Headlines

‘ಸಂಸ್ಕೃತಿ ಅರ್ಥೈಸಿಕೊಂಡು ಅದಕ್ಕೆ ಗೌರವ ನೀಡಬೇಕು’; ದೀಪಿಕಾ ಪಡುಕೋಣೆಗೆ ಕೌಂಟರ್ – Kannada News | Director Venky Atluri Reacts to Deepika Padukone Working Hours Controversy

ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ (Deepika Padukone) ಕೆಲಸದ ಸಮಯದ ವಿವಾದ ಈಗ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ದಿನಕ್ಕೆ ಎಂಟು ಗಂಟೆಗಳ ಕಾಲ ಮಾತ್ರ ಕೆಲಸ ಮಾಡಲು ದೀಪಿಕಾ ಪಟ್ಟು ಹಿಡಿದಿದ್ದರು. ಈ ಕಾರಣದಿಂದಾಗಿ ಅವರು ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸೀಕ್ವೆಲ್ ಮತ್ತು ಸಂದೀಪ್ ರೆಡ್ಡಿ ವಂಗಾ ಅವರ ‘ಸ್ಪಿರಿಟ್’ ಚಿತ್ರದಿಂದ ಹೊರನಡೆದಿದ್ದಾರೆ. ತೆಲುಗು ಚಿತ್ರರಂಗದ ಕೆಲಸದ ಸಂಸ್ಕೃತಿ ದೀಪಿಕಾ ಪಡುಕೋಣೆ ಅವರ ಈ ನಿರ್ಧಾರದ ಬಗ್ಗೆ ಟಾಲಿವುಡ್ ನಿರ್ದೇಶಕ ವೆಂಕಿ…

Read More

ಪರಶುರಾಮನ ಪಾತ್ರಕ್ಕಾಗಿ 25 ಕೆಜಿ ಹೆಚ್ಚಿಸಿಕೊಳ್ಳಲು ರೆಡಿ ಆದ ವಿಕ್ಕಿ ಕೌಶಲ್ – Kannada News | Vicky Kaushal Undergoes Massive Weight Gain Transformation of 25 kg for Mahavatar

ಬಾಲಿವುಡ್ ನಟ ವಿಕ್ಕಿ ಕೌಶಲ್ ಯಾವುದೇ ಪಾತ್ರ ಸಿಕ್ಕರೂ ಯಶಸ್ವಿಯಾಗಿ ನಿರ್ವಹಿಸುತ್ತಾರೆ. ಪ್ರತಿ ಪಾತ್ರಕ್ಕೆ ಬೇಕಿರೋ ಅಗತ್ಯ ತಯಾರಿಗಳನ್ನು ಅವರು ಮಾಡಿಕೊಳ್ಳುತ್ತಾರೆ. ‘ಛಾವಾ’ ಚಿತ್ರದ ಯಶಸ್ಸಿನ ನಂತರ ವಿಕ್ಕಿ ‘ಮಹಾವತಾರ್’ ಸಿನಿಮಾಗಾಗಿ ದೊಡ್ಡ ಸವಾಲನ್ನು ಸ್ವೀಕರಿಸಿದ್ದಾರೆ. ಅಮರ್ ಕೌಶಿಕ್ ನಿರ್ದೇಶನದ ಈ ಪೌರಾಣಿಕ ಚಿತ್ರದಲ್ಲಿ ವಿಕ್ಕಿ ಕೌಶಲ್ ಅವರು ಚಿರಂಜೀವಿ ಪರಶುರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪಾತ್ರಕ್ಕಾಗಿ ನಟ ಬರೋಬ್ಬರಿ 25 ಕೆಜಿಗೂ ಹೆಚ್ಚು ತೂಕ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಪರಶುರಾಮನ ಪಾತ್ರಕ್ಕಾಗಿ ಭಾರಿ ಸಿದ್ಧತೆ ಪುರಾಣಗಳಲ್ಲಿ ಪರಶುರಾಮನನ್ನು ಅತ್ಯಂತ…

Read More

Bank holidays in August 2026: ಆಗಸ್ಟ್ ತಿಂಗಳಲ್ಲಿ ಬ್ಯಾಂಕುಗಳಿಗೆ 15 ದಿನಗಳವರೆಗೆ ರಜೆ; ಇಲ್ಲಿದೆ ರಜಾಪಟ್ಟಿ – Kannada News | Banks have upto 15 days holiday in India, including Id Milad, Onam, independence day

ಎಸ್​ಬಿಐ ಬ್ಯಾಂಕ್​ನ ಚಿತ್ರImage Credit source: Getty Images ನವದೆಹಲಿ, ಜುಲೈ 31: ಆರ್​ಬಿಐ (RBI) ಕ್ಯಾಲೆಂಡರ್ ಪ್ರಕಾರ ಭಾರತದಲ್ಲಿ ಆಗಸ್ಟ್ ತಿಂಗಳಲ್ಲಿ ಬ್ಯಾಂಕುಗಳಿಗೆ 15 ದಿನಗಳವರೆಗೆ ರಜೆ (Bank Holidays) ಇರುತ್ತದೆ. ಸ್ವಾತಂತ್ರ್ಯ ದಿನಾಚರಣೆ, ಈದ್ ಮಿಲಾದ್, ಓಣಂ ಇತ್ಯಾದಿ ಪ್ರಮುಖ ರಜಾದಿನಗಳಿವೆ. ಹಾಗೆಯೇ, ಕೇರ್ ಪೂಜಾ ಇತ್ಯಾದಿ ಪ್ರಾದೇಶಿಕ ವಿಶೇಷ ರಜೆಗಳೂ ಇವೆ. ಎರಡನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ಭಾನುವಾರದ ರಜೆಗಳು ಇದರಲ್ಲಿ ಒಳಗೊಂಡಿವೆ. ಕರ್ನಾಟಕದಲ್ಲಿ ಒಂಬತ್ತು ದಿನಗಳು ಬ್ಯಾಂಕುಗಳ ಕಚೇರಿ ಬಂದ್…

Read More

ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಶಿಕ್ಷೆಗೂ ತಡೆಯಾಜ್ಞೆ: ಯೋಗೀಶ್ ಗೌಡರ್ ಕೊಲೆ ಕೇಸ್​ನಲ್ಲಿ ಬಿಗ್ ರಿಲೀಫ್ – Kannada News | Vinay Kulkarni Gets Bail in Yogesh Gowda Murder Case: Possibility of getting another chance for the MLA

ಯೋಗೀಶ್ ಗೌಡರ್ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನುImage Credit source: tv9 ಬೆಂಗಳೂರು, ಜುಲೈ 31: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda Murder Case) ಮಾಜಿ ಸಚಿವ ವಿನಯ್ ಕುಲಕರ್ಣಿಗೆ (Vinay Kulkarni) ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ವಿನಯ್ ಕುಲಕರ್ಣಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡಲಾಗಿದೆ. 5 ಲಕ್ಷ ರೂ. ಬಾಂಡ್ ಹಾಗೂ ಶ್ಯೂರಿಟಿ ಒದಗಿಸುವಂತೆ ಕೋರ್ಟ್​ ಆದೇಶಿಸಿದೆ. ಇದೇ ವೇಳೆ ವಿನಯ್…

Read More

Karnataka Dam Water Level: ಕೆಆರ್‌ಎಸ್​ನಲ್ಲಿ ನೀರಿನ ಅಭಾವದ ಭೀತಿ: ಆಲಮಟ್ಟಿ ಭರ್ತಿ! – Kannada News | Karnataka Dam Water Level Today: KRS, Alamatti, Kabini Storage Details

ಬೆಂಗಳೂರು, ಜುಲೈ 31: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಆದೇಶ ಹೊರಬಿದ್ದ ಬೆನ್ನಲ್ಲೇ ಕಾವೇರಿ ಕೊಳ್ಳದ ಪ್ರಮುಖ ಜಲಾಶಯವಾದ ಕೆಆರ್‌ಎಸ್‌ನಲ್ಲಿ ನೀರಿನ ಅಭಾವ ಭೀತಿ ಎದುರಾಗಿದೆ. ಕಳೆದ ಒಂದು ವಾರದಿಂದ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 90 ಅಡಿ ದಾಟಿದ್ದರೂ ಸಹ, ಸದ್ಯಕ್ಕೆ 92.85 ಅಡಿಯಲ್ಲೇ ಸ್ಥಿರವಾಗಿದ್ದು, ಜಲಾಶಯ ಭರ್ತಿಯಾಗಲು ಇನ್ನೂ ಬಹುದೂರ ಸಾಗಬೇಕಿದೆ. ಒಂದು ಕಡೆ ಮಳೆಯ ಕೊರತೆಯಿಂದ ಕಾವೇರಿ ಕೊಳ್ಳದ ಜಲಾಶಯಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗದೇ ಕಂಗೆಟ್ಟಿದ್ದರೆ, ಇನ್ನೊಂದೆಡೆ ತಮಿಳುನಾಡಿಗೆ ನೀರು ಹರಿಸಬೇಕಾದ ಅನಿವಾರ್ಯತೆ…

Read More

Video: ತಾಯಿಯನ್ನು ಮೊದಲ ಬಾರಿಗೆ ವಿಮಾನ ಹತ್ತಿಸಿದ ಯುವಕ, ವೈರಲ್‌ ಆಯ್ತು ದೃಶ್ಯ – Kannada News | A young man who took his mother on a flight for the first time.

ಪ್ರತಿಯೊಬ್ಬ ಮಕ್ಕಳಿಗೂ ಚೆನ್ನಾಗಿ ಓದಿ ಕೆಲಸಕ್ಕೆ ಸೇರಿ ತಮ್ಮ ಹೆತ್ತವರನ್ನು (parents) ಚೆನ್ನಾಗಿ ನೋಡಿಕೊಳ್ಳಬೇಕು ಎಂಬ ಆಸೆಯಿರುತ್ತದೆ. ಹೌದು, ಹೆತ್ತವರ ಸಣ್ಣ ಪುಟ್ಟ ಕನಸುಗಳನ್ನು ನನಸಾಗಿರುವುದರಲ್ಲಿ ಏನೋ ಖುಷಿ. ಇದೀಗ ಮಗನೊಬ್ಬ ತಾಯಿಯನ್ನು ಮೊದಲ ಬಾರಿಗೆ ವಿಮಾನ (flight) ಹತ್ತಿಸಿದ್ದಾನೆ. ತಾಯಿಯ ಜತೆಗೆ ವಿಮಾನ ಪ್ರಯಾಣದ ಭಾವನಾತ್ಮಕ ವಿಡಿಯೋ ಹಂಚಿಕೊಂಡಿದ್ದಾನೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಸದ್ಯ ವೈರಲ್ ಆಗಿದೆ. ಅನ್ಮೋಲ್‌ ಖಾತ್ರಿ (Anmol Khattri) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡು, ನನಗೆ 26…

Read More

ಮನೆಗೆ ಮಾರಿ ಅಂದ್ರಾ ಜ್ಯೋತಿಷಿ? ಬೇಸರದಿಂದ ಮದುವೆಯಾಗಿ 8 ತಿಂಗಳಿಗೆ ಆತ್ಮಹತ್ಯೆಗೆ ಶರಣಾದ ಮಹಿಳೆ – Kannada News | Dehradun Bride’s Tragic End Sparks Questions Over Alleged Harassment and Superstition

ಡೆಹ್ರಾಡೂನ್, ಜುಲೈ 31: ವಿವಾಹವಾಗಿ ಕೇವಲ ಎಂಟು ತಿಂಗಳಲ್ಲೇ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಡೆಹ್ರಾಡೂನ್‌ನ ದೋಯಿವಾಲಾದಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ವರದಕ್ಷಿಣೆ ಕಿರುಕುಳ(Dowry) ಮತ್ತು ಮೂಢನಂಬಿಕೆಯ ಆಧಾರದ ಮೇಲೆ ನಿರಂತರ ಮಾನಸಿಕ ಹಿಂಸೆ ನೀಡಿದ್ದರಿಂದಲೇ ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅವರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಸಾಯುವ ಮುನ್ನ ಸೃಷ್ಟಿ ಕಂದರಿ, ತಮ್ಮ ತಾಯಿಗೆ ಭಾವನಾತ್ಮಕ ವೀಡಿಯೊ ಸಂದೇಶವೊಂದನ್ನು ಕಳುಹಿಸಿದ್ದು, ಕ್ಷಮಿಸಿ ಅಮ್ಮಾ, ಇನ್ನು ಮುಂದೆ ಈ ಕಿರುಕುಳ ಸಹಿಸಿಕೊಳ್ಳಲು ನನ್ನಿಂದ ಸಾಧ್ಯವಿಲ್ಲ…

Read More

ಕಾವೇರಿ ವಿವಾದ: KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು – Kannada News | Karnataka Cauvery Water Dispute: Women Protesters Perform Urulu Seve at KRS Dam

ಮಂಡ್ಯ, ಜುಲೈ 31: ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶವನ್ನು ಖಂಡಿಸಿ ಮಂಡ್ಯ ಜಿಲ್ಲೆಯಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ. ಕೆಆರ್‌ಎಸ್ ಜಲಾಶಯದ ಗೇಟ್ ಮುಂದೆ ಶುಕ್ರವಾರ ಬೆಳಗ್ಗೆಯೇ ಮಹಿಳಾ ಹೋರಾಟಗಾರರು ಉರುಳು ಸೇವೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ನಿರ್ವಹಣಾ ಸಮಿತಿ (CWMA) ಮತ್ತು CWRC ನೀಡಿದ ಆದೇಶದ ವಿರುದ್ಧ ರೈತರು, ಕನ್ನಡಪರ ಸಂಘಟನೆಗಳು ತಿರುಗಿ ಬಿದ್ದಿವೆ. ಪದೇ ಪದೇ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ಕುಡಿಯುವ ನೀರಿಗೂ ತೊಂದರೆಯಾಗುವ ಸಂದರ್ಭದಲ್ಲಿ ತಮಿಳುನಾಡಿಗೆ…

Read More

ಆಷಾಢ ಶುಕ್ರವಾರ: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ – Kannada News | Former CM Yediyurappa Visits Chamundeshwari Temple with Family for 3rd Ashada Friday

ಮೈಸೂರು,ಜು.31: ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ನೆಲೆವೀಡು ಚಾಮುಂಡಿಬೆಟ್ಟಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 3ನೇ ಆಷಾಢ ಶುಕ್ರವಾರದ ಶುಭ ಸಂದರ್ಭದಲ್ಲಿ ಭೇಟಿ ನೀಡಿದರು. ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಯಡಿಯೂರಪ್ಪ ಅವರು, ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು. ಪುತ್ರ ಬಿ.ವೈ. ವಿಜಯೇಂದ್ರ ಸೇರಿದಂತೆ ತಮ್ಮ ಕುಟುಂಬದ ಇತರ ಸದಸ್ಯರೊಂದಿಗೆ ಯಡಿಯೂರಪ್ಪ ಅವರು ಈ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡರು. ನಾಡಿನ ಅಧಿದೇವತೆಯ ಆಶೀರ್ವಾದ ಪಡೆಯಲು ಕುಟುಂಬ ಸಮೇತರಾಗಿ ಆಗಮಿಸಿದ್ದರು. ಯಡಿಯೂರಪ್ಪ ಅವರ ಭೇಟಿ…

Read More

Vastu Tips: ಸೆಕೆಂಡ್ ಹ್ಯಾಂಡ್ ವಸ್ತುಗಳನ್ನು ಮನೆಗೆ ತರುತ್ತಿದ್ದೀರಾ? ಹಾಗಿದ್ರೆ ಈ ವಾಸ್ತು ನಿಯಮ ತಿಳಿದಿರಲಿ – Kannada News | Vastu Tips for Second Hand Items: How to Remove Negative Energy Before Using Used Furniture

ಸೆಕೆಂಡ್ ಹ್ಯಾಂಡ್ ವಸ್ತುImage Credit source: linkedin ಸಾಮಾನ್ಯವಾಗಿ ಸೆಕೆಂಡ್ ಹ್ಯಾಂಡ್ ಅಥವಾ ಹಳೆಯ ವಸ್ತುಗಳನ್ನು ಖರೀದಿಸಿದಾಗ, ಅವು ಮನೆಗೆ ಶ್ರೇಯಸ್ಕರವೇ ಅಥವಾ ಅಶುಭವೇ ಎಂಬ ಪ್ರಶ್ನೆ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಉದ್ಭವಿಸುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಬಳಸುವ ಹಳೆಯ ಪೀಠೋಪಕರಣಗಳು ಅಥವಾ ಯಾವುದೇ ವಸ್ತುಗಳು ಅವುಗಳ ಹಿಂದಿನ ಮನೆಯ ವಾತಾವರಣ, ಅವುಗಳನ್ನು ಬಳಸಿದ ವ್ಯಕ್ತಿಯ ಆಲೋಚನಾ ಶಕ್ತಿ ಮತ್ತು ಹಳೆಯ ನೆನಪುಗಳನ್ನು ತಮ್ಮೊಂದಿಗೆ ಹೊತ್ತು ತರುತ್ತವೆ. ಈ ಸೂಕ್ಷ್ಮ ಶಕ್ತಿಗಳು ನಮ್ಮ ಮನೆಯ ವಾತಾವರಣ ಮತ್ತು ಕುಟುಂಬದ…

Read More