Headlines

ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡುವವರಿಗೆ ಯುಟಿ ಖಾದರ್ ಬಿಗ್ ಗಿಫ್ಟ್! ದೂರುಗಳ ನಿವಾರಣೆಗೆ ಬರಲಿದೆ 24×7 ಹೆಲ್ಪ್‌ಲೈನ್ – Kannada News | Karnataka Health Minister UT Khader Announces 24×7 Helpline to Address Patient Grievances in Hospitals

ಯುಟಿ ಖಾದರ್ (ಚಿತ್ರ ಲೃಪೆ: ಯಟಿ ಖಾದರ್ ಫೇಸ್​ಬುಕ್ ಖಾತೆ)Image Credit source: Facebook ಬೆಂಗಳೂರು, ಜೂನ್ 22: ಸರ್ಕಾರಿ ಆಸ್ಪತ್ರೆಗಳಿಗೆ (Government Hospitals) ಚಿಕಿತ್ಸೆಗಾಗಿ ಬರುವ ಬಡ ಮತ್ತು ಸಾಮಾನ್ಯ ರೋಗಿಗಳಿಗೆ ಸ್ಪಂದಿಸಲು ಆರೋಗ್ಯ ಇಲಾಖೆಯು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಆಸ್ಪತ್ರೆಗಳಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಗೊಂದಲಗಳು ಹಾಗೂ ಸಿಬ್ಬಂದಿಗಳ ನಡೆಗಳ ಕುರಿತಾದ ದೂರುಗಳನ್ನು ಆಲಿಸಲು ಆರೋಗ್ಯ ಸಚಿವರ ಕಚೇರಿಯಿಂದಲೇ ನೇರವಾಗಿ ನಿಯಂತ್ರಿಸಲ್ಪಡುವ 24×7 ಹೆಲ್ಪ್‌ಲೈನ್ (ಸಹಾಯವಾಣಿ) ವ್ಯವಸ್ಥೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ…

Read More

Video: ನಾಲ್ಕು ತಿಂಗಳ ಬಳಿಕ ಮನೆಗೆ ಮರಳಿದ ಮಗನಿಗೆ ಅದ್ದೂರಿ ಸ್ವಾಗತ ಕೋರಿದ ತಾಯಿ – Kannada News | A mother’s lavish welcome as her son returns home after going to a distant town for studies

ಪ್ರತಿಯೊಬ್ಬ ತಂದೆ ತಾಯಂದಿರು (parents) ಮಕ್ಕಳ ಭವಿಷ್ಯ ಚೆನ್ನಾಗಿರಬೇಕೆಂದು ಬಯಸುವುದು ಸಹಜ. ಹೀಗಾಗಿ ಓದಿಗಾಗಿ, ಉದ್ಯೋಗಕ್ಕಾಗಿ ದೂರದ ಊರುಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಿಕೊಡುತ್ತಾರೆ.  ಈ ವೇಳೆ ತಮ್ಮ ಮಕ್ಕಳು ಮನೆಗೆ ಬರುತ್ತಾರೆ ಎಂದರೆ ಹೆತ್ತವರಿಗೆ ಆಗುವ ಖುಷಿ ಅಷ್ಟಿಷ್ಟಲ್ಲ. ಈ ವಿಡಿಯೋ ಇದೀಗ ತಾಯಿಯ (mother) ಸಂಭ್ರಮಕ್ಕೆ ಸಾಕ್ಷಿಯಾಗಿದೆ. ಓದಲು ದೂರದ ಊರಿಗೆ ಹೋದ ಮಗನು, ನಾಲ್ಕು ತಿಂಗಳ ಬಳಿಕ ಮನೆಗೆ ಮರಳುತ್ತಿದ್ದಂತೆ ತಾಯಿಯೂ ಅದ್ದೂರಿ ಸ್ವಾಗತ ಕೋರಿದ ಹೃದಯ ಸ್ಪರ್ಶಿ ವಿಡಿಯೋ ಸದ್ಯ ವೈರಲ್ ಆಗಿದೆ….

Read More

ವರ್ಷಕ್ಕೆ 90 ದಿನ ಕೆಲಸ ಮಾಡಿದರೂ ಸಾಕು, ಅರೆಕಾಲಿಕ ಕಾರ್ಮಿಕರಿಗೆ ಅನುಕೂಲವಾಗಲಿರುವ ಸರ್ಕಾರದ ಹೊಸ ರೂಲ್ಸ್ – Kannada News | Min 90 days of working, centre drafts social security rules for gig workers

ನವದೆಹಲಿ, ಜನವರಿ 2: ಓಲಾ, ಊಬರ್, ಸ್ವಿಗ್ಗಿ, ಜೊಮಾಟೊ, ಬ್ಲಿಂಕಿಟ್ ಇತ್ಯಾದಿ ಪ್ಲಾಟ್​ಫಾರ್ಮ್​ಗಳಲ್ಲಿ ಕೆಲಸ ಮಾಡುವ ಡ್ರೈವರ್​ಗಳು ಹಾಗೂ ಅರೆಕಾಲಿಕ ಕಾರ್ಮಿಕರಿಗೆ (Gig Workers) ಸಾಮಾಜಿಕ ಭದ್ರತಾ ಸಂಹಿತೆಯ ಸೌಲಭ್ಯ ಸಿಗುವ ಸಂಬಂಧ ಸರ್ಕಾರ ಹೊಸ ನಿಯಮಗಳನ್ನು ಪ್ರಸ್ತಾಪಿಸಿದೆ. ಸರ್ಕಾರ ರೂಪಿಸಿರುವ ಕರಡು ನಿಯಮಗಳ ಪ್ರಕಾರ, ಗಿಗ್ ಕಾರ್ಮಿಕರು ಒಂದು ವರ್ಷದಲ್ಲಿ ಕನಿಷ್ಠ 90 ದಿನಗಳ ಕಾಲ ಕೆಲಸ ಮಾಡಿದರೂ, ಅವರು ಸೋಷಿಯಲ್ ಸೆಕ್ಯೂರಿಟಿ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಪ್ಲಾಟ್​ಫಾರ್ಮ್​​ಗಳಿಗೆ ಕೆಲಸ ಮಾಡುತ್ತಿದ್ದರೆ..? ಈಗ…

Read More

ಸ್ವಾಮೀಜಿಯನ್ನು ಹನಿಟ್ರಾಪ್ ಮಾಡಲು ನಡೆದಿತ್ತಾ ಸಂಚು?: ಇದರ ಹಿಂದೆ ಶಾಸಕ ಕಾಶಪ್ಪನವರ್ ಕೈವಾಡ ಇದ್ಯಾ? ದೂರಿನಲ್ಲಿ ಬಿಚ್ಚಿಟ್ಟ ಸತ್ಯ!

ವಿಜಯಪುರ, ಏ. 07: ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಕೂಡಲಸಂಗಮ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ಸುತ್ತ ಈಗ ವಿವಾದವೊಂದು ಸುತ್ತಿಕೊಂಡಿದೆ. ಸ್ವಾಮೀಜಿಗಳ ಮೇಲೆ ಹಲ್ಲೆ ನಡೆಸಿ, ನಂತರ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಅವರ ಶಿಷ್ಯ ಸಂತೋಷ ಮಂಜಣ್ಣಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಕಳೆದ ಫೆಬ್ರವರಿ 11 ರಂದು ವಿಜಯಪುರ ತಾಲೂಕಿನ ಕಗ್ಗೋಡ ಬಳಿ ಸ್ವಾಮೀಜಿಗಳು ಕಾರಿನಲ್ಲಿ ತೆರಳುತ್ತಿದ್ದಾಗ ತ್ರಿವೇಣಿ ಎಂಬ ಮಹಿಳೆ ಮತ್ತು ಇತರರು…

Read More

ಪಿಒಕೆಯಲ್ಲಿ ಪಾಕಿಸ್ತಾನದ ಸೇನಾ ಹೆಲಿಕಾಪ್ಟರ್ ಪತನ; ಅಧಿಕಾರಿಗಳು ಸೇರಿದಂತೆ ಎಲ್ಲ ಸೈನಿಕರೂ ಸಜೀವದಹನ – Kannada News

ಇಸ್ಲಮಾಬಾದ್, ಜೂನ್ 10: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಪಾಕಿಸ್ತಾನ ಸೇನೆಗೆ ಸೇರಿದ ಯುದ್ಧ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ಪತನಗೊಂಡಿದೆ. ಈ ದುರಂತದಲ್ಲಿ ಅದರಲ್ಲಿದ್ದ ಎಲ್ಲಾ ಸೈನಿಕರು ದುರ್ಮರಣಕ್ಕೀಡಾಗಿದ್ದಾರೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಆಯಕಟ್ಟಿನ ಪ್ರದೇಶವೊಂದರಲ್ಲಿ ಪಾಕಿಸ್ತಾನ ಸೇನೆಗೆ ಸೇರಿದ ಹೆಲಿಕಾಪ್ಟರ್ ಭೀಕರವಾಗಿ ಪತನಗೊಂಡಿದೆ. ಹೆಲಿಕಾಪ್ಟರ್ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಅಪ್ಪಳಿಸಿದ್ದು, ಬೆಂಕಿ ಹೊತ್ತಿಕೊಂಡ ಪರಿಣಾಮ ಅದರಲ್ಲಿದ್ದ ಉನ್ನತ ಮಿಲಿಟರಿ ಅಧಿಕಾರಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಾಕಿಸ್ತಾನ ಸೇನೆಯ…

Read More

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!

ದೇವನಹಳ್ಳಿ, ಮಾರ್ಚ್​ 16: ದೊಡ್ಡಬಳ್ಳಾಪುರದಲ್ಲಿ ಹೆಲ್ಮೆಟ್ ಹಾಕದೆ ತ್ರಿಬಲ್ ರೈಡ್ ಮಾಡಿಕೊಂಡು ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದವರಿಗೆ ಪೊಲೀಸರ ಶಾಕ್ ಎದುರಾಗಿದೆ. ‘ಹುಲಿ ಹುಲಿ’ ಎಂದು ಬೈಕ್ ಮೇಲೆ ಮೂವರು ಸೇರಿ ರೀಲ್ಸ್ ಮಾಡಿದ್ದ ರೀಲ್ಸ್ ಮಂಜು, ಗಂಗಾರಂಗ ಮತ್ತು ಸವಿತಾ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹೆಲ್ಮೆಟ್ ಧರಿಸದೆ ಹಾಗೂ ತ್ರಿಬಲ್ ರೈಡ್ ಮಾಡಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ರೀಲ್ಸ್ ಮಂಜುವನ್ನು ಠಾಣೆಗೆ ಕರೆಸಿ ಒಂದು ಸಾವಿರ ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ….

Read More

ಆಗಸ್ಟ್‌ 1ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: 45 ಕೋಟಿ ರೂ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ – Kannada News | PM Narendra Modi to Inaugurate Rs 45 Crore Swami Vivekananda Memorial in Mysuru on August 1

ಮೈಸೂರು, ಜುಲೈ 28: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಆಗಸ್ಟ್‌ 1ರಂದು ಮೈಸೂರಿಗೆ (Mysuru) ಭೇಟಿ ನೀಡಲಿದ್ದು, 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಮೈಸೂರಿನ ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಈ ಸ್ಮಾರಕದಲ್ಲಿ ಸ್ವಾಮಿ ವಿವೇಕಾನಂದರು ತಂಗಿದ್ದ ಐತಿಹಾಸಿಕ ಹಿನ್ನೆಲೆಯಿದ್ದು, ಅದನ್ನು ಸಾಂಸ್ಕೃತಿಕ ಮತ್ತು ಯುವಜನ ಚಟುವಟಿಕೆಗಳ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ…

Read More

ಸಿಎಂ ಮಮತಾ ಬ್ಯಾನರ್ಜಿ ತನಿಖೆಗೆ ಅಡ್ಡಿಪಡಿಸಿ, ಬಲವಂತವಾಗಿ ದಾಖಲೆ ಹೊತ್ತೊಯ್ದಿದ್ದಾರೆ; ಹೈಕೋರ್ಟ್​ ಮೊರೆ ಹೋದ ಇಡಿ – Kannada News | CM Mamata Banerjee Obstructed Probe ED Moves Calcutta High Court

ಕೊಲ್ಕತ್ತಾ, ಜನವರಿ 8: ಕೊಲ್ಕತ್ತಾದಲ್ಲಿ ಜಾರಿ ನಿರ್ದೇಶನಾಲಯದ ದಾಳಿಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ತಮ್ಮ ಚುನಾವಣಾ ಸಲಹೆಗಾರ I-PAC ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮತ್ತು ಅವರ ಕಚೇರಿಗಳಿಂದ ಲ್ಯಾಪ್‌ಟಾಪ್, ಫೋನ್ ಮತ್ತು ಹಲವು ದಾಖಲೆಗಳನ್ನು ಎತ್ತಿಕೊಂಡು ಹೋಗಿದ್ದಾರೆ ಎಂದು ಇಡಿ ಆರೋಪಿಸಿದೆ. ಹಾಗೇ, ಸಿಎಂ ಮಮತಾ ಬ್ಯಾನರ್ಜಿ ತಮ್ಮ ತನಿಖೆಗೆ ಅಡ್ಡಿಪಡಿಸುತ್ತಿದ್ದಾರೆ ಮತ್ತು ಕಲ್ಲಿದ್ದಲು ಕಳ್ಳಸಾಗಣೆ, ಹಣ ವರ್ಗಾವಣೆಯಲ್ಲಿ ಭಾಗಿಯಾಗಿರುವವರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿ ಇಡಿ ಹೈಕೋರ್ಟ್‌…

Read More

ಶಕ್ತಿಮಾನ್ ಕತೆಯನ್ನೇ ಅಲ್ಲು ಅರ್ಜುನ್​ಗಾಗಿ ಹೆಣೆಯುತ್ತಿರುವ ಬಾಸಿಲ್ ಜೋಸೆಫ್? – Kannada News | Basil Joseph not doing Shaktiman movie with Allu Arjun

‘ಪುಷ್ಪ 2’ (Pushpa 2) ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಅಲ್ಲು ಅರ್ಜುನ್ ಗೆ ಒಂದರ ಹಿಂದೊಂದು ದೊಡ್ಡ ದೊಡ್ಡ ನಿರ್ದೇಶಕರುಗಳ ಆಫರ್ ಬಂದಿದ್ದು, ಈಗಾಗಲೇ ಕೆಲವು ನಿರ್ದೇಶಕರುಗಳೊಟ್ಟಿಗೆ ಸಿನಿಮಾ ಒಪ್ಪಿಕೊಂಡಿದ್ದಾರೆ ಸಹ. ಇದೀಗ ಅಟ್ಲಿ ನಿರ್ದೇಶನದ ‘ರಾಕಾ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದಾದ ಬಳಿಕ ಲೋಕೇಶ್ ಕನಗರಾಜ್ ನಿರ್ದೇಶನದ ಸಿನಿಮಾನಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ಮಲಯಾಳಂ ಸ್ಟಾರ್ ನಟ ಬಾಸಿಲ್ ಜೋಸೆಫ್ ನಿರ್ದೇಶನದ ಸೂಪರ್ ಹೀರೋ ಸಿನಿಮಾನಲ್ಲಿ ನಟಿಸಲಿದ್ದಾರೆ. ಅದರ ಬಳಿಕ ಸಂದೀಪ್ ರೆಡ್ಡಿ ವಂಗಾ ಸಿನಿಮಾ…

Read More

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲು ಮನವಿ – Kannada News | Request to organize Karnataka Rathna award giving ceremony for Vishnuvardhan

ಕನ್ನಡ ಚಿತ್ರರಂಗದ (Sandalwood) ಖ್ಯಾತ ನಟ, ದಿವಂಗತ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ಸರ್ಕಾರವು 2025 ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ವಿಷ್ಣುವರ್ಧನ್ ಮತ್ತು ಬಿ ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಇದೀಗ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಮತ್ತು ಇತರೆ ಸದಸ್ಯರು ಫಿಲಂ ಚೇಂಬರ್​​ನ ನೂತನ ಅಧ್ಯಕ್ಷೆ ಜಯಮಾಲ ಅವರನ್ನು ಭೇಟಿಯಾಗಿ ಫಿಲಂ ಚೇಂಬರ್ ವತಿಯಿಂದ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ…

Read More