ಬಿಎಂಟಿಸಿ ಬಸ್ಗಾಗಿ ಕಾಯುವುದು ಒಂದು ದೊಡ್ಡ ತಪಸ್ಸು! ರಾಜ್ಯ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ – Kannada News | Bengaluru BMTC Bus Shortage: MP Tejaswi Surya Slams Congress Government Over Passenger Ordeal
ತೇಜಸ್ವಿ ಸೂರ್ಯImage Credit source: Tejaswi Surya X account ಬೆಂಗಳೂರು, ಜೂನ್ 30: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejaswi Surya) ಸೋಮವಾರ ಖುದ್ದು ಬಿಎಂಟಿಸಿ ಬಸ್ಸಿನಲ್ಲಿ ಕತ್ರಿಗುಪ್ಪೆಯಿಂದ ಬನಶಂಕರಿವರೆಗೆ ಪ್ರಯಾಣಿಸುವ ಸಂದರ್ಭದಲ್ಲಿ ಪ್ರಯಾಣಿಕರ ಅಳಲು ಆಲಿಸಿದ್ದರು. ಇದೀಗ ಬಿಎಂಟಿಸಿ ಬಸ್ ಸ್ಟ್ಯಾಂಡ್ ಒಂದರಲ್ಲಿ ಪ್ರಯಾಣಿಕರೊಂದಿಗೆ ಮಾತನಾಡಿ ಅಲ್ಲಿನ ದುಸ್ಥಿತಿಯ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಎಂಟಿಸಿ ಪ್ರಯಾಣಿಕರ ದೈನಂದಿನ ಪರದಾಟವನ್ನು ತಪಸ್ಸಿಗೆ ಹೋಲಿಸಿ ವಾಗ್ದಾಳಿ ನಡೆಸಿದ್ದಾರೆ. ಹೊಸ ಸರ್ಕಾರ ಬಂದರೂ ಬದಲಾಗದ…