರಾತ್ಮಕ ಭಾವನೆಗಳನ್ನು ತೆಗೆದುಹಾಕಿ. ಬರಬೇಕಾದ ಹಣವು ಮಧ್ಯದಲ್ಲೇ ನಿಲ್ಲಬಹುದು. ಧನಾತ್ಮಕ ಅಂಶಗಳನ್ನು ಹುಡುಕಿ ಮುನ್ನಡೆಯಿರಿ. ದಾರಿ ತಾನಾಗಿಯೇ ತೆರದುಕೊಳ್ಳುವುದು. ಮಕ್ಕಳಿಗೆ ಜವಾಬ್ದಾರಿ ಕೊಡಲು ಭಯ. ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚು ಚಿಂತೆ ಮಾಡುವ ಅವಶ್ಯಕತೆ ಇದೆ. ನಿಮ್ಮ ವಿವಾಹದ ಮಾತುಕತೆಗಳು ಖುಷಿ ಕೊಡಲಿದೆ.

ಮಿಥುನ ರಾಶಿ:

ದೇಹ ಸೌಂದರ್ಯವನ್ನು ಬೆಳೆಸಿಕೊಳ್ಳಲು ಸಮಯವನ್ನು ಮೀಸಲಿಡುವಿರಿ. ವಿಧಿಯನ್ನು ಹಳಿದು ನಿಮಗೆ ಸಮಾಧಾನವನ್ನು ತಂದುಕೊಳ್ಳುವಿರಿ. ನಿಮ್ಮ ಮಾತುಗಳಿಂದ ಕೆಲವರು ಪ್ರೇರಣೆ ಪಡೆದರೆ, ಕೆಲವರು ನಿಮ್ಮ ಮಾತನ್ನೇ ಆಡಿಕೊಳ್ಳುವರು. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ತಲ್ಲೀನರಾಗಿ ಹೊರ ಜಗತ್ತನ್ನು ಮರೆಯುವರು. ಸುಮ್ಮನೇ ಎಲ್ಲಗಾದರೂ ಹೋಗಬೇಕು ಎಂದು ಅನ್ನಿಸುವುದು. ಜವಾಬ್ದಾರಿಯಿಂದ ತಲೆ ಭಾರವಾಗುವುದು.

ಕರ್ಕಾಟಕ ರಾಶಿ:

ಅನಾರೋಗ್ಯದಿಂದ ಚೇತರಿಕಯನ್ನು ಕಂಡುಕೊಳ್ಳಬಹುದಾಗಿದೆ. ಮಕ್ಕಳ ಮುಂದಿನ ವಿದ್ಯಾಭ್ಯಾಸದ ಚಿಂತೆ ಇರಲಿದೆ. ಒತ್ತಾಯ ಪೂರ್ವಕವಾಗಿ ನಿಮಗೆ ಇಚ್ಛೆಯಿರುವ ವಿಷಯವನ್ನು ಹೇರಬೇಡಿ. ಹಂಚಿಕೆಯ ವಿಚಾರದಲ್ಲಿ ನಿಮಗೆ ಪೂರ್ಣವಾದ ಮನಸ್ಸಿರದು. ಆಯ್ಕೆ ಮಾಡಲು ಅವರಿಗೆ ಸ್ವಾತಂತ್ರ್ಯವಿರಲಿ. ಇದರಿಂದ ನಿಮಗೆ ನಿರಾಸೆಯಾಗಲಿದೆ. ಆಸ್ತಿಯ ವಿಚಾರಕ್ಕೆ ನೆರೆಹೊರೆಯ ನಡುವೆ ಕಲಹವಾದೀತು. ನಿಮ್ಮ ಆರಾಮದ ದಿನಚರಿಯಲ್ಲಿಯೂ ನಿಮಗೆ ಇಂದು ಅನ್ಯರಿಮಂದ ಕಿರಿಕಿರಿ.

ಸಿಂಹ ರಾಶಿ:

ವಿದೇಶಕ್ಕೆ ಹೋಗಲು ಆಲೋಚನೆ ಮಾಡದಿದ್ದರೂ ಹೋಗುವ ಅನಿವಾರ್ಯ ಬರಲಿದೆ. ಆನಾರೋಗ್ಯದಿಂದ ಮುಕ್ತಿಸಿಗಲಿದೆ. ಸಹೋದರನ ಹಾಗೂ ತಂದೆಯ ಸಹಾಯ ನಿಮಗೆ ಸಿಗಲಿದೆ. ಆಪ್ತರ ಚಿಕಿತ್ಸೆಗೆ ಧನಸಹಾಯ ಮಾಡಬೇಕಾಗುವುದು. ರಾಜಕಾರಣಿಗಳು ಗೆಲ್ಲುವ ತಂತ್ರವನ್ನು ಹೂಡುವರು. ದೈಹಿಕ ಶ್ರಮವು ಇಂದು ಅಧಿಕವಾಗುವುದು. ನಿಮ್ಮ ಶಿಷ್ಯರಿಂದ ನಿಮಗೆ ಉಡುಗೊರೆ ಸಿಗುವ ಸಾಧ್ಯತೆ ಇದೆ. ಭೂಮಿಯನ್ನು ಮಾರಾಟಮಾಡುವ ಸ್ಥಿತಿಯು ಬರಲಿದೆ.

ಕನ್ಯಾ ರಾಶಿ:

ಆಪ್ತರ ಜೊತೆ‌ ಮನಸ್ಸು ಬಿಚ್ಚಿ ಮಾತನಾಡಿ. ಸರ್ಕಾರದ ಕೆಲಸಗಳು ನಿಧಾನವಾಗಲಿದೆ. ಮತ್ತೆ ಮತ್ತೆ ಬರುವ ಸಂಕಷ್ಟಕ್ಕೆ ದೈವಕ್ಕೆ ಮೊರೆ ಹೋಗಬೇಕಾಗುವುದು. ಭಾರವಾದುದನ್ನು ಎತ್ತಿ ಅಪಾಯ ತಂದುಕೊಳ್ಳುವಿರಿ. ಪ್ರತಿಕೂಲ ವಾತಾವರಣದಲ್ಲಿಯೂ ನಿಮಗೆ ಅನುಕೂಲಕರ ವಾತಾವರಣ ಇರಲಿದೆ. ಕುಟುಂಬದಲ್ಲಿ ನಿಮ್ಮನ್ನು ಸರಿಯಾಗಿ ಆದರಿಸದೇ ಇರಬಹುದು. ಸುತ್ತಾಟದಿಂದ ಆಯಾಸವಿದೆ. ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇರಲಿದೆ. ನಿಮ್ಮ ಇಷ್ಟದವರು ನಿಮ್ಮ ಭೇಟಿಯಾಗಬಹುದು.

ತುಲಾ ರಾಶಿ:

ಮನೆಯವರ ಜೊತೆ ಖುಷಿಯಿಂದ ಕಾಲಕಳೆಯುವಿರಿ. ಪ್ರವಾಹದ ವಿರದ್ಧ ಈಜಲು ಸಾಧ್ಯವಾಗದು. ವಾಹನ ಅಪಘಾತವು ಆಗಬಹುದು, ಜಾಗರೂಕತೆಯಿಂದ ಇರಿ. ಕೃಷಿಕರು ತಾವು ಬೆಳೆದ ಬೆಳೆಯಿಂದ ನಷ್ಟವನ್ನು ಅನುಭವಿಸುವಿರಿ. ನಿಮ್ಮನ್ನು ಹಾದಿ ತಪ್ಪಿಸಲು ಪ್ರಯತ್ನಿಸಿದ ವ್ಯಕ್ತಿಗಳು ನಿಮ್ಮ ಸಾಧನೆಯನ್ನು ಕಂಡು ಕೊರಗಬಹುದು. ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಯಶಸ್ಸನ್ನು ಗಳಿಸಲು ಬಹಳ ಪ್ರಯತ್ನಶೀಲರಾಗುವರು. ಆದಾಯದ ಗುಟ್ಟನ್ನು ಎಷ್ಟೇ ಒತ್ತಾಯ ಮಾಡಿದರೂ ಹೇಳಲಾರಿರಿ.

ವೃಶ್ಚಿಕ ರಾಶಿ:

ನಡೆ, ನುಡಿಗಳಲ್ಲಿ ಬಹಳ ಜಾಗರೂಕರಾಗಿರಿ. ಧನವು ಕೈಗೆಟುಕದ ದ್ರಾಕ್ಷಿಯಂತೆ ಅನ್ನಿಸಬಹುದು. ಕೆಟ್ಟ ಆಲೋಚನೆಗಳು ನಿಮ್ಮ ಮನಸ್ಸನ್ನು ಹಾಳು ಮಾಡಬಹುದು. ಅನಾರೋಗ್ಯವು ನಿರ್ಲಕ್ಷ್ಯದಿಂದ ಹೆಚ್ಚಾಗುವುದು. ನಿಮಗೆ ಬರಬೇಕಾದ ಹಣದ ಕುರಿತು ಲೆಕ್ಕವಿರಲಿ. ಕೆಲಸದಲ್ಲಿ ಆಲಸ್ಯ ಮಾಡಿ ಬರಬೇಕಾದುದನ್ನು ಕಳೆದುಕೊಳ್ಳುವಿರಿ. ಮನಸ್ಸಿನ ನೆಮ್ಮದಿಯು ಕೆಡಬಹುದು. ಆಗದೇ ಇರುವ ಕೆಲಸಕ್ಕೆ ಬೇಸರ ಬೇಡ. ವೃತ್ತಿಯಲ್ಲಿ ಆತಂಕವು ಇರಲಿದೆ.

ಧನು ರಾಶಿ:

ಅನಿರೀಕ್ಷಿತ ಎದುರಾದ ಖರ್ಚಿನಿಂದಾಗಿ ಸ್ನೇಹಿತರಲ್ಲಿ ಹಣವನ್ನು ಕೇಳುವಿರಿ. ನಿಮ್ಮ ಬಳಿ ಅತಿಯಾದ ಕೆಲಸವನ್ನು ಪಡೆಯಬಹುದು. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಿ ವಿವಾದಗಳೂ ತಾರಕಕ್ಕೆ ಹೋಗಬಹುದು. ಅತಿಯಾದ ಸೌಖ್ಯವನ್ನು ಪಡೆಯಲು ಹೋಗಿ ಅನಾಹುತವನ್ನು ಮಾಡಿಕೊಳ್ಳಬಹುದು. ತಪ್ಪಿನಿಂದ ಹೊಬರಲಾಗದು. ಇಂದು ನಿಮ್ಮ ಸಹಾಯದಿಂದ ಕುಟುಂಬವು ಸಂತೋಷಗೊಳ್ಳುವುದು. ಸಮಸ್ಯೆಯನ್ನು ದೊಡ್ಡ ಮಾಡಿಕೊಳ್ಳಲಿದ್ದೀರಿ.

ಮಕರ ರಾಶಿ:

ನಿಮ್ಮ ವೇಗಕ್ಕೆ ಸಕಾಲದಲ್ಲಿ ಆಗುವ ಕಾರ್ಯಗಳೂ ತುಂಬ ದೀರ್ಘವೆನಿಸುತ್ತದೆ. ಹಣಕಾಸಿನ ವಿಚಾರವಾಗಿ ದಾಂಪತ್ಯದಲ್ಲಿ ಸಣ್ಣ ಕಲಹವಾಗಬಹುದು. ತಾತ್ಕಾಲಿಕ ಜವಬ್ದಾರಿಯೇ ಪೂರ್ಣಾವಧಿಯಾಗಿ ಮಾಡಬೇಕಾಗುವುದು. ಯಾರದೋ ಮಾತಿನ ಆಧಾರದ ಮೇಲೆ ನೀವು ನಿಮ್ಮವರನ್ನು ದ್ವೇಷಿಸಬಹುದು. ಉದ್ಯೋಗದಲ್ಲಿ ಒತ್ತಡವಿದ್ದು ಅದನ್ನು ನಿಭಾಯಿಸುವ ಕ್ರಮವನ್ನು ಕಲಿತುಕೊಳ್ಳಿ. ನಿಮ್ಮೊಳಗೆ ಸಿಟ್ಟಿನಿಂದ ಕುದಿಯುವಿರಿ. ಆಪ್ತರ ಜೊತೆ ಒಂದಿಷ್ಟು ಸಮಯವನ್ನು ಕಳೆಯಬಹುದು.

ಕುಂಭ ರಾಶಿ:

ದೂರದಲ್ಲಿರುವ ನಿಮಗೆ ಸಂಗಾತಿಯ ಸಂಗ ಸಿಗುವ ಸಾಧ್ಯತೆ ಇದೆ. ನಟನೆಯಲ್ಲಿ ಆಸಕ್ತಿಯಿರುವವರಿಗೆ ಅವಕಾಶಗಳು ಲಭ್ಯವಾಗುತ್ತವೆ. ಬಡ್ತಿಯನ್ನು ಪಡೆಯಲು ನಾನಾ ಪ್ರಯತ್ನ ನಡೆಯಲಿದೆ. ಇಂದು ನ್ಯಾಯಾಲಯದಲ್ಲಿ ತೀರ್ಪು ಬರಲಿದೆ. ಎಂತಹದೇ ತೀರ್ಮಾನ ಬಂದರೂ ಸ್ವೀಕರಿಸಿ‌. ಹಿರಿಯರಿಂದ ಆಶೀರ್ವಾದವು ಸಿಗಲಿದೆ. ಭೂಮಿಯ ವ್ಯವಹಾರದಲ್ಲಿ ನೀವು ಲಾಭಗಳಿಸಬಹುದಾಗಿದೆ‌. ಆಪ್ತರೇ ನಿಮ್ಮ ಬಗ್ಗೆ ಹಗುರಾಗಿ ಮಾತನಾಡುವರು.

ಮೀನ ರಾಶಿ:

ಸ್ವಬುದ್ಧಿಯನ್ನು ಬಳಸಿಯೇ ಕಾರ್ಯಗಳನ್ನು ಮಾಡಿ. ನಿಮ್ಮ ಪ್ರೇಮವು ಸನ್ಮಾರ್ಗದಲ್ಲಿ ಕರೆದುಕೊಂಡು ಹೋಗದು. ಜಾಗೃತಿ ಮೊದಲಾದ ಸಾಮಾಜಿಕ ಕಾರ್ಯಗಳಿಗೆ ತೆರಳಿ ಒಂಟಿತನವನ್ನು ದೂರಮಾಡಿಕೊಳ್ಳುವಿರಿ. ಇಂದು ನಿಮಗೆ ಹೊಸತನ್ನೇನಾದರೂ ಮಾಡುವ ಮನಸ್ಸಿದ್ದರೂ ಬೇಕಾದ ವ್ಯವಸ್ಥೆ, ಪರಿಸ್ಥಿತಿಗಳು ಇಲ್ಲದೇ ನಿಲ್ಲಿಸಬೇಕಾದೀತು. ಅನುಭವಿಗಳ ಮಾರ್ಗದರ್ಶನ ಪಡೆಯಿರಿ. ಮಾತನ್ನು ಹಿತವೂ ಮಿತವೂ ಆಗುವಂತೆ ಮಾಡಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಗುರು, ಪಕ್ಷ : ಕೃಷ್ಣ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಅಶ್ವಿನೀ, ಯೋಗ : ಆಯುಷ್ಮಾನ್, ಕರಣ : ಬಾಲವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 51 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:01 – 15:38, ಯಮಗಂಡ ಕಾಲ 05:57 – 07:34, ಗುಳಿಕ ಕಾಲ 09:10 – 10:47

-ಲೋಹಿತ್ ಹೆಬ್ಬಾರ್ – 8762924271 (what’s app only)

Source link

ಕಾಶ್ಮೀರದ ದೋಡಾ ಜಿಲ್ಲೆಯ ಹೆದ್ದಾರಿಯಲ್ಲಿ ಭೀಕರ ಭೂಕುಸಿತ; ವಾಹನ ಸಂಚಾರ ಸಂಪೂರ್ಣ ಸ್ಥಗಿತ – Kannada News

ಶ್ರೀನಗರ, ಜೂನ್ 10: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಯಾದ ಥಾತ್ರಿ-ಕಿಲೋತ್ರಾನ್ ಹೆದ್ದಾರಿಯ ಧಾರಿವಾರಿ ನಲ್ಲಾ ಬಳಿ ಇಂದು ಭಾರಿ ಪ್ರಮಾಣದ ಭೂಕುಸಿತ (Landslide) ಸಂಭವಿಸಿದೆ. ಪಕ್ಕದ ಗುಡ್ಡದಿಂದ ಬೃಹತ್ ಗಾತ್ರದ ಬಂಡೆಗಳು ಮತ್ತು ಟನ್‌ಗಟ್ಟಲೆ ಮಣ್ಣು ಹೆದ್ದಾರಿಯ ಮೇಲೆ ಬಿದ್ದ ಪರಿಣಾಮವಾಗಿ ಇಡೀ ರಸ್ತೆ ಸಂಪೂರ್ಣವಾಗಿ ಮುಚ್ಚಿಹೋಗಿದೆ. ಈ ಹೆದ್ದಾರಿಯು ಗಂದೋಹ್ ಮತ್ತು ಭಲೇಶ್ಸಾ ಸೇರಿದಂತೆ ಹಲವು ಗ್ರಾಮೀಣ ಮತ್ತು ದೂರದ ಪ್ರದೇಶಗಳನ್ನು ಜಿಲ್ಲಾ ಕೇಂದ್ರ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಜೋಡಿಸುವ ಪ್ರಮುಖ ರಸ್ತೆಯಾಗಿದೆ.

ಭೂಕುಸಿತದ ಕಾರಣದಿಂದಾಗಿ ಹೆದ್ದಾರಿಯ ಎರಡೂ ಬದಿಗಳಲ್ಲಿ ನೂರಾರು ಪ್ರಯಾಣಿಕ ವಾಹನಗಳು, ಸರಕು ಸಾಗಣೆ ಲಾರಿಗಳು ಮತ್ತು ಆಂಬ್ಯುಲೆನ್ಸ್‌ಗಳು ಗಂಟೆಗಟ್ಟಲೆ ಸಾಲುಗಟ್ಟಿ ನಿಲ್ಲುವಂತಾಗಿದೆ. ಕಚೇರಿ ಮತ್ತು ಶಾಲೆ-ಕಾಲೇಜುಗಳಿಗೆ ತೆರಳುವ ದಿನನಿತ್ಯದ ಪ್ರಯಾಣಿಕರು ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ದೋಡಾ ಜಿಲ್ಲಾಡಳಿತವು ಸ್ಥಳೀಯ ನಿವಾಸಿಗಳು ಮತ್ತು ಪ್ರಯಾಣಿಕರಿಗೆ ಮುನ್ನೆಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ರಸ್ತೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಆಡಳಿತ ಮಂಡಳಿ ಹಸಿರು ನಿಶಾನೆ ನೀಡುವವರೆಗೆ ಈ ಮಾರ್ಗದಲ್ಲಿ ಪ್ರಯಾಣಿಸದಂತೆ ಮತ್ತು ಪರ್ಯಾಯ ರಸ್ತೆಗಳನ್ನು ಬಳಸುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ. ಗುಡ್ಡಗಾಡು ಪ್ರದೇಶವಾಗಿರುವುದರಿಂದ ಮತ್ತಷ್ಟು ಮಣ್ಣು ಕುಸಿಯುವ ಭೀತಿ ಇರುವುದರಿಂದ ರಕ್ಷಣಾ ಸಿಬ್ಬಂದಿ ಜಾಗರೂಕತೆಯಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಆಡಳಿತ, ಸಾರ್ವಜನಿಕ ಲೋಕೋಪಯೋಗಿ ಇಲಾಖೆ (PWD) ಮತ್ತು ರಸ್ತೆ ನಿರ್ಮಾಣ ಸಂಸ್ಥೆಗಳ ಸಿಬ್ಬಂದಿ ಜೆಸಿಬಿ (JCB) ಹಾಗೂ ಅಗತ್ಯ ಯಂತ್ರೋಪಕರಣಗಳೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಬೃಹತ್ ಬಂಡೆಗಳನ್ನು ಸಣ್ಣದಾಗಿ ಪುಡಿಮಾಡಿ ರಸ್ತೆಯಿಂದ ಪಕ್ಕಕ್ಕೆ ಸರಿಸಲಾಗುತ್ತಿದೆ. ಹೆದ್ದಾರಿಯ ಮೇಲಿರುವ ಮಣ್ಣಿನ ಅವಶೇಷಗಳನ್ನು ತೆರವುಗೊಳಿಸಿ, ಆದಷ್ಟು ಬೇಗ ವಾಹನ ಸಂಚಾರವನ್ನು ಮರುಸ್ಥಾಪಿಸಲು ಅಧಿಕಾರಿಗಳು ಮತ್ತು ಕಾರ್ಮಿಕರು ಯುದ್ಧೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

(Video Source: ANI)

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್ ಜೊತೆ ವಿಲೀನವಾಗುವ ವದಂತಿ ಸುಳ್ಳು; ಟಿಎಂಸಿ ಸ್ಪಷ್ಟನೆ – Kannada News

ನವದೆಹಲಿ, ಜೂನ್ 10: ತೃಣಮೂಲ ಕಾಂಗ್ರೆಸ್ (TMC) ಕಾಂಗ್ರೆಸ್ ಪಕ್ಷದ ಜೊತೆ ವಿಲೀನವಾಗಲಿದೆ ಎಂಬ ಮಾತುಗಳಿಗೆ ಯಾವುದೇ ಆಧಾರವಿಲ್ಲ ಎಂದು ಟಿಎಂಸಿ ನಾಯಕರು ಸ್ಪಷ್ಟಪಡಿಸಿದ್ದಾರೆ. ಎರಡೂ ಪಕ್ಷಗಳ ನಾಯಕರ ನಡುವೆ ಇತ್ತೀಚೆಗೆ ರಾಜಕೀಯ ಚರ್ಚೆಗಳು ನಡೆದಿದ್ದರೂ ಸಹ, ವಿಲೀನದ ಯಾವುದೇ ಪ್ರಸ್ತಾಪವನ್ನು ಉಭಯ ಪಕ್ಷಗಳು ಪರಿಗಣಿಸುತ್ತಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರಿಗೆ ಕಾಂಗ್ರೆಸ್‌ನಲ್ಲಿ ಉನ್ನತ ಹುದ್ದೆಗಳನ್ನು ನೀಡಲಾಗುತ್ತಿದೆ ಮತ್ತು ಪಕ್ಷಗಳನ್ನು ವಿಲೀನಗೊಳಿಸಲಾಗುತ್ತಿದೆ ಎಂಬ ಸುದ್ದಿಗಳು ಕೇವಲ ಊಹಾಪೋಹಗಳಾಗಿದ್ದು, ಇವುಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ.

ಇದರ ನಡುವೆಯೂ ಕಾಂಗ್ರೆಸ್ ಮತ್ತು ಟಿಎಂಸಿ ಎರಡೂ ಪಕ್ಷಗಳು ಒಟ್ಟಾಗಿ ಕೆಲಸ ಮಾಡಲು ಸಿದ್ಧವಾಗಿವೆ. ಸಾಮಾನ್ಯ ರಾಜಕೀಯ ಹಿತಾಸಕ್ತಿಯ ವಿಷಯಗಳ ಕುರಿತು ಚರ್ಚೆಗಳನ್ನು ಮುಂದುವರಿಸಿವೆ ಎಂದು ಮೂಲಗಳು ಹೇಳಿವೆ. ವರದಿಯ ಪ್ರಕಾರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಇತ್ತೀಚೆಗೆ ತಮ್ಮ ಪಕ್ಷಗಳ ನಡುವೆ ಸಮನ್ವಯತೆಯನ್ನು ಸುಧಾರಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದ್ದಾರೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿಗೆ ಮತ್ತೊಂದು ಆಘಾತ; ಟಿಎಂಸಿ ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ

ಟಿಎಂಸಿ ಪಕ್ಷವು ದೊಡ್ಡ ಮಟ್ಟದ ಆಂತರಿಕ ಸವಾಲನ್ನು ಎದುರಿಸುತ್ತಿರುವ ಸಮಯದಲ್ಲಿಯೇ ಈ ಮಾತುಕತೆ ನಡೆದಿರುವುದು ತೀವ್ರ ಗಮನ ಸೆಳೆದಿದ್ದು, ಪಕ್ಷದ ಮುಂದಿನ ರಾಜಕೀಯ ಕಾರ್ಯತಂತ್ರದ ಬಗ್ಗೆ ಹಲವು ವಹಾಪೋಹಗಳಿಗೆ ಕಾರಣವಾಗಿದೆ. ಹಿರಿಯ ಕಾಂಗ್ರೆಸ್ ನಾಯಕರು ನವದೆಹಲಿಯಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದ ನಂತರ ಕಾಂಗ್ರೆಸ್-ಟಿಎಂಸಿ ವಿಲೀನದ ವದಂತಿಗಳು ಮತ್ತಷ್ಟು ತೀವ್ರಗೊಂಡವು.

ಇದನ್ನೂ ಓದಿ: ಕಾಂಗ್ರೆಸ್ ಜೊತೆ ವಿಲೀನವಾಗುತ್ತಾ ಟಿಎಂಸಿ? ಮಮತಾ ಬ್ಯಾನರ್ಜಿಗೆ ದೊಡ್ಡ ಹುದ್ದೆಯ ಆಫರ್

ವರದಿಗಳ ಪ್ರಕಾರ, ಟಿಎಂಸಿಯ 58 ಶಾಸಕರು ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ಬಂಡಾಯವೆದ್ದಿದ್ದಾರೆ. ರಾಜ್ಯಸಭೆ ಸೇರಿದಂತೆ ಪಕ್ಷದ ಸಂಸದರಲ್ಲೂ ಅಸಮಾಧಾನದ ಲಕ್ಷಣಗಳು ಗೋಚರಿಸುತ್ತಿವೆ. ಇಂದು ರಾಜ್ಯಸಭಾ ಸಂಸದೆ ಸುಶ್ಮಿತಾ ದೇವ್ ಅಕೂಡ ಟಿಎಂಸಿ ಪಕ್ಷ ಮತ್ತು ರಾಜ್ಯಸಭಾ ಸದಸ್ಯತ್ವ ಎರಡಕ್ಕೂ ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಮುನ್ನ, ಜೂನ್ 8ರಂದು ರಾಜ್ಯಸಭಾ ಸಂಸದ ಸುಖೇಂದು ಶೇಖರ್ ರಾಯ್ ಅವರು ಕೂಡ ರಾಜ್ಯಸಭೆ ಸ್ಥಾನಕ್ಕೆ ಹಾಗೂ ಟಿಎಂಸಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆನ್ ಸ್ಟೋಕ್ಸ್​ಗೆ ಗೇಟ್​ ಪಾಸ್; 4 ವರ್ಷಗಳ ಬಳಿಕ ಜೋ ರೂಟ್​ಗೆ ಟೆಸ್ಟ್ ನಾಯಕತ್ವ – Kannada News

ಪ್ರಸ್ತುತ ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (England vs New Zealand) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ಆತಿಥೇಯ ಇಂಗ್ಲೆಂಡ್‌ ಇದೀಗ ಎರಡನೇ ಪಂದ್ಯಕ್ಕಾಗಿ ತಯಾರಿ ಶುರು ಮಾಡಿದೆ. ಆದರೆ ಅದಕ್ಕೂ ಮುನ್ನ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಖಾಯಂ ನಾಯಕ ಬೆನ್ ಸ್ಟೋಕ್ಸ್ (Ben Stokes) ಅವರನ್ನು ಸರಣಿಯ ಎರಡನೇ ಪಂದ್ಯದಿಂದ ಹೊರಗಿಡಲಾಗಿದೆ. ಹೀಗಾಗಿ ಅವರ ಬದಲಿಗೆ ಅನುಭವಿ ಜೋ ರೂಟ್ (Joe Root) ಅವರನ್ನು ತಂಡದ ನಾಯಕನಾಗಿ ನೇಮಿಸಲಾಗಿದೆ. ಈ ಮೂಲಕ ರೂಟ್ ಬರೋಬ್ಬರಿ 4 ವರ್ಷಗಳ ನಂತರ ಇಂಗ್ಲೆಂಡ್‌ ಟೆಸ್ಟ್ ತಂಡವನ್ನು ಮುನ್ನಡೆಸಲಿದ್ದಾರೆ.

ಕ್ಲಬ್​ನಲ್ಲಿ ಮಾತಿನ ಚಕಮಕಿ

ಬೆನ್ ಸ್ಟೋಕ್ಸ್ ಅವರನ್ನು ತಂಡದಿಂದ ಹೊರಗಿಡಲು ಕಾರಣವೂ ಬಹಿರಂಗವಾಗಿದೆ. ವಾಸ್ತವವಾಗಿ ಮೊದಲ ಟೆಸ್ಟ್ ಪಂದ್ಯವನ್ನು ಸುಲಭವಾಗಿ ಗೆದ್ದ ಬಳಿಕ ನಾಯಕ ಬೆನ್ ಸ್ಟೋಕ್ಸ್ ಹಾಗೂ ವೇಗಿ ಅಟ್ಕಿನ್ಸನ್ ಕ್ಲಬ್‌ಗೆ ಹೋಗಿದ್ದರು. ಅಲ್ಲಿ ಇವರಿಬ್ಬರು ಕೆಲವು ರಗ್ಬಿ ಕ್ಲಬ್ ಆಟಗಾರರೊಂದಿಗೆ ವಾಗ್ವಾದ ನಡೆಸಿದ್ದರು. ಆದಾಗ್ಯೂ, ಘಟನೆಯ ಸಂಪೂರ್ಣ ವಿವರಗಳು ಇನ್ನೂ ಬಹಿರಂಗಗೊಂಡಿಲ್ಲ. ಪ್ರಸ್ತುತ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ಇಡೀ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ. ಅಲ್ಲದೆ ಅಶಿಸ್ತು ಮತ್ತು ತಂಡದ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕಾಗಿ ನಾಯಕ ಬೆನ್ ಸ್ಟೋಕ್ಸ್ ಮತ್ತು ವೇಗದ ಬೌಲರ್ ಗಸ್ ಅಟ್ಕಿನ್ಸನ್ ಅವರನ್ನು ಮುಂದಿನ ಟೆಸ್ಟ್ ಪಂದ್ಯದಿಂದ ಹೊರಗಿಟ್ಟಿದೆ.

ವಾಸ್ತವವಾಗಿ ಇಂಗ್ಲೆಂಡ್ ಆಟಗಾರರು ಮೈದಾನದ ಹೊರಗೆ ಈ ರೀತಿಯ ದುವರ್ತನೆ ತೋರುತ್ತಿರುವುದು ಇದೇ ಮೊದಲಲ್ಲ ಇದಕ್ಕೂ ಮೊದಲು ಸಾಕಷ್ಟು ಬಾರಿ ಇಂಗ್ಲೆಂಡ್‌ ಆಟಗಾರರು ಈ ರೀತಿಯ ಘಟನೆಗಳಲ್ಲಿ ಭಾಗಿಯಾಗಿದ್ದಾರೆ. ಇದು ಇಸಿಬಿಗೆ ತಲೆನೋವಾಗಿದೆ. ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಆಶಸ್ ಪ್ರವಾಸದ ಸಮಯದಲ್ಲಿಯೂ ಸಹ, ಆಟಗಾರರು ತಡರಾತ್ರಿವರೆಗೆ ಪಾರ್ಟಿ ಮಾಡುವುದು ಮತ್ತು ಮಿತಿ ಮೀರಿ ಮದ್ಯಪಾನ ಮಾಡಿ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದರು.

ಆರ್ಚರ್ ಮತ್ತು ಜೋರ್ಡಾನ್ ಕಾಕ್ಸ್ ಆಯ್ಕೆ

ಇದೀಗ ತಂಡದಿಂದ ಹೊರಬಿದ್ದಿರುವ ಸ್ಟೋಕ್ಸ್ ಮತ್ತು ಅಟ್ಕಿನ್ಸನ್ ಬದಲಿಗೆ ಜೋರ್ಡಾನ್ ಕಾಕ್ಸ್ ಮತ್ತು ಜೋಫ್ರಾ ಆರ್ಚರ್ ಅವರನ್ನು 15 ಜನರ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್‌ ಪರ ಆಡಿದ್ದ ಆರ್ಚರ್ ಮೊದಲ ಟೆಸ್ಟ್ ಪಂದ್ಯವನ್ನು ತಪ್ಪಿಸಿಕೊಂಡಿದ್ದರು. ಇತ್ತ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಜೋರ್ಡಾನ್ ಕಾಕ್ಸ್ ಅವರನ್ನು ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ಮರಳಿ ಕರೆಸಿಕೊಳ್ಳಲಾಗಿದೆ. ಗಾಯದಿಂದಾಗಿ ಅವರು ಎರಡು ಬಾರಿ ಟೆಸ್ಟ್ ಚೊಚ್ಚಲ ಪಂದ್ಯವನ್ನು ತಪ್ಪಿಸಿಕೊಂಡಿದ್ದು ಇದೀಗ ಆಡುವ ಅವಕಾಶ ಸಿಗುವ ಸಾಧ್ಯತೆಗಳಿವೆ.

ರೂಟ್​ಗೆ ಮತ್ತೆ ನಾಯಕತ್ವ

ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಜೂನ್ 17 ರಿಂದ ಲಂಡನ್‌ನ ದಿ ಓವಲ್‌ನಲ್ಲಿ ಆರಂಭವಾಗಲಿದ್ದು, ಜೋ ರೂಟ್ ತಂಡವನ್ನು ಮುನ್ನಡೆಸಲಿದ್ದಾರೆ. ರೂಟ್ ತಂಡವನ್ನು ಮುನ್ನಡೆಸುತ್ತಿರುವುದು ಇದು ಎರಡನೇ ಬಾರಿ. ಅಲಸ್ಟೇರ್ ಕುಕ್ ನಂತರ ರೂಟ್ ಈ ಹಿಂದೆ 2017 ರಲ್ಲಿ ತಂಡದ ನಾಯಕತ್ವವಹಿಸಿಕೊಂಡಿದ್ದರು. ರೂಟ್ ಒಟ್ಟು 64 ಟೆಸ್ಟ್ ಪಂದ್ಯಗಳ ನಾಯಕತ್ವ ವಹಿಸಿದ್ದಾರೆ. ಆದಾಗ್ಯೂ, ಏಪ್ರಿಲ್ 2022 ರಲ್ಲಿ, ಕಳಪೆ ಫಾರ್ಮ್ ಮತ್ತು ಆಶಸ್ ಸರಣಿ ಸೋಲಿನ ನಂತರ, ಜೋ ರೂಟ್ ಇಂಗ್ಲೆಂಡ್‌ನ ಟೆಸ್ಟ್ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಬದಲಿಯಾಗಿ ಬೆನ್ ಸ್ಟೋಕ್ಸ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿತ್ತು.

ಚೊಚ್ಚಲ ಟೆಸ್ಟ್​ನಲ್ಲಿ ಮಿಂಚಿ ವಿದೇಶಿ ತಂಡವನ್ನು ಸೇರಿಕೊಂಡ ಮಾನವ್ ಸುತಾರ್

ಇಂಗ್ಲೆಂಡ್ ತಂಡ : ಜೋ ರೂಟ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಸೋನಿ ಬೇಕರ್, ಶೋಯೆಬ್ ಬಶೀರ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಜೋರ್ಡಾನ್ ಕಾಕ್ಸ್, ಬೆನ್ ಡಕೆಟ್, ಮ್ಯಾಥ್ಯೂ ಫಿಶರ್, ಎಮಿಲಿಯೊ ಗೇ, ಜೇಮ್ಸ್ ರ್ಯು, ಓಲ್ಲಿ ರಾಬಿನ್ಸನ್, ಜೇಮೀ ಸ್ಮಿತ್ (ವಿಕೆಟ್ ಕೀಪರ್), ಜೋಶ್ ಟಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್’ ಬಗ್ಗೆ ಮೌನ, ಆದ್ರೆ ಆಲಿಯಾ ಸಿನಿಮಾಗೆ ಹೊಗಳಿಕೆ: ಟ್ರೋಲ್ ಆದ ಶಾರುಖ್ ಖಾನ್ – Kannada News

ಬಾಲಿವುಡ್‌ನ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಆಲ್ಪಾ’ (Alpha) ಟೀಸರ್ ಬಿಡುಗಡೆಯಾಗುತ್ತಿದ್ದಂತೆಯೇ, ವೈಆರ್‌ಎಫ್ ಸ್ಪೈ ಯೂನಿವರ್ಸ್‌ನ ಪ್ರಮುಖ ಪಾತ್ರಧಾರಿಗಳಲ್ಲಿ ಒಬ್ಬರಾಗಿರುವ ಶಾರುಖ್ ಖಾನ್ (Shah Rukh Khan) ಅವರು ಚಿತ್ರತಂಡಕ್ಕೆ ವಿಶೇಷವಾಗಿ ಶುಭ ಹಾರೈಸಿದ್ದಾರೆ. ಆಲಿಯಾ ಭಟ್ ಅವರ ಹೈ-ವೋಲ್ಟೇಜ್ ಆ್ಯಕ್ಷನ್ ಅವತಾರವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಶಾರುಖ್ ಖಾನ್ ಅವರು, ನಟಿಯನ್ನು ‘ಸಿಗ್ಮಾ ಗರ್ಲ್’ ಎಂದು ಕರೆದಿದ್ದಾರೆ. ಇದರೊಂದಿಗೆ ನಟ ಬಾಬಿ ಡಿಯೋಲ್ ಮತ್ತು ನಿರ್ದೇಶಕ ಶಿವ ರವೈಲ್ ಅವರನ್ನು ಶಾರುಖ್ ಶ್ಲಾಘಿಸಿದ್ದಾರೆ. ಇದರಿಂದಾಗಿ ‘ಧುರಂಧರ್’ (Dhurandhar) ಸಿನಿಮಾ ಅಭಿಮಾನಿಗಳ ಕೆಂಗಣ್ಣಿಗೆ ಶಾರುಖ್ ಗುರಿ ಆಗಿದ್ದಾರೆ.

‘ಆಲ್ಪಾ’ ಚಿತ್ರದ ಟೀಸರ್ ಅನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿರುವ ಶಾರುಖ್ ಖಾನ್, ‘ವೆಲ್ ಡನ್ ಆಲಿಯಾ, ವರ್ಷಗಳಿಂದ ಜನರ ಹೃದಯ ಒಡೆಯುತ್ತಿದ್ದ ನೀನು ಈಗ ವಿಲನ್‌ಗಳ ಮೂಳೆ ಮುರಿಯುತ್ತಿದ್ದೀಯ. ನಿನ್ನ ಕೌಶಲ್ಯ ನಿರಂತರವಾಗಿ ವಿಸ್ತರಿಸುತ್ತಿದೆ. ಆಲ್ಪಾ ಸಿನಿಮಾ ಎಲ್ಲರ ಹೃದಯ ಗೆಲ್ಲಲಿ, ಹಾಗೆಯೇ ಸೀಕ್ವೆಲ್‌ಗಾಗಿ ಕೆಲವು ವಿಲನ್‌ಗಳನ್ನು ಉಳಿಸಲಿ. ಲಾರ್ಡ್ ಬಾಬಿ… ನೀವು ತುಂಬಾ ಅದ್ಭುತವಾಗಿ ಕಾಣುತ್ತೀರಿ. ಚಿತ್ರತಂಡಕ್ಕೆ ನನ್ನ ಕಡೆಯಿಂದ ಬಿಗ್ ಹಗ್ ಹಾಗೂ ಆಲ್ ದಿ ಬೆಸ್ಟ್’ ಎಂದು ಶಾರುಖ್ ಖಾನ್ ಬರೆದುಕೊಂಡಿದ್ದಾರೆ.

ಶಾರುಖ್ ಖಾನ್ ಅವರ ಈ ಪೋಸ್ಟ್ ಬೆನ್ನಲ್ಲೇ ರಣವೀರ್ ಸಿಂಗ್ ಅಭಿಮಾನಿಗಳು ಕಿಂಗ್ ಖಾನ್ ಅವರನ್ನು ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್) ಖಾತೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಲವು ತಿಂಗಳುಗಳ ಹಿಂದೆ ಬಿಡುಗಡೆಯಾಗಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ್ದ ರಣವೀರ್ ಸಿಂಗ್ ಮತ್ತು ಆದಿತ್ಯ ಧರ್ ಕಾಂಬಿನೇಷನ್‌ನ ಬ್ಲಾಕ್‌ಬಸ್ಟರ್ ಚಿತ್ರ ‘ಧುರಂಧರ್’ ಸಿನಿಮಾಗೆ ಶಾರುಖ್ ಖಾನ್ ಯಾವುದೇ ರೀತಿಯ ಬೆಂಬಲ ನೀಡದಿದ್ದನ್ನು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಎಕ್ಸ್‌ನಲ್ಲಿ ಕಾಮೆಂಟ್ ಮಾಡಿರುವ ಬಳಕೆದಾರರೊಬ್ಬರು, ‘ಸರ್, ಕೆಲವು ತಿಂಗಳ ಹಿಂದಷ್ಟೇ ಧುರಂಧರ್ ಬಿಡುಗಡೆಯಾಗಿತ್ತು, ಆಗ ನೀವು ಎಲ್ಲಿದ್ದಿರಿ?’ ಎಂದು ಕೇಳಿದ್ದಾರೆ. ಇನ್ನೊಬ್ಬರು, ‘ಧುರಂಧರ್ ಬಿಡುಗಡೆಯ ನಂತರ ಇಂತಹ ಹಳೇ ವೈಆರ್‌ಎಫ್ ಸ್ಪೈ ಯೂನಿವರ್ಸ್ ಸಿನಿಮಾಗಳನ್ನು ಯಾರೂ ನೋಡುವುದಿಲ್ಲ, ವೈಆರ್‌ಎಫ್ ಇನ್ಮುಂದೆ ಅಳಬೇಕಾಗುತ್ತದೆ’ ಎಂದು ಲೇವಡಿ ಮಾಡಿದ್ದಾರೆ. ಮತ್ತೊಬ್ಬ ನೆಟ್ಟಿಗರು ಕಮೆಂಟ್ ಮಾಡಿ, ‘ಧುರಂಧರ್ ಟ್ರೇಲರ್, ರಿಲೀಸ್ ಅಥವಾ ಸಕ್ಸಸ್ ಇವೆಂಟ್ ಯಾವುದಕ್ಕೂ ನಿಮ್ಮ ಬೆಂಬಲ ಸಿಗಲಿಲ್ಲ, ನಿಮಗೆ ಅಸೂಯೆಯೇ ಅಥವಾ ಆಶ್ಚರ್ಯವಾಗಿದೆಯೇ’ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಸಿಗದ 5 ಕೋಟಿ ರೂಪಾಯಿ ಬೆಲೆಯ ಹೊಸ ಕಾರು ತರಿಸಿಕೊಂಡ ಶಾರುಖ್ ಖಾನ್

ಯಶ್ ರಾಜ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯ ಸ್ಪೈ ಯೂನಿವರ್ಸ್‌ನ 7ನೇ ಚಿತ್ರವಾಗಿರುವ ‘ಆಲ್ಪಾ’ ಭಾರಿ ಸದ್ದು ಮಾಡುತ್ತಿದೆ. ಇದಕ್ಕೂ ಮುನ್ನ ಏಕ್ ಥಾ ಟೈಗರ್, ಟೈಗರ್ ಜಿಂದಾ ಹೈ, ವಾರ್, ಪಠಾಣ್, ಟೈಗರ್ 3 ಮತ್ತು ವಾರ್ 2 ಚಿತ್ರಗಳು ಈ ಯೂನಿವರ್ಸ್‌ನ ಭಾಗವಾಗಿ ಮೂಡಿಬಂದಿವೆ. ಆ ಕಾರಣದಿಂದ ‘ಆಲ್ಫಾ’ ಸಿನಿಮಾ ಮೇಲೆ ಆಲಿಯಾ ಭಟ್ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗರ್ಭಿಣಿಯರಲ್ಲಿ ಅವಧಿ ಪೂರ್ವ ಹೆರಿಗೆಗೆ ವಾಯು ಮಾಲಿನ್ಯದ ಹೆಚ್ಚಳವೂ ಕಾರಣವಾಗುತ್ತದೆಯೇ? – Kannada News

ಇತ್ತೀಚಿನ ದಿನಗಳಲ್ಲಿ ವಾಯು ಮಾಲಿನ್ಯವು ದೊಡ್ಡ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ವಿಶೇಷವಾಗಿ ಗರ್ಭಿಣಿಯರು (Pregnant Women) ಮತ್ತು ಗರ್ಭದಲ್ಲಿರುವ ಶಿಶುಗಳ ಆರೋಗ್ಯದ ಮೇಲೆ ಇದರ ದುಷ್ಪರಿಣಾಮ ಹೆಚ್ಚಾಗಿ ಕಂಡುಬರಬಹುದು ಎಂದು ಹೊಸ ಅಧ್ಯಯನಗಳು ಹೇಳಿವೆ. ಹೌದು, ದೆಹಲಿಯ ಏಮ್ಸ್ (AIIMS) ನಡೆಸಿದ ಅಧ್ಯಯನದಲ್ಲಿ ವಾಯು ಮಾಲಿನ್ಯದಲ್ಲಿರುವ ಸೂಕ್ಷ್ಮ ಕಣಗಳು ಗರ್ಭದಲ್ಲಿರುವ ಮಗುವಿನ ಬೆಳವಣಿಗೆಯ ಮೇಲೂ ಕೆಟ್ಟ ಪರಿಣಾಮ ಬೀರುತ್ತವೆ ಎಂಬುದು ಬೆಳಕಿಗೆ ಬಂದಿದೆ. ಹಾಗಾದರೆ ಇದು ಗರ್ಭದಲ್ಲಿರುವ ಮಗುವಿನ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಮತ್ತು ಈ ರೀತಿಯ ಅಪಾಯವನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಅಧ್ಯಯನದಿಂದ ತಿಳಿದುಬಂದ ಮಾಹಿತಿ ಪ್ರಕಾರ, ಗಾಳಿಯಲ್ಲಿ ಇರುವ PM2.5 ಮತ್ತು PM10 ಮಾಲಿನ್ಯ ಕಣಗಳು ಗರ್ಭನಾಳ (Placenta) ಒಳಗೆ ಪ್ರವೇಶಿಸಿ ಉರಿಯೂತ ಉಂಟುಮಾಡಬಹುದು. ಗರ್ಭನಾಳವು ಮಗುವಿಗೆ ಆಮ್ಲಜನಕ ಮತ್ತು ಪೋಷಕಾಂಶಗಳನ್ನು ಪೂರೈಸುವ ಪ್ರಮುಖ ಅಂಗವಾಗಿದೆ. ಇದರ ಕಾರ್ಯಕ್ಷಮತೆ ಕುಂದಿದರೆ ಮಗುವಿನ ಬೆಳವಣಿಗೆಯ ಮೇಲೂ ಪರಿಣಾಮ ಬೀಳುವ ಸಾಧ್ಯತೆ ಇದೆ.

ಗರ್ಭದಲ್ಲಿರುವ ಮಗುವಿಗೆ ಹೇಗೆ ಹಾನಿಯಾಗಬಹುದು?

ತಜ್ಞರ ಪ್ರಕಾರ, ಹೆಚ್ಚುತ್ತಿರುವ ವಾಯು ಮಾಲಿನ್ಯದಿಂದ ಗರ್ಭಿಣಿಯರಲ್ಲಿ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಬಹುದು. ಇದರಿಂದ ಮಗುವಿನ ಬೆಳವಣಿಗೆ ನಿಧಾನಗೊಳ್ಳುವುದು, ಕಡಿಮೆ ತೂಕದ ಶಿಶು ಜನಿಸುವುದು ಅಥವಾ ಅವಧಿಗೆ ಮುಂಚೆಯೇ ಹೆರಿಗೆ ಆಗುವ ಸಾಧ್ಯತೆ ಹೆಚ್ಚಾಗಬಹುದು. ಕೆಲವು ಸಂದರ್ಭಗಳಲ್ಲಿ ಮಗುವಿನ ಶ್ವಾಸಕೋಶ ಬೆಳವಣಿಗೆಯ ಮೇಲೂ ಪರಿಣಾಮ ಕಾಣಬಹುದು. ಇದರ ಜೊತೆಗೆ ಗರ್ಭಿಣಿಯರಲ್ಲಿ ರಕ್ತದೊತ್ತಡ ಹೆಚ್ಚಾಗುವುದು ಹಾಗೂ ಉಸಿರಾಟ ಸಮಸ್ಯೆಗಳೂ ಕಾಣಿಸಬಹುದು ಎಂದು ವೈದ್ಯರು ಎಚ್ಚರಿಸುತ್ತಾರೆ. ಕೆಲ ಅಧ್ಯಯನಗಳು ದೀರ್ಘಕಾಲ ವಾಯು ಮಾಲಿನ್ಯಕ್ಕೆ ಒಳಗಾಗುವ ಗರ್ಭಿಣಿಯ ಮಕ್ಕಳಲ್ಲಿ ಕಲಿಕೆ ಮತ್ತು ಬುದ್ಧಿವಂತಿಕೆಯ ಬೆಳವಣಿಗೆಯ ಮೇಲೂ ಪರಿಣಾಮ ಕಾಣಬಹುದು ಎಂದು ಹೇಳಿವೆ.

ಇದನ್ನೂ ಓದಿ: ನೀವು ವಾಸಮಾಡುವ ಪ್ರದೇಶದಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದ್ಯಾ? ಹಾಗಿದ್ರೆ ನಿಮಗೂ ಬರಬಹುದು ಮರೆವಿನ ಕಾಯಿಲೆ

ಅಪಾಯವನ್ನು ಕಡಿಮೆ ಮಾಡಲು ಏನು ಮಾಡಬೇಕು?

  • ಗರ್ಭಿಣಿಯರು ಸಾಧ್ಯವಾದಷ್ಟು ಮನೆಯೊಳಗೆ ಇರುವುದಕ್ಕೆ ಪ್ರಯತ್ನಿಸಬೇಕು
  • ಮನೆಯೊಳಗಿನ ಗಾಳಿಯನ್ನು ಶುದ್ಧವಾಗಿಡಲು ಒಳಾಂಗಣ ಸಸಿಗಳನ್ನು ಬೆಳೆಸಬಹುದು
  • ಧೂಮಪಾನ, ಅಗರಬತ್ತಿ ಮತ್ತು ಹೊಗೆ ಉಂಟುಮಾಡುವ ವಸ್ತುಗಳಿಂದ ದೂರವಿರಬೇಕು
  • ಅಡುಗೆ ಮಾಡುವಾಗ ಎಕ್ಸಾಸ್ಟ್ ಫ್ಯಾನ್ ಅಥವಾ ಚಿಮ್ನಿ ಬಳಸುವುದು ಉತ್ತಮ
  • ವೈದ್ಯರ ಸಲಹೆಯಂತೆ ಐರನ್ ಮತ್ತು ಫೋಲಿಕ್ ಆಸಿಡ್ ಮಾತ್ರೆಗಳನ್ನು ನಿಯಮಿತವಾಗಿ ಸೇವಿಸಬೇಕು
  • ಸಾಕಷ್ಟು ನೀರು ಕುಡಿಯುವುದು ಮತ್ತು ಪೌಷ್ಟಿಕ ಆಹಾರ ಸೇವಿಸುವುದು ಮುಖ್ಯ

ವಾಯು ಮಾಲಿನ್ಯವನ್ನು ಸಂಪೂರ್ಣ ತಪ್ಪಿಸಲು ಸಾಧ್ಯವಿಲ್ಲದಿದ್ದರೂ, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದರಿಂದ ಗರ್ಭಿಣಿಯರು ಮತ್ತು ಮಗುವಿನ ಆರೋಗ್ಯವನ್ನು ಕೆಲವು ಮಟ್ಟಿಗೆ ರಕ್ಷಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್​​ ದುರಾಡಳಿತದಿಂದ ಭಾರತವನ್ನು ಮುಕ್ತಗೊಳಿಸಿದ್ದೇ ನಮ್ಮ ಸರ್ಕಾರದ ಅತಿದೊಡ್ಡ ಸಾಧನೆ; ಪ್ರಧಾನಿ ಮೋದಿ ವಾಗ್ದಾಳಿ – Kannada News

ನವದೆಹಲಿ, ಜೂನ್ 10: ಕೇಂದ್ರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (NDA) ಸರ್ಕಾರವು ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಇಂದು ನಡೆದ ಮಹಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್‌ನ ದಶಕಗಳ ಕಾಲದ ದುರಾಡಳಿತವು ಭಾರತವನ್ನು ತೀವ್ರ ಹತಾಶೆ ಮತ್ತು ಭ್ರಷ್ಟಾಚಾರದ ಕೂಪಕ್ಕೆ ತಳ್ಳಿತ್ತು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ದೇಶವನ್ನು ಕೋಟ್ಯಂತರ ರೂಪಾಯಿಗಳ ಹಗರಣಗಳಲ್ಲಿ ಮುಳುಗಿಸಿತ್ತು. ಆದರೆ, 2014ರಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಹಣೆಬರಹವೇ ಬದಲಾಯಿತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

“ಎನ್‌ಡಿಎ ಸರ್ಕಾರದ 12 ವರ್ಷಗಳ ಆಡಳಿತದ ಪ್ರಮುಖ ಯಶಸ್ಸೆಂದರೆ, ದೇಶವನ್ನು ಕಾಂಗ್ರೆಸ್‌ನ ವಿಷವರ್ತುಲದಿಂದ ಮುಕ್ತಗೊಳಿಸಿರುವುದು. ಭಾರತದಲ್ಲಿ ಅಭಿವೃದ್ಧಿ ಎಂಬುದು ಅತ್ಯಂತ ನಿಧಾನವಾಗಿ ಮಾತ್ರ ಸಾಧ್ಯ. ಇಲ್ಲಿ ವೇಗದ ಅಭಿವೃದ್ಧಿ ಅಸಾಧ್ಯ ಎಂದೇ ದೇಶದ ಜನ ಭಾವಿಸುವಂತೆ ಮಾಡಲಾಗಿತ್ತು. ಅತ್ಯಂತ ಚಾಣಾಕ್ಷತನದಿಂದ ಈ ಮಂದಗತಿಯ ಬೆಳವಣಿಗೆಗೆ ಒಂದು ಹೆಸರನ್ನು ನೀಡಲಾಯಿತು. ಅದೇ ‘ಹಿಂದೂ ಗ್ರೋತ್ ರೇಟ್’”. ವೇಗದ ಅಭಿವೃದ್ಧಿ ಅಸಾಧ್ಯ ಮತ್ತು ಆರ್ಥಿಕ ಪ್ರಗತಿ ಕೇವಲ ನಿಧಾನಗತಿಯಲ್ಲೇ ಸಾಗಲು ಸಾಧ್ಯ ಎಂದು ಕಾಂಗ್ರೆಸ್ ಸರ್ಕಾರಗಳು ಭಾರತೀಯರ ಮನಸ್ಸಿನಲ್ಲಿ ಬಿತ್ತಿದ್ದವು ಎಂದು ಪ್ರಧಾನಿ ಆರೋಪಿಸಿದರು. ಈ ಪದಪ್ರಯೋಗದ ಮೂಲಕ ಕಾಂಗ್ರೆಸ್ ತನ್ನ ನೀತಿ ವೈಫಲ್ಯಗಳ ಜವಾಬ್ದಾರಿಯಿಂದ ನುಣುಚಿಕೊಂಡು, ಆ ಕಳಂಕವನ್ನು ದೇಶದ ಬಹುಸಂಖ್ಯಾತ ಹಿಂದೂ ಜನಸಂಖ್ಯೆಯ ಮೇಲೆ ಅನ್ಯಾಯವಾಗಿ ಹೊರಿಸಿತ್ತು ಎಂದು ಮೋದಿ ಟೀಕಿಸಿದರು.

ಇದನ್ನೂ ಓದಿ: ಇಷ್ಟು ದೂರ ಬರುತ್ತೇನೆಂದು ಕನಸಲ್ಲೂ ಅಂದುಕೊಂಡಿರಲಿಲ್ಲ; ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ

ಪ್ರಜಾಪ್ರಭುತ್ವದ ಇತಿಹಾಸದಲ್ಲಿ ದೇಶದ ಅತ್ಯಂತ ಸುದೀರ್ಘ ಅವಧಿಗೆ ಸತತವಾಗಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನ ಮಂತ್ರಿ ಎಂಬ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ‘ಭಾರತ್ ಮಂಟಪ’ದಲ್ಲಿ ಎನ್‌ಡಿಎ ಸಹೋದ್ಯೋಗಿಗಳನ್ನು ಉದ್ದೇಶಿಸಿ ಭಾಷಣವನ್ನು ಮಾಡಿದರು. ಭಾರತದ ಆರಂಭಿಕ ಆರ್ಥಿಕ ಇತಿಹಾಸದ ನೀತಿಗಳ ಮೇಲೆ ನೇರ ವಾಗ್ದಾಳಿ ನಡೆಸಿದ ಪ್ರಧಾನಿ, ದಶಕಗಳ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿದ್ದ ಅಭಿವೃದ್ಧಿಯ ಮಂದಗತಿಯಿಂದ ದೇಶಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ ಎಂದು ಘೋಷಿಸಿದರು.

ಸ್ವಾತಂತ್ರ್ಯೋತ್ತರ ಭಾರತದ ನಿಧಾನಗತಿಯ ಆರ್ಥಿಕ ಬೆಳವಣಿಗೆಯನ್ನು ಲೇವಡಿ ಮಾಡಲು ಐತಿಹಾಸಿಕವಾಗಿ ಬಳಸಲಾಗುತ್ತಿದ್ದ “ಹಿಂದೂ ರೇಟ್ ಆಫ್ ಗ್ರೋತ್” ಎಂಬ ಪದಪ್ರಯೋಗವನ್ನು ಅವರು ತೀವ್ರವಾಗಿ ವಿರೋಧಿಸಿದರು. ಈ ವ್ಯವಸ್ಥಿತ ವೈಫಲ್ಯಗಳು ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷದ್ದಾಗಿದ್ದು, ಇದನ್ನು ಇನ್ಮುಂದೆ “ಕಾಂಗ್ರೆಸ್ ಗ್ರೋತ್ ರೇಟ್” ಎಂದು ಮರುನಾಮಕರಣ ಮಾಡುವುದು ಸೂಕ್ತ ಎಂದು ಅವರು ಪ್ರತಿಪಾದಿಸಿದರು.

ಇದನ್ನೂ ಓದಿ: ನೆಹರು ದಾಖಲೆ ಮುರಿದ ಪ್ರಧಾನಿ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ

ಎರಡು ವಿಭಿನ್ನ ರಾಜಕೀಯ ಸಿದ್ಧಾಂತಗಳ ಅಡಿಯಲ್ಲಿ ದೇಶವು ಕಂಡ ಆರ್ಥಿಕ ಬದಲಾವಣೆಯೇ ಪ್ರಧಾನಿ ಭಾಷಣದ ಪ್ರಮುಖ ಕೇಂದ್ರಬಿಂದುವಾಗಿತ್ತು. ಹಳೆಯ ‘ಕಾಂಗ್ರೆಸ್ ಗ್ರೋತ್ ರೇಟ್’ ಮತ್ತು ಸಮಕಾಲೀನ ‘ಎನ್‌ಡಿಎ ಗ್ರೋತ್ ರೇಟ್’ ನಡುವಿನ ಸ್ಪಷ್ಟವಾದ, ಅಂಕಿ-ಅಂಶಗಳ ಆಧಾರಿತ ವ್ಯತ್ಯಾಸವನ್ನು ಇಂದು ಜಾಗತಿಕ ಸಮುದಾಯ ಮತ್ತು ದೇಶದ ಮತದಾರರು ಕಣ್ಣಾರೆ ಕಂಡಿದ್ದಾರೆ ಎಂದು ಪ್ರಧಾನಿ ಪ್ರತಿಪಾದಿಸಿದರು. ಹಿಂದಿನ ಹಣಕಾಸು ನೀತಿಗಳು ದೇಶದ ಅತ್ಯಂತ ನಿಧಾನಗತಿಯ ಪ್ರಗತಿಯನ್ನೇ ರಾಷ್ಟ್ರೀಯ ಮಾನದಂಡ ಎಂದು ಒಪ್ಪಿಕೊಳ್ಳುವಂತೆ ಜನರನ್ನು ಪ್ರೇರೇಪಿಸಿದ್ದವು. ಆದರೆ ಪ್ರಸ್ತುತ ಆಧುನಿಕ ಯುಗದಲ್ಲಿ ಬೃಹತ್ ಮೂಲಸೌಕರ್ಯಗಳ ವಿಸ್ತರಣೆ, ಡಿಜಿಟಲ್ ರೂಪಾಂತರ ಮತ್ತು ಬಂಡವಾಳ ವೆಚ್ಚಕ್ಕೆ ಗರಿಷ್ಠ ಆದ್ಯತೆ ನೀಡಲಾಗಿದೆ. ಈ ಕಾರ್ಯಾಚರಣೆಯ ಬದಲಾವಣೆಯು ಭಾರತವನ್ನು ಜಾಗತಿಕವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದನ್ನಾಗಿ ನಿರಂತರವಾಗಿ ಮುಂಚೂಣಿಯಲ್ಲಿಟ್ಟಿದೆ, ಇದು ಸ್ವಾತಂತ್ರ್ಯೋತ್ತರ ಯುಗದ ಹಳೆಯ ಆರ್ಥಿಕ ಗ್ರಹಿಕೆಗಳಿಗೆ ನೇರ ಸವಾಲಾಗಿದೆ ಎಂದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಾತಾಡಬೇಕಿರೋದು ಮಾತಾಡಿದ್ದೇನೆ, ಎಲ್ಲವನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ: ಮಹತ್ವದ ಹೇಳಿಕೆ ನೀಡಿದ ಡಿಕೆಶಿ – Kannada News

ದೆಹಲಿ, ಜೂ.10: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಇಂದು (ಜೂ.10) ಕಾಂಗ್ರೆಸ್​​​ ನಾಯಕರನ್ನು ಭೇಟಿಯಾಗಿದ್ದಾರೆ. ನಾಳೆ (ಜೂ.11) ಪ್ರಧಾನಿ ಮೋದಿ ಅವರನ್ನು ಕೂಡ ಭೇಟಿಯಾಗಲಿದ್ದಾರೆ. ಇದರ ನಡುವೆ ಅವರು ರಾಜ್ಯ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. “ನಾನು ಏನು ಮಾತನಾಡಬೇಕೋ ಅದನ್ನು ಮಾತನಾಡಿದ್ದೇನೆ. ಆದರೆ ಎಲ್ಲವನ್ನೂ ಈಗ ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಯಾರೊಂದಿಗೆ ಮಾತನಾಡಬೇಕೋ, ಏನು ಹೇಳಬೇಕೋ ಆ ಎಲ್ಲ ವಿಚಾರಗಳನ್ನು ಸೂಕ್ತ ವೇದಿಕೆಯಲ್ಲಿ ಈಗಾಗಲೇ ತಿಳಿಸಲಾಗಿದೆ ಎಂದು ಹೇಳಿದ್ದಾರೆ. “ನಾನೊಬ್ಬ ಕಾಂಗ್ರೆಸ್ ಕಾರ್ಯಕರ್ತ. ಕಾರ್ಯಕರ್ತನಾಗಿ ಕಾರ್ಯಕರ್ತರಿಗೆ ನ್ಯಾಯ ಕೊಡಿಸುವಂತಹ ಪ್ರಯತ್ನವನ್ನು ಮಾಡಿದ್ದೇನೆ” ಎಂದು ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಅಥವಾ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ, ತಾವು ಮಾಡಬೇಕಾದ ಮಾತುಕತೆಗಳನ್ನು ಮಾಡಿದ್ದೇವೆ ಎಂದು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು ಕಸದಲ್ಲಿ 36 ಸಾವಿರ ಕೋಟಿ ರೂ. ಲೂಟಿ ಆರೋಪ: ಬಿಜೆಪಿಗೆ ಡಿಕೆಶಿ ಓಪನ್ ಚಾಲೆಂಜ್ – Kannada News

ಬೆಂಗಳೂರು, (ಜೂನ್ 10): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಕಸದ ಗೋಲ್ಮಾಲ್​ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ದಾಖಲೆ ಬಿಚ್ಚಿಟ್ಟಿದ್ದಾರೆ. ಕಸ ಸಂಸ್ಕರಣೆಗೆ ಒಂದು ಟನ್​ಗೆ 260 ರೂಪಾಯಿ ಖರ್ಚಾಗುತ್ತೆ. ಆದ್ರೆ ಸರ್ಕಾರ ಕೊಡ್ತಿರೋದು 2012 ರೂಪಾಯಿ ಆಗಿದೆ. 30 ವರ್ಷಗಳಲ್ಲಿ 39 ಸಾವಿರ ಕೋಟಿ ರೂಪಾಯಿ ಹಣ ಕೊಡಲಾಗುತ್ತಿದ್ದು. ಟೆಂಡರ್​​ನಲ್ಲಿ ದೊಡ್ಡ ಗೋಲ್ಮಾಲ್ ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಜ್ಯಪಾಲರು ಹಾಗೂ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಇನ್ನು ಈ ಆರೋಪವನ್ನು ಸ್ವತಃ ಡಿಕೆ ಶಿವಕುಮಾರ್ ಅಲ್ಲಗಳೆದಿದ್ದು, ಕುಮಾರಸ್ವಾಮಿ ಕೂಡಾ ಹಿಂದೆ ಇದನ್ನೆ ಮಾತನಾಡಿದ್ದರು. ಕಸದ್ದು ದೊಡ್ಡ ಲಾಭಿ ಇದೆ. ಅವರ ಕಾಲದಲ್ಲಿ ಟೆಂಡರ್ ಮಾಡಲಿಲ್ಲ. ಅವರು ಯಾವ ತನಿಖೆ ಬೇಕಾದರೂ ಮಾಡಲಿ ಎಂದು ಸವಾಲು ಹಾಕಿದರು.

ಕಸದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಕಸದಿಂದ ಪವರ್ ಮಾಡಲು ಟೆಂಡರ್ ಮಾಡಿದ್ದೆವು. ಯಾರು ಬರಲಿಲ್ಲ, ಅವರ ಸರ್ಕಾರ ಇದ್ದಾಗ ಯಾಕೆ ಮಾಡಲಿಲ್ಲ.ಬೇರೆ ಬೇರೆ ರಾಜ್ಯಗಳಲ್ಲಿ ನೋಡಿ ಈ ತಿರ್ಮಾನ ಮಾಡಿದೆ. ಅವರು ಆರು ಸಾವಿರ ಕೋಟಿ ಹೂಡಿಕೆ ಮಾಡುತ್ತಿದ್ದಾರೆ.ದೊಡ್ಡ ಬಳ್ಳಾಪುರದಲ್ಲಿ ಜಾಗ ನೋಡಿದ್ದೇನೆ. ಕ್ಷೇತ್ರದಲ್ಲಿ ಕಸ ಹಾಕುವ ವಿಚಾರದಲ್ಲಿ ಸಾಕಷ್ಟು ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಕಸದೊಂದು ಮಾಫಿಯ, ಅದರ ವಕ್ತಾರಾಗಿ ಆರ್ ಅಶೋಕ್ ಮಾತನಾಡುತ್ತಿದ್ದಾರೆ. ಅವರು ಯಾವ ತನಿಖೆ ಬೇಕಾದರೂ ಮಾಡಲಿ. ಸಾವಿರಾರು ಅಲ್ಲ ಹತ್ತು ಕೋಟಿ ಆದರೂ ತನಿಖೆ ಮಾಡಲಿ. ನಾನು ಸಿಎಂ ಆಗಿದ್ದು ಅವರಿಗೆ ತಡೆದುಕೊಳ್ಳಲು ಆಗ್ತಿಲ್ಲ. ಕೋರ್ಟ್ ನಮ್ಮ ನಿಲುವಿಗೆ ಬೆಂಬಲ ವ್ಯಕ್ತಪಡಿಸಿದೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ಕಸದ ಟೆಂಡರ್​​ನಲ್ಲಿ ಅಕ್ರಮ ಆರೋಪ: ರಾಜ್ಯಪಾಲ ಗೆಹ್ಲೋಟ್​ಗೆ ಬಿಜೆಪಿ ನಿಯೋಗದಿಂದ ದೂರು

Source link

ಗೃಹಲಕ್ಷ್ಮಿ ಯೋಜನೆಗೆ ಮೇಜರ್ ಸರ್ಜರಿ: ಮಹತ್ವದ ಅಪ್ಡೇಟ್ ನೀಡಿದ ಸಿಎಂ ಡಿಕೆ ಶಿವಕುಮಾರ್

ನವದೆಹಲಿ, (ಜೂನ್ 10): ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈಗ ಮೇಜರ್ ಸರ್ಜರಿಗೆ ಮುಂದಾಗಿದೆ. ಪ್ರಸ್ತುತ ಇಡೀ ರಾಜ್ಯದಲ್ಲಿ ಸುಮಾರು ಒಂದು ಕೋಟಿ ಮೂವತ್ತು ಲಕ್ಷಕ್ಕೂ ಅಧಿಕ ಮಹಿಳಾ ಫಲಾನುಭವಿಗಳು ಈ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳ ಆರ್ಥಿಕ ನೆರವನ್ನು ಪಡೆಯುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಯೋಜನೆಯ ಅನುಷ್ಠಾನದಲ್ಲಿ ಕಂಡುಬಂದಿರುವ ಕೆಲವು ಗಂಭೀರ ಲೋಪದೋಷಗಳು ಹಾಗೂ ನಕಲಿ ಅರ್ಹತೆಗಳ ಹಾವಳಿಗೆ ಶಾಶ್ವತವಾಗಿ ಬ್ರೇಕ್ ಹಾಕಲು ಸರ್ಕಾರವು ಇನ್ಮುಂದೆ ಬಯೋಮೆಟ್ರಿಕ್ ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಲು ಕಠಿಣ ನಿರ್ಧಾರ ಕೈಗೊಂಡಿದೆ.

ಈ ಸಂಬಂಧ ದೆಹಲಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಕೆಲವರು ಸಾವನ್ನಪ್ಪಿದ್ದು, ಆದರೂ ಗೃಹಲಕ್ಷ್ಮಿ ಹಣ ಯಾರಿಗೋ ಹೋಗುತ್ತಿದ್ದು, ಇದು ನಮ್ಮ ಗಮನಕ್ಕೆ ಬಂದಿದೆ. ಹೀಗಾಗಿ ಹೊಸದಾಗಿ ಐಡೆಂಟಿ ಆಗಬೇಕಿದೆ. ಮರುಪರಿಶೀಲನೆ ಮಾಡ್ತಾವಿದಿವಿ ಅಷ್ಟೇ. ಯಾರಿಗೆ ಸಿಗಬೇಕು ಅದು ಸಿಗಲಿ ಎಂದು ಸ್ಪಷ್ಟಪಡಿಸಿದರು.

Source link

Exit mobile version