Headlines

ಆಂಜನೇಯನ ದೇವಸ್ಥಾನದಲ್ಲಿ ಭಕ್ತರಿಗೆ ವಿಶೇಷ ದರ್ಶನ ಕೊಟ್ಟ ವಾನರ!

ಬಾಗಲಕೋಟೆ, ಜನವರಿ 28: ಜಿಲ್ಲೆಯ ಬಾದಾಮಿ ಪಟ್ಟಣದ ಬತ್ತೆರೇಶ್ ಆಂಜನೇಯ ದೇವಸ್ಥಾನದಲ್ಲಿ ಮಧ್ವನವಮಿ ಆಚರಣೆ ವೇಳೆ ಅಪರೂಪದ ದೃಶ್ಯವೊಂದು ಕಂಡುಬಂದಿದೆ. ಇನಾಂದಾರ ಕುಟುಂಬದವರಿಂದ ಮಧ್ವಾಚಾರ್ಯ ಜಯಂತಿ ಪೂಜೆ ನಡೆಯುತ್ತಿದ್ದ ಸಂದರ್ಭದಲ್ಲಿ ಮಂಗವೊಂದು ದೇವಸ್ಥಾನಕ್ಕೆ ಆಗಮಿಸಿ ಭಕ್ತರ ನಡುವೆ ನಿರ್ಭಯವಾಗಿ ಓಡಾಡಿ ಎಲ್ಲರ ಗಮನ ಸೆಳೆದಿದೆ. ಪೂಜೆಯಲ್ಲಿ ನಿರತರಾಗಿದ್ದ ಭಕ್ತರ ಬಳಿ ಹೋಗಿ ತೊಡೆಯ ಮೇಲೆ ಕುಳಿತು ಅಚ್ಚರಿ ಮೂಡಿಸಿದೆ. ಯಾರಿಗೂ ಭಯಪಡದೆ ಪ್ರೀತಿಯಿಂದ ವರ್ತಿಸಿದ ಮಂಗ ಭಕ್ತರ ಮನ ಗೆದ್ದಿತು. ಈ ವೇಳೆ ಭಕ್ತರು ಮಂಗನಿಗೆ ಹಣ್ಣುಗಳನ್ನು…

Read More

ಯುವಕನನ್ನ ಹತ್ಯೆಗೈದು ಹೈವೇನಲ್ಲಿ ಶವ ಬಿಸಾಡಿದ ದುಷ್ಕರ್ಮಿಗಳು: ಸಾಕ್ಷ್ಯನಾಶಕ್ಕೆ ಮಾಡಿದ್ದೇನು ಗೊತ್ತಾ? – Kannada News | Hubballi: young man Brutaly murder; The perpetrators threw the body on the road

ಹುಬ್ಬಳ್ಳಿ, ಫೆಬ್ರವರಿ 25: ಯುವಕನ್ನು ಬರ್ಬರವಾಗಿ ಹತ್ಯೆಗೈದ (murder) ದುಷ್ಕರ್ಮಿಗಳ ಗ್ಯಾಂಗ್ ಶವವನ್ನ ರಸ್ತೆಯಲ್ಲಿ ಎಸೆದು ಹೋಗಿರುವಂತಹ ಘಟನೆ ಹುಬ್ಬಳ್ಳಿಯ (Hubballi) ಗದಗ ರಸ್ತೆಯಲ್ಲಿರುವ ಐಟಿಸಿ ಗೋದಾಮಿನ ಬಳಿ ಕೃತ್ಯ ನಡೆದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಮಂಜುನಾಥ ಗಾಣಿಗೇರ(29) ಕೊಲೆಯಾದ ಯುವಕ. ಸದ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಕ್ಷ್ಯನಾಶಕ್ಕೆ ಮಾಡಿದ್ದೇನು ಗೊತ್ತಾ? ಮಂಜುನಾಥ ಗಾಣಿಗೇರ ಕೊಲೆಗೆ ಸದ್ಯ ನಿಖರ ಮಾಹಿತಿ ತಿಳಿದುಬಂದಿಲ್ಲ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಶವ…

Read More

Reliance Jio: ಜಿಯೋ ಬಳಕೆದಾರರಿಗೆ ಅಚ್ಚರಿ ವೈಶಿಷ್ಟ್ಯ: ತಪ್ಪು ಸಂಖ್ಯೆಗೆ ರೀಚಾರ್ಜ್ ಮಾಡಿದರೆ ಹಣ ವಾಪಸ್ – Kannada News | Surprise feature for Jio users Money back even if recharged to wrong number

ಬೆಂಗಳೂರು (ಏ. 27): ನೀವು ನಿಮ್ಮ ಫೋನ್ ಅನ್ನು ರೀಚಾರ್ಜ್ ಮಾಡಿದಾಗ ಅದು ತಪ್ಪು ಸಂಖ್ಯೆಗೆ ರೀಚಾರ್ಜ್ ಆಗಿದೆಯೇ? ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ನೂರಾರು ರೂಪಾಯಿಗಳು ವ್ಯರ್ಥವಾಗುತ್ತವೆ. ಏಕೆಂದರೆ ರೀಚಾರ್ಜ್ ಮಾಡಬೇಕಾದ ವ್ಯಕ್ತಿಯ ಬದಲಿಗೆ, ನೀವು ಬೇರೆಯವರಿಗೆ ರೀಚಾರ್ಜ್ ಮಾಡಿರುತ್ತೀರಿ. ಆದಾಗ್ಯೂ, ಈಗ ಅಂತಹ ತಪ್ಪಿನ ನಂತರವೂ, ನಿಮ್ಮ ಹಣ ವ್ಯರ್ಥವಾಗುವುದಿಲ್ಲ ಏಕೆಂದರೆ ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗೆ ವಿಶೇಷ ವೈಶಿಷ್ಟ್ಯವನ್ನು ತಂದಿದೆ, ಇದರ ಮೂಲಕ ತಪ್ಪು ರೀಚಾರ್ಜ್ ಅನ್ನು ಸಮಯಕ್ಕೆ ಸರಿಯಾಗಿ ಅರಿತುಕೊಂಡರೆ…

Read More

ರಂಗೋಲಿ ಹಾಕ್ತಿದ್ದ ಮಹಿಳೆಯರ ಸರ ಎಗರಿಸಿದ ಖದೀಮರು: ಕದ್ದ ಬೈಕ್​​ನಲ್ಲೇ ಬಂದು ಕೃತ್ಯ – Kannada News | Doddaballapur: Chain Snatchers Target Women Drawing Rangoli

ದೇವನಹಳ್ಳಿ, ಫೆಬ್ರವರಿ 15: ಇಂದು ಶಿವರಾತ್ರಿ ಹಬ್ಬ. ಹೀಗಾಗಿ ಮಹಿಳೆಯರು ಮನೆ ಮುಂದೆ ನೀರು ಹಾಕಿ ರಂಗೋಲಿ ಹಾಕುವುದರಲ್ಲಿ ನಿರತರಾಗಿದ್ದರು. ಇದನ್ನೇ ಬಂಡವಾಳ ಮಾಡಿಕೊಳ್ಳಲು ಬಂದ ಇಬ್ಬರು ಖದೀಮರು ಖತರ್ನಾಕ್ ಪ್ಲಾನ್ ಮಾಡಿ ಖದ್ದ ಬೈಕ್​​ನಲ್ಲಿ ಬಂದು ಚಿನ್ನದ ಸರ ಎಗರಿಸಿ ಎಸ್ಕೇಪ್ (chain snatching) ಆಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುಕ್ತಾಂಬಿಕ ಬಡಾವಣೆಯಲ್ಲಿ ಘಟನೆ ನಡೆದಿದೆ. ಸರಗಳ್ಳತನ ಮಾಡಿ ಪರಾರಿ ಸಮಯ ರಾತ್ರಿ 09:30. ಮನೆಯಲ್ಲಿ ಕುಟುಂಬಸ್ಥರು ಟಿವಿ ಮುಂದೆ ಕುಳಿತಿರುವಾಗಲೇ ಏರಿಯಾಗೆ ಬೈಕ್​​ನಲ್ಲಿ…

Read More

‘ಕರಾವಳಿ’ ಸಿನಿಮಾನಲ್ಲಿ ಸಿದ್ ಶ್ರೀರಾಮ್ ದನಿ: ಮುದ್ದು ಗುಮ್ಮ ಹಾಡು ರಿಲೀಸ್ – Kannada News | Prajwal Devaraj starrer Karavali Kannada movie new song released

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ಸೇರಿದಂತೆ ಹಲವಾರು ಪ್ರತಿಭಾವಂತ ನಟ, ನಟಿಯರು ಒಟ್ಟಿಗೆ ನಟಿಸುತ್ತಿರುವ ‘ಕರಾವಳಿ’ ಸಿನಿಮಾ ತನ್ನ ಟೀಸರ್, ಪೋಸ್ಟರ್​​​ಗಳ ಮೂಲಕವೇ ಸಾಕಷ್ಟು ಕುತೂಹಲ ಕೆರಳಿಸಿದೆ. ಈ ವರೆಗೆ ಬಿಡುಗಡೆ ಆಗಿರುವ ಸಿನಿಮಾದ ಪ್ರತಿಯೊಂದು ಪೋಸ್ಟರ್ ಸಹ ಭಿನ್ನವಾಗಿದ್ದು ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚು ಮಾಡಿವೆ. ಇದೀಗ ‘ಕರಾವಳಿ’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಈ ಮೆಲೋಡಿ ಹಾಡು ಸಹ ಸಿನಿಮಾ ಪ್ರಿಯರ ಗಮನ ಸೆಳೆಯುವಂತಿದೆ. ‘ಮುದ್ದು ಗುಮ್ಮ’ ಎಂಬ ‘ಕರಾವಳಿ’…

Read More

ಹೊಸ ಚರ್ಚೆ ಹುಟ್ಟುಹಾಕಿದ KPS ಮ್ಯಾಗ್ನೆಟ್ ಶಾಲೆ ಯೋಜನೆ: ಆರಂಭಕ್ಕೂ ಮುನ್ನವೇ ಅಪಸ್ವರ ಏಕೆ?

ತುಮಕೂರು, ಮಾರ್ಚ್​ 30: ಅದೊಂದು ಕಾಲವಿತ್ತು. ಶಾಲೆ ಎಂದರೇ ಸಾಕು ಮಕ್ಕಳು ಕಿ.ಮೀಗಳಷ್ಟು ದೂರ ಹೆಜ್ಜೆ ಹಾಕಬೇಕಿತ್ತು. ಊರಿಂದೂರಿಗೆ ಬಂದು ಪಾಠ ಕೇಳಬೇಕಿತ್ತು. ನಂತರದಲ್ಲಿ ನಮ್ಮೂರ ಶಾಲೆ ಎಂಬಂತೆ ಹಳ್ಳಿಹಳ್ಳಿಯಲ್ಲೂ ಸರ್ಕಾರಿ ಶಾಲೆ ತೆರೆಯಲಾಗಿತ್ತು. ಮಕ್ಕಳು ಖುಷಿಯಾಗಿ ಪಾಠ ಕೇಳುತಿದ್ದರು. ಆದ್ರೀಗ ಸರ್ಕಾರದ ಕೆಪಿಎಸ್ ಮ್ಯಾಗ್ನೆಟ್ ಶಾಲೆಯ (KPS Magnet Schools) ನೀತಿ ಆರಂಭಕ್ಕೂ ಮುನ್ನವೇ ಒಂದಷ್ಟು ಅಪಸ್ವರದ ಚರ್ಚೆ ಸೃಷ್ಟಿಸಿದೆ. ವಿವಿಧೋದ್ದೇಶಿತ ಶಾಲಾ ನೀತಿಗೆ ವಿರೋಧ  ಕೆಪಿಎಸ್ ಶಾಲೆ, ಕರ್ನಾಟಕ ಸಾರ್ವಜನಿಕ ಶಾಲೆಗಳ ಮ್ಯಾಗ್ನೆಟ್ ಯೋಜನೆ….

Read More

6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ರೂ. ಅಕ್ರಮ ಆಸ್ತಿ! ಬೆಳಗಾವಿ ನಗರಾಭಿವೃದ್ಧಿ ಇಂಜಿನಿಯರ್ ಆಸ್ತಿ ಕಂಡು ಲೋಕಾಯುಕ್ತರೇ ಶಾಕ್

ಬೆಳಗಾವಿ, ಏಪ್ರಿಲ್ 11: ಬೆಳಗಾವಿಯ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಜಯಸಿಂಗ್ ರಜಪೂತಗೆ ಸೇರಿದ ನಿವಾಸ ಹಾಗೂ ಕಚೇರಿಗಳ ಮೇಲೆ ನಡೆದ ಲೋಕಾಯುಕ್ತ ದಾಳಿ ಅಂತ್ಯಗೊಂಡಿದ್ದು, ತನಿಖೆ ವೇಳೆ ಬರೋಬ್ಬರಿ 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಗಿದೆ. ಬೆಳಗಾವಿಯ ಆಂಜನೇಯ ನಗರ ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿತ್ತು. ಈ ವೇಳೆ 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಇದಲ್ಲದೆ 3.12 ಕೋಟಿ ರೂಪಾಯಿ…

Read More

ಕೊಳ್ಳೇಗಾಲ ರೆಸಾರ್ಟ್​ನಲ್ಲಿ ನಡೀತು ಡ್ರಗ್ಸ್ ಪಾರ್ಟಿ; ಗಾಂಜಾ, ಚರಸ್ ಸೇವಿಸಿ ಮೋಜುಮಸ್ತಿಯಲ್ಲಿದ್ದವರು ಪೊಲೀಸ್ ಬಲೆಗೆ!

ಚಾಮರಾಜನಗರ, ಏಪ್ರಿಲ್ 04: ಜಿಲ್ಲೆಯ ಕೊಳ್ಳೇಗಾಲ ಹೊರವಲಯದಲ್ಲಿ ನಡೆದ ಡ್ರಗ್ಸ್ ಪಾರ್ಟಿ (Drugs Party) ಪ್ರಕರಣ ಸಂಚಲನ ಮೂಡಿಸಿದೆ. ಬೆಂಗಳೂರು ಮೂಲದ ರೌಡಿಶೀಟರ್ ಜಹೀರ್ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದ ಪಾರ್ಟಿ ಪೊಲೀಸರ ದಾಳಿ ವೇಳೆ ಬಯಲಾಗಿದೆ. ಜಹೀರ್ ಜನ್ಮದಿನದ ಅಂಗವಾಗಿ ವಿಶೇಷವಾಗಿ ಈ ಪಾರ್ಟಿ ಆಯೋಜಿಸಲಾಗಿತ್ತು ಎಂದು ತಿಳಿದುಬಂದಿದೆ. 15 ಮಂದಿ ಡ್ರಗ್ಸ್ ಸೇವಿಸಿರುವುದು ದೃಢ ಪಾರ್ಟಿಯಲ್ಲಿ ಭಾಗಿಯಾದವರು ಗಾಂಜಾ ಹಾಗೂ ಚರಸ್ ಸೇವಿಸಿ ಮೋಜುಮಸ್ತಿಯಲ್ಲಿ ತೊಡಗಿದ್ದರು. ಬಳಿಕ ಪೊಲೀಸರು ನಡೆಸಿದ ವೈದ್ಯಕೀಯ…

Read More

ಚಿಕ್ಕಬಳ್ಳಾಪುರದಲ್ಲೊಂದು ಅಪರೂಪದ ಜಾತ್ರೆ: ಕಹಿ ಬೇವಿನ ಸೊಪ್ಪೇ ಇಲ್ಲಿ ಪ್ರಸಾದ

ಚಿಕ್ಕಬಳ್ಳಾಪುರ, ಏಪ್ರಿಲ್​ 02: ಅಲ್ಲೊಂದು ಅಪರೂಪದಲ್ಲಿ ಅಪರೂಪದ ಜಾತ್ರೆ (Jatre) ನಡೆಯುತ್ತೆ. ಆ ಜಾತ್ರೆಯಲ್ಲಿ ಕಹಿ ಬೇವು (Neem), ಬೆಲ್ಲದಂತೆ ಸಿಹಿಯಾಗುತ್ತಂತೆ. ಇದರಿಂದ ಜನ ಬೃಹತ್ ಬೇವಿನ ಮರವೇರಿ ಕಹಿ ಬೇವಿನ ಸೊಪ್ಪು ತಿನ್ನುತ್ತಾರೆ. ಎಲ್ಲಡೆ ದೇವರ ಪ್ರಸಾದವಾಗಿ ಸಿಹಿ ಲಾಡು, ಸ್ವೀಟ್, ಅನ್ನಸಂತರ್ಪಣೆ ಮಾಡಿದರೆ, ಇಲ್ಲಿ ಮಾತ್ರ ಕಹಿ ಬೇವಿನ ಸೊಪ್ಪು ಪ್ರಸಾದವಾಗಿ ನೀಡಲಾಗುತ್ತದೆ. ಈ ಜಾತ್ರೆಯಲ್ಲಿ ಬೇವಿನ ಸೊಪ್ಪೇ ಪ್ರಸಾದ ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಮಂಚೇನಹಳ್ಳಿ ತಾಲೂಕಿನ ಮೀಣಕನಗುರ್ಕಿ ಗ್ರಾಮದಲ್ಲಿ ಮಹೇಶ್ವರಮ್ಮ ಜಾತ್ರೆ ಸದ್ಯ…

Read More

ಕರ್ನಾಟಕ ಹವಾಮಾನ ವರದಿ: ಇಂದೂ ಮುಂದುವರೆದ ವರುಣನ ಆರ್ಭಟ! 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಮಾರ್ಚ್​ 28: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಸಹ ಹಲವೆಡೆ ಮಳೆಯಾಗುವ (Weather Forecast)  ಸೂಚನೆಯಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲ ಭಾಗಗಳಲ್ಲಿ ಒಣ ಹವೆಯ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಎಲ್ಲೆಲ್ಲಿ ಮಳೆಯಾಗುವ…

Read More