ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ – Kannada News | Kichcha Sudeep convey thanks To Hubballi Fans In His Style

ಕಿಚ್ಚ ಸುದೀಪ್ ಅವರು ಶನಿವಾರ (ಡಿಸೆಂಬರ್ 20) ಹುಬ್ಬಳ್ಳಿಗೆ ತೆರಳಿದ್ದರು. ಈ ವೇಳೆ ‘ಮಾರ್ಕ್’ ಸಿನಿಮಾದ ಪ್ರೀರಿಲೀಸ್ ಇವೆಂಟ್ ನಡೆದಿದೆ. ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಕೊನೆಯಲ್ಲಿ ಸುದೀಪ್ ಅವರು ವಿಡಿಯೋ ಮಾಡಿ ಹುಬ್ಬಳ್ಳಿಯ ಜನತೆಗೆ ಧನ್ಯವಾದ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸ್ವತಃ ಸುದೀಪ್ ಅವರು ಇದನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ತೋರಿದ ಪ್ರೀತಿಗೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ – Kannada News | Karnataka Congress Power Sharing Talks: DK Shivakumar to Visit Delhi, Likely to Meet Rahul Gandhi

ಬೆಂಗಳೂರು, ಡಿಸೆಂಬರ್ 22: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ಅಧಿಕಾರ ಹಂಚಿಕೆ ಕುರಿತ ಬಿಕ್ಕಟ್ಟು ಮುಂದುವರಿದಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ಡಿಸೆಂಬರ್ 26 ಮತ್ತು 27 ರಂದು ನಡೆಯಲಿರುವ ಎಐಸಿಸಿ ಕಾರ್ಯಕಾರಿಣಿ ಸಭೆಯ ನೆಪದಲ್ಲಿ, ಅದಕ್ಕೂ ಮುನ್ನ ಶಿವಕುಮಾರ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಯತ್ನಿಸುತ್ತಿದ್ದಾರೆ. ಮುಖ್ಯವಾಗಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ರಾಜ್ಯದ ನಾಯಕತ್ವ ವಿಚಾರವನ್ನು ಬಗೆಹರಿಸಿಕೊಳ್ಳುವ ಉದ್ದೇಶ ಹೊಂದಿದ್ದಾರೆ ಎನ್ನಲಾಗಿದೆ.

ಆದರೆ, ದೆಹಲಿಯಿಂದ ಬುಲಾವ್ ಬಂದರೆ ಮಾತ್ರ ದೆಹಲಿಗೆ ಪ್ರಯಾಣ ಬೆಳೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಕಾರ್ಯಕಾರಣಿ ಸಭೆಯಲ್ಲಿ ಸಿಎಂ ಭಾಗಿಯಾಗುವ ಸಾಧ್ಯತೆ ಇದೆ. ಈ ನಡುವೆ ಗೃಹ ಸಚಿವ ಪರಮೇಶ್ವರ್, ಹೈಕಮಾಂಡ್​​​ನ ಒಂದು ಮಾತಿನಿಂದ ಎಲ್ಲ ಗೊಂದಲ ನಿಲ್ಲುತ್ತದೆ ಎಂದು ಹೇಳಿದ್ದಾರೆ. ಮಾಜಿ ಸಚಿವ ಕೆ.ಎನ್. ರಾಜಣ್ಣ ಕೂಡ, ವರಿಷ್ಠರ ಕಡೆ ಮುಖ ಮಾಡಿದ್ದಾರೆ.

ಏತನ್ಮಧ್ಯೆ, ಡಿಕೆ ಶಿವಕುಮಾರ್ ದೆಹಲಿಗೆ ಬರುತ್ತಿರುವ ವಿಚಾರ ಗೊತ್ತಿಲ್ಲ ಎಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅವರೇ ಗೊಂದಲ ಮಾಡಿಕೊಂಡಿದ್ದಾರೆ. ಅವರೇ ಬಗೆಹರಿಸಿಕೊಳ್ಳಬೇಕು ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಈ ಆಟಗಾರನನ್ನು ಖರೀದಿಸಿದ್ದೇ ಕೆಎಲ್ ರಾಹುಲ್​ಗಾಗಿ..!

Source link

ಜರ್ಮನಿಯಲ್ಲಿ ಕ್ರಿಸ್​ಮಸ್​ ಮಾರ್ಕೆಟ್ ರದ್ದು, ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ ಗಬ್ಬಾರ್ಡ್ ಕಳವಳ – Kannada News | Tulsi Gabbard Warns Against Islamist Ideology, Calls It a Threat to US Freedom

ವಾಷಿಂಗ್ಟನ್, ಡಿಸೆಂಬರ್ 22: ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿ ತುಳಸಿ ಗಬ್ಬಾರ್ಡ್​​ ಇಸ್ಲಾಮಿಸ್ಟ್​ ಸಿದ್ಧಾಂತಗಳ ಬಗ್ಗೆ ಕಟುವಾದ ಟೀಕೆಗಳನ್ನು ಮಾಡಿದ್ದಾರೆ. ಇಸ್ಲಾಮಿಕ್‌ ಮೂಲಭೂತವಾದವನ್ನ ಬುಡಸಮೇತ ಕಿತ್ತೆಸೆಯುವಂತೆ, ಜಾಗತಿಕ ಸರ್ಕಾರಗಳನ್ನು ಜನರು ಒತ್ತಾಯಿಸುತ್ತಿದ್ದಾರೆ. ಅವರು ಇಸ್ಲಾಂ ಅನ್ನು ಅಮೆರಿಕದ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಭದ್ರತೆಗೆ ಪ್ರಮುಖ ಬೆದರಿಕೆ ಎಂದು ಕರೆದಿದ್ದಾರೆ. ಅಮೆರಿಕದಲ್ಲಿ ಇಸ್ಲಾಮಿಕ್ ಸಿದ್ಧಾಂತವು ವೈಯಕ್ತಿಕ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ತುಳಸಿ ಗಬ್ಬಾರ್ಡ್ ಎಚ್ಚರಿಸಿದ್ದಾರೆ.

ಈ ಬೆದರಿಕೆ ಇನ್ನು ಮುಂದೆ ವಿದೇಶಗಳಿಗೆ ಸೀಮಿತವಾಗಿಲ್ಲ, ಬದಲಾಗಿ ಅಮೆರಿಕಕ್ಕೂ ಅಪಾಯನ್ನುಂಟುಮಾಡುತ್ತದೆ. ಇದು ಜಾಗತಿಕ ಕ್ಯಾಲಿಫೇಟ್ ಮತ್ತು ಷರಿಯಾ ಆಧಾರಿತ ಆಡಳಿತವನ್ನು ಸ್ಥಾಪಿಸುವ ಗುರಿಯನ್ನು ಹೊಂದಿರುವ ರಾಜಕೀಯ ಕಾರ್ಯಸೂಚಿಯಾಗಿದೆ.

ಆಸ್ಟ್ರೇಲಿಯಾದಲ್ಲಿ ನಡೆದ ಇಸ್ಲಾಮಿಕ್ ಭಯೋತ್ಪಾದಕರ ಗುಂಡಿನ ದಾಳಿಗೆ ಯಾರೂ ಆಶ್ಚರ್ಯಪಡಬೇಕಾಗಿಲ್ಲ. ಹೆಚ್ಚಿನ ಸಂಖ್ಯೆಯ ಇಸ್ಲಾಮಿಸ್ಟ್‌ಗಳ ಒಳನುಸುಳುವಿಕೆಯೇ ಆಸ್ಟ್ರೇಲಿಯಾದ ಈ ಪರಿಸ್ಥಿತಿಗೆ ಕಾರಣ. ಆಸ್ಟ್ರೇಲಿಯಾ ಮಾತ್ರವಲ್ಲದೇ ಅಮೆರಿಕ ಸೇರಿದಂತೆ ಇಡೀ ಜಗತ್ತನ್ನ ಇಸ್ಲಾಮಿಕರಣಗೊಳಿಸುವುದು ಅವರ ಗುರಿಯಾಗಿದೆ. ಇಸ್ಲಾಮಿಸ್ಟ್‌ಗಳು ಮತ್ತು ಇಸ್ಲಾಮಿಸಂ ಅಮೆರಿಕಕ್ಕೆ ಮಾತ್ರವಲ್ಲದೇ ಇಡೀ ವಿಶ್ವದ ಸ್ವಾತಂತ್ರ್ಯ, ಭದ್ರತೆ, ಸಮೃದ್ಧಿಗೆ ದೊಡ್ಡ ಬೆದರಿಕೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಅಮೆರಿಕ ಈ ಸಿದ್ಧಾಂತವನ್ನು ಗುರುತಿಸಿ ಸಕಾಲಿಕವಾಗಿ ಅದರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಯುರೋಪ್ ಮತ್ತು ಆಸ್ಟ್ರೇಲಿಯಾದಂತಹ ಪರಿಸ್ಥಿತಿಯನ್ನು ದೇಶ ಎದುರಿಸಬೇಕಾಗುತ್ತದೆ ಎಂದು ತುಳಸಿ ಗಬ್ಬಾರ್ಡ್ ಎಚ್ಚರಿಸಿದ್ದಾರೆ. ಅಮೆರಿಕದ ಅನೇಕ ನಗರಗಳಲ್ಲಿ, ಮೂಲಭೂತವಾದಿ ಇಸ್ಲಾಮಿಕ್ ಧರ್ಮಗುರುಗಳು ಯುವಕರನ್ನು ಬಹಿರಂಗವಾಗಿ ಉಗ್ರವಾದದತ್ತ ಪ್ರಚೋದಿಸುತ್ತಿದ್ದಾರೆ .

ಅದೃಷ್ಟವಶಾತ್‌ ಟ್ರಂಪ್‌ ಅವರು ನಮ್ಮ ಗಡಿಗಳ ಭದ್ರತೆಗೆ ಆದ್ಯತೆ ನೀಡಿದ್ದಾರೆ. ಇದರೊಂದಿಗೆ ಶಂಕಿತ ಭಯೋತ್ಪಾದಕರನ್ನ ಗಡೀಪಾರು ಮಾಡುವುದು ಮತ್ತು ಅಮೆರಿಕನ್ನರನ್ನ ಅಪಾಯಕ್ಕೆ ತಳ್ಳುವ ಸಾಮೂಹಿಕ ವಲಸೆಯನ್ನ ತಪ್ಪಿಸುವುದು ಅಗತ್ಯವಾಗಿದೆ ಎಂದಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಸ್ಮೃತಿ ಮಂಧಾನ – Kannada News | Smriti Mandhana becomes first Indian to Reach 4000 runs in T20I

ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಟೀಮ್ ಇಂಡಿಯಾದ ಉಪನಾಯಕಿ ಸ್ಮೃತಿ ಮಂಧಾನ (Smriti Mandhana) ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಅಲ್ಲದೆ ಈ ವಿಶ್ವ ದಾಖಲೆ ಬರೆದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

Source link

ಕರ್ನಾಟಕ ಹವಾಮಾನ ವರದಿ: ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! – Kannada News | Bengaluru temperature: Extreme cold weather Karnataka, yellow alert for 5 districts

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಡಿಸೆಂಬರ್ 22: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಶೀತದಲೆ (Weather Forecast) ಅಬ್ಬರಿಸುತ್ತಿದ್ದು, ವಿಶೇಷವಾಗಿ ಉತ್ತರ ಕರ್ನಾಟಕ ಹೆಚ್ಚಿನ ಪ್ರಮಾಣದಲ್ಲಿ ಚಳಿ ಕಂಡಿದೆ. ನಿನ್ನೆ ವಿಜಯಪುರದಲ್ಲಿ ಅತಿ ಕಡಿಮೆ ಉಷ್ಣಾಂಶ ದಾಖಲಾಗಿತ್ತು. ಇಂದು ಕಲಬುರಗಿ, ಬೀದರ್ ಸರಿದಂತೆ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.

ಯಾವ ಜಿಲ್ಲೆಗಳಿಗೆ ಅಲರ್ಟ್​?

ವಿಜಯಪುರದಲ್ಲಿ ನಿನ್ನೆ(ಡಿ.21) 6.9 ಡಿಗ್ರಿ ಸೆಲ್ಸಿಯಲ್ಸ್ ಉಷ್ಣಾಂಶ ದಾಖಲಾಗಿತ್ತು.ಕಳೆದ 20 ವರ್ಷಗಳ ಅಂಕಿ ಅಂಶಗಳ ಪ್ರಕಾರ ಮೂರನೇ ಬಾರಿಗೆ ದಾಖಲಾದ ಅತಿ ಕಡಿಮೆ ಉಷ್ಣಾಂಶ ಇದಾಗಿದೆ. ಅಂತೆಯೇ ಇಂದೂ ಉತ್ತರ ಕರ್ನಾಟಕದೆಲ್ಲೆಡೆ ಶೀತದಲೆಯ ಪ್ರಮಾಣ ಹೆಚ್ಚಿದ್ದು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಎಲ್ಲೆಲ್ಲಿ ಒಣ ಹವೆ

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮುಂದುವರೆದ ಚಳಿ

ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣದಲ್ಲಿ ಸಾಕಷ್ಟು ಏರು ಪೇರಾಗುತ್ತಿದ್ದು, ಚಳಿಯ ಪ್ರಮಾಣ ಹೆಚ್ಚುತ್ತಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 14°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ದಲಿತ ಯುವಕನ ಪ್ರೀತಿಸಿ ಮದುವೆಯಾಗಿದ್ದಕ್ಕೆ ಗರ್ಭಿಣಿ ಮಗಳ ಕ್ರೂರವಾಗಿ ಹತ್ಯೆಗೈದ ತಂದೆ: ಪೈಶಾಚಿಕ ಕೃತ್ಯಕ್ಕೆ ಬೆಚ್ಚಿಬಿದ್ದ ಧಾರವಾಡ – Kannada News | Honor killing: Father Kills Pregnant Daughter Over Inter Caste Marriage in Dharwad

ಹುಬ್ಬಳ್ಳಿ, ಡಿಸೆಂಬರ್ 22: ಧಾರವಾಡ (Dharawad) ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ. ಅಂತರ್ಜಾತಿ ವಿವಾಹವಾಗಿದ್ದಕ್ಕೆ ಹೆತ್ತ ತಂದೆಯೇ ಮಗಳನ್ನು ಭೀಕರವಾಗಿ ಕೊಲೆ ಮಾಡಿ ಪೈಶಾಚಿಕ ಕೃತ್ಯ ಮೆರೆದಿದ್ದಾನೆ. ಇನಾಂ ವೀರಾಪುರ ಗ್ರಾಮದ ವಿವೇಕಾನಂದ ಮತ್ತು ಅದೇ ಗ್ರಾಮದ ಮಾನ್ಯಾ ಅನೇಕ ವರ್ಷಗಳ ಕಾಲ ಪ್ರೀತಿಸಿದ್ದರು. ಮಾನ್ಯ ವರೂರು ಖಾಸಗಿ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದ ಸಮಯದಲ್ಲಿ ವಿವೇಕಾನಂದ ಹುಬ್ಬಳ್ಳಿ ಖಾಸಗಿ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದ. ಇಬ್ಬರಿಗೂ ಮೊದಲು ಪರಿಚಯವಿತ್ತು. ಆದರೆ, ಡಿಗ್ರಿ ಓದುವಾಗ ಇನ್​ಸ್ಟಾಗ್ರಾಂನಲ್ಲಿ ಮೆಸೆಜ್ ಮಾಡುತ್ತಾ ಇಬ್ಬರ ನಡುವೆ ಪ್ರೀತಿ ಹುಟ್ಟಿತ್ತು. ಇಬ್ಬರು ಪ್ರೀತಿಸುತ್ತಿದ್ದ‌ ವಿಚಾರ ಎರಡು ಮನೆಯವರಿಗೆ ಗೊತ್ತಾಗಿತ್ತು. ಯುವತಿ ಲಿಂಗಾಯತ ಸಮಾಜದವಳಾಗಿದ್ದರೆ ವಿವೇಕಾನಂದ ದಲಿತ ಸಮುದಾಯಕ್ಕೆ ಸೇರಿದ್ದ. ಹೀಗಾಗಿ ಯುವತಿ ಮನೆಯವರು ಮದುವೆಗೆ ವಿರೋಧ ಮಾಡಿದ್ದರು. ಆದರೆ, ಯುವತಿ ಯಾವುದೇ ಕಾರಣಕ್ಕೂ ವಿವೇಕಾನಂದ ಬಿಟ್ಟು ಬದಕೋದಿಲ್ಲಾ ಎಂದು ಹಠ ಹಿಡಿದಿದ್ದಳು.

ಧಾರವಾಡದಲ್ಲಿ ಕೋಚಿಂಗ್​ಗೆ ಹೋಗಿದ್ದ‌ ವಿವೇಕಾನಂದ ಬಳಿ ಹೋಗಿ, ಮದುವೆಯಾಗದೇ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು. ಹೀಗಾಗಿ ವಿವೇಕಾನಂದ ಆಕೆ ಜೊತೆ ಕಳೆದ ಜೂನ್ 19 ರಂದು ಹುಬ್ಬಳ್ಳಿಯಲ್ಲಿ ರಿಜಿಸ್ಟರ್ ವಿವಾಹವಾಗಿದ್ದ.

ಎರಡು ಕುಟುಂಬಗಳ ನಡುವೆ ರಾಜಿ ಸಂಧಾನ ಮಾಡಿದ್ದ ಪೊಲೀಸರು

ರಿಜಿಸ್ಟರ್ ವಿವಾಹದ ನಂತರ ಪೊಲೀಸರು ಎರಡೂ ಕುಟುಂಬಗಳನ್ನು ಕರೆದು ರಾಜಿ ಪಂಚಾಯತಿ ಮಾಡಿದ್ದರು. ಆ ಬಳಿಕ ಮಾನ್ಯಾ ಮತ್ತು ವಿವೇಕಾನಂದ ಊರು ಬಿಟ್ಟು ಹೋಗಿ ಹಾವೇರಿಯಲ್ಲಿ ವಾಸವಾಗಿದ್ದರು. ಈ ನಡುವೆ ಮಾನ್ಯಾ ಗರ್ಭಿಣಿಯಾಗಿದ್ದಾಳೆ. 7 ತಿಂಗಳ ಬಳಿಕ ಎಲ್ಲ ಸರಿಹೋಗಿರಬಹುದು ಎಂದುಕೊಂಡು ಡಿಸೆಂಬರ್ 8 ರಂದು ಇಬ್ಬರೂ ಸ್ವಗ್ರಾಮಕ್ಕೆ ವಾಪಸ್ ಆಗಿದ್ದಾರೆ. ಆದರೆ, ಮತ್ತೆ ಕಿರಿಕ್ ಶುರುವಾಗಿ ಗ್ರಾಮೀಣ ಠಾಣೆ ಪೊಲೀಸರು ಎರಡು ಕಡೆಯವರನ್ನೂ ಕರೆಸಿ, ರಾಜಿ ಸಂದಾನ ಮಾಡಿಸಿದ್ದಾರೆ. ಆದರೆ ಇದಾದ ಎರಡೇ ವಾರಕ್ಕೆ ನಡೆಯಬಾರದ್ದು ನಡೆದುಹೋಗಿದೆ.

ಮನೆಗೆ ನುಗ್ಗಿ ಹಲ್ಲೆ ಮಾಡಿದ ತಂದೆ, ಕುಟುಂಬದವರು

ಭಾನುವಾರ ಸಂಜೆ ಮತ್ತೆ ವಿವೇಕಾನಂದ ಮನೆ ಮೇಲೆ ದಾಳಿ ಮಾಡಿದ ಮಾನ್ಯ ತಂದೆ ಪ್ರಕಾಶಗೌಡ ಪಾಟೀಲ್ ಮತ್ತು ಸಂಬಂಧಿಗಳು ಮಾನ್ಯಾ ಮತ್ತು ಮನೆಯಲ್ಲಿದ್ದ ಆಕೆಯ ಅತ್ತೆ ಸೇರಿದಂತೆ ಮೂ‌ವರ ಮೇಲೆ ಹಲ್ಲೆ ಮಾಡಿದ್ದಾರೆ. ಮಾನ್ಯಳಿಗೆ ಪೈಪ್ ಮತ್ತು ಗುದ್ದಲಿಯಿಂದ ಪ್ರಕಾಶಗೌಡ ಹಲ್ಲೆ ಮಾಡಿದ್ದಾನೆ. ನಂತರ ಮಾನ್ಯಾಳನ್ನು ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಾನ್ಯಾ ಇಹಲೋಕ ತ್ಯಜಿಸಿದ್ದಾಳೆ. ಇತ್ತ ಮಾನ್ಯಾಳ ಅತ್ತೆ, ಮಾವ ಸೇರಿ ಮೂವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಧಾರವಾಡ ಎಸ್​​ಪಿ ಗುಂಜನ್ ಆರ್ಯ, ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಸಹಾಯ ಮಾಡೋ ನೆಪದಲ್ಲಿ ಮಂಚಕ್ಕೆ ಕರೆದ, ಮಹಿಳೆಯ ಜೀವಕ್ಕೆ ಕುತ್ತು ತಂದ ಸೋಶಿಯಲ್ ಮೀಡಿಯಾ ಫ್ರೆಂಡ್

ಸದ್ಯ ಮಾನ್ಯಾಳ ಕೊಲೆಗೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಾನ್ಯಾಳ ತಂದೆ ಪ್ರಕಾಶಗೌಡ ಪಾಟೀಲ್ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಆದರೆ ಪ್ರೀತಿಸಿ ಮದುವೆಯಾಗಿ ತನ್ನ ಪಾಡಿಗೆ ತಾನು ಜೀವನ ಕಟ್ಟಿಕೊಂಡಿದ್ದ ಮಗಳನ್ನು ಸ್ವತ ತಂದೆಯೇ ಮರ್ಯಾದಾ ಹತ್ಯೆ ಮಾಡಿದ್ದು ಮಾತ್ರ ದುರ್ದೈವದ ಸಂಗತಿಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ – Kannada News | Daily Devotional: How to Fulfil Your Own Home Dream, Astrological Insights and Tips

ಬೆಂಗಳೂರು, ಡಿಸೆಂಬರ್ 22: ಪ್ರತಿಯೊಬ್ಬ ವ್ಯಕ್ತಿಗೂ ಸ್ವಂತ ಮನೆ ಹೊಂದುವ ಕನಸು ಸಹಜ. ಅನೇಕರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಸ್ವಂತ ಮನೆಗಾಗಿ ನಿರಂತರವಾಗಿ ಪ್ರಯತ್ನಿಸುತ್ತಿರುತ್ತಾರೆ. ಕೆಲವರಿಗೆ ಪೂರ್ವಿಕರ ಆಸ್ತಿ, ಭೂಮಿ ಇದ್ದರೂ ಮನೆ ಕಟ್ಟಲು ಸಾಧ್ಯವಾಗುವುದಿಲ್ಲ. ಹಣ ಕೂಡಿಟ್ಟರೂ ಅದನ್ನು ಮನೆ ನಿರ್ಮಾಣಕ್ಕೆ ಬಳಸಲು ಆಗುವುದಿಲ್ಲ. ಈ ಎಲ್ಲಾ ಸಮಸ್ಯೆಗಳಿಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವು ಪರಿಹಾರಗಳನ್ನು ಸೂಚಿಸಲಾಗಿದೆ.

ಮನೆ ಯೋಗವನ್ನು ಪ್ರೋತ್ಸಾಹಿಸುವ ಪ್ರಮುಖ ಗ್ರಹಗಳೆಂದರೆ ಕುಜ, ಶುಕ್ರ ಮತ್ತು ಬುಧ. ವಿಶೇಷವಾಗಿ ಕುಜ (ಮಂಗಳ) ಗ್ರಹವು ಪ್ರಮುಖ ಪಾತ್ರ ವಹಿಸುತ್ತದೆ, ಇದು ನಾಲ್ಕನೇ ಮನೆಯ ಅಧಿಪತಿಯಾಗಿದೆ. ಕುಜನ ಅಧಿಪತಿ ಸುಬ್ರಹ್ಮಣ್ಯ ಸ್ವಾಮಿ. ಸ್ವಂತ ಮನೆ ಕನಸು ನನಸಾಗಲು ಮಂಗಳ ಗ್ರಹವನ್ನು ಸತತವಾಗಿ ಪೂಜಿಸಬೇಕು. ಪ್ರತಿ ಮಂಗಳವಾರದಂದು ಸುಬ್ರಹ್ಮಣ್ಯ ಸ್ವಾಮಿ ಮತ್ತು ನಾಗರಕಲ್ಲು ಪೂಜಿಸುವುದು ಉತ್ತಮ. ಕೃಷ್ಣ ಪಕ್ಷದ ಚತುರ್ಥಿಯಂದು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವುದರಿಂದ ಮನೆ ಯೋಗ ಪ್ರಾಪ್ತವಾಗುತ್ತದೆ. ಪ್ರತಿದಿನ “ಓಂ ಅಂಗಾರಕಾಯ ನಮಃ” ಮಂತ್ರವನ್ನು ಜಪಿಸುವುದರಿಂದ ಕುಜ ಗ್ರಹದ ಅನುಗ್ರಹ ದೊರೆಯುತ್ತದೆ. ಸಾಧ್ಯವಾದರೆ ಮಂಗಳವಾರ ಉಪವಾಸ ಆಚರಿಸುವುದು ಕೂಡ ಒಳ್ಳೆಯದು ಎಂದು ಗುರೂಜಿ ಹೇಳಿದ್ದಾರೆ.

Source link

Horoscope Today 22 December: ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 22 ಡಿಸೆಂಬರ್ 2025 ರ ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಈ ದಿನವು ಸೋಮವಾರವಾಗಿದ್ದು, ವಿಶ್ವಾವಸು ನಾಮ ಸಂವತ್ಸರ, ಪುಷ್ಯ ಮಾಸ, ಶುಕ್ಲ ಪಕ್ಷ, ಬಿದಿಗೆ ತಿಥಿಯನ್ನು ಹೊಂದಿದೆ. ಉತ್ತರಾಷಾಢ ನಕ್ಷತ್ರದಲ್ಲಿ ಚಂದ್ರನ ಸಂಚಾರವು ಎಲ್ಲ ರಾಶಿಗಳ ಮೇಲೆ ವಿಭಿನ್ನ ಪರಿಣಾಮಗಳನ್ನು ಬೀರಲಿದೆ ಎಂದು ಗುರೂಜಿ ತಿಳಿಸಿದ್ದಾರೆ.

ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ವೃಷಭ ರಾಶಿಯವರಿಗೆ ಆಲಸ್ಯ ತ್ಯಜಿಸಲು ಸೂಚಿಸಲಾಗಿದೆ. ಮಿಥುನ ರಾಶಿಯವರು ಸಮಯಕ್ಕೆ ತಕ್ಕಂತೆ ಕೆಲಸಗಳನ್ನು ಪೂರೈಸಬೇಕು. ಕರ್ಕಾಟಕ ರಾಶಿಯವರಿಗೆ ಪ್ರಯಾಣ ಯೋಗವಿದ್ದರೆ, ಸಿಂಹ ರಾಶಿಯವರು ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ಕನ್ಯಾ ರಾಶಿಯವರಿಗೆ ಆಕಸ್ಮಿಕ ಧನಯೋಗವಿದ್ದು, ತುಲಾ ರಾಶಿಯವರಿಗೆ ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ವೃಶ್ಚಿಕ ರಾಶಿಯವರು ಮಾತಿನಲ್ಲಿ ಜಾಗ್ರತೆ ವಹಿಸಬೇಕು. ಧನು ರಾಶಿಯವರಿಗೆ ಅದೃಷ್ಟದ ದಿನವಾಗಿದ್ದು, ಮಕರ ರಾಶಿಯವರಿಗೆ ಹಣಕಾಸಿನ ವಿಷಯದಲ್ಲಿ ಜಾಗರೂಕತೆ ಅಗತ್ಯ. ಕುಂಭ ರಾಶಿಯವರು ಕಾನೂನು ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು ಮತ್ತು ಮೀನ ರಾಶಿಯವರು ವೃಥಾ ತಿರುಗಾಟ, ಕೋಪವನ್ನು ನಿಯಂತ್ರಿಸಬೇಕು. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ, ಶುಭ ಬಣ್ಣ ಮತ್ತು ಜಪಿಸಬೇಕಾದ ಮಂತ್ರವನ್ನು ಸೂಚಿಸಲಾಗಿದೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 22ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಯಾವುದೇ ವಿಚಾರದಲ್ಲಿ ಉಲ್ಲಾಸ- ಉತ್ಸಾಹದಿಂದ ತೊಡಗಿಕೊಳ್ಳಲು ಮನಸ್ಸು ಇರುವುದಿಲ್ಲ. ಆದಾಯದಲ್ಲಿ ಇಳಿಕೆ ಆಗುತ್ತಿದೆ ಎಂಬುದು ಒಂದು ಕಡೆಯ ಚಿಂತೆಯಾದರೆ, ಅದನ್ನು ಹೆಚ್ಚಿಸಲು ಮಾಡುತ್ತಿರುವ ಪ್ರಯತ್ನಗಳು ಫಲ ನೀಡುತ್ತಿಲ್ಲ ಎಂಬುದು ಇನ್ನೊಂದು ಕಡೆಯ ಬೇಸರಕ್ಕೆ ಕಾರಣ ಆಗಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮನ್ನು ದೂರ ಇಟ್ಟು, ಕೆಲವು ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ಸಂಗತಿ ಗಮನಕ್ಕೆ ಬರಲಿದ್ದು, ಸಂಬಂಧಪಟ್ಟವರಲ್ಲಿ ಇದನ್ನು ಕೇಳಿಯೂ ಕೇಳಲಿದ್ದೀರಿ. ಪ್ರಾಣಿಗಳಿಂದ ಕಡಿತಕ್ಕೆ ಒಳಗಾಗುವ ಯೋಗ ಇದೆ, ಆದ್ದರಿಂದ ನೀವು ಅಂಥ ಪರಿಸರದಲ್ಲಿ ಓಡಾಡುವಾಗಲೋ ಅಥವಾ ಕಾರ್ಯ ನಿರ್ವಹಣೆ ಮಾಡುವಾಗಲೋ ಸಾಮಾನ್ಯ ದಿನಗಳಿಗಿಂತ ಎಚ್ಚರಿಕೆಯನ್ನು ವಹಿಸಿ. ಎಲೆಕ್ಟ್ರಿಕಲ್ ಸಾಧನಗಳ ಮಾರಾಟ ಮಳಿಗೆ ಇಟ್ಟಿರುವವರಿಗೆ ಆದಾಯ ಮೂಲ ಹೆಚ್ಚಿಕೊಳ್ಳುವುದಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ. ಆದರೆ ಇದರ ಬಗ್ಗೆ ನಿಮ್ಮ ಆಸಕ್ತಿ ಕುದುರುವುದಿಲ್ಲ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಮನಸ್ಸಿಗೆ ಸಮಾಧಾನ ತರುವಂಥ ಬೆಳವಣಿಗೆಗಳು ಆಗಲಿವೆ. ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಪ್ರತಿಷ್ಠಿತ ಸಂಸ್ಥೆಯಿಂದ ಇಂಟರ್ ವ್ಯೂ ಕರೆ ಬರಬಹುದು. ಇನ್ನು ವೃತ್ತಿಪರರು ನೀವಾಗಿಯೇ ಕೆಲವು ಕ್ಲೈಂಟ್ ಗಳಿಗೆ ಇನ್ನು ಕೆಲಸ ಮಾಡಿಕೊಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಲಿದ್ದೀರಿ. ಊಟ- ತಿಂಡಿಗಾಗಿ ದೂರದ ಸ್ಥಳಗಳಿಗೆ ಹುಡುಕಿಕೊಂಡು ಹೋಗಲಿದ್ದೀರಿ. ಇದಕ್ಕೆ ನಿಮ್ಮ ಸ್ನೇಹಿತರು ಸಹ ಜೊತೆಯಾಗುತ್ತಾರೆ. ಕೋರ್ಟ್- ಕಚೇರಿ ಅಲೆದಾಟ ಮಾಡುತ್ತಿರುವವರಿಗೆ ರಾಜೀ- ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳೋಣ ಎಂಬ ಪ್ರಸ್ತಾವವನ್ನು ನಿಮ್ಮ ಎದುರಿನ ಪಾರ್ಟಿಯವರಿಂದ ಬರುವ ಸಾಧ್ಯತೆ ಇದೆ. ಮುಕ್ತ ಮನಸ್ಸಿನಿಂದ ಆಲೋಚನೆ ಮಾಡುವುದು ಒಳ್ಳೆಯದು. ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಅನಿರೀಕ್ಷಿತವಾಗಿ ಆತಂಕ ಎದುರಾಗಲಿದೆ. ಯಾವುದೋ ಮುಖ್ಯವಾದ ಸಂಗತಿಯನ್ನು ಮರೆತಿದ್ದೀರಿ ಎಂಬುದು ಈ ಆತಂಕದ ಮೂಲ ಆಗಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಯಾಕೆ- ಏನು ಎಂಬ ಪ್ರಶ್ನೆ ಮಾಡದೆ ತಮಗೆ ಬೇಕಾದ ಕೆಲಸವನ್ನು ಮಾಡಿಕೊಡಬೇಕು ಎಂಬುದು ನಿಮ್ಮ ಸ್ನೇಹಿತರ ನಿರೀಕ್ಷೆ ಆಗಿರಲಿದೆ. ಇದಕ್ಕಾಗಿ ನಡೆಯುವ ಮಾತುಕತೆ ವೇಳೆ ನಿಮ್ಮ ಮೇಲೆ ಹಿಡಿತ ಸಾಧಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದೆನಿಸುವುದಕ್ಕೆ ಶುರು ಆಗಲಿದೆ. ಮನೆ- ಮಳಿಗೆ ನಿರ್ಮಾಣದಲ್ಲಿ ತೊಡಗಿಕೊಂಡವರು ನಿಯಮಾನುಸಾರ ಕೆಲಸ- ಕಾರ್ಯಗಳು ನಡೆಯುತ್ತಾ ಇವೆಯೇ ಎಂದು ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುವುದು ಒಳ್ಳೆಯದು. ಆಸಕ್ತಿಯಿಂದ ಸೇರಿಕೊಂಡಿದ್ದ ಕೋರ್ಸ್ ವೊಂದರಲ್ಲಿ ಮುಂದುವರಿಯುವುದು ಸಾಧ್ಯ ಇಲ್ಲ ಎಂಬುದು ಖಚಿತವಾಗಿ, ಬೇಸರ ಮಾಡಿಕೊಳ್ಳುವಂತೆ ಆಗಲಿದೆ. ಯೂಟ್ಯೂಬರ್ ಗಳಿಗೆ ಖರ್ಚಿನ ಪ್ರಮಾಣ ಹೆಚ್ಚಲಿದ್ದು, ಅದನ್ನು ಹೇಗೆ ಹೊಂದಾಣಿಕೆ ಮಾಡುವುದು ಎಂಬುದೇ ತಿಳಿಯದೆ ಕಂಗಾಲಾಗುತ್ತೀರಿ. ಮನೆಯಲ್ಲಿ ಹಿರಿಯರು ಹೇಳುವಂಥ ಸಲಹೆ- ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಎಲ್ಲ ವಿಚಾರಕ್ಕೂ ಪ್ಲಾನ್ ಬಿ ಮಾಡಿಕೊಳ್ಳುವ ನಿಮ್ಮ ವಿಧಾನದಿಂದ ದೊಡ್ಡ ಅನುಕೂಲ ಆಗಲಿದೆ. ಕಠಿಣವಾದ ವಿಷಯಗಳನ್ನು ಸಹ ಸಲೀಸಾಗಿ ಅರ್ಥ ಮಾಡಿಕೊಳ್ಳುವ ರೀತಿಯಿಂದಾಗಿಯೇ ಇತರರು ನಿಮ್ಮ ಕಡೆಗೆ ಬೆರಗಿನಿಂದ ನೋಡುತ್ತಾರೆ. ದೊಡ್ಡ ಮಟ್ಟದ ಖರ್ಚು ಬರಬಹುದು ಎಂದು ಅಂದಾಜು ಮಾಡಿಕೊಂಡಿದ್ದು, ತುಂಬ ಕಡಿಮೆ ಮೊತ್ತದಲ್ಲಿ ಅಂದುಕೊಂಡ ರೀತಿಯಲ್ಲಿಯೇ ಕೆಲಸ ಮುಗಿಯುತ್ತದೆ. ಉದ್ಯೋಗ ಬಿಟ್ಟು ಹೊಸ ವ್ಯವಹಾರ- ವ್ಯಾಪಾರ ಆರಂಭಿಸುವ ನಿರ್ಧಾರದ ಬಗ್ಗೆ ನಿಮ್ಮಲ್ಲಿ ಕೆಲವರು ಸ್ನೇಹಿತರ ಜೊತೆಗೆ ಚರ್ಚೆ ಮಾಡಲಿದ್ದೀರಿ. ಇನ್ನೂ ಕೆಲವರು ಆಹಾರದ ವ್ಯವಹಾರ ಶುರು ಮಾಡುವುದಕ್ಕೆ ಎಲ್ಲ ಸಿದ್ಧತೆ ಮುಗಿಸಿರುವ ಸಾಧ್ಯತೆ ಇದೆ. ಉನ್ನತ ವ್ಯಾಸಂಗ ಮಾಡುತ್ತಾ ಇರುವವರಿಗೆ ಉದ್ಯೋಗದ ಆಫರ್ ಬರಬಹುದು. ಇಂಟರ್ನ್ ಷಿಪ್ ಮಾಡುವಂತೆ ಸಹ ಪ್ರಸ್ತಾವವನ್ನು ನಿಮ್ಮ ಮುಂದೆ ಇಡಲಿದ್ದಾರೆ. ಒಟ್ಟಾರೆ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುವ ದಿನ ಇದಾಗಿರುತ್ತದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಕೆಲವು ಬದಲಾವಣೆಗೆ ಸಂಬಂಧಿಸಿದಂತೆ ನಿಮ್ಮನ್ನು ಒಪ್ಪಿಸುವುದಕ್ಕೆ ಸಹೋದ್ಯೋಗಿಗಳು ಪ್ರಯತ್ನ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಇಲ್ಲಿಯ ತನಕ ಎಲ್ಲಿಯೂ ಹೇಳಿಕೊಳ್ಳದ ಸಂಗತಿಗಳನ್ನು ಬಾಯಿ ಬಿಟ್ಟು ಹೇಳಿಕೊಳ್ಳುವಂತೆ ಆಗಲಿದೆ. ನಿಮ್ಮ ಸಾಮರ್ಥ್ಯ, ಬದ್ಧತೆ, ಅದರಿಂದ ಆಗಿರುವ ಅನುಕೂಲಗಳ ಬಗ್ಗೆ ಮಾತನಾಡುತ್ತೀರಿ. ಇದರ ಆಚೆಗೆ ಆಗುವ ಯಾವುದೇ ಬದಲಾವಣೆಗೆ ಒಪ್ಪಿಕೊಳ್ಳುವುದಕ್ಕೆ ಸಿದ್ಧರಿಲ್ಲ ಎಂಬುದನ್ನು ಸಹ ಹೇಳಲಿದ್ದೀರಿ. ಯಾವುದಾದರೂ ನಿರ್ದಿಷ್ಟ ಕಾಯಿಲೆ ಆಗಿದೆಯಾ ಎಂಬ ಬಗ್ಗೆ ವೈದ್ಯಕೀಯ ಪರೀಕ್ಷೆ ಏನಾದರೂ ಸೂಚಿಸಿದ್ದಲ್ಲಿ ಗಂಭೀರ ಸಮಸ್ಯೆ ಇಲ್ಲ ಎಂಬುದು ತಿಳಿದುಬರಲಿದೆ. ಸಮಾರಂಭಗಳಿಗೆ ತೆರಳುವುದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಿದ್ದೀರಿ. ಆಪತ್ಕಾಲಕ್ಕೆ ಇರಲಿ ಎಂಬ ಉದ್ದೇಶದಿಂದ ಕೂಡಿಟ್ಟುಕೊಂಡಿದ್ದ ಹಣವನ್ನು ಬೇರೆ ಉದ್ದೇಶಕ್ಕೆ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಉದ್ಭವ ಆಗಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ನಿಮ್ಮ ಹತ್ತಿರ ಏನಿದೆಯೋ ಅದು ಮಾತ್ರ ನಿಮ್ಮದು. ನೀವು ಬೇರೆಯವರಿಗೆ ಕೊಟ್ಟಂಥ ಸಾಲ, ಈಗಾಗಲೇ ಕೆಲಸ ಮಾಡಿಯಾಗಿದೆ ಅದರ ಹಣ ಬರಬೇಕಿದೆ, ಸ್ನೇಹಿತರು- ಸಂಬಂಧಿಕರು ಸಹಾಯ ಮಾಡುವುದಾಗಿ ಕೊಟ್ಟಂಥ ಮಾತು ಇದ್ಯಾವುದನ್ನೂ ನೆಚ್ಚಿಕೊಂಡು ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದಕ್ಕೆ ಹೋಗಬೇಡಿ. ಹೋಟೆಲ್ ನಡೆಸುತ್ತಾ ಇರುವವರಿಗೆ ಆದಾಯದಲ್ಲಿ ಏರಿಕೆ ಆಗಲಿದೆ. ಪ್ರೀತಿಯಲ್ಲಿ ಇರುವವರು ಜೊತೆಯಾಗಿ ಸಮಯವನ್ನು ಕಳೆಯುವಂಥ ಯೋಗ ಇದೆ. ಭವಿಷ್ಯದ ಬಗ್ಗೆ ಗಂಭೀರವಾದ ಚರ್ಚೆ ಸಹ ಮಾಡಲಿದ್ದೀರಿ. ಇಷ್ಟು ಸಮಯ ಮಾತನಾಡದೆ ಉಳಿದು ಹೋಗಿದ್ದ ಕೆಲವು ಸಂಗತಿಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿಕೊಳ್ಳಲಿದ್ದೀರಿ. ಉದ್ಯೋಗ ಸ್ಥಳದಲ್ಲಿ ಯಾರ ಜತೆಗೂ ಅತಿಯಾದ ಸಲುಗೆ ಬೇಡ. ಇದನ್ನು ಮೀರಿಯೂ ನಡೆದುಕೊಂಡಲ್ಲಿ ಎಚ್ಚರಿಕೆ ಮಾತುಗಳನ್ನು ಕೇಳಿಸಿಕೊಳ್ಳುವಂತೆ, ಮುಜುಗರದ ಸನ್ನಿವೇಶ ಎದುರಿಸುವಂತೆ ಆಗುತ್ತದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುವ ಯೋಗ ಇದೆ. ಬಹಳ ಸಮಯದಿಂದ ನೀವು ಹೇಳಬೇಕು ಅಂದುಕೊಳ್ಳುತ್ತಾ ಇದ್ದ ಕೆಲವು ವಿಚಾರಗಳನ್ನು ಸಂಬಂಧ ಪಟ್ಟವರಿಗೆ ಹೇಳಲಿದ್ದೀರಿ. ಧಾರ್ಮಿಕ ವೃತ್ತಿಯಲ್ಲಿ ಇರುವವರಿಗೆ ಕೆಲಸದ ಒತ್ತಡ ಹೆಚ್ಚಿರುತ್ತದೆ. ನೀವು ಕೈಯಿಂದ ಹಣ ಹಾಕಿ, ಮಾಡಿಕೊಟ್ಟ ಕೆಲಸದ ಬಾಕಿ ವಸೂಲಿ ಮಾಡುವುದು ಈ ದಿನ ಸಾಧ್ಯವಿದೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಕುದುರುವುದು ಕಷ್ಟ ಆಗಲಿದೆ. ಸ್ನೇಹಿತರ ಜೊತೆಗೆ ದೂರ ಪ್ರಯಾಣ ಮಾಡುವಂಥ ಯೋಗ ಇದೆ. ಅದು ಕೂಡ ಯಾವುದೇ ಯೋಜನೆ ಇಲ್ಲದೆ ದಿಢೀರ್ ಹೊರಟುಬಿಡುವಂತೆ ಆಗಲಿದೆ. ವ್ಯಾಪಾರ- ವ್ಯವಹಾರ ಮಾಡುತ್ತಾ ಇರುವವರು ಯಾವುದೇ ಸನ್ನಿವೇಶವನ್ನು ಭಾವನಾತ್ಮಕ ಹಿನ್ನೆಲೆಯಲ್ಲಿ ನೋಡುವುದಕ್ಕೆ ಹೋಗಬೇಡಿ. ಲಾಭಕ್ಕೆ ಬರಲಾರದು ಎಂದೆನಿಸಿದ್ದನ್ನು ನಿಲ್ಲಿಸಿಬಿಡುವುದು ಒಳ್ಳೆಯದು. ಆಯುರ್ವೇದ ಔಷಧಗಳ ವಿತರಣೆ ಮಾಡುವಂಥವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಮನೆಯ ಖರ್ಚು ವೆಚ್ಚಗಳು ನೀವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿಗೆ ಆಗಲಿದೆ. ಆದಾಯ ಹಾಗೂ ಅದನ್ನು ಬಳಸುವುದಕ್ಕೂ ತಾಳೆ ಆಗುತ್ತಿಲ್ಲ ಎಂಬುದು ಚಿಂತೆಗೆ ಕಾರಣ ಆಗಲಿದೆ. ಆದಾಯದ ಮೂಲ ಜಾಸ್ತಿ ಮಾಡಿಕೊಳ್ಳಲು ಹಾಕುವಂಥ ಶ್ರಮ ಫಲ ನೀಡುತ್ತದೆ. ಸಂಗಾತಿ ಜತೆಗೆ ಉತ್ತಮ ಸಮಯವನ್ನು ಕಳೆಯಲಿದ್ದೀರಿ. ಅವರ ಬೇಕು- ಬೇಡಗಳನ್ನು ಕೇಳಿಕೊಂಡು, ಅದನ್ನು ಒದಗಿಸಿಕೊಡಲು ಆದ್ಯತೆ ನೀಡಲಿದ್ದೀರಿ. ನಿಮ್ಮ ನಿಲವು- ಉದ್ದೇಶದ ಬಗ್ಗೆ ಸಂಬಂಧಿಕರು ಆಕ್ಷೇಪದ ಮಾತುಗಳನ್ನು ಹೇಳಲಿದ್ದಾರೆ. ನೀವು ಸಹ ಇಂಥ ಮಾತುಗಳಿಗೆ ಅಲ್ಲಿಂದ ಅಲ್ಲಿಗೆ ಎಂಬಂತೆ ಉತ್ತರವನ್ನು ಸಹ ನೀಡುತ್ತೀರಿ. ದೊಡ್ಡ ಅಳತೆಯ ಸೈಟು ಇರುವವರು ಅದನ್ನು ಮಾರಾಟ ಮಾಡಿ, ಕಟ್ಟಿರುವ ಮನೆ ಖರೀದಿ ಮಾಡುವ ಬಗ್ಗೆ ಆಲೋಚಿಸುತ್ತೀರಿ. ಅದರಲ್ಲೂ ತಿಂಗಳಾ ತಿಂಗಳು ಬಾಡಿಗೆ ರೂಪದಲ್ಲಿ ನಿಗದಿತ ಆದಾಯ ಮಾಡಿಕೊಳ್ಳುವ ಕಡೆಗೆ ಗಮನ ಇರಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ನಿರ್ಭಾವುಕ ನಿರ್ಧಾರ ತೆಗೆದುಕೊಳ್ಳಬೇಕು, ಯಾರನ್ನೂ ಹಚ್ಚಿಕೊಳ್ಳಬಾರದು ಎಂದುಕೊಳ್ಳಲಿದ್ದೀರಿ. ಉದ್ಯೋಗ ಸ್ಥಳದಲ್ಲಿ ನಿಮ್ಮಿಂದ ನಿರೀಕ್ಷೆ ಮಾಡುತ್ತಿರುವುದು ತಲುಪಲು ಸಾಧ್ಯ ಇಲ್ಲದಷ್ಟು ಎತ್ತರದಲ್ಲಿದೆ ಎಂದೆನಿಸುವುದಕ್ಕೆ ಶುರು ಆಗಲಿದೆ. ನೀವು ಒಪ್ಪಿಸಿದ ಕೆಲಸ- ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡುವುದಾಗಿ ಮಾತು ನೀಡಿದವರು ಕೊನೆ ಕ್ಷಣದಲ್ಲಿ ತಮ್ಮಿಂದ ಸಾಧ್ಯವಾಗುತ್ತಿಲ್ಲ ಎನ್ನುವುದರಿಂದ ನೀವು ಇಕ್ಕಟ್ಟಿಗೆ ಸಿಲುಕಿಕೊಳ್ಳುತ್ತೀರಿ. ಪ್ರಯಾಣಕ್ಕೆ ಹೆಚ್ಚು ಖರ್ಚು ಮಾಡುವ ಯೋಗ ಇದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂಬ ನಿಮ್ಮ ಬದ್ಧತೆಗೆ ಸ್ನೇಹಿತರು- ಸಂಬಂಧಿಗಳಿಂದ ಮೆಚ್ಚುಗೆ ವ್ಯಕ್ತವಾಗಲಿದೆ. ಇತರರು ತಮ್ಮಿಂದ ಆಗದು ಎಂದು ಅರ್ಧಕ್ಕೇ ನಿಲ್ಲಿಸಿದಂಥ ಪ್ರಾಜೆಕ್ಟ್ ಅನ್ನು ನೀವು ಕೈಗೆತ್ತಿಕೊಂಡು, ಸಮಾಧಾನ ಆಗುವ ಮಟ್ಟಕ್ಕೆ ಪೂರ್ಣ ಮಾಡಲಿದ್ದೀರಿ. ಹಣಕಾಸಿನ ವಿಚಾರವನ್ನು ಆರಂಭದಲ್ಲಿಯೇ ಮಾತನಾಡಿಕೊಳ್ಳುವುದಕ್ಕೆ ದಾಕ್ಷಿಣ್ಯ ಮಾಡಿಕೊಳ್ಳಬೇಡಿ.

Source link

Exit mobile version