Headlines

ಹಾಲಿ ಚಾಂಪಿಯನ್ನರಿಗೆ ಸೋಲುಣಿಸಿದ ಶ್ರೀಲಂಕಾ..! – Kannada News | Women’s T20 World Cup 2026: Sri Lanka Beat New Zealand

ಇಂಗ್ಲೆಂಡ್‌ನ ರೋಸ್ ಬೌಲ್ ಮೈದಾನದಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಗ್ರೂಪ್ ಹಂತದ ಪಂದ್ಯದಲ್ಲಿ ಶ್ರೀಲಂಕಾ ತಂಡವು ಹಾಲಿ ಚಾಂಪಿಯನ್ ನ್ಯೂಝಿಲೆಂಡ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಇದು ಟಿ20 ವಿಶ್ವಕಪ್ ಇತಿಹಾಸದಲ್ಲೇ ಕಿವೀಸ್ ಪಡೆ ವಿರುದ್ಧ ಶ್ರೀಲಂಕಾ ಮಹಿಳಾ ತಂಡದ ಮೊದಲ ಗೆಲುವು ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ನ್ಯೂಝಿಲೆಂಡ್ ತಂಡಕ್ಕೆ ಆರಂಭದಲ್ಲೇ ರನ್ ಗಳಿಸಲು ಲಂಕಾ ಬೌಲರ್‌ಗಳು ಸುಲಭವಾಗಿ ಅವಕಾಶ ನೀಡಲಿಲ್ಲ. ಆದರೆ…

Read More

Ugram Manju Wedding: ಸಂಧ್ಯಾ ಜೊತೆ ಮದುವೆ ಆದ ಮಂಜು; ಇಲ್ಲಿದೆ ಸುಂದರ ಆಲ್ಬಂ

ನಟ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಉಗ್ರಂ ಮಂಜುಗೆ ಇಂದು (ಜನವರಿ 23) ವಿವಾಹ ಸಂಭ್ರಮ. ಅವರ ಮದುವೆ ಧರ್ಮಸ್ಥಳದಲ್ಲಿ ಸರಳವಾಗಿ ನಡೆದಿದೆ. ಸಂಧ್ಯಾ ಜೊತೆ ಅವರು ಹಸೆಮಣೆ ಏರಿದ್ದಾರೆ. ಮಂಜು ಅವರು ಬಿಗ್ ಬಾಸ್​​ಗೆ ಬರೋದಕ್ಕೂ ಮೊದಲು ಅವರ ಜೀವನ ಶೈಲಿ ಬೇರೆ ಇತ್ತು. ಬಿಗ್ ಬಾಸ್ ಬಳಿಕ ಅವರ ಜೀವನ ಶೈಲಿ ಬದಲಾಯಿತು. ಈಗ ಮದುವೆ ಆಗಿ ಹೊಸ ಬಾಳು ಆರಂಭಿಸುತ್ತಿದ್ದಾರೆ. ಅವರಿಗೆ ಎಲ್ಲರೂ ಶುಭಕೋರಿದ್ದಾರೆ. ಧರ್ಮಸ್ಥಳದಲ್ಲಿ ಮಂಜು ಹಾಗೂ ಸಂಧ್ಯಾ ಮದುವೆ…

Read More

ಬೇಸಿಗೆಯಲ್ಲಿ ದೇಹ ತಂಪಾಗಿರಿಸಲು ಈ ಹಣ್ಣುಗಳನ್ನು ಸೇವನೆ ಮಾಡಲೇಬೇಕು – Kannada News | These are the fruits that keep the body cool on hot summer

ಮಾರ್ಚ್‌ ತಿಂಗಳ ಆರಂಭದೊಂದಿಗೆ ಬೇಸಿಗೆಯೂ (summer) ಶುರುವಾಗಿದೆ. ಈ ಸುಡು ಬೇಸಿಗೆಯಲ್ಲಿ ವಾತಾವರಣ ಮಾತ್ರವಲ್ಲ ದೇಹ ಕೂಡ ತುಂಬಾನೆ ಬಿಸಿಯಾಗಿರುತ್ತದೆ. ಇನ್ನೂ ತಾಪಮಾನ ಹೆಚ್ಚಾದಂತೆ ನಿರ್ಜಲೀಕರಣ, ಶಾಖದ ಹೊಡೆತ ಮತ್ತು ಆಯಾಸದಂತಹ ಸಮಸ್ಯೆಗಳು ಕಾಣಿಸಿಕೊಳ್ಳಲು ಆರಂಭಿಸುತ್ತದೆ. ಹೀಗಿರುವಾಗ ದೇಹವನ್ನು ತಂಪಾಗಿರಿಸಲು ದೇಹದಲ್ಲಿ ನೀರಿನಾಂಶವನ್ನು ಕಾಪಾಡಿಕೊಳ್ಳುವುದು ತುಂಬಾನೇ ಮುಖ್ಯ. ಇದಕ್ಕಾಗಿ ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯುವುದರ  ಜೊತೆಗೆ ಈ ಬೇಸಿಗೆಯಲ್ಲಿ ಕೆಲವೊಂದಷ್ಟು ಹಣ್ಣುಗಳನ್ನು ಸೇವನೆ ಮಾಡಬೇಕು. ಇದು ನಿರ್ಜಲೀಕರಣವನ್ನು ತಡೆಯುವುದು ಮಾತ್ರವಲ್ಲದೆ ದೇಹವನ್ನು ತಂಪಾಗಿರಿಸಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ…

Read More

Rajat Patidar: ಒಂದು ಪರೀಕ್ಷೆ ನಡೆಸಬೇಕಿತ್ತು, ಅದಕ್ಕಾಗಿ ಆತನನ್ನು ಕಣಕ್ಕಿಳಿಸಿದೆವು! – Kannada News | Rajat patidar post match interview After RCB vs GT Match in IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಆರ್​ಸಿಬಿ ತಂಡ ಫೈನಲ್​ಗೇರಿದೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಕಲೆಹಾಕಿದ್ದು ಬರೋಬ್ಬರಿ 254 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ಗಳಲ್ಲಿ 162 ರನ್​ಗಳಿಸಿ ಆಲೌಟ್…

Read More

ಶಕ್ತಿಮಾನ್ ಕತೆಯನ್ನೇ ಅಲ್ಲು ಅರ್ಜುನ್​ಗಾಗಿ ಹೆಣೆಯುತ್ತಿರುವ ಬಾಸಿಲ್ ಜೋಸೆಫ್? – Kannada News | Basil Joseph not doing Shaktiman movie with Allu Arjun

‘ಪುಷ್ಪ 2’ (Pushpa 2) ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಅಲ್ಲು ಅರ್ಜುನ್ ಗೆ ಒಂದರ ಹಿಂದೊಂದು ದೊಡ್ಡ ದೊಡ್ಡ ನಿರ್ದೇಶಕರುಗಳ ಆಫರ್ ಬಂದಿದ್ದು, ಈಗಾಗಲೇ ಕೆಲವು ನಿರ್ದೇಶಕರುಗಳೊಟ್ಟಿಗೆ ಸಿನಿಮಾ ಒಪ್ಪಿಕೊಂಡಿದ್ದಾರೆ ಸಹ. ಇದೀಗ ಅಟ್ಲಿ ನಿರ್ದೇಶನದ ‘ರಾಕಾ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದಾದ ಬಳಿಕ ಲೋಕೇಶ್ ಕನಗರಾಜ್ ನಿರ್ದೇಶನದ ಸಿನಿಮಾನಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ಮಲಯಾಳಂ ಸ್ಟಾರ್ ನಟ ಬಾಸಿಲ್ ಜೋಸೆಫ್ ನಿರ್ದೇಶನದ ಸೂಪರ್ ಹೀರೋ ಸಿನಿಮಾನಲ್ಲಿ ನಟಿಸಲಿದ್ದಾರೆ. ಅದರ ಬಳಿಕ ಸಂದೀಪ್ ರೆಡ್ಡಿ ವಂಗಾ ಸಿನಿಮಾ…

Read More

PM Modi Speech Live: ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ; ಲೈವ್​​ ವಿಡಿಯೋ ಇಲ್ಲಿದೆ ನೋಡಿ

ದೆಹಲಿ, ಜೂ.10: ಪ್ರಧಾನಿ ಮೋದಿ ಅವರು ದೇಶವನ್ನು ಉದ್ದೇಶಿ ಮಾತನಾಡುತ್ತಿದ್ದಾರೆ. ದೆಹಲಿಯಲ್ಲಿ ಭಾರತ್ ಮಂಟಪಂನಲ್ಲಿ ಎನ್​​ಡಿಎ ಸಭೆಯ ನಂತರ ಈ ಭಾಷಣ ಮಾಡುತ್ತಿದ್ದಾರೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ. ಮೂರನೇ ಬಾರಿಗೆ ಅಧಿಕಾರ ಹಿಡಿದಿರುವ ಎನ್‌ಡಿಎ ಮೈತ್ರಿಕೂಟದ ಮುಂದಿನ ಆಡಳಿತಾತ್ಮಕ ಕಾರ್ಯತಂತ್ರಗಳು, ಅಭಿವೃದ್ಧಿ ಯೋಜನೆಗಳು ಹಾಗೂ ದೇಶದ ಸರ್ವತೋಮುಖ ಪ್ರಗತಿಯ ದೃಷ್ಟಿಯಿಂದ ಇಂದಿನ ಸಭೆ ಅತ್ಯಂತ ಮಹತ್ವದ್ದಾಗಿತ್ತು. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ   Source link

Read More

Bird Flu: ಬೆಂಗಳೂರಿಗೂ ಕಾಲಿಟ್ಟ H5N1 ಹಕ್ಕಿ ಜ್ವರ; ಪೌಲ್ಟ್ರಿ ಫಾರಂ ಬಂದ್! – Kannada News | Bengaluru Bird Flu Alert: H5N1 Virus outbreak in poultry farm of Hesaraghatta

ಬೆಂಗಳೂರಿಗೂ ಕಾಲಿಟ್ಟ H5N1 ಹಕ್ಕಿ ಜ್ವರ ಬೆಂಗಳೂರು, ಏಪ್ರಿಲ್ 17: ರಾಜ್ಯದಲ್ಲಿ ಹಕ್ಕಿ ಜ್ವರದ (Bird Flu) ಆತಂಕ ಹೆಚ್ಚಾಗಿದೆ. ಬೆಂಗಳೂರಿನ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆಯಾಗಿದೆ. ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ನಡೆಸಿದ ತಪಾಸಣೆಯ ವೇಳೆ ಕೋಳಿಗಳಲ್ಲಿ ಈ ಸೋಂಕು ಇರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ. ತಕ್ಷಣವೇ ಫಾರಂ ಅನ್ನು ಮುಚ್ಚಲಾಗಿದ್ದು, ಈ ಪ್ರದೇಶದಿಂದ ರಾಜ್ಯದ ವಿವಿಧ ಭಾಗಗಳಿಗೆ ಕೋಳಿ ಸರಬರಾಜು ಆಗುತ್ತಿದ್ದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಠಿಣಗೊಳಿಸಲಾಗಿದೆ. ತಾಪಮಾನ…

Read More

ಬೆಂಗಳೂರಿನಲ್ಲಿ ಶಾಲಾ ಬಸ್​ ಹರಿದು ಮಕ್ಕಳಿಬ್ಬರು ಸಾವು: ಹಾಲು ತರಲು ಹೊರಟ್ಟಿದ್ದವರು ದುರಂತ ಅಂತ್ಯ – Kannada News | Bengaluru School Bus Accident: Two Children Die in Tragic Thanisandra Crash

ಬೆಂಗಳೂರು, ಫೆಬ್ರವರಿ 11: ಶಾಲಾ ಬಸ್​ ಹರಿದು (School Bus Accident) ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಗರದ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್​​ ಬಳಿ ನಡೆದಿದೆ. ವರ್ಷಾ(2) ಹಾಗೂ ಭಾನು(4) ಮೃತ ಮಕ್ಕಳು. ಖಾಸಗಿ ಶಾಲೆಗೆ ಸೇರಿದ ಬಸ್ ಬೈಕ್​​ಗೆ​ ಡಿಕ್ಕಿ ಹೊಡೆದು ಮಕ್ಕಳು ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಡಿಸಿಪಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೆಣ್ಣೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಯಾದಗಿರಿ ಮೂಲದ ನಾಗನಗೌಡ ಅವರು…

Read More

ಈ ರಾಶಿಗಳ ಮೇಲೆ ಗ್ರಹಗಳ ಶುಭಫಲ, ಇಂದು “ಓಂ ಗುಣಾಕರಾಯ ನಮಃ” ಮಂತ್ರ ಜಪ ಮಾಡಿ – Kannada News | Astrologer Dr. Basavaraj Guruji Predicts Zodiac Fortunes for January 29, 2026

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ನೀಡಿದ್ದಾರೆ. ವಿಶ್ವಾಸುನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು, ಶುಕ್ಲಪಕ್ಷ ಏಕಾದಶಿ, ಮೃಗಶಿರಾ ನಕ್ಷತ್ರ, ಐಂದ್ರ ಯೋಗ ಮತ್ತು ಭದ್ರಕರಣ ಈ ದಿನದ ವೈಶಿಷ್ಟ್ಯಗಳಾಗಿವೆ. ರಾಹುಕಾಲವು ಮಧ್ಯಾಹ್ನ 1:59 ರಿಂದ 3:26 ರವರೆಗೆ ಇರಲಿದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಹಾಗೂ ಶುಭ ಕಾಲವು ಮಧ್ಯಾಹ್ನ 12:33 ರಿಂದ 1:59 ರವರೆಗೆ ಇರುತ್ತದೆ. ಈ ದಿನ ರವಿ ಮಕರ…

Read More

ಬೆಂಗಳೂರಿನಲ್ಲಿ ಜೀ ತೆಲುಗು ‘ಸರಿಗಮಪ’ ಆಡಿಷನ್; ಯುವ ಗಾಯಕರಿಗೆ ಸುವರ್ಣಾವಕಾಶ – Kannada News | Zee Telugu SaReGaMaPa Bengaluru Auditions: Your Path to Singing Stardom

ಸಂಗೀತಕ್ಕೆ ಭಾಷೆಯ ಮಿತಿ ಇಲ್ಲ. ಪರಭಾಷೆಯ ಅನೇಕ ಗಾಯಕರು ಕನ್ನಡ ಹಾಡನ್ನು ಹಾಡಿದ್ದು ಇದೆ. ಅದೇ ರೀತಿ ಅನೇಕ ಕನ್ನಡದ ಕಲಾವಿದರು ಪರಭಾಷೆಯಲ್ಲಿ ಮಿಂಚಿದ್ದಾರೆ. ಈಗ ಜೀ ತೆಲುಗು ವಾಹಿನಿಯವರು ಪ್ರತಿಭೆಗಳನ್ನು ಅರಸಿ ಬೆಂಗಳೂರಿಗೆ ಬರುತ್ತಿದ್ದಾರೆ. ‘ಸರಿಗಮಪ’ ತೆಲುಗು ಆಡಿಷನ್ಸ್ ಬೆಂಗಳೂರಿನಲ್ಲ ನಡೆಯಲಿದೆ. ಈ ಬಾರಿ ‘ಸರಿಗಮ ಪ – ನೆಕ್ಸ್ಟ್ ಇಂಡಿಯಾಸ್ ಸಿಂಗಿಂಗ್ ಸೆನ್ಸೇಷನ್’ ಎಂಬ ಹೊಸ ಶೀರ್ಷಿಕೆಯೊಂದಿಗೆ ಕಾರ್ಯಕ್ರಮ ಮೂಡಿಬರಲಿದ್ದು, ದೇಶದ ವಿವಿಧೆಡೆ ಆಡಿಷನ್‌ಗಳು ಆರಂಭವಾಗಿವೆ. ತೆಲುಗು ರಾಜ್ಯಗಳ ಜೊತೆಗೆ ದೇಶದ ಇತರೆ ಭಾಗಗಳಲ್ಲಿರುವ…

Read More