ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತವಾಗಿ ಆರ್ಭಟಿಸಿದ ಲಕ್ಷ್ಮೀ ಆನೆ
ಕೋಲಾರ, ಮೇ 27: ಅನಾರೋಗ್ಯ ಹಿನ್ನೆಲೆ ವಿಜಯನಗರ ಜಿಲ್ಲೆಯ ಹಂಪಿಯ ವಿರುಪಾಕ್ಷೇಶ್ವರ ದೇವಾಲಯದಿಂದ ಸ್ಥಳಾಂತರಿಸಲಾಗಿರುವ ಲಕ್ಷ್ಮೀ ಆನೆ, ಕೋಲಾರ ತಾಲ್ಲೂಕು ನರಸಾಪುರ ಬಳಿಯ ಆನೆ ಪುನರ್ವಸತಿ ಕೇಂದ್ರಕ್ಕೆ ಆಗಮಿಸಿದ ಕೂಡಲೇ ಸ್ವಲ್ಪ ವಿಚಲಿತಗೊಂಡು ಆರ್ಭಟಿಸಿದೆ. ಅರಣ್ಯ ಇಲಾಖೆಯಿಂದ ನಿರ್ಮಾಣವಾಗಿರುವ ರಾಜ್ಯದ ಏಕೈಕ ಆನೆ ಪುನರ್ವಸತಿ ಕೇಂದ್ರಕ್ಕೆ ಲಕ್ಷ್ಮೀ ಆನೆಯನ್ನು ಬುಧವಾರ ಸ್ಥಳಾಂತರಿಸಲಾಗಿತ್ತು. ಹೊಸ ಜಾಗಕ್ಕೆ ಬಂದಿರುವ ಕಾರಣಕ್ಕೆ ಲಕ್ಷ್ಮೀ ಆನೆ ಕೊಂಚ ವಿಚಲಿತಗೊಂಡು ಆರ್ಭಟಿಸಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಕ್ಷ್ಮೀ ಆನೆಯನ್ನು ಹಂಪಿಯಿಂದ…