Headlines

15 ದಿನದಲ್ಲಿ 65 ಕೋಟಿ ಮೌಲ್ಯದ ಡ್ರಗ್ಸ್ ಸೀಜ್!: ಬೆಂಗಳೂರಿಗೆ ಡ್ರಗ್ಸ್ ಹರಿದು ಬರುತ್ತಿರುವುದು ಏಕೆ? ಪೊಲೀಸರು ಪತ್ತೆಹಚ್ಚಿದ 11 ಶಾಕಿಂಗ್ ಕಾರಣಗಳು! – Kannada News | Mega Drug Bust in Bengaluru: Police Uncover Global Trafficking Routes and Youth Targets

ಬೆಂಗಳೂರು, ಮೇ.6: ಇತಿಹಾಸದಲ್ಲೇ ಕಾಣದ ರೀತಿಯಲ್ಲಿ ಬೆಂಗಳೂರು ನಗರಕ್ಕೆ ಬೃಹತ್ ಪ್ರಮಾಣದಲ್ಲಿ ಮಾದಕ ದ್ರವ್ಯಗಳು ಹರಿದು ಬರುತ್ತಿವೆ. ಪೊಲೀಸರು ಎಷ್ಟೇ ಹದ್ದಿನ ಕಣ್ಣಿಟ್ಟಿದ್ದರೂ, ಡ್ರಗ್ಸ್ ಸಪ್ಲೈ ಜಾಲ ಮಾತ್ರ ಕಡಿಮೆಯಾಗುತ್ತಿಲ್ಲ. ಇದು ನಗರದ ಜನತೆಯಲ್ಲಿ ಮತ್ತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಕಳೆದ ಕೇವಲ 15 ದಿನಗಳಲ್ಲಿ ಬೆಂಗಳೂರು ಪೊಲೀಸರು ನಗರದ ವಿವಿಧೆಡೆ ದಾಳಿ ನಡೆಸಿ ಬರೋಬ್ಬರಿ 65 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಅಂಕಿ-ಅಂಶವೇ ನಗರದಲ್ಲಿ ಡ್ರಗ್ಸ್ ಜಾಲ ಎಷ್ಟು ಆಳವಾಗಿ…

Read More

Horoscope Today: ಇಂದು ಈ ರಾಶಿಯವರು ಕಡಿಮೆ ಚರ್ಚೆ ಮಾಡಿದರೆ ಒಳಿತು

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 17, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷದ ಅಮವಾಸ್ಯಾ ತಿಥಿಯಾಗಿದೆ. ಶುಕ್ರವಾರದಂದು ಬಂದಿರುವ ಅಮಾವಾಸ್ಯೆಯು ಮಹಾಲಕ್ಷ್ಮಿ ಪೂಜೆಗೆ ಪ್ರಾಶಸ್ತ್ಯವಾದ ದಿನವಾಗಿದೆ. ನಾಳೆಯಿಂದ ವೈಶಾಖ ಮಾಸ ಪ್ರಾರಂಭವಾಗುವುದರಿಂದ ಇದನ್ನು ವೈಶಾಖ ಅಮಾವಾಸ್ಯೆ ಎಂದೂ ಕರೆಯಲಾಗುತ್ತದೆ. ರೇವತಿ ನಕ್ಷತ್ರ, ವೈದೃತಿ ಯೋಗ ಮತ್ತು ಚತುಷ್ಪಾತ್ಕರಣ ಇರತಕ್ಕಂತ…

Read More

12 ಕೋಟಿ ರೂ. ಮೈನಸ್… ಡೆಲ್ಲಿ ಕ್ಯಾಪಿಟಲ್ಸ್​ಗೆ ರಿಷಭ್ ರಿಎಂಟ್ರಿ! – Kannada News | Rishabh Pant will be joining Delhi Capitals at 15cr

IPL 2027: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-20ರ ಹರಾಜಿಗೂ ಮುನ್ನವೇ ಬಿಗ್ ಟ್ರೇಡ್ ನಡೆದಿರುವುದು ಖಚಿತವಾಗಿದೆ. ಈ ಟ್ರೇಡಿಂಗ್ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಜಿ ನಾಯಕ ರಿಷಭ್ ಪಂತ್ (Rishabh Pant) ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮರಳುತ್ತಿದ್ದಾರೆ. ಅಂದರೆ ಐಪಿಎಲ್ 2027 ರಲ್ಲಿ ರಿಷಭ್ ಡಿಸಿ ಪರ ಕಣಕ್ಕಿಳಿಯುವುದು ಕನ್ಫರ್ಮ್ ಆಗಿದೆ​​. (PC: IPL) ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಟ್ರೇಡ್ ನಡೆದಿದ್ದು, ಈ ಟ್ರೇಡಿಂಗ್​ನಲ್ಲಿ ರಿಷಭ್ ಪಂತ್ ಅವರನ್ನು…

Read More

ಈ ವಾರ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ – Kannada News | OTT Release this week, From December 23 to December 30

ಮುನಿಕಾಂತ್, ರಾಧಾ ರವಿ ಇನ್ನೂ ಕೆಲವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಮಿಡ್ಲ್ ಕ್ಲಾಸ್’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಮಧ್ಯಮವರ್ಗಗಳ ಬದುಕು, ಬವಣೆಗಳನ್ನು ಹಾಸ್ಯಪ್ರಧಾನವಾಗಿ ಸಿನಿಮಾನಲ್ಲಿ ತೋರಿಸಲಾಗಿದೆ. ಸಿನಿಮಾ ಅನ್ನು ಜೀ5ನಲ್ಲಿ ವೀಕ್ಷಿಸಬಹುದಾಗಿದೆ. Source link

Read More

ಬಾಲಿವುಡ್​ ಖಾನ್​​ಗಳ ಬುಡ ಅಲ್ಲಾಡಿಸುತ್ತಿರುವ ಮೂವರು ಸ್ಟಾರ್ ನಟರು – Kannada News | Ranbir, Ranveer and Vicky Kaushal giving tough fight to Bollywood Khans

ಬಾಲಿವುಡ್ (Bollywood) ಚಿತ್ರರಂಗದಲ್ಲಿ ಕಳೆದ ಮೂರು ದಶಕಗಳಿಂದ ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ಆಮೀರ್ ಖಾನ್ ಅವರದ್ದೇ ಪಾರುಪತ್ಯ. ‘ದಿ ಥ್ರೀ ಖಾನ್ಸ್’ ಎಂದೇ ಅವರು ಖ್ಯಾತರು. ಆದರೆ ಸಮಯ ಬದಲಾಗುತ್ತಲೇ ಇರುತ್ತದೆ. ಇದೀಗ ಖಾನ್​​ಗಳ ಸ್ಥಾನವನ್ನು ಬೇರೆಯವರು ತುಂಬುವ ಸಮಯ ಸನಿಹ ಬಂದಂತೆ ತೋರುತ್ತಿದೆ. ಈಗಿನ ಕಾಲಘಟ್ಟದಲ್ಲಿ ಈ ‘ಮೂವರು ಖಾನ್’ಗಳ ಜನಪ್ರಿಯತೆಗೆ ಸರಿಸಮನಾಗಿ ಹೊಸ ತಲೆಮಾರಿನ ನಟರು ಬೆಳೆಯುತ್ತಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ಮೂವರು ಖಾನ್​​ಗಳಿಗೆ ಭಾರಿ ಪೈಪೋಟಿಯನ್ನು ನೀಡುತ್ತಿರುವ ಬಾಲಿವುಡ್ ನಟರೆಂದರೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 14ರ ದಿನಭವಿಷ್ಯ

ಈ ದಿನ ಗಣಪತಿ ದೇವಸ್ಥಾನಕ್ಕೆ ದೂರ್ವಾ ಅಂದರೆ ಗರಿಕೆಯನ್ನು ಸಮರ್ಪಿಸುವುದರಿಂದ ಒತ್ತಡ, ಜಗಳ- ಕಲಹದಿಂದ ದೂರ ಇರುವುದಕ್ಕೆ ಅನುಗ್ರಹ ಆಗುತ್ತದೆ. ಇದು ಸಾಧ್ಯವಾದಲ್ಲಿ ಮನೆಯಲ್ಲಿ ಸಹ ಮಾಡಬಹುದು. ದೇವರ ಮನೆಯಲ್ಲಿ ಗಣಪತಿ ಚಿತ್ರದ ಎದುರು ಇಡಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಸ್ವತಂತ್ರ ಆಲೋಚನೆಗಳು ನಿಮ್ಮ ಸಹೋದ್ಯೋಗಿಗಳಿಗಿಂತ ಪ್ರತ್ಯೇಕವಾಗಿ ನಿಲ್ಲುವಂತೆ ಮಾಡುತ್ತವೆ. ಪ್ರಾಡಕ್ಟ್ ಅಥವಾ ಪ್ರಾಜೆಕ್ಟ್ ಗಳನ್ನು ನೀವು ನೋಡುವ ರೀತಿ, ಪ್ಲಾನಿಂಗ್ ನಲ್ಲಿ ಅದನ್ನು ಕಟ್ಟುತ್ತಾ…

Read More

ಆರೋಗ್ಯ ಮಾಹಿತಿ ಪಡೆಯಲು ಎಐ ಬಳಕೆ ಹೆಚ್ಚಳ: ಪ್ರತಿ 4ರಲ್ಲಿ ಒಬ್ಬರು ಎಐ ಮೇಲೆ ಅವಲಂಬನೆ – Kannada News | AI Health Advice Trend: Benefits, Risks, and What Medical Experts Say

ಇಂದಿನ ಡಿಜಿಟಲ್ ಯುಗದಲ್ಲಿ ಕೃತಕ ಬುದ್ಧಿಮತ್ತೆ (AI) ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈಗ ಜನರು ಆರೋಗ್ಯ ಸಂಬಂಧಿತ ಮಾಹಿತಿಗಾಗಿ ಕೂಡ ಎಐ ಸಾಧನಗಳನ್ನು ಹೆಚ್ಚು ಬಳಸುತ್ತಿರುವುದು ಹೊಸ ಅಧ್ಯಯನದಿಂದ ಬೆಳಕಿಗೆ ಬಂದಿದೆ. ಹೌದು, ಹೆಮಟಾಲಜಿ ಅಡ್ವೈಸರ್ (Hematology Advisor) ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಪ್ರತಿ ನಾಲ್ಕು ಜನರಲ್ಲಿ ಒಬ್ಬರು ಆರೋಗ್ಯದ ಬಗ್ಗೆ ಮಾಹಿತಿಗಾಗಿ ಎಐ ಆಧಾರಿತ ಟೂಲ್ಸ್ ಬಳಸುತ್ತಿದ್ದಾರೆ ಎಂದು ತಿಳಿದುಬಂದಿದೆ. ವಿಶೇಷವಾಗಿ ಯುವಜನತೆ ಆರೋಗ್ಯ ವಿಷಯದಲ್ಲಿ ಎಐ ಮೇಲೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಅನಾರೋಗ್ಯದ…

Read More

ಬೀದಿ ನಾಯಿ ಹಾವಳಿಗೆ ಬೇಸತ್ತು ದೇವರ ಮೊರೆ! ಅಪಾರ್ಟ್ಮೆಂಟ್ ನಿವಾಸಿಗಳಿಂದ ಕಾಲಭೈರವನಿಗೆ ಪೂಜೆ-ಪು‌ನಸ್ಕಾರ

ಬೆಂಗಳೂರು, ಮಾರ್ಚ್​ 23: ನಗರದಲ್ಲಿ ಬೀದಿ ನಾಯಿಗಳ (Dogs) ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಹೆಚ್ಚುತ್ತಿದೆ. ಇದರಿಂದಾಗಿ ರಸ್ತೆಯಲ್ಲಿ ಓಡಾಡುವುದೂ ಕಷ್ಟವಾಗಿದೆ. ಪುಟ್ಟ ಮಕ್ಕಳು, ವೃದ್ಧರಿಗೇನಾದರೂ ಅಪಾಯವಾದರೆ ಎಂಬ ಭಯದ ವಾತಾವರಣವಿರುವ ನಡುವೆಯೇ ನಗರದ ಅಪಾರ್ಟ್ಮೆಂಟ್​ವೊಂದರ ನಿವಾಸಿಗಳು ದೇವರ ಮೊರೆ ಹೋಗಿದ್ದು ಆಶ್ಚರ್ಯ ಮೂಡಿಸಿದೆ. ಬೀದಿ ನಾಯಿ ಸಮಸ್ಯೆಗೆ ಶಾಂತಿಯುತ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಜೆಪಿ ನಗರದ ಎಲಿಟಾ ಪ್ರೊಮೆನೇಡ್ ಅಪಾರ್ಟ್ಮೆಂಟ್ ನಿವಾಸಿಗಳು ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಿದ್ದು, ನಿವಾಸಿಗಳು ಕಾಲಭೈರವ ಮತ್ತು ದತ್ತಾತ್ರೇಯ ಸ್ವಾಮಿಗೆ ವಿಶೇಷ…

Read More

ತಪ್ಪಿದ ದೊಡ್ಡ ಅನಾಹುತ: ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

ಲಖನೌ, ಮಾ.7: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಇಂದು (ಮಾ.7) ಭಾರೀ ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಲಖನೌನಿಂದ ಕೌಶಂಬಿಗೆ ಹೊರಟಿದ್ದ ಅವರ ಹೆಲಿಕಾಪ್ಟರ್‌ನಲ್ಲಿ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಮೌಸಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಅವರು ಲಖನೌನ ಲಾ ಮಾರ್ಟಿನಿಯರ್ ಕಾಲೇಜು ಮೈದಾನದಿಂದ ಕೌಶಂಬಿಯಲ್ಲಿ ನಡೆಯಬೇಕಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೆಲಿಕಾಪ್ಟರ್ ಮೂಲಕ ಹೊರಟಿದ್ದರು. ಹೆಲಿಕಾಪ್ಟರ್ ಗಾಳಿಯಲ್ಲಿರುವಾಗಲೇ…

Read More

ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ ‘ಅಗ್ನಿಸಾಕ್ಷಿ’ ಸೀರಿಯಲ್ ಶೀರ್ಷಿಕೆ ಗೀತೆ – Kannada News | Colors Kannada serial Agnisakshi new title song ft Shamanth Bro Gowda and Varshini

ವಿಶ್ವ ಸಂಗೀತ ದಿನದ ವಿಶೇಷ ಸಂದರ್ಭದಲ್ಲಿ, ಜನಪ್ರಿಯ ಮನರಂಜನಾ ವಾಹಿನಿ ‘ಕಲರ್ಸ್ ಕನ್ನಡ’ (Colors Kannada) ತನ್ನ ಯಶಸ್ವಿ ಹೊಸ ಫಿಕ್ಷನ್ ಶೋ ‘ಅಗ್ನಿಸಾಕ್ಷಿ’ಯ ಆಕರ್ಷಕ ರೊಮ್ಯಾಂಟಿಕ್ ಶೀರ್ಷಿಕೆ ಗೀತೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಪ್ರಸಾರ ಆರಂಭವಾಗಿ ಕೇವಲ ದಿನಗಳಲ್ಲೇ ರಾಜ್ಯಾದ್ಯಂತ ಪ್ರೇಕ್ಷಕರ ಮನಗೆದ್ದಿರುವ ‘ಅಗ್ನಿಸಾಕ್ಷಿ’ (Agnisakshi) ಸೀರಿಯಲ್, ತನ್ನ ಟೈಟಲ್ ಸಾಂಗ್ ಮೂಲಕವೂ ಗಮನ ಸೆಳೆಯುತ್ತಿದೆ. ‘ಅಗ್ನಿಸಾಕ್ಷಿ’ ಸೀರಿಯಲ್ ಸದ್ಯ ಸಂಜೆ 7 ಗಂಟೆಯ ಪ್ರೈಮ್-ಟೈಮ್ ಸ್ಲಾಟ್‌ನಲ್ಲಿ ಭರ್ಜರಿ ಪ್ರಶಂಸೆ ಗಳಿಸುತ್ತಿದೆ. ಇದು ಅಗ್ನಿ ಮತ್ತು…

Read More