Headlines

RCB vs LSG: 4,4,4,4,4,4.. ಅರ್ಧಶತಕದಂಚಿನಲ್ಲಿ ಎಡವಿದ ವಿರಾಟ್ ಕೊಹ್ಲಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತೊಮ್ಮೆ ಒಂದೊಳ್ಳೆ ಇನ್ನಿಂಗ್ಸ್ ಆಡುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ನೋ ನೀಡಿದ 147 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ಎಂದಿನಂತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟರು. ಲಕ್ನೋ ಬ್ಯಾಟರ್​ಗಳು ರನ್​ ಗಳಿಸಲು ಹೆಣಗಾಡಿದ ಪಿಚ್​ನಲ್ಲಿ ಬೌಂಡರಿಗಳ ಮಳೆಗರೆದರು. ತಮ್ಮ ಇನ್ನಿಂಗ್ಸ್​ನಲ್ಲಿ 34 ಎಸೆತಗಳನ್ನು ಎದುರಿಸಿದ ಕೊಹ್ಲಿ 6 ಬೌಂಡರಿ ಹಾಗೂ 1 ಭರ್ಜರಿ…

Read More

‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ – Kannada News | I’m Living with Prem Like Rakshitha Arjun Janya’s Hilarious Statement Viral

‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಈವೆಂಟ್​​ನಲ್ಲಿ ಮಾತನಾಡಿದ ಅರ್ಜುನ್ ಜನ್ಯ ಅವರು, ‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡುತ್ತಿದ್ದೇನೆ’ ಎಂದಿದ್ದಾರೆ. ಅಂದರೆ ಕಳೆದ ಕೆಲ ದಿನಗಳಿಂದ ಇಬ್ಬರೂ ಸಿನಿಮಾ ಕೆಲಸಗಳನ್ನು ಮಾಡುತ್ತಿದ್ದಾರೆ. ಹೀಗಾಗಿ, ಈ ಮಾತನ್ನು ಹೇಳಿದ್ದಾರೆ. ಪ್ರೇಮ್ ಹಾಗೂ ಅರ್ಜುನ್ ಜನ್ಯ ಅವರಿಗೆ ನಿತ್ಯ 2-3 ಗಂಟೆ ಮಾತ್ರ ಮಲಗೋಕೆ ಸಮಯ ಸಿಗುತ್ತಿದೆಯಂತೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಸಿರಾಜ್ ಮಾಡಿದ ತಪ್ಪಿನಿಂದಾಗಿ ಸೋತ ಗುಜರಾತ್ ಟೈಟಾನ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 9ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಸೋಲನುಭವಿಸಿದೆ. ಅದು ಸಹ ಕೇವಲ 6 ರನ್​ಗಳ ಅಂತರದಿಂದ. ಆದರೆ ಈ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಮಾಡಿದ ಒಂದು ತಪ್ಪಿನಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 6 ರನ್​ಗಳು ಸೇರ್ಪಡೆಯಾಗಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ ಸಿರಾಜ್, ರಾಜಸ್ಥಾನ್ ರಾಯಲ್ಸ್‌ನ ಧ್ರುವ್ ಜುರೆಲ್ ಅವರ ಕ್ಯಾಚ್ ಕೈಬಿಟ್ಟಿದ್ದು ಪಂದ್ಯದ ಮೇಲೆ ಭಾರಿ ಪ್ರಭಾವ ಬೀರಿತು. ಕ್ಯಾಚ್ ಮಿಸ್ ಆಗಿದ್ದು ಹೇಗೆ? ರಾಜಸ್ಥಾನ್ ರಾಯಲ್ಸ್ ಇನಿಂಗ್ಸ್‌ನ…

Read More

ಭಾರತದ ಯುವಕರು ಅಪಾಯಗಳನ್ನು ಸ್ವೀಕರಿಸಲು ಹಿಂಜರಿಯಬೇಡಿ, ಸರ್ಕಾರ ನಿಮ್ಮೊಂದಿಗಿದೆ; ಪ್ರಧಾನಿ ಮೋದಿ – Kannada News | PM Narendra Modi addresses the concluding session of Viksit Bharat Young Leaders Dialogue 2026

ನವದೆಹಲಿ, ಜನವರಿ 12: ದೆಹಲಿಯಲ್ಲಿ “ಅಭಿವೃದ್ಧಿ ಹೊಂದಿದ ಭಾರತ- ಯುವ ನಾಯಕರ ಸಂವಾದ”ವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಯುವಕರಿಗೆ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ಸಾಕಾರಗೊಳಿಸಲು ಮನವಿ ಮಾಡಿದರು. ಯುವಕರ ಯಶಸ್ಸು ದೇಶವನ್ನು ಉನ್ನತೀಕರಿಸುತ್ತದೆ. ಯುವಕರು ಮೊದಲು ರಾಷ್ಟ್ರದ ಪ್ರಜ್ಞೆಯನ್ನು ಹೊಂದಿರಬೇಕು. ಯುವಕರ ಶಕ್ತಿಯೇ ಭಾರತದ ಶಕ್ತಿಯಾಗುತ್ತದೆ. ಯುವಕರು ಎಂದಿಗೂ ಅಪಾಯಗಳನ್ನು ಅಥವಾ ಸವಾಲುಗಳನ್ನು ಸ್ವೀಕರಿಸಲು ಹಿಂಜರಿಯಬೇಡಿ, ಸರ್ಕಾರ ಸದಾ ನಿಮ್ಮೊಂದಿಗೆ ಇರುತ್ತದೆ ಎಂದು ಅವರು ಹೇಳಿದರು. “ಇಂದು ನೀವು ವಿಕಸಿತ…

Read More

‘ಕೆಡಿ’ ರೀತಿ ಸಿನಿಮಾ ಮಾಡೋಕೆ ತುಂಬಾ ತಾಕತ್ತು ಬೇಕು: ಆರ್. ಚಂದ್ರು ಮೆಚ್ಚುಗೆ – Kannada News | R Chandru shares his review after watching KD Movie Jogi Prem Dhruva Sarja

‘ಕೆಡಿ’ ಸಿನಿಮಾದ (KD Movie) ಸೆಲೆಬ್ರಿಟಿ ಶೋ ನಡೆದಿದೆ. ಚಿತ್ರ ನೋಡಿದ ಅನೇಕರು ಭೇಷ್ ಎಂದಿದ್ದಾರೆ. ಆರ್. ಚಂದ್ರು, ಪ್ರಮೋದ್ ಶೆಟ್ಟಿ, ಉಪೇಂದ್ರ, ತರುಣ್ ಸುಧೀರ್, ಮಿಲನಾ ನಾಗರಾಜ್, ಮಾನ್ವಿತಾ ಹರೀಶ್, ಪಿ. ರವಿಶಂಕರ್, ಎಸ್. ಮಹೇಂದರ್ ಮುಂತಾದವರು ಸೆಲೆಬ್ರಿಟಿ ಶೋನಲ್ಲಿ ಭಾಗಿಯಾಗಿದ್ದಾರೆ. ಆರ್. ಚಂದ್ರು ಅವರು ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ. ‘ಈ ರೀತಿಯ ಸಿನಿಮಾ ಮಾಡೋಕೆ ತುಂಬಾ ಗುಂಡಿಗೆ ಬೇಕು. ಅಷ್ಟು ದೊಡ್ಡ ದೃಶ್ಯಕಾವ್ಯವನ್ನು ಕಟ್ಟಿಕೊಡುವುದು ಸುಲಭ ಅಲ್ಲ. ಅದಕ್ಕೆ ಎಷ್ಟು ಶ್ರಮ ಇದೆ ಅಂತ…

Read More

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್​​ – Kannada News | Karnataka MLC Elections: Date Announced for 7 Council Seats; Voting on June 18, Results on Same Day

ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ ಬೆಂಗಳೂರು, ಮೇ 26: ರಾಜ್ಯಸಭಾ ಚುನಾವಣೆಯ ಘೋಷಣೆ ಬೆನ್ನಲ್ಲೇ ಕರ್ನಾಟಕದ ವಿಧಾನಪರಿಷತ್ ಎಲೆಕ್ಷನ್​​ಗೂ ದಿನಾಂಕ ಪ್ರಕಟಗೊಂಡಿದೆ. ಜೂನ್ 26ರಂದು ತೆರವಾಗಲಿರುವ ಪರಿಷತ್​​ನ 7 ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್​​ನ 3, ಬಿಜೆಪಿಯ 3 ಮತ್ತು ಜೆಡಿಎಸ್​​ನ ಒಂದು ಸದಸ್ಯರ ಅವಧಿ ಜೂನ್​​ನಲ್ಲಿ ಮುಕ್ತಾಯವಾಗಲಿದೆ. ಚುನಾವಣೆಗೆ ದಿನಾಂಕ ಘೋಷಣೆ ಬೆನ್ನಲ್ಲೇ ಆಕಾಂಕ್ಷಿಗಳು ಅಲರ್ಟ್​​ ಆಗಿದ್ದು, ಸ್ಥಾನ ಗಿಟ್ಟಿಸಲು ಕಾರ್ಯಕತಂತ್ರ ಶುರುಮಾಡಿದ್ದಾರೆ. ಮುಖ್ಯಾಂಶಗಳು ಕರ್ನಾಟಕದ ವಿಧಾನಪರಿಷತ್​​ ಚುನಾವಣೆಗೆ ದಿನಾಂಕ ಘೋಷಣೆ…

Read More

Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 1,950 ರೂ ಇಳಿಕೆ; ಬೆಳ್ಳಿಯೂ ಅಗ್ಗ – Kannada News | Gold Price Today on 23rd June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಳಿಕೆಯ ಹಾದಿಗೆ ಬಂದಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ ಬರೋಬ್ಬರಿ 190-210 ರೂಗಳಷ್ಟು ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಕಡಿಮೆಗೊಂಡರೆ, ಇನ್ನೂ ಕೆಲವೆಡೆ ಅಲ್ಪ ಏರಿಕೆಯಾಗಿದೆ. ಬೆಳ್ಳಿ ಬೆಲೆಯೂ ಇವತ್ತು ಐದು ರೂ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,45,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ…

Read More

ಅಧಿಕ ಮಾಸದ ಎಫೆಕ್ಟ್: ಶುಭ ಸಮಾರಂಭಗಳಿಗೆ ಬ್ರೇಕ್; ಚಿಕ್ಕಬಳ್ಳಾಪುರದಲ್ಲಿ ತರಕಾರಿ ಬೆಲೆ ದಿಢೀರ್ ಕುಸಿತ – Kannada News | Adhika Masa Impact: Vegetable Prices Crash, Farmers Suffer Losses

ಎಪಿಎಂಸಿ ತರಕಾರಿ ಮಾರುಕಟ್ಟೆImage Credit source: tv9 kannada ಚಿಕ್ಕಬಳ್ಳಾಪುರ, ಮೇ 22: ಅಧಿಕ ಮಾಸ (adhika masa) ಹಿನ್ನೆಲೆ ಮದುವೆ, ಮುಂಜಿ ಸೇರಿದಂತೆ ಶುಭ ಸಮಾರಂಭಗಳು ಕಡಿಮೆಯಾಗಿವೆ. ಇದರಿಂದ ತರಕಾರಿಗಳಿಗೆ ಬೇಡಿಕೆ ಕಡಿಮೆಯಾಗಿದೆ. ಹೀಗಾಗಿ ಚಿಕ್ಕಬಳ್ಳಾಪುರದ (chikkaballapur) ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಬಹುತೇಕ ತರಕಾರಿಗಳ ಬೆಲೆ ಕುಸಿದಿದೆ (Vegetable Prices Down). ಯಾಕಾದರೂ ಈ ಅಧಿಕ ಮಾಸ ಬಂತೋ ಎಂದು ರೈತರು ಕಣ್ಣೀರಿಡುವಂತಾಗಿದೆ. ಮುಖ್ಯಾಂಶಗಳು ಅಧಿಕ ಮಾಸದ ಪರಿಣಾಮ ಚಿಕ್ಕಬಳ್ಳಾಪುರ ಮಾರುಕಟ್ಟೆ ಮೇಲೆ ಪ್ರಭಾವ ತರಕಾರಿ…

Read More

3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ – Kannada News | Mohammed Shami Smashes 32 Ball Half Century In Ranji Match

ರಣಜಿ ಟೂರ್ನಿಯ ಮೂರನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಶಮಿ ಸ್ಫೋಟಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿದ್ದಾರೆ. ಬೆಂಗಾಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯುತ್ತಿರುವ ಆಂಧ್ರ ಪ್ರದೇಶ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಾಲ್ ತಂಡದ ನಾಯಕ ಅಭಿಮನ್ಯು ಈಶ್ವರನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಂಧ್ರ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 295 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಬೆಂಗಾಲ್ ಪರ ಸುದೀಪ್ ಕುಮಾರ್ ದ್ವಿಶತಕ ಸಿಡಿಸಿದರು. ಇನ್ನು ಸುಮಂತ ಗುಪ್ತಾ…

Read More

ಶಬರಿಮಲೆ ಪ್ರವೇಶ ಪ್ರಕರಣ; ಮಹಿಳೆಯನ್ನು 3 ದಿನದವರೆಗೆ ಅಸ್ಪೃಶ್ಯಳೆಂದು ಪರಿಗಣಿಸುವಂತಿಲ್ಲ ಎಂದ ಸುಪ್ರೀಂ ಕೋರ್ಟ್

ನವದೆಹಲಿ, ಏಪ್ರಿಲ್ 7: ಮಹಿಳೆಯನ್ನು ಒಂದು ತಿಂಗಳಲ್ಲಿ 3 ದಿನಗಳವರೆಗೆ ‘ಅಸ್ಪೃಶ್ಯಳು’ ಎಂದು ಪರಿಗಣಿಸುವಂತಿಲ್ಲ. ಒಂದುವೇಳೆ ಆಕೆಯನ್ನು ಹಾಗೆ ಪರಿಗಣಿಸುವುದಾದರೆ ನಾಲ್ಕನೇ ದಿನದಿಂದ ಹೇಗೆ ಆಕೆಯನ್ನು ಅಸ್ಪೃಶ್ಯಳು ಎಂದು ಪರಿಗಣಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ನ್ಯಾಯಮೂರ್ತಿ ಬಿ.ವಿ. ನಾಗರತ್ನ ಪ್ರಶ್ನಿಸಿದ್ದಾರೆ. ಕೇರಳದ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧದ ತಾರತಮ್ಯ ಮತ್ತು ಬಹು ನಂಬಿಕೆಗಳನ್ನು ಆಚರಿಸುವ ಧಾರ್ಮಿಕ ಸ್ವಾತಂತ್ರ್ಯದ ವ್ಯಾಪ್ತಿಯ ಕುರಿತು 9 ನ್ಯಾಯಾಧೀಶರ ಪೀಠವು ಇಂದಿನಿಂದ ವಿಚಾರಣೆ ನಡೆಸುತ್ತಿದೆ. ನ್ಯಾಯಮೂರ್ತಿ…

Read More