ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 8ರ ದಿನಭವಿಷ್ಯ

ನಿಮ್ಮಿಂದ ಈ ದಿನ ಸಾಧ್ಯವಾದಲ್ಲಿ ಗೋ ಗ್ರಾಸವನ್ನು ನೀಡಿ. ಒಂದು ವೇಳೆ ಇದನ್ನು ನೇರವಾಗಿ ಮಾಡುವುದಕ್ಕೆ ಸಾಧ್ಯವಿಲ್ಲ ಎಂದಾದಲ್ಲಿ ಆನ್ ಲೈನ್ ಮೂಲಕವಾಗಿ ಗೋಗ್ರಾಸ ಸೇವೆಗೆ ದೇಣಿಗೆ ನೀಡಬಹುದು ಎಂದಾದಲ್ಲಿ ಹಾಗೂ ಅದು ಸಾಧ್ಯವೂ ಆದಲ್ಲಿ ನೀಡಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಪ್ರೀತಿ- ಪ್ರೇಮದಲ್ಲಿ ಅಂದುಕೊಳ್ಳದ ಕೆಲವು ಬೆಳವಣಿಗೆಗಳು ನಡೆಯಲಿವೆ. ಈ ಹಿಂದೆ ಆಗಿದ್ದ ಕೆಲವು ಘಟನೆಗಳಿಂದಾಗಿ ಯಾರದೋ ಮಾತು, ಟೀಕೆ, ಆಕ್ಷೇಪಗಳಿಗೆ ಇಡೀ ದಿನ ತಲೆ ಕೆಡಿಸಿಕೊಳ್ಳುವಂತಾಗುತ್ತದೆ. ಯಾರೇ ನಿಮ್ಮ ಕೆಲಸದ ಬಗ್ಗೆ ಆಕ್ಷೇಪ ಹೇಳಿದರೂ ಅದನ್ನು ತೋರಿಸುವಂತೆ ನಯವಾಗಿಯೇ ಕೇಳಿ. ಹಾಗೂ ಅವರು ನಿಜವಾಗಿಯೂ ತಪ್ಪುಗಳನ್ನು ತೋರಿಸಿದ್ದೇ ಆದಲ್ಲಿ ತಿದ್ದುಕೊಳ್ಳುವುದಕ್ಕೆ ಪ್ರಯತ್ನಿಸಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಯಾವುದೇ ಕಾರಣಕ್ಕೂ ಸಿಟ್ಟಿನಿಂದ ಕೂಗಾಟ- ಕಿರುಚಾಟ ಮಾಡಬೇಡಿ. ಹೀಗೆ ಮಾಡಿದಲ್ಲಿ ನಿಮ್ಮ ವರ್ಚಸ್ಸು ಶಾಶ್ವತವಾಗಿ ಪೆಟ್ಟು ತಿನ್ನುವ ಅಪಾಯಗಳಿವೆ. ವಿದೇಶಗಳಲ್ಲಿ ಉದ್ಯೋಗಲ್ಲೆ ಪ್ರಯತ್ನ ಮಾಡುತ್ತಿರುವವರಿಗೆ ಒತ್ತಡದ ಸನ್ನಿವೇಶಗಳು ಇರುತ್ತವೆ. ನೀವಾಗಿಯೇ ಆಡಿದ ಮಾತುಗಳು ಸಮಸ್ಯೆಗಳಾಗಿ ತಲೆ ಎತ್ತುವ ಸಾಧ್ಯತೆಗಳಿವೆ. ನಿಮ್ಮ ಪರವಾಗಿ ಯಾರಾದರೂ ಮಾತನಾಡುವಾಗ ನೀವು ಸುಮ್ಮನಿದ್ದು ಬಿಡಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ತಂದೆ- ತಾಯಿಯ ಆರೋಗ್ಯದಲ್ಲಿ ಏನಾದರೂ ಸಮಸ್ಯೆಗಳು ಏನಾದರೂ ಇದ್ದಲ್ಲಿ ಪರಿಣತ- ತಜ್ಞ ವೈದ್ಯರ ನೆರವು ನಿಮ್ಮ ಪಾಲಿಗೆ ದೊರೆಯಲಿದೆ. ಆತಂಕಗಳು ದೂರವಾಗುವುದಕ್ಕೆ ಹಿರಿಯರು ಸಹಕಾರ ನೀಡಲಿದ್ದಾರೆ. ನಿಮ್ಮ ಅದೃಷ್ಟವು ಈ ದಿನ ಅಚ್ಚರಿಯ ರೀತಿಯಲ್ಲಿ ಕೆಲಸ ಮಾಡುತ್ತದೆ. ಈ ಹಿಂದೆ ಯಾವಾಗಲೋ ಮಾಡಿದ ಕೆಲಸಕ್ಕೆ ಮೆಚ್ಚುಗೆ ಎಂಬಂತೆ ಅದೇ ಕೆಲಸಕ್ಕೆ ಸಂಬಂಧಿಸಿದವರು ಹುಡುಕಿಕೊಂಡು ಬಂದು, ನಿಮಗೆ ಕೆಲಸಗಳನ್ನು ಒಪ್ಪಿಸುವ ಸಾಧ್ಯತೆ ಇದೆ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 8ರ ದಿನಭವಿಷ್ಯ

ಭೂಮಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಅಡೆತಡೆ ಎದುರಾಗುತ್ತದೆ, ಅಂದುಕೊಂಡ ವೇಗದಲ್ಲಿ ವ್ಯವಹಾರ ಮುಂದುವರಿಯುತ್ತಾ ಇಲ್ಲ ಎಂದಾದಲ್ಲಿ ಕಾರ್ನೇಲಿಯನ್ ಸ್ಟೋನ್ ಉಂಗುರ ಬಳಸುವುದರಿಂದ ಅನುಕೂಲಗಳು ಆಗಲಿವೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಒಂದು ವೇಳೆ ಆಸ್ತಿ ಅಥವಾ ವಾಹನ ಮಾರಾಟಕ್ಕೆ ಇಟ್ಟಿದ್ದಲ್ಲಿ ಇವುಗಳಿಗೆ ಸಂಬಂಧಿಸಿದಂತೆ ಯಾವುದೇ ಮಾತುಕತೆಯನ್ನು ಇದೊಂದು ದಿನದ ಮಟ್ಟಿಗೆ ಮಾಡಬೇಡಿ. ನಿಮ್ಮ ಬಳಿ ಇರುವ ಹಣಕ್ಕೆ ತಕ್ಕಂತೆ ಪ್ರಾಜೆಕ್ಟ್ ವೊಂದು ಹುಡುಕಿಕೊಂಡು ಬರುವಂಥ ಸಾಧ್ಯತೆಗಳಿವೆ. ಉದಾಹರಣೆಗೆ, ಇಷ್ಟೇ ಮೊತ್ತಕ್ಕೆ ಅಪಾರ್ಟ್ ಮೆಂಟ್ ಅಥವಾ ಸೈಟು ಅಥವಾ ವಾಹನ ಹೀಗೆ ನಿಮಗೆ ದೊರೆಯುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಬಹು ಪ್ರಮಾಣದಲ್ಲಿ ನಂಬಿಕೆ ನಿಮಗೆ ಇದ್ದರೂ ಕೆಲವು ಬಾಹ್ಯ ಕಾರಣಗಳಿಂದಾಗಿ ಈ ದಿನ ನಿಮಗೆ ಯಾವುದೇ ವಿಚಾರದಲ್ಲಿ ಅಥವಾ ಕೆಲಸದಲ್ಲಿ ಪೂರ್ಣ ವಿಶ್ವಾಸ ಮೂಡದಿದ್ದರೆ ಅದನ್ನು ಮಾಡದಿರುವುದು ಕ್ಷೇಮ. ಏಕೆಂದರೆ ನಿಮ್ಮದಲ್ಲದ ತಪ್ಪಿಗೆ ದಂಡ ಕಟ್ಟುವಂಥ ಸನ್ನಿವೇಶ ಎದುರಾಗಲಿದೆ. ಎಂಥ ಅನಿವಾರ್ಯ ಸ್ಥಿತಿಯೇ ಇದ್ದರೂ ಇತರರ ವಾಹನಗಳು ಅಥವಾ ವಸ್ತುಗಳನ್ನು ಬಳಸುವುದಕ್ಕೆ ಹೋಗಬೇಡಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಯಾರು ರಾಜಕೀಯ ಕ್ಷೇತ್ರದಲ್ಲಿ ಇದ್ದಾರೋ ಅಂಥವರಿಗೆ ನಿರೀಕ್ಷೆ ಕೂಡ ಮಾಡಿರದಂಥ ಅವಕಾಶವೊಂದು ದೊರೆಯವ ಸಾಧ್ಯತೆಗಳಿವೆ. ಇದನ್ನು ನೀವು ನಂಬುವುದಕ್ಕೆ ಸಹ ಸಾಧ್ಯವಾಗುವುದಿಲ್ಲ. ಆದರೆ ಅದನ್ನು ಸದುಪಯೋಗ ಮಾಡಿಕೊಳ್ಳುವ ಬಗ್ಗೆ ಆಲೋಚಿಸಿದರೆ ಒಳ್ಳೆಯದು. ಕೋರ್ಟ್- ಕಚೇರಿ ವ್ಯಾಜ್ಯಗಳಲ್ಲಿ ಇದ್ದಲ್ಲಿ ಅದನ್ನು ಬಗೆಹರಿಸಿಕೊಳ್ಳುವುದಕ್ಕೆ ಕೆಲವರು ಸಹಾಯ ಮಾಡುವುದಾಗಿ ಹೇಳಲಿದ್ದಾರೆ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 8ರ ದಿನಭವಿಷ್ಯ

ಈ ದಿನ ನಿಮ್ಮ ಮನೆ ಹತ್ತಿರದ ಕೃಷ್ಣನ ದೇವಸ್ಥಾನಕ್ಕೆ ತೆರಳಿ, ಅಲ್ಲಿಗೆ ತುಳಸಿ ಹಾರದ ಸಮರ್ಪಣೆ ಮಾಡುವುದರಿಂದ ಇಷ್ಟು ಸಮಯ ನಿಮಗೆ ಕಾಡುತ್ತಿದ್ದ ದ್ವಂದ್ವ ದೂರವಾಗಲಿದೆ. ಇನ್ನು ಮುಖ್ಯವಾದ ವ್ಯಕ್ತಿಗಳ ಭೇಟಿಗೆ ತೆರಳುತ್ತಾ ಇದ್ದೀರಿ ಅಂತಾದಲ್ಲಿ ಮನೆಯಿಂದ ಹೊರಡುವ ಮೊದಲು ನಾಲ್ಕು ಹಸಿ ಕಡ್ಲೇಕಾಳು ಬಾಯಿಗೆ ಹಾಕಿಕೊಂಡು ಅಗೆದು, ಮುಂದುವರಿಯಿರಿ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಮನ ಮುಟ್ಟುವಂತೆ ಎಲ್ಲ ವಿಚಾರಗಳನ್ನು ಇತರರಿಗೆ ದಾಟಿಸುವುದಕ್ಕೆ ಸಫಲರಾಗಲಿದ್ದೀರಿ. ಮುಂದಾಲೋಚನೆಯಿಂದ ಲೆಕ್ಕ ಹಾಕಿಕೊಂಡು ಇಟ್ಟ ಹೆಜ್ಜೆಗಳು ಫಲ ನೀಡಲಿವೆ. ಯಾರು ಬದ್ಧತೆಯಿಂದ ನಿಮ್ಮ ಸಲಹೆ- ಸೂಚನೆಯನ್ನು ಅನುಸರಿಸಿದವರಿಗೆ ದೊಡ್ಡ ಲಾಭವಾಗುವ ಸಾಧ್ಯತೆಗಳಿವೆ. ಇತರರು ತಮ್ಮಿಂದ ಪೂರ್ತಿ ಮಾಡಲು ಸಾಧ್ಯವಿಲ್ಲ ಎಂದು ಅರ್ಧಕ್ಕೇ ನಿಲ್ಲಿಸಿದ ಕೆಲಸವೊಂದನ್ನು ಪೂರ್ತಿ ಮಾಡಬೇಕಾದ ಜವಾಬ್ದಾರಿ ನಿಮಗೆ ಬರಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಒಲ್ಲದ ಮನಸ್ಸಿನಿಂದಲೇ ಒಪ್ಪಿಕೊಂಡ ಕೆಲಸಗಳಲ್ಲಿ ದೊಡ್ಡ ಯಶಸ್ಸು ಸಿಗುವ ಎಲ್ಲ ಸಾಧ್ಯತೆಗಳಿವೆ. ಯಾರು ಉದ್ಯೋಗಕ್ಕೆ ಸಂಬಂಧಿಸಿದಂಥ ಪರೀಕ್ಷೆಗಳನ್ನು ಬರೆದಿರುತ್ತಾರೋ ಅಂಥವರಿಗೆ ಶುಭ ಸುದ್ದಿ ಕೇಳುವಂಥ ಯೋಗ ಇದೆ. ಮದುವೆಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಸಂಬಂಧಿಕರ ಮುಖಾಂತರ ರೆಫರೆನ್ಸ್ ಗಳು ಬರಬಹುದು. ಇದು ನಿಮ್ಮ ಮನಸ್ಸಿಗೆ ಒಪ್ಪುವ ಸಾಧ‌್ಯತೆಗಳು ಸಹ ಹೆಚ್ಚಿವೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಸಣ್ಣ- ಪುಟ್ಟದಾದರೂ ಮನೆ ಮಟ್ಟಿಗೆ ಕಾರ್ಯಕ್ರಮ ಆಯೋಜಿಸುವಂಥ ಸಾಧ್ಯತೆ ಇದೆ. ತಂದೆ ಅಥವಾ ತಂದೆ ಸಮಾನರಾದವರ ಆರೋಗ್ಯ ಸ್ಥಿತಿ ಸ್ವಲ್ಪ ಆತಂಕಕ್ಕೆ ಕಾರಣ ಆಗಬಹುದು. ನಿಮ್ಮೆಲ್ಲ ಪ್ರಯತ್ನವನ್ನು ಮಾಡಿದ ನಂತರದಲ್ಲಿಯೂ ಒಬ್ಬರೇ ವ್ಯಕ್ತಿ, ಒಂದೇ ವಿಷಯ, ಒಂದು ವಸ್ತು ನಿಮ್ಮನ್ನು ಈ ದಿನ ಬಹುವಾಗಿ ಕಾಡಬಹುದು. ಅದರಲ್ಲೂ ಕೊನೆ ಕ್ಷಣದಲ್ಲಿ ನಿರ್ಧಾರಗಳಲ್ಲಿ ಬಹಳ ಏರುಪೇರು ಮಾಡಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Source link

ಯಶ್, ರಣ್​​ಬೀರ್ ನಟನೆಯ ‘ರಾಮಾಯಣ’ಕ್ಕೆ ಯುವ ಸ್ಟಾರ್ ಎಂಟ್ರಿ – Kannada News | Raghav Juyal joins Nitesh Tiwari Ramayana movie cast updates

ಭಾರತೀಯ ಚಿತ್ರರಂಗದ ಅತಿ ದೊಡ್ಡ ಮತ್ತು ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು ಎನಿಸಿಕೊಂಡಿದೆ ಯಶ್ (Yash), ರಣ್​​ಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ನಟಿಸಿರುವ ‘ರಾಮಾಯಣ’ ಸಿನಿಮಾ. ಸಿನಿಮಾನಲ್ಲಿ ಹಲವಾರು ಸ್ಟಾರ್ ನಟರು, ಪ್ರತಿಭಾವಂತ ನಟ-ನಟಿಯರು ಪಾತ್ರವಹಿಸಿದ್ದಾರೆ. ಇದೀಗ ಈ ಸಿನಿಮಾದ ತಾರಾಬಳಗಕ್ಕೆ ಮತ್ತೊಬ್ಬ ಪ್ರತಿಭಾವಂತ ನಟನ ಸೇರ್ಪಡೆ ಆಗಿದೆ. ಇತ್ತೀಚೆಗೆ ‘ಕಿಲ್’ ಸಿನಿಮಾದಲ್ಲಿ ತನ್ನ ವಿಲನ್ ನಟನೆಯ ಮೂಲಕ ಎಲ್ಲರ ಗಮನ ಸೆಳೆದಿದ್ದ ರಾಘವ್ ಜುಯಲ್, ಈಗ ನಿತೇಶ್ ತಿವಾರಿ ಅವರ ಈ ಪೌರಾಣಿಕ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರವನ್ನು ನಿರ್ವಹಿಸಲು ಒಪ್ಪಿಕೊಂಡಿದ್ದಾರೆ.

ರಾಘವ್ ಜುಯಲ್ ‘ರಾಮಾಯಣ’ ಚಿತ್ರತಂಡವನ್ನು ಸೇರಿರುವುದು ದೃಢಪಟ್ಟಿದ್ದು, ಈ ಹಿಂದೆ ನಟ ವಿಕ್ರಾಂತ್ ಮಸ್ಸಿಗೆ ನೀಡಲಾಗಿದ್ದ ಪಾತ್ರವನ್ನು ಇದೀಗ ರಾಘವ್ ಜುಯಲ್​ ಗೆ ನೀಡಲಾಗಿದೆ ಎನ್ನಲಾಗುತ್ತಿದೆ. ಅಂದಹಾಗೆ ರಾಘವ್ ಅವರದ್ದು ‘ರಾಮಾಯಣ’ ಸಿನಿಮಾನಲ್ಲಿ ಮೇಘನಾಥನ ಪಾತ್ರವಂತೆ. ಅಂದರೆ ಯಶ್ ಅವರ ಪುತ್ರನ ಪಾತ್ರದಲ್ಲಿ ರಾಘವ್ ಜುಯಲ್ ನಟಿಸಲಿದ್ದಾರೆ. ರಾಘವ್ ಅವರು ಮೇಘನಾಥನ ಪಾತ್ರಕ್ಕೆ ಸೂಟ್ ಆಗುತ್ತಾರೆ ಎಂಬುದು ನೆಟ್ಟಿಗರ ನಂಬಿಕೆ.

ಇದನ್ನೂ ಓದಿ:‘ಐ ಲವ್ ಯಶ್’; ‘ಟಾಕ್ಸಿಕ್’ ಬಗ್ಗೆ ನಿರೀಕ್ಷೆ ಹೊರಹಾಕಿದ ಆಶಿಶ್ ಚಂಚ್ಲಾನಿ

‘ರಾಮಾಯಣ’ ಚಿತ್ರದಲ್ಲಿ ರಣಬೀರ್ ಕಪೂರ್ (ಶ್ರೀರಾಮ), ಸಾಯಿ ಪಲ್ಲವಿ (ಸೀತೆ) ಮತ್ತು ಯಶ್ (ರಾವಣ) ಅಭಿನಯಿಸುತ್ತಿರುವುದು ಅಧಿಕೃತಗೊಂಡಿದೆ. ಸನ್ನಿ ಡಿಯೋಲ್ ಹನುಮಂತನಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ರಾಘವ್ ಜುಯಲ್ ಅವರಂತಹ ಯುವ ನಟನ ಸೇರ್ಪಡೆಯು ಚಿತ್ರದ ಗತ್ತು ಮತ್ತು ಸ್ಟಾರ್ ವ್ಯಾಲ್ಯೂ ಅನ್ನು ಹೆಚ್ಚಿಸಿದೆ. ಇತ್ತೀಚೆಗಷ್ಟೇ ‘ಕಿಲ್’, ‘ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿಯ ಮೂಲಕ ತನ್ನ ನಟನಾ ಸಾಮರ್ಥ್ಯವನ್ನು ಸಾಬೀತುಪಡಿಸಿರುವ ರಾಘವ್‌ಗೆ ಇದು ವೃತ್ತಿಜೀವನದ ಅತಿ ದೊಡ್ಡ ಬ್ರೇಕ್ ಆಗಲಿದೆ.

ಒಬ್ಬ ಸಾಮಾನ್ಯ ಸೈಡ್ ಡ್ಯಾನ್ಸರ್ ಆಗಿ ವೃತ್ತಿ ಆರಂಭಿಸಿದ ರಾಘವ್ ಈಗ ಭಾರತದ ಅತ್ಯಂತ ದುಬಾರಿ ಸಿನಿಮಾನಲ್ಲಿ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ರಾಘವ್ ಇದೀಗ ‘ರಾಮಾಯಣ’ ಅದರ ಜೊತೆಗೆ ‘ಎಬಿಸಿಡಿ 3’ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಇದಾದ ಬಳಿಕ ‘ಬ್ಯಾಡ್ಸ್ ಆಫ್ ಬಾಲಿವುಡ್ ಸೀಸನ್ 02’ನಲ್ಲೂ ಸಹ ಅವರು ನಟಿಸಲಿದ್ದಾರೆ. ‘ರಾಮಾಯಣ’ ಸಿನಿಮಾ ಇದೇ ವರ್ಷ ನವೆಂಬರ್ ತಿಂಗಳಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 11:00 pm, Sat, 7 February 26

Source link

ಅವಮಾನ ಆದಲ್ಲೆ ಕರ್ನಾಟಕದ ಬಾವುಟ ಹಾರಿಸಿದ ಕಿಚ್ಚ: ಸಾಧನೆ ಬಗ್ಗೆ ಹೇಳಿದ್ದೇನು? – Kannada News | Sudeep talks about waving Kannada flag in Tamil Nadu

ಸುದೀಪ್ (Sudeep) ಹಾಗೂ ಅವರ ನೇತೃತ್ವದ ಕರ್ನಾಟಕ ಬುಲ್ಡೊಜರ್ಸ್ ತಂಡ 2026ರ ಸಿಸಿಎಲ್ ಕ್ರಿಕೆಟ್ ಟೂರ್ನಿಯ ಚಾಂಪಿಯನ್ಸ್ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬೆಂಗಾಲ್ ತಂಡವನ್ನು ಎದುರಿಸಿದ ಕರ್ನಾಟಕ ತಂಡ ಅದ್ಧೂರಿ ವಿಜಯ ಸಾಧಿಸಿತು. ಆ ಮೂಲಕ ಮೂರನೇ ಬಾರಿ ಚಾಂಪಿಯನ್ ಎನಿಸಿಕೊಂಡಿತು. ಈ ಅದ್ಭುತ ಸಾಧನೆಯ ಬಳಿಕ ಮೊದಲ ಬಾರಿಗೆ ಕರ್ನಾಟಕ ಬುಲ್ಡೊಜರ್ಸ್ ತಂಡ ಮಾಧ್ಯಮಗಳ ಎದುರು ಬಂದು ತಮ್ಮ ಸಂಭ್ರಮ ಹಂಚಿಕೊಂಡಿತು. ಈ ವೇಳೆ ಟಿವಿ9 ಪ್ರತಿನಿಧಿ ಕೇಳಿದ ಪ್ರಶ್ನೆಗೆ ಸುದೀಪ್ ನೀಡಿದ ಉತ್ತರ ಚಪ್ಪಾಳೆ ಗಿಟ್ಟಿಸಿಕೊಂಡಿತು.

ಸಿಸಿಎಲ್ 2026 ಫೈನಲ್ ಗೆದ್ದ ಬಳಿಕ ಕರ್ನಾಟಕ ಬುಲ್ಡೊಜರ್ಸ್ ತಂಡ ಕೊಯಮತ್ತೂರಿನ ಕ್ರಿಕೆಟ್ ಗ್ರೌಂಡ್​​ನಲ್ಲಿ ಸಂಭ್ರಮಾಚರಣೆ ಮಾಡಿತು. ಈ ವೇಳೆ ಸುದೀಪ್ ಹಾಗೂ ಇಡೀ ತಂಡ ಕನ್ನಡ ಬಾವುಟಗಳನ್ನು ಹಾರಾಡಿಸಿತು. ನೆರೆಯ ತಮಿಳುನಾಡಿನಲ್ಲಿ ಅದರಲ್ಲೂ ಕರ್ನಾಟಕದೊಂದಿಗೆ ಗಡಿ, ನೀರು, ಭಾಷೆಯ ವಿಚಾರವಾಗಿ ಪದೇ ಪದೇ ಕಿರಿಕ್ ಮಾಡುತ್ತಲೇ ಬರುತ್ತಿರುವ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾರಿಸಿದ್ದು ಸಾಮಾನ್ಯ ವಿಷಯ ಅಲ್ಲ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಸುದೀಪ್ ಮಾತನಾಡಿದರು.

ಸುದೀಪ್ ಅವರು ಫೈನಲ್ ಗೆದ್ದು ಕನ್ನಡ ಬಾವುಟ ಹಾರಿಸುವ ಕೆಲವೇ ದಿನಗಳ ಮುಂಚೆ, ಕರ್ನಾಟಕದಿಂದ ಶಬರಿಮಲೆಗೆ ತಮಿಳುನಾಡು ಮಾರ್ಗವಾಗಿ ತೆರಳುತ್ತಿದ್ದ ಕನ್ನಡಿಗರನ್ನು ತಡೆದಿದ್ದ ತಮಿಳರು ಕನ್ನಡಿಗರ ವಾಹನಗಳ ಮೇಲಿದ್ದ ಕನ್ನಡ ಬಾವುಟಗಳನ್ನು ಕಿತ್ತು ತೆಗೆದಿದ್ದರು. ಬಾವುಟಕ್ಕೆ ಅವಮಾನ ಮಾಡಿದ ತಮಿಳುನಾಡಿನಲ್ಲೇ ಸುದೀಪ್ ಮತ್ತು ತಂಡ ಕನ್ನಡ ಬಾವುಟ ಹಾರಿಸಿದ್ದರು. ಇದೇ ವಿಷಯವಾಗಿ ಟಿವಿ9 ಪ್ರತಿನಿಧಿ ಸುದೀಪ್ ಅವರನ್ನು ಪ್ರಶ್ನೆ ಕೇಳಿದರು. ಅವಮಾನ ಆದ ಸ್ಥಳದಲ್ಲೇ ಬಾವುಟ ಹಾರಿಸಿದ ಅನುಭವ ಹೇಗಿತ್ತು ಎಂದು ಕೇಳಿದರು.

ಇದನ್ನೂ ಓದಿ:ಸುದೀಪ್​​​ಗೆ ಈ ವಿಷಯ ಗೊತ್ತಾದ್ರೆ ಚಕ್ರವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಕೆ ಮಂಜು

ಪ್ರಶ್ನೆಗೆ ಉತ್ತರಿಸಿದ ಸುದೀಪ್, ‘ನಮ್ಮ ಬಾವುಟವನ್ನು ಹಾರಿಸಲು ಸಮಯ, ಸ್ಥಳದ ಮುಲಾಜೇಕೆ. ನಮ್ಮ ಬಾವುಟವನ್ನು ಬುರ್ಜ್ ಖಲೀಫಾ ಮೇಲೆಯೇ ಹಾರಿಸಿದ್ದೀವಿ. ಬೇರೆ ಕಡೆ ಹಾರಿಸೋದಿಲ್ವ’ ಎಂದರು. ಸುದೀಪ್ ಅವರ ಉತ್ತರಕ್ಕೆ ಭರಪೂರ ಮೆಚ್ಚುಗೆ ವ್ಯಕ್ತವಾಯ್ತು. ಸುದ್ದಿಗೋಷ್ಠಿಯಲ್ಲಿ ಹಲವು ವಿಷಯಗಳ ಬಗ್ಗೆ ಸುದೀಪ್ ಮಾತನಾಡಿದರು. ‘ಸಿಸಿಎಲ್’ನಲ್ಲಿ ಯಾವುದೇ ಸಂಭಾವನೆ ಪಡೆಯದೆ ಹಲವು ವರ್ಷಗಳಿಂದಲೂ ಆಡುತ್ತಾ ಬರುತ್ತಿರುವುದಾಗಿ ಸುದೀಪ್ ಹೇಳಿದರು. ಅಲ್ಲದೆ, ಗೆದ್ದರೂ, ಸೋತರೂ ತಮಗೆ ಈ ಸಿಸಿಎಲ್ ಸಾಕು ಎನಿಸಿಲ್ಲ ಎಂದು ಕಿಚ್ಚ ಸುದೀಪ್ ಹೇಳಿದರು.

ಸುದೀಪ್ ಅವರಿಗೆ ಕ್ರಿಕೆಟ್ ಮೇಲೆ ಅಪಾರ ಪ್ರೀತಿ. ಕ್ರಿಕೆಟ್ ಮೇಲಿರುವ ಪ್ರೀತಿಯ ಕಾರಣಕ್ಕೆ ಅವರು ಪ್ರತಿ ವರ್ಷವೂ ತಪ್ಪದೇ ಸಿಸಿಎಲ್ ನಲ್ಲಿ ಪಾಲ್ಗೊಳ್ಳುತ್ತಾರೆ. ಟೂರ್ನಿ ಆರಂಭವಾದಾಗಿನಿಂದ ಈಗಿನವರೆಗೂ ಸುದೀಪ್ ಅವರು ಪ್ರತಿ ವರ್ಷವೂ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ. ಈ ಬಾರಿ ಮೂರನೇ ಬಾರಿ ಚಾಂಪಿಯನ್ ಸಹ ಎನಿಸಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 10:15 pm, Sat, 7 February 26

Source link

ಭಾರತದ ನಕ್ಷೆಯಲ್ಲಿ ಪಿಒಕೆ ಸೇರಿಸಿದ ಅಮೆರಿಕ; ಪಾಕಿಸ್ತಾನಕ್ಕೆ ಬಿಸಿ ತುಪ್ಪವಾದ ಟ್ರಂಪ್ – Kannada News | Jammu Kashmir POK Map in India US Trade Deal Trump Quiet Message to Pakistan

ನವದೆಹಲಿ, ಫೆಬ್ರವರಿ 7: ರಷ್ಯಾದಿಂದ ಇಂಧನ ಆಮದು ಮಾಡಿಕೊಳ್ಳುತ್ತಿದ್ದೇವೆ ಎಂಬ ಕಾರಣಕ್ಕೆ ಭಾರತದ ಮೇಲೆ ಮುನಿಸಿಕೊಂಡಿದ್ದ ಡೊನಾಲ್ಡ್ ಟ್ರಂಪ್ (Donald Trump) ಇದ್ದಕ್ಕಿದ್ದಂತೆ ಶೇ. 25ರಷ್ಟು ಹೆಚ್ಚುವರಿ ತೆರಿಗೆ ವಿಧಿಸುವ ಮೂಲಕ ಭಾರತದ ಮೇಲಿನ ಒಟ್ಟು ಸುಂಕವನ್ನು ಶೇ. 50ಕ್ಕೆ ಏರಿಸಿದ್ದರು. ಇದಕ್ಕೆ ಯಾವ ಪ್ರತಿಕ್ರಿಯೆಯನ್ನೂ ನೀಡದ ಪ್ರಧಾನಿ ನರೇಂದ್ರ ಮೋದಿ ಬೇರೆ ದೇಶಗಳ ಜೊತೆ ವ್ಯಾಪಾರ ಒಪ್ಪಂದವನ್ನು ಮಾಡಿಕೊಳ್ಳುತ್ತಾ ತಮ್ಮದೇ ಆದ ಕಾರ್ಯತಂತ್ರ ರೂಪಿಸಿದ್ದರು. ಇದರಿಂದ ಸಹಜವಾಗಿಯೇ ಟ್ರಂಪ್​ಗೆ ತಲೆಬಿಸಿ ಹೆಚ್ಚಾಗಿತ್ತು. ಕೊನೆಗೆ ಮತ್ತೆ ಇದ್ದಕ್ಕಿದ್ದಂತೆ ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿದ್ದ ಡೊನಾಲ್ಡ್ ಟ್ರಂಪ್ ಭಾರತದ ಜೊತೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಚರ್ಚಿಸಿದ್ದರು.

ಇದಕ್ಕೆ ಖುಷಿಯಾಗಿಯೇ ಒಪ್ಪಿದ್ದ ಪ್ರಧಾನಿ ನರೇಂದ್ರ ಮೋದಿ ವ್ಯಾಪಾರ ಒಪ್ಪಂದವನ್ನು ಘೋಷಿಸಿದ್ದರು. ಈ ಮೂಲಕ ಭಾರತದ ಮೇಲೆ ವಿಧಿಸಲಾಗಿದ್ದ ಸುಂಕವನ್ನು ಶೇ. 18ಕ್ಕೆ ಇಳಿಸಲಾಗಿತ್ತು. ಇದರ ಜೊತೆಗೆ ಅಮೆರಿಕ ಕೆಲವು ಷರತ್ತುಗಳನ್ನು ಕೂಡ ವಿಧಿಸಿರುವುದಾಗಿ ಹೇಳಿಕೊಂಡಿದೆ. ಆದರೆ. ಆ ಬಗ್ಗೆ ಭಾರತ ಇನ್ನೂ ಸ್ಪಷ್ಟವಾದ ಮಾಹಿತಿ ನೀಡಿಲ್ಲ. ವಿಶ್ವದ ದೊಡ್ಡಣ್ಣನ ಜೊತೆ ವ್ಯಾಪಾರ ಒಪ್ಪಂದ ಮಾಡಿಕೊಂಡದ್ದಕ್ಕಿಂತ ಖುಷಿಯ ಸಂಗತಿ ಮತ್ತೊಂದಿದೆ. ನಿನ್ನೆ ಭಾರತದ ಜೊತೆಗಿನ ಒಪ್ಪಂದದ ನಕ್ಷೆಯೊಂದನ್ನು ಅಮೆರಿಕ ಬಿಡುಗಡೆ ಮಾಡಿದೆ. ಈ ನಕ್ಷೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವೆಂಬಂತೆ ಚಿತ್ರಿಸಲಾಗಿದೆ.

ಚೀನಾ ತನ್ನ ಪ್ರದೇಶದ ಭಾಗವೆಂದು ಹೇಳಿಕೊಳ್ಳುವ ಭಾರತದ ಗಡಿಯಲ್ಲಿರುವ ಅಕ್ಸಾಯ್ ಚಿನ್ ಅನ್ನು ಸಹ ಭಾರತದ ನಕ್ಷೆಯಲ್ಲಿ ಸೇರಿಸಲಾಗಿದೆ. ಹೀಗಾಗಿ, ಪಾಕಿಸ್ತಾನ ಮತ್ತು ಚೀನಾದ ಗಡಿ ವಿವಾದಕ್ಕೆ ಭಾರತಕ್ಕೆ ಅಮೆರಿಕ ಬೆಂಬಲ ನೀಡುತ್ತಿದೆಯೇ? ಎಂಬ ಚರ್ಚೆ ಶುರುವಾಗಿದೆ. ಭಾರತದ ನಕ್ಷೆಯಲ್ಲಿ ಅಮೆರಿಕ ಕಾಶ್ಮೀರದ ಪೂರ್ಣ ಚಿತ್ರಣವನ್ನು ನೀಡಿರುವುದು ಪಾಕಿಸ್ತಾನಕ್ಕೆ ಬಿಸಿ ತುಪ್ಪದಂತಾಗಿದೆ. ಟ್ರಂಪ್ ಅವರ ವಿರುದ್ಧ ಹೇಳಿಕೆಯನ್ನೂ ನೀಡಲಾಗದೆ, ಇದನ್ನು ಸಹಿಸಿಕೊಳ್ಳಲೂ ಸಾಧ್ಯವಾಗದೆ ಪಾಕಿಸ್ತಾನ ಒದ್ದಾಡುತ್ತಿದೆ.

ಇದನ್ನೂ ಓದಿ: ಭಾರತದ ಜೊತೆ ವ್ಯಾಪಾರ ಒಪ್ಪಂದ ಘೋಷಿಸಿದ ಅಮೆರಿಕ; ಸುಂಕವನ್ನು ಶೇ. 18ಕ್ಕೆ ಇಳಿಸಿದ ಟ್ರಂಪ್

ಹೀಗಾಗಿ, ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಘೋಷಣೆಯು ರಾಜತಾಂತ್ರಿಕವಾಗಿ ಮಾತ್ರವಲ್ಲದೆ ಭಾರತದೊಂದಿಗಿನ ಗಡಿ ವಿವಾದದ ದೃಷ್ಟಿಯಿಂದಲೂ ಪಾಕಿಸ್ತಾನಕ್ಕೆ ದೊಡ್ಡ ಹೊಡೆತ ಕೊಟ್ಟಿರುವುದಂತೂ ನಿಜ. ಭಾರತ ಮತ್ತು ಯುಎಸ್ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಘೋಷಿಸಿದ ಕೂಡಲೇ, ಯುಎಸ್ ವ್ಯಾಪಾರ ಪ್ರತಿನಿಧಿ ಕಚೇರಿಯು ಭಾರತದ ಭೂಪ್ರದೇಶವನ್ನು ಸ್ಪಷ್ಟವಾಗಿ ಗುರುತಿಸುವ ಭಾರತದ ನಕ್ಷೆಯನ್ನು ಬಿಡುಗಡೆ ಮಾಡಿತು. ಅಮೆರಿಕದ ಅಧಿಕೃತ ಎಕ್ಸ್ ಹ್ಯಾಂಡಲ್‌ನಿಂದ ಹಂಚಿಕೊಳ್ಳಲಾದ ನಕ್ಷೆಯು ಜಮ್ಮು ಮತ್ತು ಕಾಶ್ಮೀರದ ಸಂಪೂರ್ಣ ಪ್ರದೇಶವನ್ನು ಸ್ಪಷ್ಟವಾಗಿ ತೋರಿಸುತ್ತದೆ. ಇದರಲ್ಲಿ ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶ (ಪಿಒಕೆ) ಭಾರತದ ಭಾಗವಾಗಿದೆ. ಈ ಪೋಸ್ಟ್ ಈ ಪ್ರದೇಶದ ಮೇಲಿನ ಭಾರತದ ಹಕ್ಕನ್ನು ಸ್ಪಷ್ಟವಾಗಿ ಸೂಚಿಸುತ್ತದೆ.

ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಮತ್ತು ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಇಬ್ಬರೂ ಜಾಗತಿಕ ವೇದಿಕೆಯಲ್ಲಿ ತಾವು ಗಟ್ಟಿಯಾಗಿ ನೆಲೆಗೊಳ್ಳಲು ಅಮೆರಿಕವನ್ನು ಮನವೊಲಿಸಲು ಶ್ರಮಿಸುತ್ತಿರುವುದರಿಂದ ಭಾರತದೊಂದಿಗಿನ ವ್ಯಾಪಾರ ಒಪ್ಪಂದದ ಘೋಷಣೆಯ ನಂತರದ ಈ ಸಾಮಾಜಿಕ ಮಾಧ್ಯಮ ಪೋಸ್ಟ್ ಪಾಕಿಸ್ತಾನಕ್ಕೆ ದೊಡ್ಡ ಮುಜುಗರವನ್ನುಂಟುಮಾಡಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಜೊತೆ ಟ್ರಂಪ್ ಮಾಡಿಕೊಂಡ ವ್ಯಾಪಾರ ಒಪ್ಪಂದದ 7 ಹೈಲೈಟ್ಸ್ ಇಲ್ಲಿವೆ

ಇದಲ್ಲದೆ, ಚೀನಾ ತನ್ನ ಪ್ರದೇಶದ ಭಾಗವೆಂದು ಹೇಳಿಕೊಳ್ಳುವ ಅಕ್ಸಾಯ್ ಚಿನ್ ಅನ್ನು ಸಹ ಭಾರತದ ನಕ್ಷೆಯಲ್ಲಿ ಸೇರಿಸಲಾಗಿದೆ. ಅಮೆರಿಕದ ಈ ಪೋಸ್ಟ್ ಉದ್ದೇಶಪೂರ್ವಕ ಅಥವಾ ಪ್ರಾಸಂಗಿಕವಾಗಿದ್ದರೂ ಸಹ ಅದು ಪಾಕಿಸ್ತಾನಕ್ಕೆ ಬಲವಾದ ರಾಜತಾಂತ್ರಿಕ ಸಂದೇಶವನ್ನು ಕಳುಹಿಸಿದೆ. ಅಮೆರಿಕ ಈ ರೀತಿ ಪಿಒಕೆಯನ್ನು ಭಾರತದ ನಕ್ಷೆಯೊಳಗೆ ಸೇರಿಸಿದ್ದು ಉದ್ದೇಶಪೂರ್ವಕವಾಗಿಯಾ? ಅಲ್ಲವಾ? ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ. ಆದರೆ, ಭಾರತೀಯರಿಗಂತೂ ವ್ಯಾಪಾರ ಒಪ್ಪಂದಕ್ಕಿಂತಲೂ ಅಮೆರಿಕದ ಈ ಗಡಿ ನಿಲುವಿನ ಬಗ್ಗೆ ಸಂತೋಷ ಹೆಚ್ಚಾಗಿದೆ ಎಂದೇ ಹೇಳಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

T20 World Cup: ಭಾರತದ ವಿರುದ್ಧ ಸೋತರೂ ದಿಟ್ಟ ಹೋರಾಟ ನೀಡಿದ ಯುಎಸ್​ಎ – Kannada News | India Dominates USA in T20 World Cup 2026 Opener: Comprehensive Win at Wankhede

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಮೆರಿಕ ನಡುವಿನ 2026 ರ ಟಿ20 ವಿಶ್ವಕಪ್ ಮೂರನೇ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಸುಲಭ ಜಯ ದಾಖಲಿಸಿತು. ಇದರೊಂದಿಗೆ ಹಾಲಿ ಚಾಂಪಿಯನ್ ಆಗಿ ಪಂದ್ಯಾವಳಿಗಿಳಿದಿರುವ ಭಾರತ ಗೆಲುವಿನ ಶುಭಾರಂಭ ಮಾಡಿದೆ. ಇತ್ತ ಭಾರತದ ವಿರುದ್ಧ ಸೋತರೂ ಅನಾನುಭವಿ ಅಮೆರಿಕ ತಂಡ ದಿಟ್ಟ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವ ಟೀಂ ಇಂಡಿಯಾವನ್ನು ಕೇವಲ 161 ರನ್​ಗಳಿಗೆ ಕಟ್ಟಿಹಾಕುವಲ್ಲಿ ಅಮೆರಿಕ ಬೌಲರ್​ಗಳು ಯಶಸ್ವಿಯಾದರು. ಆದಾಗ್ಯೂ ಈ ಗುರಿ ಬೆನ್ನಟ್ಟಿದ ಅಮೆರಿಕ ತಂಡದ ಬ್ಯಾಟಿಂಗ್ ವಿಭಾಗದ ಭಾರತದ ಬೌಲಿಂಗ್ ದಾಳಿಯ ಮುಂದೆ ತತ್ತರಿಸಿ 20 ಓವರ್​ಗಳಲ್ಲಿ 132 ರನ್​ಗಳನಷ್ಟೇ ಕಲೆಹಾಕಲು ಶಕ್ತವಾಗಿ 30 ರನ್​ಗಳಿಂದ ಸೋಲೊಪ್ಪಿಕೊಂಡಿತು.

Source link

ಸಂಸಾರದ ಜಂಜಾಟಕ್ಕಿಂತ ಸನ್ಯಾಸತ್ವ ಉತ್ತಮ: ದಾವಣಗೆರೆ ಸಿವಿಲ್ ಇಂಜಿನಿಯರಿಂಗ್ ಟಾಪರ್ ಈಗ ಜೈನ ಸನ್ಯಾಸಿ – Kannada News | Davangere’s BIET Civil Topper Anchal Kumari Becomes Jain Nun, Inspiring Renunciation

ದಾವಣಗೆರೆ, ಫೆ.7: ದಾವಣಗೆರೆಯ ಬಿಐಇಟಿ (BIET) ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ಟಾಪರ್ ಆಂಚಲ್ ಕುಮಾರಿ ಅವರು ಐಷಾರಾಮಿ ಜೀವನವನ್ನು ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದ್ದು, ಚರ್ಚೆಗೂ ಕಾರಣವಾಗಿದೆ. 26ನೇ ವಯಸ್ಸಿನಲ್ಲಿ ಅವರು ಕೈಗೊಂಡಿರುವ ಈ ನಿರ್ಧಾರ ಆಧುನಿಕ ಜಗತ್ತಿನಲ್ಲಿ ಅಧ್ಯಾತ್ಮದ ಸೆಳೆತ ಎಷ್ಟು ಪ್ರಬಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಆಂಚಲ್ ಕುಮಾರಿ ದಾವಣಗೆರೆಯ ಚೌಕಿಪೇಟೆಯ ನಿವಾಸಿಗಳಾದ ಮುಖೇಶ್ ಕುಮಾರ್ ಹಾಗೂ ಸುನೀತಾ ದಂಪತಿಯ ಪುತ್ರಿ. ಪ್ರತಿಷ್ಠಿತ ಬಿಐಇಟಿ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಓದಿ ಟಾಪರ್ ಆಗಿದ್ದರು. ಲಕ್ಷಾಂತರ ರೂಪಾಯಿ ಸಂಬಳ ಬರುವ ಉದ್ಯೋಗದ ಅವಕಾಶಗಳನ್ನು ಬದಿಗೊತ್ತಿ ಅಧ್ಯಾತ್ಮದ ಹಾದಿ ಹಿಡಿದಿರುವುದು ಎಲ್ಲರಿಗೂ ಅಚ್ಚರಿಯನ್ನು ತಂದಿದೆ.

ಗುಜರಾತ್ ರಾಜ್ಯದ ಸೂರತ್‌ನಲ್ಲಿ ವಿಜೃಂಭಣೆಯಿಂದ ದೀಕ್ಷಾ ಕಾರ್ಯಕ್ರಮ ನಡೆಯಿತು. ಜೈನ ಧರ್ಮದ ಗುರುಗಳಾದ ಕುಲಚಂದ್ರ ಸುರೇಶ್ವರ್ಜಿ ಮಹಾರಾಜ್ ಅವರ ಮಾರ್ಗದರ್ಶನದಲ್ಲಿ ಆಂಚಲ್ ದೀಕ್ಷೆ ಪಡೆದರು. ಕೋಟಿ ಕೋಟಿ ಮೌಲ್ಯದ ಆಸ್ತಿ, ಕುಟುಂಬ ಮತ್ತು ಭೌತಿಕ ಸುಖಗಳನ್ನು ತ್ಯಜಿಸಿ ಈಗ ಅವರು ಅಧಿಕೃತವಾಗಿ ಜೈನ ಸನ್ಯಾಸಿನಿಯಾಗಿದ್ದಾರೆ. ಸನ್ಯಾಸಿಗಳ ಮುಖದಲ್ಲಿರುವ ಆಂತರಿಕ ಶಾಂತಿ ಮತ್ತು ಅವರ ಸರಳ ಜೀವನ ಶೈಲಿ ಆಂಚಲ್ ಅವರ ಮೇಲೆ ಗಾಢವಾದ ಪ್ರಭಾವ ಬೀರಿದೆ. ಸಂಸಾರದ ಜಂಜಾಟಕ್ಕಿಂತ ಸನ್ಯಾಸತ್ವದಲ್ಲಿ ಸಿಗುವ ನೆಮ್ಮದಿ ಶ್ರೇಷ್ಠವಾದುದು ಎಂಬುದು ಅವರ ಅಚಲ ನಂಬಿಕೆಯಾಗಿದೆ. ಕಾಲೇಜು ದಿನಗಳಿಂದಲೇ ಅಧ್ಯಾತ್ಮದ ಕಡೆಗೆ ಹೆಚ್ಚಿನ ಒಲವು ಹೊಂದಿದ್ದರು.

ಸಾಮಾನ್ಯವಾಗಿ ಇಂತಹ ಸಂದರ್ಭದಲ್ಲಿ ಪೋಷಕರು ವಿರೋಧಿಸುತ್ತಾರೆ. ಆದರೆ ಆಂಚಲ್ ಅವರ ಪೋಷಕರು ಮಗಳ ನಿರ್ಧಾರವನ್ನು ಗೌರವಿಸಿ, ಒಪ್ಪಿಗೆ ನೀಡಿದ್ದಾರೆ. ಇಂಜಿನಿಯರಿಂಗ್‌ನಂತಹ ವೃತ್ತಿಪರ ಶಿಕ್ಷಣದಲ್ಲಿ ಅಗ್ರಸ್ಥಾನ ಪಡೆದ ಯುವತಿಯೊಬ್ಬರು ಹೀಗೆ ಸನ್ಯಾಸತ್ವ ಸ್ವೀಕರಿಸಿರುವುದು ಸಾರ್ವಜನಿಕರಲ್ಲಿ ಕುತೂಹಲ ಮತ್ತು ಚರ್ಚೆಯನ್ನು ಹುಟ್ಟುಹಾಕಿದೆ. ಜೈನ ಧರ್ಮದಲ್ಲಿ ಇತ್ತೀಚಿನ ವರ್ಷಗಳಲ್ಲಿ ಉನ್ನತ ಶಿಕ್ಷಣ ಪಡೆದ ಯುವಕ-ಯುವತಿಯರು ಅಧ್ಯಾತ್ಮದ ಕಡೆಗೆ ಆಕರ್ಷಿತರಾಗುತ್ತಿರುವುದು ಹೆಚ್ಚುತ್ತಿದೆ.

ಇದನ್ನೂ ಓದಿ: ಊರಿಗೆಲ್ಲ ಊಟ ಹಾಕಿಸಿ ಮಗನಂತಿರುವ ಕೋಣದ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ ರೈತ

ಗುಜರಾತ್‌ನ ‘ಮಹಾಸಂಯಮ’ ದೀಕ್ಷಾ ಸಂಭ್ರಮ:

ಇತ್ತೀಚೆಗೆ ಗುಜರಾತ್‌ನ ಸೂರತ್ ಮತ್ತು ಅಹಮದಾಬಾದ್‌ನಲ್ಲಿ ನಡೆದ ದೀಕ್ಷಾ ಕಾರ್ಯಕ್ರಮಗಳಲ್ಲಿ ಕೇವಲ ಒಬ್ಬಿಬ್ಬರಲ್ಲ, ಬದಲಿಗೆ ಹತ್ತಾರು ಯುವಕ-ಯುವತಿಯರು ಮತ್ತು ಉದ್ಯಮಿಗಳು ಒಟ್ಟಾಗಿ ಸನ್ಯಾಸತ್ವ ಸ್ವೀಕರಿಸಿದರು. ಇದರಲ್ಲಿ ಅನೇಕರು ಕೋಟ್ಯಧಿಪತಿ ಉದ್ಯಮಿಗಳ ಮಕ್ಕಳು, ಚಾರ್ಟರ್ಡ್ ಅಕೌಂಟೆಂಟ್ (CA)ಗಳು ಮತ್ತು ಸಾಫ್ಟ್‌ವೇರ್ ಇಂಜಿನಿಯರ್‌ಗಳು ಇದ್ದದ್ದು ವಿಶೇಷ. ಇಂತಹ ಕಾರ್ಯಕ್ರಮಗಳನ್ನು ‘ಮಹಾಸಂಯಮ’ ಅಥವಾ ‘ದೀಕ್ಷಾ ಮಹೋತ್ಸವ’ ಎಂದು ಕರೆಯಲಾಗುತ್ತದೆ. ಇದರಲ್ಲಿ ಸಂಸಾರಿಕ ಜೀವನದ ಐಷಾರಾಮಿಗಳನ್ನು ತ್ಯಜಿಸಿ, ಗುರುಗಳ ಸಮ್ಮುಖದಲ್ಲಿ ಬಿಳಿ ವಸ್ತ್ರ ಧರಿಸಿ ಅಧ್ಯಾತ್ಮದ ಹಾದಿಗೆ ಕಾಲಿಡುತ್ತಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೊಟ್ಟೆ ನೋವನ್ನು ನಿರ್ಲಕ್ಷಿಸಬೇಡಿ; ಇದರ ಹಿಂದೆ ಬರಬಹುದು ನೀವು ಊಹಿಸಲೂ ಸಾಧ್ಯವಿಲ್ಲದ ಕಾಯಿಲೆಗಳು! – Kannada News | What Your Stomach Pain Is Trying to Tell You

ಕೆಲವರಿಗೆ ಪದೇ ಪದೇ ಹೊಟ್ಟೆ ನೋವು (Stomach Pain) ಕಾಣಿಸಿಕೊಳ್ಳುತ್ತದೆ. ಆದರೆ ಇದನ್ನು ಸಾಮಾನ್ಯ ಆರೋಗ್ಯ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ, ಇದು ಅನಿಲ, ಆಯಾಸ ಅಥವಾ ಆಹಾರ ಪದ್ಧತಿಯಲ್ಲಿ ಆದಂತಹ ಬದಲಾವಣೆಯಿಂದ ಉಂಟಾಗುತ್ತದೆ ಎಂದು ಅಂದುಕೊಳ್ಳುತ್ತಾರೆ. ಆದರೆ ಹೊಟ್ಟೆ ನೋವು ಆಗಾಗ ಕಂಡುಬಂದರೆ, ಅದು ದೇಹದಲ್ಲಿನ ಆಂತರಿಕ ಸಮಸ್ಯೆಯ ಸಂಕೇತವೂ ಆಗಿರಬಹುದು ಎಂಬುದನ್ನು ಮರೆಯಬಾರದು. ಅಂತಹ ನೋವಿನ ಜೊತೆಗೆ, ಹೊಟ್ಟೆಯಲ್ಲಿ ಉರಿ, ಭಾರ, ವಾಕರಿಕೆ, ಹಸಿವಿನ ಕೊರತೆ, ಆಗಾಗ ಅತಿಸಾರ ಅಥವಾ ಮಲಬದ್ಧತೆ, ಉಬ್ಬುವುದು ಅಥವಾ ಆಯಾಸದಂತಹ ಇತರ ಲಕ್ಷಣಗಳು ಸಹ ಕಾಣಿಸಿಕೊಳ್ಳಬಹುದು. ಇದಲ್ಲದೆ, ಕೆಲವರಿಗೆ ತಲೆನೋವು ಅಥವಾ ತಲೆತಿರುಗುವಿಕೆ ಅನುಭವಕ್ಕೆ ಬರಬಹುದು. ಈ ರೀತಿ ನೋವು ದೀರ್ಘಕಾಲದವರೆಗೆ ಮುಂದುವರಿದರೆ ಅಥವಾ ದೈನಂದಿನ ಚಟುವಟಿಕೆಗಳನ್ನು ಸರಿಯಾಗಿ ಮಾಡಲು ಸಾಧ್ಯವಾಗದಿದ್ದರೆ, ಅದನ್ನು ನಿರ್ಲಕ್ಷಿಸಬೇಡಿ. ಇಂತಹ ರೋಗಲಕ್ಷಣಗಳ ಮೂಲಕ ದೇಹವು ನಮಗೆ ಎಚ್ಚರಿಕೆ ನೀಡುತ್ತದೆ. ಹಾಗಾದರೆ ಪದೇ ಪದೇ ಹೊಟ್ಟೆ ನೋವು ಯಾವ ರೋಗವನ್ನು ಸೂಚಿಸುತ್ತದೆ, ಇದನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪದೇ ಪದೇ ಮರುಕಳಿಸುವ ಹೊಟ್ಟೆ ನೋವು ಯಾವ ಕಾಯಿಲೆಯ ಲಕ್ಷಣ?

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕರಾದ ಪ್ರೊಫೆಸರ್ ಡಾ. ಸುಭಾಷ್ ಗಿರಿ ಅವರು ಹೇಳುವ ಪ್ರಕಾರ, ಮರುಕಳಿಸುವ ಹೊಟ್ಟೆ ನೋವು ವಿವಿಧ ರೀತಿಯ ಕಾಯಿಲೆಗಳ ಲಕ್ಷಣವಾಗಿರಬಹುದು. ಇವುಗಳಲ್ಲಿ ಐಬಿಎಸ್, ಉರಿಯೂತದ ಕರುಳಿನ ಕಾಯಿಲೆ (ಐಬಿಡಿ), ಗ್ಯಾಸ್ಟ್ರೋಸೊಫೇಜಿಯಲ್ ರಿಫ್ಲಕ್ಸ್ ಕಾಯಿಲೆ (ಜಿಇಆರ್‌ಡಿ), ಸೆಲಿಯಾಕ್ ಕಾಯಿಲೆ, ಗ್ಯಾಸ್ಟ್ರೋಎಂಟರೈಟಿಸ್, ಬ್ಯಾಕ್ಟೀರಿಯಾದ ಸೋಂಕುಗಳು, ಪಿತ್ತಗಲ್ಲುಗಳು, ಅಪೆಂಡಿಸೈಟಿಸ್, ಪ್ಯಾಂಕ್ರಿಯಾಟೈಟಿಸ್ ಮತ್ತು ಮೂತ್ರಪಿಂಡದ ಕಲ್ಲುಗಳು ಸೇರಿವೆ. ಹೆಚ್ಚುವರಿಯಾಗಿ, ಪೆಪ್ಟಿಕ್ ಹುಣ್ಣು, ಒತ್ತಡ, ಹರ್ನಿಯಾ ಅಥವಾ ಲ್ಯಾಕ್ಟೋಸ್ ಅಸಹಿಷ್ಣುತೆಯಂತಹ ಆಹಾರ ಅಲರ್ಜಿ ಸಹ ನೋವನ್ನು ಉಂಟುಮಾಡಬಹುದು. ಕೆಲವೊಮ್ಮೆ, ಅನಾರೋಗ್ಯಕರ ಆಹಾರ ಪದ್ಧತಿ, ಅನಿಯಮಿತ ದಿನಚರಿ ಅಥವಾ ದೀರ್ಘಕಾಲದ ಒತ್ತಡ ಮತ್ತು ಆತಂಕದಿಂದಾಗಿ ಈ ನೋವು ಹೆಚ್ಚಾಗಬಹುದು. ನೋವು ನಿರಂತರವಾಗಿದ್ದರೆ ಮತ್ತು ತೂಕ ನಷ್ಟ, ದೌರ್ಬಲ್ಯ ಅಥವಾ ಇತರ ಗಂಭೀರ ಲಕ್ಷಣ ಕಂಡುಬಂದರೆ ಅದನ್ನು ನಿರ್ಲಕ್ಷಿಸಬಾರದು. ಸರಿಯಾದ ಕಾರಣವನ್ನು ಗುರುತಿಸಲು ಮತ್ತು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪ್ರಾರಂಭಿಸಲು ವೈದ್ಯರನ್ನು ಸಂಪರ್ಕಿಸಿ.

ಇದನ್ನೂ ಓದಿ: ಮಧುಮೇಹ, ಅಧಿಕ ರಕ್ತದೊತ್ತಡ ಇರುವವರಿಗೆ ಶ್ರವಣದೋಷ ಉಂಟಾಗುತ್ತದೆಯೇ? ವೈದ್ಯರು ಹೇಳುವುದೇನು?

ಹೊಟ್ಟೆ ನೋವನ್ನು ತಡೆಗಟ್ಟುವುದು ಹೇಗೆ?

ಹೊಟ್ಟೆ ನೋವನ್ನು ತಡೆಗಟ್ಟಲು ಮೊದಲು, ದೈನಂದಿನ ಅಭ್ಯಾಸಗಳನ್ನು ಸುಧಾರಿಸಿಕೊಳ್ಳುವುದು ಬಹಳ ಮುಖ್ಯ. ಸಮಯಕ್ಕೆ ಸರಿಯಾಗಿ ಸಮತೋಲಿತ ಆಹಾರ ಸೇವಿಸುವುದು, ಹುರಿದ ಮತ್ತು ಮಸಾಲೆಯುಕ್ತ ಆಹಾರ ಸೇವನೆಯನ್ನು ಕಡಿಮೆ ಮಾಡುವುದು. ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಮತ್ತು ಪ್ರತಿದಿನ ಲಘು ವ್ಯಾಯಾಮ ಅಥವಾ ನಡಿಗೆ ಮಾಡುವುದು. ಒತ್ತಡ ಕಡಿಮೆ ಮಾಡಲು ಯೋಗ ಮತ್ತು ಧ್ಯಾನ ಮಾಡುವುದು ಸೇರಿದಂತೆ ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳಿ. ಇದೆಲ್ಲದರ ಜೊತೆಗೆ ಊಟದ ನಂತರ ತಕ್ಷಣ ಮಲಗುವುದನ್ನು ತಪ್ಪಿಸಿ ಮತ್ತು ಬೇಗನೆ ಊಟ ಮಾಡಿ. ಶುಚಿತ್ವ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

T20 World Cup: ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿ ಗಂಭೀರ್ ದಾಖಲೆ ಸರಿಗಟ್ಟಿದ ಅಭಿಷೇಕ್ – Kannada News | Abhishek Sharma’s T20 World Cup Debut Disaster: Golden Duck Equates Gambhir’s Record

ಅಭಿಷೇಕ್ ಶರ್ಮಾ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಔಟಾದ ನಂತರ ಅಮೆರಿಕ ವಿರುದ್ಧದ ಪಂದ್ಯದ ಚಿತ್ರಣವೇ ಬದಲಾಯಿತು. ಭಾರತದ ಅಗ್ರ ಕ್ರಮಾಂಕವು ಕ್ಷಣಾರ್ಧದಲ್ಲಿ ಕುಸಿಯಿತು. ಭಾರತವು ಕೇವಲ 46 ರನ್‌ಗಳಿಗೆ ತನ್ನ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಅಭಿಷೇಕ್, ತಿಲಕ್, ಇಶಾನ್, ದುಬೆ, ಹಾರ್ದಿಕ್ ಪಾಂಡ್ಯ ಮತ್ತು ರಿಂಕು ಸಿಂಗ್ ಕೂಡ ಬೇಗನೆ ವಿಕೆಟ್ ಒಪ್ಪಿಸಿದರು.

Source link

Exit mobile version