Headlines

ಜನ ಒಳಗಿದ್ದಾಗಲೇ ಪುರಸಭೆ ಕಟ್ಟಡಕ್ಕೆ ಬೀಗ ಜಡಿದು ಹೋದ ನೌಕರ: ಸಿಬ್ಬಂದಿ ಒಳಗೇ ಲಾಕ್! – Kannada News | Udupi Planning Authority Staff Locked Inside Kapu Municipal Office After Door Shut by Mistake

ಉಡುಪಿ, ಫೆಬ್ರವರಿ 11: ಉಡುಪಿ ಜಿಲ್ಲೆಯ ಕಾಪು ಪುರಸಭೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಜನಾ ಪ್ರಾಧಿಕಾರದ ಸಿಬ್ಬಂದಿಯನ್ನು ಕಚೇರಿ ಒಳಗೆಯೇ ಲಾಕ್ ಮಾಡಿದ ಅಚಾತುರ್ಯ ಮಂಗಳವಾರ ಸಂಜೆ ನಡೆದಿದೆ. ಇದರಿಂದಾಗಿ ಕೆಲಕಾಲ ಆತಂಕ ಹಾಗೂ ಗೊಂದಲ ಉಂಟಾಯಿತು. ಕಾಪು ಪುರಸಭೆ ಕಟ್ಟಡದಲ್ಲೇ ಕಾರ್ಯನಿರ್ವಹಿಸುತ್ತಿರುವ ಯೋಜನಾ ಪ್ರಾಧಿಕಾರದ ಕಚೇರಿಗೆ ತೆರಳಲು ಒಂದೇ ದ್ವಾರ ಇದ್ದು, ಪ್ರತಿದಿನ ಸಂಜೆ 5.30ರಿಂದ 6 ಗಂಟೆಯೊಳಗೆ ಪುರಸಭೆ ಸಿಬ್ಬಂದಿ ಬಾಗಿಲಿಗೆ ಬೀಗ ಹಾಕುವ ಪದ್ಧತಿ ಇದೆ. ಸಾಮಾನ್ಯವಾಗಿ ಬೀಗ ಹಾಕುವ ಮೊದಲು ಒಳಗೆ ಕೆಲಸ…

Read More

ಧಾರವಾಡ: ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು! – Kannada News | Lack of Basic Infrastructure Keeps Beneficiaries Away from Slum Board Houses in Dharwad

ಧಾರವಾಡ, ಜನವರಿ 23: ಸಿಎಂ ನೆತೃತ್ವದಲ್ಲಿ ನಾಳೆ ಹುಬ್ಬಳ್ಳಿಯಲ್ಲಿ ರಾಜ್ಯದ 42 ಸಾವಿರ ಬಡ ಜನರಿಗೆ ಮನೆ ಹಂಚಿಕೆ ಕಾರ್ಯಕ್ರಮ ನಡೆಯಲಿದೆ. ಇದರ ಬೆನ್ನಲ್ಲೇ ಧಾರವಾಡದಲ್ಲಿ ಹೊಸ ಚರ್ಚೆ ಶುರುವಾಗಿದ್ದು, ಚಂದ್ರಕಾಂತ ಬೆಲ್ಲದ್ ನಗರದಲ್ಲಿ ಕೆಲವು ವರ್ಷಗಳ ಹಿಂದೆ ನಿರ್ಮಿಸಿಕೊಡಲಾಗಿರುವ ಜಿ ಪ್ಲಸ್​​ ಮಾದರಿಯ ಸುಮಾರು 1,179 ಮನೆಗಳಿಗೆ ಸರ್ಕಾರ ಮೂಲ ಸೌಕರ್ಯ ಒದಗಿಸಿ ಕೊಡೋದು ಯಾವಾಗ ಎಂಬ ಪ್ರಶ್ನೆ ಎದ್ದಿದೆ. ಅರವಿಂದ ಬೆಲ್ಲದ್ ಕ್ಷೇತ್ರದಲ್ಲಿ ಸ್ಲಮ್ ಬೋರ್ಡ್‌ನಿಂದ ಮನೆಗಳು ನಿರ್ಮಾಣಗೊಂಡಿದ್ದರೂ ಬಡಾವಣೆಗೆ ಈ ವರೆಗೂ ಅಗತ್ಯ…

Read More

ಅರ್ಧ ಗಂಟೆಯಲ್ಲಿ ಮನೆಗೆ ಬಾ..: ಸಚಿವ ಜಮೀರ್​​ಗೆ ಸಿಎಂ ಸಿದ್ದರಾಮಯ್ಯ ಬುಲಾವ್ – Kannada News | Karnataka Politics: CM Calls Zameer Ahmed for Urgent Talks Following Minority Dissent

ಬೆಂಗಳೂರು. ಏ.14: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಂತರ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹಮದ್ ಖಾನ್‌ಗೆ ತುರ್ತು ಬುಲಾವ್ ನೀಡಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ ಇನ್ನೇನು ಕೆಲವೇ ನಿಮಿಷಗಳಲ್ಲಿ ಸಿದ್ದರಾಮಯ್ಯ ಜಮೀರ್ ಅಹಮದ್ ಅವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಲ್ಪಸಂಖ್ಯಾತ ನಾಯಕರ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು. ಚುನಾವಣಾ ಪ್ರಚಾರದಲ್ಲಿ ಜಮೀರ್ ಅಹಮದ್ ಭಾಗಿಯಾಗಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಪಕ್ಷ…

Read More

Weather Today: 22 ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ, ಬಿರುಗಾಳಿ

ನವದೆಹಲಿ, ಮಾರ್ಚ್ 26: ಕಳೆದ ಒಂದು ವಾರದಿಂದ ಭಾರತದ ಹಲವು ರಾಜ್ಯಗಳಲ್ಲಿ ಅಕಾಲಿಕ ಮಳೆಯಾಗುತ್ತಿದೆ. ಕರ್ನಾಟಕದಲ್ಲೂ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಹವಾಮಾನ ಇಲಾಖೆ ಸುಮಾರು 22 ರಾಜ್ಯಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಮಳೆ (Rain Updates) ಮತ್ತು ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಿದೆ. ವಾಯುವ್ಯ ಭಾರತದಲ್ಲಿ ಮುಂದಿನ ಎರಡು ದಿನಗಳಲ್ಲಿ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ. ಛತ್ತೀಸ್‌ಗಢ, ಆಂಧ್ರಪ್ರದೇಶ, ಕರ್ನಾಟಕದ ಮಲೆನಾಡು, ತೆಲಂಗಾಣ, ವಿದರ್ಭ,…

Read More

Bengaluru: ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ; ಪ್ರಯಾಣಿಕರು ಬದುಕಿದ್ದೇ ಪವಾಡ! – Kannada News | Auto Accident in Mahalakshmi Layout, Bengaluru Caught on CCTV

ಬೆಂಗಳೂರು, ಜನವರಿ 11: ರಸ್ತೆಗುಂಡಿಗೆ ಇಳಿದ ಪರಿಣಾಮ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿ ಆಟೋ ಪಲ್ಟಿಯಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನ ನಾಲ್ಕನೇ ಕ್ರಾಸ್​​ನಲ್ಲಿ ನಡೆದಿದೆ. ಪಲ್ಟಿಯಾದ ರಭಸಕ್ಕೆ ಆಟೋದಿಂದ‌ ಪ್ರಯಾಣಿಕ ಹಾರಿ ಬಿದ್ದಿದ್ದರೆ, ಗ್ಲಾಸ್​​ ಒಡೆದು ಚಾಲಕ ಹೊರ ಬಂದಿದ್ದಾನೆ. ನೀರು ಲೀಕೇಜ್ ಆಗಿ ರಸ್ತೆಯಲ್ಲಿ ಗುಂಡಿ ಆಗಿದ್ದರೂ ಅದರ ಸುತ್ತ ಯಾವುದೇ ಬ್ಯಾರಿಕೇಡ್​​ ಹಾಕದಿರುವುದೇ ಅನಾಹುತಕ್ಕೆ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮತ್ತಷ್ಟು…

Read More

ಬಿಗ್ ಬಾಸ್ ಖ್ಯಾತಿಯ ಅನುರಾಗ್ ದೊಭಾಲ್ ಸ್ಥಿತಿ ಗಂಭೀರ: ಹೆಚ್ಚಿದೆ ಶ್ವಾಸಕೋಶದ ಸೋಂಕು

ಖ್ಯಾತ ಯೂಟ್ಯೂಬರ್ ಹಾಗೂ ಬಿಗ್ ಬಾಸ್ 17ರ ಸ್ಪರ್ಧಿ ಅನುರಾಗ್ ದೊಭಾಲ್ (Anurag Dobhal) ಅಲಿಯಾಸ್ ಯುಕೆ 07 ರೈಡರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇತ್ತೀಚೆಗಷ್ಟೇ ಅವರನ್ನು ಐಸಿಯುನಿಂದ ಹೊರತಂದು ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಆದರೆ ಈಗ ಅವರನ್ನು ಮತ್ತೆ ಐಸಿಯುಗೆ (ICU) ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಅಪಘಾತಕ್ಕೀಡಾಗಿದ್ದ ಅವರ ಶ್ವಾಸಕೋಶದಲ್ಲಿ ತೀವ್ರ ಸೋಂಕು ಕಾಣಿಸಿಕೊಂಡಿರುವುದೇ ಇದಕ್ಕೆ ಕಾರಣ ಎಂದು ಅವರ ಮ್ಯಾನೇಜರ್ ತಿಳಿಸಿದ್ದಾರೆ. ಅನುರಾಗ್ ಅವರ ಮ್ಯಾನೇಜರ್ ರೋಹಿತ್ ಪಾಂಡೆ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ…

Read More

Upskill Your Career: ವೃತ್ತಿಜೀವನದಲ್ಲಿ ಹೊಸ ದಿಕ್ಕು ನೀಡಬಲ್ಲ 5 ಪ್ರಮುಖ ಆನ್‌ಲೈನ್ ಕೋರ್ಸ್‌ಗಳು – Kannada News | Upskill Your Career: 5 Online Courses for Professionals to Boost Growth and Salary

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪದವಿ ಮಾತ್ರ ಸಾಕಾಗುವುದಿಲ್ಲ, ನಿರಂತರವಾಗಿ ಹೊಸ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಈಗಾಗಲೇ ಉದ್ಯೋಗದಲ್ಲಿರುವವರಿಗೆ ಕಚೇರಿ ಜವಾಬ್ದಾರಿಗಳು ಮತ್ತು ವೈಯಕ್ತಿಕ ಜೀವನದ ಮಧ್ಯೆ ಸಮತೋಲನ ಸಾಧಿಸುವುದು ಸವಾಲಾಗಿರಬಹುದು. ಇಂತಹ ಸಂದರ್ಭದಲ್ಲಿ, ಆನ್‌ಲೈನ್ ಕೋರ್ಸ್‌ಗಳು ಅತ್ಯುತ್ತಮ ಆಯ್ಕೆಯಾಗಿವೆ. ಇವುಗಳು ನಿಮ್ಮ ಪ್ರಸ್ತುತ ಉದ್ಯೋಗದಲ್ಲಿ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದಲ್ಲದೆ, ಬಡ್ತಿ ಮತ್ತು ಉತ್ತಮ ಸಂಬಳದ ಅವಕಾಶಗಳಿಗೂ ದಾರಿ ಮಾಡಿಕೊಡುತ್ತವೆ. ವೃತ್ತಿಪರರಿಗೆ ವೃತ್ತಿಜೀವನದಲ್ಲಿ ಹೊಸ ದಿಕ್ಕು ನೀಡಬಲ್ಲ ಐದು ಪ್ರಮುಖ ಕೋರ್ಸ್‌ಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ. ಕೃತಕ ಬುದ್ಧಿಮತ್ತೆ (AI)…

Read More

ಹಿಂದೂ ಧರ್ಮದ ಬಗ್ಗೆ ನಿಕ್ ಜೋನಸ್ ಮಾತು – Kannada News | Nick Jonas talks about Hindi religion and praised it

ನಿಕ್ ಜೋನಸ್ (Nick Jonas), ಹಾಲಿವುಡ್​ನ (Hollywood) ಖ್ಯಾತ ಪಾಪ್ ಗಾಯಕ ಮತ್ತು ನಟ. ನಿಕ್ ಜೋನಸ್ ಭಾರತದ ಅಳಿಯ ಸಹ ಹೌದು, ಪ್ರಿಯಾಂಕಾ ಚೋಪ್ರಾ ಪತಿಯಾಗಿರುವ ನಿಕ್ ಜೋನಸ್, ಭಾರತದೊಂದಿಗೆ ಹತ್ತಿರದ ಬಂಧ ಹೊಮದಿದ್ದಾರೆ. ನಟಿ ಪ್ರಿಯಾಂಕಾ, ನಿಕ್ ಜೋನಸ್​​ಗೆ ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಬಗ್ಗೆ ಕಲಿಸಿಕೊಟ್ಟಿದ್ದಾರೆ. ಇತ್ತೀಚೆಗಿನ ಸಂದರ್ಶನದಲ್ಲಿ ಭಾರತ ಮತ್ತು ವಿಶೇಷವಾಗಿ ಹಿಂದೂ ಧರ್ಮದ ಬಗ್ಗೆ ನಿಕ್ ಜೋನಸ್ ಮಾತನಾಡಿದ್ದಾರೆ, ಹಿಂದೂ ಧರ್ಮದ ಬಗ್ಗೆ ಅಪಾರ ಗೌರವವನ್ನು ಅವರು ವ್ಯಕ್ತಪಡಿಸಿದ್ದಾರೆ….

Read More

ರಷ್ಯಾ, ಒಮನ್ ಬೆನ್ನಲ್ಲೇ ಇರಾನ್‌ನ ಹೊಸ ಸುಪ್ರೀಂ ನಾಯಕ ಮೊಜ್ತಬಾ ಖಮೇನಿಯನ್ನು ಸ್ವಾಗತಿಸಿದ ಪಾಕಿಸ್ತಾನ

ಇಸ್ಲಮಾಬಾದ್, ಮಾರ್ಚ್ 10: ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಫೆಬ್ರವರಿ 28ರಂದು ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಖಮೇನಿ (Ayatollah Ali Khamenei) ಮೃತಪಟ್ಟಿದ್ದರು. ಅವರ ಉತ್ತರಾಧಿಕಾರಿಯಾಗಿರುವ ಇರಾನ್‌ನ ಹೊಸ ಸರ್ವೋಚ್ಚ ನಾಯಕರಾದ ಮೊಜ್ತಬಾ ಖಮೇನಿ ಅವರನ್ನು ಪಾಕಿಸ್ತಾನ ಅಭಿನಂದಿಸಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಮೊಜ್ತಬಾ ಖಮೇನಿ ಅವರನ್ನು ಅಭಿನಂದಿಸಿದ್ದು, ಅವರ ತಂದೆಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇರಾನಿನ ಹೊಸ ನಾಯಕ ದೇಶವನ್ನು ಶಾಂತಿ ಮತ್ತು ಸ್ಥಿರತೆಯತ್ತ ಕೊಂಡೊಯ್ಯುತ್ತಾರೆ ಎಂದು ಅಭಿಪ್ರಾಯ…

Read More

ಟಿ20 ವಿಶ್ವಕಪ್​ಗೂ ತಟ್ಟಿದ ಯುದ್ಧದ ತಾಪ..! – Kannada News | T20 World Cup 2026: ICC Working On Alternative Flight Plans For Players

ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ವಾಯು ದಾಳಿ ಮುಂದುವರೆಸಿದೆ. ಈ ವಾಯು ದಾಳಿಗೆ ಪ್ರತೀಕಾರವಾಗಿ ಗಲ್ಫ್ ದೇಶಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನಿ ಪ್ರತಿ ದಾಳಿ ನಡೆಸಿದೆ. ಈ ದಾಳಿಗಳಿಂದಾಗಿ ವಾಯು ಸಂಚಾರದ ಮೇಲೆ ಪರಿಣಾಮ ಬೀರುತ್ತಿದ್ದು, ಅನೇಕ ವಿಮಾನ ನಿಲ್ದಾಣಗಳು ಬಂದ್ ಆಗಿವೆ. ಇನ್ನು ಕೆಲ ವಿಮಾನಯಾನಗಳನ್ನು ರದ್ದುಗೊಳಿಸಲಾಗಿದೆ. ಈ ರದ್ದಾಗುವಿಕೆಯು ಟಿ20 ವಿಶ್ವಕಪ್ ಮೇಲೂ ಪರಿಣಾಮ ಬೀರಿದೆ. ಇರಾನ್ ಮತ್ತು ಗಲ್ಫ್ ಪ್ರದೇಶದ ವೈಮಾನಿಕ ಮಾರ್ಗಗಳನ್ನು ಮುಚ್ಚಿರುವುದರಿಂದ ದುಬೈ ಮತ್ತು ಕತಾರ್…

Read More