ಮೈಸೂರು ದಸರಾ ಶೈಲಿಯಲ್ಲಿ ವಿಜ್ರಂಭಿಸಲಿದೆ ಬೆಂಗಳೂರು; ಕರಗ ಶಕ್ತ್ಯೋತ್ಸವಕ್ಕೆ ಒಂಭತ್ತೇ ದಿನಗಳು ಬಾಕಿ!
ಬೆಂಗಳೂರು, ಮಾರ್ಚ್ 16: ಬೆಂಗಳೂರು ಕರಗ (Bengaluru Karaga) ಶಕ್ತ್ಯೋತ್ಸವಕ್ಕೆ ಕೇವಲ ಒಂಬತ್ತು ದಿನಗಳು ಮಾತ್ರ ಬಾಕಿಯಿದ್ದು, ಉತ್ಸವವನ್ನು ಈ ಬಾರಿ ವಿಶೇಷವಾಗಿ ಆಚರಿಸಲು ಸಕಲ ಸಿದ್ಧತೆಗಳು ಆರಂಭವಾಗಿವೆ. ಐತಿಹಾಸಿಕ ಧರ್ಮರಾಯಸ್ವಾಮಿ ದೇವಾಲಯದಲ್ಲಿ ನಡೆಯುವ ಕರಗ ಶಕ್ತ್ಯೋತ್ಸವ ಈ ಬಾರಿ ಮೈಸೂರು ದಸರಾ ಶೈಲಿಯಲ್ಲೇ ಅದ್ಧೂರಿಯಾಗಿ ನಡೆಯುವ ಸಾಧ್ಯತೆ ಇದೆ. ವಿಶೇಷವಾಗಿ ನಗರದ ಪ್ರಮುಖ ರಸ್ತೆಗಳನ್ನು ಮೈಸೂರು ದಸರಾ ಮಾದರಿಯಲ್ಲಿ ಲೈಟಿಂಗ್ ಮೂಲಕ ಅಲಂಕರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ. ಲಕ್ಷಾಂತರ ರೂ. ವೆಚ್ಚದಲ್ಲಿ ಲೈಟಿಂಗ್!…